<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>release &#8211; Peepal Media</title>
	<atom:link href="https://peepalmedia.com/tag/release/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 11 Nov 2022 12:10:45 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>release &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಜೀವ್ ಗಾಂಧಿ ಹಂತಕರ ಬಿಡುಗಡೆ: ಶಿಕ್ಷೆಯಿಂದ ಮುಕ್ತಗೊಳಿಸಿರುವ ಸುಪ್ರೀಂ ಕೋರ್ಟ್‌ನ ಕ್ರಮ &#8216;ಸ್ವೀಕಾರಾರ್ಹವಲ್ಲ&#8217;ಎಂದ ಕಾಂಗ್ರೆಸ್</title>
		<link>https://peepalmedia.com/release-of-rajiv-gandhi-killers-congress-says-supreme-courts-acquittal-unacceptable/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 11 Nov 2022 12:10:43 +0000</pubDate>
				<category><![CDATA[ದೇಶ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[New Delhi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rajiv gandhi]]></category>
		<category><![CDATA[Rajiv Gandhi killers]]></category>
		<category><![CDATA[release]]></category>
		<category><![CDATA[Supreme Court]]></category>
		<guid isPermaLink="false">https://peepalmedia.com/?p=15296</guid>

					<description><![CDATA[ಹೊಸದಿಲ್ಲಿ: ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಆರು ಜನ ಹಂತಕರನ್ನು ಬಿಡುಗಡೆ ಮಾಡುವ ತನ್ನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಇದನ್ನು ʼದುರದೃಷ್ಟಕರʼ ಮತ್ತು ʼಸ್ವೀಕಾರಾರ್ಹವಲ್ಲʼ ಎಂದು ಅಸಮಧಾನ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌ ಸಂಸದ ಮತ್ತು ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ರವರು, ʼಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಕೊಂದ ಹಂತಕರನ್ನು ಬಿಡುಗಡೆ ಮಾಡುವ [&#8230;]]]></description>
										<content:encoded><![CDATA[
<p>ಹೊ<strong>ಸದಿಲ್ಲಿ:</strong> ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಆರು ಜನ ಹಂತಕರನ್ನು ಬಿಡುಗಡೆ ಮಾಡುವ ತನ್ನ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸುತ್ತಿದ್ದಂತೆ, ಕಾಂಗ್ರೆಸ್ ಪಕ್ಷವು ಇದನ್ನು ʼದುರದೃಷ್ಟಕರʼ ಮತ್ತು ʼಸ್ವೀಕಾರಾರ್ಹವಲ್ಲʼ ಎಂದು ಅಸಮಧಾನ ವ್ಯಕ್ತಪಡಿಸಿದೆ.</p>



<p>ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‌ ಸಂಸದ ಮತ್ತು ಸಂವಹನ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ರವರು, ʼಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಕೊಂದ ಹಂತಕರನ್ನು ಬಿಡುಗಡೆ ಮಾಡುವ ಸುಪ್ರೀಂ ಕೋರ್ಟ್‌ ನಿರ್ಧಾರವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷವು ಇದನ್ನು ಸ್ಪಷ್ಟವಾಗಿ ಟೀಕಿಸುತ್ತದೆ ಮತ್ತು ಅದನ್ನು ಸಂಪೂರ್ಣವಾಗಿ ಅಸಮರ್ಥನೀಯವೆಂದು ಪರಿಗಣಿಸುತ್ತದೆʼಎಂದು ಹೇಳಿದರು.</p>



<p>ʼಸರ್ವೋಚ್ಚ ನ್ಯಾಯಾಲಯವು ಈ ವಿಷಯದಲ್ಲಿ ಭಾರತದ ಮನೋಭಾವಕ್ಕೆ ಅನುಗುಣವಾಗಿ ವರ್ತಿಸದಿರುವುದು ಅತ್ಯಂತ ದುರದೃಷ್ಟಕರ ಸಂಗತಿ ಎಂದು ಜೈರಾಮ್ ರಮೇಶ್ ಹೇಳಿದರು.</p>



<p>1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ, ನೆರೆಯ ಶ್ರೀಲಂಕಾದ ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಗುಂಪಿನ ಮಹಿಳಾ ಆತ್ಮಹತ್ಯಾ ಬಾಂಬರ್ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ್ದರು.</p>



<p>ನಳಿನಿ ಶ್ರೀಹರನ್ ಮತ್ತು ಇತರ ಐವರು ಅಪರಾಧಿಗಳನ್ನು ಸುಪ್ರೀಂ ಕೋರ್ಟ್ 33 ವರ್ಷಗಳ ಜೈಲುವಾಸದ ನಂತರ ಬಿಡುಗಡೆ ಮಾಡಿದೆ. ಇಂದು ಬಿಡುಗಡೆಯಾದ ಆರು ಮಂದಿಯಲ್ಲಿ ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ಮುರುಗನ್ ಶ್ರೀಲಂಕಾದ ಪ್ರಜೆಗಳು ಎಂದು ತಿಳಿದುಬಂದಿದೆ.</p>



<p>ಮೇ ತಿಂಗಳಲ್ಲಿ, ಸರ್ವೋಚ್ಚ ನ್ಯಾಯಾಲಯವು ತನ್ನ ಅಸಾಧಾರಣ ಅಧಿಕಾರಗಳನ್ನು ಬಳಸಿಕೊಂಡು ಪೆರಾರಿವಾಲನ್ ಎಂಬ ಏಳನೇ ಅಪರಾಧಿಯನ್ನು ಬಿಡುಗಡೆ ಮಾಡಿತು. ಇದೇ ಆದೇಶವು ಉಳಿದ ಅಪರಾಧಿಗಳಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.</p>



<p>2000ನೇ ಇಸವಿಯಲ್ಲಿ ರಾಜೀವ್ ಗಾಂಧಿ ಅವರ ಪತ್ನಿ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಧ್ಯಪ್ರವೇಶದಿಂದ ನಳಿನಿ ಶ್ರೀಹರನ್ ಅವರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಲಾಗಿತ್ತು. 2008 ರಲ್ಲಿ, ರಾಜೀವ್ ಗಾಂಧಿ ಅವರ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವೆಲ್ಲೂರು ಜೈಲಿನಲ್ಲಿ ಭೇಟಿಯಾದರು. ನಂತರ 2014ರಲ್ಲಿ ಇನ್ನೂ ಆರು ಅಪರಾಧಿಗಳ ಶಿಕ್ಷೆಯನ್ನು ಸಹ ಕಡಿತಗೊಳಿಸಲಾಯಿತು.</p>
]]></content:encoded>
					
		
		
			</item>
		<item>
		<title>ನವೆಂಬರ್‌ 6 ರಂದು, ʼದಯಾ ಗಂಗನಘಟ್ಟʼ ಅವರ ʼಉಪ್ಪುಚ್ಚಿ ಮುಳ್ಳುʼ ಪುಸ್ತಕ ಬಿಡುಗಡೆ</title>
		<link>https://peepalmedia.com/daya-ganganaghatta-avara-uppichhi-mullu-pustaka-bidugade/</link>
		
		<dc:creator><![CDATA[Peepal Media]]></dc:creator>
		<pubDate>Wed, 19 Oct 2022 11:07:14 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[book]]></category>
		<category><![CDATA[daya ganganaghatta]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[release]]></category>
		<guid isPermaLink="false">https://peepalmedia.com/?p=11937</guid>

					<description><![CDATA[ಬೆಂಗಳೂರು: ನವೆಂಬರ್‌ 06 ರಂದು ಚಿತ್ರಕಲಾ ಪರಿಷತ್‌ ಆವರಣದಲ್ಲಿ ಲೇಖಕರಾದ ದಯಾ ಗಂಗನಘಟ್ಟ ಅವರ ʼಉಪ್ಪುಚ್ಚಿ ಮುಳ್ಳುʼ ಕಥಾ ಸಂಕಲನ ಪುಸ್ತಕ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಪುಸ್ತಕವನ್ನು ಹಾಸನದ ಹಾಡ್ಲಹಳ್ಳಿ ಪ್ರಕಾಶನ ಪ್ರಕಟಿಸಿದ್ದು, ಹಿರಿಯ ಲೇಖಕರಾದ ಶ್ರೀ ಹಾಡ್ಲಹಳ್ಳಿ ನಾಗರಾಜ್ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಹಿರಿಯ ವಿಮರ್ಶಕಿ ಡಾ.ಎಂ.ಎಸ್ ಆಶಾದೇವಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕೃತಿಯ ಕುರಿತು ಕಥೆಗಾರರಾದ ಕೇಶವ ಮಳಗಿ ಮತ್ತು ನಾಟಕಕಾರರಾದ ಡಾ. ಬೇಲೂರು ರಘುನಂದನ್ ಅವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ನವೆಂಬರ್‌ 06 ರಂದು ಚಿತ್ರಕಲಾ ಪರಿಷತ್‌ ಆವರಣದಲ್ಲಿ ಲೇಖಕರಾದ ದಯಾ ಗಂಗನಘಟ್ಟ ಅವರ ʼಉಪ್ಪುಚ್ಚಿ ಮುಳ್ಳುʼ ಕಥಾ ಸಂಕಲನ ಪುಸ್ತಕ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.</p>



<p>ಪುಸ್ತಕವನ್ನು ಹಾಸನದ ಹಾಡ್ಲಹಳ್ಳಿ ಪ್ರಕಾಶನ ಪ್ರಕಟಿಸಿದ್ದು, ಹಿರಿಯ ಲೇಖಕರಾದ ಶ್ರೀ ಹಾಡ್ಲಹಳ್ಳಿ ನಾಗರಾಜ್ ಅವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ.</p>



<p>ಹಿರಿಯ ವಿಮರ್ಶಕಿ ಡಾ.ಎಂ.ಎಸ್ ಆಶಾದೇವಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕೃತಿಯ ಕುರಿತು ಕಥೆಗಾರರಾದ ಕೇಶವ ಮಳಗಿ ಮತ್ತು ನಾಟಕಕಾರರಾದ ಡಾ. ಬೇಲೂರು ರಘುನಂದನ್ ಅವರು ಮಾತನಾಡಲಿದ್ದಾರೆ.</p>


<div class="wp-block-image">
<figure class="aligncenter size-large is-resized"><img fetchpriority="high" decoding="async" src="https://peepalmedia.com/wp-content/uploads/2022/10/WhatsApp-Image-2022-10-19-at-4.04.45-PM-679x1024.jpeg" alt="" class="wp-image-11948" width="474" height="710"/></figure></div>


<p>ಈ ಕಾರ್ಯಕ್ರಮದಲ್ಲಿ ಕಥೆಗಾರ್ತಿಯಾದ ದಾಕ್ಷಾಯಿಣಿ ಗಂಗನಘಟ್ಟ, ಪತ್ರಕರ್ತರು ಮತ್ತು ಪ್ರಕಾಶಕರಾದ ಚಲಂ ಹಾಡ್ಲಹಳ್ಳಿ, ಕಾಜಾಣ, ರಂಗಚಂದಿರ, ಶಾರದಾ ಪ್ರತಿಷ್ಠಾನ, ಬೀ ಕಲ್ಚರ್, ರಂಗ ಹೃದಯ, ಜೇನು ಗಿರಿ, ಅಕ್ಷರ ಚಪ್ಪರ ಮತ್ತಿತರರು ಹಾಜರಿರುತ್ತಾರೆ. </p>



<p>ಆರಾಧ್ಯ ಫೌಂಡೇಶನ್ ವಿಜಯನಗರ ವತಿಯಿಂದ ಕಥಾಭಿನಯ ಹಾಗು ಗಂಗನಘಟ್ಟದ ಹಾಡುಗಾರ್ತಿಯರಿಂದ ಸೋಬಾನೆ ಪದ ಕಾರ್ಯಕ್ರಮ ಸಹ ಇರಲಿದೆ.</p>



<p></p>
]]></content:encoded>
					
		
		
			</item>
		<item>
		<title>ಆಶಿಕಿ ಸಾಂಗ್ಸ್ ಆಗಸ್ಟ್ 18ಕ್ಕೆ ಆಡಿಯೋ ರಿಲೀಸ್</title>
		<link>https://peepalmedia.com/ashiki-songs-augest-18-kke-audio-ril/</link>
		
		<dc:creator><![CDATA[Peepal Media]]></dc:creator>
		<pubDate>Sat, 06 Aug 2022 10:43:49 +0000</pubDate>
				<category><![CDATA[ಸಿನಿಮಾ]]></category>
		<category><![CDATA[ashiki]]></category>
		<category><![CDATA[audio]]></category>
		<category><![CDATA[bengalure]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[movie]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[release]]></category>
		<category><![CDATA[sandalwood]]></category>
		<category><![CDATA[songs]]></category>
		<category><![CDATA[writing]]></category>
		<guid isPermaLink="false">https://peepalmedia.com/?p=757</guid>

					<description><![CDATA[ಆಶಿಕಿ ಸಾಂಗ್ಸ್ ಅದಾಕ್ಷಣ ಚಿತ್ರಪ್ರೇಮಿಗಳ ಮನಸ್ಸಿಗೆ ಬರೋದು 1990 ರಲ್ಲಿ ಬಿಡುಗಡೆ ಆದ ರಾಹುಲ್ ರಾಯ್ ಮತ್ತು ಅನು ಆಗರ್ ವಾಲ್ ಅಭಿನಯದ ಆಶಿಕಿ ಸಿನಿಮಾದ ಹಾಡುಗಳು. ಆದರೆ ಈಗ ನಾವು ಮಾತಾಡ್ತಾ ಇರೋದು, ನಮ್ಮ ಕನ್ನಡದ ಅಚ್ಚ ಪ್ರತಿಭೆ ಸಿನಿಮಾ ಪತ್ರಕರ್ತ ಸಂದೀಪ್ ಕುಮಾರ್ ನಾಯಕನಾಗಿ ಅಭಿನಯಿಸಿರೋ ಚಿತ್ರ ಆಶಿಕಿಯ ಬಗ್ಗೆ. &#8216;ಕ್ವಾಟ್ಲೆ&#8217; ಸಿನಿಮಾ ಮೂಲಕ ಚಂದನವನದಲ್ಲಿ ಒಂದಷ್ಟು ಸುದ್ದಿ ಮಾಡಿದ್ದ ನಿರ್ದೇಶಕಿ ಜೆ ಚಂದ್ರಕಲ ಅವರ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಆಶಿಕಿ’ ಸಿನಿಮಾ ಇತ್ತೀಚೆಗೆ [&#8230;]]]></description>
										<content:encoded><![CDATA[
<p class="has-medium-font-size">ಆಶಿಕಿ ಸಾಂಗ್ಸ್ ಅದಾಕ್ಷಣ ಚಿತ್ರಪ್ರೇಮಿಗಳ ಮನಸ್ಸಿಗೆ ಬರೋದು 1990 ರಲ್ಲಿ ಬಿಡುಗಡೆ ಆದ ರಾಹುಲ್ ರಾಯ್ ಮತ್ತು ಅನು ಆಗರ್ ವಾಲ್ ಅಭಿನಯದ ಆಶಿಕಿ ಸಿನಿಮಾದ ಹಾಡುಗಳು. ಆದರೆ ಈಗ ನಾವು ಮಾತಾಡ್ತಾ ಇರೋದು, ನಮ್ಮ ಕನ್ನಡದ ಅಚ್ಚ ಪ್ರತಿಭೆ ಸಿನಿಮಾ ಪತ್ರಕರ್ತ ಸಂದೀಪ್ ಕುಮಾರ್ ನಾಯಕನಾಗಿ ಅಭಿನಯಿಸಿರೋ ಚಿತ್ರ ಆಶಿಕಿಯ ಬಗ್ಗೆ.</p>



<p class="has-medium-font-size">&#8216;ಕ್ವಾಟ್ಲೆ&#8217; ಸಿನಿಮಾ ಮೂಲಕ ಚಂದನವನದಲ್ಲಿ ಒಂದಷ್ಟು ಸುದ್ದಿ ಮಾಡಿದ್ದ ನಿರ್ದೇಶಕಿ ಜೆ ಚಂದ್ರಕಲ ಅವರ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಆಶಿಕಿ’ ಸಿನಿಮಾ ಇತ್ತೀಚೆಗೆ ಮತ್ತೆ ಸೌಂಡ್ ಮಾಡುತ್ತಿದೆ. ಸಾಕಷ್ಟು ನಿರೀಕ್ಷೆಯನ್ನು ಸೃಷ್ಟಿಸಿರುವ ‘ಆಶಿಕಿ’ ಸಿನಿಮಾ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ ಎಲ್ಲರ ಮನಸೂರೆಗೊಳ್ಳಲು ಸಜ್ಜಾಗಿದೆ. ಚಿತ್ರದ ‘ಯಾರಾ ಯಾರಾ’ ಹಾಡಿನ ವೀಡಿಯೋ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೂ ಮುನ್ನುಡಿ ಬರೆದಿದೆ ಚಿತ್ರತಂಡ. ಲಿಯೋ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಸ್ವತಃ ಚಿತ್ರದ ನಿರ್ದೇಶಕಿ ಜೆ ಚಂದ್ರಕಲ ಸಾಹಿತ್ಯ ಬರೆದಿದ್ದು ಅಶ್ವಿನ್ ಶರ್ಮಾ ದನಿಯಾಗಿದ್ದಾರೆ.</p>



<p class="has-medium-font-size">ಮ್ಯೂಸಿಕಲ್ ಲವ್ ಸ್ಟೋರಿ ಹಾಗೂ ತ್ರಿಕೋನ ಪ್ರೇಮಕಥೆ ಹೊತ್ತ ‘ಆಶಿಕಿ’ ಚಿತ್ರದಲ್ಲಿ ಸಾಕಷ್ಟು ವರ್ಷ ಮಾಧ್ಯಮ ರಂಗದಲ್ಲಿ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ&nbsp; ಸಂದೀಪ್ ಕುಮಾರ್ ನಾಯಕರಾಗಿ ಅಭಿನಯಿಸಿದ್ದು ನಾಯಕಿಯಾಗಿ ಐಶ್ವರ್ಯ ಸಿಂಧೋಗಿ, ಹಾಗೂ ಇನ್ನೊಬ್ಬ ನಾಯಕನ ಪಾತ್ರದಲ್ಲಿ ಪ್ರದೀಪ್ ಕುಮಾರ್ ನಟಿಸಿದ್ದು&nbsp; ಗುರುಪ್ರಸಾದ್, ಸುಚೇಂದ್ರ ಪ್ರಸಾದ್, ತುಳಸಿ ಶಿವಮಣಿ, ಪ್ರಮೋದಿನಿ ಚಿತ್ರದ ತಾರಾಬಳಗದಲ್ಲಿದ್ದಾರೆ.&nbsp; ಇತ್ತಿಚೆಗಷ್ಟೆ ಸೆನ್ಸಾರ್ ಮಗಿಸಿರುವ ಆಶಿಕಿ ದಸರಾದಲ್ಲಿ&nbsp; ತೆರೆಗೆ ತರಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದ್ದು ಇದೇ ತಿಂಗಳಲ್ಲಿ ಚಿತ್ರದ ಆಡಿಯೋ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು ಪ್ರತಿ ಹಾಡುಗಳು ವಿಭಿನ್ನವಾಗಿ ಮೂಡಿ ಬಂದಿದೆ ಎನ್ನುತ್ತಾರೆ ಚಿತ್ರದ ನಿರ್ದೇಶಕಿ ಜೆ. ಚಂದ್ರಕಲಾ.</p>



<p class="has-medium-font-size">ಕುಲು ಮನಾಲಿ, ಕೇರಳ, ಆಂಧ್ರಪ್ರದೇಶ, ಪಂಜಾಬ್, ಚಂಡೀಗಡ, ಚಿಕ್ಕಮಗಳೂರು, ಆಗ್ರಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಆಶಿಕಿ ಚಿತ್ರದ ಚಿತ್ರೀಕರಣ ನಡೆದಿದೆ.</p>
]]></content:encoded>
					
		
		
			</item>
	</channel>
</rss>
