<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Rajastan &#8211; Peepal Media</title>
	<atom:link href="https://peepalmedia.com/tag/rajastan/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 03 Jan 2025 11:11:13 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Rajastan &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಶಿವ ದೇವಾಲಯ ವಿವಾದದ ನಡುವೆ ಅಜ್ಮೀರ್‌ ದರ್ಗಾಕ್ಕೆ ಚಾದರ್‌ ಹರಕೆ ನೀಡಿದ ಮೋದಿ!</title>
		<link>https://peepalmedia.com/amidst-the-shiv-temple-controversy-modi-donates-a-chadar-to-ajmer-dargah/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 03 Jan 2025 11:08:19 +0000</pubDate>
				<category><![CDATA[ದೇಶ]]></category>
		<category><![CDATA[Ajmer Sharif Dargah]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[Rajastan]]></category>
		<guid isPermaLink="false">https://peepalmedia.com/?p=51559</guid>

					<description><![CDATA[ಅಜ್ಮೀರ್‌ ದರ್ಗಾ ಒಂದು ಶಿವ ದೇವಾಲಯ ಎನ್ನುವ ವಿವಾದದ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಗುರುವಾರದಂದು ಅಜ್ಮೀರ್ ಷರೀಫ್ ದರ್ಗಾಕ್ಕೆ &#8216;ಚಾದರ್&#8217; ಹರಕೆ ಅರ್ಪಿಸಿದ್ದಾರೆ. ಚಾದರ್&#8217; ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರಿಗೆ ಸಂಜೆ 6 ಗಂಟೆಗೆ ನೀಡಲಾಗಿದ್ದು, ನಂತರ ಇವರು ಇದನ್ನು ಖ್ವಾಜಾ ಮೊಯಿನುದ್ದೀನ್ ಚಿಶ್ತಿಯ ಉರುಸಿನ ಸಮಯದಲ್ಲಿ ದರ್ಗಾಕ್ಕೆ ಅರ್ಪಿಸುತ್ತಾರೆ. ಪ್ರಧಾನಿಯಾದ ನಂತರ [&#8230;]]]></description>
										<content:encoded><![CDATA[
<p>ಅಜ್ಮೀರ್‌ ದರ್ಗಾ ಒಂದು ಶಿವ ದೇವಾಲಯ ಎನ್ನುವ ವಿವಾದದ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷದಂತೆ ಈ ವರ್ಷವೂ ಗುರುವಾರದಂದು ಅಜ್ಮೀರ್ ಷರೀಫ್ ದರ್ಗಾಕ್ಕೆ &#8216;ಚಾದರ್&#8217; ಹರಕೆ ಅರ್ಪಿಸಿದ್ದಾರೆ. </p>



<p>ಚಾದರ್&#8217; ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರಿಗೆ ಸಂಜೆ 6 ಗಂಟೆಗೆ ನೀಡಲಾಗಿದ್ದು, ನಂತರ ಇವರು ಇದನ್ನು ಖ್ವಾಜಾ ಮೊಯಿನುದ್ದೀನ್ ಚಿಶ್ತಿಯ ಉರುಸಿನ ಸಮಯದಲ್ಲಿ ದರ್ಗಾಕ್ಕೆ ಅರ್ಪಿಸುತ್ತಾರೆ.</p>



<p>ಪ್ರಧಾನಿಯಾದ ನಂತರ ನರೇಂದ್ರ ಮೋದಿ ಅವರು ಅಜ್ಮೀರ್ ಷರೀಫ್ ದರ್ಗಾಕ್ಕೆ 10 ಬಾರಿ &#8216;ಚಾದರ್&#8217; ಅರ್ಪಿಸಿದ್ದಾರೆ. ಇದು ಹನ್ನೊಂದನೇ ವರ್ಷದ ಹರಕೆ ಸಮರ್ಪಣೆಯಾಗಿದೆ.</p>



<p>ಕಳೆದ ವರ್ಷ, 812 ನೇ ಉರ್ಸ್ ಸಮಯದಲ್ಲಿ, ಮುಸ್ಲಿಂ ಸಮುದಾಯವನ್ನು ಪ್ರತಿನಿಧಿಸುವ ನಿಯೋಗದೊಂದಿಗೆ ಆಗಿನ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಜಮಾಲ್ ಸಿದ್ದಿಕಿ ಮೋದಿ ಪರವಾಗಿ &#8216;ಚಾದರ್&#8217; ಅರ್ಪಿಸಿದ್ದರು.</p>



<p>ರಾಜಸ್ಥಾನದ ಅಜ್ಮೀರ್ ಷರೀಫ್ ದರ್ಗಾವು ನಿಜವಾಗಿಯೂ ಶಿವನ ದೇವಾಲಯವಾಗಿದೆ ಎಂದು ಹೇಳುವ ಮೂಲಕ ರಾಜಸ್ಥಾನದ ನ್ಯಾಯಾಲಯವು ಹಿಂದೂ ಸೇನೆಯ ಮನವಿಯನ್ನು ಸ್ವೀಕರಿಸಿದ ಒಂದು ತಿಂಗಳ ನಂತರ ಇದು ನಡೆದಿದೆ.</p>



<p>ಕಳೆದ ವರ್ಷ ಅಜ್ಮೀರ್‌ನ ಸ್ಥಳೀಯ ನ್ಯಾಯಾಲಯವು ನವೆಂಬರ್ 27 ರಂದು ಮೊಯಿನುದ್ದೀನ್ ಚಿಶ್ತಿ ದರ್ಗಾದಲ್ಲಿ ಶಿವ ದೇವಾಲಯವಿದೆ ಎಂದು ಫಿರ್ಯಾದಿಯ ವಕೀಲ ಆರೋಪಿಸಿ, ಸಿವಿಲ್ ಮೊಕದ್ದಮೆಯಲ್ಲಿ ಮೂರು ಕಕ್ಷಿದಾರರಿಗೆ ನೋಟಿಸ್ ನೀಡುವಂತೆ ಆದೇಶಿಸಿದಾಗ ಅಜ್ಮೀರ್ ಷರೀಫ್ ದರ್ಗಾ ವಿವಾದಕ್ಕೆ ಕಾರಣವಾಯಿತು. </p>



<p><a href="https://www.hindustantimes.com/cities/jaipur-news/court-issues-notice-over-claim-of-temple-inside-ajmer-dargah-101732771707774.html" target="_blank" rel="noreferrer noopener">ಡಿಸೆಂಬರ್ 20 ರಂದು ಅಜ್ಮೀರ್ ಷರೀಫ್ ದರ್ಗಾ ಸಮಿತಿಯು ಅಜ್ಮೀರ್‌ನ ಮುನ್ಸಿಫ್ ನ್ಯಾಯಾಲಯದಲ್ಲಿ</a> 5 ಪುಟಗಳ ಅರ್ಜಿಯನ್ನು ಸಲ್ಲಿಸಿ , ಅಜ್ಮೀರ್ ದರ್ಗಾದ ಕೆಳಗೆ ದೇವಾಲಯವಿದೆ ಎಂದು ಆರೋಪಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ಒತ್ತಾಯಿಸಿತು. ಮುಂದಿನ ವಿಚಾರಣೆಯನ್ನು ಜನವರಿ 24ಕ್ಕೆ ನಿಗದಿಪಡಿಸಲಾಗಿದೆ.</p>



<p>ಅಜ್ಮೀರ್ ಶರೀಫ್ ದರ್ಗಾ, ದಕ್ಷಿಣ ಏಷ್ಯಾದ ಪ್ರಮುಖ ಸೂಫಿ ಕೇಂದ್ರ,  ಖ್ವಾಜಾ ಮೊಯಿನುದ್ದೀನ್ ಹಸನ್ ಚಿಶ್ತಿ ಅವರ ಮರಣ ವಾರ್ಷಿಕೋತ್ಸವದ <a href="https://www.hindustantimes.com/india-news/petition-claims-presence-of-hindu-temple-in-ajmer-dargah-court-issues-notices-101732728528496.html" target="_blank" rel="noreferrer noopener">ಉರುಸಿನ </a> ಸಮಯದಲ್ಲಿ ಲಕ್ಷಾಂತರ ಭಕ್ತರು ಬರುತ್ತಾರೆ. ಉರುಸ್ ಸಮಯದಲ್ಲಿ, ಚಾದರವನ್ನು ಅರ್ಪಿಸುವುದನ್ನು ಪ್ರಮುಖ ಆರಾಧನೆ ಎಂದು ಪರಿಗಣಿಸಲಾಗುತ್ತದೆ.</p>



<p>ಹಜರತ್ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ 813 ನೇ ಉರ್ಸ್ ಡಿಸೆಂಬರ್ 28, 2024 ರಂದು ಪ್ರಾರಂಭವಾಗಿದೆ.</p>



<p></p>
]]></content:encoded>
					
		
		
			</item>
		<item>
		<title>ರಾಜ್ಯಗಳ ನಡುವೆ ಜಲ ವಿವಾದಗಳನ್ನು ಹೆಚ್ಚಿಸಿದ ಕಾಂಗ್ರೆಸ್, ರೈತರಿಗಾಗಿ ಏನ್ನನ್ನೂ ಮಾಡಲಿಲ್ಲ: ಮೋದಿ ವಾಗ್ದಾಳಿ</title>
		<link>https://peepalmedia.com/congress-escalated-water-disputes-between-states-did-nothing-for-farmers-modi/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 17 Dec 2024 11:56:47 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[jaipur]]></category>
		<category><![CDATA[madhya pradesh]]></category>
		<category><![CDATA[narendra modi]]></category>
		<category><![CDATA[Rajastan]]></category>
		<guid isPermaLink="false">https://peepalmedia.com/?p=50803</guid>

					<description><![CDATA[ಜೈಪುರ: &#8220;ಕಾಂಗ್ರೆಸ್‌ನವರು ರೈತರ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ, ಆದರೆ ರೈತರಿಗಾಗಿ ಏನನ್ನೂ ಮಾಡುವುದಿಲ್ಲ ಅಥವಾ ಇತರರಿಗೆ ಮಾಡಲು ಬಿಡುವುದಿಲ್ಲ,&#8221; ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದರು ಪೂರ್ವ ರಾಜಸ್ಥಾನ ಕಾಲುವೆ ಯೋಜನೆ (ಇಆರ್‌ಸಿಪಿ) ವಿಳಂಬವು ಕಾಂಗ್ರೆಸ್‌ನ ಉದ್ದೇಶಕ್ಕೆ ನೇರ ಪುರಾವೆಯಾಗಿದೆ ಎಂದು ಅವರು ಹೇಳಿದರು. &#8220;ಪೂರ್ವ ರಾಜಸ್ಥಾನ ಕಾಲುವೆ ಯೋಜನೆ (ಇಆರ್‌ಸಿಪಿ) ಕಾಂಗ್ರೆಸ್‌ನಿಂದ ಇಷ್ಟು ದಿನ ತಡವಾಯಿತು, ಇದು ಕಾಂಗ್ರೆಸ್‌ನ ಉದ್ದೇಶಗಳಿಗೆ ನೇರ ಪುರಾವೆಯಾಗಿದೆ. ಅವರು ರೈತರ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ, ಆದರೆ ರೈತರಿಗಾಗಿ [&#8230;]]]></description>
										<content:encoded><![CDATA[
<p><strong>ಜೈಪುರ: </strong>&#8220;ಕಾಂಗ್ರೆಸ್‌ನವರು ರೈತರ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ, ಆದರೆ ರೈತರಿಗಾಗಿ ಏನನ್ನೂ ಮಾಡುವುದಿಲ್ಲ ಅಥವಾ ಇತರರಿಗೆ ಮಾಡಲು ಬಿಡುವುದಿಲ್ಲ,&#8221; ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದರು</p>



<p>ಪೂರ್ವ ರಾಜಸ್ಥಾನ ಕಾಲುವೆ ಯೋಜನೆ (ಇಆರ್‌ಸಿಪಿ) ವಿಳಂಬವು ಕಾಂಗ್ರೆಸ್‌ನ ಉದ್ದೇಶಕ್ಕೆ ನೇರ ಪುರಾವೆಯಾಗಿದೆ ಎಂದು ಅವರು ಹೇಳಿದರು.</p>



<p>&#8220;ಪೂರ್ವ ರಾಜಸ್ಥಾನ ಕಾಲುವೆ ಯೋಜನೆ (ಇಆರ್‌ಸಿಪಿ) ಕಾಂಗ್ರೆಸ್‌ನಿಂದ ಇಷ್ಟು ದಿನ ತಡವಾಯಿತು, ಇದು ಕಾಂಗ್ರೆಸ್‌ನ ಉದ್ದೇಶಗಳಿಗೆ ನೇರ ಪುರಾವೆಯಾಗಿದೆ. ಅವರು ರೈತರ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ, ಆದರೆ ರೈತರಿಗಾಗಿ ಏನನ್ನೂ ಮಾಡುವುದಿಲ್ಲ ಅಥವಾ ಇತರರಿಗೆ ಮಾಡಲು ಬಿಡುವುದಿಲ್ಲ,” ಎಂದು ಅವರು ಜೈಪುರದ ದಾಡಿಯಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಹೇಳಿದರು.</p>



<p>ರಾಜಸ್ಥಾನ ಸರ್ಕಾರ ಒಂದು ವರ್ಷವನ್ನು ಪೂರ್ಣಗೊಳಿಸಿದ &#8216;ಏಕ್ ವರ್ಷ್-ಪರಿಣಾಮ್ ಉತ್ಕರ್ಷ್&#8217; ಅನ್ನು ಉದ್ದೇಶಿಸಿ ಮಾತನಾಡಿ, 46,300 ಕೋಟಿ ರುಪಾಯಿಗೂ ಹೆಚ್ಚು ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.</p>



<p>ಪ್ರವತಿ, ಕಲಿಸಿಂಧ್, ಚಂಬಲ್ ಯೋಜನೆಯು ರಾಜಸ್ಥಾನದ 21 ಜಿಲ್ಲೆಗಳಿಗೆ ನೀರಾವರಿ ನೀರು ಮತ್ತು ಕುಡಿಯುವ ನೀರನ್ನು ಒದಗಿಸುತ್ತದೆ ಮತ್ತು ರಾಜಸ್ಥಾನ ಮತ್ತು ಮಧ್ಯಪ್ರದೇಶಗಳ ಅಭಿವೃದ್ಧಿ ವೇಗವನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ಹೇಳಿದರು.</p>



<p>ಸಂವಾದವನ್ನು ಉತ್ತೇಜಿಸುವುದು ಬಿಜೆಪಿಯ ನೀತಿಯಾಗಿದ್ದರೆ, ಕಾಂಗ್ರೆಸ್ ರಾಜ್ಯಗಳ ನಡುವಿನ ಜಲ ವಿವಾದವನ್ನು ಉತ್ತೇಜಿಸುವುದನ್ನು ಮುಂದುವರೆಸಿದೆ ಎಂದು ಅವರು ಹೇಳಿದರು.</p>



<p>&#8220;ಬಿಜೆಪಿಯ ನೀತಿಯು ಮಾತುಕತೆಯೇ ಹೊರತು ಸಂಘರ್ಷವಲ್ಲ. ನಾವು ಸಹಕಾರವನ್ನು ನಂಬುತ್ತೇವೆ, ವಿರೋಧವಲ್ಲ. ನಾವು ಪರಿಹಾರಗಳನ್ನು ನಂಬುತ್ತೇವೆ, ಅಡ್ಡಿ ಮಾಡುವುದನ್ನಲ್ಲ. ಆದ್ದರಿಂದ, ನಮ್ಮ ಸರ್ಕಾರವು ಪೂರ್ವ ರಾಜಸ್ಥಾನದ ಕಾಲುವೆ ಯೋಜನೆಗೆ ಅನುಮೋದನೆ ನೀಡಿದೆ ಮತ್ತು ಯೋಜನೆಯನ್ನು ವಿಸ್ತರಿಸಿದೆ. ಬಿಜೆಪಿ ಸರ್ಕಾರ ಶೀಘ್ರದಲ್ಲೇ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸರ್ಕಾರ ರಚಿಸಿದಂತೆ, ಪಾರ್ವತಿ-ಕಲಿಸಿಂಧ್-ಚಂಬಲ್ ಯೋಜನೆಗೆ ಒಪ್ಪಂದ ಮಾಡಿಕೊಳ್ಳಲಾಯಿತು,&#8221; ಎಂದು ಅವರು ಹೇಳಿದರು.</p>



<p>ತಾವು ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್‌ನ ವಿವಿಧ ಭಾಗಗಳಿಗೆ ನರ್ಮದಾ ನದಿಯ ನೀರನ್ನು ತರಲು ದೊಡ್ಡ ಅಭಿಯಾನವನ್ನು ನಡೆಸಿದ್ದಾಗಿ, ಅದನ್ನು ತಡೆಯಲು ಕಾಂಗ್ರೆಸ್ ಮತ್ತು ಕೆಲವು ಎನ್‌ಜಿಒಗಳು ಹಲವಾರು ತಂತ್ರಗಳನ್ನು ಹೂಡಿದವು ಎಂದು ಆರೋಪಿಸಿದರು.</p>



<p>&#8220;ಕಾಂಗ್ರೆಸ್ ಎಂದಿಗೂ ನೀರಿನ ಸಮಸ್ಯೆಗಳನ್ನು ಕಡಿಮೆ ಮಾಡಲು ಬಯಸುವುದಿಲ್ಲ &#8230; ನಮ್ಮ ನದಿಗಳ ನೀರು ಗಡಿಯುದ್ದಕ್ಕೂ ಹರಿಯುತ್ತಿತ್ತು, ಆದರೆ ನಮ್ಮ ರೈತರಿಗೆ ಅದರ ಲಾಭ ಸಿಗಲಿಲ್ಲ. ಪರಿಹಾರವನ್ನು ಕಂಡುಕೊಳ್ಳುವ ಬದಲು ಕಾಂಗ್ರೆಸ್ ರಾಜ್ಯಗಳ ನಡುವೆ ಜಲ ವಿವಾದಗಳನ್ನು ಉತ್ತೇಜಿಸುವುದನ್ನು ಮುಂದುವರೆಸಿದೆ&#8221; ಅವರು ಹೇಳಿದರು.</p>



<p>ಚುನಾವಣೆ ನಡೆದ ವಿವಿಧ ರಾಜ್ಯಗಳಲ್ಲಿ ಬಿಜೆಪಿಗೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.</p>



<p>&#8220;ಬಿಜೆಪಿಗೆ ಒಂದೊಂದು ರಾಜ್ಯದಲ್ಲಿ ಇಷ್ಟೊಂದು ಜನಬೆಂಬಲ ಸಿಗುತ್ತಿದೆ. ಲೋಕಸಭೆಯಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿಗೆ ದೇಶ ಸೇವೆ ಮಾಡುವ ಅವಕಾಶವನ್ನು ದೇಶ ನೀಡಿದೆ. ಕಳೆದ 60 ವರ್ಷಗಳಲ್ಲಿ ಭಾರತದಲ್ಲಿ ಹೀಗಿರಲಿಲ್ಲ,&#8221; ಅವರು ಹೇಳಿದರು.</p>



<p>&#8220;ಇಂದು ಬಿಜೆಪಿಯ ಡಬಲ್ ಇಂಜಿನ್ ಸರ್ಕಾರಗಳು ಉತ್ತಮ ಆಡಳಿತದ ಸಂಕೇತವಾಗುತ್ತಿವೆ. ಬಿಜೆಪಿ ಯಾವುದೇ ನಿರ್ಣಯ ತೆಗೆದುಕೊಂಡರೂ ಅದನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ. ಇಂದು ದೇಶದ ಜನರು ಬಿಜೆಪಿ ಉತ್ತಮ ಆಡಳಿತದ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ.&#8221;</p>



<p>ರಾಜ್ಯದಲ್ಲಿ ಸಿಎಂ ಭಜನಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿದರು.</p>



<p>&#8220;ಕಳೆದ ಒಂದು ವರ್ಷದಲ್ಲಿ, ಭಜನ್‌ಲಾಲ್ ಜಿ ಮತ್ತು ಅವರ ಇಡೀ ತಂಡವು ರಾಜಸ್ಥಾನದ ಅಭಿವೃದ್ಧಿಗೆ ಹೊಸ ವೇಗ ಮತ್ತು ನಿರ್ದೇಶನವನ್ನು ನೀಡಲು ತುಂಬಾ ಶ್ರಮಿಸಿದ್ದಾರೆ, ಮುಂಬರುವ ಹಲವು ವರ್ಷಗಳವರೆಗೆ ಬಲವಾದ ಅಡಿಪಾಯವನ್ನು ಹಾಕಿದೆ&#8221; ಎಂದು ಅವರು ಹೇಳಿದರು. PTI</p>
]]></content:encoded>
					
		
		
			</item>
		<item>
		<title>ನಿಜವಾದ ಮೋದಿ ದರ್ಶನ!</title>
		<link>https://peepalmedia.com/real-narendra-modi/</link>
		
		<dc:creator><![CDATA[Charan Aivarnad]]></dc:creator>
		<pubDate>Wed, 24 Apr 2024 09:46:52 +0000</pubDate>
				<category><![CDATA[ಅಂಕಣ]]></category>
		<category><![CDATA[``Karnataka Digital Economy Mission Big Tech Show-2022&#039;&#039;]]></category>
		<category><![CDATA[Bangalore]]></category>
		<category><![CDATA[Election 2024]]></category>
		<category><![CDATA[Election Commission of India]]></category>
		<category><![CDATA[Fake news]]></category>
		<category><![CDATA[hate speech]]></category>
		<category><![CDATA[karnataka]]></category>
		<category><![CDATA[narendra modi]]></category>
		<category><![CDATA[Rajastan]]></category>
		<guid isPermaLink="false">https://peepalmedia.com/?p=38668</guid>

					<description><![CDATA[ನರೇಂದ್ರ ಮೋದಿಯವರಿಗೆ ಯಾವಾಗಲೂ ನಾಟಕೀಯವಾಗಿ ಬದುಕಲು ಸಾಧ್ಯವಿಲ್ಲ. ಅವರನ್ನು ಆಳದಲ್ಲಿ ಕಾಡುವ, ಭಯಭೀತಗೊಳಿಸುವ ಕೀಳರಿಮೆಯ ಫಲವಾಗಿಯೇ ಅವರು ತಮ್ಮ ಇಡೀ ಜೀವನದ ಬಗ್ಗೆ ಸುಳ್ಳಿನ ಕಥನಗಳನ್ನು ಕಟ್ಟಿದರು. ಆದರೆ ಅವೆಲ್ಲವೂ ಸೋಲುವ ದಿನಗಳು ಹತ್ತಿರ ಬರುತ್ತಿದೆ ಎನ್ನುವಾಗ, ತಾನು ಭಾರತದ ಇತಿಹಾಸದಲ್ಲಿ ಅಪ್ರಸ್ತುತನಾಗುತ್ತೇನೆ ಎಂಬ ಭೀತಿ ಕಾಡುವಾಗ ಅವರೊಳಗಿನ ʼನಿಜವಾದ ನರೇಂದ್ರ ಮೋದಿʼ ಆಗಾಗ ಹೊರಗೆ ಬರುತ್ತದೆ. ಈ ʼಮಿಥ್ಯ ನರೇಂದ್ರʼನ ಒಳಗಿನಿಂದ ʼಸತ್ಯ ನರೇಂದ್ರʼ ಹೊರಗೆ ಬಂದದ್ದನ್ನು ನಾವು ಅವರು ರಾಜಸ್ಥಾನದಲ್ಲಿ ಮಾಡಿದ ಚುನಾವಣಾ ಭಾಷಣದಲ್ಲಿ [&#8230;]]]></description>
										<content:encoded><![CDATA[
<p>ನರೇಂದ್ರ ಮೋದಿಯವರಿಗೆ ಯಾವಾಗಲೂ ನಾಟಕೀಯವಾಗಿ ಬದುಕಲು ಸಾಧ್ಯವಿಲ್ಲ. ಅವರನ್ನು ಆಳದಲ್ಲಿ ಕಾಡುವ, ಭಯಭೀತಗೊಳಿಸುವ ಕೀಳರಿಮೆಯ ಫಲವಾಗಿಯೇ ಅವರು ತಮ್ಮ ಇಡೀ ಜೀವನದ ಬಗ್ಗೆ ಸುಳ್ಳಿನ ಕಥನಗಳನ್ನು ಕಟ್ಟಿದರು. ಆದರೆ ಅವೆಲ್ಲವೂ ಸೋಲುವ ದಿನಗಳು ಹತ್ತಿರ ಬರುತ್ತಿದೆ ಎನ್ನುವಾಗ, ತಾನು ಭಾರತದ ಇತಿಹಾಸದಲ್ಲಿ ಅಪ್ರಸ್ತುತನಾಗುತ್ತೇನೆ ಎಂಬ ಭೀತಿ ಕಾಡುವಾಗ ಅವರೊಳಗಿನ ʼನಿಜವಾದ ನರೇಂದ್ರ ಮೋದಿʼ ಆಗಾಗ ಹೊರಗೆ ಬರುತ್ತದೆ. ಈ ʼಮಿಥ್ಯ ನರೇಂದ್ರʼನ ಒಳಗಿನಿಂದ ʼಸತ್ಯ ನರೇಂದ್ರʼ ಹೊರಗೆ ಬಂದದ್ದನ್ನು ನಾವು ಅವರು ರಾಜಸ್ಥಾನದಲ್ಲಿ ಮಾಡಿದ ಚುನಾವಣಾ ಭಾಷಣದಲ್ಲಿ ನೋಡಬಹುದು.</p>



<p>ಈ ಸತ್ಯ ನರೇಂದ್ರನೇ ಮುಸ್ಲೀಂ ದ್ವೇಷದ, ಕೋಮುವಾದಿ ಮೆದುಳಿನ ನರೇಂದ್ರ ಮೋದಿ. ರಾಜಸ್ಥಾನದ ಚುನಾವಣಾ ಭಾಷಣದಲ್ಲಿ ಬಹಿರಂಗವಾಗಿ ಮುಸ್ಲೀಂ ದ್ವೇಷವನ್ನು ಕಾರಿದರು. ಜಾತ್ಯಾತೀತ ದೇಶವೊಂದರ ಘನವೆತ್ತ ಪ್ರಧಾನಿ ಲಜ್ಜೆಯಿಲ್ಲದೆ ಖುಲ್ಲಂಖುಲ್ಲಾಗಿ ಈ ರೀತಿಯ ಭಾಷಣವನ್ನು ಮಾಡುತ್ತಿದ್ದಾರೆ ಎಂದರೆ, ಮುಂದೆ ಗೆದ್ದು ಬಂದರೆ ತಮ್ಮ ಕೋಮುವಾದಿ ಅಜೆಂಡಾಗಳನ್ನು ಹಿಂದಿಗಿಂತಲೂ ಹೆಚ್ಚು ತೀವ್ರಗತಿಯಲ್ಲಿ ಜಾರಿಗೆ ತರುತ್ತಾರೆ.</p>



<p>ಮುಸಲ್ಮಾನರನ್ನು ʼನುಸುಳುಕೋರರುʼ ಎಂದು ಕರೆದ ನರೇಂದ್ರ ಮೋದಿಯವರು ಯಾವುದೇ ಮುಲಾಜು ಇಲ್ಲದೆ ಹಸಿಹಸಿ ಸುಳ್ಳನ್ನು ತಮ್ಮ ಭಾಷಣದಲ್ಲಿ ಹೇಳಿದರು. ಮಾಜೀ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ಮಾತುಗಳನ್ನು ತಿರುಚಿ ಇತಿಹಾಸದಲ್ಲಿ ತಮ್ಮ ವ್ಯಕ್ತಿತ್ವದ ಮೇಲೆಯೇ ಮತ್ತೊಮ್ಮೆ ಮಸಿಯನ್ನು ಎರಚಿಕೊಂಡರು.</p>



<p>&nbsp;ಡಾ. ಮನಮೋಹನ್ ಸಿಂಗ್ ಅವರು &#8220;ಮೊದಲ ಹಕ್ಕು ಮುಸ್ಲಿಮರದ್ದು ಎಂದು ಹೇಳಿದರು&#8221; ಎಂದು ಮೋದಿಯವರ ಸುಳ್ಳು ಹೇಳಿದಾಗ, ಈ ಸುಳ್ಳಿನ ಸತ್ಯವನ್ನು ಅನೇಕರು ಬಯಲಿಗೆ ಎಳೆದರು.&nbsp;&nbsp;</p>



<p>ಮೋದಿ ಹೇಳಿದ ಸುಳ್ಳು: ಈ ದೇಶದ ಸಂಪತ್ತಿನ ಮೊದಲ ಅಧಿಕಾರ ಮುಸಲ್ಮಾನರದ್ದು. ಇದರ ಅರ್ಥ, ಸಂಪತ್ತನ್ನು ಸಂಗ್ರಹಿಸಿ ಯಾರಿಗೆ ಹಂಚುತ್ತಾರೆ? ಯಾರಿಗೆ ಹೆಚ್ಚು ಮಕ್ಕಳಿದ್ದಾರೋ ಅವರಿಗೆ ಹಂಚುತ್ತಾರೆ.&nbsp; ನುಸುಳುಕೋರರಿಗೆ ಹಂಚುತ್ತಾರೆ. ನೀವು ಕಷ್ಟಪಟ್ಟು ಸಂಪಾದಿಸಿದ ಹಣವು ನುಸುಳುಕೋರರಿಗೆ ಹೋಗಬೇಕೇ…?</p>



<p>ಬಹುಶಃ ಭಾರತದ ಇತಿಹಾಸದಲ್ಲಿ ಪ್ರಧಾನಿ ಹುದ್ದೆಯಲ್ಲಿ ಕುಳಿತಿದ್ದ ಓರ್ವ ವ್ಯಕ್ತಿ ಇಷ್ಟು ಕೀಳಾದ ಹೇಳಿಕೆಯನ್ನು ನೀಡಿರುವುದು ಮೊದಲೇ ಇರಬೇಕು. ಹೆಚ್ಚು ಮಕ್ಕಳು ಮಾಡಿದವರು ಎಂದು ನೇರಾನೇರವಾಗಿ ಮುಸಲ್ಮಾನರನ್ನು ಗುರಿಯಾಗಿಸಿ ದ್ವೇಷ ಕಾರಿದ ಮೋದಿಯವರು ತಾವೂ ಸೇರಿದಂತೆ ತಮ್ಮ ಹೆತ್ತವರಿಗೆ ಆರು ಮಕ್ಕಳು ಎಂಬುದನ್ನು ಮರೆತಂತಿದೆ.</p>



<p>ʼನಿಜ ನರೇಂದ್ರʼನ ಈ ದ್ವೇಷಕಾರಿ ಭಾಷಣದ ಅಸಲಿಯತ್ತಿನ ಬಗ್ಗೆ ದೇಶದಲ್ಲಿ ಚರ್ಚೆ ನಡೆದಿದೆ. ಮನಮೋಹನ್‌ ಸಿಂಗ್‌ ಅವರ ಈ ಭಾಷಣದ ಬಗ್ಗೆ 2006ರಲ್ಲಿಯೇ<a href="https://archivepmo.nic.in/drmanmohansingh/press-details.php?nodeid=516"> ಸ್ಪಷ್ಟನೆ</a> ನೀಡಲಾಗಿತ್ತು.&nbsp;</p>



<figure class="wp-block-image size-large"><img fetchpriority="high" decoding="async" width="1024" height="779" src="https://peepalmedia.com/wp-content/uploads/2024/04/ಕಜಹ-1024x779.jpg" alt="" class="wp-image-38669" srcset="https://peepalmedia.com/wp-content/uploads/2024/04/ಕಜಹ-1024x779.jpg 1024w, https://peepalmedia.com/wp-content/uploads/2024/04/ಕಜಹ-300x228.jpg 300w, https://peepalmedia.com/wp-content/uploads/2024/04/ಕಜಹ-768x584.jpg 768w, https://peepalmedia.com/wp-content/uploads/2024/04/ಕಜಹ-150x114.jpg 150w, https://peepalmedia.com/wp-content/uploads/2024/04/ಕಜಹ-696x530.jpg 696w, https://peepalmedia.com/wp-content/uploads/2024/04/ಕಜಹ-1068x813.jpg 1068w, https://peepalmedia.com/wp-content/uploads/2024/04/ಕಜಹ.jpg 1179w" sizes="(max-width: 1024px) 100vw, 1024px" /></figure>



<p>ಮನಮೋಹನ್‌ ಸಿಂಗ್‌ ಅವರ ಭಾಷಣದ ಪೂರ್ಣ ಪಠ್ಯ ಇಲ್ಲಿದೆ :‌ <a href="https://archivepmo.nic.in/drmanmohansingh/speech-details.php?nodeid=482">2006ರ ರಾಷ್ಟ್ರೀಯ ಅಭಿವೃದ್ಧಿ ಮಂಡಳಿಯ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ</a></p>



<p>ಇದರಲ್ಲಿ,</p>



<p>&#8220;ನಮ್ಮ ಸಾಮೂಹಿಕ ಆದ್ಯತೆಗಳು ಸ್ಪಷ್ಟವಾಗಿವೆ ಎಂದು ನಾನು ನಂಬುತ್ತೇನೆ: ಕೃಷಿ, ನೀರಾವರಿ ಮತ್ತು ಜಲಸಂಪನ್ಮೂಲ, ಆರೋಗ್ಯ, ಶಿಕ್ಷಣ, ಗ್ರಾಮೀಣ ಮೂಲಸೌಕರ್ಯದಲ್ಲಿ ನಿರ್ಣಾಯಕ ಹೂಡಿಕೆ, ಮತ್ತು ಸಾಮಾನ್ಯ ಮೂಲಸೌಕರ್ಯಗಳ ಅಗತ್ಯ ಸಾರ್ವಜನಿಕ ಹೂಡಿಕೆ ಅಗತ್ಯಗಳು, ಜೊತೆಗೆ SC/ST ಗಳು, ಇತರ ಹಿಂದುಳಿದ ವರ್ಗಗಳ ಉನ್ನತಿಗಾಗಿ ಕಾರ್ಯಕ್ರಮಗಳು. , ಅಲ್ಪಸಂಖ್ಯಾತರು ಮತ್ತು ಪರಿಶಿಷ್ಟ ಪಂಗಡಗಳ ಘಟಕ ಯೋಜನೆಗಳನ್ನು ಪುನಶ್ಚೇತನಗೊಳಿಸಬೇಕಾಗಿದೆ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು ಅಭಿವೃದ್ಧಿಯ ಫಲವನ್ನು ಸಮಾನವಾಗಿ ಹಂಚಿಕೊಳ್ಳಲು ನಾವು ನವೀನ ಯೋಜನೆಗಳನ್ನು ರೂಪಿಸಬೇಕಾಗಿದೆ. ಅವರು ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕನ್ನು ಹೊಂದಿರಬೇಕು.</p>



<p>ಇದರಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಇತರ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಮಾತನಾಡುತ್ತಾ, ಮುಸಲ್ಮಾನರನ್ನೂ ಉಲ್ಲೇಖಿಸಿದ್ದಾರೆ. ಆದರೆ ನರೇಂದ್ರ ಮೋದಿಯವರಿಗೆ ಮುಸಲ್ಮಾನರು ಎಂಬುದು ಮಾತ್ರ ಕಂಡಿರುವುದು ಅವರ ಆಂತರ್ಯದಲ್ಲಿ ಇರುವ ಮಾನವ ದ್ವೇಷವನ್ನು ತೋರಿಸುತ್ತದೆ.&nbsp;</p>



<p>ನೀವು ಮೇಲಿರುವ ಡಾ. ಸಿಂಗ್‌ ಅವರ ಭಾಷಣದ ಪೂರ್ಣ ಪಠ್ಯವನ್ನು ಓದಿದರೆ ಒಂದು ವಿಚಾರ ಸ್ಪಷ್ಟವಾಗುತ್ತದೆ. ಅದೇನೆಂದರೆ, ನರೇಂದ್ರ ಮೋದಿಯವರಿಗೆ ಈ ರೀತಿಯ ಭಾಷಣವನ್ನು ಮಾಡಲು ಸಾಧ್ಯವಿಲ್ಲ. ಅವರಲ್ಲಿ ಅಂತಹ ಪಾಂಡಿತ್ಯವಾಗಲೀ, ದೂರದೃಷ್ಟಿಯಾಗಲೀ ಇಲ್ಲ. ಈ ಕೀಳರಿಮೆ ಅವರನ್ನು ಆಳದಲ್ಲಿ ಘಾಸಿಗೊಳಿಸಿದೆ.</p>



<p>ಯಾವಾಗ ಕೀಳರಿಮೆ ಹೆಚ್ಚಾಗುತ್ತದೆಯೋ, ಆಗ ಮನುಷ್ಯ ಅಡ್ಡದಾರಿಯ ಮೂಲಕ ತನ್ನ ಸುಳ್ಳು ವ್ಯಕ್ತಿತ್ವವನ್ನು ಮರುಕಟ್ಟಲು ಹೆಣಗಾಡುತ್ತಾನೆ. ಈ ಹಂತದಲ್ಲಿ ಸದ್ಯ ನರೇಂದ್ರ ಮೋದಿಯವರು ಇದ್ದಾರೆ.&nbsp;</p>



<p>ತನ್ನನ್ನು ದೇವರು, ದೈವಾಂಶ ಸಂಭೂತ, ದೇಶದ ಏಕಮೇವಾದ್ವಿತೀಯ ಉದ್ಧಾರಕ ಎಂದು ಅವರು ತಮ್ಮ ಒಳಗೆ ತಮ್ಮದಲ್ಲದ ವ್ಯಕ್ತಿತ್ವವನ್ನು ಬೆಳೆಸಿಕೊಂಡಿದ್ದಾರೆ. ಇದಕ್ಕೆ ಬೇಕಾದಂತೆ ಬದುಕುತ್ತಾರೆ. ನಡೆ ನುಡಿ ಸಾಧು -ಸನ್ಯಾಸಿಯಂತೆ, ಶಾಂತಿಯ ದೂತನಂತೆ ಇರುತ್ತದೆ. ಆದರೆ ಆಂತರ್ಯದಲ್ಲಿ ಇರುವ ನಿಜವಾದ ಮೋದಿ ಓರ್ವ ದ್ವೇಷಕಾರುವ ಮನುಷ್ಯ. ಆದು ಆಗಾಗ ಹತಾಶ ಸ್ಥಿತಿಯಲ್ಲಿದ್ದಾಗ ಹೊರಗೆ ಬರುತ್ತದೆ.</p>



<p>ಈ ವ್ಯಕ್ತಿತ್ವಕ್ಕೆ ಕಾರಣ ಅವರಲ್ಲಿರುವ ʼಮೆಸಿಯಾ ಕಾಂಪ್ಲೆಕ್ಸ್‌ʼ ಎಂಬ ಮಾನಸಿಕ ಸ್ಥಿತಿ. ಈ ಸ್ಥಿತಿಯಲ್ಲಿ ಮನುಷ್ಯ ತಾನೇ ದೇವರಂತೆ ವರ್ತಿಸುತ್ತಾನೆ, ಇಲ್ಲವೇ ದೇವರ ದೂತನಾಗುತ್ತಾನೆ. ಇದು ಆತನ ಒಳಗಿರುವ ಗೊಂದಲ, ಭಯ, ಕೀಳರಿಮೆಯನ್ನು ಅಡಗಿಸಲು ಬೆಳೆಸಿಕೊಳ್ಳುವ ಸುಳ್ಳು ವ್ಯಕ್ತಿತ್ವ.&nbsp;</p>
]]></content:encoded>
					
		
		
			</item>
		<item>
		<title>ರಾಜಸ್ಥಾನ ಸರ್ಕಾರದಿಂದ ಸೂರ್ಯ ನಮಸ್ಕಾರ ಕಡ್ಡಾಯ: ಅಲ್ಪಸಂಖ್ಯಾತ ಧರ್ಮಿಯರಿಂದ ವಿರೋಧ</title>
		<link>https://peepalmedia.com/surya-namaskar-mandatory-by-rajasthan-govt-opposition-from-religious-minorities/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 17 Feb 2024 11:26:07 +0000</pubDate>
				<category><![CDATA[ದೇಶ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Muslim]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rajastan]]></category>
		<category><![CDATA[rajastan governament]]></category>
		<guid isPermaLink="false">https://peepalmedia.com/?p=36142</guid>

					<description><![CDATA[ಜೈಪುರ: ರಾಜಸ್ಥಾನದಲ್ಲಿ ಎಲ್ಲ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರವನ್ನು ಕಡ್ಡಾಯಗೊಳಿಸಿರುವ ಸರ್ಕಾರ ಆದೇಶ ಹೊರಡಿಸಿದೆ. ಇದನ್ನು ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸಿದ್ದು, ಭಾರೀ ವಿವಾದ ಸೃಷ್ಟಿಯಾಗಿದೆ. ಸೂರ್ಯ ನಮಸ್ಕಾರ ಮಾಡುವಂತೆ ಎಲ್ಲ ಶಾಲಾ ಮಕ್ಕಳಿಗೂ ಬಲವಂತಗೊಳಿಸಬಾರದು ಸರಕಾರದ ಈ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಜಮೀಯತ್ ಉಲೇಮಾ ಹಿಂದ್ ಸೇರಿದಂತೆ ಮುಸ್ಲಿಮ್ ಸಂಘಟನೆಗಳು ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿವೆ. ಸೋಮವಾರ ಜೈಪುರದಲ್ಲಿ ಸಮಾವೇಶಗೊಂಡ ಜಮೀಯತ್ ಉಲೇಮಾ ಹಿಂದ್ ನ ರಾಜ್ಯ ಕಾರ್ಯಕಾರಣಿಯು ಸೂರ್ಯ ನಮಸ್ಕಾರ [&#8230;]]]></description>
										<content:encoded><![CDATA[
<p>ಜೈಪುರ: ರಾಜಸ್ಥಾನದಲ್ಲಿ ಎಲ್ಲ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರವನ್ನು ಕಡ್ಡಾಯಗೊಳಿಸಿರುವ ಸರ್ಕಾರ ಆದೇಶ ಹೊರಡಿಸಿದೆ. ಇದನ್ನು ಕೆಲವು ಮುಸ್ಲಿಂ ಸಂಘಟನೆಗಳು ವಿರೋಧಿಸಿದ್ದು, ಭಾರೀ ವಿವಾದ ಸೃಷ್ಟಿಯಾಗಿದೆ.</p>



<p><br>ಸೂರ್ಯ ನಮಸ್ಕಾರ ಮಾಡುವಂತೆ ಎಲ್ಲ ಶಾಲಾ ಮಕ್ಕಳಿಗೂ ಬಲವಂತಗೊಳಿಸಬಾರದು ಸರಕಾರದ ಈ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಜಮೀಯತ್ ಉಲೇಮಾ ಹಿಂದ್ ಸೇರಿದಂತೆ ಮುಸ್ಲಿಮ್ ಸಂಘಟನೆಗಳು ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿವೆ. ಸೋಮವಾರ ಜೈಪುರದಲ್ಲಿ ಸಮಾವೇಶಗೊಂಡ ಜಮೀಯತ್ ಉಲೇಮಾ ಹಿಂದ್ ನ ರಾಜ್ಯ ಕಾರ್ಯಕಾರಣಿಯು ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಬಹಿಷ್ಕರಿಸುವಂತೆ ಮುಸ್ಲಿಮ್ ಸಮುದಾಯವನ್ನು ಆಗ್ರಹಿಸಿದೆ.</p>



<p><br>ರಾಜಸ್ಥಾನದ ಶಾಲೆಗಳಲ್ಲಿ ಫೆ.15ರಿಂದ ಸೂರ್ಯ ನಮಸ್ಕಾರವನ್ನು ಕಡ್ಡಾಯಗೊಳಿಸಿರುವ ಭಜನ್ ಲಾಲ್ ಶರ್ಮಾ ನೇತೃತ್ವದ ಸರಕಾರವು, ಆದೇಶವನ್ನು ಪಾಲಿಸದಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.</p>



<p><br>ಸೂರ್ಯ ನಮಸ್ಕಾರವು ಮಂತ್ರಗಳ ಪಠಣದೊಂದಿಗೆ ಸೂರ್ಯನನ್ನು ಆರಾಧಿಸುವ ಹಲವಾರು ಯೋಗಭಂಗಿಗಳನ್ನು ಒಳಗೊಂಡಿದೆ. ಸೂರ್ಯ ನಮಸ್ಕಾರವನ್ನು ಮಾಡುವುದರಿಂದ ಸೂರ್ಯನನ್ನು ದೇವರು ಎಂದು ಒಪ್ಪಿಕೊಂಡಂತಾಗುತ್ತದೆ ಮತ್ತು ತಮ್ಮ ಧರ್ಮವು ಇದನ್ನು ಅನುಮತಿಸುವುದಿಲ್ಲ ಎಂದು ಮುಸ್ಲಿಮ್ ಸಂಘಟನೆಗಳು ವಾದ ಮಂಡಿಸಿವೆ.</p>



<p><br>ರಾಜ್ಯದಲ್ಲಿಯ ನೂತನ ಬಿಜೆಪಿ ಸರಕಾರವು ಫೆ.15, ಸೂರ್ಯ ಸಪ್ತಮಿಯಂದು ಆಯೋಜಿಸಿರುವ ಬೃಹತ್ ಸೂರ್ಯನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮುಸ್ಲಿಮ್ ಸಂಸ್ಥೆಗಳು ತಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಸೂಚಿಸಿದ್ದು, ಇದು ಈಗ ವಿವಾದಕ್ಕೆ ಕಾರಣವಾಗಿದೆ.</p>
]]></content:encoded>
					
		
		
			</item>
		<item>
		<title>ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಮೊನ್ನೆ ಬಿಜೆಪಿ ಸೇರಿದ್ದ ಅಶೋಕ್ ಚವ್ಹಾಣ್‌ಗೆ ಟಿಕೇಟ್</title>
		<link>https://peepalmedia.com/bjp-released-list-of-candidates-ticket-to-ashok-chavan/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Feb 2024 11:21:24 +0000</pubDate>
				<category><![CDATA[ದೇಶ]]></category>
		<category><![CDATA[bjp]]></category>
		<category><![CDATA[gujarat]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[narendra]]></category>
		<category><![CDATA[narendra mdi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Rajastan]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35978</guid>

					<description><![CDATA[ನವದೆಹಲಿ: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಎರಡು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಅಶೋಕ್ ಚವ್ಹಾಣ್ ಅವರಿಗೆ ಮಹಾರಾಷ್ಟ್ರದಿಂದ ಟಿಕೇಟ್‌ ನೀಡಲಾಗಿದೆ. ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವ್ಹಾಣ್‌ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಮಹಾರಾಷ್ಟ್ರದಿಂದ ಚವ್ಹಾಣ್‌ ಸೇರಿದಂತೆ ಮೇಧಾ ಕುಲಕರ್ಣಿ, ಅಜಿತ್ ಗೋಪ್ಛಡೆ ಸ್ಪರ್ಧಿಸಲಿದ್ದಾರೆ. ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಗುಜರಾತ್‌ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ [&#8230;]]]></description>
										<content:encoded><![CDATA[
<p><strong>ನವದೆಹಲಿ:</strong> ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಎರಡು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಅಶೋಕ್ ಚವ್ಹಾಣ್ ಅವರಿಗೆ ಮಹಾರಾಷ್ಟ್ರದಿಂದ ಟಿಕೇಟ್‌ ನೀಡಲಾಗಿದೆ.</p>



<p>ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವ್ಹಾಣ್‌ ಅವರು ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಮಹಾರಾಷ್ಟ್ರದಿಂದ ಚವ್ಹಾಣ್‌ ಸೇರಿದಂತೆ ಮೇಧಾ ಕುಲಕರ್ಣಿ, ಅಜಿತ್ ಗೋಪ್ಛಡೆ ಸ್ಪರ್ಧಿಸಲಿದ್ದಾರೆ. ಒಟ್ಟು 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ.</p>



<p>ಗುಜರಾತ್‌ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಗೋವಿಂದಭಾಯಿ ಧೋಲಾಕಿಯಾ, ಮಾಯಾಂಕ್ ಭಾಯ್ ನಾಯಕ್‌, ಮತ್ತು ಡಾ. ಜಶ್ವಂತ್‌ ಸಿನ್ಹ ಪರ್ಮಾರ್‌ ಅವರನ್ನು ಬಿಜೆಪಿ ಕಣಕ್ಕಿಳಿಸಿದ್ದು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.</p>



<p>ಮಧ್ಯಪ್ರದೇಶದಿಂದ ಕೇಂದ್ರ ಸಚಿವ ಎಲ್. ಮುರುಗನ್, ಉಮೇಶ್‌ನಾಥ್ ಮಹಾರಾಜ್, ಮಾಯಾ ನರೋಲಿಯಾ, ಬನ್ಸಿಲಾಲ್‌ ಗುರ್ಜರ್ ಹಾಗೂ ಒಡಿಶಾದಿಂದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಈಗಾಗಲೇ ಟಿಕೆಟ್‌ ಘೋಷಿಸಿದೆ. ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಸಾ ಭಾಂಡಗೆ ಅವರಿಗೆ ಟಿಕೆಟ್ ನೀಡಲಾಗಿದೆ.</p>



<p>ಕೇಂದ್ರದ ಮಾಜಿ ಸಚಿವ ಆರ್‌.ಪಿ.ಎನ್. ಸಿಂಗ್, ಉತ್ತರಾಖಂಡ ಬಿಜೆಪಿ ಘಟಕದ ಅಧ್ಯಕ್ಷ ಮಹೇಂದ್ರ ಭಟ್ ಅವರ ಹೆಸರು ಅಭ್ಯರ್ಥಿಗಳ ಪಟ್ಟಿಯಲ್ಲಿ ಇದೆ.</p>



<p>ರಾಜ್ಯಸಭೆಯ ಸದಸ್ಯತ್ವದ ಅವಧಿ ಪೂರ್ಣಗೊಳ್ಳುತ್ತಿರುವ ಕೇಂದ್ರ ಸಚಿವರಲ್ಲಿ ಯಾರೊಬ್ಬರ ಹೆಸರೂ ಪಟ್ಟಿಯಲ್ಲಿ ಇಲ್ಲ. ಇವರಲ್ಲಿ ಹೆಚ್ಚಿನವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.</p>
]]></content:encoded>
					
		
		
			</item>
		<item>
		<title>ನನ್ನನ್ನು ಮೋದಿʼಜೀʼ ಎಂದು ಕರೆಯಬೇಡಿ, ಮೋದಿ ಅನ್ನಿ ಸಾಕು!</title>
		<link>https://peepalmedia.com/call-me-modi-not-modiji/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 08 Dec 2023 05:50:01 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[amith shah]]></category>
		<category><![CDATA[bjp]]></category>
		<category><![CDATA[breaking news]]></category>
		<category><![CDATA[Chhattisgarh]]></category>
		<category><![CDATA[congress]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[madhya pradesh]]></category>
		<category><![CDATA[modi]]></category>
		<category><![CDATA[modiji]]></category>
		<category><![CDATA[narendra mdi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rajastan]]></category>
		<category><![CDATA[state politics]]></category>
		<category><![CDATA[telangana]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=33477</guid>

					<description><![CDATA[ಹೊಸದಿಲ್ಲಿ: ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂರು ರಾಜ್ಯಗಳ ಗೆಲುವಿಗೆ ಭಾರತೀಯ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಗುರುವಾರ ತಮ್ಮನ್ನು ಬಿಜೆಪಿ ಸಂಸದರು ‘ಮೋದಿʼ ಎಂದು ಸಂಬೋಧಿಸುವಂತೆ ಒತ್ತಾಯಿಸಿದ್ದಾರೆ. ಪೂರ್ವಪ್ರತ್ಯಯಗಳು ಅಥವಾ &#8220;ಆದರನೀಯ ಮೋದೀಜಿ&#8221; (ಗೌರವಾನ್ವಿತ ಶ್ರೀ ಮೋದಿ) ಅಥವಾ &#8220;ಮೋದೀಜಿ&#8221; ನಂತಹ ಪ್ರತ್ಯಯಳಗನ್ನು ಸೇರಿಸದೇ ಸಂಬೋಧಿಸಲು ಸೂಚಿಸಿದ್ದಾರೆ. ಮೋದೀಜಿ, ಆದರನೀಯ ಮೋದೀಜಿ ಎಂದೆಲ್ಲಾ ಕರೆದದ್ದರಿಂದ ಪ್ರಧಾನಮಂತ್ರಿ ಹಾಗೂ ಜನರ ನಡುವೆ ಅಂತರವನ್ನು ಸೃಷ್ಟಿಸಿದೆ ಎಂದು ಅವರು ತಿಳಿಸಿದ್ದಾರೆ. [&#8230;]]]></description>
										<content:encoded><![CDATA[
<p><strong>ಹೊಸದಿಲ್ಲಿ:</strong> ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂರು ರಾಜ್ಯಗಳ ಗೆಲುವಿಗೆ ಭಾರತೀಯ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಗುರುವಾರ ತಮ್ಮನ್ನು ಬಿಜೆಪಿ ಸಂಸದರು ‘ಮೋದಿʼ ಎಂದು ಸಂಬೋಧಿಸುವಂತೆ ಒತ್ತಾಯಿಸಿದ್ದಾರೆ. ಪೂರ್ವಪ್ರತ್ಯಯಗಳು ಅಥವಾ &#8220;ಆದರನೀಯ ಮೋದೀಜಿ&#8221; (ಗೌರವಾನ್ವಿತ ಶ್ರೀ ಮೋದಿ) ಅಥವಾ &#8220;ಮೋದೀಜಿ&#8221; ನಂತಹ ಪ್ರತ್ಯಯಳಗನ್ನು ಸೇರಿಸದೇ ಸಂಬೋಧಿಸಲು ಸೂಚಿಸಿದ್ದಾರೆ.</p>



<p>ಮೋದೀಜಿ, ಆದರನೀಯ ಮೋದೀಜಿ ಎಂದೆಲ್ಲಾ ಕರೆದದ್ದರಿಂದ ಪ್ರಧಾನಮಂತ್ರಿ ಹಾಗೂ ಜನರ ನಡುವೆ ಅಂತರವನ್ನು ಸೃಷ್ಟಿಸಿದೆ ಎಂದು ಅವರು ತಿಳಿಸಿದ್ದಾರೆ.</p>



<p>ಭಾನುವಾರ ಮೂರು ರಾಜ್ಯಗಳ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ಸಂಸದೀಯ ಪಕ್ಷದ ಮೊದಲ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, “ಬಿಜೆಪಿ ಈಗ ದೇಶಾದ್ಯಂತ ಆದ್ಯತೆಯ ಪಕ್ಷವಾಗಿದೆ ಮತ್ತು ಪಕ್ಷದ ಕಾರ್ಯಕರ್ತರ ಶ್ರಮದಿಂದಾಗಿ ಇದನ್ನು ಸಾಧಿಸಲು ಸಾಧ್ಯವಾಯಿತು. ಈ ಮೂರು ರಾಜ್ಯಗಳಲ್ಲಿ ತಂಡ ಮಾಡಿದ ಕೆಲಸದ ಫಲಿತಾಂಶವಾಗಿದೆ. ನನ್ನದು ಮಾತ್ರವಲ್ಲದೆ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಗುರಿಯನ್ನು ಸಾಧಿಸಲು ಅವಿರತವಾಗಿ ಶ್ರಮಿಸಿದರು,” ಎಂದು ಅವರು ಹೇಳಿದ್ದಾರೆ.</p>



<p>“ಮೋದೀಜೀ ಕಾ ಸ್ವಾಗತ್ ಹೈ [ಮೋದಿ ಜಿ ಅವರಿಗೆ ಸ್ವಾಗತ]” ಮತ್ತು “ಮೋದಿ ಹ ತೋಹ್ ಮುಮ್ಕಿನ್ ಹೈ [ಮೋದಿ ಇದ್ದರೆ ಅದು ಸಾಧ್ಯ]” ಎಂಬ ಘೋಷಣೆಗಳೊಂದಿಗೆ ಈ ಸಂದರ್ಭದಲ್ಲಿ ಪ್ರಧಾನಿಯವರನ್ನು ಸ್ವಾಗತಿಸಲಾಗಿತ್ತು.</p>



<p>ಸಭೆಯಲ್ಲಿ ಉಪಸ್ಥಿತರಿದ್ದವರನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ನಾನು ಪಕ್ಷದ ಪುಟಾಣಿ ಕಾರ್ಯಕರ್ತ ಮತ್ತು ಜನರು ನನ್ನನ್ನು ತಮ್ಮ ಕುಟುಂಬದ ಭಾಗವೆಂದು ಭಾವಿಸುತ್ತಾರೆ. ಗೌರವಾರ್ಥಗಳನ್ನು ಸೇರಿಸುವುದರಿಂದ ನಮ್ಮ ನಡುವೆ ಅಂತರ ಸೃಷ್ಟಿಯಾಗುತ್ತದೆ, ಆದ್ದರಿಂದ ನನ್ನನ್ನು ಮೋದಿ ಎಂದು ಮಾತ್ರ ಸಂಬೋಧಿಸಿ,” ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ ಎಂದು ದಿ ಪ್ರಿಂಟ್‌ ವರದಿ ಮಾಡಿದೆ.</p>
]]></content:encoded>
					
		
		
			</item>
		<item>
		<title>ಪೋಷಕರು ಹೇರುವ ಒತ್ತಡವೇ ವಿದ್ಯಾರ್ಥಿಗಳ ಸಾವಿಗೆ ಕಾರಣ: ಸುಪ್ರೀಂ ಕೋರ್ಟ್</title>
		<link>https://peepalmedia.com/pressure-from-parents-leading-to-student-suicides/</link>
		
		<dc:creator><![CDATA[Charan Aivarnad]]></dc:creator>
		<pubDate>Tue, 21 Nov 2023 11:19:41 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[Delhi]]></category>
		<category><![CDATA[exams]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kota suicide cases]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rajastan]]></category>
		<category><![CDATA[state politics]]></category>
		<category><![CDATA[students]]></category>
		<category><![CDATA[supreme court́]]></category>
		<category><![CDATA[trending news]]></category>
		<category><![CDATA[UPSC]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=32822</guid>

					<description><![CDATA[ಬೆಂಗಳೂರು: ಪೋಷಕರು ಹೇರು ಒತ್ತಡ ಮತ್ತು ಮಿತಿಮೀರಿದ ನಿರೀಕ್ಷೆಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿವೆ ಸುಪ್ರೀಂ ಕೋರ್ಟ್ ನವೆಂಬರ್ 20 ಸೋಮವಾರ ತಿಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಮುಂಬೈ ಮೂಲದ ವೈದ್ಯ ಅನಿರುದ್ಧ ನಾರಾಯಣ್ ಮಲ್ಪಾನಿ ಅವರು ರಾಜಸ್ಥಾನದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆಯ ಸಂಬಂಧ ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಿ ಈ ಅಭಿಪ್ರಾಯವನ್ನು ತಿಳಿಸಿದೆ. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಪೋಷಕರು ಹೇರು ಒತ್ತಡ ಮತ್ತು ಮಿತಿಮೀರಿದ ನಿರೀಕ್ಷೆಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿವೆ ಸುಪ್ರೀಂ ಕೋರ್ಟ್ ನವೆಂಬರ್ 20 ಸೋಮವಾರ ತಿಳಿಸಿದೆ.</p>



<p>ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಮುಂಬೈ ಮೂಲದ ವೈದ್ಯ ಅನಿರುದ್ಧ ನಾರಾಯಣ್ ಮಲ್ಪಾನಿ ಅವರು ರಾಜಸ್ಥಾನದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆಯ ಸಂಬಂಧ ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಿ ಈ ಅಭಿಪ್ರಾಯವನ್ನು ತಿಳಿಸಿದೆ.</p>



<p>ಆದರೆ ನ್ಯಾಯಾಲಯವು ಅರ್ಜಿದಾರರಿಗೆ, ”ಇವು ಸುಲಭದಲ್ಲಿ ಬಗೆಹರಿಯುವ ಸಂಗತಿಯಲ್ಲ. ಈ ಎಲ್ಲಾ ಘಟನೆಗಳ ಹಿಂದೆ ಪೋಷಕರ ಒತ್ತಡವಿದೆ. ಹೆಚ್ಚಾಗಿ ಪೋಷಕರೇ ಅವರ ಮೇಲೆ ಹೆಚ್ಚು ಒತ್ತಡ ಹೇರುತ್ತಿದ್ದಾರೆ. ಅಂತಹ ಸನ್ನಿವೇಶದಲ್ಲಿ ನ್ಯಾಯಾಲಯವು ಹೇಗೆ ನಿರ್ದೇಶನಗಳನ್ನು ನೀಡಲು ಸಾಧ್ಯ? ಎಂದು ಹೇಳಿದೆ.</p>



<p>2023 ರಲ್ಲಿ, ಕೋಟಾದಲ್ಲಿ ಕನಿಷ್ಠ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಳೆದ ಎಂಟು ವರ್ಷಗಳಲ್ಲಿ ಅತ್ಯಧಿಕ ಸಂಖ್ಯೆಯಾಗಿದೆ.</p>



<p>ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅರ್ಜಿದಾರರಿಗೆ, &#8221;ಕೋಚಿಂಗ್ ಸೆಂಟರ್‌ಗಳಿಂದಾಗಿ ಆತ್ಮಹತ್ಯೆಗಳು ನಡೆಯುತ್ತಿಲ್ಲ. ಮಕ್ಕಳು ತಮ್ಮ ಹೆತ್ತವರ ನಿರೀಕ್ಷೆಗಳನ್ನು ಪೂರೈಸಲಾಗದೆ ಆತ್ಮಹತ್ಯೆ ಸಂಭವಿಸುತ್ತವೆ. ಸಾವಿನ ಸಂಖ್ಯೆ ಹೆಚ್ಚು ಇರಬಹುದು… ” ಎಂದು ಹೇಳಿದ್ದಾರೆ.</p>



<p>ನ್ಯಾಯಮೂರ್ತಿ ಖನ್ನಾ “ಆದರೂ, ನಮ್ಮಲ್ಲಿ ಹೆಚ್ಚಿನವರಿಗೆ ಯಾವುದೇ ಕೋಚಿಂಗ್ ಸೆಂಟರ್‌ಗಳು ಇರುವುದು ಬೇಕಾಗಿಲ್ಲ, ಆದರೆ ಶಾಲೆಗಳ ಪರಿಸ್ಥಿತಿಗಳನ್ನು ನೋಡಿ. ತೀವ್ರ ಪೈಪೋಟಿ ಇದೆ ಮತ್ತು ವಿದ್ಯಾರ್ಥಿಗಳು ಈ ಕೋಚಿಂಗ್ ಸೆಂಟರ್‌ಗಳಿಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿಲ್ಲ,” ಎಂದು ಹೇಳಿದ್ದಾರೆ.</p>



<p>ಈ ನಿಟ್ಟಿನಲ್ಲಿ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲದ ಕಾರಣ ಅರ್ಜಿದಾರರು ರಾಜಸ್ಥಾನ ಸರ್ಕಾರ ಅಥವಾ ರಾಜಸ್ಥಾನ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಪೀಠ ಶಿಫಾರಸು ಮಾಡಿದೆ.</p>



<p>ಸೆಪ್ಟೆಂಬರ್‌ 2023ರಲ್ಲಿ ರಾಜಸ್ಥಾನ ಸರ್ಕಾರ ವಿದ್ಯಾರ್ಥಿಗಳ ಆತ್ಮಹತ್ಯೆಯನ್ನು ತಡೆಯಲು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಿಗೆ ಮಾರ್ಗಸೂಚಿಗಳನ್ನು ರವಾನಿಸಿತ್ತು. ವಾರದ ರಜೆಗಳನ್ನು ನೀಡುವಂತೆ ಕೋಚಿಂಗ್ ಸೆಂಟರ್‌ಗಳಿಗೆ ನಿರ್ದೇಶನ ನೀಡುವುದು, ವಾಡಿಕೆಯ ಪರೀಕ್ಷೆಗಳ ಅಂಕಗಳನ್ನು ಗೌಪ್ಯವಾಗಿಡುವುದು…ಮೊದಲಾದ ನಿರ್ದೇಶನಗಳನ್ನು ನೀಡಿತ್ತು.</p>



<p>ಜೊತೆಗೆ, ಕೇಂದ್ರದ ಶಿಕ್ಷಣ ಸಚಿವಾಲಯವು ಅಕ್ಟೋಬರ್ 3 ರಂದು <a href="https://dsel.education.gov.in/sites/default/files/guidelines/Draft_UMMEED_Guielines.pdf" data-type="link" data-id="https://dsel.education.gov.in/sites/default/files/guidelines/Draft_UMMEED_Guielines.pdf">UMMEED</a> ಎಂಬ ಕರಡು ಮಾರ್ಗಸೂಚಿಗಳನ್ನು ಹೊರಡಿಸಿತ್ತು.</p>


<div class="wp-block-image">
<figure class="aligncenter size-full is-resized"><img decoding="async" width="496" height="705" src="https://peepalmedia.com/wp-content/uploads/2023/11/image-70.png" alt="" class="wp-image-32826" style="width:264px;height:auto" srcset="https://peepalmedia.com/wp-content/uploads/2023/11/image-70.png 496w, https://peepalmedia.com/wp-content/uploads/2023/11/image-70-211x300.png 211w, https://peepalmedia.com/wp-content/uploads/2023/11/image-70-150x213.png 150w, https://peepalmedia.com/wp-content/uploads/2023/11/image-70-300x426.png 300w" sizes="(max-width: 496px) 100vw, 496px" /></figure></div>


<p style="font-size:20px"><strong>ಅರ್ಜಿಯಲ್ಲಿ ಏನಿತ್ತು?</strong></p>



<p>ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸಲು ಕೋರಿ ಸಲ್ಲಿಸಲಾದ ಅರ್ಜಿಯಲ್ಲಿ, &#8220;ಈ ಲಾಭಕ್ಕಾಗಿ ಹಸಿದಿರುವ ಈ ಕೋಚಿಂಗ್ ಸಂಸ್ಥೆಗಳು ವಿದ್ಯಾರ್ಥಿಗಳ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುವುದಿಲ್ಲ ಮತ್ತು ಭಾರತದ ಯುವಜನತೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಒತ್ತಡ ಹೇರಿ ಹಣವನ್ನು ಟಂಕಿಸುವುದರ ಕಡೆಗೆ ಮೇಲೆ ಮಾತ್ರ ಗಮನಹರಿಸುತ್ತವೆ,&#8221; ಎಂದು ಹೇಳಲಾಗಿದೆ. </p>



<p>“ವಿದ್ಯಾರ್ಥಿಗಳ ಆತ್ಮಹತ್ಯೆಯು ಮಾನವ ಹಕ್ಕುಗಳ ಗಂಭೀರ ಸಮಸ್ಯೆಯಾಗಿದೆ. ಹೆಚ್ಚುತ್ತಿರುವ ಆತ್ಮಹತ್ಯೆಗಳ ನಡುವೆಯೂ ಕಾನೂನನ್ನು ಜಾರಿಗೊಳಿಸುವಲ್ಲಿ ಕೇಂದ್ರದ ಕಳಪೆ ಧೋರಣೆಯು ನಮ್ಮ ದೇಶದ ಭವಿಷ್ಯವಾದ ಈ ಯುವ ಮನಸ್ಸುಗಳನ್ನು ರಕ್ಷಿಸುವಲ್ಲಿ ಸರ್ಕಾರವು ತೋರುತ್ತಿರುವ ನಿರಾಸಕ್ತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ದೇಶದಲ್ಲಿ ಘನತೆಯಿಂದ ಬದುಕಲು ಅವರಿಗೆ ಭಾರತದ ಸಂವಿಧಾನದ ಆರ್ಟಿಕಲ್ 21‌ ಅಡಿಯಲ್ಲಿ ಸಾಂವಿಧಾನಿಕ ಹಕ್ಕನ್ನು ನೀಡಲಾಗಿದೆ,” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ಪಂಚರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ ಮಾಡಿದ ಕೇಂದ್ರ ಚುನಾವಣಾ ಆಯೋಗ</title>
		<link>https://peepalmedia.com/election-commission-has-announced-the-election-dates-for-the-five-states/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 09 Oct 2023 07:39:11 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[chattisgarh]]></category>
		<category><![CDATA[Election Commission of India]]></category>
		<category><![CDATA[Madya pradesha]]></category>
		<category><![CDATA[Mijoram]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Rajastan]]></category>
		<category><![CDATA[telangana]]></category>
		<guid isPermaLink="false">https://peepalmedia.com/?p=29465</guid>

					<description><![CDATA[ಬಹು ನಿರೀಕ್ಷಿತ 5 ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಅದರಂತೆ ದೇಶದ ಐದು ಪ್ರಮುಖ ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ, ಹಾಗೂ ಮಿಜೋರಾಂ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪಂಚರಾಜ್ಯಗಳ ಚುನಾವಣೆ ಮತ್ತು ಅವು ನಡೆಯುವ ಹಂತ ಹಾಗೂ ಫಲಿತಾಂಶದ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಮುಖವಾಗಿ ಛತ್ತೀಸ್‌ಗಢದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್‌ [&#8230;]]]></description>
										<content:encoded><![CDATA[
<p>ಬಹು ನಿರೀಕ್ಷಿತ 5 ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಅದರಂತೆ ದೇಶದ ಐದು ಪ್ರಮುಖ ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ, ಹಾಗೂ ಮಿಜೋರಾಂ ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.</p>



<p>ಕೇಂದ್ರ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪಂಚರಾಜ್ಯಗಳ ಚುನಾವಣೆ ಮತ್ತು ಅವು ನಡೆಯುವ ಹಂತ ಹಾಗೂ ಫಲಿತಾಂಶದ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ.</p>



<p>ಪ್ರಮುಖವಾಗಿ ಛತ್ತೀಸ್‌ಗಢದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್‌ 7 ಹಾಗೂ 17 ರಂದು ಚುನಾವಣಾ ದಿನಾಂಕ ನಿಗದಿಯಾಗಿದೆ. ಇನ್ನು ಮಿಜೋರಾಂನಲ್ಲಿ ನವೆಂಬರ್‌ 7 ರಂದು ಚುನಾವಣೆ ನಡೆಯಲಿದೆ. ಹಾಗೆಯೇ ಮಧ್ಯಪ್ರದೇಶದಲ್ಲಿ ನವೆಂಬರ್‌ 17ರಂದು ಹಾಗೂ ರಾಜಸ್ಥಾನದಲ್ಲಿ ನವೆಂಬರ್ 23 ರಂದು ಚುನಾವಣೆ ನಡೆಯಲಿದೆ. ಹಾಗೂ ಕೊನೆಯದಾಗಿ ತೆಲಂಗಾಣದಲ್ಲಿ ನವೆಂಬರ್‌ 30 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತರಾದ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ‌.</p>



<p>ಈ ಐದೂ ರಾಜ್ಯಗಳ ಚುನಾವಣಾ ಫಲಿತಾಂಶ ಒಂದೇ ದಿನದಲ್ಲಿ ಹೊರಬೀಳುವ ಬಗ್ಗೆಯೂ ಮಾಹಿತಿ ಹೊರಹಾಕಿದ್ದಾರೆ. ಈ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್‌ 3 ರಂದು ನಡೆಯಲಿದೆ.</p>



<p>ತೆಲಂಗಾಣ (Telangana), ರಾಜಸ್ಥಾನ (Rajasthan), ಛತ್ತೀಸ್‌ಗಢ (Chhattisgarh, ) ಮತ್ತು ಮಧ್ಯಪ್ರದೇಶದ (Madhya Pradesh) ಶಾಸಕಾಂಗ ಸಭೆಗಳ ಅವಧಿಯು ಜನವರಿ 2024 ರಲ್ಲಿ ವಿವಿಧ ದಿನಾಂಕಗಳಲ್ಲಿ ಮುಕ್ತಾಯಗೊಳ್ಳಲಿದೆ, ಆದರೆ ಮಿಜೋರಾಂ (Mizoram) ವಿಧಾನಸಭೆಯ ಅವಧಿಯು ಈ ವರ್ಷ ಡಿಸೆಂಬರ್ 17 ರಂದು ಕೊನೆಗೊಳ್ಳಲಿದೆ. ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಆಡಳಿತ ನಡೆಸುತ್ತಿದ್ದರೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತದಲ್ಲಿದೆ. ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ ಮತ್ತು ಈಶಾನ್ಯ ರಾಜ್ಯದಲ್ಲಿ ಮಿಜೋ ನ್ಯಾಷನಲ್ ಫ್ರಂಟ್ NDA ಮೈತ್ರಿಕೂಟದ ಪಕ್ಷ ಅಧಿಕಾರದಲ್ಲಿದೆ.</p>



<p>ಒಟ್ಟು ಐದು ರಾಜ್ಯಗಳಲ್ಲಿ 679 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಈ ಐದೂ ರಾಜ್ಯಗಳಲ್ಲಿ 16.14 ಕೋಟಿ ಮತದಾರರು ಇದ್ದಾರೆ ಎಂದು ರಾಜೀವ್‌ ಕುಮಾರ್‌ ವಿವರ ನೀಡಿದರು. ಮಿಜೋರಾಮ್‌ನಲ್ಲಿ 8.52 ಲಕ್ಷ, ಛತ್ತೀಸ್‌ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಹಾಗೂ ತೆಲಂಗಾಣದಲ್ಲಿ 3.17 ಕೋಟಿ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗ (Election Commission Of India) ಮಾಹಿತಿ ನೀಡಿದೆ. ಈ ಐದೂ ರಾಜ್ಯಗಳಲ್ಲಿ 60.2 ಲಕ್ಷ ಹೊಸ ಮತದಾರರು ಇದ್ದಾರೆ. ಮುಂಬರುವ 5 ರಾಜ್ಯಗಳಲ್ಲಿ 7.8 ಕೋಟಿ ಮಹಿಳೆಯರು ಮತ ಚಲಾವಣೆ ಮಾಡಲಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.</p>
]]></content:encoded>
					
		
		
			</item>
		<item>
		<title>ಪತಿಯಿಂದಲೇ ಬುಡಕಟ್ಟು ಮಹಿಳೆಯ ಬೆತ್ತಲೆ ಮೆರವಣಿಗೆ!</title>
		<link>https://peepalmedia.com/tribal-woman-paraded-naked-by-her-husband/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 02 Sep 2023 06:21:42 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Rajastan]]></category>
		<guid isPermaLink="false">https://peepalmedia.com/?p=27045</guid>

					<description><![CDATA[ಜೈಪುರ,ಸಪ್ಟೆಂಬರ್.2: ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರನ್ನು ಆಕೆಯ ಪತಿ ಅಗಸ್ಟ್‌ 31, ಗುರುವಾರದಂದು ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಪ್ರಕರಣ ವರದಿಯಾಗಿದೆ. ಈ ವೀಡಿಯೋದಲ್ಲಿ ಆಕೆಯ ಪತಿ ಎಂದು ಹೇಳಲಾದ ವ್ಯಕ್ತಿ 21 ವರ್ಷದ ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುತ್ತಾನೆ ಮತ್ತು ಆಕೆ ಸಹಾಯಕ್ಕಾಗಿ ಕೂಗಾಡುವುದು ಕಂಡು ಬಂದಿದೆಪರಪುರುಷನ ಜೊತೆಗೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಿ ಆಕೆಯ ಪತಿ ಈ ಕೃತ್ಯ ಎಸಗಿದ್ದಾನೆ. ಈ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು ಇನ್ನೂ ಹಲವರನ್ನು [&#8230;]]]></description>
										<content:encoded><![CDATA[
<p>ಜೈಪುರ,ಸಪ್ಟೆಂಬರ್.2: ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರನ್ನು ಆಕೆಯ ಪತಿ ಅಗಸ್ಟ್‌ 31, ಗುರುವಾರದಂದು ಹಲ್ಲೆ ನಡೆಸಿ ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ ಪ್ರಕರಣ ವರದಿಯಾಗಿದೆ. ಈ ವೀಡಿಯೋದಲ್ಲಿ ಆಕೆಯ ಪತಿ ಎಂದು ಹೇಳಲಾದ ವ್ಯಕ್ತಿ 21 ವರ್ಷದ ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುತ್ತಾನೆ ಮತ್ತು ಆಕೆ ಸಹಾಯಕ್ಕಾಗಿ ಕೂಗಾಡುವುದು ಕಂಡು ಬಂದಿದೆ<br>ಪರಪುರುಷನ ಜೊತೆಗೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಿ ಆಕೆಯ ಪತಿ ಈ ಕೃತ್ಯ ಎಸಗಿದ್ದಾನೆ. ಈ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು ಇನ್ನೂ ಹಲವರನ್ನು ಬಂಧಿಸುವ ಸಾಧ್ಯತೆ ಇದೆ.</p>



<p>ಮದುವೆ ನಂತರವೂ ಮತ್ತೊಬ್ಬ ಪುರುಷನೊಂದಿಗೆ ವಾಸವಿದ್ದದ್ದಕ್ಕೆ ಆ ಮಹಿಳೆಯ ಗಂಡನ ಮನೆಯವರು ಅಪಹರಿಸಿ ತಮ್ಮ ಗ್ರಾಮಕ್ಕೆ ಕರೆದೊಯ್ದು ಹಲ್ಲೆ ನಡೆಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ ಎಂದು ರಾಜಸ್ಥಾನದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ಹೇಳಿದ್ದಾರೆ.</p>



<p>ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚಿಸಲಾಗಿದ್ದು, ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>



<p>ಈ ಕೃತ್ಯವನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಂಡಿಸಿ &#8220;ಪ್ರತಾಪ್‌ಗಢ ಜಿಲ್ಲೆಯಲ್ಲಿ ಕೌಟುಂಬಿಕ ಕಲಹವೊಂದರಲ್ಲಿ ಮಹಿಳೆಯೊಬ್ಬರನ್ನು ಆಕೆಯ ಅತ್ತೆ ಹಾಗೂ ಇತರರು ವಿವಸ್ತ್ರಗೊಳಿಸಿರುವ ವೀಡಿಯೊ ಹೊರಬಂದಿದೆ. ಎಡಿಜಿ (ಕ್ರೈಮ್) ಅವರನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ.ಸುಸಂಸ್ಕೃತ ಸಮಾಜದಲ್ಲಿ ಇಂತಹ ಅಪರಾಧಿಗಳಿಗೆ ಜಾಗವಿಲ್ಲ.ಆದಷ್ಟು ಬೇಗ ಈ ಅಪರಾಧಿಗಳನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಲಾಗುವುದು. ತ್ವರಿತ ನ್ಯಾಯಾಲಯದಲ್ಲಿ ಶಿಕ್ಷೆ ವಿಧಿಸಲಾಯಿತು,” ಎಂದು ಟ್ವೀಟ್‌ ಮಾಡಿದ್ದಾರೆ.</p>



<p><blockquote class="twitter-tweet" data-width="550" data-dnt="true"><p lang="hi" dir="ltr">प्रतापगढ़ जिले में पीहर और ससुराल पक्ष के आपसी पारिवारिक विवाद में ससुराल पक्ष के लोगों द्वारा एक महिला को निर्वस्त्र करने का एक वीडियो सामने आया है। <br><br>पुलिस महानिदेशक को एडीजी क्राइम को मौके पर भेजने एवं इस मामले में कड़ी से कड़ी कार्रवाई के निर्देश दिए हैं। <br><br>सभ्य समाज में इस…</p>&mdash; Ashok Gehlot (@ashokgehlot51) <a href="https://twitter.com/ashokgehlot51/status/1697670018132218327?ref_src=twsrc%5Etfw">September 1, 2023</a></blockquote><script async src="https://platform.twitter.com/widgets.js" charset="utf-8"></script></p>



<p>ರಾಜ್ಯದ ಮುಖ್ಯಮಂತ್ರಿ ಮತ್ತು ಇತರ ಕಾಂಗ್ರೆಸ್ ಸಚಿವರ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, &#8220;ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ರಾಜಸ್ಥಾನದ ಜನರು ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ&#8221; ಎಂದು ಟ್ವೀಟ್‌ ಮಾಡಿದ್ದಾರೆ.<br>ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.</p>



<p>&#8220;ರಾಜಸ್ಥಾನದ ಪ್ರತಾಪ್‌ಗಢದಿಂದ ಬಂದಿರುವ ವಿಡಿಯೋ ಆಘಾತಕಾರಿಯಾಗಿದೆ. ರಾಜಸ್ಥಾನದಲ್ಲಿ ಆಡಳಿತವು ಸಂಪೂರ್ಣವಾಗಿ ಗೈರುಹಾಜವಾಗಿದೆ. ಮುಖ್ಯಮಂತ್ರಿ ಮತ್ತು ಮಂತ್ರಿಗಳು ಬಣ ಜಗಳಗಳನ್ನು ಇತ್ಯರ್ಥಪಡಿಸುವಲ್ಲಿ ನಿರತರಾಗಿದ್ದಾರೆ ಮತ್ತು ಉಳಿದ ಸಮಯವನ್ನು ದೆಹಲಿಯಲ್ಲಿ ಒಂದು ರಾಜವಂಶವನ್ನು ಸಮಾಧಾನಪಡಿಸುತ್ತಿದ್ದಾರೆ. ಇದು ಆಶ್ಚರ್ಯವೇನಿಲ್ಲ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ, ಪ್ರತಿದಿನ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ, ರಾಜಸ್ಥಾನದ ಜನತೆ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಪಿ ನಡ್ಡಾ ಟ್ವೀಟ್ ಮಾಡಿದ್ದಾರೆ.</p>



<p><blockquote class="twitter-tweet" data-width="550" data-dnt="true"><p lang="en" dir="ltr">The video from Pratapgarh, Rajasthan is shocking. What is worse is, governance in Rajasthan is totally absent. The CM and Ministers are busy settling factional squabbles, and the remaining time is spent appeasing one dynasty in Delhi. It&#39;s no wonder the issue of women’s safety is…</p>&mdash; Jagat Prakash Nadda (@JPNadda) <a href="https://twitter.com/JPNadda/status/1697805887836926189?ref_src=twsrc%5Etfw">September 2, 2023</a></blockquote><script async src="https://platform.twitter.com/widgets.js" charset="utf-8"></script></p>
]]></content:encoded>
					
		
		
			</item>
		<item>
		<title>ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ABVP ಪದಾಧಿಕಾರಿಗಳು : ಆರೋಪ ತಳ್ಳಿ ಹಾಕಿದ ಸಂಘಟನೆ</title>
		<link>https://peepalmedia.com/abvp-office-bearers-in-gang-rape-case/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 20 Jul 2023 07:22:21 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ABVP]]></category>
		<category><![CDATA[bjp]]></category>
		<category><![CDATA[gang rape]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rajastan]]></category>
		<guid isPermaLink="false">https://peepalmedia.com/?p=24050</guid>

					<description><![CDATA[ರಾಜಸ್ಥಾನದ ಜೋಧ್‌ಪುರ ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ ಆವರಣದಲ್ಲಿ 17 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳು ಬಿಜೆಪಿಯ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಸದಸ್ಯರು ಎಂದು ಪೊಲೀಸರು ಆರೋಪಿಸಿ ರಾಜಸ್ಥಾನದಲ್ಲಿ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ತಾನು ಪ್ರೀತಿಸಿದ ಹುಡುಗನೊಂದಿಗೆ ಅಜ್ಮೀರ್ ಜಿಲ್ಲೆಯ ಬೇವಾರ್‌ನಿಂದ ಓಡಿಹೋಗಿ ಶನಿವಾರ ತಡರಾತ್ರಿ ಜೋಧ್‌ಪುರ ತಲುಪಿದ್ದಾಳೆ.&#160;ನಗರದಲ್ಲಿ ವಸತಿಗಾಗಿ ಹುಡುಕಾಡುತ್ತಿದ್ದಾಗ ಮೂವರು ಆರೋಪಿಗಳು ರಾತ್ರಿ ಆಶ್ರಯ ನೀಡುವುದಾಗಿ ಹೇಳಿ ಆಮಿಷ ಒಡ್ಡಿದ್ದಾರೆ. [&#8230;]]]></description>
										<content:encoded><![CDATA[
<p>ರಾಜಸ್ಥಾನದ ಜೋಧ್‌ಪುರ ಜೈ ನಾರಾಯಣ್ ವ್ಯಾಸ್ ವಿಶ್ವವಿದ್ಯಾಲಯದ ಆವರಣದಲ್ಲಿ 17 ವರ್ಷದ ದಲಿತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳು ಬಿಜೆಪಿಯ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಸದಸ್ಯರು ಎಂದು ಪೊಲೀಸರು ಆರೋಪಿಸಿ ರಾಜಸ್ಥಾನದಲ್ಲಿ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.</p>



<p>ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು ತಾನು ಪ್ರೀತಿಸಿದ ಹುಡುಗನೊಂದಿಗೆ ಅಜ್ಮೀರ್ ಜಿಲ್ಲೆಯ ಬೇವಾರ್‌ನಿಂದ ಓಡಿಹೋಗಿ ಶನಿವಾರ ತಡರಾತ್ರಿ ಜೋಧ್‌ಪುರ ತಲುಪಿದ್ದಾಳೆ.&nbsp;ನಗರದಲ್ಲಿ ವಸತಿಗಾಗಿ ಹುಡುಕಾಡುತ್ತಿದ್ದಾಗ ಮೂವರು ಆರೋಪಿಗಳು ರಾತ್ರಿ ಆಶ್ರಯ ನೀಡುವುದಾಗಿ ಹೇಳಿ ಆಮಿಷ ಒಡ್ಡಿದ್ದಾರೆ.</p>



<p>ನಂತರ ಆರೋಪಿಗಳು ಅವರನ್ನು ವಿಶ್ವವಿದ್ಯಾನಿಲಯದ ಹಾಕಿ ಮೈದಾನಕ್ಕೆ ಕರೆದೊಯ್ದು ಆಕೆಯ ಪ್ರಿಯಕರನನ್ನು ಥಳಿಸಿ ನಂತರ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಆಪಾದಿತ ಅತ್ಯಾಚಾರಿಗಳನ್ನು ಅಪರಾಧ ನಡೆದ ಎರಡು ಗಂಟೆಗಳ ನಂತರ ಬಂಧಿಸಲಾಗಿದೆ.&nbsp;ಅವರನ್ನು ಧರ್ಮಪಾಲ್ ಸಿಂಗ್, ಸಮಂದರ್ ಸಿಂಗ್ ಭಾಟಿ ಮತ್ತು ಭಟ್ಟಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಎಲ್ಲರೂ 20 ರಿಂದ 22 ವರ್ಷ ವಯಸ್ಸಿನವರಾಗಿದ್ದಾರೆ.</p>



<p>ಪ್ರಕರಣದಲ್ಲಿ ಬಂಧಿತರಾಗಿರುವ ವಿದ್ಯಾರ್ಥಿಗಳು ABVP ಸದಸ್ಯರು ಎಂದು ಪೊಲೀಸರು ಗುರುತಿಸಿದ್ದು, ರಾಜಸ್ಥಾನದ ರಾಜಕೀಯದಲ್ಲಿ ಬಾರೀ ಕೋಲಾಹಲ ಸೃಷ್ಟಿಯಾಗಿದೆ. ಆದರೆ ಪೊಲೀಸರು ವಿಶ್ವವಿದ್ಯಾನಿಲಯದಲ್ಲಿ ನಡೆಯುವ ವಿದ್ಯಾರ್ಥಿ ಸಂಘದ ಚುನಾವಣೆಗೆ ಎಬಿವಿಪಿಯಿಂದ ಟಿಕೆಟ್‌ಗಾಗಿ ವಿದ್ಯಾರ್ಥಿ ನಾಯಕನಿಗೆ ಆರೋಪಿಗಳು ಪ್ರಚಾರ ನಡೆಸುತ್ತಿದ್ದರು ಎಂದು ಪೊಲೀಸರು ತನಿಖೆ ಮೂಲಕ ತಿಳಿಸಿದ್ದಾರೆ.</p>



<p>ಆದರೆ ಬಿಜೆಪಿ ಪಕ್ಷ ಮತ್ತು ABVP ಸಂಘಟನೆ ಆರೋಪಿಗಳೊಂದಿಗಿನ ತಮ್ಮ ಸಂಬಂಧವನ್ನು ನಿರಾಕರಿಸಿವೆ. ಇದೇ ವಿಚಾರ ರಾಜಸ್ಥಾನದ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪವಾದಾಗ ಬಿಜೆಪಿ ಶಾಸಕರು ಗದ್ದಲ ಎಬ್ಬಿಸಿದ ಘಟನೆ ನಡೆದಿದೆ. ವಿಧಾನಸಭೆಯಲ್ಲಿ ಪಕ್ಷೇತರ ಶಾಸಕ ಸಂಯಮ್ ಲೋಧಾ ಅವರು ಈ ವಿಚಾರ ಪ್ರಸ್ತಾಪಿಸಿದಾಗ ಬಿಜೆಪಿ ಶಾಸಕರು ಇದನ್ನು ವಿರೋಧಿಸಿ, ಈ ವಿಚಾರವನ್ನು ನಡಾವಳಿಗಳ ದಾಖಲೆಯಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದರು.</p>



<p>ಇದರ ನಡುವೆ ಆರೋಪಿಗಳಲ್ಲಿ ಒಬ್ಬನಾದ ಧರ್ಮಪಾಲ್ ಸಿಂಗ್ ಅವರು ಸೆಪ್ಟೆಂಬರ್ 21, 2021 ರಿಂದ ಸದಸ್ಯರಾಗಿದ್ದಾರೆ ಎಂದು ತೋರಿಸುವ ಎಬಿವಿಪಿ ಸದಸ್ಯತ್ವದ ರಸೀದಿಯನ್ನು ರಾಜ್ಯ ಸರ್ಕಾರದ ಮೂಲಗಳು ಬುಧವಾರ ಬಿಡುಗಡೆ ಮಾಡಿದೆ. ರಶೀದಿಯಲ್ಲಿ ಎಬಿವಿಪಿ ಜೋಧ್‌ಪುರ &#8216;ಪ್ರಾಂತ್&#8217; (ಬ್ಲಾಕ್) ಅಧ್ಯಕ್ಷ ಬಲ್ವೀರ್ ಚೌಧರಿ ಸಹಿ ಮಾಡಿದ ದಾಖಲೆ ಕೂಡ ಕಂಡುಬಂದಿದೆ.</p>



<p>ಮೂವರು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (POCSO), ಭಾರತೀಯ ದಂಡ ಸಂಹಿತೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.</p>
]]></content:encoded>
					
		
		
			</item>
	</channel>
</rss>
