<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>SHIVAMOGGA POLICE &#8211; Peepal Media</title>
	<atom:link href="https://peepalmedia.com/tag/shivamogga-police/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 16 Aug 2023 16:59:42 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>SHIVAMOGGA POLICE &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಎಂಟೂವರೆ ವರ್ಷದ ಪೊಲೀಸ್ ಅಧಿಕಾರಿ ಅಜಾನ್ ಖಾನ್ ; ಏನಿದು ಅಪರೂಪದ ಸುದ್ದಿ?</title>
		<link>https://peepalmedia.com/eight-and-a-half-year-old-police-officer-ajaan-khan/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 16 Aug 2023 16:58:42 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[SHIVAMOGGA POLICE]]></category>
		<guid isPermaLink="false">https://peepalmedia.com/?p=25663</guid>

					<description><![CDATA[ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಇಂದು ನೂತನ ಪೊಲೀಸ್ ಇನಿಸ್ಪೆಕ್ಟರ್ ಆಗಿ ಎಂಟೂವರೆ ವರ್ಷದ ಅಜಾನ್ ಖಾನ್ ಅಧಿಕಾರ ಸ್ವೀಕರಿಸಿದ ಅಪರೂಪದ ಸಂಗತಿಗೆ ಸಾಕ್ಷಿಯಾಯಿತು. ಶಿವಮೊಗ್ಗದ ಸೂಳೆಬೈಲು ನಿವಾಸಿ (ಹಾಲಿ ವಾಸ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು) ಅಜಾನ್ ಖಾನ್ ಗೆ ಇದ್ದ ಒಂದು ದೊಡ್ಡ ಕನಸನ್ನು ಪೊಲೀಸರು ನನಸು ಮಾಡಿದ್ದಾರೆ. ಪುಟ್ಟ ಬಾಲಕನ &#8216;ಹೃದಯ&#8217;ವಿದ್ರಾವಕ ಕಥೆಅಜಾನ್ ಖಾನ್ ಪೊಲೀಸ್ ಆಗುವ ಕನಸಿನ ಹಿಂದೆ ಹೃದಯ ವಿದ್ರಾವಕ ಕಥೆಯಿದ್ದು, ಆತನ ಕನಸನ್ನು ನನಸು ಮಾಡಲು ಪೊಲೀಸರು ಕೈ [&#8230;]]]></description>
										<content:encoded><![CDATA[
<p>ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಇಂದು ನೂತನ ಪೊಲೀಸ್ ಇನಿಸ್ಪೆಕ್ಟರ್ ಆಗಿ ಎಂಟೂವರೆ ವರ್ಷದ ಅಜಾನ್ ಖಾನ್ ಅಧಿಕಾರ ಸ್ವೀಕರಿಸಿದ ಅಪರೂಪದ ಸಂಗತಿಗೆ ಸಾಕ್ಷಿಯಾಯಿತು. ಶಿವಮೊಗ್ಗದ ಸೂಳೆಬೈಲು ನಿವಾಸಿ (ಹಾಲಿ ವಾಸ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು) ಅಜಾನ್ ಖಾನ್ ಗೆ ಇದ್ದ ಒಂದು ದೊಡ್ಡ ಕನಸನ್ನು ಪೊಲೀಸರು ನನಸು ಮಾಡಿದ್ದಾರೆ.</p>



<p><strong>ಪುಟ್ಟ ಬಾಲಕನ &#8216;ಹೃದಯ&#8217;ವಿದ್ರಾವಕ ಕಥೆ</strong><br>ಅಜಾನ್ ಖಾನ್ ಪೊಲೀಸ್ ಆಗುವ ಕನಸಿನ ಹಿಂದೆ ಹೃದಯ ವಿದ್ರಾವಕ ಕಥೆಯಿದ್ದು, ಆತನ ಕನಸನ್ನು ನನಸು ಮಾಡಲು ಪೊಲೀಸರು ಕೈ ಜೋಡಿಸಿದ್ದೂ ಸಹ ಮನ ಮಿಡಿಯುವಂತಿದೆ. ಅಜಾನ್ ಖಾನ್ ಮೂರು ತಿಂಗಳು ಇರುವಾಗಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ.</p>



<p>8 ವರ್ಷಕ್ಕೆ ಅಜಾನ್ ಖಾನ್ ಗೆ ಮತ್ತೊಂದು ಶಸ್ತ್ರಚಿಕಿತ್ಸೆ ಕೂಡಾ ಆಗಿದೆ. ಈಗ ಮತ್ತೊಮ್ಮೆ ಹೃದಯ ಮತ್ತು ಲಂಗ್ಸ್ ಕಸಿಯಾಗಬೇಕು ಎಂದಿದ್ದಾರೆ. ಆ ಹಿನ್ನೆಲೆಯಲ್ಲಿ ಈ ಮಗು ಇಲ್ಲಿಯವರೆಗೆ ಬದುಕಿದ್ದೇ ಕಷ್ಟಕರವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.</p>



<p>ಚಿಕ್ಕ ವಯಸ್ಸಿನಿಂದಲೇ ಈ ಬಾಲಕನಿಗೆ ತಾನು ಪೊಲೀಸ್ ಅಧಿಕಾರಿಯಾಗಬೇಕು ಹಾಗೂ ಚಿತ್ರನಟರಾದ ಸುದೀಪ್ ಅವರನ್ನು ಭೇಟಿ ಆಗಬೇಕು ಮಹದಾಸೆ ಇತ್ತು. ಸಧ್ಯ ಎರಡು ಆಸೆಗಳಲ್ಲಿ ಒಂದು ಆಸೆಯನ್ನು ಠಾಣಾಧಿಕಾರಿ ಅಂಜನ್ ಕುಮಾರ್ ಈಡೇರಿಸಿದ್ದಾರೆ. ಒಂದು ಗಂಟೆಯ ಮಟ್ಟಿಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಹುದ್ದೆಯನ್ನು ಸಾಂಕೇತಿಕವಾಗಿ ಅಲಂಕರಿಸಲು ಅವಕಾಶ ಮಾಡಿಕೊಡಲಾಗಿದೆ.</p>



<figure class="wp-block-image size-full"><img fetchpriority="high" decoding="async" width="620" height="396" src="https://peepalmedia.com/wp-content/uploads/2023/08/sh-620x396-1.jpg" alt="" class="wp-image-25665" srcset="https://peepalmedia.com/wp-content/uploads/2023/08/sh-620x396-1.jpg 620w, https://peepalmedia.com/wp-content/uploads/2023/08/sh-620x396-1-300x192.jpg 300w, https://peepalmedia.com/wp-content/uploads/2023/08/sh-620x396-1-150x96.jpg 150w" sizes="(max-width: 620px) 100vw, 620px" /></figure>



<p>ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಜಾನ್ ಖಾನ್ &#8216;ನಾನು ಪೊಲೀಸ್ ಆಗಬೇಕು ಎಂಬ ಆಸೆಯನ್ನು ಅಪ್ಪನಿಗೆ ಹೇಳಿದ್ದೆ. ಈ ಕ್ಷಣಕ್ಕೆ ನನ್ನನ್ನು ಪೊಲೀಸ್ ಅಧಿಕಾರಿಯಾಗಲು ಅವಕಾಶ ಮಾಡಿಕೊಟ್ಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಧನ್ಯವಾದಗಳು&#8217; ಎಂದು ತಿಳಿಸಿದ್ದಾನೆ.</p>



<p>ಈ ಸಂದರ್ಭದಲ್ಲಿ ಎಸ್.ಪಿ ಮಿಥುನ್ ಕುಮಾರ್, ಅನಿಲ್ ಕುಮಾರ್ ಭೂಮರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬಾಲರಾಜ್ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ, ಪ್ರಭು ಡಿ.ಟಿ, ಪೊಲೀಸ್ ಉಪಾಧೀಕ್ಷರು, ಡಿಸಿಆರ್.ಬಿ, ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ, ಅಂಜನ್ ಕುಮಾರ್, ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಧಿಗಳು ಹಾಗೂ ಬಾಲಕನ ಪೋಷಕರು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ವನಶ್ರೀ ಮಂಜಪ್ಪನ ವಿರುದ್ಧ ಎಫ್‌ ಐ ಆರ್‌ ನಲ್ಲಿ ಏನೇನಿದೆ?</title>
		<link>https://peepalmedia.com/what-is-in-the-fir-against-vanashree-manjappa/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Jun 2023 11:35:49 +0000</pubDate>
				<category><![CDATA[ಸತ್ಯ ಶೋಧ]]></category>
		<category><![CDATA[Death case]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sagara]]></category>
		<category><![CDATA[Sexual Harassment]]></category>
		<category><![CDATA[SHIVAMOGGA POLICE]]></category>
		<category><![CDATA[Vanashree Manjappa]]></category>
		<guid isPermaLink="false">https://peepalmedia.com/?p=22350</guid>

					<description><![CDATA[ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೊನ್ನೇಸರ ಪಿಣಿಯಜ್ಜಿ ಮಂಜಪ್ಪ ಆಲಿಯಾಸ್‌ ವನಶ್ರೀ ಮಂಜಪ್ಪ ಇದೀಗ ಪೋಕ್ಸೋ ಮತ್ತು ಎಸ್‌ ಸಿ, ಎಸ್‌ ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಜೈಲು ಪಾಲಾಗಿದ್ದಾನೆ. ವಸತಿ ನಿಲಯಕ್ಕೆ ಸೇರಿದ್ದ ವಿದ್ಯಾರ್ಥಿನಿಯೊಬ್ಬಳ ಸಾವಿಗೆ ಮಂಜಪ್ಪನ ಕೃತ್ಯಗಳು ಕಾರಣ ಎಂದು ಆರೋಪಿಸಲಾಗಿದೆ. ಇದರೊಂದಿಗೆ ಇನ್ನಿತರ ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೂ ಲೈಂಗಿಕ ಕಿರುಕುಳ ನೀಡಿರುವ ದೂರಿನ ಆಧಾರದ ಮೇರೆಗೆ ಪೋಕ್ಸೋ ಕಾಯ್ದೆ ಆಡಿ ಪ್ರಕರಣ ದಾಖಲಾಗಿದೆ. ತನ್ನ ವಸತಿ ನಿಲಯಕ್ಕೆ [&#8230;]]]></description>
										<content:encoded><![CDATA[
<p>ಶಿವಮೊಗ್ಗ ಜಿಲ್ಲೆ ಸಾಗರದ ವನಶ್ರೀ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹೊನ್ನೇಸರ ಪಿಣಿಯಜ್ಜಿ ಮಂಜಪ್ಪ ಆಲಿಯಾಸ್‌ ವನಶ್ರೀ ಮಂಜಪ್ಪ ಇದೀಗ ಪೋಕ್ಸೋ ಮತ್ತು ಎಸ್‌ ಸಿ, ಎಸ್‌ ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಜೈಲು ಪಾಲಾಗಿದ್ದಾನೆ. ವಸತಿ ನಿಲಯಕ್ಕೆ ಸೇರಿದ್ದ ವಿದ್ಯಾರ್ಥಿನಿಯೊಬ್ಬಳ ಸಾವಿಗೆ ಮಂಜಪ್ಪನ ಕೃತ್ಯಗಳು ಕಾರಣ ಎಂದು ಆರೋಪಿಸಲಾಗಿದೆ. ಇದರೊಂದಿಗೆ ಇನ್ನಿತರ ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೂ ಲೈಂಗಿಕ ಕಿರುಕುಳ ನೀಡಿರುವ ದೂರಿನ ಆಧಾರದ ಮೇರೆಗೆ ಪೋಕ್ಸೋ ಕಾಯ್ದೆ ಆಡಿ ಪ್ರಕರಣ ದಾಖಲಾಗಿದೆ.</p>



<p>ತನ್ನ ವಸತಿ ನಿಲಯಕ್ಕೆ ಸೇರಿದ ಕೂಡಲೇ ಏನೂ ತಿಳಿಯದ ಈ ಪರಿಶಿಷ್ಟ ಅಲೆಮಾರಿ ಸಮುದಾಯದ ವಿದ್ಯಾರ್ಥಿನಿಗೆ ಯೋಗಾಭ್ಯಾಸದ ಹೆಸರಿನಲ್ಲಿ ವಿಪರೀತ ದೇಹ ದಂಡಿಸಿದ್ದ ಮಂಜಪ್ಪ ನಂತರದಲ್ಲಿ ಅತಿರೇಕದ ಕೃತ್ಯಗಳನ್ನು ನಡೆಸಿ ಬಾಲಕಿಯ ದುರ್ಮರಣಕ್ಕೆ ಕಾರಣವಾಗಿರುವ ಕುರಿತು ಎಲ್ಲವನ್ನೂ ಖುದ್ದಾಗಿ ನೋಡಿರುವ ಬಾಲಕಿಯರು ದೂರಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡು 12.06.2023ರಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರೋಹನ್‌ ಜಗದೀಶ್‌ ನೇತೃತ್ವದ ತಂಡ ವಸತಿ ನಿಲಯಕ್ಕೆ ಭೇಟಿ ನೀಡಿ ಸಂತ್ರಸ್ತ ಬಾಲಕಿಯರ ಮಾತುಗಳನ್ನು ವಿಡಿಯೋ ದಾಖಲೀಕರಣ ಮಾಡಿಕೊಂಡಿದೆ. ಜೊತೆಯಲ್ಲಿ ಪಂಚನಾಮೆ ಪ್ರಕ್ರಿಯೆ ಸಹ ನಡೆಸಲಾಗಿದೆ.</p>



<p><strong>ಪೀಪಲ್‌ ಮೀಡಿಯಾ</strong>ಕ್ಕೆ ಲಭ್ಯವಾಗಿರುವ ಎಫ್‌ ಐ ಆರ್‌ (ಪ್ರಥಮ ವರ್ತಮಾನ ವರದಿ) ಪ್ರತಿಯಲ್ಲಿ ಉಲ್ಲೇಖವಾಗಿರುವಂತೆ ಸಾಗರದ ಗ್ರಾಮಾಂತರ ಠಾಣೆಯಲ್ಲಿ ದಿನಾಂಕ 10-06-2023ರಂದು ದೂರು ದಾಖಲಾಗಿದೆ.</p>



<p><strong>FIRನಲ್ಲಿ ಏನಿದೆ?</strong><br>ವನಶ್ರೀ ಮಂಜಪ್ಪ ನಡೆಸುವ ವಸತಿ ಶಾಲೆಗೆ ಸೇರಿದ್ದ ವಿದ್ಯಾರ್ಥಿನಿಯ ತಾಯಿಯು ನೀಡಿರುವ ದೂರಿನಲ್ಲಿ ಆಘಾತಕಾರಿ ಅಂಶಗಳಿವೆ. ದಿನಾಂಕ 04-06-23ರಂದು ಮೃತ ವಿದ್ಯಾರ್ಥಿನಿಯೂ ಸೇರಿದಂತೆ ಐದು ಮಂದಿ ವಿದ್ಯಾರ್ಥಿನಿಯರು ವಸತಿ ನಿಲಯಕ್ಕೆ ದಾಖಲಾಗಿದ್ದರು. ʼ07-06-23ರಂದು ಮದ್ಯಾಹ್ನ ಎರಡು ಗಂಟೆ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದೆ. ಇದನ್ನು ಮಂಜಪ್ಪ ಅವರ ಗಮನಕ್ಕೆ ತಂದಾಗ ಅವರು ಅದನ್ನು ನಿರ್ಲಕ್ಷ್ಯ ಮಾಡಿದ್ದಲ್ಲದೆ ತಮಗೆ ತಿಳಿದ ಮಾತ್ರೆ ಹಾಗೂ ಕಷಾಯ ಕುಡಿಸಿದ್ದಾರೆ. ನಂತರ ಆಕೆ ಕಾಲು ನೋವು ಹಾಗೂ ತೊಡೆ ನೋವು ಎಂದು ತಮ್ಮ ಜೊತೆಯಲ್ಲಿದ್ದವರಿಗೆ ತಿಳಿಸಿದ್ದಳು. ಇದನ್ನು ಅವರು ಮಂಜಪ್ಪ ಅವರಿಗೆ ತಿಳಿಸಿದಾಗ ಮಂಜಪ್ಪ ಅವರು ಬಾಧಿತ ಬಾಲಕಿಯನ್ನು ಪ್ರತ್ಯೇಕವಾಗಿ ತಮ್ಮ ರೂಂಗೆ ಕರೆದುಕೊಂಡು ಹೋಗಿ ಮೊಣಕಾಲು, ತೊಡೆ ಹಾಗೂ ಇತರ ಕಡೆ ಮುಲಾಮು ಹಚ್ಚಿ ಹೊರ ಬಂದು ಉಳಿದವರಿಗೆ ಅವಳು ಹುಷಾರಾಗುತ್ತಾಳೆ, ನೀವು ಹೋಗಿ ಎಂದು ಹೇಳಿರುತ್ತಾರೆ. ಯಾವುದೇ ಆಸ್ಪತ್ರೆಗೆ ದಾಖಲಿಸಿರುವುದಿಲ್ಲ. ಮಾತ್ರವಲ್ಲದೇ ಮಕ್ಕಳಿಗೆ ಆ ವಿದ್ಯಾರ್ಥಿನಿಗೆ ಹುಷಾರಿಲ್ಲದ ವಿಷಯ ಯಾರಿಗೂ ಹೇಳಕೂಡದು ಎಂದು ಗದರಿಸಿದ್ದಾನೆ.</p>



<p>ಮರುದಿನ ಅಂದರೆ ʼ08-06-23ರಂದು ಬಾಲಕಿಯ ಆರೋಗ್ಯ ತೀರಾ ಹದಗೆಟ್ಟಿರುವಾಗ ಮಂಜಪ್ಪ ಬಲವಂತವಾಗಿ ತುಂಬಾ ನೀರು ಕುಡಿಸಿ ಆಕೆ ಸುಸ್ತಾಗಿ ಮಲಗಿದ್ದಳು. ನಂತರ ಆಕೆಯನ್ನು ಮಕ್ಕಳು ಮಾತಾಡಿಸಲು ಹೋದಾಗ ಅವಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೇ ಇದ್ದಾಗ ಮಕ್ಕಳನ್ನು ಹೊರಕ್ಕೆ ಕಳಿಸಿ ಅವಳನ್ನು ಮಾತಾಡಿಸುವ ಪ್ರಯತ್ನ ಮಾಡಿದಾಗ ಆಕೆ ನಾಲಿಗೆ ಕಚ್ಚಿಕೊಂಡು ಯಾವುದೇ ಪ್ರತಿಕ್ರಿಯೆ ನೀಡದಂತಾಗಿದ್ದಳು. ಆ ನಂತರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಆಗಲೂ ಸಹ ಬಾಲಕಿಯ ಪೋಷಕರಿಗೆ ವಿಷಯ ತಿಳಿಸಿರುವುದಿಲ್ಲ. ಆಸ್ಪತ್ರೆಯ ಆವರಣದಲ್ಲಿ ಮಕ್ಕಳು ಅಪರಿಚಿತರ ಸಾಯದಿಂದ ಪೋಷಕರಿಗೆ ವಿಷಯ ತಿಳಿಸಿರುತ್ತಾರೆ.</p>



<p>ನಂತರ ಪೋಷಕರು ತಮ್ಮ ಮಗಳ ಜೊತೆಗಿದ್ದ ನಾಲ್ಕು ಜನ ಮಕ್ಕಳನ್ನು ವಿಚಾರಿಸಿದಾಗ ಮಂಜಪ್ಪನ ಅಶ್ಲೀಲ ವರ್ತನೆ ಬಗ್ಗೆ, ಅವನು ಖಾಸಗಿ ಭಾಗಗಳನ್ನು ಮುಟ್ಟುವುದು, ಅಪ್ಪಿಕೊಳ್ಳುವುದು, ಅವಾಚ್ಯವಾಗಿ ಮಾತಾಡಿರುವ ಬಗ್ಗೆ ಮಾಹಿತಿ ನೀಡಿ ತಮಗಾದ ಅವಮಾನ ಹಿಂಸೆಯನ್ನು ಹೇಳಿಕೊಂಡು ಕಣ್ಣೀರು ಹಾಕಿರುತ್ತಾರೆ. ಇದೇ ರೀತಿಯ ಲೈಂಗಿಕ ದೌರ್ಜನ್ಯ ತಮ್ಮ ಮಗಳಿಗೂ ಆಗಿರಬಹುದುʼ ಎಂದು ಪೋಷಕರು ದೂರಿನಲ್ಲಿ ತಿಳಿಸಿರುತ್ತಾರೆ. ಮಂಜಪ್ಪನ ಈ ರೀತಿಯ ಲೈಂಗಿಕ ದೌರ್ಜನ್ಯದಿಂದ ತಮ್ಮ ಮಗಳು ಹೆದರಿಕೊಂಡು, ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ಅನುಭವಿಸಿ ಭಯ ಹಾಗೂ ಬೇಸರದಲ್ಲಿ ಮನಸ್ಸಿಗೆ ಹಚ್ಚಿಕೊಂಡು ಇದರಿಂದ ಜ್ವರ ಸುಸ್ತು ವಾಂತಿ ಪ್ರಾರಂಭವಾಗಿ ಎರಡು ದಿನ ನರಳಾಡಿದ್ದಾಳೆʼ ಎಂದು ದೂರಿದ್ದಾರೆ. ʼಮಂಜಪ್ಪನ ಭಯದಿಂದ ಹಾಗೂ ಆಸ್ಪತ್ರೆಗೆ ತೋರಿಸದೇ ತಾನೇ ಮಾತ್ರೆ ಮುಲಾಮು ಕಷಾಯ ಕುಡಿಸಿ ಸಮಯ ವ್ಯರ್ಥಮಾಡಿ, ಆ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸದೇ, ಪೋಷಕರಿಗೂ ವಿಷಯ ತಿಳಿಸದೇ ಹೋಗಿದ್ದರಿಂದ ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ಸೇರಿಸಿದ್ದರಂತಿ ತಮ್ಮ ಮಗಳು ಮೃತಪಟ್ಟಿದ್ದಾಳೆ ಎಂದು ದೂರುದಾರರು ತಿಳಿಸಿದ್ದಾರೆ.</p>



<p>ಈ ಎಲ್ಲಾ ವಿಚಾರಗಳು ಪಿರ್ಯಾದುದಾರರಿಗೆ ಮಂಜಪ್ಪನವರ ಮೇಲೆ ಬಲವಾದ ಅನುಮಾನಕ್ಕೆ ಕಾರಣವಾಗಿರುತ್ತವೆ ಹಾಗೂ ತಮ್ಮ ಮಗಳಿಗೆ ಅವಾಚ್ಯವಾಗಿ ನಿಂದಿಸಿರುವುದು, ಭಯ ಹುಟ್ಟಿಸಿರುವುದು, ತಾನು ಹೇಳಿದಂತೆ ಕೇಳದಿದ್ದರೆ ನಿಮ್ಮನ್ನು ನೋಡಿಕೊಳ್ಳುತ್ತೇನೆ, ಈ ವಿಚಾರವಾಗಿ ಯಾರಿಗೂ ಹೇಳಬಾರದು ಎಂದು ಎಚ್ಚರಿಕೆ ನೀಡಿದ್ದನ್ನು ಮಕ್ಕಳು ಮನೆಗೆ ಬಂದು ಹೇಳಿರುವ ಹಿನ್ನೆಲೆಯಲ್ಲಿ ಮಂಜಪ್ಪ ಅವರ ಮೇಲೆ ಎಸ್‌ ಸಿ ಎಸ್‌ ಟಿ ದೌರ್ಜನ್ಯ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತಮ್ಮ ಮಗಳ ಸಾವಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು FIR ನಲ್ಲಿ ದಾಖಲಾಗಿರುತ್ತದೆ.</p>



<figure class="wp-block-embed is-type-video is-provider-youtube wp-block-embed-youtube wp-embed-aspect-16-9 wp-has-aspect-ratio"><div class="wp-block-embed__wrapper">
<div class="youtube-embed" data-video_id="UuYdq0sCyu4"><iframe title="ಪರಿಶಿಷ್ಟ ಅಲೆಮಾರಿ ಬಾಲಕಿ ತೇಜಸ್ವಿನಿಯ ಅನುಮಾನಾಸ್ಪದ ಸಾವು. ಆರ್ ಎಸ್ ಎಸ್ ವ್ಯಕ್ತಿ ವನಶ್ರೀ ಮಂಜಪ್ಪನೇ ತಪ್ಪಿತಸ್ಥನೆ?" width="696" height="392" src="https://www.youtube.com/embed/UuYdq0sCyu4?feature=oembed&#038;enablejsapi=1" frameborder="0" allow="accelerometer; autoplay; clipboard-write; encrypted-media; gyroscope; picture-in-picture; web-share" allowfullscreen></iframe></div>
</div></figure>
]]></content:encoded>
					
		
		
			</item>
		<item>
		<title>ಮುಖ್ಯಮಂತ್ರಿಗೆ ಪ್ರಶ್ನಿಸಲು ಹೊರಟ ದಲಿತ ಮುಖಂಡರ ವಶಕ್ಕೆ ಪಡೆದ ಪೊಲೀಸರು</title>
		<link>https://peepalmedia.com/dalit-leaders-who-were-going-to-question-the-chief-minister-were-taken-into-custody-by-the-police/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 27 Nov 2022 06:32:04 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[basavaraja bommai]]></category>
		<category><![CDATA[cm bhommai]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[SHIVAMOGGA POLICE]]></category>
		<category><![CDATA[Thirthahalli]]></category>
		<guid isPermaLink="false">https://peepalmedia.com/?p=16712</guid>

					<description><![CDATA[ತೀರ್ಥಹಳ್ಳಿ : ಸಾರ್ವಜನಿಕ ಕೆಲಸಗಾರರಿಂದ ವಿಪರೀತ ಲಂಚದ ಬೇಡಿಕೆ, ಹದಗೆಟ್ಟ ಆಡಳಿತ ವ್ಯವಸ್ಥೆ ಮತ್ತು ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಅವಕಾಶ ಕೋರಿದ್ದ ತೀರ್ಥಹಳ್ಳಿ ತಾಲ್ಲೂಕು ದಲಿತ ಮುಖಂಡ ಇಬ್ಬರನ್ನು ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಪ್ರಗತಿ ಪರಿಶೀಲನೆಗೆಂದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಪ್ಪ ಮತ್ತು ತೀರ್ಥಹಳ್ಳಿಗೆ ಆಗಮಿಸುವ ಕಾರ್ಯಕ್ರಮವಿತ್ತು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿ, ಸ್ಥಳೀಯ ಹದಗೆಟ್ಟ ಆಡಳಿತ [&#8230;]]]></description>
										<content:encoded><![CDATA[
<p style="font-size:20px"><strong>ತೀರ್ಥಹಳ್ಳಿ :</strong>  <font style="vertical-align: inherit;"><font style="vertical-align: inherit;">ಸಾರ್ವಜನಿಕ ಕೆ</font></font>ಲಸಗಾರರಿಂದ ವಿಪರೀತ ಲಂಚದ ಬೇಡಿಕೆ, ಹದಗೆಟ್ಟ ಆಡಳಿತ ವ್ಯವಸ್ಥೆ ಮತ್ತು ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಅವಕಾಶ ಕೋರಿದ್ದ ತೀರ್ಥಹಳ್ಳಿ ತಾಲ್ಲೂಕು ದಲಿತ ಮುಖಂಡ ಇಬ್ಬರನ್ನು ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>



<p style="font-size:20px">ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಪ್ರಗತಿ ಪರಿಶೀಲನೆಗೆಂದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಪ್ಪ ಮತ್ತು ತೀರ್ಥಹಳ್ಳಿಗೆ ಆಗಮಿಸುವ ಕಾರ್ಯಕ್ರಮವಿತ್ತು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿ, ಸ್ಥಳೀಯ ಹದಗೆಟ್ಟ ಆಡಳಿತ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಶಿವಮೊಗ್ಗ ಜಿಲ್ಲಾ ಮಟ್ಟದ ಮುಖಂಡರು ಸಿದ್ಧತೆ ನಡೆಸಿಕೊಂಡಿದ್ದರು.</p>



<p style="font-size:20px">ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಂದ ಸೂಕ್ತ ಪರಿಹಾರ ಮತ್ತು ಬೇಡಿಕೆಗಳ ಈಡೇರಿಸಲು ಮುಂದಾಗದಿದ್ದರೆ ಅಲ್ಲೇ ಕಪ್ಪು ಬಟ್ಟೆ ಪ್ರದರ್ಶನ ಮಾಡುವುದಾಗಿಯೂ ನವೆಂಬರ್ 26 ರ ಶನಿವಾರ ಪತ್ರಿಕಾ ಹೇಳಿಕೆ ನೀಡಿದ್ದರು. ಈ ಸಂಬಂಧ ನವೆಂಬರ್ 27 ರ ಭಾನುವಾರ ಬೆಳಿಗ್ಗೆಯೇ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಕೀಗಡಿ ಕೃಷ್ಣಮೂರ್ತಿ ಮತ್ತು ಹಾರೇಗೊಳಿಗೆ ವಿಶ್ವನಾಥ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>



<p style="font-size:20px">ತಾಲ್ಲೂಕಿನ ಹದಗೆಟ್ಟ ಆಡಳಿತ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಸರಿಪಡಿಸಬೇಕು, ಬಗರ್ ಹುಕುಂ ಸಾಗುವಳಿ ಜಮೀನಿಗೆ ದಾಖಲೆ ಒದಗಿಸಬೇಕು. ವಿವಿಧ ಯೋಜನೆಗಳ ಅಡಿಯಲ್ಲಿ ಅಕ್ರಮ ಸಕ್ರಮ, 94 ಸಿ, 94ಸಿಸಿ, ಹಕ್ಕುಪತ್ರ ಇದ್ದರೂ ಬ್ಯಾಂಕುಗಳಲ್ಲಿ ಸಾಲ ದೊರೆಯುತ್ತಿಲ್ಲ. ಇಂತಹ ಹಕ್ಕುಪತ್ರ ಇದ್ದರೆಷ್ಟು ಬಿಟ್ಟರೆಷ್ಟು. ಇವುಗಳನ್ನು ಸರಿಪಡಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ತಾಲ್ಲೂಕಿನಲ್ಲಿ ಮಿತಿಮೀರಿದ ಸರ್ಕಾರಿ ಅಧಿಕಾರಿಗಳ ಲಂಚದ ಹಾವಳಿಗೆ ಕಡಿವಾಣ ಹಾಕಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಇಟ್ಟು ದಲಿತ ಮುಖಂಡರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.</p>



<p style="font-size:20px">ಈ ಬೆಳವಣಿಗೆಗೆ ಸಂಬಂಧಿಸಿದಂತೆ ಸ್ಥಳೀಯ ನಾಗರೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದ ಆಶಯದಂತೆ ಸಾರ್ವಜನಿಕರು ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಹಕ್ಕನ್ನು ಹೊಂದಿದ್ದಾರೆ. ಪ್ರಶ್ನೆ ಮಾಡುವುದನ್ನು ಹತ್ತಿಕ್ಕಲು ಇದೇನು ರಾಜಪ್ರಭುತ್ವ ಅಲ್ಲ. ಆ ಮೂಲಕ ತಾಲ್ಲೂಕಿನಲ್ಲಿ ಅರಾಜಕತೆ ಸೃಷ್ಟಿ ಆಗಿದೆ ಎಂಬುದನ್ನು ಬಿಜೆಪಿ ಮುಖಂಡರೇ ಸಾಭೀತುಪಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಶಿವಮೊಗ್ಗ&#124; ಪೊಲೀಸ್‌ ಪೆದೆ ಮೇಲೆ ಹಲ್ಲೆ: ಆರೋಪಿಗೆ ಗುಂಡೇಟು</title>
		<link>https://peepalmedia.com/shimoga-assault-on-pede-shot-at-police-accused/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 05 Nov 2022 09:54:11 +0000</pubDate>
				<category><![CDATA[ರಾಜ್ಯ]]></category>
		<category><![CDATA[ಶಿವಮೊಗ್ಗ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Police Constables]]></category>
		<category><![CDATA[SHIVAMOGGA POLICE]]></category>
		<guid isPermaLink="false">https://peepalmedia.com/?p=14329</guid>

					<description><![CDATA[ಶಿವಮೊಗ್ಗ: ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಶಂಕಿತ ಆರೋಪಿಯ ಮೇಲೆ ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿರುವ ಘಟನೆ, ಶನಿವಾರ ನಗರದ ಹೊರವಲಯದ ಪುರ್ಲೆ ರಸ್ತೆಯಲ್ಲಿನ ವಸತಿ ಬಡಾವಣೆಯಲ್ಲಿ ನಡೆದಿದೆ. ಕಳೆದ ವಾರ ನಗರದಲ್ಲಿ ಅಶೋಕ್ ಪ್ರಭು ಎಂಬ 45 ವರ್ಷದ ವ್ಯಕ್ತಿಯ ಮೇಲೆ ಹಲ್ಲೆನಡೆದಿದ್ದು, 4 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸಾಗರ ಮೂಲದ ಆಸಿಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ನಂತರ ಪ್ರಕರಣದ ಎರಡನೇ ಶಂಕಿತ ಅಸ್ಲಂಗಾಗಿ [&#8230;]]]></description>
										<content:encoded><![CDATA[
<p style="font-size:20px"><strong>ಶಿವಮೊಗ್ಗ:</strong> ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಶಂಕಿತ ಆರೋಪಿಯ ಮೇಲೆ ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿರುವ ಘಟನೆ, ಶನಿವಾರ ನಗರದ ಹೊರವಲಯದ ಪುರ್ಲೆ ರಸ್ತೆಯಲ್ಲಿನ ವಸತಿ ಬಡಾವಣೆಯಲ್ಲಿ ನಡೆದಿದೆ.</p>



<p style="font-size:20px">ಕಳೆದ ವಾರ ನಗರದಲ್ಲಿ ಅಶೋಕ್ ಪ್ರಭು ಎಂಬ 45 ವರ್ಷದ ವ್ಯಕ್ತಿಯ ಮೇಲೆ ಹಲ್ಲೆನಡೆದಿದ್ದು, 4 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸಾಗರ ಮೂಲದ ಆಸಿಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ನಂತರ ಪ್ರಕರಣದ ಎರಡನೇ ಶಂಕಿತ ಅಸ್ಲಂಗಾಗಿ ಹುಡುಕಾಟ ನಡೆಸಿದ್ದರು.</p>



<p style="font-size:20px">ನಗರದ ಹೊರವಲಯದಲ್ಲಿ ಹೊಸದಾಗಿ ಅಭಿವೃದ್ಧಿಪಡಿಸಿದ ವಸತಿ ಬಡಾವಣೆಯಲ್ಲಿ ಶಂಕಿತ ಆರೋಪಿ ಅಸ್ಲಂ ಅಡಗಿಕೊಂಡಿರುವ ಮಾಹಿತಿ ದೊರಕಿದ್ದು, ಸುಳಿವಿನ ಮೇರೆಗೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಶಾಂತ್ ಹಾಗು ಅವರ ಪೊಲೀಸ್‌ ತಂಡ ಬಡಾವಣೆಗೆ ದಾವಿಸಿದೆ. ನಂತರ ಎರೆಡು ಕಡೆಯಿಂದ ಮಾತಿನ ಚಕಮಕಿ ನಡೆದಿದ್ದು, ಅಸ್ಲಾಂ ಪೊಲೀಸ್‌ ಪೆದೆಯೊಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸಬ್ ಇನ್ಸ್ ಪೆಕ್ಟರ್ ಅಸ್ಲಂ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.</p>



<p style="font-size:20px">ನಂತರ ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸ್‌ ಪೆದೆ ಮತ್ತು ಶಂಕಿತ ಆರೋಪಿ ಅಸ್ಲಂನನ್ನು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹಲ್ಲೆ ;  ಕೋಮು ಸಂಘರ್ಷದ ಬಣ್ಣ!</title>
		<link>https://peepalmedia.com/shivamoggadalli-dushkarmigalinda-halle-komusangarshada-banna/</link>
		
		<dc:creator><![CDATA[Peepal Media]]></dc:creator>
		<pubDate>Tue, 25 Oct 2022 06:52:42 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[shivamogga]]></category>
		<category><![CDATA[SHIVAMOGGA POLICE]]></category>
		<guid isPermaLink="false">https://peepalmedia.com/?p=12841</guid>

					<description><![CDATA[ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೋಮು ಸಂಬಂಧಿತ ಗಲಭೆಗಳು ಹೆಚ್ಚಾಗಿವೆ. ಸದ್ಯ ಶಿವಮೊಗ್ಗ ನಗರದಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದು ಮತ್ತೆ ಗಲಭೆ, ಘರ್ಷಣೆಯ ಮುನ್ಸೂಚನೆ ನೀಡುತ್ತಿದೆ. ಶಿವಮೊಗ್ಗ ನಗರದ ಭರಮಪ್ಪ ನಗರದ ನಿವಾಸಿ ಪ್ರಕಾಶ್ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿದ ಪರಿಣಾಮ ಪ್ರಕಾಶ್ ರನ್ನು ರಾತ್ರಿಯೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಪ್ರಕಾಶ್ ಬಸ್ ಸ್ಟಾಂಡ್ ನಿಂದ [&#8230;]]]></description>
										<content:encoded><![CDATA[
<p>ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೋಮು ಸಂಬಂಧಿತ ಗಲಭೆಗಳು ಹೆಚ್ಚಾಗಿವೆ. ಸದ್ಯ ಶಿವಮೊಗ್ಗ ನಗರದಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದು ಮತ್ತೆ ಗಲಭೆ, ಘರ್ಷಣೆಯ ಮುನ್ಸೂಚನೆ ನೀಡುತ್ತಿದೆ.</p>



<p>ಶಿವಮೊಗ್ಗ ನಗರದ ಭರಮಪ್ಪ ನಗರದ ನಿವಾಸಿ ಪ್ರಕಾಶ್ ಮೇಲೆ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿದ ಪರಿಣಾಮ ಪ್ರಕಾಶ್ ರನ್ನು ರಾತ್ರಿಯೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಪ್ರಕಾಶ್ ಬಸ್ ಸ್ಟಾಂಡ್ ನಿಂದ ಸ್ನೇಹಿತರೊಂದಿಗೆ ಮನೆಗೆ ವಾಪಸ್ಸಾಗಿದ್ದಾರೆ. ಮನೆಯ ಬಳಿ ಸ್ನೇಹಿತರು ಬಿಟ್ಟು ಹೊರಟ ತಕ್ಷಣವೇ ಬೈಕಿನಲ್ಲಿ ಬಂದ ಮೂರು ಮಂದಿ ದುಷ್ಕರ್ಮಿಗಳು ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ.</p>



<p>ಇದೇ ವೇಳೆ ಕೆಳಕ್ಕೆ ಬಿದ್ದ ಪ್ರಕಾಶ್ ರನ್ನು ದುಷ್ಕರ್ಮಿಗಳು ತುಳಿದಿದ್ದಾರೆ. ಅವರಿಂದ ತಪ್ಪಿಸಿಕೊಂಡ ಪ್ರಕಾಶ್ ಮನೆಯ ಕಡೆಗೆ ಓಡಿ ಹೋಗಿದ್ದಾರೆ. ಪ್ರಕಾಶ್ ಮನೆಯವರು ಅವರ ಕೂಗಾಟ ಕೇಳಿ ಹೊರ ಬಂದ ತಕ್ಷಣ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.</p>



<p>ಹಿಂದೂಪರ ಸಂಘಟನೆಗಳು ನಡೆಸಿದ್ದ ಪಥ ಸಂಚಲನ ವೀಕ್ಷಿಸಲು ಹೋಗಿ ವಾಪಸ್ ಬರುವಾಗ ಈ ಘಟನೆ ನಡೆದಿದೆ. ಈಗ ಬಿಜೆಪಿ ಮತ್ತು ಕೆಲವು ಹಿಂದೂಪರ ಸಂಘಟನೆಗಳು ಇದಕ್ಕೆ ಕೋಮು ಸಂಘರ್ಷದ ಬಣ್ಣ ಬಳಿಯಲು ಮುಂದಾಗಿವೆ. ಆದರೆ ಸ್ವತಃ ಪ್ರಕಾಶ್ ತಾನು ಯಾವ ಸಂಘಟನೆಗೂ ಸೇರಿದವನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>



<p>ಆದರೆ ಶಿವಮೊಗ್ಗ ನಗರ ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಕೂಡಾ ಇದಕ್ಕೆ ಕೋಮು ಧ್ವೇಷದ ಕಾರಣ ಎಂಬಂತೆ ಹೇಳಿಕೆ ನೀಡಿದ್ದಾರೆ. ಜೊತೆಗೆ &#8220;ಪಿಎಫ್ಐ ಬ್ಯಾನ್ ಆದರೂ ಮುಸಲ್ಮಾನ ಗೂಂಡಾಗಳಿಗೆ ಬುದ್ಧಿ ಬಂದಿಲ್ಲ&#8221; ಎನ್ನುವ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಇದೊಂದು ಕೋಮು ಪ್ರಚೋದನಕಾರಿ ಹೇಳಿಕೆ ಆಗಿದ್ದು, ಆಡಳಿತಾರೂಢ ಬಿಜೆಪಿ ಪಕ್ಷದ ಶಾಸಕರು ಜವಾಬ್ದಾರಿ ಮರೆತು ವರ್ತಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.</p>



<p>ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಸುತ್ತಲಿನ ಸಿಸಿ ಕ್ಯಾಮೆರಾ ಪರಿಶೀಲಿಸುತ್ತಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ತನಿಖೆ ಜೊತೆಗೆ ಪ್ರಕಾಶ್ ಮನೆಗೆ ಪೊಲೀಸ್ ಬಂದೋಬಸ್ತ್ ನೀಡಿದ್ದಾರೆ.</p>
]]></content:encoded>
					
		
		
			</item>
		<item>
		<title>ನಿಷೇಧಿತ ಐಎಸ್‌ ನಂಟು ಆರೋಪ: ಶಂಕಿತ ವ್ಯಕ್ತಿ ಪೊಲೀಸರ ವಶಕ್ಕೆ</title>
		<link>https://peepalmedia.com/allegation-of-banned-is-suspect-in-police-custody/</link>
		
		<dc:creator><![CDATA[Peepal Media]]></dc:creator>
		<pubDate>Mon, 26 Sep 2022 06:24:53 +0000</pubDate>
				<category><![CDATA[ರಾಜ್ಯ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[shivamogga]]></category>
		<category><![CDATA[SHIVAMOGGA POLICE]]></category>
		<category><![CDATA[Terrorist organization IS]]></category>
		<guid isPermaLink="false">https://peepalmedia.com/?p=7207</guid>

					<description><![CDATA[ಗಂಗಾವತಿ: ನಿಷೇಧಿತ ಭಯೋತ್ಪಾದಕ ಸಂಘಟನೆ ಐಎಸ್‌ ನಂಟು ಹೊಂದಿದ ಆರೋಪದಲ್ಲಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಬ್ಬೀರ್‌, ಕೊಪ್ಪಳ ಜಿಲ್ಲೆ ಗಂಗಾವತಿಯ ಮೈಬೂಬ್‌ ನಗರವಾಸಿಯಾಗಿದ್ದು, ಬಾಳೆ ಹಣ್ಣು ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸ್‌ ಮಾಹಿತಿ ಪ್ರಕಾರ ತುಂಗಭದ್ರ ನದಿ ದಡದಲ್ಲಿ ಬಾಂಬ್‌ ಸ್ಪೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್‌ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತಿಯಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಹಿನ್ನಲೆ ಶಬ್ಬೀರ್‌ನನ್ನು ಭಾನುವಾರ ತಡರಾತ್ರಿ ವಶಕ್ಕೆ [&#8230;]]]></description>
										<content:encoded><![CDATA[
<p style="font-size:20px"><strong>ಗಂಗಾವತಿ: </strong>ನಿಷೇಧಿತ ಭಯೋತ್ಪಾದಕ ಸಂಘಟನೆ ಐಎಸ್‌ ನಂಟು ಹೊಂದಿದ ಆರೋಪದಲ್ಲಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>



<p style="font-size:20px">ಶಬ್ಬೀರ್‌, ಕೊಪ್ಪಳ ಜಿಲ್ಲೆ ಗಂಗಾವತಿಯ ಮೈಬೂಬ್‌ ನಗರವಾಸಿಯಾಗಿದ್ದು, ಬಾಳೆ ಹಣ್ಣು ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.</p>



<p style="font-size:20px">ಪೊಲೀಸ್‌ ಮಾಹಿತಿ ಪ್ರಕಾರ ತುಂಗಭದ್ರ ನದಿ ದಡದಲ್ಲಿ ಬಾಂಬ್‌ ಸ್ಪೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್‌ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತಿಯಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಹಿನ್ನಲೆ ಶಬ್ಬೀರ್‌ನನ್ನು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>
]]></content:encoded>
					
		
		
			</item>
	</channel>
</rss>
