<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>sahitya &#8211; Peepal Media</title>
	<atom:link href="https://peepalmedia.com/tag/sahitya/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 28 Jan 2025 08:07:29 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>sahitya &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ದಾವಣಗೆರೆಯಲ್ಲಿ ರಾಷ್ಟೀಯ ಅಕ್ಷರ ಹಬ್ಬ: ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ</title>
		<link>https://peepalmedia.com/national-letter-festival-in-davangere-results-of-story-competition-announced/</link>
		
		<dc:creator><![CDATA[Peepal Media]]></dc:creator>
		<pubDate>Tue, 28 Jan 2025 08:07:27 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[literature]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sahitya]]></category>
		<category><![CDATA[story competition]]></category>
		<category><![CDATA[writing]]></category>
		<guid isPermaLink="false">https://peepalmedia.com/?p=52971</guid>

					<description><![CDATA[ದಾವಣಗೆರೆಯಲ್ಲಿ ನಡೆಯಲಿರುವ ರಾಷ್ಟ್ರೀಯ ಅಕ್ಷರ ಹಬ್ಬ ಪ್ರಯುಕ್ತ ದಾವಣಗೆರೆ ಲಿಟರರಿ ಫೋರಂ ಹಮ್ಮಿಕೊಂಡಿದ್ದ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು ಪಲ್ಲವಿ ಯಡೆಯೂರು ಅವರ ʼಕಣಗಿಲೆʼ, ಎಸ್‌ ನಟರಾಜ್‌ ಅವರ ʼಮಗಳುʼ ಹಾಗೂ ತಿರುಪತಿ ಭಂಗಿ ಅವರ ʼನಾಯಿಯ ಹೆಜ್ಜೆʼ ಕಥೆಗಳು ಕಥಾ ಪುರಸ್ಕಾರಕ್ಕೆ ಆಯ್ಕೆಯಾಗಿವೆ. ಪ್ರಶಸ್ತಿ ವಿಜೇತರು ತಲಾ ಐದು ಸಾವಿರ ರೂಪಾಯಿಗಳ ನಗದು ಹಾಗೂ ಸ್ಮರಣ ಫಲಕ ಪಡೆಯಲಿದ್ದಾರೆ. ಸ್ಮಿತಾ ಅಮೃತರಾಜ ಅವರ ‘ಕಮಲಿ’ ಕತೆಯೂ ಮಹಿಳಾ ಕೇಂದ್ರಿತ’ ವಿಶೇಷ ಕಥಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಈ ಪ್ರಶಸ್ತಿಯನ್ನು [&#8230;]]]></description>
										<content:encoded><![CDATA[
<p> ದಾವಣಗೆರೆಯಲ್ಲಿ ನಡೆಯಲಿರುವ ರಾಷ್ಟ್ರೀಯ ಅಕ್ಷರ ಹಬ್ಬ  ಪ್ರಯುಕ್ತ ದಾವಣಗೆರೆ ಲಿಟರರಿ ಫೋರಂ ಹಮ್ಮಿಕೊಂಡಿದ್ದ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು ಪಲ್ಲವಿ ಯಡೆಯೂರು ಅವರ ʼಕಣಗಿಲೆʼ, ಎಸ್‌ ನಟರಾಜ್‌ ಅವರ ʼಮಗಳುʼ ಹಾಗೂ ತಿರುಪತಿ ಭಂಗಿ ಅವರ ʼನಾಯಿಯ ಹೆಜ್ಜೆʼ ಕಥೆಗಳು ಕಥಾ ಪುರಸ್ಕಾರಕ್ಕೆ ಆಯ್ಕೆಯಾಗಿವೆ.</p>



<figure class="wp-block-image"><img decoding="async" src="https://avadhimag.in/wp-content/uploads/2021/03/edyur-pallavi-1024x1024.jpg?x24322" alt=""/></figure>



<figure class="wp-block-image"><img decoding="async" src="https://avadhimag.in/wp-content/uploads/2021/10/tirupati-bhangi-e1636447796603-1024x790.jpg?x24322" alt=""/></figure>



<figure class="wp-block-image"><img decoding="async" src="https://avadhimag.in/wp-content/uploads/2025/01/WhatsApp-Image-2025-01-23-at-8.27.39-PM-653x1024.jpeg?x24322" alt=""/></figure>



<p>ಪ್ರಶಸ್ತಿ ವಿಜೇತರು ತಲಾ ಐದು ಸಾವಿರ ರೂಪಾಯಿಗಳ ನಗದು ಹಾಗೂ ಸ್ಮರಣ ಫಲಕ ಪಡೆಯಲಿದ್ದಾರೆ.</p>



<p>ಸ್ಮಿತಾ ಅಮೃತರಾಜ ಅವರ ‘ಕಮಲಿ’ ಕತೆಯೂ ಮಹಿಳಾ ಕೇಂದ್ರಿತ’ ವಿಶೇಷ ಕಥಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ಈ ಪ್ರಶಸ್ತಿಯನ್ನು ‘ಅವಳ ಹೆಜ್ಜೆ’ ತಂಡವು ಪ್ರಯೋಜಿಸಿದೆ.</p>



<p>ಕತೆಗಾರ ಹಾಗೂ ವಿಮರ್ಶಕರಾದ ಕಂನಾಡಿಗ ನಾರಾಯಣ ಹಾಗೂ ಕತೆಗಾರ ಹನಮಂತ ಹಾಲಿಗೆರೆ ಸ್ಪರ್ಧೆಯ ತೀರ್ಪುಗಾರರಾಗಿದ್ದರು.</p>



<p>ಸ್ಪರ್ಧೆಗೆ ಹೊರನಾದಿನಿಂದ ಸೇರಿದಂತೆ 120ಕ್ಕೂ ಹೆಚ್ಚು ಕತೆಗಳು ಬಂದಿದ್ದವು.</p>



<p>ಉಳಿದಂತೆ ಅತ್ಯುತ್ತಮ 20 ಕತೆಗಳಿಗೆ ಪ್ರಶಸ್ತಿ ಫಲಕ ಸ್ಮರಣಿಕೆಗಳನ್ನು ನೀಡಲಾಗುವದು. ಈ ಆಯ್ದ ಕತೆಗಳನ್ನು ದಾವಣಗೆರೆ ಲಿಟರರಿ ಪೋರಂ ಪುಸ್ತಕ ರೂಪದಲ್ಲಿ ಪ್ರಕಟಿಸಲಿದ್ದು, ಪುಸ್ತಕ ಬಿಡುಗಡೆಯೂ ಫೆಬ್ರುವರಿ 7, 8 ಹಾಗೂ 9 ರಂದು ಮೂರು ದಿನಗಳ ಕಾಲ ದಾವಣಗೆರೆಯ MBA ಕಾಲೇಜಿನಲ್ಲಿ ನಡೆಯಲಿರುವ ರಾಷ್ಟ್ರೀಯ ಅಕ್ಷರ ಹಬ್ಬದ ಸಂದರ್ಭದಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಲಿಟರರಿ ಪೋರಂ ಸಂಚಾಲಕ ಶ್ರೀ ಹರ್‌ ಸಾಲಿಮಠ ತಿಳಿಸಿದ್ದಾರೆ.</p>



<p><strong>ಮೆಚ್ಚುಗೆಯ ಬಹುಮಾನ ಪಡೆದ 20 ಕತೆಗಳು ಹಾಗೂ ಕತೆಗಾರರು</strong></p>



<p>ಹರಿಯಲಾರದವಳು – ಉಷಾ ನರಸಿಂಹನ್<br>ಎರಡು ಮೋತಿಯ ಪೆನ್ನು – ಕಲಕೇಶ ಗೊರವರ<br>ನೀವು ಕಾಣಿರೆ – ನಂದಿನಿ ಹೆದ್ದುರ್ಗ<br>ಸಂಗ್ರಾಮ – ಪ್ರೇಮಲತಾ ಬಿ<br>ನಿಯೋಗ – ರವಿಕುಮಾರ್ ಕುಮಾರಪುರ<br>ದಡವನರಸಿದ ನದಿ – ಪಾಪು ಗುರು<br>ಬೆಳಕು ಕುಡಿದ ಸಂಜೆ – ಸದಾಶಿವ ಸೊರಟೂರು<br>ಬಳಪದ ಕಲ್ಲು<br>ಶ್ರೀರಮಣ ನಿರ್ಯಾಣ – ಅಜಿತ ಹರೀಶಿ<br>ಸ್ವಾಭಿಮಾನ ಸಮುದ್ರ<br>ಗೋಧೂಳಿ<br>ಅಲೈ ಹಬ್ಬ – ಶಿವಪ್ಪ ಬಡಿಗೇರ<br>ತುಪ್ಪದ ಗಿಂಡಿ – ಸನಾವುಲ್ಲಾ ನವಿಲೆಹಾಳ<br>ಇಣುಕು – ಪೂರ್ಣಿಮಾ ಮಾಳಗಿಮನಿ<br>ಶಕುನದ ಚುಕ್ಕಿ – ನಾಗರಾಜ ಕೋರಿ<br>ಹಂಗು – ಭದ್ರಪ್ಪ ಹೆನ್ಲಿ<br>ಅಕ್ಕನ ಗಂಟು – ಪ್ರಕಾಶ ಖಾಡೆ<br>ಗಾಳಕ್ಕೆ ಸಿಕ್ಕ ಮೀನು – ಇಸ್ಮಾಯಿಲ್ ತಳಕಲ್</p>
]]></content:encoded>
					
		
		
			</item>
		<item>
		<title>ಜಾಗತಿಕ ಸಾಹಿತ್ಯ ಪ್ರಶಸ್ತಿಯ ಅಂತಿಮ ಸುತ್ತಿಗೆ ಮಮತಾ ಜಿ ಸಾಗರ ಆಯ್ಕೆ</title>
		<link>https://peepalmedia.com/mamata-ji-sagar-selected-for-final-round-of-global-literary-award/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 05 Apr 2024 11:06:47 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[ಹೆಣ್ಣೋಟ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sahitya]]></category>
		<category><![CDATA[state politics]]></category>
		<category><![CDATA[writer]]></category>
		<category><![CDATA[writing]]></category>
		<guid isPermaLink="false">https://peepalmedia.com/?p=37982</guid>

					<description><![CDATA[ಬೆಂಗಳೂರು: ಸಾಹಿತ್ಯದಲ್ಲಿನ ಅತ್ಯುತ್ತಮ ಸಾಧನೆಗಾಗಿ ಕೊಡಮಾಡುವ ಜಾಗತಿಕ ಪ್ರಶಸ್ತಿಯ ಅಂತಿಮ ಸುತ್ತಿಗೆ ಖ್ಯಾತ ಸಾಹಿತಿ ಮಮತಾ ಜಿ ಸಾಗರ ಅವರನ್ನು ಭಾರತದಿಂದ ಆಯ್ಕೆ ಮಾಡಲಾಗಿದೆ. ಸಾಹಿತಿಗಳ ಜಾಗತಿಕ ಸಂಘಟನೆ ವರ್ಲ್ಡ್ ಆರ್ಗನೈಜೇಷನ್ ಆಫ್ ರೈಟರ್ಸ್ (ಡಬ್ಲ್ಯುಒಡಬ್ಲ್ಯು) ಸ್ಥಾಪಿಸಿರುವ ಈ ಪ್ರಶಸ್ತಿಯನ್ನು ಇದೆ ಏಪ್ರಿಲ್ 6 ರಂದು ನೈಜೀರಿಯಾದ ಅಬುಜಾದಲ್ಲಿ ಪ್ರದಾನ ಮಾಡಲಾಗುತ್ತಿದೆ ಎಂದು ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ. &#160; ಮುಂಬರುವ ದಿನಗಳಲ್ಲಿ ಸಂಸ್ಕೃತಿ, ಸಾಹಿತ್ಯ ಹಾಗೂ ಆದ್ಯಾತ್ಮಿಕ ಮೌಲ್ಯಗಳನ್ನು ಮಾನವೀಯತೆಯ ಬುನಾದಿಯ ಮೇಲೆ ಸ್ಥಾಪಿಸಿ ಶಾಂತಿ ಹಾಗೂ [&#8230;]]]></description>
										<content:encoded><![CDATA[
<p>ಬೆಂಗಳೂರು: ಸಾಹಿತ್ಯದಲ್ಲಿನ ಅತ್ಯುತ್ತಮ ಸಾಧನೆಗಾಗಿ ಕೊಡಮಾಡುವ ಜಾಗತಿಕ ಪ್ರಶಸ್ತಿಯ ಅಂತಿಮ ಸುತ್ತಿಗೆ ಖ್ಯಾತ ಸಾಹಿತಿ ಮಮತಾ ಜಿ ಸಾಗರ ಅವರನ್ನು ಭಾರತದಿಂದ ಆಯ್ಕೆ ಮಾಡಲಾಗಿದೆ.</p>



<p>ಸಾಹಿತಿಗಳ ಜಾಗತಿಕ ಸಂಘಟನೆ ವರ್ಲ್ಡ್ ಆರ್ಗನೈಜೇಷನ್ ಆಫ್ ರೈಟರ್ಸ್ (ಡಬ್ಲ್ಯುಒಡಬ್ಲ್ಯು) ಸ್ಥಾಪಿಸಿರುವ ಈ ಪ್ರಶಸ್ತಿಯನ್ನು ಇದೆ ಏಪ್ರಿಲ್ 6 ರಂದು ನೈಜೀರಿಯಾದ ಅಬುಜಾದಲ್ಲಿ ಪ್ರದಾನ ಮಾಡಲಾಗುತ್ತಿದೆ ಎಂದು ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ. &nbsp;</p>



<p>ಮುಂಬರುವ ದಿನಗಳಲ್ಲಿ ಸಂಸ್ಕೃತಿ, ಸಾಹಿತ್ಯ ಹಾಗೂ ಆದ್ಯಾತ್ಮಿಕ ಮೌಲ್ಯಗಳನ್ನು ಮಾನವೀಯತೆಯ ಬುನಾದಿಯ ಮೇಲೆ ಸ್ಥಾಪಿಸಿ ಶಾಂತಿ ಹಾಗೂ ಸೌಹಾರ್ದತೆಯನ್ನು ಬೇಡುವ ಜಗತ್ತಿನ ಬರಹಗಾರರ ಕ್ರಿಯಾಶೀಲ ಪ್ರಯತ್ನಗಳನ್ನು ಕಲೆಹಾಕುವುದು ನಮ್ಮ ಪ್ರಯತ್ನ. ಈ ಸಲುವಾಗಿ ಸಾಹಿತಿಗಳ ಜಾಗತಿಕ ಸಂಘಟನೆಯೂ ಶ್ರಮಿಸುತ್ತಿದ್ದು ಇದೇ ಮೊದಲ ಬಾರಿಗೆ ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಗೌರವಿಸಲು &#8216;ಡಬ್ಲ್ಯುಒ ಡಬ್ಲ್ಯು- ಜಾಗತಿಕ ಸಾಹಿತ್ಯ ಪ್ರಶಸ್ತಿ&#8217;ಯನ್ನು ಸ್ಥಾಪಿಸಿದೆ ಈ ಪ್ರಶಸ್ತಿ ಸಮಾರಂಭವನ್ನು ಪ್ಯಾನ್ ಆಫ್ರಿಕನ್ ಕಂಟ್ರೀಸ್ ಅಸೋಸಿಯೇಶನ್ ಆಫ್ ರೈಟರ್ಸ್, ಅಸೆಂಬ್ಲಿ ಆಫ್ ಯುರೇಷಿಯನ್ ಪೀಪಲ್ಸ್, ರಷ್ಯನ್ ಅಕಾಡೆಮಿ ಆಫ್ ಆರ್ಟ್ಸ್ ಜಂಟಿಯಾಗಿ ಹಮ್ಮಿಕೊಂಡಿವೆ.&nbsp;&nbsp;</p>



<p>ಮಮತಾ ಸಾಗರ ಕನ್ನಡದ ಕವಿ, ಭಾಷಾಂತರಕಾರರು ಹಾಗೂ ನಾಟಕಕಾರರಾಗಿ ಗುರುತಿಸಿಕೊಂಡಿದ್ದಾರೆ. ಬೆಂಗಳೂರು ವಿವಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಧ್ಯಾಪಕರಾಗಿ ಒಂಬತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರು ಪ್ರಸ್ತುತವಾಗಿ ಮಣಿಪಾಲ್ ವಿ. ವಿಯ ಸೃಷ್ಟಿ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸೃಜನಾತ್ಮಕ ಬರವಣಿಗೆ ಅಧ್ಯಯನ ಸಂಸ್ಥೆ “ಕಾವ್ಯಸಂಜೆ”ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.&nbsp;&nbsp;</p>



<p><strong>&nbsp;</strong><strong>ಕೃತಿಗಳು:</strong> ‘ಕಾಡ ನವಿಲಿನ ಹೆಜ್ಜೆ’, ‘ನದಿಯ ನೀರಿನ ತೇವ’ ಮತ್ತು ‘ಹೀಗೆ ಹಳಿಯ ಮೇಲೆ ಹಾಡು’ ಕವನ ಸಂಕಲನಗಳು ಪ್ರಕಟಗೊಂಡಿವೆ. ‘ಹೈಡ್ ಅಂಡ್ ಸೀಕ್’ ಎಂಬ ಕವನಸಂಕಲನವನ್ನು ಇಂಗ್ಲಿಷಿನಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. &nbsp;<strong></strong></p>



<p>&nbsp;‘ಚುಕ್ಕಿ ಚುಕ್ಕಿ ಚಂದಕ್ಕಿ’, ‘ಮೈಯ್ಯೇ ಭಾರ ಮನವೇ ಭಾರ’ ನಾಟಕ ರಚಿಸಿರುವ ಇವರು, ಸ್ವಿಂಗ್‌ ಆಫ್‌ ಡಿಸೈರ್‌ ಎಂಬ ನಾಟಕವನ್ನು ಭಾಷಾಂತರಿಸಿದ್ದಾರೆ. &nbsp;ಇಲ್ಲಿ ಸಲ್ಲುವ ಮಾತು ಇವರ ಅಂಕಣ ಬರಹ. ಇವರು ಬರೆದ ಫಯಾಜ್ ಅಹಮದ್ ಫಯಾಜರ ‘ಹ್ಯಾಮ್ ದೇಖೇ೦ಗೆ’ ಕವಿತೆಯ ತರ್ಜುಮೆಯು CAA ಪ್ರತಿಭಟನೆಯ ಸಮಯದಲ್ಲಿ ವೈರಲ್ ಆಗಿತ್ತು.&nbsp; ಸ್ಲೊವೇನಿಯನ್ ಕವಿತೆ ಮತ್ತು ಕಥೆಗಳ ಸಂಕಲನವನ್ನು ಸಂಪಾದಿಸಿ ಪ್ರಕಟಿಸಿದ್ದಾರೆ.&nbsp; ಡಾಂಟೆಯ ಡಿವೈನ್ ಕಾಮಿಡಿಯ ಕ್ಯಾಂಟೋಸ್ 15 ರ ಕನ್ನಡಾನುವಾದವನ್ನು ಇಟಲಿಯ ಲಿಟಲ್ ಮ್ಯೂಜಿಯಂ ನಲ್ಲಿ ಪ್ರಸ್ತುತ ಪಡಿಸಿದ್ದಾರೆ.&nbsp;</p>



<p>ಪ್ರಪಂಚದಾದ್ಯಂತ ಹಲವು ಭಾಷೆಗಳ ಹಲವಾರು ಕವಿಗಳ ಕವಿತೆಗಳನ್ನು ಇವರು ಕನ್ನಡಕ್ಕೆ ತರ್ಜುಮೆ ಮಾಡಿರುವುದು ಇವರ ಹೆಗ್ಗಳಿಕೆಯಾಗಿದೆ.</p>



<p>ಕನ್ನಡದ ಕೆಲಸಕ್ಕಾಗಿ ಚಾರ್ಲ್ಸ್ ವಾಲೇಸ್ ಫೆಲೋಶಿಪ್ ಸಿಕ್ಕಿರುವ ಕನ್ನಡದ ಮೊದಲ ಅಭ್ಯರ್ಥಿ ಇವರು. ಈ ಫೆಲೋಶಿಪ್ ನಲ್ಲಿ ನೂರು ಪ್ರತಿರೋಧ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.&nbsp;</p>



<p>ಮಲೇಷಿಯಾದಲ್ಲಿ ಕಾಮನ್ ವೆಲ್ತ್ ಫೌಂಡೇಶನ್ನಿನಲ್ಲಿ ಮ್ಯಾಂಚೆಸ್ಟರ್, ಹೆಲ್ಸಿಂಕಿ, ಕೊಲಂಬೋ, ಲಂಡನ್, ನಾರಿಚ್, ವೇಲ್ಸ್&nbsp; ಮುಂತಾದ ಕಡೆಗಳಲ್ಲಿ ಇವರು ಅಂತರಾಷ್ಟ್ರೀಯ ಮಟ್ಟದ ಕಾವ್ಯಗಾರಗಳನ್ನು &nbsp;ನಡೆಸಿಕೊಟ್ಟಿದ್ದಾರೆ. ಇವರ ಕವಿತೆಗಳು ಭಾರತೀಯ ಬಹುತೇಕ ಭಾಷೆಗಳಿಗೆ ತರ್ಜುಮೆಯಾಗಿರುವುದಲ್ಲದೆ, ಅಂತರರಾಷ್ಟ್ರೀಯ ಮಟ್ಟದಲ್ಲಿ&nbsp; ವೆಲ್ಷ್, ಸ್ಪಾನಿಷ್, ಜರ್ಮನ್, ಇಟಾಲಿಯನ್, ಸ್ಲೊವೇನಿಯನ್, ಅರಾಬಿಕ್, ಫ್ರೆಂಚ್, ಗ್ಯಾಲೀಷಿಯನ್, ರುಮೇನಿಯನ್, ರಷ್ಯನ್, ಮಾಲ್ಟೀಸ್, ಸಿನ್ಹಳ,&nbsp; ಸ್ವೀಡಿಷ್, ಇಂಗ್ಲೀಷ್, ಜಪನೀಸ್ , ಚೈನೀಸ್, ವಿಯೆಟ್ನಾಮೀಸ್ ಹೀಗೆ ಹಲವಾರು ಅಂತರಾಷ್ಟ್ರೀಯ ಭಾಷೆಗಳಿಗೂ ತರ್ಜುಮೆಯಾಗಿವೆ.</p>



<p>ಇವರು ‘ಕಾವ್ಯ ಸಂಜೆ’ ಎಂಬ ಸಾಮುದಾಯಿಕ ಕಾವ್ಯ ಗುಂಪನ್ನು ಹುಟ್ಟುಹಾಕಿ ಕನ್ನಡ ಕವಿತೆಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಮ್ಯೂಜ್ ಇಂಡಿಯಾ ಅನ್ಲೈನ್&nbsp; ಪತ್ರಿಕೆಗೆ ಕನ್ನಡ ಸಂಪಾದಕರಾಗಿ ಹಲವಾರು ವರುಷಗಳಿಂದ ಕನ್ನಡ ಸಾಹಿತ್ಯ ಸಂಸ್ಕೃತಿಯ ಕುರಿತು ಇಂಗ್ಲಿಷಿನಲ್ಲಿ ಬರೆಯುತ್ತಿದ್ದಾರೆ. &nbsp;</p>
]]></content:encoded>
					
		
		
			</item>
		<item>
		<title> ಶ್ರೀಪಾದಭಟ್‌ ಅವರಿಗೆ ರಂಗಭೂಪತಿ ಪ್ರಶಸ್ತಿ: ಗೋಪಾಲ ವಾಜಪೇಯಿಯವರ ರಂಗಗೀತೆಗಳ ರಂಗಸಂಜೆ</title>
		<link>https://peepalmedia.com/rangabhupati-award-to-sripadabhat-an-evening-of-gopal-vajpayees-ranga-songs/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 28 Mar 2024 06:47:21 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[ಧಾರವಾಡ]]></category>
		<category><![CDATA[ಸಿನಿಮಾ]]></category>
		<category><![CDATA[dharawad]]></category>
		<category><![CDATA[hubli - dharawad]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rangabhoomi]]></category>
		<category><![CDATA[sahitya]]></category>
		<category><![CDATA[theater]]></category>
		<guid isPermaLink="false">https://peepalmedia.com/?p=37637</guid>

					<description><![CDATA[ಧಾರವಾಡ: ಗೋವಾ ರಂಗ-ಸಂಗ ತಂಡ, ಆಟ-ಮಾಟ ಧಾರವಾಡ ಮತ್ತು ಬಹುರೂಪಿ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದಭಟ್‌ ಅವರಿಗೆ 2024ರ ಸಾಲಿನ ರಂಗಭೂಪತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿ ರಾಜಕುಮಾರ್‌ ಮಡಿವಾಳರ ತಿಳಿಸಿದ್ದಾರೆ. ಧಾರವಾಡ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲುರಂಗಮಂದಿರದಲ್ಲಿ ಮಾ.30ರಂದು ಸಂಜೆ 6ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ʼಪ್ರಶಸ್ತಿ ಪ್ರಧಾನದ ಜೊತೆಗೆ ಸಾಹಿತಿ ಗೋಪಾಲ ವಾಜಪೇಯಿ ಅವರ ನೆನಪಿನ ರಂಗಗೀತೆಗಳ “ರಂಗಸಂಜೆ” ಕಾರ್ಯಕ್ರಮವು ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. [&#8230;]]]></description>
										<content:encoded><![CDATA[
<p>ಧಾರವಾಡ: ಗೋವಾ ರಂಗ-ಸಂಗ ತಂಡ, ಆಟ-ಮಾಟ ಧಾರವಾಡ ಮತ್ತು ಬಹುರೂಪಿ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ಹಿರಿಯ ರಂಗ ನಿರ್ದೇಶಕ ಶ್ರೀಪಾದಭಟ್‌ ಅವರಿಗೆ 2024ರ ಸಾಲಿನ ರಂಗಭೂಪತಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿ ರಾಜಕುಮಾರ್‌ ಮಡಿವಾಳರ ತಿಳಿಸಿದ್ದಾರೆ.</p>



<p>ಧಾರವಾಡ ರಂಗಾಯಣ ಆವರಣದಲ್ಲಿರುವ ಪಂ.ಬಸವರಾಜ ರಾಜಗುರು ಬಯಲುರಂಗಮಂದಿರದಲ್ಲಿ ಮಾ.30ರಂದು ಸಂಜೆ 6ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ʼಪ್ರಶಸ್ತಿ ಪ್ರಧಾನದ ಜೊತೆಗೆ ಸಾಹಿತಿ ಗೋಪಾಲ ವಾಜಪೇಯಿ ಅವರ ನೆನಪಿನ ರಂಗಗೀತೆಗಳ “ರಂಗಸಂಜೆ” ಕಾರ್ಯಕ್ರಮವು ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>ಗೋಪಾಲ್‌ ವಾಜಪೇಯಿಯವರು ಹಲವು ವರ್ಷಗಳ ಕಾಲ ಪತ್ರಿಕಾ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದವರು. ಜೊತೆಗೆ ಜಕವಿ, ನಾಟಕಕಾರ, ನಟ, ನಿರ್ದೇಶಕರಾಗಿ, ಆಕಾಶವಾಣಿ, ರಂಗಭೂಮಿ, ಸಿನಿಮಾ, ಜನಸಮುದಾಯ ಅತಿ ಇಷ್ಟದ ಮಾಧ್ಯಮಗಳ ಮೂಲಕ &nbsp;ಮೂರು ದಶಕಗಳಿಗೂ ಹೆಚ್ಚು ಕಾಲ ಒಂದಿಡಿ ತಲೆಮಾರನ್ನು ತಮ್ಮ ಬರಹದ ಮೂಲಕ ಪ್ರಭಾವಿಸಿದವರು. ಉತ್ತರ ಕರ್ನಾಟಕದ ಗಟ್ಟಿ ಆಡುಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿದ ಅವರು, ರಂಗಭೂಮಿಗೆ ನೀಡಿದ ಕೊಡುಗೆ ಅಪಾರ. ಅದೇನೋ ಕಾರಣಕ್ಕೆ ಅವರು ಅಜ್ಞಾತರಾಗಿಯೇ ಉಳಿದರು. ಮುಖ್ಯವಾಹಿನಿಗೆ ಬರಲಿಲ್ಲ. ಅವರಿಗೆ ದಕ್ಕಬೇಕಾದ ಗೌರವವೂ ದೊರೆಯಲಿಲ್ಲ.</p>



<p>ಅಂಥ ಅಪರೂಪದ ಸಾಧಕನನ್ನು ನೆನಪಿಸಿಕೊಳ್ಳುವ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಕೊಡುಗೆ ನೀಡಿರುವ ಪ್ರತಿಭಾವಂತರೊಬ್ಬರಿಗೆ &#8220;ರಂಗಭೂಪತಿ&#8221; ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ರಾಜಕುಮಾರ್‌ ತಿಳಿಸಿದ್ದಾರೆ,</p>



<p>ಪ್ರಸಕ್ತ ಸಾಲಿನ ಮೊದಲ ಪ್ರಶಸ್ತಿಯನ್ನು ಪ್ರತಿಭಾವಂತ ನಿರ್ದೇಶಕ ಶ್ರೀ ಶ್ರೀಪಾದ ಭಟ್ ಅವರಿಗೆ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ವಿಶ್ವರಂಗ ಭೂಮಿ ದಿನದ ಪ್ರಯುಕ್ತ, ಈ ಕಾರ್ಯಕ್ರಮದಲ್ಲಿ ಗೋಪಾಲ ವಾಜಪೇಯಿ ಅವರು ರಚಿಸಿದ ರಂಗಗೀತೆಗಳ ಹಬ್ಬ ಆಯೋಜಿಸಲಾಗಿದೆ.</p>



<p>&nbsp;ರಂಗಾಯಣ ಕಲಾವಿದ ರಾಘವ ಕಮ್ಮಾರ, ಹೂವಿನ ಹಡಗಲಿಯ ಶಶಿಧರ.ಕೆ.ಎಮ್, ರವಿ ಯಲ್ಲಪ್ಪನವರ್,&nbsp; ಪರಶುರಾಮ ನಾಗೋಜಿ ರಂಗಗೀತೆಗಳನ್ನು ಪ್ರಸ್ತುತಪಡಿಸಲಿದ್ದಾರೆ. ಹಿರಿಯ ಸಾಹಿತಿ, ನಾಟಕಕಾರ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಶ್ರೀ ಗೋಪಾಲ ವಾಜಪೇಯಿ ಕುಟುಂಬಸ್ತರು, ರಂಗಕರ್ಮಿ ಧನಂಜಯ ಕುಲಕರ್ಣಿ, &#8220;ಅವಧಿ ಈ-ಮ್ಯಾಗಜಿನ್&#8221; ಸಂಪಾದಕ ಶ್ರೀ ಜಿ,ಎನ್. ಮೋಹನ, ರವಿ ಕುಲಕರ್ಣಿ ಉಪಸ್ಥಿತರಿರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. &nbsp;</p>
]]></content:encoded>
					
		
		
			</item>
	</channel>
</rss>
