<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>shimogga &#8211; Peepal Media</title>
	<atom:link href="https://peepalmedia.com/tag/shimogga/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 01 Oct 2024 12:05:59 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>shimogga &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಹರ್ಷ ಕೊಲೆ ತನಿಖೆ ಎನ್‌ಐಎಗೆ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಜಾ ಮಾಡಿದ ಹೈಕೋರ್ಟ್</title>
		<link>https://peepalmedia.com/harsha-murder-case-to-nia-hc-dismissed-plea-of-accuse/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 01 Oct 2024 12:05:59 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[harsha]]></category>
		<category><![CDATA[harsha murder case]]></category>
		<category><![CDATA[HC]]></category>
		<category><![CDATA[high court]]></category>
		<category><![CDATA[hindutva]]></category>
		<category><![CDATA[karnataka]]></category>
		<category><![CDATA[shiamogga]]></category>
		<category><![CDATA[shimogga]]></category>
		<guid isPermaLink="false">https://peepalmedia.com/?p=46500</guid>

					<description><![CDATA[ಬೆಂಗಳೂರು: ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿದ್ದ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕ್ಕೆ ವಹಿಸಿದ್ದನ್ನು ಪ್ರಶ್ನಿಸಿ ಹಾಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಶಿವಮೊಗ್ಗದ ಹೊಸಬೀದಿಯ ನಿವಾಸಿ ಎ.ರೋಷನ್ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಪ್ರಕರಣವನ್ನು ಎನ್‍ಐಎಗೆ ವಹಿಸಲು ಅನುಮತಿ ಪಡೆದಿಲ್ಲ ಎಂಬ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಿದ್ದ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕ್ಕೆ ವಹಿಸಿದ್ದನ್ನು ಪ್ರಶ್ನಿಸಿ ಹಾಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.</p>



<p>ಶಿವಮೊಗ್ಗದ ಹೊಸಬೀದಿಯ ನಿವಾಸಿ ಎ.ರೋಷನ್ ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜೆ ಎಂ ಖಾಜಿ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ.</p>



<p>ಪ್ರಕರಣವನ್ನು ಎನ್‍ಐಎಗೆ ವಹಿಸಲು ಅನುಮತಿ ಪಡೆದಿಲ್ಲ ಎಂಬ ಅರ್ಜಿದಾರರ ಪರ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. ಈ ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ನಂತರವಷ್ಟೇ ತನಿಖೆಯ ಹೊಣೆಯನ್ನು ಎನ್‍ಐಎಗೆ ವಹಿಸಲಾಗಿದೆ. ಏನೂ ಆಧಾರವಿಲ್ಲದೆ ತನಿಖೆ ವರ್ಗಾವಣೆ ಮಾಡಲಾಗಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಈ ಮೂಲಕ ತನಿಖೆಯನ್ನು ಎನ್‍ಐಎಗೆ ವಹಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.</p>



<p>2022ರ ಮಾರ್ಚ್‌ ತಿಂಗಳ 20ರಂದು ರಾತ್ರಿ ಶಿವಮೊಗ್ಗದಲ್ಲಿ ಹರ್ಷ ಎಂಬ ಹಿಂದುತ್ವ ಸಂಘಟನೆಯ ಯುವಕನ ಕೊಲೆ ನಡೆದಿತ್ತು. ಮೊದಲು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಐಪಿಸಿ ಸೆಕ್ಷನ್ 302 ಮತ್ತು ಸೆಕ್ಷನ್ 34ರಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ಕೆಲವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿದ್ದರು. ಕೊಲೆಯಾದ ಮಾರನೇ ದಿನವೇ ಕೇಂದ್ರ ಸರ್ಕಾರ ತನಿಖೆಯನ್ನು ಎನ್‍ಐಎಗೆ ವಹಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು.</p>



<p>ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಮೊದಲಿಗೆ ಸ್ಥಳೀಯ ಪೊಲೀಸ್ ಸ್ಟೇಷನ್‌ನಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು, ಆಮೇಲೆ ಪ್ರಕರಣ ಎನ್‍ಐಎಗೆ ವಹಿಸಿದಾಗ ಯುಎಪಿಎ ಕಲಂಗಳನ್ನು ಸೇರಿಸಲಾಗಿದೆ. ಆದರೆ, ಅದಕ್ಕೆ ಕೋರ್ಟ್ ಅನುಮತಿ ಪಡೆದಿಲ್ಲ. ಪ್ರಕರಣದಲ್ಲಿ ಯುಎಪಿಎ ರೀತಿಯ ಗಂಭೀರ ಕಾಯಿದೆ ಹೇರಲು ಯಾವುದೇ ಆಧಾರವಿಲ್ಲ. ಕೇವಲ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಯುಎಪಿಎ ಹೇರಲಾಗಿದೆ. ಜೊತೆಗೆ, ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸುವ ಮುನ್ನ ವಿವೇಚನೆ ಬಳಸಿಲ್ಲ. ಹಾಗಾಗಿ ಎನ್‍ಐಎ ದಾಖಲಿಸಿರುವ ಎಫ್‍ಐಆರ್ ಅಕ್ರಮವಾಗಿದೆ. ದೇಶಾದ್ಯಂತ ಇಂತಹ ಹಲವು ಕೊಲೆಗಳು ನಡೆಯುತ್ತಿರುತ್ತವೆ. ಒಂದು ಸಮುದಾಯಕ್ಕೆ ಕಿರುಕುಳ ನೀಡುವ ಉದ್ದೇಶದಿಂದಲೇ ತನಿಖೆ ಎನ್‍ಐಎಗೆ ವಹಿಸಲಾಗಿದೆ ಎಂದು ಆರೋಪಿಸಿ ವಾದಿಸಿದರು.</p>



<p>ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಅಡಿಷನಲ್ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಹರ್ಷ ಕೊಲೆ ಪ್ರಕರಣ ಭಯೋತ್ಪಾದಕರ ಒಂದು ಕೃತ್ಯ. ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಕೊಲೆ ಮಾಡಲಾಗಿದೆ. ಹರ್ಷ ಬಜರಂಗದಳ ಹಾಗೂ ಹಿಂದೂ ಸಂಘಟನೆಯ ಸಕ್ರೀಯ ಕಾರ್ಯಕರ್ತ. ಎಲ್ಲಾ ಸಾಕ್ಷಿಗಳ ಆಧರಿಸಿಯೇ ಪ್ರಕರಣದ ತನಿಖೆಯನ್ನು ಎನ್‍ಐಎಗೆ ಕೊಡಲಾಗಿದೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ವಿಮಾನ ನಿಲ್ದಾಣಗಳಿಗೆ ಸಾಧಕ ಕನ್ನಡಿಗರ ಹೆಸರು: ಕರವೇ ಅಭಿನಂದನೆ</title>
		<link>https://peepalmedia.com/karave-thanked-government-for-naming-airports/</link>
		
		<dc:creator><![CDATA[Charan Aivarnad]]></dc:creator>
		<pubDate>Fri, 15 Dec 2023 10:26:42 +0000</pubDate>
				<category><![CDATA[ರಾಜ್ಯ]]></category>
		<category><![CDATA[aiport]]></category>
		<category><![CDATA[bengalure]]></category>
		<category><![CDATA[breaking]]></category>
		<category><![CDATA[breaking news]]></category>
		<category><![CDATA[hubballi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karave president narayanagowda]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shimogga]]></category>
		<category><![CDATA[siddaramaih]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[Trending]]></category>
		<category><![CDATA[trending news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=33722</guid>

					<description><![CDATA[ಬೆಂಗಳೂರು: ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ ಮತ್ತು ವಿಜಯಪುರ ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮಹಾಸಾಧಕರ ಹೆಸರನ್ನು ಇಡುವ ಪ್ರಸ್ತಾಪವನ್ನು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಅನುಮೋದಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು,ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹತ್ತು ವರ್ಷಗಳಿಂದ ಈ ಬೇಡಿಕೆ ಇಟ್ಟು ಹೋರಾಟ ನಡೆಸಿತ್ತು, ಆದರೆ ಈಗ, ಶಿವಮೊಗ್ಗ ವಿಮಾನ [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ ಮತ್ತು ವಿಜಯಪುರ ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮಹಾಸಾಧಕರ ಹೆಸರನ್ನು ಇಡುವ ಪ್ರಸ್ತಾಪವನ್ನು ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಅನುಮೋದಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>



<p>ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು,ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಹತ್ತು ವರ್ಷಗಳಿಂದ ಈ ಬೇಡಿಕೆ ಇಟ್ಟು ಹೋರಾಟ ನಡೆಸಿತ್ತು, ಆದರೆ ಈಗ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯುಗದ ಕವಿ, ಜಗದ ಕವಿ ಕುವೆಂಪು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಕ್ರಾಂತಿಯೋಗಿ ಬಸವಣ್ಣನವರ ಹೆಸರು ಇಡುವ ಪ್ರಸ್ತಾಪವನ್ನು ಅಂಗೀಕರಿಸಿರುವುದು ಹೆಮ್ಮೆ ತಂದಿದೆ ಎಂದಿದ್ದಾರೆ.</p>



<p>ಭಾರತ ಒಕ್ಕೂಟ ಸರ್ಕಾರವು ಆದಷ್ಟು ಶೀಘ್ರದಲ್ಲೇ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ‌. ಈ ವಿಷಯದಲ್ಲಿ ಪಕ್ಷಬೇಧ ಮರೆತು ಒಂದಾಗಿ ಸರ್ವಾನುಮತದಿಂದ ಪ್ರಸ್ತಾಪ ಅನುಮೋದಿಸಿದ ಎಲ್ಲ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.</p>



<p>ಈ ಐತಿಹಾಸಿಕ ನಿರ್ಣಯಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲ ಶಾಸಕರನ್ನು ಅಭಿನಂದಿಸಿರುವ ಅವರು<br>ಕನ್ನಡಿಗರ ಬೇಡಿಕೆ ಈಡೇರಿಸಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸಿದ್ದಾರೆ.</p>



<p>ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರು ಇಡಬೇಕೆಂದು ನಾವು ಹೋರಾಟ ನಡೆಸಿ ಯಶಸ್ವಿಯಾಗಿದ್ದೆವು. ಅದೇ ರೀತಿ ಈಗ ನಾಲ್ಕು ವಿಮಾನ ನಿಲ್ದಾಣಗಳಿಗೆ ಕರ್ನಾಟಕದ ನಾಲ್ವರು ಮೇರುಸಾಧಕರ ಹೆಸರು ಇಡಬೇಕೆಂಬ ನಮ್ಮ ಹೋರಾಟದ ಬೇಡಿಕೆಯೂ ಈಗ ಈಡೇರಿದಂತಾಗಿದೆ ಎಂದು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಕುವೆಂಪು ವಿವಿಯಲ್ಲಿ ಅತಿಥಿ ಉಪನ್ಯಾಸಕರ ಕೊರತೆ, 40 ದಿನಗಳಿಂದ ಪಾಠ ಇಲ್ಲ! ಯಾರು ಹೊಣೆ?</title>
		<link>https://peepalmedia.com/lack-of-guest-faculty-in-kuvempu-university-no-classes/</link>
		
		<dc:creator><![CDATA[Charan Aivarnad]]></dc:creator>
		<pubDate>Mon, 06 Nov 2023 05:29:59 +0000</pubDate>
				<category><![CDATA[ಶಿವಮೊಗ್ಗ]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Kuvempu university]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shimoga]]></category>
		<category><![CDATA[shimogga]]></category>
		<category><![CDATA[state politics]]></category>
		<category><![CDATA[teaching]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=31233</guid>

					<description><![CDATA[ಅತಿಥಿ ಉಪನ್ಯಾಸಕರ ಕೊರತೆಯಿಂದ ಕುವೆಂಪು ವಿಶ್ವವಿದ್ಯಾಲಯದ 2023-24 ರ ಪ್ರಸಕ್ತ ಶೈಕ್ಷಣಿಕ ವರ್ಷದ ವಿಧ್ಯಾರ್ಥಿಗಳಿಗೆ ಸುಮಾರು 40 ದಿನಗಳಿಂದ ಯಾವುದೇ ಪಾಠ ಪ್ರವಚನ ನಡೆಯುತ್ತಿಲ್ಲ ಎಂದು ಶಿವಮೊಗ್ಗದ ವಕೀಲರು, ಪೇಪಲ್ಸ್ ಲಾಯರ್ಸ್ ಗಿಲ್ಡ್ ಮುಖ್ಯಸ್ಥರು ಆದ ಕೆ.ಪಿ.ಶ್ರೀಪಾಲ್ ಹಾಗೂ ವಿಜಯಕುಮಾರ್ ರವರು, ಕುವೆಂಪು ವಿವಿ ಬೇಜವಾಬ್ದಾರಿತನವನ್ನು ಉಲ್ಲೇಖಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2022-23 ಸಾಲಿನ ಶೈಕ್ಷಣಿಕ ವರ್ಷ ಮುಗಿದಿದ್ದು, 2023-24 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸೆಪ್ಟೆಂಬರ್ 19 ಕ್ಕೆ ತರಗತಿಗಳು ಆರಂಭವಾಗಿವೆ. ತರಗತಿಗಳು ಪ್ರಾರಂಭವಾಗಿ [&#8230;]]]></description>
										<content:encoded><![CDATA[
<p>ಅತಿಥಿ ಉಪನ್ಯಾಸಕರ ಕೊರತೆಯಿಂದ ಕುವೆಂಪು ವಿಶ್ವವಿದ್ಯಾಲಯದ 2023-24 ರ ಪ್ರಸಕ್ತ ಶೈಕ್ಷಣಿಕ ವರ್ಷದ ವಿಧ್ಯಾರ್ಥಿಗಳಿಗೆ ಸುಮಾರು 40 ದಿನಗಳಿಂದ ಯಾವುದೇ ಪಾಠ ಪ್ರವಚನ ನಡೆಯುತ್ತಿಲ್ಲ ಎಂದು ಶಿವಮೊಗ್ಗದ ವಕೀಲರು, ಪೇಪಲ್ಸ್ ಲಾಯರ್ಸ್ ಗಿಲ್ಡ್ ಮುಖ್ಯಸ್ಥರು ಆದ ಕೆ.ಪಿ.ಶ್ರೀಪಾಲ್ ಹಾಗೂ ವಿಜಯಕುಮಾರ್ ರವರು, ಕುವೆಂಪು ವಿವಿ ಬೇಜವಾಬ್ದಾರಿತನವನ್ನು ಉಲ್ಲೇಖಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p>



<p>2022-23 ಸಾಲಿನ ಶೈಕ್ಷಣಿಕ ವರ್ಷ ಮುಗಿದಿದ್ದು, 2023-24 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸೆಪ್ಟೆಂಬರ್ 19 ಕ್ಕೆ ತರಗತಿಗಳು ಆರಂಭವಾಗಿವೆ. ತರಗತಿಗಳು ಪ್ರಾರಂಭವಾಗಿ 45 ದಿನಗಳು ಕಳೆದರೂ ಕುವೆಂಪು ವಿಶ್ವವಿದ್ಯಾಲಯದ ಈ ವರೆಗೆ ಅತಿಥಿ ಉಪನ್ಯಾಸಕರ ನೇಮಕ ಮಾಡದೇ ಬೇಜವಾಬ್ದಾರಿ ತೋರಿದೆ ಎಂದು ದೂರಿದ್ದಾರೆ.</p>



<p>2022-23 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕುವೆಂಪು ವಿವಿ ಯ ಎಲ್ಲಾ ಡಿಗ್ರಿ ಕಾಲೇಜುಗಳ ಬಿಎ, ಬಿಕಾಂ, ಬಿಎಸ್ಸಿ ತರಗತಿಗಳು ಆಗಸ್ಟ್ 23 ಕ್ಕೆ ಮುಗಿದಿದೆ. ಸೆಪ್ಟೆಂಬರ್ 23 ರ ವರೆಗೆ ಪರೀಕ್ಷಾ ಕಾರ್ಯ ಸೇರಿದಂತೆ ಎಲ್ಲಾ ಕಾರ್ಯಗಳಿಗೆ ಅತಿಥಿ ಉಪನ್ಯಾಸಕರ ಸೇವೆ ಪಡೆದು ಸೆಪ್ಟೆಂಬರ್ 23 ಕ್ಕೆ ಅವರನ್ನು ರಿಲೀವ್ ಮಾಡಲಾಗಿದೆ. ಇದರ ನಡುವೆ ವಿಧ್ಯಾರ್ಥಿಗಳಿಗೆ ಉಪನ್ಯಾಸ ಮಾಡಬೇಕಾಗಿದ್ದ ಖಾಯಂ ಉಪನ್ಯಾಸಕರು ಹಿಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ಮೌಲ್ಯಮಾಪನಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ವಿಧ್ಯಾರ್ಥಿಗಳು ಪಾಠವೇ ಇಲ್ಲದೆ ಪರಿತಪಿಸುವಂತಾಗಿದೆ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>ಇದರ ನಡುವೆ ಹಬ್ಬದ ರಜೆಗಳು ಬಂದ ಹಿನ್ನೆಲೆಯಲ್ಲಿ ಒಟ್ಟಾರೆ 40 ದಿನಗಳಿಗೂ ಹೆಚ್ಚು ದಿನ ಪಾಠವೇ ಶುರುವಾಗಿಲ್ಲ. 3 ಮತ್ತು 5 ನೇ ಸೆಮಿಸ್ಟರ್ ವಿಧ್ಯಾರ್ಥಿಗಳಿಗೆ ಸೆಪ್ಟೆಂಬರ್ 5 ಕ್ಕೆ ತರಗತಿಗಳು ಆರಂಭವಾದರೂ ಈ ವರೆಗೂ ಪಾಠವೇ ನಡೆದಿಲ್ಲ. ನಿಯಮಾವಳಿಗಳಂತೆ 8 ನೇ ವಾರಕ್ಕೆ ಈ ತರಗತಿಗಳಿಗೆ ಕಿರು ಪರೀಕ್ಷೆ ನಡೆಯಬೇಕಿದೆ. ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳು ನವೆಂಬರ್ 15 ರಿಂದ ಕಿರು ಪರೀಕ್ಷೆ ಆಯೋಜಿಸಿವೆ. ಪಾಠವೇ ನಡೆಯದೇ ವಿಧ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಪಿ.ಶ್ರೀಪಾಲ್ ಹಾಗೂ ವಿಜಯಕುಮಾರ್ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>


<div class="wp-block-image">
<figure class="aligncenter size-large is-resized"><img fetchpriority="high" decoding="async" width="1024" height="768" src="https://peepalmedia.com/wp-content/uploads/2023/11/1276730_1375770105988659_1315821191_o-1024x768.jpg" alt="" class="wp-image-31234" style="aspect-ratio:1.3333333333333333;width:317px;height:auto" srcset="https://peepalmedia.com/wp-content/uploads/2023/11/1276730_1375770105988659_1315821191_o-1024x768.jpg 1024w, https://peepalmedia.com/wp-content/uploads/2023/11/1276730_1375770105988659_1315821191_o-300x225.jpg 300w, https://peepalmedia.com/wp-content/uploads/2023/11/1276730_1375770105988659_1315821191_o-768x576.jpg 768w, https://peepalmedia.com/wp-content/uploads/2023/11/1276730_1375770105988659_1315821191_o-1536x1152.jpg 1536w, https://peepalmedia.com/wp-content/uploads/2023/11/1276730_1375770105988659_1315821191_o-150x113.jpg 150w, https://peepalmedia.com/wp-content/uploads/2023/11/1276730_1375770105988659_1315821191_o-696x522.jpg 696w, https://peepalmedia.com/wp-content/uploads/2023/11/1276730_1375770105988659_1315821191_o-1068x801.jpg 1068w, https://peepalmedia.com/wp-content/uploads/2023/11/1276730_1375770105988659_1315821191_o-1920x1440.jpg 1920w, https://peepalmedia.com/wp-content/uploads/2023/11/1276730_1375770105988659_1315821191_o.jpg 2048w" sizes="(max-width: 1024px) 100vw, 1024px" /><figcaption class="wp-element-caption"> ಕೆ.ಪಿ.ಶ್ರೀಪಾಲ್ </figcaption></figure></div>


<p>ಈ ನಡುವೆ ಹೊಸ ಶೈಕ್ಷಣಿಕ ವರ್ಷಕ್ಕೆ ಅಕ್ಟೋಬರ್ 27 ಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಸಲ್ಲಿಸಲಾಗಿದೆ. ಆದರೆ ಈ ವರೆಗೂ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಸಧ್ಯ ಕುವೆಂಪು ವಿಶ್ವವಿದ್ಯಾಲಯಕ್ಕೆ ಕುಲಪತಿಗಳ ನೇಮಕವೂ ಆಗಿಲ್ಲ, ಹಂಗಾಮಿ ಇರುವವರು ಮತ್ತು ಹಂಗಾಮಿ ರಿಜಿಸ್ಟರ್ ಈ ವರೆಗೆ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ದುರಂತ ಎಂದಿದ್ದಾರೆ.</p>



<p>ಸರ್ಕಾರ ಈ ಕೂಡಲೇ ಮಧ್ಯೆ ಪ್ರವೇಶಿಸಿ ಅತಿಥಿ ಉಪನ್ಯಾಸಕರ ನೇಮಕ ಮಾಡಲು ಕುವೆಂಪು ವಿವಿಗೆ ನಿರ್ದೇಶಿಸಬೇಕು. ವಿಧ್ಯಾರ್ಥಿಗಳು ಕುವೆಂಪು ವಿವಿ ಮೇಲಿನ ನಂಬಿಕೆಗೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕು ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
]]></content:encoded>
					
		
		
			</item>
	</channel>
</rss>
