<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>RAHUL DRAVID &#8211; Peepal Media</title>
	<atom:link href="https://peepalmedia.com/tag/rahul-dravid/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 18 Nov 2023 07:43:53 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>RAHUL DRAVID &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ವಿಶ್ವಕಪ್‌ ಫೈನಲ್‌ ನಲ್ಲಿ ಭಾರತ ತಂಡ: ರಾಹುಲ್‌ ದ್ರಾವಿಡ್‌ ಪಾತ್ರ ಎಷ್ಟು ಗೊತ್ತೇ?</title>
		<link>https://peepalmedia.com/rahul-dravid-role-in-world-cup-final/</link>
		
		<dc:creator><![CDATA[Charan Aivarnad]]></dc:creator>
		<pubDate>Sat, 18 Nov 2023 07:43:53 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengalure]]></category>
		<category><![CDATA[cricket]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[RAHUL DRAVID]]></category>
		<category><![CDATA[sports]]></category>
		<category><![CDATA[state politics]]></category>
		<category><![CDATA[Virat Kohli]]></category>
		<category><![CDATA[world cup 2023]]></category>
		<category><![CDATA[writing]]></category>
		<guid isPermaLink="false">https://peepalmedia.com/?p=32548</guid>

					<description><![CDATA[ಬೆಂಗಳೂರು: ಭಾರತ ಕ್ರಿಕೆಟ್‌ ತಂಡ ಫೈನಲ್‌ ಗೇರಿದೆ. ಎಲ್ಲರ ಬಾಯಲ್ಲೂ ಕೊಹ್ಲಿ-ರೋಹಿತ್‌, ಬುಮ್ರಾ-ಶಮಿ, ರಾಹುಲ್-ಶ್ರೇಯಸ್‌ ಹೆಸರುಗಳು ಕೇಳಿಬರುತ್ತಿವೆ. ನಿಜ, ಈ ಬಾರಿಯ ಭಾರತ ಕ್ರಿಕೆಟ್‌ ತಂಡದ ಪ್ರತಿಯೊಬ್ಬ ಆಟಗಾರನೂ ಎಲ್ಲರ ಮನಗೆದ್ದಿದ್ದಾರೆ. ಅವರೆಲ್ಲರೂ ಒಂದು ತಂಡವಾಗಿ ಆಡಿದ್ದಾರೆ. ಅಸಾಧ್ಯಗಳನ್ನು ಸಾಧಿಸಿದ್ದಾರೆ. ಸವಾಲುಗಳನ್ನು ದಿಟ್ಟತನದಿಂದ ಎದುರಿಸಿ ಗೆದ್ದಿದ್ದಾರೆ. ವಿಶ್ವಕಪ್‌ ಪಂದ್ಯಾವಳಿಯಲ್ಲಿ ಸತತ ಹತ್ತು ಗೆಲುವುಗಳು ಅಷ್ಟು ಸುಲಭವಲ್ಲ. ಎಲ್ಲ ವಿಭಾಗಗಳಲ್ಲೂ ಬಲಶಾಲಿಯಾಗಿರುವ ತಂಡವಷ್ಟೇ ಹೀಗೆ ಗೆಲ್ಲಲು ಸಾಧ್ಯ ಆದರೆ ಕೇವಲ ಆಡುವ ಹನ್ನೊಂದು ಆಟಗಾರರಿಂದ ಇದೆಲ್ಲ ಸಾಧನೆ ಸಾಧ್ಯವೇ? [&#8230;]]]></description>
										<content:encoded><![CDATA[
<p><br><strong>ಬೆಂಗಳೂರು: </strong>ಭಾರತ ಕ್ರಿಕೆಟ್‌ ತಂಡ ಫೈನಲ್‌ ಗೇರಿದೆ. ಎಲ್ಲರ ಬಾಯಲ್ಲೂ ಕೊಹ್ಲಿ-ರೋಹಿತ್‌, ಬುಮ್ರಾ-ಶಮಿ, ರಾಹುಲ್-ಶ್ರೇಯಸ್‌ ಹೆಸರುಗಳು ಕೇಳಿಬರುತ್ತಿವೆ. ನಿಜ, ಈ ಬಾರಿಯ ಭಾರತ ಕ್ರಿಕೆಟ್‌ ತಂಡದ ಪ್ರತಿಯೊಬ್ಬ ಆಟಗಾರನೂ ಎಲ್ಲರ ಮನಗೆದ್ದಿದ್ದಾರೆ. ಅವರೆಲ್ಲರೂ ಒಂದು ತಂಡವಾಗಿ ಆಡಿದ್ದಾರೆ. ಅಸಾಧ್ಯಗಳನ್ನು ಸಾಧಿಸಿದ್ದಾರೆ. ಸವಾಲುಗಳನ್ನು ದಿಟ್ಟತನದಿಂದ ಎದುರಿಸಿ ಗೆದ್ದಿದ್ದಾರೆ. ವಿಶ್ವಕಪ್‌ ಪಂದ್ಯಾವಳಿಯಲ್ಲಿ ಸತತ ಹತ್ತು ಗೆಲುವುಗಳು ಅಷ್ಟು ಸುಲಭವಲ್ಲ. ಎಲ್ಲ ವಿಭಾಗಗಳಲ್ಲೂ ಬಲಶಾಲಿಯಾಗಿರುವ ತಂಡವಷ್ಟೇ ಹೀಗೆ ಗೆಲ್ಲಲು ಸಾಧ್ಯ</p>



<p>ಆದರೆ ಕೇವಲ ಆಡುವ ಹನ್ನೊಂದು ಆಟಗಾರರಿಂದ ಇದೆಲ್ಲ ಸಾಧನೆ ಸಾಧ್ಯವೇ? ಭಾರತ ತಂಡ ಇವತ್ತು ಎದುರಾಳಿಗಳಿಗೆ ನಡುಕ ಹುಟ್ಟಿಸುವ ಪಡೆಯಾಗಿ ನಿಲ್ಲಲು ಮುಖ್ಯಕಾರಣ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್.‌ ಹೀಗಾಗಿ ಭಾರತ ತಂಡದ ಸಾಧನೆಯನ್ನು ದ್ರಾವಿಡ್‌ ಹೆಸರು ಹೇಳದೇ ಶ್ಲಾಘಿಸುವುದು ಅನ್ಯಾಯ. ಹಾಗೆ ನೋಡಿದರೆ ದ್ರಾವಿಡ್‌ ಎಂದೂ ತನ್ನ ಬಗ್ಗೆ ತಾನು ಕೊಚ್ಚಿಕೊಂಡು ಮಾತನಾಡಿದ್ದಿಲ್ಲ. ತಂಡದ ನಾಯಕನನ್ನು ಹಿಂದೆ ಸರಿಸಿ ಎಲ್ಲ ತನ್ನಿಂದನೇ ಆಗುತ್ತಿದೆ ಎಂಬಂತೆ ಫೋಜು ಕೊಟ್ಟವರೂ ಅಲ್ಲ. ತನ್ನ ಪಾಡಿಗೆ ತನ್ನ ಕೆಲಸ ಮಾಡುತ್ತ, ತಂಡದ ಗೆಲುವಿಗೆ ಏನೇನು ಸ್ಟ್ರಾಟರ್ಜಿಗಳನ್ನು ಮಾಡಬೇಕೋ ಮಾಡುತ್ತ, ಆಟಗಾರರನ್ನು ತಿದ್ದುತ್ತ ವಿಶ್ವಕಪ್‌ ಗೆಲ್ಲುವ ಹಂತಕ್ಕೆ ತಂದುನಿಲ್ಲಿಸಿರುವ ದ್ರಾವಿಡ್‌ ನಿಜವಾದ ಅರ್ಥದಲ್ಲಿ ನಿಸ್ವಾರ್ಥಿ.</p>



<p>ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡುವ ಕಾಲಕ್ಕೆ ದ್ರಾವಿಡ್‌ ʻದಿ ವಾಲ್‌ʼ (ಗೋಡೆ) ಎಂದೇ ಹೆಸರಾದವರು. ಸಾಧಾರಣವಾಗಿ ಮೂರನೇ ಅಥವಾ ನಾಲ್ಕನೇ ಕ್ರಮಾಂಕದಲ್ಲಿ ಆಡುತ್ತಿದ್ದ ದ್ರಾವಿಡ್‌ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದಾಗೆಲ್ಲ ಪಾರು ಮಾಡುತ್ತಿದ್ದವರು. ಯಾರನ್ನು ಬೇಕಾದರೂ ಔಟ್‌ ಮಾಡಬಹುದು, ಆದರೆ ರಾಹುಲ್‌ ಅವರನ್ನಲ್ಲ ಎಂದು ಇತರೆ ದೇಶಗಳ ಬೌಲರ್‌ ಗಳು ಪರಿತಪಿಸುವಷ್ಟು ಅವರು ಕ್ರೀಜ್‌ ಗೆ ಅಂಟಿ ನಿಲ್ಲುತ್ತಿದ್ದರು. 2011ರಲ್ಲಿ ಭಾರತ ತಂಡ ಇಂಗ್ಲೆಂಡ್‌ ಪ್ರವಾಸಕ್ಕೆ ತೆರಳಿದ್ದಾಗ ಅತ್ಯಂತ ಹೀನಾಯವಾಗಿ 4-0 ಅಂತರದಲ್ಲಿ ಟೆಸ್ಟ್‌ ಸರಣಿಯನ್ನು ಸೋತಿತ್ತು. ಆದರೆ ರಾಹುಲ್‌ ದ್ರಾವಿಡ್‌ ಆ ಸರಣಿಯಲ್ಲಿ ಗಳಿಸಿದ ರನ್‌ ಗಳ ಸಂಖ್ಯೆ 602! ಛಲ ಬಿಡದೆ ಹೋರಾಡುವುದು ರಾಹುಲ್‌ ಸ್ವಭಾವ.</p>



<p>ದ್ರಾವಿಡ್‌ ಕೋಚ್‌ ಹುದ್ದೆಗೆ ದಿಢೀರನೇ ಬರಲಿಲ್ಲ. ಅದಕ್ಕೆ ಅವರು ಪೂರ್ವ ತಯಾರಿಗಳನ್ನು ಮಾಡಿಕೊಂಡೇ ಬಂದಿದ್ದರು. ಮೊದಲು ಅವರು 2016ರಲ್ಲಿ ಅಂಡರ್‌-19 ಭಾರತ ತಂಡಕ್ಕೆ ಕೋಚ್‌ ಆದರು. ಆ ಹುದ್ದೆಗೆ ಅಂಥ ಡಿಮ್ಯಾಂಡೇನೂ ಇರಲಿಲ್ಲ. ಆದರೆ ದ್ರಾವಿಡ್‌ ಹೊಸ ತಲೆಮಾರಿನ ಕ್ರಿಕೆಟಿಗರನ್ನು ತಯಾರು ಮಾಡುವ ಕಾರ್ಯದಲ್ಲಿ ತಾವೇ ಆಸಕ್ತಿ ವಹಿಸಿ ಈ ಹುದ್ದೆಗೆ ಬಂದಿದ್ದರು. ಈಗ ಭಾರತ ಕ್ರಿಕೆಟ್‌ ತಂಡದಲ್ಲಿ ಆಡುತ್ತಿರುವ ಹಲವು ಆಟಗಾರರು ದ್ರಾವಿಡ್‌ ಗರಡಿಯಲ್ಲಿ ಪಳಗಿದವರೇ ಆಗಿದ್ದಾರೆ. ಮೂರು ವರ್ಷಗಳ ಕಾಲ ಹೊಸ ಹುಡುಗರಿಗೆ ತರಬೇತಿ ನೀಡಿದ ನಂತರ ದ್ರಾವಿಡ್‌ ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿ (ಎನ್‌ ಸಿ ಎ) ನಿರ್ದೇಶಕರಾಗಿ ಬಂದರು. ಎನ್.ಸಿ.ಎ ಒಂದು ಬಗೆಯಲ್ಲಿ ಆಟಗಾರರಿಗೆ ಸಂಜೀವಿನಿ ಇದ್ದಂತೆ. ಗಾಯಗೊಂಡವರು, ಫಿಟ್ನೆಸ್‌ ಕಳೆದುಕೊಂಡವರು ಇಲ್ಲಿ ಬಂದು ಪರಿಪೂರ್ಣವಾಗಿ ಸಿದ್ಧರಾಗುತ್ತಾರೆ. ಎನ್‌.ಸಿ.ಎ ಯನ್ನು ಸಮರ್ಥವಾಗಿ ಕಟ್ಟುವಲ್ಲಿ ದ್ರಾವಿಡ್‌ ಯಶಸ್ವಿಯಾದರು.</p>



<p>ಇದಾದ ನಂತರವೇ ದ್ರಾವಿಡ್‌ ಭಾರತ ತಂಡದ ಮುಖ್ಯ ಕೋಚ್‌ ಆದರು. ಅವರು ಕೋಚ್‌ ಆದಾಗ ವಿರಾಟ್‌ ಕೊಹ್ಲಿ ತಂಡದ ನಾಯಕರಾಗಿದ್ದರು. ಆದರೆ ಕೊಹ್ಲಿಯನ್ನು ಒಂದು ಬಗೆಯಲ್ಲಿ ಅಪಮಾನಿಸಿ ನಾಯಕತ್ವದಿಂದ ಇಳಿಯುವಂತೆ ಮಾಡಿತು ಬಿಸಿಸಿಐ. ರೋಹಿತ್‌ ಶರ್ಮಾ ನಾಯಕರಾದರು. ಇಂಥ ಸಂದರ್ಭದಲ್ಲಿ ತಂಡವನ್ನು ಕಟ್ಟುವುದು ಕಷ್ಟದ ಕೆಲಸ. ದ್ರಾವಿಡ್‌ ಸವಾಲಾಗಿ ತೆಗೆದುಕೊಂಡು ಸತತ ಶ್ರಮವಹಿಸಿ ತಂಡ ಕಟ್ಟುತ್ತ ಹೋದರು. ಹೊಸಹೊಸ ಪ್ರಯೋಗಗಳನ್ನು ಮಾಡಿದರು. ಫಾರ್ಮ್‌ ಕಳೆದುಕೊಂಡಿದ್ದ ಕೆ.ಎಲ್.ರಾಹುಲ್‌ ಕೈಗೆ ಗ್ಲೌಸ್‌ ಕೊಟ್ಟು ವಿಕೆಟ್‌ ಕೀಪಿಂಗ್‌ ಗೆ ಹಚ್ಚಿದರು. ತಂಡದ ನಾಯಕ ರೋಹಿತ್‌ ಶರ್ಮಾ ಜೊತೆ ಒಳ್ಳೆಯ ಸಂಬಂಧ ಇಟ್ಟುಕೊಂಡರು. ಭಾರತ ತಂಡದ ಡ್ರೆಸಿಂಗ್‌ ರೂಮ್‌ ಲವಲವಿಕೆಯಿಂದ ತುಂಬಿ ತುಳುಕಿತು. ದ್ರಾವಿಡ್‌ ಎಲ್ಲರಿಗೂ ಸ್ಪೂರ್ತಿಯಾಗಿ ನಿಂತರು.</p>



<p>ದ್ರಾವಿಡ್‌ ಎಂದರೆ ಹಾಗೆಯೇ. ಸದ್ದುಗದ್ದಲವಿಲ್ಲದೆ ತಮ್ಮ ಕೆಲಸ ತಾವು ಮಾಡುವವರು. ಅವರು ಜೋರಾಗಿ ಮಾತಾಡಿದ್ದನ್ನು ನೋಡಿದವರೇ ವಿರಳ. ಎಲ್ಲಿ ಯಾವಾಗ ಎಷ್ಟು ಮಾತಾಡಬೇಕು ಎಂಬುದು ಅವರಿಗೆ ಗೊತ್ತು. ಅಷ್ಟೆಲ್ಲ ದೊಡ್ಡ ಸಾಧನೆ ಮಾಡಿಯೂ ಅವರು ಎಲೆಮರೆಯ ಕಾಯಿಯಂತೆ ಉಳಿದವರು. ಈಗಲೂ ಅಷ್ಟೆ. ಭಾರತ ವಿಶ್ವಕಪ್‌ ಗೆದ್ದು ನಿಂತಾಗ ಅವರು ಇದು ನನ್ನ ಸಾಧನೆ ಎಂದು ಬಡಾಯಿ ಕೊಚ್ಚಿಕೊಳ್ಳುವುದಿಲ್ಲ. ಮೀಡಿಯಾಗಳ ಕಣ್ಣಿಗೂ ಪದೇಪದೇ ಬೀಳುವುದಿಲ್ಲ. ಅವರು ಹಿನ್ನೆಲೆಯಲ್ಲೇ ನಿಂತು ಸಂಭ್ರಮಿಸುವ ಜೀವ. ದ್ರಾವಿಡ್‌ ಅಂದರೆ ಹಾಗೆಯೇ, ʻಕಾಣ್ತಿದೆ, ಆದರೆ ಕಾಣಾಕಿಲ್ಲʼ!</p>
]]></content:encoded>
					
		
		
			</item>
		<item>
		<title>ವೇಗದ ಬೌಲರ್‌ಗಳಿಗೆ ಬಿಜಿನೆಸ್‌ ಕ್ಲಾಸ್ ಸೀಟ್‌ ಬಿಟ್ಟುಕೊಟ್ಟ ದ್ರಾವಿಡ್‌, ಕೊಹ್ಲಿ, ರೋಹಿತ್‌</title>
		<link>https://peepalmedia.com/dravid-kohli-rohit-give-up-business-class-seats-for-fast-bowlers/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 08 Nov 2022 08:15:11 +0000</pubDate>
				<category><![CDATA[ಆಟೋಟ]]></category>
		<category><![CDATA[ARSHADEEP SINGH]]></category>
		<category><![CDATA[Bhuvneshwar Kumar]]></category>
		<category><![CDATA[HARDHIK PANDYA]]></category>
		<category><![CDATA[india]]></category>
		<category><![CDATA[mohamad shami]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[RAHUL DRAVID]]></category>
		<category><![CDATA[ROHITH SHARMA]]></category>
		<category><![CDATA[sports news]]></category>
		<category><![CDATA[t20 world cup]]></category>
		<category><![CDATA[Virat Kohli]]></category>
		<guid isPermaLink="false">https://peepalmedia.com/?p=14761</guid>

					<description><![CDATA[ಅಡಿಲೇಡ್‌ ಓವಲ್‌ (ಆಸ್ಟ್ರೇಲಿಯಾ): ಟಿ-20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಈಗಾಗಲೇ ಸೆಮಿಫೈನಲ್‌ ತಲುಪಿರುವ ಭಾರತ ತಂಡದ ಆಟಗಾರರು ಪಂದ್ಯಾವಳಿ ಆರಂಭವಾದಗಿನಿಂದಲೂ ವಿಮಾನಗಳಲ್ಲಿ ಸಾಕಷ್ಟು ಮೈಲಿಗಳ ದೂರದ ಪ್ರಯಾಣ ನಡೆಸುತ್ತಿದ್ದು, ಪ್ರಯಾಣದ ಸಂದರ್ಭದಲ್ಲಿ ವೇಗದ ಬೌಲರ್‌ಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಬಿಸಿನೆಸ್‌ ಕ್ಲಾಸ್‌ ಸೀಟ್‌ಗಳನ್ನು ಬಿಟ್ಟುಕೊಟ್ಟಿರುವುದು ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ. ವಿಮಾನದಲ್ಲಿ ಪ್ರಯಾಣಿಸುವವರಿಗೆ ಬಿಸಿನೆಸ್‌ ಕ್ಲಾಸ್‌ ಸೀಟ್‌ಗಳು, ಮತ್ತು ಎಕನಮಿ ಕ್ಲಾಸ್‌ [&#8230;]]]></description>
										<content:encoded><![CDATA[
<p><strong>ಅಡಿಲೇಡ್‌ ಓವಲ್‌ (ಆಸ್ಟ್ರೇಲಿಯಾ):</strong> ಟಿ-20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಈಗಾಗಲೇ ಸೆಮಿಫೈನಲ್‌ ತಲುಪಿರುವ ಭಾರತ ತಂಡದ ಆಟಗಾರರು ಪಂದ್ಯಾವಳಿ ಆರಂಭವಾದಗಿನಿಂದಲೂ ವಿಮಾನಗಳಲ್ಲಿ ಸಾಕಷ್ಟು ಮೈಲಿಗಳ ದೂರದ ಪ್ರಯಾಣ ನಡೆಸುತ್ತಿದ್ದು, ಪ್ರಯಾಣದ ಸಂದರ್ಭದಲ್ಲಿ ವೇಗದ ಬೌಲರ್‌ಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಬಿಸಿನೆಸ್‌ ಕ್ಲಾಸ್‌ ಸೀಟ್‌ಗಳನ್ನು ಬಿಟ್ಟುಕೊಟ್ಟಿರುವುದು ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ.</p>



<p>ವಿಮಾನದಲ್ಲಿ ಪ್ರಯಾಣಿಸುವವರಿಗೆ ಬಿಸಿನೆಸ್‌ ಕ್ಲಾಸ್‌ ಸೀಟ್‌ಗಳು, ಮತ್ತು ಎಕನಮಿ ಕ್ಲಾಸ್‌ ಸೀಟ್‌ಗಳಲ್ಲಿ ಪ್ರಯಾಣ ನಡೆಸಬಹುದಾಗಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಾನದಂಡಗಳ ಪ್ರಕಾರ, ಸಾಮಾನ್ಯವಾಗಿ ತಂಡದ ಕೋಚ್, ನಾಯಕ, ಉಪನಾಯಕ ಮತ್ತು ಮ್ಯಾನೇಜರ್‌ಗೆ ಬಿಸಿನೆಸ್‌ ಕ್ಲಾಸ್ ಸೀಟ್‌ಗಳು ಮತ್ತು ಉಳಿದ ಆಟಗಾರರಿಗೆ ಎಕನಮಿ ಕ್ಲಾಸ್‌ ಸೀಟ್‌ಗಳು ನೋಂದಣಿಯಾಗಿರುತ್ತವೆ.</p>



<p>ಸಾಮಾನ್ಯವಾಗಿ ಬಿಸಿನೆಸ್‌ ಕ್ಲಾಸ್‌ ಸೀಟ್‌ಗಳಲ್ಲಿ ಪ್ರಯಾಣಿಕರು ಕಾಲುಗಳನ್ನು ನೀಡಿಕೊಂಡು ಆರಾಮದಾಯಕ ಪ್ರಯಾಣ ನಡೆಸಬಹುದಾಗಿದೆ. ಆದರೆ ಎಕನಮಿ ಕ್ಲಾಸ್‌ ಸೀಟ್‌ಗಳಲ್ಲಿ ಕೊಂಚ ಇಕ್ಕಟ್ಟು ಇರುವುದರಿಂದ ಪ್ರಯಾಣಿಕರು ಬಿಸಿನೆಸ್‌ ಕ್ಲಾಸ್‌ನಷ್ಟು ಆರಾಮದಾಯಕ ಪ್ರಯಾಣ ನಡೆಸಲು ಸಾಧ್ಯವಾಗುವುದಿಲ್ಲ.</p>



<p>ವೇಗದ ಬೌಲರ್‌ಗಳು ಮೈದಾನದಲ್ಲಿ ಸಾಕಷ್ಟು ಶ್ರಮ ವಹಿಸಬೇಕಾಗುತ್ತದೆ, ಬೆವರು ಹರಿಸಬೇಕಾಗುತ್ತದೆ. ಇತರ ಆಟಗಾರರಿಗಿಂತ ಹೆಚ್ಚು ವೇಗದ ಬೌಲರ್‌ಗಳ ಕಾಲುಗಳಿಗೆ ವಿಶ್ರಾಂತಿ ಅಗತ್ಯವಾಗಿರುತ್ತದೆ. ಆದರೆ ಪ್ರಯಾಣದ ಸಮಯದಲ್ಲಿ ತಂಡದ ವೇಗದ ಬೌಲರ್‌ಗಳು ಎಕನಮಿ ಕ್ಲಾಸ್‌ ಸೀಟ್‌ಗಳಲ್ಲಿ ಪ್ರಯಾಣಿಸುವುದರಿಂದ, ಅವರಿಗೆ ಆರಾಮದಾಯಕ ವಿಶ್ರಾಂತಿ ಸಿಗುವುದಿಲ್ಲ.</p>



<p>ಈ ಹಿನ್ನೆಲೆಯಲ್ಲಿ ಭಾರತ ಕ್ರಿಕೆಟ್‌ ತಂಡದ ಹಿರಿಯ ಆಟಗಾರರಾದ ರಾಹುಲ್‌ ದ್ರಾವಿಡ್‌, ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ತಮ್ಮ ಸೀಟುಗಳನ್ನು ತಂಡದ ವೇಗಿ ಬೌಲರ್‌ಗಳಾದ ಮಹಮದ್‌ ಶಮಿ, ಭುವನೇಶ್ವರ್‌ ಕುಮಾರ್‌, ಹಾರ್ದಿಕ್‌ ಪಾಂಡ್ಯ, ಮತ್ತು ಅರ್ಶದೀಪ್‌ ಸಿಂಗ್‌ ಅವರಿಗೆ aಬಿಟ್ಟುಕೊಟ್ಟು, ಆಟಗಾರರ ಬಗ್ಗೆ ಕಾಳಜಿ ತೋರಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.</p>
]]></content:encoded>
					
		
		
			</item>
	</channel>
</rss>
