<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>ramya &#8211; Peepal Media</title>
	<atom:link href="https://peepalmedia.com/tag/ramya/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 03 Nov 2022 06:51:34 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>ramya &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ಮೋಹಕ ತಾರೆ ಸಾಥ್: ಇಂದು ಟೀಸರ್ ರಿಲೀಸ್</title>
		<link>https://peepalmedia.com/hostel-hudugaru-bekagiddare-chithrakke-mohaka-taare-sath-indu-teasor-release/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 03 Nov 2022 06:45:43 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[hostel hudugaru bekagiddare]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[puneeth rajkkumar]]></category>
		<category><![CDATA[ramya]]></category>
		<category><![CDATA[writing]]></category>
		<guid isPermaLink="false">https://peepalmedia.com/?p=13895</guid>

					<description><![CDATA[ಬೆಂಗಳೂರು : ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ಈ ಸಿನಿಮಾ ಹೆಸರು ನೀವು ಕೇಳಿರ್ತೀರಾ. ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸಖತ್ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವೀಡಿಯೋಗಳು ನಿಮ್ಮನ್ನು ಸೆಳೆದಿರುತ್ತೆ. ಅದಕ್ಕೂ ಮಿಗಿಲಾಗಿ ಎಲ್ಲರ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದ ವೀಡಿಯೋನಂತೂ ಕಣ್ತುಂಬಿಕೊಂಡಿರ್ತಿರಾ. ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರೋ ಈ ಚಿತ್ರತಂಡ ಇದೀಗ&#160; ಸ್ಯಾಂಡಲ್ ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಅವರನ್ನು [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong> ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ಈ ಸಿನಿಮಾ ಹೆಸರು ನೀವು ಕೇಳಿರ್ತೀರಾ. ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸಖತ್ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವೀಡಿಯೋಗಳು ನಿಮ್ಮನ್ನು ಸೆಳೆದಿರುತ್ತೆ. ಅದಕ್ಕೂ ಮಿಗಿಲಾಗಿ ಎಲ್ಲರ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದ ವೀಡಿಯೋನಂತೂ ಕಣ್ತುಂಬಿಕೊಂಡಿರ್ತಿರಾ. ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರೋ ಈ ಚಿತ್ರತಂಡ ಇದೀಗ&nbsp; ಸ್ಯಾಂಡಲ್ ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕೆ ಕರೆತಂದಿದೆ.</p>



<p>ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್‌ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ಗಮನ ಸೆಳೆದಿತ್ತು. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಟೀಮ್ ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದ್ರೆ ಇಂಟ್ರಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಹೀಗೆ ವಿಭಿನ್ನವಾಗಿ ಸಿನಿಮಾ ಪ್ರಚಾರ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಈ ಚಿತ್ರತಂಡ. ಈ ಬಾರಿ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕಾಗಿ ಕರೆತಂದಿದೆ. ರಮ್ಯಾ ಕೂಡ ಚಿತ್ರತಂಡಕ್ಕೆ ಸಾಥ್ ನೀಡಲು ಒಪ್ಪಿದ್ದು, ಬಹಳ ಖುಷಿಯಿಂದಲೇ ಚಿತ್ರದ ಪ್ರಮೋಷನಲ್ ಕಂಟೆಂಟ್ ವೀಡಿಯೋ ನಲ್ಲಿ ಭಾಗಿಯಾಗಿದ್ದಾರೆ. ನಾಳೆ ಸಂಜೆ ಆರು ಗಂಟೆಗೆ ಮೋಹಕ ತಾರೆ ಭಾಗಿಯಾಗಿರುವ ಚಿತ್ರದ ಪ್ರಮೋಷನಲ್ ಟೀಸರ್ ಬಿಡುಗಡೆ ಮಾಡುತ್ತಿದೆ.</p>



<figure class="wp-block-image size-full"><img fetchpriority="high" decoding="async" width="832" height="577" src="https://peepalmedia.com/wp-content/uploads/2022/11/Screenshot-2022-11-03-121321.jpg" alt="" class="wp-image-13904" srcset="https://peepalmedia.com/wp-content/uploads/2022/11/Screenshot-2022-11-03-121321.jpg 832w, https://peepalmedia.com/wp-content/uploads/2022/11/Screenshot-2022-11-03-121321-300x208.jpg 300w, https://peepalmedia.com/wp-content/uploads/2022/11/Screenshot-2022-11-03-121321-768x533.jpg 768w, https://peepalmedia.com/wp-content/uploads/2022/11/Screenshot-2022-11-03-121321-150x104.jpg 150w, https://peepalmedia.com/wp-content/uploads/2022/11/Screenshot-2022-11-03-121321-218x150.jpg 218w, https://peepalmedia.com/wp-content/uploads/2022/11/Screenshot-2022-11-03-121321-696x483.jpg 696w" sizes="(max-width: 832px) 100vw, 832px" /></figure>



<p>ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರದ ಕಥೆ ಮೊದಲು ಕೇಳಿದವರು ಮತ್ತದೇ ನಮ್ಮೆಲ್ಲರ ಪ್ರೀತಿಯ ರಾಜರತ್ನ ಪುನೀತ್ ರಾಜ್ ಕುಮಾರ್. ಚಿತ್ರತಂಡ ಈ ಸಿನಿಮಾ ಚಿತ್ರೀಕರಣಕ್ಕೂ ಮೊದಲು ಅಪ್ಪು ಅವರ ಬಳಿ ಹೋಗಿ ಸಿನಿಮಾ ಬಗ್ಗೆ ಮಾತುಕತೆ ನಡೆಸಿದೆ. ಕಥೆ ಕೇಳಿ ಸಖತ್ ಇಂಪ್ರೆಸ್ ಆದ ಅಪ್ಪು ಸಿನಿಮಾ ಮಾಡಿ ಎಂದು ಇಡೀ ತಂಡಕ್ಕೆ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದರಂತೆ. ಅವರ ಆರ್ಶೀವಾದದೊಂದಿಗೆ ಸಿನಿಮಾ ಚಿತ್ರೀಕರಣ ಆರಂಭಿಸಿದ್ವಿ ಎಂದು ನಿರ್ಮಾಪಕ ವರುಣ್ ಕುಮಾರ್ ಹಾಗೂ ಪ್ರಜ್ವಲ್ ಬಿಪಿ ತಿಳಿಸಿದ್ದಾರೆ.</p>



<p>ಯೂತ್ ಸಬ್ಜೆಕ್ಟ್ ಒಳಗೊಂಡ&nbsp; ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಪ್ಲ್ಯಾನ್ ನಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.</p>
]]></content:encoded>
					
		
		
			</item>
		<item>
		<title>ಕರ್ನಾಟಕ ಯಾತ್ರೆ ಮುಗಿಸಿದ ಭಾರತ ಜೋಡೋ ; ರಾಹುಲ್ ರನ್ನು ಅದ್ಧೂರಿಯಾಗಿ ಬೀಳ್ಕೊಟ್ಟ ಕನ್ನಡಿಗರು</title>
		<link>https://peepalmedia.com/bharat-jodo-after-completing-the-karnataka-yatra-the-mirrors-that-rahul-bid-farewell-to/</link>
		
		<dc:creator><![CDATA[Peepal Media]]></dc:creator>
		<pubDate>Sun, 23 Oct 2022 02:57:48 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bharath jodo yathre]]></category>
		<category><![CDATA[bharatha aikyatha yathre]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[ramya]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=12618</guid>

					<description><![CDATA[ನಿನ್ನೆ ರಾಯಚೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡಿತು. ಕರುನಾಡಿನ ನೆಲದಿಂದ ರಾಹುಲ್ ಗಾಂಧಿಯವರನ್ನು ಬೀಳ್ಕೊಡಲು ಲಕ್ಷಗಟ್ಟಲೆ ಜನ ಅಭಿಮಾನಿಗಳು, ಕಾರ್ಯಕರ್ತರು ಬಂದದ್ದು ವಿಶೇಷ. ರಾಯಚೂರು ನಗರದಲ್ಲಿ ಶನಿವಾರ ನಡೆದ ಪಾದಯಾತ್ರೆ ಅದ್ಧೂರಿಯಾಗಿ ನೆರವೇರಿತು. ಮಂತ್ರಾಲಯ ಮಾರ್ಗದ ಬೃಂದಾವನ ಹೋಟೆಲ್ ನಿಂದ ಪ್ರಾರಂಭವಾದ ಪಾದಯಾತ್ರೆಯ ಜನಸಾಗರ 2 ಕಿಲೋಮೀಟರ್ ವರೆಗೂ ಹಬ್ಬಿತ್ತು. ವಾಲ್ಕಟ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ 70,000 ಆಸನಗಳ ವ್ಯವಸ್ಥೆ ಮಾಡಿದ್ದರೂ ಅಷ್ಟೂ ಆಸನಗಳು ಭರ್ತಿಯಾಗಿ, ಸುತ್ತಲೂ ಸಾವಿರಾರು ಜನರು [&#8230;]]]></description>
										<content:encoded><![CDATA[
<figure class="wp-block-image size-large"><img decoding="async" width="1024" height="614" src="https://peepalmedia.com/wp-content/uploads/2022/10/IMG_20221023_081656-1024x614.jpg" alt="" class="wp-image-12619" srcset="https://peepalmedia.com/wp-content/uploads/2022/10/IMG_20221023_081656-1024x614.jpg 1024w, https://peepalmedia.com/wp-content/uploads/2022/10/IMG_20221023_081656-300x180.jpg 300w, https://peepalmedia.com/wp-content/uploads/2022/10/IMG_20221023_081656-768x461.jpg 768w, https://peepalmedia.com/wp-content/uploads/2022/10/IMG_20221023_081656-150x90.jpg 150w, https://peepalmedia.com/wp-content/uploads/2022/10/IMG_20221023_081656-696x418.jpg 696w, https://peepalmedia.com/wp-content/uploads/2022/10/IMG_20221023_081656-1068x641.jpg 1068w, https://peepalmedia.com/wp-content/uploads/2022/10/IMG_20221023_081656.jpg 1080w" sizes="(max-width: 1024px) 100vw, 1024px" /></figure>



<p style="font-size:20px">ನಿನ್ನೆ ರಾಯಚೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡಿತು. ಕರುನಾಡಿನ ನೆಲದಿಂದ ರಾಹುಲ್ ಗಾಂಧಿಯವರನ್ನು ಬೀಳ್ಕೊಡಲು ಲಕ್ಷಗಟ್ಟಲೆ ಜನ ಅಭಿಮಾನಿಗಳು, ಕಾರ್ಯಕರ್ತರು ಬಂದದ್ದು ವಿಶೇಷ.</p>



<p style="font-size:20px">ರಾಯಚೂರು ನಗರದಲ್ಲಿ ಶನಿವಾರ ನಡೆದ ಪಾದಯಾತ್ರೆ ಅದ್ಧೂರಿಯಾಗಿ ನೆರವೇರಿತು. ಮಂತ್ರಾಲಯ ಮಾರ್ಗದ ಬೃಂದಾವನ ಹೋಟೆಲ್ ನಿಂದ ಪ್ರಾರಂಭವಾದ ಪಾದಯಾತ್ರೆಯ ಜನಸಾಗರ 2 ಕಿಲೋಮೀಟರ್ ವರೆಗೂ ಹಬ್ಬಿತ್ತು. ವಾಲ್ಕಟ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ 70,000 ಆಸನಗಳ ವ್ಯವಸ್ಥೆ ಮಾಡಿದ್ದರೂ ಅಷ್ಟೂ ಆಸನಗಳು ಭರ್ತಿಯಾಗಿ, ಸುತ್ತಲೂ ಸಾವಿರಾರು ಜನರು ಸಭೆಯನ್ನು ವೀಕ್ಷಿಸಿದರು.</p>



<p style="font-size:20px">ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, &#8220;ಕರ್ನಾಟಕದಲ್ಲಿ ನಡೆದ ಅಷ್ಟೂ ದಿನದ ಪಾದಯಾತ್ರೆ ನನಗೆ ಅತೀವ ಸಂತೋಷ ತಂದಿದೆ. ಸಹಕರಿಸಿದ ಕರ್ನಾಟಕದ ಜನತೆಗೆ ಅನಂತ ಧನ್ಯವಾದಗಳು. ನನ್ನ ಕುಟುಂಬಕ್ಕೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ನನ್ನ ಅಜ್ಜಿ ಇಂದಿರಾಗಾಂಧಿಯವರನ್ನು ಚಿಕ್ಕಮಗಳೂರಿನಿಂದ, ನನ್ನ ತಾಯಿ ಸೋನಿಯಾಗಾಂಧಿಯವರನ್ನು ಬಳ್ಳಾರಿಯಿಂದ ಗೆಲ್ಲಿಸಿಕೊಟ್ಟದ್ದು ಕರ್ನಾಟಕದ ಜನತೆ. ಇದನ್ನು ಎಂದಿಗೂ ನಾವು ಮರೆಯುವುದಿಲ್ಲ&#8221; ಎಂದು ಹೇಳಿ ರಾಜ್ಯದ ಜನತೆಗೆ ದೀಪಾವಳಿ ಶುಭಾಶಯ ಕೋರಿದರು.</p>



<p style="font-size:20px">&#8220;ಕರ್ನಾಟಕದಲ್ಲಿ 500 ಕಿಲೋಮೀಟರ್ ಗೂ ಹೆಚ್ಚು ದೂರ ಹೆಜ್ಜೆ ಹಾಕಿದ್ದು ಒಂದು ಐತಿಹಾಸಿಕ ಪಾದಯಾತ್ರೆಯಾಗಿದೆ. ದಾರಿಯ ಉದ್ದಕ್ಕೂ ಕರ್ನಾಟಕದ ನಾನಾ ರೀತಿಯ ಜನರನ್ನು ನೋಡಿದೆ. ಅವರ ಕಷ್ಟ, ಸುಖಗಳನ್ನು ಆಲಿಸಿದೆ. ಇಲ್ಲಿಯವರೆಗೂ ನನ್ನನ್ನು ತಂದು ಬೀಳ್ಕೊಡಲು ಬಂದ ನಾಡಿನ ಜನತೆಗೆ ನಾನು ಸದಾ ಆಭಾರಿಯಾಗಿದ್ದೇನೆ. ಬಿಸಿಲು, ಚಳಿ, ಮಳೆ, ಬಿರುಗಾಳಿಗೂ ಲೆಕ್ಕಿಸದೆ ನಮ್ಮ ಯಾತ್ರೆ ಮುನ್ನಡೆದಿದೆ. ಎಂತಹ ಶಕ್ತಿಗೂ ನಮ್ಮನ್ನು ತಡೆಯಲಾಗದು. ನಾವು ಕಾಶ್ಮೀರದಲ್ಲೇ ನಮ್ಮ ಯಾತ್ರೆ ಮುಗಿಸಲಿದ್ದೇವೆ&#8221; ಎಂದು ರಾಹುಲ್ ಗಾಂಧಿ ಹೇಳಿದಾಗ ನೆರೆದಿದ್ದ ಲಕ್ಷಾಂತರ ಮಂದಿ ಒಮ್ಮೆಲೇ ಉದ್ಗಾರ, ಚಪ್ಪಾಳೆ ಮೂಲಕ ಜಯಘೋಷ ಮೆರೆದದ್ದು ವಿಶೇಷವಾಗಿತ್ತು.</p>



<p style="font-size:20px">ನಿನ್ನೆಯ ಪಾದಯಾತ್ರೆಯಲ್ಲಿ ರಾಜ್ಯದ ಬಹುತೇಕ ಕಾಂಗ್ರೆಸ್ ನಾಯಕರು ಭಾಗವಹಿಸಿ ಕರ್ನಾಟಕದಿಂದ ಬೀಳ್ಕೊಟ್ಟರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೃಷ್ಣ ಭೈರೇಗೌಡ ಸೇರಿದಂತೆ ನೂರಾರು ಮಂದಿ ರಾಜ್ಯ ನಾಯಕರು ರಾಹುಲ್ ಜೊತೆಗೆ ಹೆಜ್ಜೆ ಹಾಕಿದರು.</p>



<p style="font-size:20px"><strong>ಯಾತ್ರೆಯಲ್ಲಿ ಮಾಜಿ ಸಂಸದೆ ರಮ್ಯಾ ಭಾಗಿ, ಜಾಲತಾಣಗಳಲ್ಲಿ ಫೋಟೋಗಳು ವೈರಲ್</strong><br>ಕರ್ನಾಟಕದಲ್ಲಿ ನಿನ್ನೆಗೆ ಕೊನೆಗೊಂಡ ಪಾದಯಾತ್ರೆಯಲ್ಲಿ ಮಾಜಿ ಸಂಸದೆ, ಚಿತ್ರನಟಿ ರಮ್ಯಾ ಭಾಗಿಯಾದದ್ದು ಕರ್ನಾಟಕದ ಪಾದಯಾತ್ರೆಯ ಹೈಲೈಟ್ ಗಳಲ್ಲಿ ಒಂದು. ಮಂತ್ರಾಲಯ ರಸ್ತೆಯಲ್ಲಿರುವ ಐಬಿ ಕಾಲೋನಿಯಿಂದ ಸಾರ್ವಜನಿಕ ಸಭೆ ನಡೆಯುವ ಸ್ಥಳವಾದ ವಾಲ್ಕಟ್ ಮೈದಾನದ ವರೆಗೂ ನಟಿ ರಮ್ಯಾ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ಜೊತೆಗೆ ಹೆಜ್ಜೆ ಹಾಕಿದರು. ಶನಿವಾರ ಸಂಜೆಯಿಂದಲೇ ರಮ್ಯಾ ಭಾಗಿಯಾದ ಫೋಟೋಗಳು ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಮ್ ಗಳಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಹಂಚಿಕೊಂಡು ವೈರಲ್ ಆಗಿದ್ದವು.</p>



<figure class="wp-block-image size-full"><img decoding="async" width="720" height="720" src="https://peepalmedia.com/wp-content/uploads/2022/10/FB_IMG_1666492790175.jpg" alt="" class="wp-image-12620" srcset="https://peepalmedia.com/wp-content/uploads/2022/10/FB_IMG_1666492790175.jpg 720w, https://peepalmedia.com/wp-content/uploads/2022/10/FB_IMG_1666492790175-300x300.jpg 300w, https://peepalmedia.com/wp-content/uploads/2022/10/FB_IMG_1666492790175-150x150.jpg 150w, https://peepalmedia.com/wp-content/uploads/2022/10/FB_IMG_1666492790175-696x696.jpg 696w, https://peepalmedia.com/wp-content/uploads/2022/10/FB_IMG_1666492790175-24x24.jpg 24w, https://peepalmedia.com/wp-content/uploads/2022/10/FB_IMG_1666492790175-48x48.jpg 48w, https://peepalmedia.com/wp-content/uploads/2022/10/FB_IMG_1666492790175-96x96.jpg 96w" sizes="(max-width: 720px) 100vw, 720px" /></figure>



<p style="font-size:20px">ಇಷ್ಟು ದಿನಗಳ ವರೆಗೂ ರಮ್ಯಾ ಪಾದಯಾತ್ರೆಯಲ್ಲಿ ಭಾಗವಹಿಸದ ಬಗ್ಗೆ ಸಣ್ಣಪುಟ್ಟ ಮಾತುಗಳು ಕೇಳಿಬಂದಿತ್ತು. ಆದರೆ ಹಲವು ಅಭಿಮಾನಿಗಳ ನಿರೀಕ್ಷೆಯಂತೆ ರಮ್ಯಾ ಭಾಗಿಯಾದರು. ಜಾಲತಾಣಗಳಲ್ಲಿ ಅಸಂಖ್ಯ ಅಭಿಮಾನಿಗಳು ರಮ್ಯಾ ಭಾಗಿಯ ಬಗ್ಗೆ ಸಂತಸ ವ್ಯಕ್ತಪಡಿಸಿ, ಬಹು ನಿರೀಕ್ಷಿತ ಆಗಮನ ಇದು ಎಂದು ಬರೆದುಕೊಂಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಚಿತ್ರನಟಿ ರಮ್ಯಾ</title>
		<link>https://peepalmedia.com/abimanigalige-sihi-suddi-needida-ramya/</link>
		
		<dc:creator><![CDATA[Peepal Media]]></dc:creator>
		<pubDate>Wed, 31 Aug 2022 08:06:53 +0000</pubDate>
				<category><![CDATA[ಸಿನಿಮಾ]]></category>
		<category><![CDATA[actors]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[movie]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[ramya]]></category>
		<category><![CDATA[sinema]]></category>
		<guid isPermaLink="false">https://peepalmedia.com/?p=3417</guid>

					<description><![CDATA[ನಿನ್ನೆಯ ದಿನ ಹೊಸ ಸುದ್ದಿ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಚಿತ್ರನಟಿ ರಮ್ಯಾ ತಮ್ಮ ಅಭಿಮಾನಿಗಳು ಮತ್ತು ಸಿನಿಮಾಸಕ್ತರಲ್ಲಿ ಕುತೂಹಲ ಮೂಡಿಸಿದ್ದರು. ಈಗಾಗಲೇ ರಮ್ಯಾ ಚಿತ್ರರಂಗಕ್ಕೆ ಮರು ಪ್ರವೇಶದ ಅವರ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇತ್ತು. ಅದಕ್ಕೆ ಸರಿಯಾಗಿ ರಮ್ಯಾ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ. ಈ ಬಗ್ಗೆ ರಮ್ಯಾ ತಮ್ಮ ಅಧಿಕೃತ ಫೇಸ್ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಚಿತ್ರರಂಗದಲ್ಲಿ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅವರ ಸಂದೇಶ ಈ ಕೆಳಕಂಡಂತಿದೆ. ಪ್ರಗತಿಪರ [&#8230;]]]></description>
										<content:encoded><![CDATA[
<p class="has-medium-font-size">ನಿನ್ನೆಯ ದಿನ ಹೊಸ ಸುದ್ದಿ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಚಿತ್ರನಟಿ ರಮ್ಯಾ ತಮ್ಮ ಅಭಿಮಾನಿಗಳು ಮತ್ತು ಸಿನಿಮಾಸಕ್ತರಲ್ಲಿ ಕುತೂಹಲ ಮೂಡಿಸಿದ್ದರು. ಈಗಾಗಲೇ ರಮ್ಯಾ ಚಿತ್ರರಂಗಕ್ಕೆ ಮರು ಪ್ರವೇಶದ ಅವರ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇತ್ತು. ಅದಕ್ಕೆ ಸರಿಯಾಗಿ ರಮ್ಯಾ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ.</p>



<p class="has-medium-font-size">ಈ ಬಗ್ಗೆ ರಮ್ಯಾ ತಮ್ಮ ಅಧಿಕೃತ ಫೇಸ್ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಚಿತ್ರರಂಗದಲ್ಲಿ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅವರ ಸಂದೇಶ ಈ ಕೆಳಕಂಡಂತಿದೆ.</p>



<div class="wp-block-cover is-light"><span aria-hidden="true" class="wp-block-cover__background has-light-green-cyan-background-color has-background-dim-100 has-background-dim"></span><div class="wp-block-cover__inner-container is-layout-flow wp-block-cover-is-layout-flow">
<p class="has-medium-font-size"><strong>ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ &#8216;ಆಪಲ್ ಬಾಕ್ಸ್ ಸ್ಟುಡಿಯೋಸ್&#8217; ನ ಮೂಲಕ ನಿರ್ಮಾಪಕಿ ಆಗಲಿದ್ದೇನೆ ಎನ್ನುವುದು ವಿಶೇಷ.</strong></p>



<p class="has-medium-font-size"><strong>ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್ ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮೆರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ.</strong></p>



<p class="has-medium-font-size"><strong>ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ OTT ಪ್ಲಾಟಫಾರಂಗಳಿಗಾಗಿ ಸಿನೆಮಾ ಹಾಗೂ ವೆಬ್ ಸೀರಿಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟುಡಿಯೋಸ್ ಸಿದ್ಧವಾಗುತ್ತಿದೆ.</strong></p>



<p class="has-medium-font-size"><strong>ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್ ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ.</strong></p>



<p class="has-medium-font-size"><strong>ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾ ವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ಪೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು.</strong></p>



<p class="has-medium-font-size"><strong>ಇದರ ಜೊತೆಗೆ ವಿಜಯ ಕಿರಗಂದೂರು, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು.</strong></p>



<p class="has-medium-font-size"><strong>ಹೊಸ ಆರಂಭದತ್ತ ಹೆಜ್ಜೆ ಇಡುತ್ತಾ</strong><br><strong>ಕೃತಜ್ಞತೆಗಳೊಂದಿಗೆ</strong><br><strong>ರಮ್ಯಾ</strong></p>
</div></div>



<p class="has-medium-font-size">ಪ್ರಗತಿಪರ ಆಲೋಚನೆ, ಒಳ್ಳೆಯ ಉದ್ದೇಶಗಳನ್ನು ಹೊಂದಿರುವ ರಮ್ಯಾ ಅವರಿಂದ ಅವರ ನಿರ್ಮಾಣ ಸಂಸ್ಥೆಯ ಕಡೆಯಿಂದ ಈ ಮೂಲಕ ಸದಭಿರುಚಿಯ, ವಿಶಿಷ್ಟ ಪ್ರಯೋಗದ ಚಿತ್ರಗಳನ್ನು ನಿರೀಕ್ಷಿಸಬಹುದು. ರಮ್ಯಾ ಅವರ ಹೊಸ ನಿರ್ಮಾಣ ಸಂಸ್ಥೆ &#8216;ಆಪಲ್ ಬಾಕ್ಸ್ ಸ್ಟುಡಿಯೋಸ್&#8217; ಚಿತ್ರರಂಗದಲ್ಲಿ ಹೆಚ್ಚು ಎತ್ತರಕ್ಕೆ ಬೆಳೆಯಲಿ ಎಂಬುದೂ ನಮ್ಮ ಹಾರೈಕೆ.</p>
]]></content:encoded>
					
		
		
			</item>
	</channel>
</rss>
