<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>RAMESH KASHYAP &#8211; Peepal Media</title>
	<atom:link href="https://peepalmedia.com/tag/ramesh-kashyap/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Mon, 05 Dec 2022 13:46:19 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>RAMESH KASHYAP &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಟೀಸರ್ ಮೂಲಕ ಕುತೂಹಲ ಹುಟ್ಟಿಸಿರುವ &#8216;ರಾಕ್ಷಸರು&#8217;</title>
		<link>https://peepalmedia.com/rakshasru-which-has-aroused-curiosity-through-the-teaser/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 05 Dec 2022 13:46:19 +0000</pubDate>
				<category><![CDATA[ಸಿನಿಮಾ]]></category>
		<category><![CDATA[AJAY KUMAR]]></category>
		<category><![CDATA[FILM NEWS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[RAJASHEKAR]]></category>
		<category><![CDATA[RAKSHASARU]]></category>
		<category><![CDATA[RAMESH KASHYAP]]></category>
		<category><![CDATA[SAYI KIMAR]]></category>
		<category><![CDATA[teaser]]></category>
		<guid isPermaLink="false">https://peepalmedia.com/?p=17618</guid>

					<description><![CDATA[ಬೆಂಗಳೂರು: ಹಿರಿಯ ನಟ ಸಾಯಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ &#8216;ರಾಕ್ಷಸರು&#8217; ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಇದೇ ಡಿಸೆಂಬರ್ 16 ರಂದು ತೆರೆ ಕಾಣುತ್ತಿದೆ. ಟೀಸರ್ ಸಹ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. &#8216;ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರ&#8217; ಎಂಬ ಅಡಿಬರಹ ಈ ಚಿತ್ರಕ್ಕಿದೆ. ಚಿತ್ರಕ್ಕೆ ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿದ್ದು ಸಂಭಾಷಣೆಗೆ ರಾಜಶೇಖರ್ ಪೆನ್ನು ಕೆಲಸ ಮಾಡಿದೆ.ರಜತ್ ಈ ಚಿತ್ರವನ್ನು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಹಿರಿಯ ನಟ ಸಾಯಿಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ &#8216;ರಾಕ್ಷಸರು&#8217; ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಇದೇ ಡಿಸೆಂಬರ್ 16 ರಂದು ತೆರೆ ಕಾಣುತ್ತಿದೆ. </p>



<p>ಟೀಸರ್ ಸಹ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. &#8216;ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರ&#8217; ಎಂಬ ಅಡಿಬರಹ ಈ ಚಿತ್ರಕ್ಕಿದೆ.</p>



<p>ಚಿತ್ರಕ್ಕೆ ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿದ್ದು ಸಂಭಾಷಣೆಗೆ ರಾಜಶೇಖರ್ ಪೆನ್ನು ಕೆಲಸ ಮಾಡಿದೆ.<br>ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಯಶಸ್ವಿ ನಿರ್ಮಾಪಕ ರಮೇಶ್ ಕಶ್ಯಪ್ &#8216;ಗರುಡಾದ್ರಿ ಸಿನಿಮಾಸ್&#8217; ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದಾರೆ.</p>



<p>ಟೀಸರ್ ಬಿಡುಗಡೆ ನಂತರ ಸಿನಿಮಾ ಕುರಿತು ನಟ ಸಾಯಿಕುಮಾರ್ ಮಾತಾನಾಡಿ, ನಾನು ನಟನೆ ಆರಂಭಿಸಿ, ಐವತ್ತು ವರ್ಷಗಳಾಗಿದೆ. ಅದರಲ್ಲೂ ಇಪ್ಪತ್ತೈದು ವರ್ಷಗಳ ಹಿಂದೆ ತೆರೆಕಂಡ &#8220;ಪೊಲೀಸ್‌ ಸ್ಟೋರಿ&#8221; ನನಗೆ ಹೆಸರು ತಂದುಕೊಟ್ಟ ಚಿತ್ರ. ಈ ಸಮಯದಲ್ಲಿ ನಾನು ನನ್ನ ತಂದೆ &#8211; ತಾಯಿಯನ್ನು ಸ್ಮರಿಸುತ್ತೇನೆ. &#8220;ಹೆತ್ತವರು&#8221; ಚಿತ್ರದ ನಂತರ ಅಜಯ್ ಕುಮಾರ್ ಅವರೊಂದಿಗೆ &#8220;ರಾಕ್ಷಸರು&#8221; ಚಿತ್ರದಲ್ಲಿ ಕೆಲಸ ಮಾಡಿದ್ದೇನೆ. ನಾನು ಈ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲೇ ಕಾಣಿಸಿಕೊಂಡಿದ್ದೇನೆ ಎಂದರು.</p>



<p>ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಕಥೆಗಾರ ಅಜಯ ಕುಮಾರ್, &#8216;ಇಷ್ಟು ದಿನಗಳು ನಾನು ಸೆಂಟಿಮೆಂಟ್ ಕಥೆಗಳನ್ನು ಬರೆಯುತ್ತಿದ್ದೆ. ಈ ಭಾರಿ ಅದಕ್ಕೆ ವಿರುದ್ದವಾಗಿ ಮೊದಲ ಸಲ ಕ್ರೈಮ್, ಥ್ರಿಲ್ಲರ್, ಆ್ಯಕ್ಷನ್ ಕಥೆ ಮಾಡಿದ್ದೇನೆ. ಈ ಚಿತ್ರದಲ್ಲಿ ಹೆಚ್ಚು ಕ್ರೈಮ್ ತೋರಿಸಲಾಗಿದೆ. ಹಾಗಾಗಿ ಎಲ್ಲಾ ಭಾಷೆಗಳಲ್ಲೂ ಸೆನ್ಸಾರ್ ಮಂಡಳಿ ಕೆಲವು ದೃಶ್ಯಗಳನ್ನು ತೆಗೆಯಲು ಹೇಳಿದರು‌. ಅದರಿಂದ ಸ್ವಲ್ಪ ವಿಳಂಬವಾಯಿತು. ಈಗ ಬಿಡುಗಡೆ ಹಂತಕ್ಕೆ ಬಂದಿದೆ. ನಮ್ಮ ಸುತ್ತಮುತ್ತ ನಡೆವ ಘಟನೆಗಳನ್ನೇ ತೆಗೆದುಕೊಂಡು ಕಥೆ ಮಾಡಲಾಗಿದೆ.<br>ಚಿತ್ರದಲ್ಲಿ ಕ್ರೈಮ್ ಹೆಚ್ಚಾಗಿದ್ದರು, ಎಲ್ಲರೂ ನೋಡಲೇ ಬೇಕಾದ ಸಿನಿಮಾ ಇದು ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.</p>



<p>ನಂತರ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿರುವ ಥ್ರಿಲ್ಲರ್ ಮಂಜು ಮಾತನಾಡಿ &#8216;ಈ ಚಿತ್ರದಲ್ಲಿ ಅದ್ಭುತವಾದ ಆ್ಯಕ್ಷನ್ ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು, 8 ಆ್ಯಕ್ಷನ್ ಗಳು ಇವೆ. ಇದರಲ್ಲಿ ಒಂದು ಗೀತೆಯನ್ನು ನಾನೇ ಕೊರಿಯೋಕ್ರಾಫಿ ಕೂಡ ಮಾಡಿದ್ದೇನೆ. ಇದೊಂದು ಮೆಸೇಜ್ ಇರುವಂತಹ ಸುಂದರ ಸಿನಿಮಾ. ನಾನು ಸಿನಿಮಾ ನೋಡಿದ್ದೇನೆ. ಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸವಿದೆ&#8217; ಎಂದರು.</p>



<p>ಚಿತ್ರದಲ್ಲಿ ನಟಿಸಿರುವ ಕಲಾವಿದರಾದ ಪುನೀತ್, ಅಂಜಿ, ಜಿತಿನ್ ಅವಿ, ಕಿರಣ್, ಸುನೀಲ್ ಹಾಗೂ ರುಶಿಕಾ ರಾಜ್ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು.</p>



<p>ಚಿತ್ರದ ಬಗ್ಗೆ ಒನ್ ಲೈನ್ ನಲ್ಲಿ ಹೇಳುವುದಾರೆ, ಐದು ಜನ ಕ್ರಿಮಿನಲ್ ಗಳು ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ಈ ಚಿತ್ರವನ್ನು ಆರಕ್ಷಕರಿಗೆ ಅರ್ಪಿಸಲು ನಿರ್ಧರಿಸಿರುವುದಾಗಿ ನಿರ್ಮಾಪಕ ರಮೇಶ್ ಕಶ್ಯಪ್ ತಿಳಿಸಿದರು.</p>



<p>ಎರಡು ಹಾಡುಗಳಿರುವ ಈ‌ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮನು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.</p>



<p>ಡೈಲಾಗ್ ಕಿಂಗ್ ಸಾಯಿಕುಮಾರ್, ರಾಜಶೇಖರ್, ನಾಜರ್, ಸುಮನ್, ಕಿರಣ್ ಸುನೀಲ್, ರುಶಿಕಾ ರಾಜ್, ಅವಿನಾಶ್ ನೀರಜ್ ಯಾದವ್, ಹರ್ಷಿತ್, ಚೈತ್ರ, ಮಾನಸ, ಆಶಾ, ಮಂಜುಳ, ಸುರೇಖ, ರಚನ, ಕಮಲ, ಚಂದ್ರಕಲಾ, ರಾಧ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.</p>
]]></content:encoded>
					
		
		
			</item>
	</channel>
</rss>
