<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Sanjay Raut &#8211; Peepal Media</title>
	<atom:link href="https://peepalmedia.com/tag/sanjay-raut/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 23 Nov 2024 08:42:18 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Sanjay Raut &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಮಹಾರಾಷ್ಟ್ರ ಚುನಾವಣೆ: ಫಲಿತಾಂಶದ ಹಿಂದೆ ದೊಡ್ಡ ಷಡ್ಯಂತ್ರ ನಡೆದಿದೆ- ಸಂಜಯ್‌ ರಾವುತ್‌</title>
		<link>https://peepalmedia.com/big-conspiracy-in-maharastra-poll/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 23 Nov 2024 08:41:48 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[india]]></category>
		<category><![CDATA[jharkhand]]></category>
		<category><![CDATA[karnataka]]></category>
		<category><![CDATA[kerala]]></category>
		<category><![CDATA[maharastra]]></category>
		<category><![CDATA[NDA]]></category>
		<category><![CDATA[Rahul Gandhi]]></category>
		<category><![CDATA[Sanjay Raut]]></category>
		<category><![CDATA[sanjay seth]]></category>
		<category><![CDATA[supriya srinate]]></category>
		<guid isPermaLink="false">https://peepalmedia.com/?p=49493</guid>

					<description><![CDATA[ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಗಲಿದೆ ಎಂಬ ಟ್ರೆಂಡ್‌ಗಳ ಜೊತೆಗೆ &#8220;ದೊಡ್ಡ ಪಿತೂರಿ&#8221; ಮತ್ತು ಏನೋ &#8220;ಅನುಮಾನಾಸ್ದವಾದ&#8221; ಸಂಗತಿಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಶನಿವಾರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶಗಳು ಜನಾದೇಶವನ್ನು ಪ್ರತಿಬಿಂಬಿಸುವುದಿಲ್ಲ, ಏಕೆಂದರೆ ಗ್ರೌಂಡ್‌ ರಿಯಾಲಿಟಿ ವಿಭಿನ್ನವಾಗಿದೆ ಮತ್ತು ಸರ್ಕಾರದ ವಿರುದ್ಧ ಸ್ಪಷ್ಟವಾದ ಜನಾಕ್ರೋಶ ಇದೆ. ಇದರ ಹಿಂದೆ ದೊಡ್ಡ ಷಡ್ಯಂತ್ರವಿರುವಂತೆ ನನಗೆ ಕಾಣುತ್ತಿದೆ&#8230; ಇದು ಮರಾಠಿ &#8216;ಮನೂಸ್&#8217; ಮತ್ತು [&#8230;]]]></description>
										<content:encoded><![CDATA[
<p><strong>ಮುಂಬೈ: </strong>ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ಸಿಗಲಿದೆ ಎಂಬ ಟ್ರೆಂಡ್‌ಗಳ ಜೊತೆಗೆ &#8220;ದೊಡ್ಡ ಪಿತೂರಿ&#8221; ಮತ್ತು ಏನೋ &#8220;ಅನುಮಾನಾಸ್ದವಾದ&#8221; ಸಂಗತಿಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಶನಿವಾರ ಆರೋಪಿಸಿದ್ದಾರೆ.</p>



<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶಗಳು ಜನಾದೇಶವನ್ನು ಪ್ರತಿಬಿಂಬಿಸುವುದಿಲ್ಲ, ಏಕೆಂದರೆ ಗ್ರೌಂಡ್‌ ರಿಯಾಲಿಟಿ ವಿಭಿನ್ನವಾಗಿದೆ ಮತ್ತು ಸರ್ಕಾರದ ವಿರುದ್ಧ ಸ್ಪಷ್ಟವಾದ ಜನಾಕ್ರೋಶ ಇದೆ. ಇದರ ಹಿಂದೆ ದೊಡ್ಡ ಷಡ್ಯಂತ್ರವಿರುವಂತೆ ನನಗೆ ಕಾಣುತ್ತಿದೆ&#8230; ಇದು ಮರಾಠಿ &#8216;ಮನೂಸ್&#8217; ಮತ್ತು ರೈತರ ಆದೇಶವಲ್ಲ,&#8221; ಎಂದು ಅವರು ಹೇಳಿದರು.</p>



<p>&#8220;ನಾವು ಇದನ್ನು ಜನಾದೇಶವೆಂದು ಒಪ್ಪಿಕೊಳ್ಳುವುದಿಲ್ಲ. ಚುನಾವಣಾ ಫಲಿತಾಂಶಗಳಲ್ಲಿ ಯಾವುದೋ ಷಡ್ಯಂತ್ರ ನಡೆದಿದೆ&#8221; ಎಂದು ರಾವತ್ ಹೇಳಿದರು.</p>



<p>ಚುನಾವಣೆಯಲ್ಲಿ ಹಣದ ಬಳಕೆಯಾಗಿರುವುದರಲ್ಲಿ ಸಂಶಯವಿಲ್ಲ ಎಂದು ಆರೋಪಿಸಿದರು.</p>



<p>&#8220;ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಎಲ್ಲಾ ಶಾಸಕರು ಹೇಗೆ ಗೆಲ್ಲುತ್ತಾರೆ? ಅವರ ದ್ರೋಹದಿಂದ ಮಹಾರಾಷ್ಟ್ರವನ್ನು ಕೆರಳಿಸಿದ ಅಜಿತ್ ಪವಾರ್ ಹೇಗೆ ಗೆಲ್ಲುತ್ತಾರೆ?&#8221; ಎಂದು ಅವರು ಪ್ರಶ್ನಿಸಿದರು.</p>



<p>ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಸಿದ್ಧವಾಗಿದೆ ಮತ್ತು ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ 288 ವಿಧಾನಸಭಾ ಸ್ಥಾನಗಳಲ್ಲಿ 204 ರಲ್ಲಿ ಮುನ್ನಡೆ ಸಾಧಿಸಿದೆ.</p>



<p>ಆರಂಭಿಕ ಟ್ರೆಂಡ್‌ಗಳ ಪ್ರಕಾರ ಅದರ ಅಭ್ಯರ್ಥಿಗಳು ಕೇವಲ 47 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವುದರೊಂದಿಗೆ ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (MVA) ಮುಗ್ಗರಿಸುತ್ತಿದೆ.</p>



<p>ಆಡಳಿತಾರೂಢ ಮಹಾಯುತಿ ಮೈತ್ರಿಕೂಟದಲ್ಲಿ ಬಿಜೆಪಿ 149 ವಿಧಾನಸಭಾ ಸ್ಥಾನಗಳಲ್ಲಿ, ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 59 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.</p>



<p>ಎಂವಿಎ ಮೈತ್ರಿಕೂಟದಲ್ಲಿ ಕಾಂಗ್ರೆಸ್ 101 ಅಭ್ಯರ್ಥಿಗಳನ್ನು, ಶಿವಸೇನೆ (ಯುಬಿಟಿ) 95 ಮತ್ತು ಎನ್‌ಸಿಪಿ (ಎಸ್‌ಪಿ) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. (PTI)</p>
]]></content:encoded>
					
		
		
			</item>
		<item>
		<title>ದೆಹಲಿಯ ಬೆಂಬಲವಿಲ್ಲದೆ ಮಹಾರಾಷ್ಟ್ರದ ವಾಹನಗಳ ಮೇಲೆ ದಾಳಿ ಸಾಧ್ಯವಿಲ್ಲ: ಶಿವಸೇನಾ ಸಂಸದ ಸಂಜಯ್ ರಾವತ್</title>
		<link>https://peepalmedia.com/attack-on-maharashtra-vehicles-not-possible-without-delhis-support-shiv-sena-mp-sanjay-rawat/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 07 Dec 2022 06:30:53 +0000</pubDate>
				<category><![CDATA[ದೇಶ]]></category>
		<category><![CDATA[BASAVARAJ BOMMAYI]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karnataka]]></category>
		<category><![CDATA[Karnataka-Maharashtra border dispute]]></category>
		<category><![CDATA[maharashtra]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Sanjay Raut]]></category>
		<guid isPermaLink="false">https://peepalmedia.com/?p=17789</guid>

					<description><![CDATA[ಮಹಾರಾಷ್ಟ್ರ: ಕೇಂದ್ರದ ಬೆಂಬಲವಿಲ್ಲದೆ ಕರ್ನಾಟಕದ ಹಿರೇಬಾಗೇವಾಡಿಯಲ್ಲಿ ಮಹಾರಾಷ್ಟ್ರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ನಡೆಸಲು ಸಾಧ್ಯವಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಬುಧವಾರ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು ʼದೆಹಲಿಯ ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದು ಮರಾಠಿ ಜನರ ಹೆಮ್ಮೆ ಮತ್ತು ಸ್ವಾಭಿಮಾನವನ್ನು ಕೊನೆಗಾಣಿಸುವ ಯೋಜನೆಯಾಗಿದೆ. ಬೆಳಗಾವಿಯಲ್ಲಿ ನಡೆದ ದಾಳಿಯು ಅದೇ ಪಿತೂರಿಯ ಒಂದು ಭಾಗವಾಗಿದೆ. [&#8230;]]]></description>
										<content:encoded><![CDATA[
<p><strong>ಮಹಾರಾಷ್ಟ್ರ:</strong> ಕೇಂದ್ರದ ಬೆಂಬಲವಿಲ್ಲದೆ ಕರ್ನಾಟಕದ ಹಿರೇಬಾಗೇವಾಡಿಯಲ್ಲಿ ಮಹಾರಾಷ್ಟ್ರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ನಡೆಸಲು ಸಾಧ್ಯವಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಬುಧವಾರ ಹೇಳಿದ್ದಾರೆ.</p>



<p>ಈ ಕುರಿತು ಟ್ವೀಟ್‌ ಮಾಡಿರುವ ಅವರು ʼದೆಹಲಿಯ ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದು ಮರಾಠಿ ಜನರ ಹೆಮ್ಮೆ ಮತ್ತು ಸ್ವಾಭಿಮಾನವನ್ನು ಕೊನೆಗಾಣಿಸುವ ಯೋಜನೆಯಾಗಿದೆ. ಬೆಳಗಾವಿಯಲ್ಲಿ ನಡೆದ ದಾಳಿಯು ಅದೇ ಪಿತೂರಿಯ ಒಂದು ಭಾಗವಾಗಿದೆ. ಮರಾಠರು ಇನ್ನಾದರು ಎಚ್ಚೆತ್ತುಕೊಳ್ಳಿʼ ಎಂದು ತಿಳಿಸಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="mr" dir="ltr">दिल्लीचया पाठिंब्या शिवाय <br>बेळगावात मराठी माणूस व महाराष्ट्राच्या वाहनांवर हल्ला होऊ शकत नाहीं.महाराष्ट्र एकीकरण समितीच्या कार्यकर्त्यांना अटक झाली आहे.महाराष्ट्राचा <br> कणा मोडून मराठी स्वाभिमान कायमचा संपविण्याचा खेळ सुरू झालाय.बेळगावातील हल्ले  त्याच कटाचा भाग आहे.ऊठ मराठ्या ऊठ!</p>&mdash; Sanjay Raut (@rautsanjay61) <a href="https://twitter.com/rautsanjay61/status/1600334326084014080?ref_src=twsrc%5Etfw">December 7, 2022</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಮಹಾರಾಷ್ಟ್ರದ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಕರವೇ ಕಾರ್ಯಕರ್ತರಿಂದ ದಾಳಿ ನಡೆದಿದ್ದು, ಉಭಯ ರಾಜ್ಯಗಳ ನಡುವಿನ ಗಡಿ ವಿವಾದವು ಮಂಗಳವಾರ ಬೀದಿಗೆ ಬೀಳುತ್ತಿದ್ದಂತೆ ಹಲವಾರು ಜನರನ್ನು ಬಂಧಿಸಲಾಗಿದೆ. ವಿವಾದದ ಕೇಂದ್ರ ಬಿಂದುವಾಗಿರುವ ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಗೆ, ಮಹಾರಾಷ್ಟ್ರದ ಇಬ್ಬರು ಸಚಿವರು ತಮ್ಮ ನಿಗದಿತ ಭೇಟಿಯನ್ನು ರದ್ದುಗೊಳಿಸಿದ ಕೆಲವು ದಿನಗಳಿಂದ ಭುಗಿಲೆದ್ದ ಉದ್ವಿಗ್ನತೆಯು ಉಲ್ಬಣಗೊಂಡಿದೆ.</p>



<p>ಎರಡೂ ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ, ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮಂಗಳವಾರ ರಾತ್ರಿ ದೂರವಾಣಿಯಲ್ಲಿ ಪರಸ್ಪರ ಮಾತನಾಡಿ, ಎರಡೂ ಕಡೆ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡಿದ್ದಾರೆ. ಕರ್ನಾಟಕದೊಂದಿಗಿನ ರಾಜ್ಯದ ಗಡಿ ವಿವಾದವನ್ನು ಸಮನ್ವಯಗೊಳಿಸಲು ನೇಮಕಗೊಂಡಿರುವ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಬೇಕಿತ್ತು, ಆದರೆ ಪ್ರವಾಸವು ಕಾರ್ಯರೂಪಕ್ಕೆ ಬರಲಿಲ್ಲ. ಈ ಇಬ್ಬರು ಸಚಿವರು &nbsp;ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ ಮತ್ತು ದಶಕಗಳಷ್ಟು ಹಳೆಯದಾದ ಗಡಿ ವಿವಾದದ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.</p>
]]></content:encoded>
					
		
		
			</item>
		<item>
		<title>&#8216;ದಿ ಕಾಶ್ಮೀರ್ ಫೈಲ್ಸ್&#8217; ಅಸಭ್ಯ ಚಿತ್ರ : ತೀರ್ಪುಗಾರರ ಹೇಳಿಕೆಯನ್ನು ಸಮರ್ಥಿಸಿಕೊಂಡ ಶಿವಸೇನೆ ಮುಖಂಡ ಸಂಜಯ್ ರಾವತ್</title>
		<link>https://peepalmedia.com/shiv-sena-leader-sanjay-rawat-defended-the-judges-statement/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 29 Nov 2022 15:08:05 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Sanjay Raut]]></category>
		<category><![CDATA[The Kashmir Files]]></category>
		<guid isPermaLink="false">https://peepalmedia.com/?p=16981</guid>

					<description><![CDATA[ವಿವೇಕ್ ಅಗ್ನಿಹೋತ್ರಿ ನಿರ್ದೇಶನದ &#8216;ದಿ ಕಾಶ್ಮೀರ್ ಫೈಲ್ಸ್&#8217; ಅಸಭ್ಯ ಮತ್ತು ತಪ್ಪು ಪ್ರಚಾರದ ಉದ್ದೇಶ ಹೊಂದಿದೆ ಎಂದು 53ನೇ ಭಾರತೀಯ ಚಲನಚಿತ್ರೋತ್ಸವದ ತೀರ್ಪುಗಾರರ ಹೇಳಿಕೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್, ನಡವ್ ಲ್ಯಾಪಿಡ್ ಹೇಳಿಕೆ ಸರಿಯಾಗಿದೆ. ಒಂದು ಪಕ್ಷದ ವಿರುದ್ಧ ಇನ್ನೊಂದು ಪಕ್ಷದವರು ಅಪ ಪ್ರಚಾರ ಮಾಡುತ್ತಿದ್ದರು. ಒಂದು ಪಕ್ಷ ಮತ್ತು ಇಡೀ ಸರ್ಕಾರ ಪ್ರಚಾರದಲ್ಲಿ ನಿರತವಾಗಿತ್ತು. ಆದರೆ ಈ ಚಿತ್ರದ ನಂತರವೂ ಕೂಡಾ ಕಾಶ್ಮೀರದಲ್ಲಿ [&#8230;]]]></description>
										<content:encoded><![CDATA[
<p style="font-size:20px">ವಿವೇಕ್ ಅಗ್ನಿಹೋತ್ರಿ ನಿರ್ದೇಶನದ &#8216;ದಿ ಕಾಶ್ಮೀರ್ ಫೈಲ್ಸ್&#8217; ಅಸಭ್ಯ ಮತ್ತು ತಪ್ಪು ಪ್ರಚಾರದ ಉದ್ದೇಶ ಹೊಂದಿದೆ ಎಂದು 53ನೇ ಭಾರತೀಯ ಚಲನಚಿತ್ರೋತ್ಸವದ ತೀರ್ಪುಗಾರರ ಹೇಳಿಕೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.</p>



<p style="font-size:20px">ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್, ನಡವ್ ಲ್ಯಾಪಿಡ್ ಹೇಳಿಕೆ ಸರಿಯಾಗಿದೆ. ಒಂದು ಪಕ್ಷದ ವಿರುದ್ಧ ಇನ್ನೊಂದು ಪಕ್ಷದವರು ಅಪ ಪ್ರಚಾರ ಮಾಡುತ್ತಿದ್ದರು. ಒಂದು ಪಕ್ಷ ಮತ್ತು ಇಡೀ ಸರ್ಕಾರ ಪ್ರಚಾರದಲ್ಲಿ ನಿರತವಾಗಿತ್ತು. ಆದರೆ ಈ ಚಿತ್ರದ ನಂತರವೂ ಕೂಡಾ ಕಾಶ್ಮೀರದಲ್ಲಿ ಗರಿಷ್ಠ ಸಂಖ್ಯೆಯ ಹತ್ಯೆಗಳು ಸಂಭವಿಸಿವೆ. ಕಾಶ್ಮೀರ ಪಂಡಿತರು, ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಿದರು.</p>



<p style="font-size:20px">ಕಾಶ್ಮೀರಿ ಪಂಡಿತರ ಹತ್ಯೆಯಾಗುವಾಗ ಈ ಕಾಶ್ಮೀರ ಫೈಲ್‌ ಜನರು ಆಗ ಎಲ್ಲಿದ್ದರು? ಕಾಶ್ಮೀರಿ ಪಂಡಿತರ ಮಕ್ಕಳೂ ಹೋರಾಟ ಮಾಡುವಾಗ ಎಲ್ಲಿದ್ದರು? ಆಗ ಯಾರೂ ಮುಂದೆ ಬರಲಿಲ್ಲ ಎಂದು ಟೀಕಿಸಿದ್ದಾರೆ.</p>



<p style="font-size:20px">ಇನ್ನು ಮೂರು ದಿನಗಳ ಮುಂಚೆಯೇ ಶಿವಸೇನೆ ಪಕ್ಷ ಈ ವಿಚಾರ ಮುನ್ನೆಲೆಗೆ ತಂದು ಆರೋಪಿಸಿತ್ತು. ಶಿವಸೇನೆ ಸಂಸದ ಸಂಜಯ್ ರಾವುತ್ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ &#8216;ಗುಜರಾತ್ ಮತ್ತು ರಾಜಸ್ಥಾನ ಚುನಾವಣೆ ಗೆಲ್ಲಲು ಬಿಜೆಪಿ ಕಾಶ್ಮೀರ್ ಫೈಲ್ಸ್ ಬಳಸಿದೆ. ಚಿತ್ರದ ಪ್ರಚಾರದ ಉಸ್ತುವಾರಿಯನ್ನು ಸ್ವತಃ ಪ್ರಧಾನಿ ಮೋದಿ ಕೈಗೆತ್ತಿಕೊಂಡಿದ್ದಾರೆ. ಕಾಶ್ಮೀರದಿಂದ ಹಿಂದೂ ಪಂಡಿತರ ವಲಸೆ, ಅವರ ಹತ್ಯೆಗಳು ಮತ್ತು ಅವರ ಮೇಲೆ ನಡೆದ ದೌರ್ಜನ್ಯಗಳನ್ನು ಆಧರಿಸಿದ ಚಿತ್ರವು ಆತಂಕಕಾರಿಯಾಗಿದೆ. ಆದರೆ ಹಿಂದೂ-ಮುಸ್ಲಿಂ ವಿಭಜನೆ ಇದು ಕಾರಣವಾಗಬಹುದು ಮತ್ತು ಮುಂಬರುವ ಚುನಾವಣೆಗಳನ್ನು ಗೆಲ್ಲಲು ಅದರ ಬಳಕೆಯು ಇನ್ನಷ್ಟು ಗೊಂದಲದ ಸಂಗತಿಯಾಗಿದೆ ಎಂದು ರಾವುತ್ ಸಾಮ್ನಾದಲ್ಲಿ ಬರೆದಿದ್ದರು.</p>



<p style="font-size:20px">ಸಧ್ಯ ಇಸ್ರೇಲಿ ನಿರ್ಮಾಪಕ IFFI ನಲ್ಲಿ ತಮ್ಮ ಅಭಿಪ್ರಾಯ ಹೊರ ಹಾಕಿದ ಹಿನ್ನೆಲೆಯಲ್ಲಿ ಅವರು ಇಸ್ರೇಲ್ ದೇಶದ ಸರ್ಕಾರವನ್ನೇ ಎದುರು ಹಾಕಿಕೊಂಡ ಬಗ್ಗೆಯೂ ಅಭಿಪ್ರಾಯ ಹೊರಬಂದಿವೆ. ಒಬ್ಬ ಯಹೂದಿ ನಿರ್ದೇಶಕನಾಗಿ ಇಡೀ ಇಸ್ರೇಲ್ ಸರ್ಕಾರವೇ ನಿರ್ಮಾಪಕ ನಾದವ್ ಲ್ಯಾಪಿಡ್ ವಿರುದ್ಧ ತಿರುಗಿ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಒಂದಿಡೀ ಸರ್ಕಾರವೇ ಕಾಶ್ಮೀರ್ ಫೈಲ್ಸ್ ಪರವಾಗಿ ನಿಂತಿರುವ ಹಿನ್ನೆಲೆಯಲ್ಲಿ ಇದು ಭಾರತ ಇಸ್ರೇಲ್ ನಡುವಿನ ಬಾಂಧವ್ಯದ ದೃಷ್ಟಿಯಿಂದಲೂ ಸಮಸ್ಯೆ ಎದುರಾಗಬಹುದು ಎಂಬುದು ಗಮನಾರ್ಹ.</p>
]]></content:encoded>
					
		
		
			</item>
		<item>
		<title>ಪತ್ರಾ ಚಾಲ್ ಭೂ ಹಗರಣ ಪ್ರಕರಣ: ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನ ವಿಸ್ತಾರ</title>
		<link>https://peepalmedia.com/patra-chal-land-scam-case-sanjay-rauts-judicial-custody-extended/</link>
		
		<dc:creator><![CDATA[Peepal Media]]></dc:creator>
		<pubDate>Mon, 19 Sep 2022 09:51:08 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[india]]></category>
		<category><![CDATA[judicial custody extended]]></category>
		<category><![CDATA[kannada]]></category>
		<category><![CDATA[New Delhi]]></category>
		<category><![CDATA[news]]></category>
		<category><![CDATA[Patra Chal land scam]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Sanjay Raut]]></category>
		<guid isPermaLink="false">https://peepalmedia.com/?p=6171</guid>

					<description><![CDATA[ನವದೆಹಲಿ: ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೋಮವಾರ 14 ದಿನಗಳವರೆಗೆ ವಿಸ್ತರಿಸಲಾಗಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21 ರ ಬುಧವಾರದಂದು ನಡೆಸಲಾಗುವುದು ಎಂದು ಪಿಎಂಎಲ್‌ಎ ನ್ಯಾಯಾಲಯ ಆದೇಶಿಸಿದೆ. ಈ ಕುರಿತು ವರದಿ ಮಾಡಿರುವ ಸುದ್ದಿ-ಸಂಸ್ಥೆ ಎಎನ್‌ಐ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್‌ಶೀಟ್ ಪ್ರತಿಯನ್ನು ಸಂಜಯ್ ರಾವತ್‌ಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿಸಿದೆ.]]></description>
										<content:encoded><![CDATA[
<p class="has-medium-font-size"><strong>ನವದೆಹಲಿ:</strong> ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೋಮವಾರ 14 ದಿನಗಳವರೆಗೆ ವಿಸ್ತರಿಸಲಾಗಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21 ರ ಬುಧವಾರದಂದು ನಡೆಸಲಾಗುವುದು ಎಂದು ಪಿಎಂಎಲ್‌ಎ ನ್ಯಾಯಾಲಯ ಆದೇಶಿಸಿದೆ.</p>



<p class="has-medium-font-size">ಈ ಕುರಿತು ವರದಿ ಮಾಡಿರುವ ಸುದ್ದಿ-ಸಂಸ್ಥೆ ಎಎನ್‌ಐ, ನ್ಯಾಯಾಲಯದ ನಿರ್ದೇಶನದ ಮೇರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಾರ್ಜ್‌ಶೀಟ್ ಪ್ರತಿಯನ್ನು ಸಂಜಯ್ ರಾವತ್‌ಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿಸಿದೆ.</p>
]]></content:encoded>
					
		
		
			</item>
	</channel>
</rss>
