<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Raghu sakaleshpura &#8211; Peepal Media</title>
	<atom:link href="https://peepalmedia.com/tag/raghu-sakaleshpura/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 02 Jul 2023 12:25:29 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Raghu sakaleshpura &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಪ್ರಚೋದನೆ ಭಾಷಣ ಪ್ರಕರಣ: ಐವರ ಬಂಧನ : ರೌಡಿಶೀಟರ್ ರಘುಗಾಗಿ ಹುಡುಕಾಟ</title>
		<link>https://peepalmedia.com/arrest-of-five-search-for-rowdy-sheeter-raghu/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 02 Jul 2023 12:24:45 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Bajarangdal]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Raghu sakaleshpura]]></category>
		<guid isPermaLink="false">https://peepalmedia.com/?p=23038</guid>

					<description><![CDATA[ಸಕಲೇಶಪುರ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂದಿಸಿದಂತೆ ತಲೆಮರೆಸಿಕೊಂಡಿರುವ ಭಜರಂಗದಳ ಮುಖಂಡ ರಘು ಸಹಚರರು ಎಂದು ಗುರುತಿಸಿಕೊಂಡಿರುವ ಐವರನ್ನು ಸಕಲೇಶಪುರ ಟೌನ್ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಭಜರಂಗದಳ ಸಕ್ರಿಯ ಕಾರ್ಯಕರ್ತನಾಗಿ ಹಾಗೂ ಬೆಳಗೋಡು ಅರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸಮಾಡುವ ಶ್ರೀಕಾಂತ್, ಶ್ರೀಜೀತ್, ಪ್ರತಾಪ್, ಹಾಗೂ ಇತರೆ ಇಬ್ಬರನ್ನೂ ಬಂಧಿಸಲಾಗಿದೆ.ಇನ್ನೂ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.ರೌಡಿ ಶೀಟರ್ ರಘು ಬಂಧನಕ್ಕೆ ಎರಡನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ.‌ ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ:ತಾಲ್ಲೂಕಿನಲ್ಲಿ ತರಕಾರಿ ಮತ್ತು ಮೀನು [&#8230;]]]></description>
										<content:encoded><![CDATA[
<p>ಸಕಲೇಶಪುರ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂದಿಸಿದಂತೆ ತಲೆಮರೆಸಿಕೊಂಡಿರುವ ಭಜರಂಗದಳ ಮುಖಂಡ ರಘು ಸಹಚರರು ಎಂದು ಗುರುತಿಸಿಕೊಂಡಿರುವ ಐವರನ್ನು ಸಕಲೇಶಪುರ ಟೌನ್ ಪೋಲಿಸರು ವಶಕ್ಕೆ ಪಡೆದಿದ್ದಾರೆ.</p>



<p>ಭಜರಂಗದಳ ಸಕ್ರಿಯ ಕಾರ್ಯಕರ್ತನಾಗಿ ಹಾಗೂ ಬೆಳಗೋಡು ಅರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸಮಾಡುವ ಶ್ರೀಕಾಂತ್, ಶ್ರೀಜೀತ್, ಪ್ರತಾಪ್, ಹಾಗೂ ಇತರೆ ಇಬ್ಬರನ್ನೂ ಬಂಧಿಸಲಾಗಿದೆ.<br>ಇನ್ನೂ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.<br>ರೌಡಿ ಶೀಟರ್ ರಘು ಬಂಧನಕ್ಕೆ ಎರಡನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ.‌</p>



<p>ಪ್ರತಿಭಟನೆಗೆ ಅನುಮತಿ ಪಡೆದಿರಲಿಲ್ಲ:<br>ತಾಲ್ಲೂಕಿನಲ್ಲಿ ತರಕಾರಿ ಮತ್ತು ಮೀನು ಮಾರುವ ಮುಸಲ್ಮಾನರ ಮೇಲೆ ಗುಂಡು ಹಾರಿಸುವ ಬೆದರಿಕೆ ಹಾಕಿ<br>ಪ್ರಚೋದನಕಾರಿ ಭಾಷಣ ಮಾಡಿದ ಪ್ರತಿಭಟನೆಗೆ ಪೋಲಿಸ್ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ.‌ ಈ ಪ್ರತಿಭಟನೆಯಲ್ಲೂ ಕಾನೂನು ಉಲ್ಲಂಘನೆಯಾಗಿದೆ.</p>



<p>ಪೋಲಿಸರಿಗೆ ಯಾವುದೇ ರೀತಿಯ ಮಾಹಿತಿ ನೀಡದೇ ಏಕಾಏಕಿ ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿರುವುದು ಬೆಳಕಿಗೆ ಬಂದಿದೆ.</p>
]]></content:encoded>
					
		
		
			</item>
		<item>
		<title>ಬಜರಂಗದಳದ ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ಸಿಪಿಐಎಂ ಹಾಗೂ ಎಸ್ಡಿಪಿಐ ಆಗ್ರಹ</title>
		<link>https://peepalmedia.com/cpim-and-sdpi-demand-for-raghus-arrest-in-sakleshpur/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 01 Jul 2023 09:37:21 +0000</pubDate>
				<category><![CDATA[ರಾಜ್ಯ]]></category>
		<category><![CDATA[cpim]]></category>
		<category><![CDATA[Govt of Karnataka]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Raghu sakaleshpura]]></category>
		<category><![CDATA[SDPI]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=22980</guid>

					<description><![CDATA[&#8216;ಮುಸ್ಲಿಂ ವ್ಯಾಪಾರಿಗಳು ಬಂದರೆ ಗುಂಡಿಟ್ಟು ಸಾಯಿಸಿ&#8217; ಎನ್ನುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲು ಕಾರಣನಾದ ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ರಾಜ್ಯಾದ್ಯಂತ ಹಲವು ಜನಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ. ಈ ಹಿಂದೆಯೂ ಕೂಡಾ ಹಲವು ಬಾರಿ ಹಿಂದುತ್ವದ ಸಂಘಟನೆಗಳ ಹೆಸರಿನಲ್ಲಿ ಈ ವ್ಯಕ್ತಿ ಸಮಾಜದಲ್ಲಿ ಶಾಂತಿ ಕೆಡಿಸಲು ಪ್ರಯತ್ನಿಸಿದ್ದು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈತನ ಆಟಾಟೋಪಕ್ಕೆ ಲಂಗು ಲಗಾಮು ಇಲ್ಲದಂತಾಗಿತ್ತು. ಆದರೆ ಇದನ್ನೇ ಮುಂದುವರೆಸಿಕೊಂಡು ಬಂದ [&#8230;]]]></description>
										<content:encoded><![CDATA[
<p>&#8216;ಮುಸ್ಲಿಂ ವ್ಯಾಪಾರಿಗಳು ಬಂದರೆ ಗುಂಡಿಟ್ಟು ಸಾಯಿಸಿ&#8217; ಎನ್ನುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲು ಕಾರಣನಾದ ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ರಾಜ್ಯಾದ್ಯಂತ ಹಲವು ಜನಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ.</p>



<p>ಈ ಹಿಂದೆಯೂ ಕೂಡಾ ಹಲವು ಬಾರಿ ಹಿಂದುತ್ವದ ಸಂಘಟನೆಗಳ ಹೆಸರಿನಲ್ಲಿ ಈ ವ್ಯಕ್ತಿ ಸಮಾಜದಲ್ಲಿ ಶಾಂತಿ ಕೆಡಿಸಲು ಪ್ರಯತ್ನಿಸಿದ್ದು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈತನ ಆಟಾಟೋಪಕ್ಕೆ ಲಂಗು ಲಗಾಮು ಇಲ್ಲದಂತಾಗಿತ್ತು. ಆದರೆ ಇದನ್ನೇ ಮುಂದುವರೆಸಿಕೊಂಡು ಬಂದ ಸಕಲೇಶಪುರ ರಘುಗೆ ಈಗ ಬಂಧನದ ಭೀತಿ ಎದುರಾಗಿದೆ. ನಿನ್ನೆಯ ದಿನ ತಡರಾತ್ರಿ ಪೊಲೀಸರು ಬಂಧಿಸಲು ಹೋದಾಗ ಸುಳಿವು ಅರಿತು ಅಜ್ಞಾತ ಸ್ಥಳಕ್ಕೆ ಈತ ಪರಾರಿಯಾಗಿದ್ದಾನೆ. ಸಧ್ಯ ಈತನ ಸಮಾಜಘಾತುಕ ಚಟುವಟಿಕೆಗಳ ಬಗ್ಗೆ ಪ್ರಸ್ತಾಪಿಸಿ ಸಿಪಿಎಂ ಹಾಸನ ಜಿಲ್ಲಾ ಘಟಕ ರಘು ಬಂಧನಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದೆ.</p>



<p>&#8220;ಮುಸ್ಲಿಮರನ್ನು ಗುಂಡು ಹಾರಿಸಿ ಕೊಲ್ಲುವುದಾಗಿ ಬಹಿರಂಗವಾಗಿ ಘೋಷಿಸಿರುವ ಸಕಲೇಶಪುರದ ರಘು ಎಂಬ ಸಮಾಜಘಾತಕನನ್ನು ಪೋಲೀಸರು ಕೂಡಲೇ ಬಂಧಿಸುವಂತೆ ಸಿಪಿಐಎಂ ಹಾಸನ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ. ಹಾಗೂ ಆತನ ಮೇಲೆ ಕೊಲೆಗೆ ಪ್ರಚೋದನೆ, ಭಯೋತ್ಪಾದನೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿಕೆಗೆ ಸಂಬಂಧಿಸಿದ ಕಾಯ್ದೆಗಳನ್ವಯ ಕೇಸು ದಾಖಲಿಸಿ ಜೈಲಿಗೆ ಕಳುಹಿಸಬೇಕೆನ್ನುವುದು ಸಿಪಿಐಎಂ ಒತ್ತಾಯವಾಗಿದೆ.</p>



<p>ಸಕಲೇಶಪುರದ ರಘು ಎಂಬ ಸಮಾಜಘಾತುಕ ಭಜರಂಗದಳದ ಹೆಸರಿನಲ್ಲಿ ಹಲವಾರು ಅಕ್ರಮ ಹಾಗೂ ಕುಕೃತ್ಯಗಳನ್ನು ನಡೆಸಿರುತ್ತಾನೆ. ಅವನ ಮೇಲೆ ಈಗಾಗಲೇ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. &#8216;ಗೋರಕ್ಷಣೆ&#8217;, &#8216;ಹಿಂದೂ&#8217; ಧರ್ಮ ರಕ್ಷಣೆ ಹೆಸರಿನಲ್ಲಿ ರೋಲ್‌ಕಾಲ್, ಗೂಂಡಾಗಿರಿಯಂತಹ ಹಲವಾರು ಕಾನೂನು ಭಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾನೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವನ ವಿರುದ್ಧ ಪೋಲೀಸರು ಕಠಿಣ ಕ್ರಮ ಜರುಗಿಸಲು ವಿಫಲರಾಗಿದ್ದರು. ಸಕಲೇಶಪುರ ತಾಲ್ಲೂಕಿನಲ್ಲಿ ಕೆಲವು ಪೋಲೀಸರೂ ಅವನೊಂದಿಗೆ ಶಾಮೀಲಾಗಿರುವ ಮಾತುಗಳಿವೆ. ಈಗ ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಆಯ್ಕೆಯಾಗಿರುವುದು ಆತನಿಗೆ ಮತ್ತಷ್ಟು ಉತ್ತೇಜನ ಸಿಕ್ಕಂತಾಗಿದೆ. ಸಕಲೇಶಪರ ಕ್ಷೇತ್ರದ ಬಿಜೆಪಿ ಶಾಸಕ ಸಿಮೆಂಟ್ ಮಂಜು ಬೆಂಬಲಿಗನಾಗಿರುವ ರಘು ವಿರುದ್ಧ ಪೋಲೀಸರು ಅತ್ಯಂತ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕಿದೆ.</p>



<p>ನಾಗರಿಕ ಸಮಾಜ ಮತ್ತು ಸರ್ಕಾರಕ್ಕೆ ಸವಾಲಾಗಿರುವ ಇಂತಹ ದುಷ್ಟ ಶಕ್ತಿಗಳ ನಿಗ್ರಹಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಸಂವಿಧಾನದ ಕಾನೂನುಗಳ ಆಡಳಿತದ ಸರಾಗವಾಗವಾಗಿ ನಡೆಯಬೇಕಿದ್ದರೆ ರಘುನಂತಹ ದುಷ್ಟರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವ ಮುಖಾಂತರ ಅಂತಹ ದುಷ್ಟ ಶಕ್ತಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೋಲೀಸು ಇಲಾಖೆಯ ವಿರುದ್ಧ ತೀವ್ರ ಹೋರಾಟಕ್ಕೆ ಇಲಿಯುವಯದು ಅನಿವಾರ್ಯವಾಗಲಿದೆ ಎಂದು ಸಿಪಿಐಎಂ ಮನವರಿಕೆ ಮಾಡಿಕೊಡಲು ಬಯಸುತ್ತದೆ.&#8221; ಎಂದು ಸಿಪಿಐಎಂ ಪಕ್ಷದ ಹಾಸನ ಜಿಲ್ಲಾ ಘಟಕದ ಕಾರ್ಯದರ್ಶಿ ಧರ್ಮೇಶ್ ಆಗ್ರಹಿಸಿದ್ದಾರೆ.</p>



<p>ಇದರ ಜೊತೆಗೆ ರಾಜ್ಯ ಎಸ್ಡಿಪಿಐ ಪಕ್ಷ ಕೂಡಾ ಈತನ ಕುಕೃತ್ಯಗಳ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲೇ ಈತನ ಬಂಧನವಾಗಲಿ ಎಂದು ಆಗ್ರಹಿಸಿದೆ‌. ಅದರಂತೆ<br>&#8220;ಗುಂಡು ಹೊಡೆದು ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡಿರುವ ರಘು ಸಕಲೇಶಪುರ ನನ್ನು ತಕ್ಷಣ ಬಂಧಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು ಗೃಹಮಂತ್ರಿ ಜಿ.ಪರಮೇಶ್ವರ್ ಅವರಲ್ಲಿ ಆಗ್ರಹಿಸುತ್ತೇನೆ. ಈತ ಈ ಹಿಂದೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲೆಯೊಂದರಲ್ಲಿ ನಡೆದಿದ್ದ ಸಂಘದ ಕಾರ್ಯಕರ್ತರಿಗೆ ಕಾನೂನು ಬಾಹಿರ ಬಂದೂಕು ತರಬೇತಿ ಹಾಗೂ ಶಸ್ತ್ರ ದೀಕ್ಷೆಯಲ್ಲಿ ಭಾಗವಹಿಸಿ ಸಕಲೇಶಪುರದಿಂದ ನಿರಂತರವಾಗಿ ಕೊಡಗು ಜಿಲ್ಲೆಗೆ ಆಗಮಿಸಿ ಕೋಮು ವೈಷಮ್ಯವನ್ನು ಮೂಡಿಸಿ ಸಮಾಜದ ಶಾಂತಿ ಕದಡಲು ಯತ್ನಿಸಿದ್ದ ಸಂಧರ್ಭದಲ್ಲೇ ಬಂಧಿಸಿ ಅಕ್ರಮ ಶಸ್ತ್ರಾಸ್ತ್ರಗಳ ಸಂಗ್ರಹ ಮತ್ತು ತರಬೇತಿ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಎಸ್ಡಿಪಿಐ ಪಕ್ಷ ಅಂದೇ ಪೋಲಿಸ್ ಇಲಾಖೆಯನ್ನು ಆಗ್ರಹಿಸಿತ್ತು. ತ್ರಿಶೂಲ ದೀಕ್ಷೆ ನೀಡಿದ ಬಳಿಕ ತ್ರಿಶೂಲ ದೀಕ್ಷೆ ನೀಡಿದ ಬಳಿಕ ಭಜರಂಗದಳ ಗೂಂಡಗಳು ಅದನ್ನು ನಾಗರಿಕರ ಮತ್ತು ವಿಧ್ಯಾರ್ಥಿಗಳ ವಿರುದ್ಧ ಬಳಸಿ ಕೊಲೆಯತ್ನದಂತಹ ಕೃತ್ಯವನ್ನು ನಡೆಸಿರುವ ಉದಾಹರಣೆಗಳು ಇವೆ, ಅಲ್ಲದೇ ನೆರೆಯ ಕೇರಳದಲ್ಲಿ ಕೂಡ ಸಂಘಪರಿವಾರ ಈ ರೀತಿಯ ಬಂದೂಕು,ಪೆಟ್ರೋಲ್ ಬಾಂಬ್ ತರಬೇತಿ ನೀಡಿ ಪೋಲಿಸ್ ಠಾಣೆಗಳ ಮೇಲೆಯೇ ದಾಳಿ ನಡೆಸಿದ ಹಲವಾರು ನಿದರ್ಶನಗಳು ಇವೆ.&#8221; ಎನ್ನುವ ಮೂಲಕ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಸರ್ಕಾರವನ್ನು ಆಗ್ರಹಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಪೀಪಲ್ ಟಿವಿ ವರದಿ Impact : ರೌಡಿಶೀಟರ್ ರಘು ಬಂಧನಕ್ಕೆ ಬಂದ ಪೊಲೀಸರು ; ಆರೋಪಿ ಪರಾರಿ</title>
		<link>https://peepalmedia.com/people-tv-impact-police-arrested-rowdy-sheeter-raghu/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 01 Jul 2023 03:49:01 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[Bajarangdal]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Raghu sakaleshpura]]></category>
		<guid isPermaLink="false">https://peepalmedia.com/?p=22956</guid>

					<description><![CDATA[ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಭಜರಂಗದಳದ ಮಾಜಿ ರಾಜ್ಯ ಸಂಚಾಲಕ, ರೌಡಿಶೀಟರ್ ಸಕಲೇಶಪುರದ ರಘು ಎಂಬಾತನನ್ನು ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಆದರೆ ಬಂಧನದ ಸುಳಿವು ಸಿಗುತ್ತಿದ್ದಂತೆ ರಘು ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ಪೊಲೀಸರು ವ್ಯಾಪಕವಾಗಿ ಬಲೆ ಬೀಸಿದ್ದಾರೆ. 30.06.2023 ರ ಶುಕ್ರವಾರ ಬೆಳಿಗ್ಗೆ ಮಾಡಿದ ಈತನ ಪ್ರಚೋದನಕಾರಿ ಭಾಷಣದ ತುಣುಕನ್ನು ಪೀಪಲ್ ಟಿವಿ ವರದಿ ಮಾಡಿತ್ತು. ವರದಿಯ ಬೆನ್ನಲ್ಲೇ ಜಾಗೃತಗೊಂಡ ಪೊಲೀಸ್ ಇಲಾಖೆ ಈತನನ್ನು ಬಂಧಿಸಲು ಮುಂದಾಗಿದೆ. ಗೋಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಅದನ್ನು ಖಂಡಿಸಿ ತಾಲ್ಲೂಕು ವಿಶ್ವ [&#8230;]]]></description>
										<content:encoded><![CDATA[
<p>ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಭಜರಂಗದಳದ ಮಾಜಿ ರಾಜ್ಯ ಸಂಚಾಲಕ, ರೌಡಿಶೀಟರ್ ಸಕಲೇಶಪುರದ ರಘು ಎಂಬಾತನನ್ನು ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಆದರೆ ಬಂಧನದ ಸುಳಿವು ಸಿಗುತ್ತಿದ್ದಂತೆ ರಘು ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ಪೊಲೀಸರು ವ್ಯಾಪಕವಾಗಿ ಬಲೆ ಬೀಸಿದ್ದಾರೆ.</p>



<p>30.06.2023 ರ ಶುಕ್ರವಾರ ಬೆಳಿಗ್ಗೆ ಮಾಡಿದ ಈತನ ಪ್ರಚೋದನಕಾರಿ ಭಾಷಣದ ತುಣುಕನ್ನು <a href="https://fb.watch/luvksFtH8x/" data-type="URL" data-id="https://fb.watch/luvksFtH8x/" target="_blank" rel="noreferrer noopener"><strong>ಪೀಪಲ್ ಟಿವಿ</strong> <strong>ವರದಿ</strong> </a>ಮಾಡಿತ್ತು. ವರದಿಯ ಬೆನ್ನಲ್ಲೇ ಜಾಗೃತಗೊಂಡ ಪೊಲೀಸ್ ಇಲಾಖೆ ಈತನನ್ನು ಬಂಧಿಸಲು ಮುಂದಾಗಿದೆ.</p>



<p>ಗೋಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಅದನ್ನು ಖಂಡಿಸಿ ತಾಲ್ಲೂಕು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಶುಕ್ರವಾರ ಬೆಳಿಗ್ಗೆ ಪಟ್ಟಣದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಪ್ರತಿಭಟನೆಯಲ್ಲಿ &#8216;ಮುಸಲ್ಮಾನ ವ್ಯಾಪಾರಿಗಳು ಮನೆಗೆ ಬಂದರೆ ಗುಂಡಿಟ್ಟು ಸಾಯಿಸಿ&#8217; ಎಂದು ಇದೇ ರಘು ಪ್ರಚೋದನಕಾರಿ ಭಾಷಣ ಮಾಡಿದ್ದನು.</p>



<p><font style="vertical-align: inherit;"><font style="vertical-align: inherit;">ಸಧ್ಯ </font></font><strong><font style="vertical-align: inherit;"><font style="vertical-align: inherit;">ಪೀಪಲ್ ಟಿವಿ</font></font></strong><font style="vertical-align: inherit;"><font style="vertical-align: inherit;"> ವರದಿಯನ್ನು ಆದರಿಸಿ ಕಾರ್ಯ ಪ್ರವೃತ್ತರಾದ ಪೊಲೀಸರ ದೊಡ್ಡ ತಂಡವನ್ನು ರಚಿಸಿ ಬಂಧಿಸಲು ಮುಂದಾಗಿದ್ದಾರೆ. ಇದರಿಂದ ತಲೆ ತಪ್ಪಿಸಿಕೊಂಡ ರೌಡಿಶೀಟರ್ ರಘು ಅಜ್ಞಾತ ಸ್ಥಳಕ್ಕೆ ಪರಾರಿಯಾಗಿದ್ದಾನೆ. ಈತನ ಮೇಲೆ ಹಲವಷ್ಟು ಅಪರಾಧ ಪ್ರಕರಣಗಳು ಇವೆ. ಇಂತದ್ದೇ ಅನಾಹುತಕಾರಿ ಕೆಲಸಕ್ಕೆ ಈ ವ್ಯಕ್ತಿಯ ಮೇಲೆ ಗಡಿಪಾರಿಗೂ ಹಲವಷ್ಟು ಬಾರಿ ಆದೇಶ ನೀಡಲಾಗಿದೆ. ಚುನಾವಣೆ ಸಂದರ್ಭ ಮೈಸೂರು ಶಾಸಕ ತನ್ವೀರ್ ಸೇಠ್ ಅವರನ್ನು ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿರುವುದನ್ನು ನೆನೆಯಬಹುದು.</font></font></p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<iframe title="ಮುಸ್ಲಿಮರು ಮೀನು, ತರಕಾರಿ ಮಾರಲು ಬಂದರೆ ಗುಂಡು ಹೊಡೆಯುತ್ತೇವೆ!" width="696" height="392" src="https://www.youtube.com/embed/_9Sk99LDGnk?feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" allowfullscreen></iframe>
</div></figure>
]]></content:encoded>
					
		
		
			</item>
	</channel>
</rss>
