<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Shankaracharya &#8211; Peepal Media</title>
	<atom:link href="https://peepalmedia.com/tag/shankaracharya/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 24 Sep 2024 13:54:02 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Shankaracharya &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಪ್ರಧಾನಿ ಮತ್ತು ರಾಷ್ಟ್ರಪತಿ ಹಿಂದುಗಳೇ ಅಲ್ಲ! &#8211; ಶಂಕರಾಚಾರ್ಯ</title>
		<link>https://peepalmedia.com/pm-president-not-hindus-shankaracharya/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 24 Sep 2024 13:29:25 +0000</pubDate>
				<category><![CDATA[ದೇಶ]]></category>
		<category><![CDATA[Bharatiya Janata Party]]></category>
		<category><![CDATA[bjp]]></category>
		<category><![CDATA[Draupadi Murmu]]></category>
		<category><![CDATA[hindu]]></category>
		<category><![CDATA[hindutva]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[president]]></category>
		<category><![CDATA[Shankaracharya]]></category>
		<guid isPermaLink="false">https://peepalmedia.com/?p=46055</guid>

					<description><![CDATA[ಬೆಂಗಳೂರು: ಸದ್ಯದ ಬಿಜೆಪಿ ಆಡಳಿತದಲ್ಲಿ ಗೋಹತ್ಯೆ ಮುಂದುವರಿದಿದೆ ಎನ್ನುತ್ತಾ ಜ್ಯೋತಿರ್ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು &#8220;ಪ್ರಧಾನಿ ಮತ್ತು ರಾಷ್ಟ್ರಪತಿ ಹುದ್ದೆಗಳಲ್ಲಿ ಕುಳಿತವರು ಹಿಂದೂಗಳಲ್ಲ,&#8221; ಎಂದು ಹೇಳಿದ್ದಾರೆ. &#8216;ಗೋಧ್ವಜ ಸ್ಥಾಪನಾ ಭಾರತ ಯಾತ್ರೆ&#8217;ಯ ಎರಡನೇ ದಿನವಾದ ಇಂದು ಲಕ್ನೋದಲ್ಲಿ ಮಾತನಾಡಿದ ಅವಿಮುಕ್ತೇಶ್ವರಾನಂದ್, &#8220;ಯಾವುದೇ ಒಬ್ಬ ಹಿಂದೂ ಪ್ರಧಾನಿ ಅಥವಾ ರಾಷ್ಟ್ರಪತಿ ಗೋಹತ್ಯೆ ನಿಲ್ಲಿಸಲು ಆದೇಶವನ್ನು ಹೊರಡಿಸುತ್ತಾರೆ, ಇಲ್ಲವೇ ರಾಜೀನಾಮೆ ನೀಡುತ್ತಾರೆ,&#8221; ಎನ್ನುತ್ತಾ ಆ ಹುದ್ದೆಗಳಲ್ಲಿ ಇರುವವರು &#8220;ಪ್ರದರ್ಶನಕ್ಕೆ ಇಟ್ಟಿರುವ ಲಕ್ನೋ ಆನೆಯ ಪ್ರತಿಮೆಗಳು,” ಎಂದು ಟೀಕಿಸಿದ್ದಾರೆ ಜ್ಯೋತಿರ್ಮಠ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಸದ್ಯದ ಬಿಜೆಪಿ ಆಡಳಿತದಲ್ಲಿ ಗೋಹತ್ಯೆ ಮುಂದುವರಿದಿದೆ ಎನ್ನುತ್ತಾ ಜ್ಯೋತಿರ್ಮಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು &#8220;ಪ್ರಧಾನಿ ಮತ್ತು ರಾಷ್ಟ್ರಪತಿ ಹುದ್ದೆಗಳಲ್ಲಿ ಕುಳಿತವರು ಹಿಂದೂಗಳಲ್ಲ,&#8221; ಎಂದು ಹೇಳಿದ್ದಾರೆ.</p>



<p>&#8216;ಗೋಧ್ವಜ ಸ್ಥಾಪನಾ ಭಾರತ ಯಾತ್ರೆ&#8217;ಯ ಎರಡನೇ ದಿನವಾದ ಇಂದು ಲಕ್ನೋದಲ್ಲಿ ಮಾತನಾಡಿದ ಅವಿಮುಕ್ತೇಶ್ವರಾನಂದ್, &#8220;ಯಾವುದೇ ಒಬ್ಬ ಹಿಂದೂ ಪ್ರಧಾನಿ ಅಥವಾ ರಾಷ್ಟ್ರಪತಿ ಗೋಹತ್ಯೆ ನಿಲ್ಲಿಸಲು ಆದೇಶವನ್ನು ಹೊರಡಿಸುತ್ತಾರೆ, ಇಲ್ಲವೇ ರಾಜೀನಾಮೆ ನೀಡುತ್ತಾರೆ,&#8221; ಎನ್ನುತ್ತಾ ಆ ಹುದ್ದೆಗಳಲ್ಲಿ ಇರುವವರು &#8220;ಪ್ರದರ್ಶನಕ್ಕೆ ಇಟ್ಟಿರುವ ಲಕ್ನೋ ಆನೆಯ ಪ್ರತಿಮೆಗಳು,” ಎಂದು ಟೀಕಿಸಿದ್ದಾರೆ</p>



<p>ಜ್ಯೋತಿರ್ಮಠ ಶಂಕರಾಚಾರ್ಯರು ಆರಂಭಿಸಿದ &#8216;ಗೋಧ್ವಜ ಸ್ಥಾಪನಾ ಭಾರತ ಯಾತ್ರೆ&#8217; ಭಾನುವಾರ ಅಯೋಧ್ಯೆಯಿಂದ ಆರಂಭಗೊಂಡಿದ್ದು, ಸೋಮವಾರ ಲಖನೌ ತಲುಪಿದ್ದು, ಇದೀಗ ಬಿಹಾರದ ಬಕ್ಸಾರ್‌ಗೆ ತೆರಳಲಿದೆ.</p>



<p>“ಅವರಲ್ಲಿ ಹಿಂದೂ ಯಾರು? ಯಾವ ರಾಷ್ಟ್ರಪತಿ ಹಿಂದೂ; ಯಾವ ಪ್ರಧಾನಿ ಹಿಂದೂ? ಅವರು ಹಿಂದೂಗಳಾಗಿದ್ದರೆ ಅವರ ಆಡಳಿತದಲ್ಲಿ ಗೋಹತ್ಯೆ ಮುಂದುವರಿಯುತ್ತಿತ್ತೇ? ನೀವು ಹಿಂದೂಗಳು. ನಿಮ್ಮನ್ನು ಪ್ರಧಾನಿಯನ್ನಾಗಿ ಮಾಡಿದರೆ, ನಿಮ್ಮ ಆಡಳಿತದಲ್ಲಿ ಗೋಹತ್ಯೆಯನ್ನು ಒಪ್ಪಿಕೊಳ್ಳುತ್ತೀರಾ?&#8221; ಎಂದು ಪ್ರಧಾನಿ ಮತ್ತು ರಾಷ್ಟ್ರಪತಿ ಇಬ್ಬರೂ ಹಿಂದೂಗಳು ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದ್ದಾರೆ. </p>



<p>ಲಕ್ನೋದ ಇಂದಿರಾಗಾಂಧಿ ಪ್ರತಿಷ್ಠಾನದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಜ್ಯೋತಿರ್ಮಠ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ್, “ಇಲ್ಲಿಯವರೆಗೆ, ಯಾವುದೇ ಹಿಂದೂ ಈ ಹುದ್ದೆಗಳನ್ನು (ಪ್ರಧಾನಿ/ರಾಷ್ಟ್ರಪತಿ) ವಹಿಸಿಕೊಂಡಿಲ್ಲ. ಹೀಗಿದ್ದಿದ್ದರೆ ಅವರ ಅಂತರಂಗದ ಆತ್ಮಸಾಕ್ಷಿ ಇದನ್ನು (ಗೋಹತ್ಯೆ) ಮುಂದುವರಿಯುವಂತೆ ಮಾಡಲು ಬಿಡುತ್ತಿರಲಿಲ್ಲ. ಅವರು ಹುದ್ದೆಗೆ ರಾಜೀನಾಮೆ ನೀಡುತ್ತಿದ್ದರು ಇಲ್ಲವೇ, ಇಲ್ಲಿ ಗೋಹತ್ಯೆ ಮಾಡುವಂತಿಲ್ಲ ಎಂದು ಆದೇಶ ಹೊರಡಿಸುತ್ತಿದ್ದರು,&#8221; ಎಂದು ಹೇಳಿದ್ದಾರೆ.</p>



<p>&#8220;ಈಗ ಈ ಹುದ್ದೆಗಳಲ್ಲಿ ಯಾವೊಬ್ಬ ಹಿಂದೂವೂ ಕುಳಿತಿಲ್ಲ&#8221; ಎಂದೂ ಅವರು ಹೇಳಿದ್ದಾರೆ.</p>



<p>“ಲಕ್ನೋದ ಉದ್ಯಾನವನಗಳಲ್ಲಿರುವ ಆನೆಗಳಂತೆಯೇ… ಅವು (ನಿಜವಾದ) ಆನೆಗಳೇ? ಅವು ನಡೆಯುತ್ತವೆಯೇ? ಅವು ಪ್ರದರ್ಶನಕ್ಕೆ ಮಾತ್ರ, ಅಲ್ಲಿ ನಿಲ್ಲಿಸಲು ಮಾತ್ರ. ಲಕ್ನೋದ ಉದ್ಯಾನವನಗಳ ಆನೆಗಳು ಕೇವಲ ಪ್ರದರ್ಶನಕ್ಕಾಗಿ ಮತ್ತು ನಡೆಯಲು ಸಾಧ್ಯವಿಲ್ಲ, ಮರವನ್ನು ಮುರಿಯಲು ಸಾಧ್ಯವಿಲ್ಲ ಮತ್ತು ಸೌಂದರ್ಯವನ್ನು ನೀಡಲೂ ಸಾಧ್ಯವಿಲ್ಲ … ಅದೇ ರೀತಿಯಲ್ಲಿ, ಅವರು ಪ್ರದರ್ಶನಕ್ಕಾಗಿರುವ ಹಿಂದೂಗಳು … ನಿಜವಾದ ಹಿಂದೂಗಳಲ್ಲ. ಅವರು ಹಿಂದೂಗಳಾಗಿದ್ದರೆ, ಅವರ ಆಡಳಿತದಲ್ಲಿ ಒಂದೇ ಒಂದು ಬಾರಿಯೂ ಗೋಹತ್ಯೆ ನಡೆಯುತ್ತಿರಲಿಲ್ಲ,&#8221; ಎಂದು ಅವರು ಹೇಳಿದರು.</p>



<p>ಅಯೋಧ್ಯೆಯಲ್ಲಿ &#8216;ಗೋಧ್ವಜ ಸ್ಥಾಪನಾ ಭಾರತ ಯಾತ್ರೆ&#8217; ನಡೆಸುವಾಗ ಗೋಹತ್ಯೆ ನಿಲ್ಲಿಸಲು ಶಕ್ತಿ ನೀಡುವಂತೆ ರಾಮ್ ಲಲ್ಲಾನ ಬಳಿ ಕೇಳಿದ್ದೇನೆ, ಗೋಹತ್ಯೆ ನಿಷೇಧ ಈಡೇರಿಸುವವರೆಗೆ ದೇವರ ದರ್ಶನಕ್ಕೆ ಹೋಗುವುದಿಲ್ಲ ಎಂದು ಶಪಥ ಮಾಡಿದ್ದೇನೆ ಎಂದು ಅವಿಮುಕ್ತೇಶ್ವರಾನಂದರು ಹೇಳಿದ್ದಾರೆ.</p>



<p>ಜ್ಯೋತಿರ್ಮಠ ಶಂಕರಾಚಾರ್ಯರು ಯಾತ್ರೆಯ ಪ್ರಾರಂಭಕ್ಕಾಗಿ ಭಾನುವಾರ ಅಯೋಧ್ಯೆಯಲ್ಲಿದ್ದರು ಆದರೆ ರಾಮ ಮಂದಿರಕ್ಕೆ ಭೇಟಿ ನೀಡುವುದನ್ನು ತಪ್ಪಿಸಿದರು ಮತ್ತು ಅದರ ಸಂಕೀರ್ಣವನ್ನು ಮಾತ್ರ ಪ್ರದಕ್ಷಿಣೆ ಮಾಡಿದರು.</p>



<p>ದೇವಾಲಯಕ್ಕೆ ಏಕೆ ಭೇಟಿ ನೀಡಲಿಲ್ಲ ಎಂಬ ಪ್ರಶ್ನೆಗೆ, ಅವಿಮುಕ್ತೇಶ್ವರಾನಂದರು, &#8220;ಭಾಗಶಃ ನಿರ್ಮಿಸಲಾದ ದೇವಾಲಯದಲ್ಲಿ ಯಾರೂ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ ಮತ್ತು ಅದರ &#8216;ಶಿಖರ&#8217; ಪೂರ್ಣಗೊಂಡ ನಂತರ ದೇವಾಲಯಕ್ಕೆ ಭೇಟಿ ನೀಡುತ್ತೇನೆ,&#8221; ಎಂದು ಹೇಳಿದರು.</p>



<p>2024 ರ ಜನವರಿಯಲ್ಲಿ, ಅವಿಮುಕ್ತೇಶ್ವರಾನಂದರವರು ಅಪೂರ್ಣವಾಗಿರುವ ರಾಮಮಂದಿರದಲ್ಲಿ ರಾಮ ಲಲ್ಲಾನ &#8216;ಪ್ರಾಣ ಪ್ರತಿಷ್ಠೆ&#8217; ಮಾಡಿದ್ದು ʼಶಾಸ್ತ್ರಗಳಿಗೆ ವಿರುದ್ಧವಾಗಿದೆʼ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ ಸುದ್ದಿಯಾಗಿದ್ದರು. </p>



<p>ಇಂದು ಸೋಮವಾರ, &#8220;ರಾಮನ ಜೊತೆಗೆ, ನಮಗೆ ಲಕ್ಷ್ಮಣ ಜೀ ಕೂಡ ಬೇಕು &#8211; ಅದಕ್ಕಾಗಿಯೇ ನಾವು ಲಕ್ಷ್ಮಣಪುರಿಗೆ ಬಂದಿದ್ದೇವೆ (ಲಕ್ನೋದ ಹಳೆಯ ಹೆಸರು, ಇದನ್ನು ರಾಮನ ಕಿರಿಯ ಸಹೋದರ ಲಕ್ಷ್ಮಣ ಸ್ಥಾಪಿಸಿದ ಎಂದು ಪುರಾಣ ಹೇಳುತ್ತದೆ)&#8221; ಎಂದು ಹೇಳಿದರು. ಸ್ವಾಮೀಜಿ ದೇಶಾದ್ಯಂತ ಸಂಚರಿಸಲು ಯೋಜನೆ ಹಾಕಿಕೊಂಡಿದ್ದು, ಎಲ್ಲಾ ರಾಜ್ಯಗಳಲ್ಲಿ ʼಗೋಧ್ವಜʼ ಸ್ಥಾಪಿಸಲು ಯೋಜಿಸಿತ್ತಿರುವುದಾಗಿ ಹೇಳಿದ್ದಾರೆ. </p>



<p><strong>&#8216;ಯೋಗಿ ಇದ್ದರೂ ಗೋಮಾಂಸ ರಫ್ತಿನಲ್ಲಿ ಯುಪಿ ಅಗ್ರಸ್ಥಾನ &#8211; ತಿರುಪತಿ ಲಡ್ಡು ತನಿಖೆ ವಿಳಂಬ&#8217;</strong><br><br>ಗೋಹತ್ಯೆ ನಿಷೇಧಕ್ಕೆ ಕೇಂದ್ರ ಸರಕಾರ ಕಾನೂನನ್ನು ರೂಪಿಸಬೇಕು ಎಂದಿರುವ ಜ್ಯೋತಿರ್ಮಠ ಶಂಕರಾಚಾರ್ಯರು ಸರಕಾರಕ್ಕೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸದ್ಯಕ್ಕೆ ಮಠ ತೊರೆದಿರುವುದಾಗಿ ಹೇಳಿದ್ದಾರೆ.</p>



<p>&#8220;ಮಹಂತ್ ಯೋಗಿ ಆದಿತ್ಯನಾಥ್ ಅವರು ಯುಪಿ ಮುಖ್ಯಮಂತ್ರಿಯಾಗಿದ್ದಾರೆ … ಹೀಗಿದ್ದೂ, ಯುಪಿ ಗರಿಷ್ಠ ಪ್ರಮಾಣದಲ್ಲಿ ಗೋಮಾಂಸ ರಫ್ತು ಮಾಡುತ್ತಿದೆ … ಬಿಜೆಪಿ ಮೊದಲು ನನ್ನ ಯಾತ್ರೆಯನ್ನು ವಿರೋಧಿಸಿತು &#8211; ಇದು ನನಗೆ ಆಶ್ಚರ್ಯವನ್ನುಂಟುಮಾಡಿತು&#8221; ಎಂದು ಅವರು ಹೇಳಿದರು.</p>



<p>“ನಮ್ಮನ್ನು ನಾಗಾಲ್ಯಾಂಡ್‌ನಲ್ಲಿ ನಿಲ್ಲಿಸಲಾಯಿತು, ಆದರೆ ನಾವು ಇನ್ನೂ ನಾಗಾಲ್ಯಾಂಡ್‌ಗೆ ಭೇಟಿ ನೀಡುತ್ತೇವೆ. ಇದು ಬಿಜೆಪಿಯ ದ್ವಂದ್ವ ನೀತಿ- ಇದು ನನಗೆ ಆಶ್ಚರ್ಯ ತಂದಿದೆ,&#8221; ಎಂದು ಅವರು ಹೇಳಿದರು. “ಶಂಕರಾಚಾರ್ಯರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಗೋವನ್ನು ತಿನ್ನುವುದು ಅವರ ಹಕ್ಕು ಎಂದು ಅಲ್ಪಸಂಖ್ಯಾತರು ಹೇಳಲು ಸಾಧ್ಯವಿಲ್ಲ. ಹೀಗಿದ್ದರೆ, ಅವರು ಷರಿಯಾ ಕಾನೂನು ಹೊಂದಿರುವ ದೇಶಕ್ಕೆ ಹೋಗಲಿ,&#8221; ಎಂದು ಹೇಳಿಕೆ ನೀಡಿದ್ದಾರೆ.</p>



<p>ತಿರುಪತಿ ಲಡ್ಡು ಪ್ರಸಾದದ ವಿಚಾರದಲ್ಲಿ ಮಾತನಾಡಿದ ಅವಿಮುಕ್ತೇಶ್ವರಾನಂದ, ಕೋಟ್ಯಂತರ ಜನ ಗೋಮಾಂಸದ ಕೊಬ್ಬಿನಂಶವಿರುವ ಪ್ರಸಾದ ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.</p>



<p>ಸೆಪ್ಟೆಂಬರ್ 18 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಹಿಂದಿನ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಡಳಿತದಲ್ಲಿ ತಿರುಪತಿ ಪ್ರಸಾದದ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸಿದ್ದು ಭಾರೀ ಗದ್ದಲಕ್ಕೆ ಕಾರಣವಾಯಿತು. ರೆಡ್ಡಿ ಆರೋಪಗಳನ್ನು &#8220;ಹೇಯ&#8221; ಮತ್ತು &#8220;ಶುದ್ಧ ಸುಳ್ಳು&#8221;, ಇದು ರಾಜಕೀಯ ಲಾಭಕ್ಕಾಗಿ ಸಿಎಂ ಮಾಡಿರುವ ವಿವಾದ ಎಂದು ಅವರು ಹೇಳಿದ್ದರು.</p>



<p>ಈ ಕುರಿತು ಮಾತನಾಡಿದ ಜ್ಯೋತಿರ್ಮಠದ ಶಂಕರಾಚಾರ್ಯರು, “ಜನ ಹಿಂದೂಗಳ ಮತವನ್ನು ಪಡೆದು ಆದರೆ ಹಿಂದೂಗಳಿಗೆ ದ್ರೋಹ ಬಗೆಯುತ್ತಿದ್ದಾರೆ. ಇವರ ಮತಗಳನ್ನು ತೆಗೆದುಕೊಂಡು ಇನ್ನೂ ಗೋಹತ್ಯೆಯನ್ನು ಮುಂದುವರಿಸಿದ್ದಾರೆ … ಇದನ್ನು ಸಹಿಸಲು ಸಾಧ್ಯವಿಲ್ಲ. ಈ ಪರಿಸ್ಥಿತಿಯು ಭವಿಷ್ಯದಲ್ಲಿ ಬೆಳೆಯದಂತೆ ನೋಡಿಕೊಳ್ಳಲು ನಾವು ನಮ್ಮ &#8216;ಮಠ&#8217;ವನ್ನು ತೊರೆಯುತ್ತಿದ್ದೇವೆ,&#8221; ಎಂದು ಹೇಳಿದರು.</p>



<p>&#8220;ಈ ದೇಶದಲ್ಲಿ &#8216;ಒಂದು ರಾಷ್ಟ್ರ ಒಂದು ಚುನಾವಣೆ&#8217; ಚರ್ಚೆಯಲ್ಲಿರುವಾಗ, ನಾವು ರಾಜ್ಯಗಳಾದ್ಯಂತ &#8216;ಗೋಮಾತೆ&#8217;ಗಾಗಿ ಬೇರೆ ಬೇರೆ ಕಾನೂನುಗಳನ್ನು ಏಕೆ ಹೊಂದಿದ್ದೇವೆ?&#8221; ಎಂದು ಪ್ರಶ್ನಿಸಿದರು.</p>



<p>ತಿರುಪತಿಯಲ್ಲಿ ಪ್ರಸಾದ ತಯಾರಿಸಲು ಬಳಸುವ ತುಪ್ಪದಲ್ಲಿ ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿಯನ್ನು ರಚಿಸಲು ತುಂಬಾ ಸಮಯ ತೆಗೆದುಕೊಳ್ಳುತ್ತಿದೆ ಎಂದು ಜ್ಯೋತಿರ್ಮಠ ಶಂಕರಾಚಾರ್ಯರು ಟೀಕಿಸಿದ್ದಾರೆ.</p>



<p>&#8220;ಇದು ಸಣ್ಣ ಸಮಸ್ಯೆ ಎಂದು ನೀವು ಭಾವಿಸುತ್ತೀರಾ? ಈಗಾಗಲೇ ತನಿಖೆ ಆರಂಭವಾಗಬೇಕಿತ್ತು. ಆದರೆ ಏನಾಗುತ್ತಿದೆ? ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ? ಕೋಟ್ಯಂತರ ಹಿಂದೂಗಳ ಪರಿಶುದ್ಧತೆಗೆ ಭಂಗ ತರುವ ಯತ್ನ ನಡೆಯುತ್ತಿದೆ,&#8221; ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.</p>



<p>ಆಂಧ್ರಪ್ರದೇಶ ಸರ್ಕಾರ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲು ಏಕೆ ಇಷ್ಟು ಸಮಯ ತೆಗೆದುಕೊಳ್ಳುತ್ತಿದೆ ಎಂದು ಪ್ರಶ್ನಿಸಿದ ಅವರು, ಎಸ್‌ಐಟಿ ತನಿಖೆಯನ್ನು ಪೂರ್ಣಗೊಳಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನಿಸಿದರು. &#8220;ಸಮಸ್ಯೆಯು ಹಿನ್ನಲೆಗೆ ಸರಿಬೇಕೆಂದು ಸರ್ಕಾರ ಬಯಸುತ್ತದೆಯೇ?&#8221; ಎಂದು ಕೇಳಿದ್ದಾರೆ.</p>



<p></p>
]]></content:encoded>
					
		
		
			</item>
	</channel>
</rss>
