<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>sbi &#8211; Peepal Media</title>
	<atom:link href="https://peepalmedia.com/tag/sbi/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 16 Mar 2024 07:02:01 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>sbi &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಚುನಾವಣಾ ಬಾಂಡ್‌ನಿಂದ ಬಿಜೆಪಿಯ 8000 ಕೋಟಿ ರೂ.ಲೂಟಿ ಬಯಲು: ಉದ್ಧವ್‌ ಠಾಕ್ರೆ</title>
		<link>https://peepalmedia.com/bjps-loot-of-rs-8000-crore-from-election-bonds-exposed-uddhav-thackeray/</link>
		
		<dc:creator><![CDATA[Peepal Media]]></dc:creator>
		<pubDate>Sat, 16 Mar 2024 07:01:21 +0000</pubDate>
				<category><![CDATA[Uncategorized]]></category>
		<category><![CDATA[ಕರ್ನಾಟಕ ಚುನಾವಣೆ - 2023]]></category>
		<category><![CDATA[ಚುನಾವಣೆ 2023]]></category>
		<category><![CDATA[ಚುನಾವಣೆ 2023- ಪರಿಣಾಮ]]></category>
		<category><![CDATA[ಜನ-ಗಣ-ಮನ]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ವಿಶೇಷ]]></category>
		<category><![CDATA[bjp]]></category>
		<category><![CDATA[india]]></category>
		<category><![CDATA[maharastra]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sbi]]></category>
		<category><![CDATA[state politics]]></category>
		<category><![CDATA[udhav thakre]]></category>
		<guid isPermaLink="false">https://peepalmedia.com/?p=37078</guid>

					<description><![CDATA[ಮುಂಬೈ: ಎಸ್‌ಬಿಐನ ಚುನಾವಣಾ ಬಾಂಡ್‌ಗಳಿಂದಾಗಿ ಬಿಜೆಪಿಯ 8000 ರೂ. ಭ್ರಷ್ಟಾಚಾರದ ಲೂಟಿ ಬಯಲಾಗಿದೆ ಎಂದು ಶೀವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ. ದಕ್ಷಿಣ ಮುಂಬೈನ ಕೋಲಾಬಾದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶವನ್ನು ಲೂಟಿ ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ, ಬಿಜೆಪಿಯು ಚುನಾವಣಾ ಬಾಂಡ್‌ ಯೋಜನೆಯಿಂದಾಗಿ ₹8,000 ಕೋಟಿ ಲೂಟಿ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮೀರಿಸಿದೆ ಎಂದು ದೂರಿದರು. ಬಿಜೆಪಿ ವಿಕಸಿತ ಭಾರತದ ಕನಸು ತೋರಿಸುತ್ತಿದೆ. ಇವರ ಕನಸು [&#8230;]]]></description>
										<content:encoded><![CDATA[
<p><strong>ಮುಂಬೈ:</strong><strong> </strong><strong>ಎಸ್‌ಬಿಐನ</strong> ಚುನಾವಣಾ ಬಾಂಡ್‌ಗಳಿಂದಾಗಿ ಬಿಜೆಪಿಯ 8000 ರೂ. ಭ್ರಷ್ಟಾಚಾರದ ಲೂಟಿ ಬಯಲಾಗಿದೆ ಎಂದು ಶೀವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.</p>



<p>ದಕ್ಷಿಣ ಮುಂಬೈನ ಕೋಲಾಬಾದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶವನ್ನು ಲೂಟಿ ಮಾಡಿದೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ, ಬಿಜೆಪಿಯು ಚುನಾವಣಾ ಬಾಂಡ್‌ ಯೋಜನೆಯಿಂದಾಗಿ ₹8,000 ಕೋಟಿ ಲೂಟಿ ಮಾಡುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮೀರಿಸಿದೆ ಎಂದು ದೂರಿದರು.</p>



<p>ಬಿಜೆಪಿ ವಿಕಸಿತ ಭಾರತದ ಕನಸು ತೋರಿಸುತ್ತಿದೆ. ಇವರ ಕನಸು ಬಿಸಿಲುಗುದುರೆಯಿದ್ದಂತೆ. ಈ ಮೂಲಕ ಬಿಜೆಪಿಯು ಇನ್ನಷ್ಟು ಲೂಟಿ ಮಾಡಲು ಇನ್ನೂ ಐದು ವರ್ಷಗಳ ಕಾಲ &nbsp;ಅಧಿಕಾರದಲ್ಲಿರುವುದಕ್ಕೆ ಬಯಸುತ್ತದೆ. ಮತದಾರರಾದ ನೀವು ಈ ದೇಶವನ್ನು ಮತ್ತೆ ಲೂಟಿಕೋರರ ಕೈಗೆ ಕೊಡುತ್ತಿರೋ ಬಿಡುತ್ತಿರೋ ನಿಮಗೆ ಬಿಟ್ಟದ್ದು ಎಂದು ಮಾರ್ಮಿಕವಾಗಿ ಹೇಳಿದರು.</p>



<p>ಪ್ರಮುಖ ಕಂಪನಿಗಳು ದೇಶದ ವಿವಿಧ ಭಾಗಗಳಲ್ಲಿ ಗುತ್ತಿಗೆ ಪಡೆದಿವೆ. ಚುನಾವಣಾ ಬಾಂಡ್‌ಗಳ ರೂಪದಲ್ಲಿ ಬಿಜೆಪಿಗೆ ದೇಣಿಗೆ ನೀಡುವಂತೆ ಕಂಪನಿಗಳ ಮೇಲೆ ಕೇಂದ್ರ ಸರ್ಕಾರ ಒತ್ತಡ ಹೇರುತ್ತದೆ. ದೇಣಿಗೆ ನೀಡದಿದ್ದರೆ ಕಂಪನಿಗಳ ಕೆಲಸ ಆಗುವುದಿಲ್ಲ. ಹೀಗಾಗಿ ಕಂಪನಿಗಳು ಹೆದರಿಕೊಂಡು ದೇಣಿಗೆ ನೀಡಿವೆ ಎಂದು ಅವರು ಆರೋಪಿಸಿದರು.</p>



<p>ನಾನು ಗುಜರಾತ್‌ ವಿರೋಧಿಯಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ಆ ರಾಜ್ಯವನ್ನು ದೇಶದ ಇತರ ರಾಜ್ಯಗಳ ವಿರುದ್ಧ ಎತ್ತಿ ಕಟ್ಟುವುದನ್ನು ಬಿಡಬೇಕು.. ಮಹಾರಾಷ್ಟ್ರಕ್ಕೆ ಬರುವ ಎಲ್ಲ ಯೋಜನೆಗಳನ್ನು ಗುಜರಾತ್‌ಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಅವರು ಆರೋಪಿಸಿದರು.</p>
]]></content:encoded>
					
		
		
			</item>
		<item>
		<title>ಚುನಾವಣಾ ಬಾಂಡ್‍ ಮೂಲಕ ಬಿಜೆಪಿ ಭ್ರಷ್ಟಾಚಾರಗಳು ಬಯಲಾಗುತ್ತಿವೆ: ಜೈರಾಮ್‌ ರಮೇಶ್‌</title>
		<link>https://peepalmedia.com/bjp-corruptions-are-being-exposed-through-election-bonds-jairam-ramesh/</link>
		
		<dc:creator><![CDATA[Peepal Media]]></dc:creator>
		<pubDate>Fri, 15 Mar 2024 10:09:13 +0000</pubDate>
				<category><![CDATA[ಕರ್ನಾಟಕ ಚುನಾವಣೆ - 2023]]></category>
		<category><![CDATA[ಕೋರ್ಟು - ಕಾನೂನು]]></category>
		<category><![CDATA[ಚುನಾವಣೆ 2023]]></category>
		<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bjp]]></category>
		<category><![CDATA[bjp govt]]></category>
		<category><![CDATA[india]]></category>
		<category><![CDATA[jairam ramesh]]></category>
		<category><![CDATA[jairamramesh]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sbi]]></category>
		<category><![CDATA[sbibaņk]]></category>
		<guid isPermaLink="false">https://peepalmedia.com/?p=37055</guid>

					<description><![CDATA[ನವದೆಹಲಿ: ಚುನಾವಣಾ ಬಾಂಡ್ ಮೂಲಕ ಬಿಜೆಪಿಯ ಹಲವಾರು ಬಗೆಯ ಭ್ರಷ್ಟಾಚಾರಗಳು ಬಯಲಿಗೆ ಬರುತ್ತಿವೆ. ನಿಮ್ಮ ಕಂಪನಿಗೆ ಸರ್ಕಾರದ ರಕ್ಷಣೆ ಬೇಕೆಂದರೆ ದೇಣಿಗೆ ಕೊಡಿ ಎಂದು ಕೇಳುವುದು, ಕಿಕ್‍ಬ್ಯಾಕ್ ಪಡೆಯುವುದು ಮತ್ತು ಶೆಲ್ ಕಂಪನಿಗಳ ಮೂಲಕ ಹಣ ದುರುಪಯೋಗ ಮಾಡುವುದು ಸೇರಿದಂತೆ  ನಾಲ್ಕು ಬಿಜೆಪಿಯ ಭ್ರಷ್ಟ ತಂತ್ರಗಾರಿಕೆಗಳು ಬಯಲುಗೊಗೊಂಡಿವೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ವಿಶಿಷ್ಟ ಬಾಂಡ್ ಐಡಿ ಸಂಖ್ಯೆಗಳನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ. ಇದರಿಂದ ಯಾವ ದಾನಿಗಳು ಯಾವ ಪಕ್ಷಗಳಿಗೆ ದೇಣಿಗೆ [&#8230;]]]></description>
										<content:encoded><![CDATA[
<p>ನವದೆಹಲಿ: ಚುನಾವಣಾ ಬಾಂಡ್ ಮೂಲಕ ಬಿಜೆಪಿಯ ಹಲವಾರು ಬಗೆಯ ಭ್ರಷ್ಟಾಚಾರಗಳು ಬಯಲಿಗೆ ಬರುತ್ತಿವೆ. ನಿಮ್ಮ ಕಂಪನಿಗೆ ಸರ್ಕಾರದ ರಕ್ಷಣೆ ಬೇಕೆಂದರೆ ದೇಣಿಗೆ ಕೊಡಿ ಎಂದು ಕೇಳುವುದು, ಕಿಕ್‍ಬ್ಯಾಕ್ ಪಡೆಯುವುದು ಮತ್ತು ಶೆಲ್ ಕಂಪನಿಗಳ ಮೂಲಕ ಹಣ ದುರುಪಯೋಗ ಮಾಡುವುದು ಸೇರಿದಂತೆ  ನಾಲ್ಕು ಬಿಜೆಪಿಯ ಭ್ರಷ್ಟ ತಂತ್ರಗಾರಿಕೆಗಳು ಬಯಲುಗೊಗೊಂಡಿವೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.</p>



<p>ವಿಶಿಷ್ಟ ಬಾಂಡ್ ಐಡಿ ಸಂಖ್ಯೆಗಳನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತದೆ. ಇದರಿಂದ ಯಾವ ದಾನಿಗಳು ಯಾವ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ ಎನ್ನುವುದು ಕೂಡಾ ತಿಳಿಯುತ್ತದೆ ಎಂದು ಅವರು ಎಕ್ಸ್ ಪೋಸ್ಟ್ ನಲ್ಲಿ &nbsp;ಆಗ್ರಹಿಸಿದ್ದಾರೆ.</p>



<p>ಚುನಾವಣೆ ಮುಗಿಯುವವರೆಗೂ ವಿವರ ಬಹಿರಂಗಪಡಿಸುವುದನ್ನು ಮುಂದೂಡುವ ಸತತ ಪ್ರಯತ್ನ ಎಸ್‌ಬಿಐ ಮತ್ತು ಬಿಜೆಪಿ ಮಾಡಿದವು. ಈಗ ಸುಪ್ರೀಂಕೋರ್ಟ್ ಒತ್ತಡದ ನಿರ್ದೇಶನದಂತೆ ಎಸ್‍ಬಿಐ ಒಂದಿಷ್ಟು ವಿವರಗಳನ್ನು ಬಹಿರಂಗಪಡಿಸಿದೆ. 1300ಕ್ಕೂ ಅಧಿಕ ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‍ಗಳ ಮೂಲಕ ದೇಣಿಗೆ ಬಿಜೆಪಿಗೆ ದೇಣಿಗೆ ನೀಡಿದ್ದಾರೆ. ಬಿಜೆಪಿ 2019ರ ಬಳಿಕ 6000 ಕೋಟಿಗೂ ಅಧಿಕ ಮೊತ್ತದ ದೇಣಿಗೆ ಸ್ವೀಕರಿಸಿದೆ. ಚುನಾವಣಾ ಬಾಂಡ್‍ಗಳ ವಿವರಗಳು ಸದ್ಯಕ್ಕೆ ಬಿಜೆಪಿಯ ನಾಲ್ಕು ತಂತ್ರಗಳನ್ನು ಬಯಲುಗೊಳಿಸಿವೆ. ಇನ್ನೆಷ್ಟು ತಂತ್ರಗಳಿವೆಯೋ ಎಂದು ಅವರು ಆರೋಪಿಸಿದ್ದಾರೆ.</p>



<p>ಮೇಘಾ ಎಂಜಿನಿಯರಿಂಗ್ ಎಂಬ ಕಂಪನಿಯು 2023ರ ಏಪ್ರಿಲ್‍ನಲ್ಲಿ 800 ಕೋಟಿಗೂ ಅಧಿಕ ಮೊತ್ತವನ್ನು ಬಾಂಡ್ ಖರೀದಿಗೆ ವ್ಯಯಿಸಿದೆ. ಇದಕ್ಕೂ ಒಂದು ತಿಂಗಳ ಮುನ್ನ ಕಂಪನಿಗೆ 14400 ಕೋಟಿ ರೂಪಾಯಿ ಮೊತ್ತದ ಥಾಣೆ- ಬೊರಿವಿಲಿ ಅವಳಿ ಸುರಂಗ ಕಾಮಗಾರಿಯ ಗುತ್ತಿಗೆ ನೀಡಲಾಗಿತ್ತು. ಹೀಗೆ ಕಂಪನಿಗಳ ಜೊತೆ ಕೊಡುವ ಮತ್ತು ತೆಗೆದುಕೊಳ್ಳುವ ಭ್ರಷ್ಟಾಚಾರವನ್ನು ಬಿಜೆಪಿ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>&#8216;ಆಕಸ್ಮಿಕ ಸಾವು&#8217;: ಪರೇಶ್ ಮೇಸ್ತಾ ಪ್ರಕರಣದ ಅಂತಿಮ ವರದಿ ಸಲ್ಲಿಸಿದ ಸಿಬಿಐ</title>
		<link>https://peepalmedia.com/accidental-death-cbi-submits-final-report-in-paresh-mesta-case/</link>
		
		<dc:creator><![CDATA[Peepal Media]]></dc:creator>
		<pubDate>Tue, 04 Oct 2022 07:40:30 +0000</pubDate>
				<category><![CDATA[ಉತ್ತರ ಕನ್ನಡ]]></category>
		<category><![CDATA[ರಾಜ್ಯ]]></category>
		<category><![CDATA[honnavara]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[Paresh Mesta death case]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sbi]]></category>
		<guid isPermaLink="false">https://peepalmedia.com/?p=8880</guid>

					<description><![CDATA[ಹೊನ್ನಾವರ: ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದ ಅಂತಿಮ ವರದಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿದೆ. ಫೆಡರಲ್ ತನಿಖಾ ಸಂಸ್ಥೆಯು 4 ವರ್ಷಗಳಿಗೂ ಹೆಚ್ಚು ಕಾಲ ಪ್ರಕರಣವನ್ನು ತನಿಖೆ ಮಾಡಿದ ನಂತರ 1,500 ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದೆ. ವರದಿಯಲ್ಲಿ 19 ವರ್ಷದ ಮೆಸ್ತಾ ಸಾವು ಆಕಸ್ಮಿಕವೇ ಹೊರತು ಕೊಲೆಯಲ್ಲ ಎಂದು ಸಿಬಿಐ ತಿಳಿಸಿದೆ. &#160;ತನಿಖೆಯ ಸಮಯದಲ್ಲಿ, ಆರೋಪಿಗಳ ಪಾಲ್ಗೊಳ್ಳುವಿಕೆಯನ್ನು ತೋರಿಸುವ ಯಾವುದೇ ದೋಷಾರೋಪಣೆಯ ಪುರಾವೆಗಳು ಹೊರಹೊಮ್ಮಿಲ್ಲ ಮತ್ತು ಅನೇಕ ಸಂಸ್ಥೆಗಳಿಂದ [&#8230;]]]></description>
										<content:encoded><![CDATA[
<p style="font-size:20px"><strong>ಹೊನ್ನಾವರ:</strong> ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದ ಅಂತಿಮ ವರದಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಹೊನ್ನಾವರದ ನ್ಯಾಯಾಲಯಕ್ಕೆ ಸಲ್ಲಿಸಿದೆ.</p>



<p style="font-size:20px">ಫೆಡರಲ್ ತನಿಖಾ ಸಂಸ್ಥೆಯು 4 ವರ್ಷಗಳಿಗೂ ಹೆಚ್ಚು ಕಾಲ ಪ್ರಕರಣವನ್ನು ತನಿಖೆ ಮಾಡಿದ ನಂತರ 1,500 ಪುಟಗಳ ಅಂತಿಮ ವರದಿಯನ್ನು ಸಲ್ಲಿಸಿದೆ. ವರದಿಯಲ್ಲಿ 19 ವರ್ಷದ ಮೆಸ್ತಾ ಸಾವು ಆಕಸ್ಮಿಕವೇ ಹೊರತು ಕೊಲೆಯಲ್ಲ ಎಂದು ಸಿಬಿಐ ತಿಳಿಸಿದೆ.</p>



<p style="font-size:20px">&nbsp;ತನಿಖೆಯ ಸಮಯದಲ್ಲಿ, ಆರೋಪಿಗಳ ಪಾಲ್ಗೊಳ್ಳುವಿಕೆಯನ್ನು ತೋರಿಸುವ ಯಾವುದೇ ದೋಷಾರೋಪಣೆಯ ಪುರಾವೆಗಳು ಹೊರಹೊಮ್ಮಿಲ್ಲ ಮತ್ತು ಅನೇಕ ಸಂಸ್ಥೆಗಳಿಂದ ಸಂಗ್ರಹಿಸಲಾದ ವೈದ್ಯಕೀಯ-ಕಾನೂನು ಪುರಾವೆಗಳು ಸಹ ಪರೇಶ್ ಮೇಸ್ತಾ ಅವರ ಮರಣ ಆಕಸ್ಮಿಕ ಎಂದು ದೃಢಪಡಿಸಿವೆ ಎಂದು ಸಿಬಿಐ ವರದಿ ಹೇಳಿದೆ.</p>



<p style="font-size:20px">ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ನಗರದಲ್ಲಿ ಗುಂಪು ಹಿಂಸಾಚಾರದ ಘಟನೆಯ ನಂತರ ಮೀನುಗಾರ ಮೇಸ್ತಾ ಡಿಸೆಂಬರ್ 6, 2017 ರಂದು ನಾಪತ್ತೆಯಾಗಿದ್ದರು. ಎರಡು ದಿನಗಳ ನಂತರ ಆತನ ಶವ ಸರೋವರದ ಬಳಿ ಪತ್ತೆಯಾಗಿತ್ತು. ಈ ಹಿನ್ನಲೆ ಬಲಪಂಥೀಯ ಗುಂಪುಗಳು ಮತ್ತು ಆಗಿನ ವಿರೋಧ ಪಕ್ಷ ಬಿಜೆಪಿಯು ಮೇಸ್ತಾನನ್ನು ಹಿಂಸಾಚಾರದಲ್ಲಿ ಕೊಂದು ಆತನ ದೇಹವನ್ನು ಸರೋವರದ ಬಳಿ ಎಸೆಯಲಾಗಿದೆ ಎಂದು ಆರೋಪಿಸಿದ್ದರು.</p>



<p style="font-size:20px">ಪರೇಶ್ ಮೇಸ್ತಾ ಅವರ ಶವವನ್ನು ಸರೋವರಕ್ಕೆ ಬಿಸಾಡುವ ಮೊದಲು ಮೇಸ್ತಾಗೆ ಇತರ ಧರ್ಮದ ಜನರು ಚಿತ್ರಹಿಂಸೆ ನೀಡಿದ್ದಾರೆ ಎಂದು ಹಿಂದೂ ಪರ ಗುಂಪುಗಳು ಹೇಳಿಕೆ ನೀಡಿದ್ದವು. ಇದರಿಂದಾಗಿ ಹೊನ್ನಾವರ, ಕುಮಟಾ ಮತ್ತು ಶಿರಸಿಯಲ್ಲಿ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಯಿತು.</p>



<p style="font-size:20px">ಈ ಹಿನ್ನಲೆ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಹೀಗಾಗಿ ಪ್ರತಿಪಕ್ಷಗಳ ಒತ್ತಡದ ನಂತರ ಸಿದ್ದರಾಮಯ್ಯ ಡಿಸೆಂಬರ್ 13, 2017 ರಂದು ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದರು.</p>
]]></content:encoded>
					
		
		
			</item>
	</channel>
</rss>
