<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ramesh babu &#8211; Peepal Media</title>
	<atom:link href="https://peepalmedia.com/tag/ramesh-babu/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 23 Jun 2023 08:57:50 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ramesh babu &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಶಾಸಕರಿಗೆ ತಿಳುವಳಿಕೆ ಭಾಷಣ ; ವಿವಾದಾತ್ಮಕ ವ್ಯಕ್ತಿಗಳ ಆಯ್ಕೆ ಬಗ್ಗೆ ಪರಿಶೀಲನೆ</title>
		<link>https://peepalmedia.com/informative-speech-to-mlas-scrutiny-on-selection-of-controversial-persons/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 23 Jun 2023 08:49:35 +0000</pubDate>
				<category><![CDATA[ರಾಜಕೀಯ]]></category>
		<category><![CDATA[karnataka]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[ramesh babu]]></category>
		<category><![CDATA[UT khadar]]></category>
		<guid isPermaLink="false">https://peepalmedia.com/?p=22640</guid>

					<description><![CDATA[ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ತರಬೇತಿ ಕೊಡುವ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಮಾಡಲಾಗಿತ್ತು. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಮಾಡಿರುವ ಆಯ್ಕೆಯ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಧ್ಯಕ್ಕೆ ಸಂಪನ್ಮೂಲ ವ್ಯಕ್ತಿಗಳ ಹೆಸರುಗಳು ಇನ್ನೂ ಅಧಿಕೃತವಾಗಿಲ್ಲ ಎಂದು ತಿಳಿದು ಬಂದಿದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಆಯ್ಕೆ ಮಾಡಿರುವ ವ್ಯಕ್ತಿಗಳು ಧಾರ್ಮಿಕ ಪ್ರತಿನಿಧಿಗಳು, ವಿವಾದಾಸ್ಪದ ವ್ಯಕ್ತಿಗಳು ಆಗಿರುವ ಹಿನ್ನೆಲೆಯಲ್ಲಿ ಪ್ರವಚನವನ್ನು ಕೈ ಬಿಡಬೇಕು ಎಂದು ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ವಲಯ ಒಕ್ಕೊರಲಿನಿಂದ ಆಗ್ರಹಿಸಿದೆ. ‘ಶಿಬಿರಕ್ಕೆ [&#8230;]]]></description>
										<content:encoded><![CDATA[
<p>ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ತರಬೇತಿ ಕೊಡುವ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಮಾಡಲಾಗಿತ್ತು. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಮಾಡಿರುವ ಆಯ್ಕೆಯ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಧ್ಯಕ್ಕೆ ಸಂಪನ್ಮೂಲ ವ್ಯಕ್ತಿಗಳ ಹೆಸರುಗಳು ಇನ್ನೂ ಅಧಿಕೃತವಾಗಿಲ್ಲ ಎಂದು ತಿಳಿದು ಬಂದಿದೆ.</p>



<p>ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಆಯ್ಕೆ ಮಾಡಿರುವ ವ್ಯಕ್ತಿಗಳು ಧಾರ್ಮಿಕ ಪ್ರತಿನಿಧಿಗಳು, ವಿವಾದಾಸ್ಪದ ವ್ಯಕ್ತಿಗಳು ಆಗಿರುವ ಹಿನ್ನೆಲೆಯಲ್ಲಿ ಪ್ರವಚನವನ್ನು ಕೈ ಬಿಡಬೇಕು ಎಂದು ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ವಲಯ ಒಕ್ಕೊರಲಿನಿಂದ ಆಗ್ರಹಿಸಿದೆ.</p>



<p>‘ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಸಾಮಾಜಿಕ ವಲಯಗಳಲ್ಲಿ ಅನೇಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಈ ವಿಚಾರವನ್ನು ಮರು ಪರಿಶೀಲಿಸಬೇಕು’ ಎಂದು ಕೆಪಿಸಿಸಿ ವಕ್ತಾರರಾದ ರಮೇಶ್‌ ಬಾಬು ಅವರು ಖಾದರ್ ಅವರಿಗೆ ಆಗ್ರಹ ಪತ್ರ ಬರೆದಿದ್ದಾರೆ.</p>



<figure class="wp-block-image size-full"><img fetchpriority="high" decoding="async" width="640" height="480" src="https://peepalmedia.com/wp-content/uploads/2023/06/images-2023-06-23T140809.609.jpeg" alt="" class="wp-image-22647" srcset="https://peepalmedia.com/wp-content/uploads/2023/06/images-2023-06-23T140809.609.jpeg 640w, https://peepalmedia.com/wp-content/uploads/2023/06/images-2023-06-23T140809.609-300x225.jpeg 300w, https://peepalmedia.com/wp-content/uploads/2023/06/images-2023-06-23T140809.609-150x113.jpeg 150w" sizes="(max-width: 640px) 100vw, 640px" /></figure>



<p>ಪತ್ರ ಮಾತ್ರವಲ್ಲದೆ ರಮೇಶ್ ಬಾಬು ಅವರು ಸುಧೀರ್ಘ ಚರ್ಚೆ ನಡೆಸಿದ್ದು, ಸಭಾಧ್ಯಕ್ಷರು ಇನ್ನೂ ಆಯ್ಕೆ ಅಂತಿಮಗೊಳಿಸದ ಹಿನ್ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿಗಳ ಹೆಸರು ಇನ್ನೂ ಅಧಿಕೃತ ಅಲ್ಲ ಎಂದು ಪ್ರತಿಕ್ರಯಿಸಿದ್ದಾರೆ‌. ಅಷ್ಟೆ ಅಲ್ಲದೆ ಕರ್ನಾಟಕ ವಿಧಾನಸಭೆಯ ಪರಂಪರೆಗೆ ಅನುಗುಣವಾಗಿ ಮತ್ತು ರಾಜ್ಯದ ಸಂಸ್ಕೃತಿಗೆ ಅನುಗುಣವಾಗಿ ಎಲ್ಲರ ಭಾವನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.</p>



<p>ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಅಲ್ಲದೇ ಖಾದರ್‌ಗೆ ಪತ್ರ ಬರೆದಿರುವ ‘ಜಾಗೃತ ನಾಗರಿಕರು ಕರ್ನಾಟಕ’ದ ಕೆ. ಮರುಳಸಿದ್ದಪ್ಪ, ಜಿ. ರಾಮಕೃಷ್ಣ, ವಿಜಯಾ, ಎಸ್.ಜಿ. ಸಿದ್ದರಾಮಯ್ಯ,&nbsp;ರಾಜೇಂದ್ರ ಚೆನ್ನಿ, ಕೆ.ಎಸ್. ವಿಮಲಾ,&nbsp;ಬಿ. ಶ್ರೀಪಾದ ಭಟ್, ಟಿ. ಸುರೇಂದ್ರ ರಾವ್‌, ಬಂಜಗೆರೆ ಜಯಪ್ರಕಾಶ್, ವಿ.ಪಿ. ನಿರಂಜನಾರಾಧ್ಯ, ಮೀನಾಕ್ಷಿ ಬಾಳಿ, ಎನ್. ಗಾಯತ್ರಿ, ವಸುಂಧರಾ ಭೂಪತಿ, ‘‌ನೀವು ಆಹ್ವಾನಿಸಿರುವವರಲ್ಲಿ ಕೆಲವರು ಕೋಮುವಾದಿ ನೀತಿಗಳ ಸಮರ್ಥಕರು ಹಾಗೂ ಸ್ವಂತದ ವ್ಯವಹಾರಗಳಲ್ಲಿ ವಿವಾದಾಸ್ಪದರು. ಇಂಥವರ ಭಾಷಣಗಳು ಹೊಸ ಶಾಸಕರಿಗೆ ಯಾವ ಬಗೆಯ ಮಾದರಿಗಳನ್ನು ಒದಗಿಸಬಲ್ಲುದು ಎಂಬ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಈ ಧಾರ್ಮಿಕ ಪ್ರತಿನಿಧಿಗಳ ಉಪನ್ಯಾಸಗಳನ್ನು ರದ್ದು ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>



<p>ಅಷ್ಟೆ ಅಲ್ಲದೆ &#8216;ಜಾತ್ಯತೀತತೆ ಮತ್ತು ಮತ ನಿರಪೇಕ್ಷತೆ ಎಂದರೆ ರಾಜಕೀಯದೊಡನೆ ಧರ್ಮವನ್ನು ಬೆರೆಸದೇ ದೂರ ಇಡುವುದು ಎಂಬುದನ್ನು ದಯವಿಟ್ಟು ಮನನ ಮಾಡಿಕೊಳ್ಳಬೇಕು. ಯಾರಾದರೂ ಶಾಸಕರು ವೈಯಕ್ತಿಕವಾಗಿ ಯಾವುದಾದರೊಂದು ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವುದು ಅವರ ವೈಯಕ್ತಿಕ ಆಯ್ಕೆ. ಆದರೆ, ಶಾಸನ ಸಭೆ ಪ್ರವೇಶಿಸುವ ಮೊದಲು ಅವರೆಲ್ಲ ಧಾರ್ಮಿಕ ಪ್ರೇರೇಪಣೆ ಪಡೆದು ಬರಬೇಕೆಂದು ಭಾವಿಸಿರುವುದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ’ ಎಂದು ಖಾದರ್ ಅವರಿಗೆ ಬರೆದ ಪತ್ರದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.</p>



<p><font style="vertical-align: inherit;"><font style="vertical-align: inherit;">ತರಬೇತಿ ಶಿಬಿರ ನಡೆಯುತ್ತಿರುವ ಕುರಿತು ಬುಧವಾರ ಮಾಹಿತಿ ನೀಡಿದ್ದ ವಿಧಾನಸಭಾಧ್ಯಕ್ಷ ಯು.ಟಿ. </font><font style="vertical-align: inherit;">ಖಾದರ್‌, &#8216;ಧರ್ಮಸ್ಥಳದ ಧರ್ಮಾಧಿಕಾರಿ ಡಿ. </font><font style="vertical-align: inherit;">ವೀರೇಂದ್ರ ಹೆಗ್ಗಡೆ, ಜಮಾತೆ ಇಸ್ಲಾಮಿ ಹಿಂದ್‌ನ ಮಹಮ್ಮದ್‌ ಕುಂ, ಗುರುರಾಜ </font></font>ಕರ್ಜಗಿ, ರಾಜಯೋಗಿನಿ ಬ್ರಹ್ಮಕುಮಾರಿ ಆಶಾ ದೀದಿ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಅವರಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ಆಯ್ಕೆಯಾಗಿದ್ದಾರೆ&#8217; ಎಂದು ತಿಳಿಸಿದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿ<font style="vertical-align: inherit;"><font style="vertical-align: inherit;">ಕ ವಲಯಗಳಲ್ಲಿ ತೀವ್ರ ಆಕ್ಷೇಪ ಬಂದ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.</font></font></p>
]]></content:encoded>
					
		
		
			</item>
		<item>
		<title>ಸಾರ್ವಜನಿಕ ಹಣ ದುರುಪಯೋಗ: ಬೊಮ್ಮಾಯಿ ವಿರುದ್ಧ ರಮೇಶ್‌ ಬಾಬು ಆರೋಪ</title>
		<link>https://peepalmedia.com/misappropriation-of-public-funds-ramesh-babu-accused-against-bommai/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 20 Oct 2022 10:56:28 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜಕೀಯ]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[jaggi vasudev]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[public funds]]></category>
		<category><![CDATA[ramesh babu]]></category>
		<guid isPermaLink="false">https://peepalmedia.com/?p=12142</guid>

					<description><![CDATA[ಬೆಂಗಳೂರು: ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ನೀಡುವುದರ ಜೊತೆಗೆ ಮಣ್ಣು ಸಂರಕ್ಷಣೆಯ ಹೆಸರಿನಲ್ಲಿ ಒಂದು ನೂರು ಕೋಟಿ ರೂಪಾಯಿಗಳನ್ನು ನೀಡುವುದರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಅವರ ವೈಯಕ್ತಿಕ ಚಪಲಕ್ಕೆ ಬಲಿಯಾಗಿದ್ದು, ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್‌ ಬಾಬು ಆರೋಪಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ, ಈ ನೆಲದ ಮಣ್ಣು ಮತ್ತು ಬೆಳೆಗಳ ಕುರಿತು ಕ್ರಮ ಕೈಗೊಳ್ಳಲು, ಅದ್ಯಯನ ಮಾಡಲು ಕೃಷಿ ಇಲಾಖೆ, [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ನೀಡುವುದರ ಜೊತೆಗೆ ಮಣ್ಣು ಸಂರಕ್ಷಣೆಯ ಹೆಸರಿನಲ್ಲಿ ಒಂದು ನೂರು ಕೋಟಿ ರೂಪಾಯಿಗಳನ್ನು ನೀಡುವುದರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಅವರ ವೈಯಕ್ತಿಕ ಚಪಲಕ್ಕೆ ಬಲಿಯಾಗಿದ್ದು, ಸಾರ್ವಜನಿಕ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್‌ ಬಾಬು ಆರೋಪಿಸಿದ್ದಾರೆ.</p>



<p style="font-size:20px">ಕರ್ನಾಟಕ ರಾಜ್ಯದಲ್ಲಿ, ಈ ನೆಲದ ಮಣ್ಣು ಮತ್ತು ಬೆಳೆಗಳ ಕುರಿತು ಕ್ರಮ ಕೈಗೊಳ್ಳಲು, ಅದ್ಯಯನ ಮಾಡಲು ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ತಜ್ಞರು ಮತ್ತು ಪ್ರಗತಿಶೀಲ ರೈತರು ಇರುತ್ತಾರೆ. ಜಗ್ಗಿ ವಾಸುದೇವ್ ಅವರಂತಹ ವ್ಯಾಪಾರಿ ಮನೋಭಾವದ ದೇವಮಾನವರ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನಸಾಮಾನ್ಯರ ತೆರಿಗೆ ಹಣವನ್ನು ಬೇಕಾಬಿಟ್ಟಿ ವಂಚಕರಿಗೆ ಹಂಚಲು ಬೊಮ್ಮಾಯಿಯವರಿಗೆ ಯಾವುದೇ ಅಧಿಕಾರ ನೈತಿಕತೆ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.</p>



<p style="font-size:20px">ಜಗ್ಗಿ ವಾಸುದೇವ್‌ರವರು ಈ ಹಿಂದೆಯೂ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಣ ಮತ್ತು ಭೂಮಿ ಕೋರಿ ಮನವಿಗಳನ್ನು ಸಲ್ಲಿಸಿದ್ದರು. ಹಿಂದಿನ ಸರ್ಕಾರಗಳು ಇವರ ಮನವಿಯನ್ನು ಪರಿಗಣಿಸಿರಲಿಲ್ಲ. ಕಾವೇರಿ ಕೂಗು ಅಭಿಯಾನದಲ್ಲಿ ಸಂಗ್ರಹವಾದ ಹಣದ ಮಾಹಿತಿ ಬಹಿರಂಗಪಡಿಸದ ಆರೋಪ ಇವರ ಮೇಲಿದೆ. ತಮಿಳುನಾಡಿನ ಕೊಯಮತ್ತೂರಿನ ಭೂ ಹಗರಣ, ಸರ್ಕಾರಕ್ಕೆ ತೆರಿಗೆ ವಂಚನೆ ಆರೋಪ, ಅರಣ್ಯ ಭೂಮಿಯ ಒತ್ತುವರಿ ಮುಂತಾದ ಆರೋಪಗಳು ಇವರ ಮೇಲೆ ಮತ್ತು ಇವರ ಪೌಂಡೇಷನ್ ಮೇಲೆ ಇರುತ್ತದೆ. ರಾಜ್ಯಕ್ಕೆ ಉಪಯೋಗವಿಲ್ಲದ ನಕಲು ಮಾಡಿದ ಯೋಜನೆಗೆ ಹಣ ನೀಡುವ ಮೂಲಕ ಬೊಮ್ಮಾಯಿಯವರು ತಪ್ಪನ್ನು ಎರಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p style="font-size:20px">ಒಂದು ಕಡೆ ಸರ್ಕಾರದ ಹಣವನ್ನು ಬೇಕಾಬಿಟ್ಟಿ ಹಂಚಿಕೆ ಮಾಡುವ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಪುಣ್ಯಕೋಟಿ ಯೋಜನೆಗೆ ಭಿಕ್ಷೆ ಬೇಡುತ್ತಾರೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ನೌಕರರ ನ್ಯಾಯಯುತ ಬೇಡಿಕೆಗಳನ್ನು ಬಾಕಿಯಿಟ್ಟು, ಪುಣ್ಯಕೋಟಿ ಯೋಜನೆಗೆ ಹಣ ನೀಡಿದರೆ ಬೇಡಿಕೆಗಳನ್ನು ಈಡೇರಿಸುವ ಆಮಿಷ ಒಡ್ಡಿ ನೂರು ಕೋಟಿ ರೂಪಾಯಿಗಳ ಒಂದು ದಿನದ ವೇತನ ನೀಡಲು ಸಂಘದಿಂದ ಒಪ್ಪಿಗೆ ಪತ್ರ ಪಡೆಯುತ್ತಾರೆ. ಜಗ್ಗಿ ವಾಸುದೇವ್‌ ಅವರಿಗೆ ಕಾರಣವಿಲ್ಲದೆ ಜನರ ತೆರಿಗೆ ಹಣವನ್ನು ನೀಡಿ ರಾಜ್ಯವನ್ನು ವಂಚಿಸಿರುವ ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರಿಂದ ವಂತಿಗೆ ಪಡೆಯುವ ನೈತಿಕತೆ ಇದೆಯೇ? ಎಂದು ಕಿಡಿಕಾರಿದ್ದಾರೆ.</p>



<p style="font-size:20px">ರಾಜ್ಯ ಸರ್ಕಾರ ಇದುವರೆಗೆ ಏಳನೇ ವೇತನ ಆಯೋಗವನ್ನು ರಚಿಸಿರಲ್ಲ, ನೌಕರರಿಗೆ 18 ತಿಂಗಳ ತುಟ್ಟಿಭತ್ಯೆ ನೀಡಿಲ್ಲ, ಖಾಲಿಯಿರುವ ಹುದ್ದೆಗಳನ್ನು ತುಂಬಿಕೊಂಡಿಲ್ಲ, ವರ್ಗಾವಣೆ ನೀತಿ ಭ್ರಷ್ಟಮಯವಾಗಿದೆ. ಸರ್ಕಾರ ಘೋಷಣೆ ಮಾಡಿದ ಸ್ಥಳಗಳಲ್ಲಿ ಗೋಶಾಲೆಗಳೇ ಇರುವುದಿಲ್ಲ. ರಾಜ್ಯದ ರೈತರಿಗೆ ಸ್ಪಂದಿಸದ ಸರ್ಕಾರ ಜಗ್ಗಿ ವಾಸುದೇವ್‌ಗೆ ತಲೆಬಾಗುತ್ತದೆ. ಪುಣ್ಯಕೋಟಿ ಹೆಸರಿನಲ್ಲಿ ದಂದೆ ಮಾಡುವ ಅನಿವಾರ್ಯತೆ ಸೃಷ್ಟಿ ಮಾಡುತ್ತದೆ ಎಂದು ದೂರಿದ್ದಾರೆ.</p>



<p style="font-size:20px">ಜಗ್ಗಿ ವಾಸುದೇವ್‌ರವರ ಮೇಲೆ ಆರೋಪಗಳ ಜೊತೆಗೆ ಪ್ರಕರಣಗಳೂ ನ್ಯಾಯಾಲಯದಲ್ಲಿ ಬಾಕಿಯಿರುತ್ತವೆ. ಕಳಂಕಿತರಿಗೆ ಮತ್ತು ಆರೋಪಿತರಿಗೆ ರಾಜ್ಯ ಸರ್ಕಾರದ ಹಣವನ್ನು ಹಂಚಿಕೆ ಮಾಡುವ ಪ್ರವೃತ್ತಿ ಸಾರ್ವಜನಿಕ ಹಿತದೃಷ್ಟಿಯಿಂದ ನಿಲ್ಲಬೇಕಾಗಿದೆ. ಹೀಗಾಗಿ ಬಸವರಾಜ ಬೊಮ್ಮಾಯಿಯವರು ಜಗ್ಗಿ ವಾಸುದೇವ್ ಪೌಂಡೇಷನ್ ಜೊತೆಯಲ್ಲಿ ಮಾಡಿಕೊಂಡಿರುವ ಒಪ್ಪಂದ (MOU) ರದ್ದುಪಡಿಸಿ, ಹಂಚಿಕೆಯಾದ ಜಮೀನು ವಾಪಸ್ಸು ಪಡೆದು ರಾಜ್ಯದ ಜನರ ಕ್ಷಮೆ ಕೇಳಲಿ ಎಂದಿದ್ದಾರೆ.</p>
]]></content:encoded>
					
		
		
			</item>
	</channel>
</rss>
