<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ramayana &#8211; Peepal Media</title>
	<atom:link href="https://peepalmedia.com/tag/ramayana/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 19 Jan 2024 13:50:03 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ramayana &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>300 ರಾಮಾಯಣಗಳ ವಿರುದ್ಧ ನಿಂತ ಎಬಿವಿಪಿ!</title>
		<link>https://peepalmedia.com/abvp-protested-against-300-ramayanas/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 19 Jan 2024 12:34:05 +0000</pubDate>
				<category><![CDATA[ಅಂಕಣ]]></category>
		<category><![CDATA[ABVP]]></category>
		<category><![CDATA[ak ramanujan]]></category>
		<category><![CDATA[ayodhya]]></category>
		<category><![CDATA[Bangalore]]></category>
		<category><![CDATA[bjp]]></category>
		<category><![CDATA[breaking news]]></category>
		<category><![CDATA[charan Aivarnad]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[ram]]></category>
		<category><![CDATA[Ram Mandira]]></category>
		<category><![CDATA[rama]]></category>
		<category><![CDATA[ramayana]]></category>
		<category><![CDATA[state politics]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35181</guid>

					<description><![CDATA[ಎಷ್ಟು&#160; ರಾಮಾಯಣಗಳಿವೆ ? ಮುನ್ನೂರು? ಮೂರು ಸಾವಿರ? ಕೆಲವು ರಾಮಾಯಣಗಳ ಕೊನೆಯಲ್ಲಿ, ಕೆಲವೊಮ್ಮೆ ಪ್ರಶ್ನೆಯೊಂದನ್ನು ಕೇಳಲಾಗುತ್ತದೆ: ಎಷ್ಟು &#160;ರಾಮಾಯಣಗಳಿವೆ ? ಈ ಪ್ರಶ್ನೆಗೆ ಉತ್ತರಿಸುತ್ತಾ ಕೆಲವು ರಾಮಯಣಗಳು, ಇಲ್ಲೊಂದಿದೆ..ಎನ್ನುತ್ತವೆ! ಹೀಗೆ ಭಾರತದ ಹೆಸರಾಂತ ಕವಿ ಮತ್ತು ವಿದ್ವಾಂಸ ಎ ಕೆ ರಾಮಾನುಜನ್ ಅವರ ‘ಮುನ್ನೂರು ರಾಮಾಯಣಗಳು’ ಎಂಬ ಪ್ರಬಂಧ ಆರಂಭವಾಗುತ್ತದೆ. 1987ರಲ್ಲಿ ಪಿಟ್ಸ್‍ಬರ್ಗ್ ವಿವಿಯಲ್ಲಿ ಮಂಡಿಸಲಾದ ಈ ಪ್ರಬಂಧವನ್ನು ದೆಹಲಿ ವಿವಿಯ ಇತಿಹಾಸ ಪಠ್ಯದಲ್ಲಿ ಸೇರಿಸಲಾಗಿತ್ತು. 2008ರಲ್ಲಿ ಈ ಪ್ರಬಂಧ ದೊಡ್ಡ ವಿವಾದವನ್ನು ಸೃಷ್ಟಿಸಿತ್ತಲ್ಲದೆ ಹಿಂದೂ ಸಂಘಟನೆಗಳು, [&#8230;]]]></description>
										<content:encoded><![CDATA[
<p>ಎಷ್ಟು&nbsp; <em>ರಾಮಾಯಣಗಳಿವೆ</em> ? ಮುನ್ನೂರು? ಮೂರು ಸಾವಿರ? <em>ಕೆಲವು ರಾಮಾಯಣಗಳ</em> ಕೊನೆಯಲ್ಲಿ, ಕೆಲವೊಮ್ಮೆ ಪ್ರಶ್ನೆಯೊಂದನ್ನು ಕೇಳಲಾಗುತ್ತದೆ: ಎಷ್ಟು <em>&nbsp;ರಾಮಾಯಣಗಳಿವೆ </em>? ಈ ಪ್ರಶ್ನೆಗೆ ಉತ್ತರಿಸುತ್ತಾ ಕೆಲವು ರಾಮಯಣಗಳು, ಇಲ್ಲೊಂದಿದೆ..ಎನ್ನುತ್ತವೆ!</p>



<p>ಹೀಗೆ ಭಾರತದ ಹೆಸರಾಂತ ಕವಿ ಮತ್ತು ವಿದ್ವಾಂಸ ಎ ಕೆ ರಾಮಾನುಜನ್ ಅವರ ‘ಮುನ್ನೂರು ರಾಮಾಯಣಗಳು’ ಎಂಬ ಪ್ರಬಂಧ ಆರಂಭವಾಗುತ್ತದೆ. 1987ರಲ್ಲಿ ಪಿಟ್ಸ್‍ಬರ್ಗ್ ವಿವಿಯಲ್ಲಿ ಮಂಡಿಸಲಾದ ಈ ಪ್ರಬಂಧವನ್ನು ದೆಹಲಿ ವಿವಿಯ ಇತಿಹಾಸ ಪಠ್ಯದಲ್ಲಿ ಸೇರಿಸಲಾಗಿತ್ತು. 2008ರಲ್ಲಿ ಈ ಪ್ರಬಂಧ ದೊಡ್ಡ ವಿವಾದವನ್ನು ಸೃಷ್ಟಿಸಿತ್ತಲ್ಲದೆ ಹಿಂದೂ ಸಂಘಟನೆಗಳು, ಬಿಜೆಪಿ, ಎಬಿವಿಪಿ ಬೃಹತ್ ಪ್ರತಿಭಟನೆ ನಡೆಸಿದವು.</p>



<p>ಎಬಿವಿಪಿಯ ಪುಂಡರು ವಿಶ್ವವಿದ್ಯಾನಿಲಯದ ಹಿಸ್ಟರಿ ಡಿಪಾರ್ಟ್‌ಮೆಂಟ್‌ಗೆ ನುಗ್ಗಿ, ದಾಂಧಲೆ ಎಬ್ಬಿಸಿದರು. ತರಗತಿಗಳ ಬಾಗಿಲು ಕಿಟಕಿ ಒಡೆದರು!</p>



<p>ನೂರಾರು ರಾಮಾಯಣಗಳು ಸುಮಾರು 2,500 ವರ್ಷಗಳಿಗೂ ಹೆಚ್ಚು ಕಾಲದಿಂದ ಹೇಗೆ ಭಾರತ ಹಾಗೂ ಏಷ್ಯಾದಾದ್ಯಂತ ಹರಡಿರುವ ಇತಿಹಾಸವನ್ನು ಈ ಪ್ರಬಂಧ ಸರಳ ಸುಂದರವಾಗಿ ವಿವರಿಸುತ್ತದೆ. ರಾಮನ ಒಂದೇ ಕಥೆ ಬೇರೆ ಬೇರೆ ಭಾಷೆಗಳು, ಸಮಾಜಗಳು, ಪ್ರಾದೇಶಿಕತೆ, ಧರ್ಮಗಳು ಮತ್ತು ವಿವಿಧ ಚಾರಿತ್ರಿಕ ಘಟ್ಟಗಳಲ್ಲಿ ಪ್ರಸಾರವಾಗುತ್ತಿರುವಾಗ ಹಲವಾರು ಬದಲಾವಣೆಗಳಿಗೆ ಒಳಗಾಗಿದೆ ಎಂಬುದನ್ನು ಇದು ವಿದ್ವತ್ಪೂರ್ಣವಾಗಿ ಇದು ಹೇಳುತ್ತದೆ.&nbsp;</p>



<p>ಮುಖ್ಯವಾಗಿ ಈ ಪ್ರಬಂಧದಲ್ಲಿ ರಾಮಾಯಣದ ಐದು ಪಠ್ಯಗಳನ್ನು ಪರಿಗಣಿಸಲಾಗಿದೆ: ವಾಲ್ಮೀಕಿ ರಾಮಾಯಣ, ತಮಿಳಿನ ಕಂಬನ್ ರಾಮಾಯಣ, ಜೈನ ರಾಮಾಯಣ ಪಠ್ಯಗಳು, ಥಾಯ್ಲಾಂಡಿನ ಥಾಯ್ ರಾಮಕಿಯನ್ ಮತ್ತು ದಕ್ಷಿಣ ಭಾರತೀಯ ಜಾನಪದ ರಾಮಾಯಣದ ಪಠ್ಯಗಳು.</p>



<p>ಇವುಗಳನ್ನು ಪ್ರಬಂಧದಲ್ಲಿ ತರುವಾಗ ರಾಮಾನುಜನ್‌ ʼವರ್ಷನ್ಸ್‌ʼ ಮತ್ತು ʼವೇರಿಯೆಂಟ್ಸ್‌ʼ ಎಂಬ ಪದಗಳ ಬದಲಾಗಿ ʼಟೆಲ್ಲಿಂಗ್ಸ್‌ʼ ಎಂಬ ಪದವನ್ನು ಬಳಸುತ್ತಾರೆ. ಯಾಕೆರಂದರೆ ಈ ಕಥೆ ಒಂದು ವರ್ಷನ್ (ಆವೃತ್ತಿ) ಎಂದು ಹೇಳಬೇಕಾದರೆ, ಮೂಲದಲ್ಲಿ ಒಂದು ಕಥೆ ಇರಲೇ ಬೇಕು. ಇದು ಆ ಮೂಲಕಥೆಯ ಇನ್ನೊಂದು ವರ್ಷನ್ ಎಂದು ಹೇಳುವುದು ಮೂಲ ಪಠ್ಯದ ಅಸ್ತಿತ್ವವನ್ನು ಸೂಚಿಸುತ್ತದೆ. ಆದರೆ, ಇಡೀ ಪ್ರಬಂಧದಲ್ಲಿ ರಾಮಾನುಜನ್‌ ಅವರ ಮುಖ್ಯ ಅವಲೋಕನವೆಂದರೆ ಅಂತಹ ಒಂದು ಮೂಲ ರಾಮಾಯಣ ಎಂಬುದೇ ಇಲ್ಲ ಎಂಬುದು. ವಾಲ್ಮೀಕಿ ರಾಮಾಯಣ ಕಥೆʼ ಎಂತಹ ಅನೇಕ ರಾಮಾಯಣಗಳ ಕಥೆಗಳಲ್ಲಿ ಒಂದು. ಅದರ ಅರ್ಥ, ವಾಲ್ಮೀಕಿ ರಾಮಾಯಣ ಬರೆಯುವುದಕ್ಕೆ ಮೊದಲೇ ಈ ಕಥೆ ಜನಪದದಲ್ಲಿ ಇದ್ದಿರಬೇಕು.&nbsp;</p>



<p>ಹೀಗಾಗಿ, ರಾಮಾಯಣವಿರಲಿ…ಮಹಾಭಾರತವಿರಲಿ, ಕವಿಗಳಿಗೆ ತಮಗಿಂತ ಹಿಂದೆಯೇ ಕಥೆಯನ್ನು ಅನೇಕರು ಹೇಳಿದ್ದಾರೆ ಎಂಬ ಅರಿವು ಇತ್ತು. ಕನ್ನಡದ ಕವಿ ಕುಮಾರವ್ಯಾಸ ತನ್ನ ʼಕರ್ಣಾಟ ಭಾರತ ಕಥಾಮಂಜರಿʼಯಲ್ಲಿ “ತಿಣುಕಿದನು ಫಣಿರಾಯ ರಾಮಾಯಣದ ಕವಿಗಳ ಭಾರದಲಿ; ತಿಂತಿಣಿಯ ರಘುವರಚರಿತೆಯಲಿ ಕಾಲಿಡಲು ತೆರಪಿಲ್ಲ,” ಎನ್ನುತ್ತಾನೆ. ಕವಿ ಕುಮಾರವ್ಯಾಸ ಪೀಠಿಕಾ ಸಂಧಿಯಲ್ಲೇ ಇದನ್ನು ಹೇಳಿ ತನ್ನ ಕಾವ್ಯ ರಚನೆಗೆ ತೊಡಗುತ್ತಾನೆ. ಎಷ್ಟು ರಾಮಾಯಣಗಳಿವೆ ಎಂದರೆ, ಅದರ ಭಾರಕ್ಕೆ ಭೂಮಿಯನ್ನೇ ತಲೆಯ ಮೇಲೆ ಹೊತ್ತಿರುವ ಆದಿಶೇಷ ರಾಮಾಯಣದ ಕವಿಗಳನ್ನು ಹೊರಲಾರದೆ ತಿಣುಕಿದ್ದಾನೆ, ರಘುಚರಿತೆಯ ರಾಶಿಯಲ್ಲಿ ಕಾಲಿಡಲು ಜಾಗವಿಲ್ಲ ಎಂದು ವರ್ಣಿಸಿದ್ದಾನೆ.</p>



<p>ಕವಿಗೆ ಇರುವ ಅರಿವು ಭಾರತದಾದ್ಯಂತ ಬಹುತೇಕ ಕವಿಗಳಿಗೆ, ಜಾನಪದರಿಗೆ ಇತ್ತು. ಹಾಗಾಗಿ, ಎ ಕೆ ರಾಮಾನುಜನ್‌ ಅವರ ಪ್ರಬಂಧ ಆರಂಭವಾಗುವುದೇ ʼಎಷ್ಟು ರಾಮಾಯಣಗಳಿವೆ, ಇಕೋ ಇಲ್ಲೊಂದಿದೆ..ʼ ಎಂಬ ಹೇಳಿಕೆಯಿಂದ</p>



<p>ಎ ಕೆ ರಾಮಾನುಜನ್‌ ನಮಗೆ ಕೊಡುವ ಮಹತ್ವದ ಅರಿವು ಏನೆಂದರೆ ಭಾರತದ ಬಹುತೇಕ ಎಲ್ಲಾ ಭಾಷೆಗಳು, ಸಮುದಾಯಗಳು ರಾಮಾಯಣವನ್ನು ತಮಗೆ ಬೇಕಾದಂತೆ ಬರೆದುಕೊಂಡಿವೆ ಎಂಬುದು. ಇದು ನಮ್ಮ ಅರಿವಿನಲ್ಲಿದ್ದರೆ ಸಹಜವಾಗಿಯೇ ಎಬಿವಿಪಿ ಈ ಪ್ರಬಂಧದ ವಿರುದ್ಧ ನಡೆಸಿದ ಪ್ರತಿಭಟನೆಯ ಹಿಂದಿರುವ ಅವರ ಉದ್ದೇಶ ನಮಗೆ ಗೊತ್ತಾಗುತ್ತದೆ. ಭಾರತ ರಾಮನ ಕಥೆಯನ್ನು ಹೇಳುವ ಬಗೆಯೇ ಬಿಜೆಪಿ ಹಾಗೂ ಸಂಘ ಪರಿವಾರ ರಾಮನನ್ನು ರಾಜಕಾರಣಕ್ಕೆ ಬಳಸುವ ಕುತಂತ್ರಕ್ಕೆ ವಿರೋಧವಾಗಿ ನಿಲ್ಲುತ್ತದೆ.&nbsp;</p>



<div data-wp-interactive="core/file" class="wp-block-file">&lt;object class=&quot;wp-block-file__embed&quot; data=&quot;https://peepalmedia.com/wp-content/uploads/2024/01/three-hundred-Ramayanas-A-K-Ramanujan-1.pdf&quot; type=&quot;application/pdf&quot; style=&quot;width:100%;height:600px&quot; aria-label=&quot;&lt;strong&gt;ಮುನ್ನೂರು ರಾಮಾಯಣಗಳು &#8211; ಎ ಕೆ ರಾಮಾನುಜನ್</strong></object><a id="wp-block-file--media-81f31f28-8478-4e67-b4ae-e9bc98387a74" href="https://peepalmedia.com/wp-content/uploads/2024/01/three-hundred-Ramayanas-A-K-Ramanujan-1.pdf"><strong>ಮುನ್ನೂರು ರಾಮಾಯಣಗಳು &#8211; ಎ ಕೆ ರಾಮಾನುಜನ್</strong></a><a href="https://peepalmedia.com/wp-content/uploads/2024/01/three-hundred-Ramayanas-A-K-Ramanujan-1.pdf" class="wp-block-file__button wp-element-button" download aria-describedby="wp-block-file--media-81f31f28-8478-4e67-b4ae-e9bc98387a74">Download</a></div>



<p>ಇದು ಕೇವಲ ರಾಮಾಯಣಕ್ಕೆ ಮಾತ್ರವಲ್ಲ, ಮಹಾಭಾರತದ ಸಂದರ್ಭದಲ್ಲೂ ಇದೇ.</p>



<p>&nbsp;“ವಾಲ್ಮೀಕಿ, ವ್ಯಾಸರು ರಾಮಾಯಣ , ಮಹಾಭಾರತಗಳ ಮೊಟ್ಟ ಮೊದಲ&nbsp; ಸೃಷ್ಟಿಕರ್ತರಲ್ಲ. ಅವರಿಗಿಂತಲೂ ಪೂರ್ವದಲ್ಲಿ ಈ ಕತೆಗಳು ಜನತೆಯಲ್ಲಿ ಇದ್ದುವು, ಅವರ ತರುವಾಯವೂ ಇದ್ದುವು, ಇವತ್ತಿಗೂ ಇವೆ.ವಾಲ್ಮೀಕಿ ವ್ಯಾಸರು ತಮ್ಮ ಕಾವ್ಯಗಳನ್ನು ರಚಿಸಿದ ಮಾತ್ರಕ್ಕೆ ಇವರಿಗೂ ಪ್ರೇರಕವಾದ,ವಸ್ತುಗಳನ್ನು ಒದಗಿಸಿದ ಜನಪದ ಕಥಾವಾಹಿನಿ ನಿಂತುಹೋಗಿಲ್ಲ.ಸತತವಾಗಿ ಹರಿದಿದೆ. ಆದ್ದರಿ೦ದ ಸಾಮಾನ್ಯ ಜನತೆಗೆ ತಿಳಿದಿರುವುದು ಅಥವಾ ಪ್ರಭಾವ ಬೀರಿರುವುದು ವಾಲ್ಮೀಕಿ,ವ್ಯಾಸರುಗಳ ರಾಮಾಯಣ, ಮಹಾಭಾರತ ಕಥೆಗಳಾಗಿರದೆ,ಅವರಿಗೂ ಮೂಲವಾಗಿ ಇದ್ದ ಇವತ್ತಿಗೂ ಇದ್ದು ಬಂದಿರುವ ಜನಪದ ರಾಮಾಯಣ, ಮಹಾಭಾರತಗಳೆಂಬುದು ಅತ್ಯಂತ ಸ್ಪಷ್ಟವಿರುವ ವಿಷಯ”(ರಾ ಗೌ;ಸಂ.ಜನಪದ ರಾಮಾಯಣ;1973:ix)&nbsp;</p>



<p>ರಾಮಾಯಣ, ಮಹಾಭಾರತಗಳು ಒಂದು ಸ್ಥಳದಿಂದ ಅನಾಮಿಕ ಕರ್ತೃವಿನಿಂದ ಹುಟ್ಟಿ ಕ್ರಮೇಣ ಇತರ ಸಮುದಾಯಗಳಿಂದಲೂ ಸ್ವೀಕರಿಸಲ್ಪಟ್ಟು ಮೌಖಿಕ ಪರಂಪರೆಗಳಾಗಿ ಸಾಗಿ ಬಂದಿವೆ.ಈ ಪ್ರವಾಹದಲ್ಲಿ ಭಿನ್ನ ಕಥನಗಳು,ಹೊಸ ಅಂಶಗಳು ಸೇರ್ಪಡೆಯಾಗಿ ಅನನ್ಯತೆಯನ್ನು ಮೆರೆದಿವೆ.ಜಾನಪದ ವಸ್ತುಗಳಿಂದ ಪ್ರೇರಿತರಾಗಿ ವಾಲ್ಮೀಕಿ ವ್ಯಾಸಾದಿಗಳು ರಚಿಸಿದ ಕಾವ್ಯಗಳು ಜನಪ್ರಿಯತೆಯನ್ನು ಪಡೆದವು. ಕನ್ನಡದಲ್ಲೂ ಪೊನ್ನನ ‘ ಭುವನೈಕ್ಯ ರಾಮಾಭ್ಯುದಯ'(ಕ್ರಿ.ಶ.ಸು 950), ನಾಗಚಂದ್ರನ ‘ರಾಮಚಂದ್ರ ಚರಿತ ಪುರಾಣ'(ಕ್ರಿ.ಶ.ಸು1100), ಕುಮುದೇಂದುವಿನ ರಾಮಾಯಣ(ಕ್ರಿ.ಶ.ಸು1270), ನಾಗರಾಜನ ‘ಪುಣ್ಯಾಸ್ರವ’ ಗಳಂತ ಜೈನರಾಮಾಯಣಗಳು ಬಂದವು. ಹದಿನಾಲ್ಕನೆ ಶತಮಾನದ ಬಳಿಕ ವೈದಿಕ ಕವಿಗಳು ವಾಲ್ಮೀಕಿ ರಾಮಾಯಣದಿಂದ ಪ್ರೇರಿತರಾಗಿ ಜೈನ ರಾಮಾಯಣಗಳಿಗಿಂತ ಭಿನ್ನವಾದ ಕಾವ್ಯಗಳನ್ನು ರಚಿಸಿದರು. ಕುಮಾರ ವಾಲ್ಮೀಕಿಯ ‘ತೊರವೆ ರಾಮಾಮಣ’ (ಕ್ರಿ.ಶ.1500), ಚಾಮರಾಜ ‘ರಾಮಾಯಣ'(ಕ್ರಿ.ಶ.1630),ಮಲ್ಲರಸನ ‘ ದಶಾವತಾರ ಚರಿತೆ'(ಕ್ರಿ.ಶ.1680) ಮುಂತಾದವುಗಳಿಂದ ಹಿಡಿದು ಕುವೆಂಪು, ಮೋಯ್ಲಿಗಳ ವರೆಗೆ ರಚಿತವಾಗಿರುವ ರಾಮಾಯಣಗಳಿಂದ ʼತಿಂತಿಣಿಯ ರಘುವರಚರಿತೆಯಲಿ ಕಾಲಿಡಲು ತೆರಪಿಲ್ಲ.&#8217;</p>



<p>ನಿರಂತರ ಸುದ್ದಿಗಳನ್ನು ಪಡೆಯಲು ನಮ್ಮ ವಾಟ್ಸಾಪ್‌ ಗುಂಪನ್ನು ಸೇರಿ : <a href="https://chat.whatsapp.com/Lec6jB78EHu04TNvY80Tu6" data-type="link" data-id="https://chat.whatsapp.com/Lec6jB78EHu04TNvY80Tu6"><strong>ಪೀಪಲ್‌ ಮೀಡಿಯಾ</strong></a></p>



<p>ಅಂತೆಯೇ ಮಹಾಭಾರತವೂ ಅನೇಕ ಜೈನ ಕವಿಗಳಿಂದ, ವೈದಿಕ ಕವಿಗಳಿಂದ ಪುನರ್ರಚನೆಗೊಂಡಿದೆ. ಪಂಪನ&nbsp; ‘ವಿಕ್ರಮಾರ್ಜುನ ವಿಜಯ’, ರನ್ನನ ‘ಗದಾಯುದ್ಧ’ ಕುಮಾರವ್ಯಾಸನ ‘ ಕರ್ನಾಟ ಭಾರತ ಕಥಾಮಂಜರಿ’ ಇತ್ಯಾದಿಗಳು. ಕ್ರಮೇಣ 16-17 ಶತಮಾನದಲ್ಲಿ ಶ್ರೋತೃಗಳನ್ನು ಕೇಂದ್ರೀಕರಿಸಿಕೊಂಡು ಕುಂಬಳೆಯ ಪಾರ್ತಿಸುಬ್ಬನಂತಹ ಅನೇಕ ಯಕ್ಷಗಾನ ಕವಿಗಳು ಪ್ರಸಂಗಗಳನ್ನು ಕಾವ್ಯಗಳ ಮೇಲೆ ಬರೆದಿದ್ದಾರೆ. ಕರಾವಳಿಯ ಜನರಿಗೆ ಮಹಾಕಾವ್ಯಗಳು, ಪುರಾಣಗಳು ಯಕ್ಷಗಾನದ ಮೂಲಕ ಚಿರ ಪರಿಚಿತವಾಗಿವೆ.&nbsp;&nbsp;&nbsp;</p>



<p>&nbsp;ತುಳುವಿನಲ್ಲಿ ಅರುಣಾಬ್ಜ ಕವಿ ವಿರಜಿತ ‘ಮಹಾಭಾರತೊ’ (ಕ್ರಿ.ಶ.1657) ಇದೆ,’ ಮಂದಾರ ರಾಮಾಯಣ’ ಇದೆ.ಆದರೆ ಇವೆಲ್ಲ ಶಿಷ್ಟ ಕಾವ್ಯಗಳಿಗೆ ನಿಷ್ಠವಾಗಿದ್ದು ಜಾನಪದ ಕಾವ್ಯಗಳಿಗೆ ಭಿನ್ನತೆಗಳವೆ.</p>



<p>ಬ್ರಿಟೀಷ್‌ ಆಡಳಿತದಲ್ಲಿ 1866 ರಲ್ಲಿ ಬಾಂಬೆ ಸರ್ಕಾರ ಭಾರತದಲ್ಲಿ ಲಭ್ಯವಿರುವ ಹಸ್ತಪ್ರತಿಗಳನ್ನು ಸಂಗ್ರಹಿಸುವ ಯೋಜನೆಯನ್ನು ಕೈಗೆತ್ತಿಕೊಂಡಿತು. ಜಾರ್ಜ್ ಬುಹ್ಲರ್, ಎಫ್ ಕೀಲ್ಹಾರ್ನ್, ಪೀಟರ್ ಪೀಟರ್ಸನ್, ರಾಮಕೃಷ್ಣ ಗೋಪಾಲ್ ಭಂಡಾರ್ಕರ್, ಎಸ್ ಆರ್ ಭಂಡಾರ್ಕರ್, ಕಥಾವಟೆ ಮತ್ತು ಘಾಟೆ ಮುಂತಾದ ಪ್ರಸಿದ್ಧ ವಿದ್ವಾಂಸರು ಈ ಯೋಜನೆಯಡಿಯಲ್ಲಿ 17,000 ಕ್ಕೂ ಹೆಚ್ಚು ಪ್ರಮುಖ ಹಸ್ತಪ್ರತಿಗಳನ್ನು ಸಂಗ್ರಹಿಸಿದರು. 1917ರಲ್ಲಿ ಭಂಡಾರ್ಕರ್ ಓರಿಯಂಟಲ್ ರಿಸರ್ಚ್ ಇನ್ಸ್ಟಿಟ್ಯೂಟ್ (BORI) ಸ್ಥಾಪನೆಯಾದ ನಂತರ ಬಾಂಬೆ ಪ್ರೆಸಿಡೆನ್ಸಿಯ ಆಗಿನ ಗವರ್ನರ್ ಮತ್ತು BORI ನ ಮೊದಲ ಅಧ್ಯಕ್ಷರಾದ ಲಾರ್ಡ್ ವಿಲಿಂಗ್ಡನ್ ಅವರು 1 ಏಪ್ರಿಲ್ 1918 ರಂದು ಈ ಎಲ್ಲಾ ಹಸ್ತಪ್ರತಿಗಳನ್ನು BORI ಗೆ ಸ್ಥಳಾಂತರಿಸಿದರು.</p>



<p>ಇದರ ಭಾಗವಾಗಿಯೇ, ಪಿ ವಿ ಕಾಣೆ, ವಿ ಎಸ್ ಸೂಕ್ತಂಕರ್, ಎಸ್ ಕೆ ಬೆಲ್ವಲ್ಕರ್, ಎಸ್ ಕೆ ಡೇ ಪ್ರೊ.ಡಾ. ಆರ್ ಎನ್.ದಾಂಡೇಕರ್ ಮುಂತಾದ ವಿದ್ವಾಂಸರು ಸುಮಾರು ಐದು ವರ್ಷಗಳ ಕಾಲ 1,259 ಹಸ್ತಪ್ರತಿಗಳನ್ನು ಅವಲೋಕಿಸಿ ಮಹಾಭಾರತದ ಒಂದು ವಿಮರ್ಶಾತ್ಮಕ ಆವೃತ್ತಿಯನ್ನು ಹೊರಗೆ ತಂದರು. ಸೆಪ್ಟೆಂಬರ್ 22, 1966 ರಂದು ಭಾರತದ ಅಂದಿನ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅದನ್ನು ಬಿಡುಗಡೆ ಮಾಡಿದರು. 18 ಪರ್ವಗಳು; 89000+ ಪದ್ಯಗಳು, 15000+ ಪುಟಗಳ 19 ಸಂಪುಟಗಳನ್ನು ಇದು ಹೊಂದಿದೆ.&nbsp;</p>



<p>ನಿರಂತರ ಸುದ್ದಿಗಳನ್ನು ಪಡೆಯಲು ನಮ್ಮ ವಾಟ್ಸಾಪ್‌ ಗುಂಪನ್ನು ಸೇರಿ : <a href="https://chat.whatsapp.com/Lec6jB78EHu04TNvY80Tu6" data-type="link" data-id="https://chat.whatsapp.com/Lec6jB78EHu04TNvY80Tu6"><strong>ಪೀಪಲ್‌ ಮೀಡಿಯಾ</strong></a></p>



<p>ಇದರಲ್ಲಿ ಸೂಕ್ತಂಕರ್ ಹೇಳುತ್ತಾರೆ- “ವ್ಯಾಸರು ರಚಿಸಿದ ಪಠ್ಯ ಹೇಗಿದ್ದಿರಬಹುದೆಂದು ಸಾಧಿಸುವುದು ಅಸಾಧ್ಯ.ಈಗ ನಾವು ಸಿದ್ಧಪಡಿಸಿದ್ದು ಮಹಾಭಾರತದ ಇನ್ನೊಂದು ಪಠ್ಯ” ಈ ಮಾತು ಗಮನಾರ್ಹವಾದುದು.</p>



<p>ಸಂಶೋಧಕ ರಾಗೌ ಹಾಗೂ ಇತರರು ಸಂಪಾದಿಸಿದ ‘ಜನಪದ ರಾಮಾಯಣ’ದಲ್ಲಿ ತಂಬೂರಿಯವರ ರಾಮಾಯಣವು ರಾವಣ ಹಾಗೂ ಸೀತೆಯರ ತಂದೆ-ಮಗಳ ಸಂಬಂಧದ ಕಥೆಯಿದೆ. “ಇದು ಸೀತೆಯ ಜೀವನ ದುರಂತತೆಯನ್ನು ಧ್ವನಿಸುವುದು ಮಾತ್ರವಲ್ಲ, ಇಡೀ ರಾಮಾಯಣ ಕಥಾ ಕಟ್ಟಡವನ್ನೇ ತನ್ನಲ್ಲಿ ನಿಲ್ಲಿಸಿಕೊಂಡಿರುವಂತಿದೆ. ಇಲ್ಲಿ ಶಿವನಿಂದ ರಾವಣ ಮಾವಿನಹಣ್ಣೊಂದನ್ನು ಪಡೆದು, ಅದನ್ನು ತಿಂದು ವಾಟೆಯನ್ನು ಹೆಂಡತಿಗೆ ನೀಡುತ್ತಾನೆ. ಆಗ ಅವನೇ ಗರ್ಭ ಧರಿಸಿ ಸೀತೆಯನ್ನು ಹೆರುತ್ತಾನೆ. ವಾಲ್ಮೀಕಿಯ ರಾಮಾಯಣದಲ್ಲಿ ದಶರಥ ಹಣ್ಣಿನಿಂದ ಮಕ್ಕಳನ್ನು ಪಡೆಯುವುದನ್ನು ನೋಡಬಹುದು.</p>



<p>&nbsp;ಇವರದೇ ಸಂಪಾದನೆಯ ‘ಹೊನ್ನಾಜಮ್ಮನ ರಾಮಾಯಣ’ದಲ್ಲಿ ಸೀತೆ ಕಮಲದ ರೂಪದಲ್ಲಿರುವುದು, ತಾವರೆಯನ್ನು ಆಘ್ರಾಣಿಸಿದ ರಾವಣನ ಮೂಗಿನ ಹೊಳ್ಳೆಗಳ ಒಳಗೆ ಸೇರಿಕೊಳ್ಳುವುದು, ಸೀನಿದಾಗ ಮೂಗಿನಿಂದ ಸೀತೆ ಹುಟ್ಟುವುದು- ಇಲ್ಲಿ ಸೀತೆಯ ಜನನ ಅಸಹಜ ಹಾಗೂ ಅಮಂಗಳಕರ. ತಂಬೂರಿಯವರ ರಾಮಾಯಣದಂತೆ ಇಲ್ಲೂ ರಾವಣನಿಂದ ನೀರಿನಲ್ಲಿ ತೇಲಿ ಬಿಟ್ಟ ಸೀತೆ ಜನಕನಿಗೆ ಸಿಗುತ್ತಾಳೆ.</p>



<p>&nbsp;ಹೊನ್ನಾಜಮ್ಮನ ರಾಮಾಯಣದ ಸೀತೆಯ ಪಾವಿತ್ರ್ಯತೆಯ ಪರೀಕ್ಷೆಯೂ ವಿಶಿಷ್ಟ. ಇಲ್ಲಿ ರಾಮ ಇವಳಿಗೆ ಸರ್ಪವನ್ನು ಸಿಂಬಿಯಾಗಿಸಿಕೊಂಡು ಮರಳಿನ ಮಡಿಕೆಯಲ್ಲಿ ನೀರು ತರುವ ಹಾಗೂ ಮಲ್ಲಿಗೆ ಬಾಡದಂತೆ;ಉಟ್ಟ ಬಟ್ಟೆ ಹಾಳಾಗದಂತೆ, ಅರಶಿನ ಕುಂಕುಮ ಕೆಡದಂತೆ ಅಗ್ನಿ ಕೊಂಡದಲ್ಲಿ ನಿಂತುಕೊಳ್ಳುವ ಪರೀಕ್ಷೆಗಳನ್ನು ಒಡ್ಡುತ್ತಾನೆ.</p>



<p>ಹನುಮಂತನ ಬಗ್ಗೆ ಗಂಗಾ ಯಮುನಾ ಬಯಲಿನಲ್ಲಿ ಪ್ರಚಲಿತದಲ್ಲಿರುವ ಹಲವಾರು ಕತೆಗಳಲ್ಲಿ ಕೆಲವನ್ನು ಅಯೋವಾ ವಿ.ವಿ.ಯ ಪ್ರಾಧ್ಯಾಪಕರಾದ ಡಾ. ಫಿಲಿಪ್ ಲಟ್ಗೆಂಡಾರ್ಫ್ ಪ್ರಕಟಿಸುತ್ತಾರೆ.ಇದರಲ್ಲೊಂದು ಕತೆಯಲ್ಲಿ ಪಾತ್ರಗಳೇ ನಿರೂಪಕರಾಗುತ್ತಾ ತಮ್ಮದೇ ಪಾತ್ರಗಳಿಗೆ ಮುಖಾಮುಖಿಯಾಗುವ ಅದ್ಭುತ ಸನ್ನಿವೇಷವಿದೆ.ಇದರಲ್ಲಿ ಅಂಜನಾದೇವಿ ಬಾಲ ಆಂಜನೇಯನಿಗೆ ರಾತ್ರಿ ರಾಮನ ಕತೆಯನ್ನು ಹೇಳುತ್ತಾಳೆ. ಆಂಜನೇಯ-ರಾಮನ ಬೇಟಿಯ ಬಗ್ಗೆ ಹೇಳುವಾಗ ಬಾಲ ಆಂಜನೇಯ “ಈ ಆಂಜನೇಯ ಯಾರು?” ಎಂದು ಅಚ್ಚರಿಯಿ೦ದ ಕೇಳುತ್ತಾನೆ. ರಾವಣ-ಆಂಜನೇಯರ ಬೇಟಿಯ ಬಗ್ಗೆ ಹೇಳುವಾಗ ಆಂಜನೇಯ ರಾವಣನನ್ನು ಅಲ್ಲೇ ಕೊಲ್ಲದ್ದಕ್ಕೆ ಬಾಲಾಂಜನೇಯ ಆಕ್ರೋಶ ವ್ಯಕ್ತ ಪಡಿಸುತ್ತಾನೆ! ರಾಮಾಂಜನೇಯರ ಆಲಿಂಗನದ ಬಗ್ಗೆ ಹೇಳುವಾಗ ಆ ಆಂಜನೇಯ ತಾನಾಗಬಾರದಿತ್ತೇ ಎಂದು ಆಸೆ ಪಡುತ್ತಾನೆ. ರಾಮನನ್ನು ಈಗಲೇ ತೋರಿಸುವಂತೆ ಹಠ ಹಿಡಿದಾಗ ಅಂಜನಾದೇವಿ “ರಾಮ ಈಗಷ್ಟೇ ಅಯೋಧ್ಯೆಯಲ್ಲಿ ಹುಟ್ಟಿದ್ದಾನೆ. ಅವನದು ಇನ್ನೊಂದು ರಾಮಾಯಣ” ಎನ್ನುತ್ತಾಳೆ. ಆಂಜನೇಯ ತಕ್ಷಣ ಅಯೋಧ್ಯೆಗೆ ಹೊರಡಲನುವಾದಾಗ ತಾಯಿ ತಡೆದು “ಅಲ್ಲಿ ಮಾನವರು ವಾಸಿಸುತ್ತಾರೆ. ಕಪಿಗಳಿಗೆ ಅಲ್ಲಿ ಜಾಗವಿಲ್ಲ. ಕಾಲ ಕೂಡಿ ಬಂದಾಗ ಬೇಟಿಯಾಗು” ಎನ್ನುತ್ತಾಳೆ. ಈ ಕಥಾನಿರೂಪಣೆಯ ಶೈಲಿ ಅದ್ಭುತವಾದುದು.</p>



<p>ನಿರಂತರ ಸುದ್ದಿಗಳನ್ನು ಪಡೆಯಲು ನಮ್ಮ ವಾಟ್ಸಾಪ್‌ ಗುಂಪನ್ನು ಸೇರಿ : <a href="https://chat.whatsapp.com/Lec6jB78EHu04TNvY80Tu6" data-type="link" data-id="https://chat.whatsapp.com/Lec6jB78EHu04TNvY80Tu6"><strong>ಪೀಪಲ್‌ ಮೀಡಿಯಾ</strong></a></p>



<p>&nbsp;ಹಿ.ಚಿ.ಬೋರಲಿಂಗಯ್ಯರವರು ಸಂಪಾದಿಸಿದ ‘ಗೊಂಡರ ರಾಮಾಯಣ’ ಬಹಳ ವಿಶಿಷ್ಟವಾದದು. ಕೋವಿ ಹಿಡಿದು ಬೇಟೆಗೆ ಹೊರಡುವ ದಶರಥನನ್ನು ಸಾಮಾನ್ಯ ಗೊಂಡನಂತೆ ಚಿತ್ರಿಸಲಾಗಿದೆ.ಕೆರೆಯಲ್ಲಿ ಆನೆಯೊಂದು ನೀರು ಕುಡಿಯುವಾಗ ಅದಕ್ಕೆ ಗುಂಡು ಹಾರಿಸುವ ದಶರಥ ” ನೀನು ನಿನ್ನ ಮಗನಿಂದಲೇ ಮರಣ ಹೊಂದು” ಎಂದು ಆನೆಯಿಂದ ಶಪಿಸಲ್ಪಡುತ್ತಾನೆ. ವಾಲ್ಮೀಕಿಯ ರಾಮಾಯಣದಲ್ಲಿ ಆನೆಯೆಂದು ಭಾವಿಸಿ ಶ್ರವಣ ಕುಮಾರನ ಹತ್ಯೆಯಾಗುತ್ತದೆ.</p>



<p>ಗೊಂಡರ ರಾಮಾಯಣದಲ್ಲಿ ಮಡಿವಾಳ ಮಾಜಯ್ಯ(?) ಹೀಯಾಳಿಸುವಾಗ ರಾಮ ತನ್ನ ಘನತೆಯನ್ನು ಕಾಯ್ದುಕೊಳ್ಳಲು ಸೀತೆಯನ್ನು ಕಾಡಿನಲ್ಲಿ ಕೊಂದು ಬರುವಂತೆ ಕಿರಾತಕರಲ್ಲಿ ಆಜ್ಞಾಪಿಸುತ್ತಾನೆ. ಕೊಲ್ಲುವಾಗ ಕಿರಾತಕರಿಗೆ ಕತ್ತಿಯ ಅರಗಿನಲ್ಲಿ ಮಗುವಿನ ಬಿಂಬ ಕಂಡು ಶಿಶುಹತ್ಯಾ ದೋಷಕ್ಕೆ ಹೆದರಿ ಕಾಡಲ್ಲಿ ಬಿಟ್ಟು ಬರುತ್ತಾರೆ.ಇಲ್ಲಿಯೂ ವಾಲ್ಮೀಕಿಯ ರಾಮಾಯಣದಂತೆ ಸೀತೆಗೆ ಅವಳಿ ಮಕ್ಕಳ ಜನನವಾಗುವುದಿಲ್ಲ. ಬದಲಾಗಿ ‘ಚಿತ್ರಪಟ ರಾಮಾಯಣ’ದಂತೆ ಕುಶನು ವಾಲ್ಮೀಕಿಯ ದರ್ಬೆಯಿಂದ ಜನಿಸುತ್ತಾನೆ.</p>



<p>ವಿಲಿಯಮ್ ಡಾಲ್ರಿಂಪಲ್ ನ&nbsp; &#8221;ನೈನ್ ಲೈವ್ಸ್&#8221;&nbsp; ನಲ್ಲಿ ರಾಜಸ್ಥಾನದ ನಾಲ್ಕು ಸಾವಿರ ಸಾಲುಗಳ ‘ಪಭುಜೀಯ’ ಮಾಖಿಕ ಕಾವ್ಯದ ಬಗ್ಗೆ&nbsp; ಬರವು ಇದೆ. ಕೇಂಬ್ರಿಡ್ಜ್ ನ ಸಂಶೋಧಕ ಜಾನ್ ಡಿ ಸ್ಮಿತ್ 1970 ರಲ್ಲಿ ಈ ವೀರ ಪಭುಜೀಯ ಕಾವ್ಯ ಹಾಗೂ ಅದನ್ನು ಹಾಡುವ ಭೋಪರ ಮೇಲೆ ಪಿ.ಎಚ್.ಡಿ ಮಾಡಿದ್ದಾರೆ. ಅಖಿಲ ಭಾರತ ಮಟ್ಟದ ರಾಮಾಯಣದಂತೆ ರಾಮ ತನ್ನ ಅಪಹೃತ ಪತ್ನಿಗಾಗಿ ಲಂಕೆಗೆ ಹೋಗುವುದಿಲ್ಲ,ಬದಲಾಗಿ ರಾವಣನ ಒಂಟೆಗಳನ್ನು ಕದಿಯಲು ಹೋಗುತ್ತಾನೆ. ರಾಜಸ್ಥಾನದ ಮರಳುಗಾಡಿಗೆ ಒಂಟೆಗಳನ್ನು ತಂದ ಪಭುಜೀಯನ್ನು ಅಲ್ಲಿಯ ಜನರು ಆರಾಧಿಸುತ್ತಾರೆ. ರೋಬರಿ ಜನಾಂಗದ ಭೋಪ ತನ್ನ ಸಂಗಡಿಗರೊಂದಿಗೆ ಕಾವ್ಯವನ್ನು ಹಾಡುತ್ತಾನೆ.ಜೊತೆಗೆ ‘ಪಾಡ್’ ಎಂಬ ಪವಿತ್ರವಾದ ಚಿತ್ರಪಟವನ್ನು ಕಥಾ ನಿರೂಪಣೆಗೆ ಬಳಸುತ್ತಾರೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<div class="youtube-embed" data-video_id="aek9tIplPWA"><iframe title="#rammandir ರಾಮನ  ಕಥನಗಳನ್ನ ಸ್ಥಳೀಯಗೊಳಿಸುವ ಗುಣವನ್ನು ನಿರ್ಲಕ್ಷ್ಯ ಮಾಡುತ್ತಿರುವ ಬಿಜೆಪಿ...  |Peepal Media" width="696" height="392" src="https://www.youtube.com/embed/aek9tIplPWA?start=10&#038;feature=oembed" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" allowfullscreen></iframe></div>
</div></figure>



<p>ರಾಮಾಯಣವನ್ನು ಹಿಂದೂ ಧರ್ಮದ ಅಧಿಕೃತ ಕಾವ್ಯವೆಂದು ಭಾವಿಸುವ ಸಂದರ್ಭದಲ್ಲಿ ಮತೀಯ ವ್ಯಾಪ್ತಿಯನ್ನು ಮೀರಿ ಅದು ಬೆಳೆದ ಬಗೆಯನ್ನು ಕೇರಳದ ಮಾಪಿಳ್ಳೆ ರಾಮಾಯಣದಲ್ಲಿ ನೋಡಬಹುದು. ಇದು ಮುಸಲ್ಮಾನ ಮಾಪಿಳ್ಳೆಗಳ ಜಾನಪದ ಹಾಡುಗಳಲ್ಲಿ ರಾಮ ಕಾಣಿಸಿಕೊಂಡ ಬಗೆ. ರಾಮನ ಹೆಸರನ್ನು &#8220;ಲಾಮನ್&#8221; ಎಂದು ಬದಲಿಸಿದ್ದಷ್ಟೇ, ಉಳಿದ ಪಾತ್ರಗಳು ಅಂತೆಯೇ ಇವೆ. ಮುಸ್ಲಿಂ ಮಾಪಿಳ್ಳೆಗಳ ಬದುಕು-ಸಂಸ್ಕøತಿಗೆ ಹೊಂದಿಕೊಳ್ಳುವಂತೆ ರಾಮಾಯಣ ಮರುರೂಪುಗೊಂಡಿದೆ, ಇದು ರಾಮನ ಹೆಸರಿನಲ್ಲಿ ನಡೆಯುವ ರಾಜಕೀಯ ಪ್ರೇರಿತ ಮತೀಯ ಸಂಘರ್ಷಗಳಿಗೆ ಮುಖಾಮುಖಿಗೊಳ್ಳುವ ಅಗತ್ಯತೆ ತುಂಬಾ ಇದೆ.</p>



<p>ರಾಮಾಯಣಕ್ಕಿಂತ ತುಸು ಹೆಚ್ಚು ಜನಮಾನಸವನ್ನು ಹೊಕ್ಕಿರುವ ಕಾವ್ಯ ಮಹಾಭಾರತ. ಅದಕ್ಕೆ ಅದರ ಸರ್ವ ರಸೋದಯ ಕಾರಣವೇನೋ…. ಜನರ ಬದುಕಿನಲ್ಲಿ ಹಾಸು ಹೊಕ್ಕಾಗಿದೆ. ಪ್ರಸಿದ್ಧ ಜಾನಪದ ವಿದ್ವಾಂಸ ಎನ್.ಆರ್.ನಾಯಕರು ಸಂಪಾದಿಸಿದ ‘ಗ್ರಾಮೊಕ್ಕಲ ಮಹಾಭಾರತ’ ಕರಾವಳಿ ಕರ್ನಾಟಕ ಭಾಗದಲ್ಲಿರುವ ಗ್ರಾಮೊಕ್ಕಲು ಸಮುದಾಯದ ಭಾರತ. ಇದರಲ್ಲಿ ಧರ್ಮರು, ಗೀಚಕ(ಕೀಚಕ), ಸುಭದ್ರೆ,ಲಕ್ಷ್ಮಣ,ಅರ್ಜುನ,ಕುಸುಮಾಲಿ(ಚಿತ್ರಾಂಗದೆ),ಕನಕಾಂಗಿ ಕಲ್ಯಾಣ,ಅಭಿಮನ್ಯು ಹಾಗೂ ಸಾವಿತ್ರಿ ಹೀಗೆ ಒಂಬತ್ತು ಬಿಡಿ ಕಥನಗಳಿವೆ.ಈ ಮಹಾಭಾರತ ಅನಕ್ಷರಸ್ಥ ಜನರ ಮೂಲಕ ಮೌಖಿಕವಾಗಿ ಹರಿದು ಬಂದಿದೆ.</p>



<p>ಈ ಮಹಾಭಾರತದಲ್ಲಿ ಪಾಂಡವರನ್ನು ಸೋಲಿಸಿದ ದುರ್ಯೋಧನನನ್ನು ದ್ರೌಪದಿಯು ಪಗಡೆಯಾಟದಲ್ಲಿ ಗೆಲ್ಲುತ್ತಾಳೆ. ದ್ರೌಪದಿ ಕರ್ಣನ ನೆರವಿನಿಂದ ನಾರಾಯಣ ದೇವರ ಪಗಡೆ ಮಣೆಯನ್ನು ತರಿಸಿ ಕೌರವನ ಮೋಸದ ಮಣೆಯನ್ನು ಬದಲಿಸುತ್ತಾಳೆ. ಪಗಡೆಯಾಡುವಾಗ ಗಾಳಿ ಬೀಸಿ ದ್ರೌಪದಿಯ ಸೆರಗು ಜಾರಿ, ಇದರಿಂದ ಚಿತ್ತ ಚಂಚಲಗೊಂಡ ಕೌರವ ಸೋಲುತ್ತಾನೆ. ಕಾವ್ಯದಲ್ಲಿ ಕರ್ಣನ ಧರ್ಮಬೀರುತನ, ಸಹೋದರತ್ವ, ನೈತಿಕತೆ ಸುಂದರವಾಗಿ ವ್ಯಕ್ತಗೊಂಡಿದೆ. ಇತರರಂತೇ ದುರ್ಯೋಧನನು ಇವನನ್ನು ಸೂತನೆಂದು ಕರೆಯುವ ನವೀನ ಆಶಯ &nbsp; ಇದೆ. ದ್ರೌಪದಿ ವಸ್ತ್ರಾಪಹರಣದಂತಹ ಅನೈತಿಕ ಪ್ರಸಂಗವನ್ನು ನಿರೂಪಕ ಬದಲಿಸಿದ್ದಾನೆ. ಪಗಡೆಯಾಟದಲ್ಲಿ ದ್ರೌಪದಿ ಗೆದ್ದರೂ ಈ&nbsp; ಮಹಾಭಾರತದಲ್ಲಿ ಪಾಂಡವರನ್ನು ಸೋಲಿಸಿದ ದುರ್ಯೋಧನನನ್ನು ದ್ರೌಪದಿಯು ಪಗಡೆಯಾಟದಲ್ಲಿ ಗೆಲ್ಲುತ್ತಾಳೆ. ದ್ರೌಪದಿ ಕರ್ಣನ ನೆರವಿನಿಂದ&nbsp; ನಾರಾಯಣದೇವರ ಪಗಡೆ ಮಣೆಯನ್ನು ತರಿಸಿ ಕೌರವನ ಮೋಸದ ಮಣೆಯನ್ನು ಬದಲಿಸುತ್ತಾಳೆ. ಪಗಡೆಯಾಡುವಾಗ ಗಾಳಿ ಬೀಸಿ ದ್ರೌಪದಿಯ ಸೆರಗು ಜಾರಿ,ಇದರಿಂದ ಚಿತ್ತ ಚಂಚಲಗೊಂಡ ಕೌರವ ಸೋಲುತ್ತಾನೆ. ಕಾವ್ಯದಲ್ಲಿ ಕರ್ಣನ ಧರ್ಮ ಬೀರುತನ, ಸಹೋದರತ್ವ, ನೈತಿಕತೆ ಸುಂದರವಾಗಿ ವ್ಯಕ್ತಗೊಂಡಿದೆ.ಇತರರಂತೇ ದುರ್ಯೋಧನನೂ ಇವನನ್ನು ಸೂತನೆಂದು ಕರೆಯುವ ವನವಾಸಕ್ಕೆ ಕಾರಣ ಅಸ್ಪಷ್ಟ.</p>



<p>ನಿರಂತರ ಸುದ್ದಿಗಳನ್ನು ಪಡೆಯಲು ನಮ್ಮ ವಾಟ್ಸಾಪ್‌ ಗುಂಪನ್ನು ಸೇರಿ : <a href="https://chat.whatsapp.com/Lec6jB78EHu04TNvY80Tu6" data-type="link" data-id="https://chat.whatsapp.com/Lec6jB78EHu04TNvY80Tu6"><strong>ಪೀಪಲ್‌ ಮೀಡಿಯಾ</strong></a></p>



<p>ಈ ಮಹಾಭಾರತದಲ್ಲಿ ‘ಸುಭದ್ರೆಯ ಹಾಡು’ ಅಭಿಜಾತ ಮಹಾಭಾರತಕ್ಕಿಂತ ಭಿನ್ನ . ಜೋಗಿಯಾಗಿ ಬಂದು ಭಿಕ್ಷೆಗಾಗಿ ಪೀಡಿಸುವ ಅರ್ಜುನನ ಉಪಟಳವನ್ನು ತಾಳಲಾರದೆ ಸುಭದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದು,ಅರ್ಜುನ ತನ್ನ ನಾಗರ ಬೆತ್ತ- ಅಮೃತ ನೀರಿನಿಂದ ಬದುಕಿಸುವ ವಿಶಿಷ್ಟ ಪ್ರಕರಣಗಳು ಇದರಲ್ಲಿವೆ.ಅರ್ಜುನ ಚದುರಂಗಿ ಕುಸುಮಾಲಿಯನ್ನು ಮದುವೆಯಾಗಿ ಹನ್ನೆರಡು ವರ್ಷದ ನಂತರ ಜೋಗಿ ವೇಷಧಾರಿಯಾಗಿ ಬಂದು ಪರೀಕ್ಷಿಸಿ ಹಸ್ತಿನಾವತಿಗೆ ಕರೆದೊಯ್ಯುವ ಪ್ರಸಂಗ ಇದರಲ್ಲಿ ಮಾತ್ರ ಕಾಣಸಿಗುತ್ತದೆ.</p>



<p>ಮಧ್ಯಭಾರತದ ಗೊಂಡರಲ್ಲಿ ಪ್ರಸಿದ್ಧವಾದ ‘ ಭೀಮ ಸಿದಿ’ ಕಥನ ಕಾವ್ಯದಲ್ಲಿ ಭೀಮನೇ ವಸ್ತ್ರಾಪಹರಣ ಮಾಡುವವನು.ಸುಂದರಿಯರನ್ನು ನೋಡುವಾಗ ತನ್ನ ತಂದೆ ಪವನಾರನನ್ನು ಪ್ರಾರ್ಥಿಸುತ್ತಾನೆ. ತಂದೆ ಜೋರಾಗಿ ಗಾಳಿ ಬೀಸಿ ಹೆಂಗಳೆಯರು ಬಟ್ಟೆ ಹಾರಿಸುತ್ತಾನೆ. ಗೊಂಡರಿಗೆ ಭೀಮ ಫಲವಂತಿಕೆಯ ದೈವ, ಮಳೆ ತರುವವನು.</p>



<p>ಛತ್ತೀಸಘಡದ ಕಥನವೊಂದರಲ್ಲಿ ಕೃಷ್ಣ ಬಾಣ ಹರಿತಗೊಳಿಸುವಾಗ ಕೈ ಬೆರಳಿಗೆ ಗಾಯ ಮಾಡಿಕೊಳ್ಳುತ್ತಾನೆ. ಆಗ ದ್ರೌಪದಿ ತನ್ನ ಸೆರಗಿನ ಬಟ್ಟೆ ತುಂಡೊಂದನ್ನು ಹರಿದು ಅವನ ಬೆರಳಿಗೆ ಕಟ್ಟುತ್ತಾಳೆ. ಇನ್ನೊಂದು ಕಥನದಲ್ಲಿ ಪಾಂಡವರೊಂದಿಗೆ ಕೃಷ್ಣ ಈಜಾಡುವಾಗ ತನ್ನ ಲಂಗೋಟಿಯನ್ನು ಕಳೆದುಕೊಳ್ಳುತ್ತಾನೆ. ಆಗ ದ್ರೌಪದಿ ತನ್ನ ಸೆರಗಿನ ತುಂಡೊಂದನ್ನು ನೀಡುತ್ತಾಳೆ. ಈ ಉಪಕಾರವನ್ನು ಅಕ್ಷಯಾಂಬರ ವಿಲಾಸದಲ್ಲಿ ತೀರಿಸುತ್ತಾನೆ.</p>



<p>&nbsp;ಮಹಾಭಾರತದ ಪ್ರಮುಖ ಪಾತ್ರ ದ್ರೌಪದಿಯು ತಮಿಳುನಾಡಿನಲ್ಲಿ ದೈವವಾಗಿ ಆರಾಧಿಸಲ್ಪಡುತ್ತಾಳೆ. ಕೊಯಮ್ಬತ್ತೂರಿನ ‘ಅರವನ್ ಜಾತ್ರೆ’ ಯಲ್ಲಿ ಇವಳು ಒಂದು ದೈವ. ಕೃಷ್ಣ ಮೋಹಿನಿಯಾಗಿ ಆರವನ್ ನನ್ನು ಮದುವೆಯಾದ ದಿನದಂದು ಈ ಜಾತ್ರೆ ನಡೆಯುತ್ತದೆ. ಇದರಲ್ಲಿ ತೃತೀಯ ಲಿಂಗಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಆರವನ್ ಉಲೂಪಿಯ ಮಗ ಇರಾವಂತನೆಂಬ ವಾದ ವಿದ್ವಾಂಸರದ್ದು. ತಮಿಳುನಾಡಿನ ನೃತ್ಯ ಪ್ರಕಾರ ‘ತೆರಕೂತ್ತು’ವಿನಲ್ಲಿ ಮಹಾಭಾರತದ ಪ್ರಸಂಗಗಳಿವೆ.</p>



<p>ತೆಲುಗಿನ ಮಹಾಭಾರತದಲ್ಲಿ ಪಾಂಡವರು ತಾವು ಚಿರಂಜೀವಿಗಳಾಗಲು ತಂದೆ ಪಾಂಡುವಿನ ಹೆಣವನ್ನು ತಿನ್ನುವ ಪ್ರಸಂಗವಿದ್ದು, ಇದನ್ನು ಕೃಷ್ಣ ತಪ್ಪಿಸುತ್ತಾನೆ. ಗ್ರಾಮೊಕ್ಕಲು ಮಹಾಭಾರತದಂತೆ ಇಲ್ಲೂ ದ್ರೌಪದಿ ಕೌರವನೊಂದಿಗೆ ಪಗಡೆಯಾಡುತ್ತಾಳೆ, ಆದರೆ ಕಾಲ ಬೆರಳಿನಲ್ಲಿ!</p>



<p>ಭಾರತದ ಅನೇಕ ಜನಾಂಗಗಳು ಮಹಾಭಾರತದ ಪಾತ್ರಗಳನ್ನು ತಮ್ಮ ಪೂರ್ವಜರೆಂದು ಬಗೆಯುತ್ತವೆ.ಹಿಮಾಚಲಪ್ರದೇಶದ ‘ಮಂಡಿ’ಯಲ್ಲಿ ಹಿಡಿಂಬೆಯ ದೇಗುಲವಿದೆ. ಉತ್ತರಾಖಾಂಡದಾದ್ಯಂತ ಇರುವ ಗಿಡ್ಡಿ ಜನಾಂಗೀಯರಿಗೆ ಜರಾಸಂಧ ದೈವ! ರಾಜಸ್ಥಾನದ ಜೋದಾಪುರದಲ್ಲಿ ಮುದ್ಗಲ್ ಗೋತ್ರದ ದವೆ ಬ್ರಾಹ್ಮಣರು ತಮ್ಮನ್ನು ರಾವಣನ ವಂಶಸ್ಥರೆಂದು ಕರೆಸಿಕೊಂಡು ಅವನಿಗೆ ದೇವಾಲಯ ನಿರ್ಮಿಸಿ ಆರಾಧಿಸುತ್ತಾರೆ.</p>



<p>ಹಿಮಾಚಲಪ್ರದೇಶದ ಕಿನ್ನೂರು ಪ್ರದೇಶದ ನಿರೂಪಣೆಯೊಂದರ ಪ್ರಕಾರ ಕುಂತಿಗೆ ಮಂಗಗಳನ್ನು ನೋಡಿ ಮಗುವಿನ ಬಯಕೆಯಾಗಿ ‘ಋಷಿ ಮಾಮ’ನ ಸೇವೆ ಮಾಡಿ ಮಕ್ಕಳನ್ನು ಪಡೆಯುತ್ತಾಳೆ.ಇಲ್ಲಿ ಬೆಟ್ಟದ ಮೇಲೆ ವಾಸಿಸುವ ಪಾಂಡವರಿಗೂ ಕೆಳಗೆ ವಾಸಿಸುವ ಕೌರವರಿಗೂ ನೀರಿಗಾಗಿ ಜಗಳವಾಗುತ್ತದೆ. ಅಸ್ಸಾಂನ ಜನರು ರುಕ್ಮ, ಭಗದತ್ತ,ಬಾಣಾಸುರರನ್ನು ತಮ್ಮ ಪೂರ್ವಜರೆಂದು ಭಾವಿಸುತ್ತಾರೆ. ಕೃಷ್ಣನ ಪತ್ನಿ ರುಕ್ಮಿಣಿ&nbsp; ಬೋಡೋಗಳ ಕನ್ಯೆ!!!</p>



<p>ಭಾರತದಲ್ಲಿ ಅನೇಕ ಸ್ಥಳನಾಮಗಳು ಮಹಾಭಾರತ ರಾಮಾಯಣ ಕೇಂದ್ರಿತವಾಗಿವೆ. ಪಾಂಡವರ ಗುಡ್ಡ, ಪಾಂಡವಪುರ, ಪಾಂಡವ ಪಣೆ, ಹಂಪಿಯ ಸೀತೆಯ ಸೆರಗು, ಭೀಮನ ಕಲ್ಲು ಇತ್ಯಾದಿ. ಸಾಮಾನ್ಯ ಮಾನವ ಮಾಡಲಾಗದ ಅಸಾಮಾನ್ಯ, ಅತಿಮಾನುಷ ಕಾರ್ಯಗಳನ್ನು ಪುರಾಣ ಪಾತ್ರಗಳಿಗೆ ಆರೋಪಿಸುವುದು ಜನಸಮುದಾಯದ ಸಾಮಾನ್ಯ ನಂಬಿಕೆ. ಯಾರೂ ಎತ್ತಲಾಗದ ಭಾರೀ ಗಾತ್ರದ ಕಲ್ಲು ‘ ಭೀಮನ ಕಲ್ಲು’ ಆಗುವುದು ಭೀಮನ ದೇಹ ದಾಢ್ಯತೆಯ ಅರಿವು ಇರುವುದರಿಂದ.ಅನೇಕ ಗ್ರಾಮಗಳು ತಮ್ಮ ಊರಿನ ಐತಿಹ್ಯವನ್ನು ಪಾಂಡವರ ವನವಾಸದೊಂದಿಗೆ ಸಂಬಂಧ ಕಲ್ಪಿಸಿಕೊಳ್ಳುತ್ತವೆ. ನನ್ನ ಊರು ಐವರ್ನಾಡಿಗೆ ಪಾಂಡವರು ಬಂದಿದ್ದರು, ಅವರು ಸ್ಥಾಪಿಸಿದ ಲಿಂಗಗಳೇ ಪಂಚಲಿಂಗೇಶ್ವರ.</p>



<p>ಹೀಗೆ, ಜನಮಾನಸದಲ್ಲಿ ರಾಮ-ಕೃಷ್ಣರ ಕಥೆಗಳು ಬೇರೆ ಬೇರೆ ಭಾಷೆಗಳಲ್ಲಿ, ಜನಪದದಲ್ಲಿ ಹೊಸದಾಗಿ ಕಟ್ಟುವ ಪರಂಪರೆ ಭಾರತ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ರಾಮ ಕೋಮುವಾದಿ ಶಕ್ತಿಗಳ ಕೈಗೆ ಸಿಕ್ಕಿದ್ದಾನೆ. ನಿಜವಾದ ʼರಾಮಂದಿರುʼ ಮರೆಯಾಗಿ ಹಿಂದುತ್ವದ ರಾಮ ನಮ್ಮ ಮುಂದೆ ಬಂದಿದ್ದಾನೆ. ರಾಮ ದೇವಾಲಯದ ಒಳಗೆ ಬಂಧಿಯಾಗುತ್ತಿದ್ದಾನೆ. ಈ ಸಂದರ್ಭದಲ್ಲಿ ರಾಮನ ಭಾರತ ಕಥನಗಳನ್ನು ನಾವು ಸ್ಮರಿಸಿಕೊಳ್ಳಬೇಕು.     </p>



<p style="font-size:20px"><strong>ಲೇಖನ: ಚರಣ್ ಐವರ್ನಾಡು</strong></p>
]]></content:encoded>
					
		
		
			</item>
		<item>
		<title>ಇತಿಹಾಸ ಪಠ್ಯದಲ್ಲಿ ರಾಮಾಯಣ – ಮಹಾಭಾರತ: NCERT ಸಮಿತಿ</title>
		<link>https://peepalmedia.com/ramayana-mahabharata-in-history-books-ncert/</link>
		
		<dc:creator><![CDATA[Charan Aivarnad]]></dc:creator>
		<pubDate>Wed, 22 Nov 2023 06:26:17 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[breaking news]]></category>
		<category><![CDATA[education]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mahabharatha]]></category>
		<category><![CDATA[modi]]></category>
		<category><![CDATA[narendra]]></category>
		<category><![CDATA[narendramodi]]></category>
		<category><![CDATA[ncert]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[ramayana]]></category>
		<category><![CDATA[RSS]]></category>
		<category><![CDATA[state politics]]></category>
		<category><![CDATA[text book]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=32896</guid>

					<description><![CDATA[ಬೆಂಗಳೂರು: NCERTಯ ಉನ್ನತ ಮಟ್ಟದ ಸಮಿತಿ ಶಾಲಾ ಇತಿಹಾಸ ಪಠ್ಯಕ್ರಮದಲ್ಲಿ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಸೇರಿಸಲು ಶಿಫಾರಸು ಮಾಡಿದೆ. &#8220;ಸಮಾಜ ವಿಜ್ಞಾನದಲ್ಲಿ ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಲು ಸಮಿತಿಯು ಒತ್ತು ನೀಡಿದೆ&#8221; ಎಂದು ಸಮಿತಿಯ ಅಧ್ಯಕ್ಷ ಸಿಐ ಐಸಾಕ್ ಹೇಳಿದ್ದಾರೆ. &#8220;ತಮ್ಮ ಹದಿಹರೆಯದ ಪ್ರಾಯದಲ್ಲಿ ವಿದ್ಯಾರ್ಥಿಗಳು ಸ್ವಾಭಿಮಾನ, ದೇಶಭಕ್ತಿ ಮತ್ತು ರಾಷ್ಟ್ರದ ಬಗ್ಗೆ ಹೆಮ್ಮೆಯನ್ನು ಬೆಳೆಸಿಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ,&#8221; ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ತಮ್ಮ ಬೇರುಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಸಂಸ್ಕೃತಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> NCERTಯ ಉನ್ನತ ಮಟ್ಟದ ಸಮಿತಿ ಶಾಲಾ ಇತಿಹಾಸ ಪಠ್ಯಕ್ರಮದಲ್ಲಿ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಸೇರಿಸಲು ಶಿಫಾರಸು ಮಾಡಿದೆ.</p>



<p>&#8220;ಸಮಾಜ ವಿಜ್ಞಾನದಲ್ಲಿ ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಲು ಸಮಿತಿಯು ಒತ್ತು ನೀಡಿದೆ&#8221; ಎಂದು ಸಮಿತಿಯ ಅಧ್ಯಕ್ಷ <a href="https://peepalmedia.com/saffronisation-of-ncert-text-books/" data-type="link" data-id="https://peepalmedia.com/saffronisation-of-ncert-text-books/">ಸಿಐ ಐಸಾಕ್</a> ಹೇಳಿದ್ದಾರೆ. &#8220;ತಮ್ಮ ಹದಿಹರೆಯದ ಪ್ರಾಯದಲ್ಲಿ ವಿದ್ಯಾರ್ಥಿಗಳು ಸ್ವಾಭಿಮಾನ, ದೇಶಭಕ್ತಿ ಮತ್ತು ರಾಷ್ಟ್ರದ ಬಗ್ಗೆ ಹೆಮ್ಮೆಯನ್ನು ಬೆಳೆಸಿಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ,&#8221; ಎಂದು ಅವರು ಹೇಳಿದ್ದಾರೆ.</p>



<p>ವಿದ್ಯಾರ್ಥಿಗಳು ತಮ್ಮ ಬೇರುಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ಸಂಸ್ಕೃತಿ ಹಾಗೂ ದೇಶದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳುವುದು ಮುಖ್ಯ ಎಂದು ಐಸಾಕ್ ಹೇಳಿದ್ದಾರೆ. &#8220;ಕೆಲವು ಬೋರ್ಡ್‌ಗಳು ಈಗಾಗಲೇ ರಾಮಾಯಣ ಮತ್ತು ಮಹಾಭಾರತವನ್ನು ಕಲಿಸುತ್ತಿವೆ, ಆದರೆ ಅದನ್ನು ಹೆಚ್ಚು ವಿಸ್ತಾರವಾದ ರೀತಿಯಲ್ಲಿ ಮಾಡಬೇಕಾಗಿದೆ,&#8221; ಎಂದು ಅವರು ಹೇಳಿದ್ದಾರೆ.</p>



<p>7 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಹಾಕಾವ್ಯಗಳನ್ನು ಕಲಿಸಲು ಶಿಫಾರಸು ಮಾಡಲಾಗಿದೆ. ಹಾಗೂ, ಸಂವಿಧಾನದ ಪೀಠಿಕೆಯನ್ನು ತರಗತಿಯ ಗೋಡೆಗಳ ಮೇಲೆ ಬರೆಯುವಂತೆಯೂ ಸಮಿತಿ ಶಿಫಾರಸು ಮಾಡಿದೆ.</p>



<figure class="wp-block-embed is-type-wp-embed is-provider-peepal-media wp-block-embed-peepal-media"><div class="wp-block-embed__wrapper">
<blockquote class="wp-embedded-content" data-secret="glb39OfOjv"><a href="https://peepalmedia.com/saffronisation-of-ncert-text-books/">NCERT ಪಠ್ಯಪುಸ್ತಕಗಳಲ್ಲಿ ಬಿಜೆಪಿಯ ರಾಜಕೀಯದ ಆಟಗಳು!</a></blockquote><iframe class="wp-embedded-content" sandbox="allow-scripts" security="restricted"  title="&#8220;NCERT ಪಠ್ಯಪುಸ್ತಕಗಳಲ್ಲಿ ಬಿಜೆಪಿಯ ರಾಜಕೀಯದ ಆಟಗಳು!&#8221; &#8212; Peepal Media" src="https://peepalmedia.com/saffronisation-of-ncert-text-books/embed/#?secret=orqnodzjVo#?secret=glb39OfOjv" data-secret="glb39OfOjv" width="600" height="338" frameborder="0" marginwidth="0" marginheight="0" scrolling="no"></iframe>
</div></figure>



<p>ಅಕ್ಟೋಬರ್‌ನಲ್ಲಿ ಸಮಿತಿಯು ಶಾಲಾ ಪಠ್ಯಪುಸ್ತಕಗಳಲ್ಲಿ &#8220;ಇಂಡಿಯಾ&#8221; ಬದಲಿಗೆ &#8220;ಭಾರತ್&#8221; ಎಂದು ಬಳಸಲು ಶಿಫಾರಸು ಮಾಡಿತ್ತು. ಪಠ್ಯಕ್ರಮದಲ್ಲಿ &#8220;ಪ್ರಾಚೀನ ಇತಿಹಾಸ &#8211; ancient history&#8221; ಬದಲಿಗೆ &#8220;ಶಾಸ್ತ್ರೀಯ ಇತಿಹಾಸ-classical history&#8221; ಎಂದು ಬಳಸಲು ಮತ್ತು ಎಲ್ಲಾ ವಿಷಯಗಳ ಪಠ್ಯಕ್ರಮದಲ್ಲಿ &#8220;ಭಾರತೀಯ ಜ್ಞಾನ ವ್ಯವಸ್ಥೆ &#8211; “Indian Knowledge System&#8221; ಅನ್ನು ಸೇರಿಸಲು ಸಲಹೆ ನೀಡಲಾಗಿದೆ.</p>



<p>National Council of Educational Research and Training ಇಂಡಿಯಾ ಎಂಬುದನ್ನು ಭಾರತ ಎಂದು ಬದಲಿಸುವಂತಹ &nbsp;ಯಾವುದೇ ಬದಲಾವಣೆಗಳ ಬಗ್ಗೆ ಕಾಮೆಂಟ್ ಮಾಡುವುದು &#8220;ತುಂಬಾ ಅಕಾಲಿಕ&#8221; ಎಂದು ಹೇಳಿದೆ.</p>



<p>ಏಳು ಸದಸ್ಯರ ಸಮಾಜ ವಿಜ್ಞಾನದ ಮೇಲೆ ಕೆಲಸ ಮಾಡುವ ಈ &nbsp;ಸಮಿತಿಯು ವಿವಿಧ ವಿಷಯಗಳ ಕುರಿತು ಶಿಫಾರಸುಗಳನ್ನು ನೀಡಲು NCERT ರಚಿಸಿರುವ 25 ತಜ್ಞರ ಸಮಿತಿಗಳಲ್ಲಿ ಒಂದಾಗಿದೆ.</p>
]]></content:encoded>
					
		
		
			</item>
		<item>
		<title>ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ನಿಜಕ್ಕೂ ದರೋಡೆಕೋರ ಆಗಿದ್ದರೆ?</title>
		<link>https://peepalmedia.com/maharshi-valmiki-was-not-dacoit/</link>
		
		<dc:creator><![CDATA[Arun Jolada Kudligi]]></dc:creator>
		<pubDate>Sun, 09 Oct 2022 03:30:56 +0000</pubDate>
				<category><![CDATA[ಧರ್ಮ- ಸಂಸ್ಕೃತಿ]]></category>
		<category><![CDATA[Arun Jolada kudligi]]></category>
		<category><![CDATA[epics]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rama]]></category>
		<category><![CDATA[ramayana]]></category>
		<category><![CDATA[special]]></category>
		<category><![CDATA[special story]]></category>
		<category><![CDATA[valmiki]]></category>
		<category><![CDATA[writing]]></category>
		<guid isPermaLink="false">https://peepalmedia.com/?p=9494</guid>

					<description><![CDATA[ಈ ದಿನದ ವಾಲ್ಮೀಕಿ&#160; ಜಯಂತಿ ವಿಶೇಷವಾಗಿದೆ. ಕಾರಣ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿ 240 ದಿನ ನಗರದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದರು. ಪರಿಣಾಮವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ರಾಜ್ಯ ಸರಕಾರ ಹೆಚ್ಚಿಸುವ ಅಧಿಕೃತ ಘೋಷಣೆಯನ್ನು ಇಂದು ಮುಖ್ಯಮಂತ್ರಿಗಳು ಮಂಡಿಸುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ಈ ನಿಲುವನ್ನು ಸ್ವಾಗತಿಸಿ ಪ್ರಸನ್ನಾಂದ ಸ್ವಾಮೀಜಿ ತಮ್ಮ ‌ಬೇಡಿಕೆ ಈಡೇರಿದ ನಿಟ್ಟಿನಲ್ಲಿ ಧರಣಿ ಅಂತ್ಯಗೊಳಿಸುವ ಮಾತನಾಡಿದ್ದಾರೆ. ಹಾಗಾದಲ್ಲಿ [&#8230;]]]></description>
										<content:encoded><![CDATA[
<p></p>



<p style="font-size:20px">ಈ ದಿನದ ವಾಲ್ಮೀಕಿ&nbsp; ಜಯಂತಿ ವಿಶೇಷವಾಗಿದೆ. ಕಾರಣ</p>



<p style="font-size:20px"><strong>ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿ 240 ದಿನ ನಗರದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದರು. ಪರಿಣಾಮವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ರಾಜ್ಯ ಸರಕಾರ ಹೆಚ್ಚಿಸುವ ಅಧಿಕೃತ ಘೋಷಣೆಯನ್ನು ಇಂದು ಮುಖ್ಯಮಂತ್ರಿಗಳು ಮಂಡಿಸುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ಈ ನಿಲುವನ್ನು ಸ್ವಾಗತಿಸಿ ಪ್ರಸನ್ನಾಂದ ಸ್ವಾಮೀಜಿ ತಮ್ಮ ‌ಬೇಡಿಕೆ ಈಡೇರಿದ ನಿಟ್ಟಿನಲ್ಲಿ ಧರಣಿ ಅಂತ್ಯಗೊಳಿಸುವ ಮಾತನಾಡಿದ್ದಾರೆ. ಹಾಗಾದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರುವ 54 ಬುಡಕಟ್ಟುಗಳು ಇಂದು ವಿಜಯದ ದಿವಸವನ್ನಾಗಿ ಆಚರಿಸಬೇಕಿದೆ.</strong></p>



<p style="font-size:20px">________&nbsp;&nbsp;&nbsp;</p>



<p style="font-size:20px">ಕರ್ನಾಟಕದಲ್ಲಿ ಆಚರಿಸಲ್ಪಡುವ ವಾಲ್ಮೀಕಿ ಜಯಂತಿಗಳಲ್ಲಿ ಮಹರ್ಷಿ ವಾಲ್ಮೀಕಿಯ ಬಗೆಗೆ ಕಡ್ಡಾಯವಾಗಿ ಉಲ್ಲೇಖಿಸುವ ಕಟ್ಟುಕತೆಯೊಂದಿದೆ. ಅದೆಂದರೆ ವಾಲ್ಮೀಕಿ ಪೂರ್ವಾಶ್ರಮದಲ್ಲಿ ರತ್ನಾಕರ ಎಂಬ ದರೋಡೆಕೋರನಾಗಿದ್ದ. ನಾರದರು ಒಮ್ಮೆ ಎದುರಾಗಿ ನಿನ್ನ ಈ ಅಪರಾದದಲ್ಲಿ ಮನೆಯವರು ಪಾಲುದಾರರೇ? ಎನ್ನುತ್ತಾನೆ, ವಿಚಾರಿಸಲಾಗಿ ರತ್ನಾಕರನ ಕುಟುಂಬ ಆತನ ಅಪರಾಧದಲ್ಲಿ ಪಾಲು ಪಡೆಯಲು ನಿರಾಕರಿಸುತ್ತಾರೆ. ನಂತರ ಆತನಿಗೆ ಅರಿವಾಗಿ ದರೋಡೆಯನ್ನು ನಿಲ್ಲಿಸಿ ತಪಸ್ಸು ಮಾಡುತ್ತಾನೆ. ಬಹುದಿನಗಳ ನಂತರ ಜ್ಞಾನೋದಯವಾಗಿ ತಪಸ್ಸಿಗೆ ಕೂತಲ್ಲಿಯೇ ಬೆಳೆದಿದ್ದ ಹುತ್ತವನ್ನು ಒಡೆದು ವಾಲ್ಮೀಕಿಯಾಗಿ ಹೊರಬಂದು ನಾರದರ ನಿರ್ದೇಶನದಂತೆ ರಾಮಾಯಣ ರಚನೆ ಮಾಡಿದ ಎನ್ನುವ ಕತೆ ಹೇಳುತ್ತಾರೆ. ಇದನ್ನು ವಿಶ್ವವಿದ್ಯಾಲಯಗಳ ಅಧ್ಯಾಪಕರಿಂದ ಹಿಡಿದು, ರಾಜಕಾರಣಿ, ಸಾಮಾನ್ಯ ಜನರ ತನಕ ಈ ಕತೆಯನ್ನು ಹೇಳುತ್ತಲೇ ಬಂದಿದ್ದಾರೆ. ಹಾಗಾದರೆ ವಾಲ್ಮೀಕಿ ದರೋಡೆಕೋರನಾಗಿದ್ದ ಎನ್ನುವುದಕ್ಕೆ ಪುರಾವೆ ಏನು?</p>



<p style="font-size:20px">ಒಂದೋ ಸ್ವತಃ ವಾಲ್ಮೀಕಿ ತಾನೇ ಬರೆದ ರಾಮಾಯಣದಲ್ಲಿ ದರೋಡೆಕೋರನಾಗಿರುವ ಬಗ್ಗೆ ಹೇಳಿಕೊಂಡಿರಬೇಕು. ಇಲ್ಲವೇ ವಾಲ್ಮೀಕಿಯ ಜತೆ ಬದುಕಿದ್ದ ಸಮಕಾಲೀನರು ಈತನ ಬದುಕನ್ನು ನೋಡಿ ಉಲ್ಲೇಖಿಸಿರಬೇಕು. ಸದ್ಯಕ್ಕೆ ಈ ಎರಡೂ ಪುರಾವೆಗಳು ಇಲ್ಲ. ಹಾಗಾದರೆ ವಾಲ್ಮೀಕಿ ದರೋಡೆಕೋರನಾಗಿದ್ದ ಎನ್ನುವ ಕಥೆ ಹುಟ್ಟಿದ್ದೆಲ್ಲಿ? ಚಾರಿತ್ರಿಕ ಅಧ್ಯಯನಗಳ ಕಡೆ ಹೊರಳೋಣ. ವಾಲ್ಮೀಕಿ ಮತ್ತು ರಾಮಾಯಣ ರಚನೆ ಕುರಿತಂತೆ ವ್ಯಾಪಕವಾದ ಅಧ್ಯಯನಗಳು ನಡೆದಿವೆ. ಇತಿಹಾಸ ತಜ್ಞ ಹೆಚ್.ಡಿ. ಸಾಂಕಾಲಿಯ ಉಲ್ಲೇಖಿಸುವಂತೆ, ಈ ಅಧ್ಯಯನ 1843 ರಿಂದ 1867 ರ ಅವಧಿಯಲ್ಲಿ ಗೊರೆಸ್ಯೋನ ಪ್ರಕಟಿಸಿದ ರಾಮಾಯಣದ ಆರು ಸಂಪುಟಗಳಿಂದ ಆರಂಭವಾಗಿದೆ. ಕಾಲನಿರ್ಣಯದ ಬಗ್ಗೆ ಎ.ವೆಬರ್ (1873) ಮೊದಲು ವಿಮರ್ಶೆ ಮಾಡಿರಬೇಕೆಂದು ಅಭಿಪ್ರಾಯ ತಾಳುತ್ತಾರೆ. ವಿಲಿಯಂ ಜೋನ್ಸ್, ರಾಮಸ್ವಾಮಿಶಾಸ್ತ್ರಿ, ಆರ್.ಸಿ.ಮುಜುಂದಾರ್, ಗೊರೇಸಿಯಾ, ಪುಲಸ್ಕರ್, ಪಿ.ವಿ ಕಾಣೆ, ಡಿ.ಡಿ.ಕೋಸಾಂಬಿ, ಎ.ಎಲ್.ಬಾಷಂ, ರೋಮಿಲಾ ಥಾಫರ್, ಇರ್ಫಾನ್ ಹಬೀಬ್, ಪೆರಿಯಾರ್, ಲೋಹಿಯಾ, ಅಂಬೇಡ್ಕರ್ ತನಕ ಹೀಗೆ ನೂರಾರು ಜನ ಇತಿಹಾಸ ತಜ್ಞರು, ಪುರಾತತ್ವಜ್ಞರು, ಹಲವು ಜ್ಞಾನಶಾಖೆಗಳ ಹಿನ್ನೆಲೆಯಲ್ಲಿ ಅಧ್ಯಯನ ಮಾಡಿದ್ದಾರೆ.</p>



<p style="font-size:20px">ವಾಲ್ಮೀಕಿ ರಾಮಾಯಣದ ರಚನೆಯ ಕಾಲ ನಿರ್ಣಯದ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೂ, ಕ್ರಿ.ಪೂ. 3 ರಿಂದ 5 ನೇ ಶತಮಾನದ ಅಂತರದಲ್ಲಿ ವಾಲ್ಮೀಕಿ ಬದುಕಿದ್ದಿರಬೇಕು, ರಾಮಾಯಣ ರಚನೆಯಾಗಿದ್ದಿರಬೇಕು ಎಂಬ ನಿಲುವಿಗೆ ಹೆಚ್ಚು ಮಾನ್ಯತೆ ದೊರೆತಿದೆ. ಹೀಗೆ ವಾಲ್ಮೀಕಿ ಬದುಕಿದ್ದ ಕಾಲಘಟ್ಟವೇ ಮಸುಕಾಗಿರುವಾಗ ವಾಲ್ಮೀಕಿ ದರೋಡೆಕೋರನಾಗಿದ್ದನ್ನು ನೋಡಿದವರು ಯಾರು? ಮೇಲೆ ಉಲ್ಲೇಖಿಸಿದ ಅಧ್ಯಯನಗಳೂ ಸಹ ರಾಮಾಯಣದ ಕಣ್ಣೋಟದಲ್ಲಿ ವಾಲ್ಮೀಕಿಯ ಜೀವನ ವೃತ್ತಾಂತವನ್ನು ವಿವರಿಸಿದ್ದು ಬಿಟ್ಟರೆ, ಇತರೆ ಜೀವನ ವಿವರಗಳನ್ನು ದಾಖಲಿಸುವುದಿಲ್ಲ. ಹಾಗಾದರೆ ವಾಲ್ಮೀಕಿ ದರೋಡೆಕೋರನಾಗಿದ್ದ ಎನ್ನುವುದರ ನೆಲೆಗಟ್ಟೇನು? ಎನ್ನುವ ಪ್ರಶ್ನೆ ಎದುರು ನಿಲ್ಲುತ್ತದೆ.</p>



<p style="font-size:20px">ಕರ್ನಾಟಕದಲ್ಲಿ ಈ ತನಕ ವಾಲ್ಮೀಕಿ ದರೋಡೆಕೋರನಾಗಿದ್ದನು ಎನ್ನುವ ಕಟ್ಟುಕತೆಯನ್ನು ಬಹಿರಂಗವಾಗಿ ಪ್ರಶ್ನಿಸಿದ್ದಕ್ಕಿಂತ ಒಪ್ಪಿಕೊಂಡಿರುವುದೇ ಹೆಚ್ಚು. ಆದರೆ ಉತ್ತರ ಭಾರತದ ಪಂಜಾಬ್ ಒಳಗೊಂಡಂತೆ ಅಲ್ಲಿನ ವಾಲ್ಮೀಕಿ ಸಮುದಾಯದವರು ವಾಲ್ಮೀಕಿ ದರೋಡೆಕೋರನಾಗಿದ್ದ ಎನ್ನುವ ಉಲ್ಲೇಖ ಮತ್ತು ಕಟ್ಟುಕತೆಗಳ ವಿರುದ್ಧ ಬಂಡೆದ್ದಿದ್ದಾರೆ. ಉಲ್ಲೇಖಿಸಿದವರ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದಾರೆ. ಕೋರ್ಟಿನ ಕಟಕಟೆಗೆ ಎಳೆತಂದು ಸಾಕ್ಷಿ ಕೇಳಿದ್ದಾರೆ. 2003 ರಲ್ಲಿ ಪ್ರಸಾರವಾಗಿದ್ದ `ಕುಮ್ ಕುಮ್ ಏಕ್ ಪ್ಯಾರ್ ಬಂಧನ್’ ಎನ್ನುವ ಧಾರವಾಹಿಯಲ್ಲಿ ಮಹರ್ಷಿ ವಾಲ್ಮೀಕಿಯನ್ನು `ಡಾಕು’ ಎಂದು ಪದ ಬಳಸಿ ಪರಿಚಯಿಸಲಾಗಿತ್ತು. ಇದರ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು. ಬ್ಯಾಗ್ ಫಿಲ್ಮ್ ಲಿಮಿಟೆಡ್ ನವರು ಪಂಜಾಬಿನ ವಾಲ್ಮೀಕಿ ಸಮುದಾಯವನ್ನು ಕ್ಷಮೆಕೋರಿದ್ದರು. ಟಿ.ವಿ ಮೂಲಕವೇ ಬಹಿರಂಗ&nbsp; ಕ್ಷಮೆಯಾಚಿಸಿ, ಸ್ಪಷ್ಟನೆಯ ಕಾರ್ಯಕ್ರಮ ಪ್ರಸಾರ ಮಾಡಿ ಕೇಸನ್ನು ವಾಪಾಸು ಪಡೆಯುವಂತೆ ಮನವಿ ಮಾಡಿದ್ದರು. ಇನ್ನು 2009 ರ `ಸ್ಟಾರ್ ಇಂಡಿಯಾ ಪ್ರವೇಟ್ ಲಿಮಿಟೆಡ್ ವರ್ಸಸ್ ಸ್ಟೇಟ್ ಆಫ್ ಪಂಜಾಬ್’ ಕೇಸಿನಲ್ಲಿ ವಾಲ್ಮೀಕಿ ದರೋಡೆಕೋರನಾಗಿರಲಿಲ್ಲ ಎನ್ನುವ ಜಸ್ಟೀಸ್ ರಾಜೀವ ಭಲ್ಲಾ ಅವರ ತೀರ್ಪಿನೊಂದಿಗೆ ತಾರ್ಕಿಕ ಅಂತ್ಯ ಕಂಡಿತು.</p>



<p style="font-size:20px">ಪಂಜಾಬ್‌ನ ಜಲಂಧರ್ ಜಿಲ್ಲೆಯ ಮಾಡೆಲ್ ಟೌನ್‌ನ ರಿಷಿನಗರದ ನಿವಾಸಿ ನವ್ವಿಕಾಸ್ ಎನ್ನುವವರು 6.10.2009 ರಲ್ಲಿ ಸ್ಟಾರ್ ಪ್ಲಸ್ ಟಿವಿಯಲ್ಲಿ `ಸಪ್ನ ಬಾಬುಲ್ ಕಾ ಬಿದಾಯಿ’ ಎನ್ನುವ ದಾರವಾಹಿ ನೋಡುತ್ತಿದ್ದರು. ಆ ದಾರವಾಹಿಯಲ್ಲಿ ವಾಲ್ಮೀಕಿಯ ಋಷಿಪೂರ್ವ ಜೀವನದಲ್ಲಿ ದರೋಡೆಕೋರನಾಗಿದ್ದ, ರೋಡ್ ರಾಬರ್ ಆಗಿದ್ದ ಎನ್ನುವ ಸಂಭಾಷಣೆ ಬರುತ್ತದೆ. ಸ್ವತಃ ವಾಲ್ಮೀಕಿ ಸಮುದಾಯದ ನವ್ವಿಕಾಸ್ ಅವರು ಈ ಸಂಭಾಷಣೆ ಮತ್ತು ದಾರವಾಹಿಯ ವಿರುದ್ಧ ಎಫ್.ಐ.ಆರ್ ದಾಖಲಿಸುತ್ತಾರೆ. ಈ ಕಟ್ಟುಕಥೆಗೆ ದಾಖಲೆ ಕೊಡಿ ಎಂದು ಕೇಳುತ್ತಾರೆ. ಸ್ಥಳೀಯ ಪೋಲೀಸರಿಂದ ನಿರೀಕ್ಷಿತ ಬೆಂಬಲ ಸಿಗದ&nbsp; ಕಾರಣ ನವ್ವಿಕಾಸ್ ಕೋರ್ಟ್ ಮೆಟ್ಟಿಲೇರುತ್ತಾರೆ.</p>



<p style="font-size:20px">ಪಂಜಾಬ್ ಯುನಿವರ್ಸಿಟಿ ಪಾಟಿಯಾಲದ ಪ್ರೊಫೆಸರ್ ಮಂಜುಳಾ ಸಹದೆವ್ ಅವರ ವಾಲ್ಮೀಕಿ ಜೀವನ ವೃತ್ತಾಂತವನ್ನು ಕುರಿತ ಸಂಶೋಧನೆಯನ್ನು ಕೋರ್ಟ್ ಪರಿಶೀಲಿಸುತ್ತದೆ. ಮಂಜುಳ ಸಹದೆವ್ 1979 ರಿಂದ ಪಂಜಾಬ್ ಯುನಿವರ್ಸಿಟಿಯಲ್ಲಿ ಸಂಸ್ಕೃತ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾಗಿದ್ದಾರೆ. 1995 &#8211; 2004ರ ತನಕ ಮಹರ್ಷಿ ವಾಲ್ಮೀಕಿ ಚೇರ್ ಮುಖ್ಯಸ್ಥರಾಗಿದ್ದರು. ಸಂಸ್ಕೃತ ಶಾಸ್ತ್ರೀಯ ಭಾಷೆಯ ಖಾಯಂ ಸದಸ್ಯರೂ ಆಗಿದ್ದಂತವರು. ಎಂಬತ್ತರ ದಶಕದಿಂದಲೂ ವಿಶೇಷವಾಗಿ ರಾಮಾಯಣ ಮತ್ತು ವಾಲ್ಮೀಕಿ ಕುರಿತು ನಿರಂತರ ಅಧ್ಯಯನ ಸಂಶೋಧನೆಗಳನ್ನು ಪ್ರಕಟಿಸಿದವರು. `ಮಹರ್ಷಿ ವಾಲ್ಮೀಕಿ ಏಕ್ ಸಮೀಕ್ಷಾತ್ಮಕ ಅಧ್ಯಯನ’ ಇವರ ಮಹತ್ವದ ಸಂಶೋಧನೆ. ಈ ಕೃತಿಯಲ್ಲಿ ಮಹರ್ಷಿ ವಾಲ್ಮೀಕಿ ಋಷಿಪೂರ್ವದಲ್ಲಿ ಡಕಾಯಿತ್, ರೋಡ್ ರಾಬರ್ ಆಗಿರಲಿಲ್ಲ ಎನ್ನುವುದರ ತಾರ್ಕಿಕ ವಿಶ್ಲೇಷಣೆ ಮಾಡಿದ್ದಾರೆ.</p>



<p style="font-size:20px">ಈ ಸಂಶೋಧನೆಯ ಮುಖ್ಯಾಂಶಗಳೆಂದರೆ, ವೇದಗಳ ಕಾಲದಿಂದ ಕ್ರಿ.ಶ 9 ನೇ ಶತಮಾನದ ತನಕ ವಾಲ್ಮೀಕಿ ಪೂರ್ವಾಶ್ರಮದಲ್ಲಿ ದರೋಡೆಕೋರನಾಗಿದ್ದ ಎನ್ನುವುದಕ್ಕೆ ಎಲ್ಲಿಯೂ ಉಲ್ಲೇಖಗಳಿಲ್ಲ. ಅಂತೆಯೇ ವಾಲ್ಮೀಕಿ ಅಂದರೆ ಹುತ್ತದಿಂದ ಎದ್ದು ಬಂದವ ಎನ್ನುವ ಪವಾಡ ಸದೃಶ್ಯ ಕಥನದ ಬಳಕೆಯೂ ಇಲ್ಲ. ವಾಲ್ಮೀಕಿ ಸ್ವರಚಿತ ರಾಮಾಯಣದಲ್ಲಿಯೇ ಎಲ್ಲಿಯೂ ತಾನು ಪೂರ್ವಾಶ್ರಮದಲ್ಲಿ ದರೋಡೆಕೋರನಾಗಿದ್ದ ಬಗ್ಗೆ ಪ್ರಸ್ತಾಪಿಸುವುದಿಲ್ಲ. ಬದಲಾಗಿ ತನ್ನನ್ನು ಭಗವಾನ್, ಮುನಿ, ರಿಷಿ, ಮಹರ್ಷಿ ಎಂದು ಕರೆದುಕೊಂಡದ್ದಕ್ಕೆ ಸಾಕ್ಷ್ಯಗಳಿವೆ. ಮೊಟ್ಟಮೊದಲ ಬಾರಿಗೆ ವಾಲ್ಮೀಕಿ ಋಷಿಪೂರ್ವದಲ್ಲಿ ದರೋಡೆಕೋರನಾಗಿದ್ದ ಎನ್ನುವುದನ್ನು ಹತ್ತನೆ ಶತಮಾನದ ಸ್ಕಂದ ಪುರಾಣ ಉಲ್ಲೇಖಿಸುತ್ತದೆ. ಇದು ಎಲ್ಲವನ್ನೂ ಪುರಾಣೀಕರಿಸುವ ಕಾಲಘಟ್ಟ. ಬಹುಶಃ ಸ್ಕಂದ ಪುರಾಣದ ಉಲ್ಲೇಖದ ನಂತರ ವಾಲ್ಮೀಕಿ ದರೋಡೆಕೋರನಾಗಿದ್ದ ಎನ್ನುವ ಕತೆಯನ್ನು ಹೆಣೆಯಲಾಗಿದೆ.</p>



<p style="font-size:20px">`ಮರ ಮರ’ ಎನ್ನುವ ಮಂತ್ರದ ಉಲ್ಲೇಖ 15 ಶತಮಾನದ `ಆದ್ಯಾತ್ಮ ರಾಮಾಯಣ’ ಮತ್ತು 16 ನೇ ಶತಮಾನದ `ಆನಂದ ರಾಮಾಯಣ’ ದಲ್ಲಿ ಸಿಗುತ್ತದೆ. ಅಂದರೆ `ಮರ ಮರ’ ಮಂತ್ರದಿಂದಲೆ ವಾಲ್ಮೀಕಿ ರಾಮಾಯಣ ರಚಿಸಿದ ಎನ್ನುವುದೂ ಕಟ್ಟುಕತೆ. 13 ಮತ್ತು 16 ನೇ ಶತಮಾನದಲ್ಲಿ ರಾಮನನ್ನು ವಿಷ್ಣುವಿನ ಅವತಾರ ಎಂದು ದೈವೀಕರಿಸಿದ ಮೇಲೆ ವಾಲ್ಮೀಕಿಯ ಬಗೆಗೆ ಇಂತಹ ಕತೆಗಳು ಹೆಣೆಯಲ್ಪಟ್ಟಿವೆ. ಹೆಚ್.ಡಿ.ಸಾಂಕಾಲಿಯ ಅವರ ಪ್ರಕಾರ ವಾಲ್ಮೀಕಿಯ ಕಾಲದಲ್ಲಿಯೇ ಬಿಡಿಬಿಡಿ ಜನಪದ ಕತೆಗಳಲ್ಲಿದ್ದ ರಾಮಕತೆಯನ್ನು ಜೋಡಿಸಿ ಮಹಾಕಾವ್ಯದ ರೂಪಕೊಟ್ಟು ರಾಮನನ್ನು ಶ್ರೀರಾಮನನ್ನಾಗಿಸಿ ಪುನರ್‌ಸೃಷ್ಠಿಸಿದ್ದು ವಾಲ್ಮೀಕಿ. ಆದರೆ ರಾಮನಾಮದ ಬಲದಿಂದಲೇ ವಾಲ್ಮೀಕಿ ರಾಮಾಯಣವನ್ನು ರಚಿಸಿದ ಎಂದು ವಾಲ್ಮೀಕಿಯನ್ನು ಆಧೀನ ಮಾಡಲಾಯಿತು. ಈ ಉದ್ದೇಶಕ್ಕಾಗಿ ವಾಲ್ಮೀಕಿಯ ಬಗೆಗೆ ಇಂತಹ ಕಟ್ಟುಕತೆಗಳನ್ನು ಕಟ್ಟಲಾಯಿತು. ಇದನ್ನು ಪರಿಶೀಲಿಸಿದಾಗ ವಾಲ್ಮೀಕಿ ಬದುಕಿದ್ದ 1500 ವರ್ಷಗಳ ನಂತರ ಆತ `ದರೋಡೆಕೋರನಾಗಿದ್ದ’ ಎನ್ನುವ ಕತೆ ಸಿಗುತ್ತದೆ. ಹೀಗಾಗಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಪುರಾಣವನ್ನು ಉಲ್ಲೇಖಿಸುವುದು ಅಪರಾಧವಾಗುತ್ತದೆ ಎಂದು, 2009 ರ `ಸ್ಟಾರ್ ಇಂಡಿಯಾ ಪ್ರವೇಟ್ ಲಿಮಿಟೆಡ್ ವರ್ಸಸ್ ಸ್ಟೇಟ್ ಆಫ್ ಪಂಜಾಬ್’ ಕೇಸಿನಲ್ಲಿ ಜಸ್ಟೀಸ್ ರಾಜೀವ ಭಲ್ಲಾ `ವಾಲ್ಮೀಕಿ ಋಷಿಪೂರ್ವದಲ್ಲಿ ದರೋಡೆಕೋರನಾಗಿರಲಿಲ್ಲ’ ಎನ್ನುವ ತೀರ್ಪು ನೀಡುತ್ತಾರೆ. 2019 ರಲ್ಲಿ ಪ್ರೊ.ಮಂಜುಳ ಸಹದೇವ್ ವಿರುದ್ಧದ ಕೇಸಿನಲ್ಲಿ ಜಸ್ಟೀಸ್ ಅರವಿಂದ್ ಸಿಂಗ್ ಸಾಂಗ್ವಾನ್ ಅವರು ಕೂಡ ರಾಜೀವ ಭಲ್ಲಾ ಅವರ ತೀರ್ಪನ್ನು ಎತ್ತಿಹಿಡಿದಿದ್ದಾರೆ.</p>



<figure class="wp-block-image size-large"><img fetchpriority="high" decoding="async" width="1024" height="609" src="https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE-1024x609.jpg" alt="" class="wp-image-9496" srcset="https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE-1024x609.jpg 1024w, https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE-300x178.jpg 300w, https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE-768x456.jpg 768w, https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE-1536x913.jpg 1536w, https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE-150x89.jpg 150w, https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE-696x414.jpg 696w, https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE-1068x635.jpg 1068w, https://peepalmedia.com/wp-content/uploads/2022/10/Ramayana_manuscript_Mewari_paintings_Rajasthan_1653_CE.jpg 1575w" sizes="(max-width: 1024px) 100vw, 1024px" /><figcaption>ರಾಜಾಸ್ತಾನದ ಮೇವಾರಿ ಬುಡಕಟ್ಟು ಚಿತ್ರಕಲೆಯಲ್ಲಿ ದೊರೆತ ರಅಮಾಐಣದ ಹಸ್ತಪ್ರತಿ</figcaption></figure>



<p style="font-size:20px">ಪಂಜಾಬ್ ಹೈಕೋರ್ಟಿನ ಜಸ್ಟೀಸ್ ರಾಜೀವ ಭಲ್ಲಾ ಅವರು ಮಂಜುಳ ಸಹದೇವ್ ಅವರ ಸಂಶೋಧನೆಯನ್ನು ಅಮೂಲಾಗ್ರವಾಗಿ ಅಧ್ಯಯನ ಮಾಡಿ, ಮೇಲಿನ ಮುಖ್ಯಾಂಶಗಳನ್ನು ಉಲ್ಲೇಖಿಸಿ ಮಹರ್ಷಿ ವಾಲ್ಮೀಕಿ ದರೋಡೆಕೋರನಾಗಿರಲಿಲ್ಲ. ಕಾಲಾನಂತರದಲ್ಲಿ ಆದ ಸೇರ್ಪಡೆಗಳಲ್ಲಿ ಈ ಬಗೆಯ ಕತೆಯನ್ನು ಕಟ್ಟಲಾಗಿದೆ. ಒಂದು ಸಮುದಾಯದ ಧರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ತೀರ್ಪು ನೀಡುತ್ತಾರೆ. ಈ ತೀರ್ಪಿನ ತರುವಾಯ ಬಹುತೇಕ ಉತ್ತರ ಭಾರತದ ರಾಜ್ಯಗಳಲ್ಲಿ ಸಾರ್ವಜನಿಕವಾಗಿ ವಾಲ್ಮೀಕಿಯು ದರೋಡೆಕೋರನಾಗಿದ್ದ ಎನ್ನುವ ಕಥೆಯ ಉಲ್ಲೇಖ ನಿಷೇಧವಾಗಿದೆ. ಅಕಸ್ಮಾತ್ ಈ ಕಥೆಯನ್ನು ಉಲ್ಲೇಖಿಸಿದರೆ ಎಫ್.ಐ.ಆರ್ ದಾಖಲಾಗುತ್ತದೆ.</p>



<p style="font-size:20px">ಮಹರ್ಷಿ ವಾಲ್ಮೀಕಿಯ ಬಗೆಗಿನ ಅಧ್ಯಯನಗಳು ಮತ್ತು ಸ್ವರಚಿತ ರಾಮಾಯಣವನ್ನು ಆಧರಿಸಿ ನೋಡುವುದಾದರೆ ವಾಲ್ಮೀಕಿ ರಾಮನೆಂಬ ಕಾಲ್ಪನಿಕ ಪಾತ್ರವನ್ನು ಸಶಕ್ತವಾಗಿ ಕಟ್ಟಿದ ಭರತಖಂಡದ ಆದಿಕವಿ, ಬೇಡ ಸಮುದಾಯದ ಮೊದಲ ಸಾಕ್ಷರ. ಸಂಸ್ಕೃತವನ್ನು ಕೆಳಜಾತಿ ದಮನಿತ ಸಮುದಾಯಗಳಿಗೆ ನಿಶೇಧಿಸಿದ್ದ ಕಾಲಘಟ್ಟದಲ್ಲಿ ಸಂಸ್ಕೃತವನ್ನು ಕಲಿತು ಮೇರು ಕಾವ್ಯವನ್ನು ರಚನೆ ಮಾಡಿದ್ದು ಈ ಸಮುದಾಯಗಳಿಗೆ ಒಂದು ಸ್ಪೂರ್ತಿದಾಯಕ ಸಂಗತಿ. ಕೆಳಜಾತಿ ಜನರು ಯಾವುದೇ ಮಹತ್ಸಾಧನೆಯನ್ನು ಮಾಡಿದಾಗ ಮೇಲ್ಜಾತಿಗಳು ಅವರ ಹುಟ್ಟನ್ನೆ ಅನುಮಾನಿಸುವ, ಅವರ ಚಾರಿತ್ರ್ಯವನ್ನು ತಿರುಚುವ ಯತ್ನ ನಡದೇ ಇದೆ. ವಾಲ್ಮೀಕಿ ಋಷಿಪೂರ್ವದಲ್ಲಿ ದರೋಡೆಕೋರನಾಗಿದ್ದ ಎನ್ನುವ ಕಟ್ಟುಕಥೆ ಕೂಡ ಇಂತಹದ್ದೇ ಒಂದು ಪ್ರಯತ್ನ. ಹಾಗಾಗಿ ವಾಲ್ಮೀಕಿಯನ್ನು ಅಕ್ಷರ, ಶಿಕ್ಷಣ, ಜ್ಞಾನ, ಹೋರಾಟದ ಸಂಕೇತವಾಗಿ ಪರಿಭಾವಿಸಬೇಕಿದೆ. ಇನ್ನಾದರೂ ವಾಲ್ಮೀಕಿ ಋಷಿಪೂರ್ವದಲ್ಲಿ ದರೋಡೆಕೋರನಾಗಿದ್ದ ಎನ್ನುವ ಕಟ್ಟುಕತೆಯನ್ನು ಹೇಳುವುದನ್ನು ನಿಲ್ಲಿಸಬೇಕು.</p>



<p style="font-size:25px">-ಡಾ. ಅರುಣ್ ಜೋಳದಕೂಡ್ಲಿಗಿ ‌</p>



<figure class="wp-block-image size-full"><img loading="lazy" decoding="async" width="218" height="197" src="https://peepalmedia.com/wp-content/uploads/2022/10/ಅರುಣ್.jpg" alt="" class="wp-image-9505" srcset="https://peepalmedia.com/wp-content/uploads/2022/10/ಅರುಣ್.jpg 218w, https://peepalmedia.com/wp-content/uploads/2022/10/ಅರುಣ್-150x136.jpg 150w" sizes="auto, (max-width: 218px) 100vw, 218px" /><figcaption>ಡಾ. ಅರುಣ್‌ ಜೋಳದ ಕೂಡ್ಲಿಗಿ </figcaption></figure>
]]></content:encoded>
					
		
		
			</item>
	</channel>
</rss>
