<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>shivasundar &#8211; Peepal Media</title>
	<atom:link href="https://peepalmedia.com/tag/shivasundar/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 21 Jun 2023 06:14:01 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>shivasundar &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಎಮರ್ಜೆನ್ಸಿ ಘನಘೋರ- ಆದರೆ ಅದನ್ನು ಬೆಂಬಲಿಸಿತ್ತೇಕೆ ಸಂಘಪರಿವಾರ?!</title>
		<link>https://peepalmedia.com/emergency-ghanghora-but-why-did-the-sangh-parivar-support-it/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 21 Jun 2023 05:52:47 +0000</pubDate>
				<category><![CDATA[ಅಂಕಣ]]></category>
		<category><![CDATA[Emergency]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shivasundar]]></category>
		<guid isPermaLink="false">https://peepalmedia.com/?p=22564</guid>

					<description><![CDATA[ಇದೇ ಜೂನ್ 25 ಕ್ಕೆ ಇಂದಿರಾಗಾಂಧಿ ದೇಶದ ಮೇಲೆ ತುರ್ತುಸ್ಥಿತಿ ಘೋಷಿಸಿ 48 ವರ್ಶಗಳಾಗುತ್ತವೆ. ಮೋದಿ ಅಧಿಕಾರಕ್ಕೆ ಬರುವ ಮುಂಚೆ ಸ್ವಾತಂತ್ರ್ಯಾನಂತರದ ಭಾರತದ ಅತ್ಯಂತ ಕರಾಳ ಘಟ್ಟವಾಗಿದ್ದದ್ದು ಇಂದಿರಾಗಾಂಧಿಯವರು ಭಾರತದ ಮೇಲೆ ಹೇರಿದ ತುರ್ತುಸ್ಥಿತಿಯ ಆ 20 ತಿಂಗಳುಗಳು. ಆದರೆ ಅದನ್ನು ಮರೆಸುವಂತೆ ಮತ್ತು ಮೀರಿಸುವಂತೆ ಮೋದಿ ನೇತೃತ್ವದ ಕಳೆದ ಒಂಭತ್ತು ವರ್ಷಗಳ ಅಘೊಷಿತ ಮತ್ತು ಸರ್ವವ್ಯಾಪಿ ತುರ್ತುಸ್ಥಿತಿ ಇಂಡು ದೇಶದಲ್ಲಿ ಜಾರಿಯಲ್ಲಿದೆ. ಇಂದಿರಾ ಎಮರ್ಜೆನ್ಸಿ ರಾಜಕೀಯ ವಲಯಕ್ಕೆ ಸೀಮಿತವಾಗಿದ್ದರೆ ಮೋದಿ ಎಮರ್ಜೆನ್ಸಿ ದೇಶದ ರಾಜಕೀಯ, ಸಾಮಾಜಿಕ, [&#8230;]]]></description>
										<content:encoded><![CDATA[
<p>ಇದೇ ಜೂನ್ 25 ಕ್ಕೆ ಇಂದಿರಾಗಾಂಧಿ ದೇಶದ ಮೇಲೆ ತುರ್ತುಸ್ಥಿತಿ ಘೋಷಿಸಿ 48 ವರ್ಶಗಳಾಗುತ್ತವೆ. ಮೋದಿ ಅಧಿಕಾರಕ್ಕೆ ಬರುವ ಮುಂಚೆ ಸ್ವಾತಂತ್ರ್ಯಾನಂತರದ ಭಾರತದ ಅತ್ಯಂತ ಕರಾಳ ಘಟ್ಟವಾಗಿದ್ದದ್ದು ಇಂದಿರಾಗಾಂಧಿಯವರು ಭಾರತದ ಮೇಲೆ ಹೇರಿದ ತುರ್ತುಸ್ಥಿತಿಯ ಆ 20 ತಿಂಗಳುಗಳು.</p>



<p>ಆದರೆ ಅದನ್ನು ಮರೆಸುವಂತೆ ಮತ್ತು ಮೀರಿಸುವಂತೆ ಮೋದಿ ನೇತೃತ್ವದ ಕಳೆದ ಒಂಭತ್ತು ವರ್ಷಗಳ ಅಘೊಷಿತ ಮತ್ತು ಸರ್ವವ್ಯಾಪಿ ತುರ್ತುಸ್ಥಿತಿ ಇಂಡು ದೇಶದಲ್ಲಿ ಜಾರಿಯಲ್ಲಿದೆ. ಇಂದಿರಾ ಎಮರ್ಜೆನ್ಸಿ ರಾಜಕೀಯ ವಲಯಕ್ಕೆ ಸೀಮಿತವಾಗಿದ್ದರೆ ಮೋದಿ ಎಮರ್ಜೆನ್ಸಿ ದೇಶದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಮಾತ್ರವಲ್ಲದೆ ಜನರ ದೈನಂದಿನ ಬದುಕಿನ ಎಲ್ಲಾ ಆಯಾಮಗಳನ್ನು ಅತಂತ್ರಗೊಳಿಸಿದೆ.</p>



<p>ಇಂದಿರಾ ಎಮರ್ಜೆನ್ಸಿ ಕೇವಲ 20 ತಿಂಗಳುಗಳು ಇದ್ದರೆ ಮೋದಿ ಸರ್ವಾಧಿಕಾರ ಹತ್ತನೇ ವರ್ಷದೆಡೆ ಧಾವಿಸುತ್ತಿದೆ. ಇಪ್ಪತ್ತು ತಿಂಗಳ ಇಂದಿರಾ ಎಮರ್ಜೆನ್ಸಿಯ ವಿರುದ್ಧ ದೇಶದ ರಾಜಕೀಯದಲ್ಲಿ ಹಾಗೂ ಸಮಾಜದಲ್ಲು ಬಹುಮತದ ಆಕ್ರೋಶ ಹುಟ್ಟಿದ್ದರೆ ಮೋದಿಯ ಫ಼್ಯಾಸಿಸಂ ಗೆ ಆ ರೀತಿಯ ಪ್ರತಿರೋಧ ಇನ್ನೂ ಕಾಣುತ್ತಿಲ್ಲ. ಬದಲಿಗೆ ಇತ್ತಿಚಿನ ಸರ್ವೆಯೊಂದು ಹೇಳುವಂತೆ ಕಳೆದ ಒಂದು ವರ್ಷದಲ್ಲಿ ರಾಹುಲ್ ಗಾಂಧಿಯ ವರ್ಚಸ್ಸು ಏರಿದ್ದರೂ ಮೋದಿಯ ಜನಪ್ರಿಯತೆ ಕುಗ್ಗಿಲ್ಲ. ಇದಕ್ಕೆ ಪ್ರಧಾನ ಕಾರಣ ಬಿಜೆಪಿ ಮತ್ತು ಸಂಘಪರಿವಾರ ಬಹಳ ವ್ಯವಸ್ಥಿತವಾಗಿ ರೂಪಿಸಿಕೊಂಡಿರುವ ಪ್ರಭಾ ವಲಯ. ಸಂಘಪರಿವಾರದ ಸಂಘಟನಾ ಬಲ. ಮತ್ತು ಜನರ ಅಭಿಪ್ರಾಯಗಳನ್ನು ತಮ್ಮ ನೆರೆಟಿವ್ ಗೆ ತಕ್ಕಂತೆ ರೂಪಿಸಲು ಹಾಕಿಕೊಳ್ಳುವ ಕಾರ್ಯಕ್ರಮಗಳು ಮತ್ತು ಅದನ್ನು ಕಿಂಚಿತ್ತೂ ವಿಮರ್ಶಿಸದೆ ಪ್ರಚಾರ ಮಾಡುವ ಮಾಧ್ಯಮಗಳ ಬೇಶರತ್ ಗುಲಾಮಗಿರಿ.</p>



<p>ಇದರ ಭಾಗವಾಗಿಯೇ ಪ್ರತಿವರ್ಷ ಎಮರ್ಜೆನ್ಸಿ ಘೋಷಿಸಿದ ದಿನವಾದ ಜೂನ್ 25 ರಂದು ಮೋದಿ ಸರ್ಕಾರ ಒಂದು ಸಂಪ್ರದಾಯದಂತೆ ಎಮರ್ಜೆನ್ಸಿಯ ಕರಾಳತೆಯನ್ನು ದೇಶಕೆ ನೆನಪಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದೆ. ಈ ಸಂದರ್ಭವನ್ನು ಹೇಗೆ ಕಾಂಗ್ರೆಸ್ ಪ್ರಜಾಪ್ರಭುತ್ವ ವಿರೋಧಿಯೆಂದು ಮಾತ್ರವಲ್ಲದೆ ತಮ್ಮ ಪಕ್ಷ ಮಾತ್ರ ಎಮರ್ಜೆನ್ಸಿಯಲ್ಲಿ ಸರ್ವಾಧಿಕಾರಿ ವಿರೋಧಿಯಾಗಿತ್ತೆಂಬ ಸುಳ್ಳನ್ನು ವ್ಯವಸ್ಥಿತವಾಗಿ ಹಂಚಲು ಬಳಸಿಕೊಳ್ಳುತ್ತದೆ.</p>



<p>ಅದರಲ್ಲೂ ಕಳೆದ ಒಂಭತ್ತು ವರ್ಷಗಳಲ್ಲಿ ಭಾರತದ ಮಾಧ್ಯಮ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ , ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರತಿರೋಧ ಸ್ವಾತಂತ್ರ್ಯ ಗಳು ಇಂದಿರಾ ಎಮರ್ಜೆನ್ಸಿ ಕಾಲಕ್ಕಿಂತಲೂ ಭೀಕರವಾಗಿ ಹರಣವಾಗುತ್ತಿರುವುದು ಜಗತ್ತಿನೆದುರು ಬೆತ್ತಲಾಗಿದೆ. ಎಲ್ಲಾ ಸ್ವಾತಂತ್ರ್ಯ ಸೂಚ್ಯಂಕಗಳಲ್ಲೂ ಭಾರತ ಜಗತ್ತಿನ ಸರ್ವಾಧಿಕಾರಿ ದೇಶಗಳಿಗಿಂತ ಕೆಳಗಿಳಿಯುತ್ತಿದೆ. ಅಥವಾ ಅದರ ಜೊತೆಗಿದೆ. ಮೋದಿ ಸರ್ಕಾರದ ಕಾಲದಲ್ಲಿ ಭಾರತವು ಒಂದು ಪ್ರಜಾತಂತ್ರವಾಗಿ ಉಳಿದಿಲ್ಲವೆಂದು, ಬದಲಿಗೆ ಭಾರತವು ಒಂದು ಚುನಾವಣಾ ಸರ್ವಾಧಿಕಾರ ವಾಗಿದೆಯೆಂದು ಜಗತ್ತಿನ ಪ್ರಜಾತಂತ್ರಗಳ ಆರೋಗ್ಯದ ಬಗ್ಗೆ ಗಂಭೀರ ಅಧ್ಯಯನ ನಡೆಸುತ್ತಿರುವ ಸ್ವೀಡನ್ನಿನ ವಿ-ಡೆಮ್ ನಂಥ ಪ್ರತಿಷ್ಠಿತ ಜಾಗತಿಕ ಸಂಸ್ಥೆಗಳು ಘೋಷಿಸುತ್ತಿವೆ.</p>



<p>ಹೀಗಾಗಿ ಜಗತ್ತಿನೆದುರು ಮತ್ತು ಭಾರತದಲ್ಲೂ ತಮ್ಮ ಸರ್ಕಾರ ಪ್ರಜಾಪ್ರಭುತ್ವವಾದಿ ಎಂದು ತೋರಿಸಿಕೊಳ್ಳುವ ತುರ್ತಿನಲ್ಲಿರುವ ಮೋದಿ ಸರ್ಕಾರ ಈ ವರ್ಶವೂ ಜೂನ್ 25 ರಂದು ಇಂದಿರಾ ಎಮರ್ಜೆನ್ಸಿಯ ನೆನಪು ಮಾಡುತ್ತಾ ಮೋದಿ ಫ಼್ಯಾಶಿಸಂ ಅನ್ನು ಮರೆಸುವ ಮಹಾ ಯೋಜನೆಯನ್ನು ಹಮ್ಮಿಕೊಂಡಿದೆ.</p>



<p>ಮಣಿಪುರ ಇತ್ಯಾದಿ ಕಡೆಗಳಲ್ಲಿ ಕೇಂದ್ರದ ಮೌನ ಬೆಂಬಲ-ಸಹಕಾರದೊಂದಿಗೆ ನಡೆಯುತ್ತಿರುವ ಅಂತರ್ಯುದ್ಧ ಮತ್ತು ನರಮೇಧಗಳ ಬಗ್ಗೆ ತುಟಿ ಬಿಚ್ಚದ ಬೇಜವಾಬ್ದಾರಿ ಪ್ರಧಾನಿ ಅಮೆರಿಕ ಪ್ರವಾಸಕ್ಕೆ ಹೊರಟು ನಿಂತ ಕ್ಷಣದಲ್ಲೂ ಮಾಡಿದ &#8220;ಮನ್ ಕಿ ಬಾತ್ &#8221; ಭಾಷಣದಲ್ಲಿ ತುರ್ತುಸ್ಥಿತಿಯ ಕರಾಳತೆಯನ್ನು ದೇಶಕೆ ನೆನಪು ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ. ಮಣಿಪುರದಲ್ಲಿ ಕುಕಿಗಳ ಪ್ರಭುತ್ವ ಬೆಂಬಲಿತ ನರಮೇಧ ಮತ್ತು ಅಂತರ್ಯುದ್ಧಗಳು ಪ್ರಾರಂಭವಾಗಿ 50 ದಿನಗಳಾದರೂ ಕ್ರಮತೆಗೆದುಕೊಳ್ಳದ ಜಗತ್ತಿನ ದೊಡ್ಡ ಪ್ರಜಾಪ್ರಭುತ್ವದ ಸರ್ವಶಕ್ತ ಪ್ರಧಾನಿ ಮೋದಿ &#8220;ಮನ್ ಕಿ ಬಾತ್&#8221; ನಲ್ಲಾದರೂ ಅದರ ಬಗ್ಗೆ ಮಾತನಾಡಬಹುದೆಂದು ನಿರೀಕ್ಷಿಸಿದ್ದ ಮಣಿಪುರ ಹಾಗೂ ಈಶಾನ್ಯ ಭಾರತದ ಜನತೆ ಆಕ್ರೋಶದಿಂದ &#8220;ಮನ್ ಕಿ ಬಾತ್&#8221; ಬಿತ್ತರಿಸುತ್ತಿದ್ದ ರೇಡಿಯೋಗಳನ್ನು ಒಡೆದುಹಾಕಿದ್ದಾರೆ.</p>



<p>ಅದೇನೇ ಇರಲಿ. ನೈಜ ಪ್ರಜಾತಂತ್ರವಾದಿಗಳು ಎಮರ್ಜೆನ್ಸಿಯ ಪ್ರಮಾದಗಳನ್ನು ಹಾಗೂ ಅದನ್ನು ಸಾಧ್ಯಗೊಳಿಸಿದ ರಾಜಕೀಯ-ಆರ್ಥಿಕ ಸಂದರ್ಭವನ್ನೂ ಹಾಗೂ ಅದಕ್ಕೆ ಅವಕಾಶ ಮಾಡಿಕೊಟ್ಟ ಸಾಂವಿಧಾನಿಕ ಸಾಧ್ಯತೆಗಳನ್ನೂ ಮರೆಯುವಂತಿಲ್ಲ.</p>



<p>ಆದರೆ ತುರ್ತುಸ್ಥಿತಿಯ ವಿರುದ್ಧ ನಡೆದ ಪ್ರಜಾತಾಂತ್ರಿಕ ಸಮರ ಜನಸಂಘ-ಬಿಜೆಪಿ ಮತ್ತು ಸಂಘಪರಿವಾರದಂಥ ಪ್ರಜಾತಂತ್ರ ವಿರೋಧಿ ಮನುವಾದಿ ಫ಼್ಯಾಶಿಸ್ಟ್ ಶಕ್ತಿಗಳಿಗೆ ಹೊಸಜೀವ ಕೊಟ್ಟಿದ್ದು ಮತ್ತು ಅವರನ್ನು ಮಾನ್ಯಗೊಳಿಸಿ ಅಧಿಕಾರಕ್ಕೆ ತಂದದ್ದು ಮಾತ್ರ ಒಂದು ಐತಿಹಾಸಿಕ ವಿಪರ್ಯಾಸ.</p>



<p><em>ಇದು ಎಮರ್ಜೆನ್ಸಿ ಗಿಂತ ದೊಡ್ಡ ಪ್ರಜಾತಾಂತ್ರಿಕ ವೈಫ಼ಲ್ಯ</em></p>



<p><em>ದೊಡ್ದ ಶತ್ರುವಿನ ವಿರುದ್ಧ ಸಣ್ಣ ಶತ್ರುವಿನ ಜೊತೆ ಬೇಶರತ್ ಐಕ್ಯತೆ ಮತ್ತು ಅವಲಂಬನೆಗಳೇ ಇಂಥಾ ದುರಂತಕ್ಕೆ ಕಾರಣವಾಯಿತು</em></p>



<p><em>ಇಂದು ಫ಼ಾಶಿಸ್ಟ್ ಶಕ್ತಿಗಳ ವಿರುದ್ಧ ನಡೆದಿರುವ ಸಮ್ಘರ್ಷದಲ್ಲಿ ಮತ್ತೆ ಅದೇ ತಪ್ಪು ಮಾಡುತ್ತಿದೇವೆ ಎಂಬುದು ಮತ್ತೊಂದು ಐತಿಹಾಸಿಕ ವಿಪರ್ಯಾಸ</em>.</p>



<p>ಅದೇನೇ ಇರಲಿ ಇತಿಹಾಸವನ್ನು ನೋಡಿದರೆ , ಸಂಘಪರಿವಾರ ಮತ್ತು ಅಂದಿನ ಜನಸಂಘ ತುರ್ತುಸ್ಥಿತಿಯ ವಿರುದ್ಧ ಇತರ ಜನತಾಂತ್ರಿಕ ಶಕ್ತಿಗಳಷ್ಟು ಕಟಿಬದ್ಧತೆಯಿಂದ ಮತ್ತು ತ್ಯಾಗಶೀಲತೆಯಿಂದ ತುರ್ತುಸ್ಥಿತಿಯ ವಿರುದ್ಧ ಹೋರಾಡದೆ, ಇಂದಿರಾಗಾಂಧಿಯವರೊಂದಿಗೆ ರಾಜಿ-ಕಾಬೂಲಿಯಲ್ಲಿ ತೊಡಗಿದ್ದರೆಂಬ ಸಂಗತಿಯನ್ನು ಮುಚ್ಚಿಟ್ಟಿರುವುದು ಸ್ಪಷ್ಟವಾಗುತ್ತದೆ. . ಅಷ್ಟು ಮಾತ್ರವಲ್ಲ ಅವರ ಪಿತಾಮಹ ಸಾವರ್ಕರ್ ರೀತಿಯಲ್ಲಿ ಅವರ ನಾಯಕರು ಜೈಲಿನಿಂದಲೇ ತುರ್ತುಸ್ಥಿತಿಯನ್ನು ಬೆಂಬಲಿಸುತ್ತಾ ಶರಣಾಗತಿ ಪತ್ರಗಳನ್ನು ಬರೆದಿದ್ದರು.</p>



<p>ತುರ್ತುಸ್ಥಿತಿಯನ್ನು ಘೋಷಿಸಲು ಕಾರಣವಾದ ರಾಜಕೀಯ ಹೋರಾಟಗಳಲ್ಲಿ ಆರೆಸ್ಸೆಸ್ ಮತ್ತು ಅದರ ಜನಸಂಘ ಹಾಗೂ ಇತರ ಅಂಗಸಂಸ್ಥೆಗಳ ಪಾತ್ರ ಒಂದಿಷ್ಟಿದ್ದದ್ದು ನಿಜ. ಆದರೆ, ತುರ್ತುಸ್ಥಿತಿಯನ್ನು ಘೋಷಿಸಿದ ನಂತರ ಆರೆಸ್ಸೆಸ್ ಮತ್ತು ಭಾರತೀಯ ಜನಸಂಘದ ನಾಯಕರು ತಾವು ಸರ್ವಾಧಿಕಾರಿ ಎಂದು ಕರೆಯುತ್ತಿದ್ದ ಇಂದಿರಾಗಾಂಧಿಯವರ ಜೊತೆ ಗುಪ್ತ ಒಪ್ಪಂದವನ್ನು ಮಾಡಿಕೊಂಡು ಎಮರ್ಜೆನ್ಸಿಯನ್ನು ಬೆಂಬಲಿಸಿದ್ದೂ ಕೂಡಾ ಅಷ್ಟೇ ನಿಜ.</p>



<p>ಇತಿಹಾಸದ ಈ ಅತ್ಯಂತ ಅಪಮಾನಕಾರಿ ಪುಟಗಳನ್ನು ಹಾಗೂ ತಮ್ಮ ಈ ಅವಕಾಶವಾದಿ ಜನದ್ರೋಹಿ ಧೋರಣೆಗಳನ್ನು ಬಿಜೆಪಿ-ಸಂಘಪರಿವಾರ ಮುಚ್ಚಿಹಾಕಲು ಸತತವಾಗಿ ಪ್ರಯತ್ನಿಸುತ್ತಲೇ ಇದೆ. ಆದರೆ ಆ ಕಾಲದ ಅವರ ಬರಹಗಳು ಮತ್ತು ಅವರ ನಾಯಕರುಗಳೆ ದಾಖಲಿಸಿರುವ ಇತಿಹಾಸಗಳು ಹೇಗೆ ಸಂಘಪರಿವಾರದ ನಾಯಕರು ಎಮರ್ಜೆನ್ಸಿಯನ್ನು ಗುಪ್ತವಾಗಿ ಬೆಂಬಲಿಸಿದ್ದರು ಎಂಬ ಬಗ್ಗೆ ಸಾಕಷ್ಟು ಪುರಾವೆಗಳನ್ನು ಒದಗಿಸುತ್ತವೆ.</p>



<p><em>ಅಟಲ ಬಿಹಾರಿಯವರು ಅರೆಕ್ಷಣವೂ ಜೈಲಿನಲ್ಲಿರಲಿಲ್ಲ!</em></p>



<p>ಪ್ರತಿವರ್ಷ ಜೂನ್ 25 ರಂದು ಬಿಜೆಪಿ ಮತ್ತು ಆರೆಸ್ಸೆಸ್ ನವರು ಯಥಾಪ್ರಕಾರ ತಾವು ಹೇಗೆ ಭಾರತವನ್ನು ತುರ್ತುಸ್ಥಿತಿಯಿಂದ ಕಾಪಾಡಿದೆವು ಎಂದು ಕೊಚ್ಚಿಕೊಳ್ಳುತ್ತಾ ವಾಜಪೇಯಿ, ಮೊರಾರ್ಜಿ ಹಾಗೂ ಇನ್ನಿತರ ನಾಯಕರ ಬಂಧನದ ಬಗ್ಗೆ ವರದಿ ಮಾಡಿದ್ದ 1977ರ ಜೂನ್ 26 ರ ಪತ್ರಿಕೆಗಳ ಮುಖಪುಟವನ್ನು ಪೇಸ್ಬುಕ್ನಲ್ಲಿ ಹಾಕಿಕೊಳ್ಳುತ್ತಾರೆ.</p>



<figure class="wp-block-image size-full"><img fetchpriority="high" decoding="async" width="600" height="315" src="https://peepalmedia.com/wp-content/uploads/2023/06/images-2023-06-21T113834.710.jpeg" alt="" class="wp-image-22567" srcset="https://peepalmedia.com/wp-content/uploads/2023/06/images-2023-06-21T113834.710.jpeg 600w, https://peepalmedia.com/wp-content/uploads/2023/06/images-2023-06-21T113834.710-300x158.jpeg 300w, https://peepalmedia.com/wp-content/uploads/2023/06/images-2023-06-21T113834.710-150x79.jpeg 150w" sizes="(max-width: 600px) 100vw, 600px" /></figure>



<p>ಆದರೆ ಬಿಜೆಪಿ ನಾಯಕರುಗಳಿಗಿಂತ ಹೆಚ್ಚಿನ ಸಾವು ನೋವುಗಳನ್ನು ಎಮರ್ಜೆನ್ಸಿಯಲ್ಲಿ ಅನುಭವಿಸಿದವರು ಸಮಾಜವಾದಿಗಳು, ಲೋಹಿಯಾವಾದಿಗಳು, ಸಿಪಿಎಂ ಮತ್ತು ನಕ್ಸಲೈಟ್ ಪಕ್ಷಗಳ ಸಾವಿರಾರು ನಾಯಕರು ಮತ್ತು ಕಾರ್ಯಕರ್ತರು. ಅದು ಅಂದಿನ ಗೃಹ ಇಲಾಖೆಯ ಕಡತಗಳನ್ನು ಹಾಗೂ ಗುಪ್ತ ವರದಿಗಳನ್ನೂ ಗಮನಿಸಿದರೆ ಗೊತ್ತಾಗುತ್ತದೆ.</p>



<p>ಅದಿರಲಿ. ಮುಖಪುಟದಲ್ಲಿ ಹೆಸರು ಹಾಕಿಸಿಕೊಂಡ ಅಟಲ್ ಬಿಹಾರಿ ವಾಜಪೇಯಿಯವರು ನಿಜಕ್ಕೂ ತುರ್ತುಸ್ಥಿತಿಯಲ್ಲಿ ಜೈಲುವಾಸ ಅನುಭವಿಸಿದ್ದರೇ?</p>



<p>ಖಂಡಿತಾ ಇಲ್ಲ.</p>



<p>ತುರ್ತುಸ್ಥಿತಿಯ 20 ತಿಂಗಳುಗಳಲ್ಲಿ ಅತಿ ಹೆಚ್ಚು ಭಾಗ ಅಟಲ್ ಬಿಹಾರಿ ವಾಜಪೇಯಿಯವರು ಪೆರೋಲ್ ಮೇಲೆ ಮನೆಯಲ್ಲಿ ಕಳೆದಿದ್ದರು.</p>



<p><em>ಹಾಗೂ ಪೆರೋಲ್ ಪಡೆದುಕೊಳ್ಳಲು ತುರ್ತುಸ್ಥಿತಿಯನ್ನು ತಾವು ವಿರೋಧಿಸುವುದಿಲ್ಲ ಎಂದು ಮುಚ್ಚಳಿಕೆಯನ್ನೂ ಬರೆದುಕೊಟ್ಟಿದ್ದರು!</em></p>



<p>ಇದನ್ನು ದಾಖಲೆ ಸಮೇತ ಜನರ ಗಮನಕ್ಕೆ ತಂದಿದ್ದು ಕಮ್ಯುನಿಷ್ಟರೂ ಅಲ್ಲ, ಸಮಾಜವಾದಿಗಳೂ ಅಲ್ಲ. ಬದಲಿಗೆ ಬಿಜೆಪಿ ಪಕ್ಷದ ಪ್ರಮುಖ ನಾಯಕರಲ್ಲೊಬ್ಬರಾದ ಸುಬ್ರಹ್ಮಣ್ಯ ಸ್ವಾಮಿಯವರು.</p>



<p>2000 ನೇ ಇಸವಿಯ ಜೂನ್ 13 ರಂದು The Hindu ಪತ್ರಿಕೆಗೆ ಬರೆದ “The Unlearnt Lessons Of Emergency” ಎಂಬ ಸುದೀರ್ಘ ಲೇಖನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯವರು ಹೇಗೆ ಆರೆಸ್ಸೆಸ್ ಮತ್ತು ಜನಸಂಘದ ಹಲವಾರು ನಾಯಕರು ಇಂದಿರಾಗಾಂಧಿಯವರ ಜೊತೆಗೆ ಗುಪ್ತ ಮಾತುಕತೆಗಳಲ್ಲಿ ತೊಡಗಿದ್ದರು ಎಂಬುದನ್ನು ಬಯಲಿಗೆಳೆಯುತ್ತಾರೆ.</p>



<p>ಅದರಲ್ಲೂ ಅಟಲ್ ಬಿಹಾರಿ ವಾಜಪೇಯಿಯವರು ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಇಂದಿರಾಗಾಂಧಿಯವರ ಜೊತೆ ಒಂದು ಒಪ್ಪಂದಕ್ಕೆ ಬರುತ್ತಾರೆ. ತಮಗೆ ಪೆರೋಲ್ ನೀಡಿ ಹೊರಬರಲು ಅವಕಾಶ ನೀಡಿದರೆ ತಾವು ಸರ್ಕಾರಿ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲವೆಂದು ಮುಚ್ಚಳಿಕೆ ಬರೆದುಕೊಟು ಹೊರಬರುತ್ತಾರೆ. ಹಾಗೆಯೇ ಹೊರಗಿದ್ದ ಅಷ್ಟೂ ಅವಧಿಯಲ್ಲಿ ಸರ್ಕಾರ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಅವರು ದಾಖಲಿಸಿದ್ದಾರೆ.</p>



<p>ಇದು ಆಶ್ಚರ್ಯವೂ ಅಲ್ಲ. ಹೊಸತೂ ಅಲ್ಲ. ಏಕೆಂದರೆ, ವಾಜಪೇಯಿಯವರು ಸ್ವಾತಂತ್ರ್ಯ ಪೂರ್ವದಲ್ಲಿ ಸಹ ಹೀಗೆ ಮಾಡಿದ್ದರು. 1942 ರ ಕ್ವಿಟ್ ಇಂಡಿಯಾ ಚಳವಳಿಯ ಪ್ರದರ್ಶನವೊಂದನ್ನು ನೋಡುತ್ತಿದ್ದಾಗ ಬ್ರಿಟಿಷ್ ಸರ್ಕಾರದಿಂದ ಬಂಧಿಸಲ್ಪಟ್ಟ ವಾಜಪೇಯಿಯವರು, ಆಗಲೂ ಬಂಧನದಿಂದ ಹೊರಬಂದದ್ದು ತಮ್ಮ ಪರಿಚಿತ ಚಳವಳಿಗಾರರ ಹೆಸರನ್ನು ಬಿಟ್ಟುಕೊಟ್ಟು ಮತ್ತು ಇನ್ನೆಂದಿಗೂ ಬ್ರಿಟಿಷ್ ಸರ್ಕಾರದ ವಿರೋಧಿ ಚಳವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ಬರೆದುಕೊಟ್ಟೇ ಅಲ್ಲವೇ?</p>



<p><em>ಇಂದಿರಾ ಗಾಂಧಿಗೆ ಶರಣಾದ ಆರೆಸ್ಸೆಸ್ಸಿನ Surrender Document</em></p>



<p>ಅದೇ ಲೇಖನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯವರು ಹೇಗೆ ಆರೆಸ್ಸೆಸ್ಸಿನ ನಾಯಕರು 1976 ರ ಡಿಸೆಂಬರ್ ಹೊತ್ತಿಗೆ ಇಂದಿರಾಗಾಂಧಿಯವರ ಎಮರ್ಜೆನ್ಸಿಗೆ ಸಂಪೂರ್ಣ ಹಾಗೂ ಬಹಿರಂಗ ಬೆಂಬಲ ಘೋಷಿಸುವ ಸರೆಂಡರ್ ಡಾಕ್ಯುಮೆಂಟ್ ಗೆ ಸಹಿಹಾಕಲು ತೀರ್ಮಾನ ತೆಗೆದುಕೊಂಡಿದ್ದರೂ ಎಂಬುದನ್ನು ವಿವರಿಸುತ್ತಾರೆ.</p>



<figure class="wp-block-image size-full"><img decoding="async" width="385" height="247" src="https://peepalmedia.com/wp-content/uploads/2023/06/images-2023-06-21T113909.956.jpeg" alt="" class="wp-image-22569" srcset="https://peepalmedia.com/wp-content/uploads/2023/06/images-2023-06-21T113909.956.jpeg 385w, https://peepalmedia.com/wp-content/uploads/2023/06/images-2023-06-21T113909.956-300x192.jpeg 300w, https://peepalmedia.com/wp-content/uploads/2023/06/images-2023-06-21T113909.956-150x96.jpeg 150w" sizes="(max-width: 385px) 100vw, 385px" /></figure>



<p>ವಾಸ್ತವವಾಗಿ ತುರ್ತುಸ್ಥಿತಿಯ ಘೋಷಣೆಯಾದ ನಂತರ ಸರ್ಕಾರಕ್ಕೆ ವಿರೋಧ ಮಾಡದಂತೆ ಸಂಘಟನಾತ್ಮಕ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿಯನ್ನು ಆರೆಸ್ಸೆಸ್ಸಿನ ಹಿರಿಯ ನಾಯಕರಾದ ಮಧುಕರ್ ಮೂಳೆಯವರಿಗೆ ವಹಿಸಲಾಗಿತ್ತು. ಸರ್ಕಾರದೊಡನೆ ಸಂಧಾನ ಮಾತುಕತೆಯ ಜವಾಬ್ದಾರಿಯನ್ನು ರಾನಡೆಯವರಿಗೆ ವಹಿಸಲಾಗಿತ್ತು. ಸುಬ್ರಹ್ಮಣ್ಯಸ್ವಾಮಿಯವರಿಗೆ ಅಮೆರಿಕವನ್ನೂ ಒಳಗೊಂಡಂತೆ ವಿದೇಶಗಳಲ್ಲಿ ಎಮರ್ಜೆನ್ಸಿ ವಿರೋಧಿ ಹೋರಾಟದ ಬಗ್ಗೆ ಸರ್ಕಾರಗಳ ಬೆಂಬಲ ಪಡೆದುಕೊಳ್ಳುವ ಜವಾಬ್ದಾರಿಯನ್ನು ವಹಿಸಲಾಗಿತ್ತು.</p>



<p>ಆದರೆ 1976 ರ ನವಂಬರ್‌ನಲ್ಲಿ ಮಧುಕರ್ ಮೂಳೆಯವರು ಸುಬ್ರಹ್ಮಣ್ಯ ಸ್ವಾಮಿಯವರಿಗೆ ತಮ್ಮ ಪ್ರಯತ್ನಗಳನ್ನು ನಿಲ್ಲಿಸಲು ಅತ್ಯಂತ ವಿಷಾದದಿಂದ ಸಲಹೆ ಮಾಡುತ್ತಾರೆ. ಏಕೆಂದರೆ:<br>“the RSS had finalised the document of surrender to be signed at the end of January 1977”</p>



<p>-ಆರೆಸ್ಸೆಸ್ಸು 1977 ರ ಜನವರಿಯ ಕೊನೆಯ ವೇಳೆಗೆ ಶರಣಾಗತಿ ಒಪ್ಪಂದಕ್ಕೆ ಸಹಿ ಹಾಕಲು ತೀರ್ಮಾನಿಸಿದೆ- ಎಂದು ಮಧುಕರ್ ಮೂಳೆಯವರು ವಿಷಾದದಿಂದ ನನಗೆ ತಿಳಿಸಿದರು ಎಂದು ಸುಬ್ರಹ್ಮಣ್ಯಸ್ವಾಮಿಯವರು ಆ ಲೇಖನದಲ್ಲಿ ದಾಖಲಿಸುತ್ತಾರೆ.</p>



<p>ಹೆಚ್ಚಿನ ವಿವರಗಳಿಗೆ ಆಸಕ್ತರು ಸುಬ್ರಹ್ಮಣ್ಯಸ್ವಾಮಿಯವರ ಲೇಖನವನ್ನು ಈ ವೆಬ್ ವಿಳಾಸದಲ್ಲಿ ಓದಬಹುದು.<br>https://www.thehindu.com/todays-paper/tp-miscellaneous/tp-others/unlearnt-lessons-of-the-emergency/article28026968.ece</p>



<p>ಆರೆಸ್ಸೆಸ್ ನಾಯಕರ ಈ ಸರೆಂಡರ್ ತೀರ್ಮಾನದ ಬಗ್ಗೆ ಆ ದಿನಗಳಲ್ಲಿ ಐಬಿಯ ಮುಖ್ಯಸ್ಥರಾಗಿದ್ದ ಟಿ.ವಿ. ರಾಜೇಶ್ವರ್ ಅವರು ತಮ್ಮ “India- Crucial Years” ಪುಸ್ತಕದಲ್ಲೂ ದಾಖಲಿಸಿದ್ದಾರೆ. ಹಾಗೆಯೇ ಈ ವಿದ್ಯಮಾನವನ್ನು ಆ ದಿನಗಳಲ್ಲಿ ಇಂದಿರಾಗಾಂಧಿಯವರ ವಾರ್ತಾಧಿಕಾರಿಯಾಗಿದ್ದ ಹಿರಿಯ ಪತ್ರಕರ್ತ ಎಚ್.ವೈ. ಶಾರದಾಪ್ರಸಾದರ್ ಅವರೂ ದಾಖಲಿಸಿರುವುದನ್ನು ಅವರ ಮಗ ರವಿ ವಿಶ್ವೇಶ್ವರ ಶಾರದಾ ಪ್ರಸಾದ್ ಅವರು ದಿ ಪ್ರಿಂಟ್ ವೆಬ್ ಪತ್ರಿಕೆಗೆ ಬರೆದ ಲೇಖದಲ್ಲಿ ನೆನಪಿಸಿದ್ದಾರೆ. (https://theprint.in/opinion/rss-leaders-deserted-jayaprakash-resistance-during-indira-emergency/448294/)</p>



<p><em>ಸರಸಂಘಚಾಲಕರ ಸರೆಂಡರ್ ಪತ್ರಗಳು</em></p>



<p>ಇವೆಲ್ಲಕ್ಕಿಂತ ಮುಖ್ಯವಾಗಿ ತುರ್ತುಸ್ಥಿತಿಯಲ್ಲಿ ಬಂಧನಕ್ಕೊಳಗಾಗಿದ್ದ ಆರೆಸ್ಸೆಸ್ನ ಪರಮೋಚ್ಚ ನಾಯಕರಾದ ಸರಸಂಘಚಾಲಕ ಮಧುಕರ್ ದೇವರಸ್ ಅಲಿಯಾಸ್ ಬಾಳಾಸಾಹೆಭ್ ದೇವರಸ್ ಅವರು ಯರವಾಡ ಜೈಲಿನಿಂದ ಇಂದಿರಾಗಾಂಧಿಯವರಿಗೆ ಬರೆದ ಸರೆಂಡರ್ ಪತ್ರಗಳು ಹಾಗೂ ಅದನ್ನು ಪರಿಗಣಿಸಲು ಇಂದಿರಾ ಅವರ ಮೇಲೆ ಪ್ರಭಾವ ಬೀರಬೇಕೆಂದು ವಿನೋಭಾ ಭಾವೆಯವರಿಗೆ ಬರೆದ ಗೋಗೆರೆವ ಪತ್ರಗಳು ತುರ್ತುಸ್ಥಿತಿಯಲ್ಲಿ ಆರೆಸ್ಸೆಸ್ ಮತ್ತು ಜನಸಂಘದ ನಿಜವಾದ ಪಾತ್ರವೇನಿತ್ತು ಎಂದು ತಿಳಿಯಲೂ ಹಾಗು ಅವರ ಸೋಗಲಾಡಿತನವನ್ನೂ ಅರಿಯಲು ಸಹಾಯ ಮಾಡುತ್ತವೆ.</p>



<p>ಬಾಳಾಸಾಹೇಬ್ ದೇವರಸ್ ಅವರು ಹಿಂದಿಯಲ್ಲಿ ಬರೆದ &#8221; <em>ಹಿಂದೂ ಸಂಘಟನ್ ಔರ್ ಸತ್ತಾವದಿ ರಾಜನೀತಿ</em>&#8221; ಎಂಬ ಪುಸ್ತಕದ ಕೊನೆಯಲ್ಲಿ ಅಪೆಂಡಿಕ್ಸ್ ನ ರೂಪದಲ್ಲಿ ಈ ಎಲ್ಲಾ ಪತ್ರಗಳನ್ನೂ ಸೇರಿಸಲಾಗಿದೆ. ವಿದ್ವಾಂಸ ಹಾಗೂ ರಾಜಕೀಯ ಕಾರ್ಯಕರ್ತರೂ ಆದ ಯೋಗೇಂದ್ರ ಯಾದವ್ ಅವರು ಹಿಂದಿಯಲ್ಲಿರುವ ಆ ಇಡೀ ಪುಸ್ತಕವನ್ನು ತಮ್ಮ ಟ್ವಿಟರಿನಲ್ಲಿಯೂ ಪ್ರಕಟಿಸಿದ್ದಾರೆ. ಆಸಕ್ತರು ಅದನ್ನು ನೇರವಾಗಿ ಈ ವೆಬ್ ವಿಳಾಸದಲ್ಲಿ ಓದಬಹುದು:</p>



<p><br>https://images.app.goo.gl/MXPKDDSwtniZFp1n9</p>



<p>ಈ ಎಲ್ಲಾ ಪತ್ರಗಳ ಇಂಗ್ಲೀಷ್ ಆವೃತ್ತಿಯನ್ನು ಆಗ ಭಾರತೀಯ ಲೋಕದಳದ ನಾಯಕರಾಗಿದ್ದ ಬ್ರಹ್ಮದತ್ ಅವರು ಬರೆದಿರುವ &#8221; <em>Five headed monster: A factual narrative of the genesis of Janata Party</em>” ಎಂಬ ಪುಸ್ತಕದಲ್ಲಿ ದಾಖಲಿಸಿದ್ದಾರೆ.</p>



<p>ಅದೇ ರೀತಿ ಕಳೆದ ಮೂರು ನಾಲ್ಕು ದಶಕಗಳಿಂದ ಭಾರತದ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಗಳ ಬಗ್ಗೆ ತಳಮಟ್ಟದ ಅಧ್ಯಯನ ಮಾಡಿ ಹಲವಾರು ಮೌಲಿಕ ಗ್ರಂಥಗಳನ್ನು ಬರೆದಿರುವ ಕ್ರಿಸ್ಟೋಫೋ ಜಾಫರ್ಲೆ ಯವರು ಮತ್ತೊಬ ವಿದ್ವಾಂಸ ಪ್ರತಿನಾವ್ ಅನಿಲ್ ಅವರ ಜೊತೆಗೂಡಿ ತುರ್ತುಪರಿಸ್ಥಿತಿಯ ಬಗ್ಗೆ ನಡೆಸಿದ ಹಲವಾರು ವರ್ಷಗಳ ಸಂಶೋಧನೆಯ ನಂತರ 2021 ರಲ್ಲಿ ಪ್ರಕಟಿಸಿರುವ “ <em>Indias First Dictatorship- The Emergency-1975-77</em>” ಎಂಬ ಪುಸ್ತಕದಲ್ಲೂ ಈ ಪತ್ರಗಳ ಇಂಗ್ಲಿಶ್ ಅನುವಾದವಿದೆ. ಆಸಕ್ತರು ಪುಸ್ತಕದ ಆ ಭಾಗವನ್ನು ಈ ವೆಬ್ ವಿಳಾಸದಲ್ಲಿ ಓದಬಹುದು:<br>https://www.rediff.com/news/special/christophe-jaffrelot-pratinav-anil-emergency-was-a-windfall-for-the-rss/20210625.htms</p>



<p><em>ಮೊದಲ ಸರೆಂಡರ್ ಪತ್ರ- 22 ಆಗಸ್ತ್ 1975</em></p>



<p>1975 ರ ಜೂನ್ 25 ರಂದು ತುರ್ತುಸ್ಥಿತಿಯನ್ನು ಘೋಷಿಸಿದ ನಂತರ 1975 ರ ಆಗಸ್ಟ್ 15 ರಂದು ಇಂದಿರಾಗಂಧಿಯವರು ಕೆಂಪುಕೋಟೆಯಿಂದ ಸ್ವಾತಂತ್ರ್ಯ ದಿನದ ಭಾಷಣವನ್ನು ಮಾಡಿದರು. ಅದರಲ್ಲಿ ಎಲ್ಲಾ ಸರ್ವಾಧಿಕಾರಿಗಳಂತೆ ತಾವು ಕೈಗೊಂಡ ತುರ್ತುಸ್ಥಿತಿ ನಿರ್ಣಯ ಹೇಗೆ ದೇಶದ ಭದ್ರತೆಗೆ ಅತ್ಯಗತ್ಯವಾಗಿದೆಯೆಂದೂ, ಅದನ್ನು ವಿರೋಧಿಸುವವರೂ ದೇಶದ್ರೋಹಿಗಳೆಂದೂ ಭಾಷಣ ಮಾಡಿದರು. ದೇಶಾದ್ಯಂತ ಸಕಲ ಪ್ರಜಾತಂತ್ರವಾದಿಗಳೂ ಈ ಭಾಷಣವನ್ನೂ ಹಾಗೂ ಇಂದಿರಾಗಂಧಿಯವರ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿದರು.</p>



<p><em>ಆದರೆ ಆರೆಸ್ಸೆಸ್ನ ಸರಸಂಘ ಚಾಲಕರಾದ ದೇವರಸ್ ಅವರು ಮಾತ್ರ ಇಂದಿರಾಗಾಂಧಿಯವರಿಗೆ ಬರೆದ 1975 ರ ಆಗಸ್ಟ್ 22 ರಂದು ಬರೆದ ಪ್ರಥಮ ಪತ್ರದಲ್ಲಿ ಆ ಭಾಷಣವನ್ನು ಮುಕ್ತಕಂಠದಿಂದ ಶ್ಲಾಘಿಸುತ್ತಾರೆ!!</em></p>



<p>ಅಷ್ಟು ಮಾತ್ರವಲ್ಲ ಅವರ ಭಾಷಣವು ಸಮಯೋಚಿತವೂ ಆಗಿತ್ತು ಹಾಗೂ ಸಮತೋಲದಿಂದಲೂ ಕೂಡಿತ್ತು ಎಂದು ಕೊಂಡಾಡುತ್ತಾರೆ. ಆ ನಂತರ ಇಂದಿರಾ ಸರ್ಕಾರಕ್ಕೆ ಆರೆಸ್ಸೆಸ್ ಬಗ್ಗೆ ಇರುವ ತಪ್ಪು ಅಭಿಪ್ರಾಯವನ್ನು ಹೋಗಲಾಡಿಸಲು ಈ ಪತ್ರ ಬರೆಯುತ್ತಿದ್ದೇನೆಂದು ಹೇಳುತ್ತಾ ಹೇಗೆ ಆರೆಸ್ಸೆಸ್ ಹಿಂದೂಗಳ ಸಂಘಟನೆಯನ್ನು ಮಾಡುತ್ತಿದ್ದರೂ ಯಾವತ್ತಿಗೂ ಇಂದಿರಾ ಸರ್ಕಾರದ ವಿರೋಧಿಯಾಗಿರಲಿಲ್ಲವೆಂಬ ಭರವಸೆಯನ್ನು ಕೊಡುತ್ತಾರೆ. ಹಾಗೂ ಅಂತಿಮವಾಗಿ :</p>



<p>&#8221; <em>ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಆರೆಸ್ಸೆಸ್ಸಿನ ಮೇಲಿನ ನಿಷೇಧವನ್ನು ತೆಗೆಯಬೇಕೆಂದು ಪ್ರಾರ್ಥಿಸುತ್ತೇನೆ. ನಿಮಗೆ ಸೂಕ್ತವೆಂದು ಕಂಡುಬಂದಲ್ಲಿ ತಮ್ಮನ್ನು ಖುದ್ದು ಭೇಟಿಯಾಗುವುದು ನನಗೆ ಅತ್ಯಂತ ಸಂತೋಷದ ವಿಷಯವಾಗಿರುತ್ತದೆ..</em></p>



<p>ಹೀಗೆ ಮೊದಲನೆ ಪತ್ರದಲ್ಲಿ ತುರ್ತುಸ್ಥಿತಿಯ ಬಗ್ಗೆ ಸಮ್ಮತಿಯನ್ನು ವ್ಯಕ್ತಪಡಿಸಿದ್ದು ಮಾತ್ರವಲ್ಲದೆ ಅಂತಿಮವಾಗಿ ಅವರು ವಿನಂತಿಸಿದ್ದು ಆರೆಸ್ಸೆಸ್ಸಿನ ಮೇಲಿನ ನಿಷೇಧವನ್ನು ಕಿತ್ತುಹಾಕಬೇಕೆಂದೇ ವಿನಾ ತುರ್ತುಸ್ಥಿತಿಯನ್ನು ತೆಗೆಯಬೇಕೆಂದಲ್ಲ! ಇದು ಆರೆಸ್ಸೆಸ್ಸ್!</p>



<p><em>ಎರಡನೇ ಸರೆಂಡರ್ ಪತ್ರ- 1975 ರ ನವಂಬರ್ 10</em></p>



<p>ಆರೆಸ್ಸೆಸ್ಸಿನ ಸರಸಂಘಚಾಲಕರ ಪತ್ರಕ್ಕೆ ಇಂದಿರಾಗಂಧಿಯವರು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ಈ ಮಧ್ಯೆ ತುರ್ತುಸ್ಥಿತಿಯಲ್ಲಿ ಇಂದಿರಾಗಾಂಧಿಯವರು ಬಗ್ಗಿರಿ ಎಂದರೆ ತೆವಳಲೂ ಸಿದ್ಧವಾಗಿದ್ದ ಮಾಧ್ಯಮಗಳು ಹಾಗೂ ಸುಪ್ರೀಂಕೋರ್ಟುಗಳು ಇಂದಿರಾಗಾಂಧಿ ಹೇಳಿದಂತೆ ಕೇಳುತ್ತಿದ್ದವು. ಆದ್ದರಿಂದಲೇ ಇಂದಿರಾಗಾಂಧಿಯವರ ಚುನಾವಣಾ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಅಲಹಾಬಾದಿನ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟಿನ ಐದುನ್ಯಾಯಾಧೀಶರ ಪೀಠ ಅನೂರ್ಜಿತಗೊಳಿಸಿ ಇಂದಿರಾಗಾಂಧಿಯವರ ಆಯ್ಕೆಯನ್ನು ಎತ್ತಿಹಿಡಿಯಿತು. ಸ್ವತಂತ್ರ ನ್ಯಾಯಾಂಗದ ಈ ದುಸ್ಥಿತಿಯು ಸರ್ವಾಧಿಕಾರದ ಮುಂದುವರೆಕೆಯೆಂದು ಜೈಲಿನಲ್ಲಿ ಹಾಗೂ ಬಯಲಿನಲ್ಲಿ ಇದ್ದ ಎಲ್ಲಾ ಪ್ರಜಾತಂತ್ರವಾದಿಗಳು ಒಕ್ಕೊರಲಿನಿಂದ ಖಂಡಿಸಿದರು.</p>



<p><em>ಆದರೆ ಸರಸಂಘಚಾಲಕರು ಮಾಡಿದ್ದೇನು?</em></p>



<p>1975 ರ ನವಂಬರ್ 10 ರಂದು ಇಂದಿರಾಗಾಂಧಿಯವರನ್ನುದ್ದೇಶಿಸಿ ಎರಡನೇ ಪತ್ರವನ್ನು ಬರೆಯುವ ದೇವರಸ್ ಅವರು ಪತ್ರವನ್ನು ಪ್ರಾರಂಭಿಸುವುದೇ ಸುಪ್ರೀಂಕೋರ್ಟು ಅವರ ಪರವಾಗಿ ಕೊಟ್ಟ ಆದೇಶಕ್ಕೆ ಅಭಿನಂದನೆ ಸಲ್ಲಿಸುವ ಮೂಲಕ!</p>



<p>&#8221; <em>Let me congratulate you as five judges of the Supreme Court have declared the validity of your election.</em>”</p>



<p>(ನಿಮ್ಮ ಚುನಾವಣೆಯನ್ನು ಸಿಂಧು ಎಂದು ಘೋಷಿಸಿದ ಸುಪ್ರೀಂಕೋರ್ಟಿನ ಐದು ಸದಸ್ಯರ ಪೀಠದ ಆದೇಶಕ್ಕೆ ಮೊದಲಿಗೆ ಅಭಿನಂದನೆಗಳು)</p>



<p>ಆ ನಂತರ ಮತ್ತೊಮ್ಮೆ ಆ ಪತ್ರದುದ್ದಕ್ಕೂ ಹೇಗೆ ಆರೆಸ್ಸೆಸ್ ಸರ್ಕಾರದ ಹಾಗೂ ತುರ್ತುಸ್ಥಿತಿಯ ವಿರೋಧಿಯಲ್ಲ ಎಂದು ಮನವರಿಕೆ ಮಾಡಿಕೊಡಲು ಯತ್ನಿಸುವ ದೇವರಸ್ ಅವರು ಕೊನೆಗೆ ಹೇಳುವುದೇನೆಂದರೆ:</p>



<p>ಆರೆಸ್ಸೆಸ್ಸಿನ ಮೇಲಿನ ನಿಷೇಧವನ್ನು ಹಿತೆಗೆದುಕೊಂಡಲ್ಲಿ:<br>&#8221; <em>ಲಕ್ಷಾಂತರ ಆರೆಸ್ಸೆಸ್ ಸ್ವಯಂಸೇವಕರ ನಿಸ್ವಾರ್ಥ ಕಾರ್ಯಶಕ್ತಿಯನ್ನು ಸರ್ಕಾರದ ದೇಶಾಭಿವೃದ್ಧಿ ಕೆಲಸಕ್ಕೆ ಬಳಸಬಹುದು&#8221;</em></p>



<p>ಆರ್ಥಾತ್ ಆರೆಸ್ಸೆಸ್ಸಿನ ಮೇಲೆ ನಿಷೇಧವನ್ನು ತೆಗೆದುಹಾಕಿದರೆ ಆರೆಸ್ಸೆಸ್ಸಿನ ಕಾರ್ಯಕರ್ತರು ಇಂದಿರಾಗಾಂಧಿಯವರ ಸರ್ವಾಧಿಕಾರಿ ಸರ್ಕಾರದ ಜೊತೆಗೂಡಿ ಕೆಲಸ ಮಾಡುವುದಾಗಿ ಖುಲ್ಲಂಖುಲ್ಲಾ ಆಶ್ವಾಸನೆಯನ್ನು ಸರಸಂಘಚಾಲಕರು ನೀಡುತ್ತಾರೆ.</p>



<p><em>ಮೂರನೇ ಸರೆಂಡರ್ ಪತ್ರ- 1976 ರ ಫೆಬ್ರವರಿ 24</em></p>



<p>ಆದರೆ ಇಂದಿರಾ ಸರ್ಕಾರ ಅದನ್ನೂ ಪರಿಗಣಿಸುವುದಿಲ್ಲ. ಆಗ ಇಂದಿರಾಗಾಂಧಿಯವರ ಮೇಲೆ ಪ್ರಭಾವವಿದ್ದ ಹಾಗೂ ಆರೆಸ್ಸೆಸ್ಸಿನ ಸೈದ್ಧಾಂತಿಕ ಮಿತ್ರರೂ ಆಗಿದ್ದ ವಿನೋಭಾ ಭಾವೆಯವರ ಮಧ್ಯಸ್ಥಿಕೆಯನ್ನು ಗೋಗೆರೆಯುತ್ತಾ ಸರಸಂಘಚಾಲಕರು ಮತ್ತೊಂದು ಪತ್ರ ಬರೆಯುತ್ತಾರೆ. ಏಕೆಂದರೆ ಫೆಬ್ರವರಿಯ ಕೊನೆಯ ವೇಳೆಗೆ ಇಂದಿರಾಗಾಂಧಿಯವರು ಭಾವೆಯವರ ಆಶ್ರಮಕ್ಕೆ ಭೇಟಿ ನೀಡುವ ಕಾರ್ಯಕ್ರಮವಿರುತ್ತದೆ. ಹೀಗಾಗಿ ದೇವರಸ್ ಅವರು ಆ ಭೇಟಿಯಲ್ಲಿ ಆರೆಸ್ಸೆಸ್ ನ ಪರವಾಗಿ ಆರೆಸ್ಸೆಸ್ ಮೇಲಿನ ನಿಷೇಧವನ್ನಿ ತೆಗೆದುಹಾಕಲು ಪ್ರಭಾವ ಬೆರಬೇಕೆಂದು ಗೋಗೆರೆಯುತ್ತಾರೆ. ಹಾಗೂ ಆರೆಸ್ಸೆಸ್ಸಿನ ಮೇಲಿನ ನಿಷೇಧವನ್ನು ತೆಗೆದುಹಾಕಿದಲ್ಲಿ</p>



<p><em>a condition will prevail as to enable the volunteers of the Sangh to participate in the planned programme of action relating to country&#8217;s progress and prosperity under the leadership of the prime minister</em>.&#8221;</p>



<p>ಅಂದರೆ -ಪ್ರಧಾನಿ ಇಂದಿರಾಗಾಂಧಿ ಅವರ ನೇತೃತ್ವದಲ್ಲಿ ಯೋಜಿತವಾದ ದೇಶದ ಅಭಿವೃದ್ಧಿ ಮತ್ತು ಪ್ರಗತಿಯನ್ನು ಸಾಧಿಸುವ ಕಾರ್ಯಕ್ರಮಗಳಲ್ಲಿ ಸಂಘದ ಕಾರ್ಯಕರ್ತರೂ ಭಾಗವಹಿಸಬಹುದು ಎಂದು ಮುಕ್ತವಾಗಿ ಇಂದಿರಾಗಾಂಧಿಯವರ ಸರ್ವಾಧಿಕಾರೇ ಸರ್ಕಾರದ ಜೊತೆ ಕೈಗೂಡಿಸುವ ಇರಾದೆಯನ್ನು ಮತ್ತೊಮ್ಮೆ ಪ್ರಕಟಿಸುತ್ತಾರೆ.</p>



<p>ಇದು ತುರ್ತುಪರಿಸ್ಥಿತಿಯಲ್ಲಿ ಆರೆಸ್ಸೆಸ್ಸಿನ ನಾಯಕರ ನಿಜವಾದ ರೂಪ. ಇಡೀ ದೇಶದಲ್ಲಿ ಇಂದಿರಾಗಾಂಧಿಯವರು ಯೋಜಿತವಾಗಿ ಹಕ್ಕುಗಳ ದಮನವನ್ನು ನಡೆಸುತ್ತಿದ್ದಾಗ, ಪ್ರಜಾತಂತ್ರದ ಕಗ್ಗೊಲೆ ನಡೆಯುತ್ತಿದ್ದಾಗ ಆರೆಸ್ಸೆಸ್ ಮತ್ತು ಜನಸಂಘ ಹಿಂಬಾಗಿಲ ಮೂಲಕ ಆ ದಮನಕಾಂಡಕ್ಕೆ ಜೊತೆಯಾಗುವ ಆಶ್ವಾಸನೆ ಕೊಟ್ಟು ಹೊರಬರುವ ಯತ್ನದಲ್ಲಿತ್ತು.</p>



<p>ಇದರ ಮುಂದುವರೆಕೆಯಾಗಿಯೇ ಉತ್ತರಪ್ರದೇಶದ ಜನಸಂಘವು ತುರ್ತುಸ್ಥಿತಿಯ ಮೊದಲನೇ ವಾರ್ಷಿಕೋತ್ಸವದ ದಿನವಾದ 1976 ರ ಜೂನ್ 25 ರಂದು ಇಂದಿರಾ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ್ದು ಮಾತ್ರವಲ್ಲದೆ ಯಾವುದೇ ಸರ್ಕಾರ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲವೆಂದು ಪ್ರತಿಜ್ನೆ ತೊಟ್ಟರು. ಅಷ್ಟು ಮಾತ್ರವಲ್ಲ, ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದ 34 ಜನಸಂಘದ ನಾಯಕರು ಇಂದಿರಾಗಾಂಧಿ ಕಾಂಗ್ರೆಸ್ಸನ್ನು ಸೇರಿಕೊಂಡರು.</p>



<p>ಇದೆಲ್ಲದರ ಕ್ಲೈಮಾಕ್ಸೇ 1977 ರ ಜವರಿ ಕೊನೆಯ ವೇಳೆಗೆ ಇಂದಿರಾ ಸರ್ಕಾರದ ಜೊತೆ ಒಪ್ಪಂದಕ್ಕೆ ಬಂದು ಆರೆಸ್ಸೆಸ್ ಸಹಿ ಹಾಕಲು ಸಿದ್ಧವಾಗಿದ್ದ ಸರೆಂಡರ್ ಡಾಕ್ಯುಮೆಂಟ್.</p>



<p>ಅದಕ್ಕೆ ಮುಂಚೆಯೇ ಇಂದಿರಾಗಾಂಧಿಯವರು ತುರ್ತುಸ್ಥಿತಿಯನ್ನು ಹಿಂತೆಗೆದುಕೊಂಡಿದ್ದರಿಂದ ಆ ಸರೆಂಡರ್ ದಸ್ತಾವೇಜಿಗೆ ಸಹಿಹಾಕುವ ಅಗತ್ಯ ಆರೆಸ್ಸೆಸ್ಸಿಗೆ ಬೀಳಲಿಲ್ಲ. ಅಷ್ಟೆ.</p>



<p>ಅ ನಂತರವೂ ಬಾಳಾಸಾಹೇಬ್ ದೇವರಸ್ ಅವರಿಗೆ ಇಂದಿರಾಗಾಂಧಿಯವರು ಅಚ್ಚುಮೆಚ್ಚಿನ ನಾಯಕರಾಗಿದ್ದರು.</p>



<p>1980 ರಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಇಂದಿರಾಗಾಂಧಿಯವರು ತಮ್ಮ್ ಹಿಂದಿನ &#8220;ಸಮಾಜವಾದಿ-ಸೆಕ್ಯುಲಾರ್&#8221; ನೀತಿಗಳಿಗೆಲ್ಲಾ ತೊರೆದಿದ್ದರು. ಕಾಶ್ಮೀರ ಮತ್ತು ಪಂಜಾಬಿನಲ್ಲಿ &#8221; <em>ಹಿಂದು ಅಪಾಯದಲ್ಲಿದ್ದಾನೆ, ಹಿಂದೂ ಅಪಾಯದಲ್ಲಿದ್ದಾನೆ ಎಂದರೆ ದೇಶ ಅಪಾಯದಲ್ಲಿದೆ ಹೀಗಾಗಿ ದೇಶವನ್ನು ರಕ್ಷಿಸಲು ಬಲಿಷ್ಟ ನಾಯಕತ್ವದ ಅಗತ್ಯವಿದೆ&#8221;</em> ಎಂಬ ಅಪಾಯಕಾರಿ ಹಿಂದೂತ್ವ ರಾಜಕೀಯವನ್ನು ಪ್ರರಂಭಿಸಿದ ಇಂದಿರಾ ಗಾಂಧಿಯವರನ್ನು ಸರಸಂಘಚಾಲಕ ಬಹಿರಂಗವಾಗಿ ಕೊಂಡಾಡಲು ಪ್ರಾರಂಭಿಸಿದರು.</p>



<p>ಆರೆಸ್ಸೆಸ್ಸಿನ ಅಜೆಂಡಾಗಳನ್ನು ಇಂದಿರಾ ಅವರೇ ಜಾರಿ ಮಾಡುತ್ತಿರುವಾಗ ತಮಗೆ ಬಿಜೆಪಿ ಅನಿವಾರ್ಯವಲ್ಲ ಎಂಬ ಘೋಷಣೆಯನ್ನು ಮಾಡಿದರು. ಇಂದಿರಾ ಗಾಂಧಿಯವರ ಹತ್ಯೆಯಾದ ನಂತರ ನಡೆದ ಸಿಖ್ ಹತ್ಯಾಕಾಂಡದಲ್ಲಿ ತಾನೂ ಭಾಗವಹಿಸಿ ಆರೆಸ್ಸೆಸ್ ಋಣ ಸಂದಾಯ ಮಾಡಿತು.</p>



<p>ಇದು ಆರೆಸ್ಸೆಸ್. ಇದು ಬಿಜೆಪಿ. ಇದು ಇವರ ಪ್ರಜಾತಂತ್ರ ಪ್ರೇಮ!</p>



<p>ಈ ಬಾರಿ ತುರ್ತುಸ್ಥಿತಿಯನ್ನು ನೆನೆಯುವಾಗ ಈ ಐತಿಹಾಸಿಕ ದ್ರೋಹ, ನಯವಂಚನೆ, ಬಿಜೆಪಿ-ಕಾಂಗ್ರೆಸ್ ಕವಲುಗಳ ಸೀಮಿತ ಭಿನ್ನತೆ..ಇತ್ಯಾದಿಗಳನ್ನು ಮರೆಯದೆ ನೆನೆಪಿಸಿಕೊಳ್ಳೋಣ. ಮತ್ತು ಅದರಿಂದ ಪಾಠ ಕಲಿತು ಇಂದಿನ ಮೋದಿ ಎಮರ್ಜೆನ್ಸಿಯ ವಿರುದ್ಧ ನೈಜ ಹೋರಾಟ ಪ್ರಾರಂಭಿಸೋಣ</p>



<ul class="wp-block-list">
<li>ಶಿವಸುಂದರ್</li>



<li>ಕೃಪೆ : ವಾರ್ತಾಭಾರತಿ</li>
</ul>



<p>&#8212;<br>shivasundar<br>9448659774</p>
]]></content:encoded>
					
		
		
			</item>
		<item>
		<title>&#8220;ಸಂವಿಧಾನ ಸಮರ್ಪಣಾ ದಿನ&#8221;ವನ್ನು &#8220;ವೇದ ಹಾಗೂ ಮನುಸ್ಮೃತಿ ದಿನ&#8221; ಮಾಡುವ ಬಿಜೆಪಿ ಹುನ್ನಾರ : ಚಿಂತಕ ಶಿವಸುಂದರ್</title>
		<link>https://peepalmedia.com/bjps-attempt-to-make-constitution-dedication-day-veda-and-manusmriti-day-thinker-shivsunder/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 23 Nov 2022 06:12:28 +0000</pubDate>
				<category><![CDATA[ಜನ-ಗಣ-ಮನ]]></category>
		<category><![CDATA[bjp]]></category>
		<category><![CDATA[Government]]></category>
		<category><![CDATA[india]]></category>
		<category><![CDATA[indian constitution]]></category>
		<category><![CDATA[kannada]]></category>
		<category><![CDATA[Manusmruti]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[shivasundar]]></category>
		<guid isPermaLink="false">https://peepalmedia.com/?p=16259</guid>

					<description><![CDATA[ಈ ಬಾರಿ ನ.26 ರ ಸಂವಿಧಾನ ಸಮರ್ಪಣಾ ದಿನವನ್ನು &#8220;ಭಾರತ-ಪ್ರಜಾತಂತ್ರದ ಜನನಿ&#8221; ಎಂಬ ಹೆಸರಿನಲ್ಲಿ ದೇಶಾದ್ಯಂತ ಆಚರಿಸಬೇಕೆಂದು ಮೋದಿ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟರಿ ನವಂಬರ್ 9 ರಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ, ವಿಶ್ವವಿದ್ಯಾಲಯಗಳಿಗೆ ಹಾಗೂ ಕೇಂದ್ರ ಕಚೇರಿಗಳಿಗೆ ಸೂಚನೆಯನ್ನು ಕೊಟ್ಟಿದ್ದಾರೆ. ಆ ಆಚರಣೆಯ ಒತ್ತು ಏನಿರಬೇಕೆಂಬ ಬಗ್ಗೆ ICHR- Indian Council For Historical Research ತಯಾರಿಸಿದ&#160; ಎರಡು ಪುಟದ ಒಂದು ಪರಿಕಲ್ಪನಾತ್ಮಕ ಟಿಪ್ಪಣಿ (Concept Note) ಯನ್ನು ಕೂಡ ಅದರ ಜೊತೆ ಲಗತ್ತಿಸಲಾಗಿದೆ. (ಅದು ಈ [&#8230;]]]></description>
										<content:encoded><![CDATA[
<p style="font-size:20px">ಈ ಬಾರಿ ನ.26 ರ ಸಂವಿಧಾನ ಸಮರ್ಪಣಾ ದಿನವನ್ನು &#8220;ಭಾರತ-ಪ್ರಜಾತಂತ್ರದ ಜನನಿ&#8221; ಎಂಬ ಹೆಸರಿನಲ್ಲಿ ದೇಶಾದ್ಯಂತ ಆಚರಿಸಬೇಕೆಂದು ಮೋದಿ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟರಿ ನವಂಬರ್ 9 ರಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ, ವಿಶ್ವವಿದ್ಯಾಲಯಗಳಿಗೆ ಹಾಗೂ ಕೇಂದ್ರ ಕಚೇರಿಗಳಿಗೆ ಸೂಚನೆಯನ್ನು ಕೊಟ್ಟಿದ್ದಾರೆ.</p>



<p style="font-size:20px">ಆ ಆಚರಣೆಯ ಒತ್ತು ಏನಿರಬೇಕೆಂಬ ಬಗ್ಗೆ ICHR- Indian Council For Historical Research ತಯಾರಿಸಿದ&nbsp; ಎರಡು ಪುಟದ ಒಂದು ಪರಿಕಲ್ಪನಾತ್ಮಕ ಟಿಪ್ಪಣಿ (Concept Note) ಯನ್ನು ಕೂಡ ಅದರ ಜೊತೆ ಲಗತ್ತಿಸಲಾಗಿದೆ. (ಅದು ಈ ಲೇಖನದ attachment ನಲ್ಲಿದೆ).</p>



<figure class="wp-block-image size-large"><img decoding="async" width="791" height="1024" src="https://peepalmedia.com/wp-content/uploads/2022/11/FB_IMG_1669179961684-791x1024.jpg" alt="" class="wp-image-16261" srcset="https://peepalmedia.com/wp-content/uploads/2022/11/FB_IMG_1669179961684-791x1024.jpg 791w, https://peepalmedia.com/wp-content/uploads/2022/11/FB_IMG_1669179961684-232x300.jpg 232w, https://peepalmedia.com/wp-content/uploads/2022/11/FB_IMG_1669179961684-768x994.jpg 768w, https://peepalmedia.com/wp-content/uploads/2022/11/FB_IMG_1669179961684-150x194.jpg 150w, https://peepalmedia.com/wp-content/uploads/2022/11/FB_IMG_1669179961684-300x388.jpg 300w, https://peepalmedia.com/wp-content/uploads/2022/11/FB_IMG_1669179961684-696x901.jpg 696w, https://peepalmedia.com/wp-content/uploads/2022/11/FB_IMG_1669179961684-1068x1382.jpg 1068w, https://peepalmedia.com/wp-content/uploads/2022/11/FB_IMG_1669179961684.jpg 1080w" sizes="(max-width: 791px) 100vw, 791px" /></figure>



<p style="font-size:20px">ಆ ಟಿಪ್ಪಣಿಯ ಕೆಲವು ಭಾಗಗಳು ಹೀಗಿವೆ:<br>●&nbsp; ವೇದಗಳ ಕಾಲದಲ್ಲೇ ಭಾರತದಲ್ಲಿ ಪ್ರಜಾತಂತ್ರವಿತ್ತು.<br>●&nbsp; ವೇದಗಳ ಕಾಲದಿಂದಲೂ ಗ್ರಾಮಗಳಲ್ಲಿ&nbsp; ಸಮುದಾಯ ಆಧಾರಿತ ಆಡಳಿತವಿತ್ತು. ಅದು ಪಂಚಾಯತಿ ಮತ್ತು ಖಾಪ್ ಪಂಚಾಯತಿ ರೂಪದಲ್ಲಿತ್ತು.<br>(ಆರ್ಥಾತ್ ಜಾತಿ ವ್ಯವಸ್ಥೆಯನ್ನು ಪ್ರಜಾತಾಂತ್ರಿಕ ಗ್ರಾಮ ವ್ಯವಸ್ಥೆಯೆಂದು ಬಣ್ಣಿಸಲಾಗುತ್ತಿದೆ!)<br>●&nbsp; ಈ ಕಾರಣದಿಂದಾಗಿಯೇ&nbsp; ಭಾರತವು 2000&nbsp; ವರ್ಷಗಳಿಂದಲೂ ವಿದೇಶಿಯರ ದಾಳಿಗೆ ತುತ್ತಾಗುತ್ತಲೇ ಬಂದಿದ್ದರೂ ಹಿಂದೂ ಸಂಸ್ಕೃತಿ ಮತ್ತು ನಾಗರಿಕತೆ ಉಳಿದುಕೊಂಡು ಬಂದಿದೆ.<br>(ಇದು ಆರೆಸ್ಸೆಸ್ ಸರಸಂಘಚಾಲಕ ಗೋಲ್ವಾಲ್ಕರ್&nbsp; ಪ್ರತಿಪಾದನೆ. ಜಾತಿ ವ್ಯವಸ್ಥೆಯೇ ಈ ದೇಶದ ಅಸ್ಮಿತೆ. ಅದು ಸಡಿಲವಾಗಿದ್ದರಿಂದಲೇ ಭಾರತದ ಈಶಾನ್ಯ ಮತ್ತು ವಾಯುವ್ಯ&nbsp; ಪ್ರಾಂತ್ಯಗಳಲ್ಲಿ ಪರದೇಸಿ ಧರ್ಮಗಳು ನೆಲಸುವಂತಾಯಿತು ಎಂದು ಅವರ Bunch Of Thoughts ನಲ್ಲಿ ಬರೆದುಕೊಂಡಿದ್ದಾರೆ. ಈಗ ಮೋದಿ ಸರ್ಕಾರ ಯಥಾವತ್ ಅದೇ ಮಾತನ್ನು ಸಂವಿಧಾನ ದಿನದಂದು ಪ್ರಚಾರ ಮಾಡುತ್ತಿದೆ)<br>●&nbsp; ಇತ್ತೀಚಿಗೆ ರಾಖಿಗರಿ ಸಂಶೋಧನೆಯಲ್ಲೂ ಭಾರತದ ವೈದಿಕ ನಾಗರೀಕತೆ 5000 ವರ್ಷಗಳಷ್ಟು ಹಿಂದಿನದ್ದೆಂದೂ, ಆ ಕಾಲದಲ್ಲೂ ಪ್ರಜಾತಾಂತ್ರಿಕ ವ್ಯವಸ್ಥೆ ಇತ್ತೆಂದು ಸಾಬೀತಾಗಿದೆ.<br>(ಇದು ಮತ್ತೊಂದು ಮಹಾ ಸುಳ್ಳು. ರಾಖಿಗರಿ ಸಂಶೋಧನೆಯು&nbsp; ಹರಪ್ಪಾ ನಾಗರಿಕತೆಗೂ ಆರ್ಯರಿಗೂ ಸಂಬಂಧವಿಲ್ಲ. ಅದು ದ್ರಾವಿಡ ನಾಗರೀಕತೆ ಹೊರತು ಆರ್ಯ ನಾಗರೀಕತೆಯಲ್ಲ ಅರ್ಥಾತ್ ವೇದ ನಾಗರಿಕತೆಯಲ್ಲ ಎಂಬುದುನ್ನು ರಾಖಿಗರಿ ಸಂಶೋಧನೆ ಸಾಬೀತು ಮಾಡಿದೆ)</p>



<figure class="wp-block-image size-large"><img loading="lazy" decoding="async" width="791" height="1024" src="https://peepalmedia.com/wp-content/uploads/2022/11/FB_IMG_1669179964734-791x1024.jpg" alt="" class="wp-image-16260" srcset="https://peepalmedia.com/wp-content/uploads/2022/11/FB_IMG_1669179964734-791x1024.jpg 791w, https://peepalmedia.com/wp-content/uploads/2022/11/FB_IMG_1669179964734-232x300.jpg 232w, https://peepalmedia.com/wp-content/uploads/2022/11/FB_IMG_1669179964734-768x994.jpg 768w, https://peepalmedia.com/wp-content/uploads/2022/11/FB_IMG_1669179964734-150x194.jpg 150w, https://peepalmedia.com/wp-content/uploads/2022/11/FB_IMG_1669179964734-300x388.jpg 300w, https://peepalmedia.com/wp-content/uploads/2022/11/FB_IMG_1669179964734-696x901.jpg 696w, https://peepalmedia.com/wp-content/uploads/2022/11/FB_IMG_1669179964734-1068x1382.jpg 1068w, https://peepalmedia.com/wp-content/uploads/2022/11/FB_IMG_1669179964734.jpg 1080w" sizes="auto, (max-width: 791px) 100vw, 791px" /></figure>



<figure class="wp-block-image size-large"><img loading="lazy" decoding="async" width="791" height="1024" src="https://peepalmedia.com/wp-content/uploads/2022/11/FB_IMG_1669179975667-791x1024.jpg" alt="" class="wp-image-16262" srcset="https://peepalmedia.com/wp-content/uploads/2022/11/FB_IMG_1669179975667-791x1024.jpg 791w, https://peepalmedia.com/wp-content/uploads/2022/11/FB_IMG_1669179975667-232x300.jpg 232w, https://peepalmedia.com/wp-content/uploads/2022/11/FB_IMG_1669179975667-768x994.jpg 768w, https://peepalmedia.com/wp-content/uploads/2022/11/FB_IMG_1669179975667-150x194.jpg 150w, https://peepalmedia.com/wp-content/uploads/2022/11/FB_IMG_1669179975667-300x388.jpg 300w, https://peepalmedia.com/wp-content/uploads/2022/11/FB_IMG_1669179975667-696x901.jpg 696w, https://peepalmedia.com/wp-content/uploads/2022/11/FB_IMG_1669179975667-1068x1382.jpg 1068w, https://peepalmedia.com/wp-content/uploads/2022/11/FB_IMG_1669179975667.jpg 1080w" sizes="auto, (max-width: 791px) 100vw, 791px" /></figure>



<p style="font-size:20px">●&nbsp; ಭಗವದ್ಗೀತೆಯು ಈ ವೇದ ಪ್ರಣೀತ ಪ್ರಜಾತಾಂತ್ರಿಕತೆಯ ಭಾಗವಾಗಿ ಮಾನವನ ನಡತೆಯಲ್ಲಿ ಜ್ಞಾನ, ಶ್ರದ್ಧೆ , ಕ್ರಿಯೆ ಮತ್ತು ಗುಣಗಳು ವ್ಯಕ್ತವಾಗಬೇಕು ಎಂದು ಪ್ರತಿಪಾದಿಸುತ್ತದೆ.<br>(ಆದರೆ ಅಂಬೇಡ್ಕರ್ ಅವರು ಸ್ಪಷ್ಟಪಡಿಸುವಂತೆ, ಭಗವದ್ಗೀತೆಯು&nbsp; ಜಾತಿ ಆಧಾರಿತ ಶ್ರೇಣೀಕರಣವನ್ನು ಪ್ರತಿಪಾದಿಸುವ ಮನುಸ್ಮೃತಿಯ ತಾತ್ವಿಕ ಸಮರ್ಥನೆಯಾಗಿದ್ದು, ಅದರಲ್ಲಿ ಭೋಧಿಸಲಾಗಿರುವ ಜ್ಞಾನ, ಗುಣ ಮತ್ತು ಕ್ರಿಯೆಗಳೆಲ್ಲವೂ ಹುಟ್ಟಿನಿಂದಲೇ ತೀರ್ಮಾನವಾಗಿರುತ್ತದೆ ಎಂಬ ಜಾತಿ ಶ್ರೇಣೀಕರಣದ ತಾರತಮ್ಯ ತತ್ವವನ್ನೇ ಹೇಳುತ್ತದೆ. ಆದರೆ ಮೋದಿ ಸರ್ಕಾರ ಅದನ್ನು ಭಾರತದ ಸನಾತನ ಪ್ರಜಾತಂತ್ರ ಎಂದು ಆಚರಿಸಲು ಆದೇಶಿಸುತ್ತಿದೆ )</p>



<p style="font-size:20px">●&nbsp; ಇದಲ್ಲದೆ, ಜಗತ್ತಿನ ಇತರ ಪ್ರಾಚೀನ ಪ್ರಜಾತಂತ್ರಗಳಾದ ಗ್ರೀಸ್ ಮತ್ತು ರೋಮನ್ ಪ್ರಜಾತಂತ್ರಕ್ಕೂ ಮತ್ತು ಭಾರತದ ವೈದಿಕ ಪ್ರಜಾತಂತ್ರಕ್ಕೂ ಇದ್ದ ದೊಡ್ಡ ವ್ಯತ್ಯಾಸವೇನೆಂದರೆ ಭಾರತದಲ್ಲಿ ಹುಟ್ಟಿನ ಆಧಾರದಲ್ಲಿ ಸಂಪತ್ತು, ಜ್ಞಾನ ಮತ್ತು ರಾಜ್ಯಅಧಿಕಾರಗಳು ಒಂದೆಡೆ ಕೇಂದ್ರೀಕರಣಗೊಂಡು ನಿರಂಕುಶ ಸಾಮ್ರಾಜ್ಯಗಳು ರೂಪುಗೊಳ್ಳಲಿಲ್ಲ.<br>(ಇದಕ್ಕಿಂತ ದೊಡ್ಡ ಸುಳ್ಳು ಮತ್ತೊಂದು ಇರಬಹುದೇ??? ಜಗತ್ತಿನಲ್ಲಿ ಬೇರೆಲ್ಲೂ ಇಲ್ಲದ ಹುಟ್ಟಿನ ಆಧಾರದ ಜಾತಿ ವ್ಯವಸ್ಥೆ, ಜಾತಿ ತಾರತಮ್ಯ ಇರುವುದು ಭಾರತದ ಬ್ರಾಹ್ಮಣಿಯ ಸಾಮಾಜಿಕ&nbsp; ವ್ಯವಸ್ಥೆಯಲ್ಲಿ ಮಾತ್ರ. ಸಂಪತ್ತು, ಅಧಿಕಾರ ಮತ್ತು ಜ್ಞಾನ ವನ್ನು ವೇದಗಳ ಪ್ರಮಾಣಡ್ಮದಲೇ ದಲಿತರಿಂದ ಮತ್ತು ಶೂದ್ರರಿಂದ, ಮಹಿಳೆಯರಿಂದ ಕಸಿದು ಕೇವಲ ಬ್ರಾಹ್ಮಣಿಯ ಮೇಲ್ಜಾತಿಗಳ ಖಾಸಗಿ ಆಸ್ತಿಯನ್ನಾಗಿ ಮಾಡಿದ್ದು ಭಾರತದ ವೇದ -ಪುರಾಣ -ಶಾಸ್ತ್ರ -ಸ್ಮೃತಿ -ಶ್ರುತಿಗಳನ್ನಾಧರಿಸಿದ ಈ ದೇಶದ ಹಿಂದೂ ಬ್ರಾಹ್ಮಣಿಯ ಜಾತಿ ವ್ಯವಸ್ಥೆ.</p>



<p style="font-size:20px">ಆದ್ದರಿಂದಲೇ ಅಂಬೇಡ್ಕರ್ ಹಿಂದೂ ಧರ್ಮದಲ್ಲಿ ಪ್ರಜಾತಂತ್ರ, ಸ್ವಾತಂತ್ರ್ಯ-ಸಮಾನತೆ-ಭ್ರಾತ್ತ್ರುತ್ವ ಇಲ್ಲವೇ ಇಲ್ಲ. ಏಕೆಂದರೆ ಅದು ತಾರತಮ್ಯವನ್ನೇ ಆಧರಿಸಿದ ವೇದ-ಪುರಾಣಗಳನ್ನು ಅನುಸರಿಸುತ್ತದೆ. ಆದ್ದರಿಂದ ಹಿಂದೂ ರಾಷ್ಟ್ರವೆಂಬುದು ಭಾರತಕ್ಕೆ ಒದಗಬಹುದಾದ ಅತಿ ದೊಡ್ಡ ವಿಪತ್ತು ಎಂದು ಎಚ್ಚರಿಸಿದ್ದರು.</p>



<p style="font-size:20px">ಆದರೆ ಮೋದಿ ಸರ್ಕಾರ ಸಂವಿಧಾನ ದಿನದಂದು ಅದೇ ವೇದ-ಪುರಾಣ ಆಧರಿಸಿದ ಜಾತಿ ವ್ಯವಸ್ಥೆಯನ್ನೇ ಭಾರತದ ಹಿರಿಮೆ ಎಂದು ಆಚರಿಸಲು ಆದೇಶಿಸಿದ್ದಾರೆ)</p>



<p style="font-size:20px">ಹಾಗೆ ನೋಡಿದರೆ, 1949&nbsp; ರ ನವಂಬರ್ 25 ರಂದು ಭಾರತಕ್ಕೆ ಸಂವಿಧಾನವನ್ನು ಸಮರ್ಪಣೆ ಮಾಡುತ್ತಾ ಅಂಬೇಡ್ಕರ್ ಅವರು ಮಾಡಿದ ಭಾಷಣದಲ್ಲಿ ಕೂಡ ಪ್ರಾಚೀನ ಭಾರತದಲ್ಲಿ ಪ್ರಜಾತಂತ್ರವಿತ್ತು ಎಂದು ಹೇಳಿದ್ದಾರೆ.</p>



<p style="font-size:20px;margin-top:1px"><strong>ಆದರೆ ಅದು ವೇದ ಭಾರತದಲ್ಲಲ್ಲ</strong><br>ವೇದವನ್ನು ನಿರಾಕರಿಸುತ್ತಾ ಸಮತೆ, ಮಮತೆಯ ಮೌಲ್ಯಗಳ ಆಧಾರದಲ್ಲಿ ಹುಟ್ಟಿಕೊಂಡದ್ದು ಬುದ್ಧ ಕಾಲದ ಭಾರತದಲ್ಲಿ. ಬುದ್ಧ ಸಂಘಗಳಲ್ಲಿ.</p>



<p style="font-size:20px">ಇಂಥಾ ನೈಜ ಪ್ರಜಾತಂತ್ರವನ್ನು ಪುಷ್ಯ ಶೃಂಗ ನೇತೃತ್ವದಲ್ಲಿ ಬ್ರಾಹ್ಮಣರು ಪ್ರತಿಕ್ರಾಂತಿ ಮಾಡಿ ಸರ್ವನಾಶ ಮಾಡಿದರು. ಬ್ರಾಹ್ಮಣ್ಯದ ದಿಗ್ವಿಜಯದೊಂದಿಗೆ ಭಾರತದ ಸ್ವದೇಶಿ ಪ್ರಜಾತಂತ್ರ ಪತನಗೊಂಡಿತ್ತು. ಈಗ ಮತ್ತೊಮ್ಮೆ ಪ್ರಜಾತಂತ್ರ ಸಾಧಿಸಿದ್ದೇವೆ. ಆದರೆ ಅದು ಕೂಡ ಸರ್ವಾಧಿಕಾರದ ಹಾದಿ ಹಿಡಿಯುವ ಸಾಧ್ಯತೆ ಇದೆಯೆಂದು ಅಂಬೆಡ್ಕರ್ ಸಂವಿಧಾನ ಸಮರ್ಪಣಾ ದಿನದಂದೇ ಎಚ್ಚರಿಸಿದ್ದರು.</p>



<p style="font-size:20px">ಈಗ ಮೋದಿ ಸರ್ಕಾರ ಅಂಬೇಡ್ಕರ್ ನೇತೃತ್ವದಲ್ಲಿ ನಡೆದ ಜನಕ್ರಾಂತಿಯನ್ನು-ಸಂವಿಧಾನವನ್ನು ನಾಶಗೊಳಿಸಿ ಮತ್ತೆ&nbsp; ವೇದಕಾಲದ ವರ್ಣಾಶ್ರಮವನ್ನೇ ಪ್ರಜಾತಂತ್ರ ಎಂದು ಪ್ರತಿಕ್ರಾಂತಿ ಮಾಡುತ್ತಿದ್ದಾರೆ.</p>



<p style="font-size:20px">ಈ ಪ್ರಜಾತಂತ್ರ ವಿರೋಧಿ ಬ್ರಾಹ್ಮಣಿಯ&nbsp; ಸರ್ವಾಧಿಕಾರಿ ತತ್ವವನ್ನು ಅಧಿಕೃತಗೊಳಿಸಲು ನವಂಬರ್ 26ರ ಸಂವಿಧಾನ ಸಮರ್ಪಣಾ ದಿನವನ್ನೇ ಬಳಸಿಕೊಳ್ಳುತ್ತಿದ್ದಾರೆ.</p>



<p style="font-size:20px"><strong>ಇದನ್ನು ಭಾರತದ ಜನತೆ ತಿರಸ್ಕರಿಸಬೇಕು.</strong><br>ಅದರ ಅರ್ಥ ಪ್ರಾಚಿನ ಭಾರತದಲ್ಲಿ ಪ್ರಜಾತಂತ್ರವಿರಲಿಲ್ಲ ಎಂದೇನಲ್ಲ. ಅಂಬೇಡ್ಕರ್ ಸ್ಪಷ್ಟಪಡಿಸಿರುವಂತೆ ಬೌದ್ಧ ಸಂಘಗಳಲ್ಲಿ ಇಂದಿನ ಆಧುನಿಕ ಸಂಸದೀಯ ಪ್ರಜಾತಂತ್ರದ ಎಲ್ಲಾ ರಿವಾಜುಗಳೂ ಇದ್ದವು. ಮತ್ತು ಬೌದ್ಧ ಸಂಘದ ಮೌಲ್ಯ ಸಮತೆ ಮತ್ತು ಮಮತೆಗಳಾಗಿದ್ದವು. ಹಾಗೆಯೇ ಬಸವ ಕ್ರಾಂತಿಯ ಅನುಭವ ಮಂಟಪವೂ ಕೂಡ. ನಮ್ಮ ಇತಿಹಾಸದಲ್ಲಿ ನಾವು ಹೆಮ್ಮೆ ಪಡಬೇಕಾದದ್ದು, ಮಾರ್ಗದರ್ಶಿಯಾಗಬೇಕಿರುವುದು ಬುದ್ಧ, ಬಸವರೇ ವಿನಾ ವೇದ-ಪುರಾಣ- ಗೀತಗಳಲ್ಲ.</p>



<p style="font-size:20px">ಆದರೆ ICHR ತಯಾರು ಮಾಡಿರುವ Concept Note ನಲ್ಲಿ ಬುದ್ಧನ ಬಗ್ಗೆಯಾಗಲೀ, ಅಪ್ಪಟ&nbsp; ಭಾರತೀಯ&nbsp; ಅವೈದಿಕ ಹಾಗೂ ಬ್ರಾಹ್ಮಣ ವಿರೋಧಿ&nbsp; ಪ್ರಜಾತಾಂತ್ರಿಕ ಜ್ಞಾನ ದರ್ಶನಗಳ&nbsp; ಬಗ್ಗೆ ಒಂದೇ ಒಂದು ಪದವೂ ಉಲ್ಲೇಖವಾಗಿಲ್ಲ.</p>



<p style="font-size:20px">ಬ್ರಾಹ್ಮಣೀಕರಣವೇ ಭಾರತೀಕರಣ ಎಂಬ ಸಂಘಿ ಹುನ್ನಾರ ಇದರಲ್ಲೂ ಎದ್ದು ಕಾಣುತ್ತಿದೆ. ಶೋಷಕರ ಇತಿಹಾಸವನ್ನು ನಿರಾಕರಿಸಿ ಶೋಷಿತರ ಪ್ರಜಾತಾಂತ್ರಿಕ ಇತಿಹಾಸವನ್ನು ಈ ನವಂಬರ್ 26 ರಂದೂ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮಮೇಲಿದೆ.<br>ಅಲ್ಲವೇ?</p>



<p style="font-size:20px"><strong>&#8211; ಶಿವಸುಂದರ್</strong></p>
]]></content:encoded>
					
		
		
			</item>
		<item>
		<title>ʼರಿಶಿ ಸುನಕ್‌ʼ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು</title>
		<link>https://peepalmedia.com/rishi-sunak-bagge-nimage-tiliyada-rahasyagalu/</link>
		
		<dc:creator><![CDATA[Peepal Media]]></dc:creator>
		<pubDate>Wed, 26 Oct 2022 10:33:57 +0000</pubDate>
				<category><![CDATA[ವಿಶೇಷ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rishi sunak]]></category>
		<category><![CDATA[shivasundar]]></category>
		<category><![CDATA[special]]></category>
		<category><![CDATA[special story]]></category>
		<guid isPermaLink="false">https://peepalmedia.com/?p=13012</guid>

					<description><![CDATA[ಇನ್ಫೋಸಿಸ್ ನಾರಯಣಮೂರ್ತಿಯ ಅಳಿಯ ರಿಶಿ ಸುನುಕ್ ಬ್ರಿಟನ್ನಿನ ಪ್ರಧಾನಿಯಾಗಿದ್ದು ಭಾರತೀಯರ ಹೆಮ್ಮೆ ಎಂಬ ವಿವೇಚನೆರಹಿತ ಮಾಧ್ಯಮಗಳ ಆರ್ಭಟಗಳು ಈ ಸದ್ಯಕ್ಕೆ ಕಡಿಮೆಯಾಗುವ ಯಾವುದೇ ಸೂಚನೆ ಇಲ್ಲ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮೂಲದ, ಆದರೆ ಆಫ಼್ರಿಕಾದಲ್ಲಿ ನೆಲಸಿದ್ದ ತಂದೆತಾಯಿಗಳು ಬ್ರಿಟನ್ನಿಗೆ ವಲಸೆ ಹೋದ ಮೇಲೆ ಜನಿಸಿದ ರಿಶಿಯವರು ಇನ್ಫೋಸಿಸ್ ನಾರಾಯಣಮೂರ್ತಿಯವರ ಮಗಳನ್ನು ಮದುವೆಯಾಗಿದ್ದಾರೆ. ಇಷ್ಟುಬಿಟ್ಟರೆ ಅವರ ಭಾರತೀಯ ಸಂಬಂಧಗಳು ಬೇರೆ ಏನೂ ಇಲ್ಲ. ಅದೇನೇ ಇರಲಿ. ಅಪ್ಪಟ ಭಾರತೀಯಳಾದ ಕರ್ನಾಟಕದ ದಲಿತ ಯುವ ಪ್ರತಿಭೆ ಅಶ್ವಿನಿ ವಿಶ್ವಸಂಸ್ಥೆಯಲ್ಲಿ ಜನಾಂಗೀಯ [&#8230;]]]></description>
										<content:encoded><![CDATA[
<p>ಇನ್ಫೋಸಿಸ್ ನಾರಯಣಮೂರ್ತಿಯ ಅಳಿಯ ರಿಶಿ ಸುನುಕ್ ಬ್ರಿಟನ್ನಿನ ಪ್ರಧಾನಿಯಾಗಿದ್ದು ಭಾರತೀಯರ ಹೆಮ್ಮೆ ಎಂಬ ವಿವೇಚನೆರಹಿತ ಮಾಧ್ಯಮಗಳ ಆರ್ಭಟಗಳು ಈ ಸದ್ಯಕ್ಕೆ ಕಡಿಮೆಯಾಗುವ ಯಾವುದೇ ಸೂಚನೆ ಇಲ್ಲ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮೂಲದ, ಆದರೆ ಆಫ಼್ರಿಕಾದಲ್ಲಿ ನೆಲಸಿದ್ದ ತಂದೆತಾಯಿಗಳು ಬ್ರಿಟನ್ನಿಗೆ ವಲಸೆ ಹೋದ ಮೇಲೆ ಜನಿಸಿದ ರಿಶಿಯವರು ಇನ್ಫೋಸಿಸ್ ನಾರಾಯಣಮೂರ್ತಿಯವರ ಮಗಳನ್ನು ಮದುವೆಯಾಗಿದ್ದಾರೆ. ಇಷ್ಟುಬಿಟ್ಟರೆ ಅವರ ಭಾರತೀಯ ಸಂಬಂಧಗಳು ಬೇರೆ ಏನೂ ಇಲ್ಲ.</p>



<p>ಅದೇನೇ ಇರಲಿ. ಅಪ್ಪಟ ಭಾರತೀಯಳಾದ ಕರ್ನಾಟಕದ ದಲಿತ ಯುವ ಪ್ರತಿಭೆ ಅಶ್ವಿನಿ ವಿಶ್ವಸಂಸ್ಥೆಯಲ್ಲಿ ಜನಾಂಗೀಯ ತಾರತಮ್ಯ ಅಧ್ಯಯನದ ಪ್ರಮುಖ ಸ್ಥಾನ ಪಡೆದಾಗ ಒಂದಕ್ಷರವನ್ನು ಬರೆಯದ ಪತ್ರಿಕೆಗಳು-ಮಾಧ್ಯಮಗಳು ಅಭಾರತೀಯ ರಿಶಿ ಸುನುಕ್ ಬ್ರಿಟನ್ನಿನ ಪ್ರಧಾನಿಯಾದರೆ ಭಾರತವು ಬ್ರಿಟನ್ನನ್ನು ವಶಪಡಿಸಿಕೊಂಡಿತೆಂಬಷ್ಟು ಉತ್ಪ್ರೇಕ್ಷೆ ಮಾಡುತ್ತಿವೆ.</p>



<p>ಸಹಜವಾಗಿಯೇ, ಸೋನಿಯಾ ಗಾಂಧೀಯವರ ವಿದೇಶಿ ಮೂಲವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಿದ್ದ ಬಿಜೆಪಿ ಈಗ ಹೇಗೆ ಬ್ರಿಟನ್ನಿನ್ನಲ್ಲಿ ರಿಶಿ ಪ್ರಧಾನಿಯಾದದ್ದನ್ನು ಸಂಭ್ರಮಿಸುತ್ತಾರೆ ಎಂಬ ಮುಜುಗರದ ಪ್ರಶ್ನೆಗೆ ಕಿವುಡಾಗಿದೆ…</p>



<p>ವಾಸ್ತವವಾಗಿ, ಬ್ರಿಟಿಷರು ಭಾರತವನ್ನು ಆಳುತ್ತಿರುವಾಗ ಬ್ರಿಟನ್ನಿನ ಹಡಗು ಹತ್ತಿಕೊಂಡು ವ್ಯಾಪಾರಿಗಳಾಗಿ, ಆಡಳಿತ ಸಹಾಯಕರಾಗಿ, ಜೀತಗಾರರಾಗಿ, ಕೂಲಿಗಳಾಗಿ, ವ್ಯಾಪಾರಿಗಳಾಗಿ, ಬ್ರಿಟಿಶ್ ಸಾಮ್ರಾಜ್ಯ ಇದ್ದಕಡೆಯೆಲ್ಲಾ ವಲಸೆ ಹೋದ ಭಾರತೀಯರು ಕಳೆದ ನೂರು ವರ್ಷಗಳಲ್ಲಿ ಆಯಾ ದೇಶಗಳ ಪ್ರಜಾತಾಂತ್ರಿಕ ರಾಜಕಾರಣದ ಭಾಗವಾಗಿ ವ್ಯಾಪಾರ, ರಾಜಕಾರಣ, ಉದ್ಯಮಗಳಲ್ಲಿ ಬೆಳೆದಿದ್ದಾರೆ.</p>



<p>ಕೆಲವು ವರ್ಗಗಳು ಅದರಲ್ಲು ಪಕ್ಕಾ ವ್ಯಾಪಾರಿ ವರ್ಗಗಳು ವಸಾಹತುಶಾಹಿಗಳ ಹಾಗೂ ಆಯಾ ದೆಶಗಳ ಶೋಷಕರ ಪರವಾಗಿದ್ದುಕೊಂಡು ಸ್ಥಳೀಯರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. ಅದನ್ನೇ ಬೆಳವಣಿಗೆ ಎಂದು ಮಾಧ್ಯಮಗಳು ಬಣ್ಣಿಸುತ್ತವೆ.</p>



<p>ಇನ್ನುಳಿದವರು ಅಲ್ಲಿಯ ದೇಶವಾಸಿಗಳೇ ಆಗಿ ನೋವು-ನಲಿವು-ಹೋರಾಟಗಳಲ್ಲಿ ಸರಿಸಮವಾಗಿ ಬೆರೆತುಹೋಗಿದ್ದಾರೆ. ಹೋರಾಟಗಳಲ್ಲಿ ಹುತಾತ್ಮರು ಆಗಿದ್ದಾರೆ. ಇದು ಮಾಧ್ಯಮಗಳಲ್ಲಿ ಸುದ್ದಿಯೂ ಅಗುವುದಿಲ್ಲ.</p>



<p>ಆದರೆ ರಿಶಿ ಸುನುಕ್ ವಿಷಯದಲ್ಲಿ ಹೆಮ್ಮೆ ಪಡುವುದಕ್ಕಿಂತ ಆತಂಕ ಪಡಬೇಕಾದ ಹಲವು ವಿಷಯಗಳಿವೆ. ರಿಷಿಯವರು ಬ್ರಿಟನ್ನಿನ ಬಂಡವಾಳಶಾಹಿ ಹಾಗೂ ಭಾರತದ ಬ್ರಾಹ್ಮಣಶಾಹಿಯ ಎರಕದಲ್ಲಿ ಅದ್ದು ತೆಗೆದಂತಿದ್ದಾರೆ.</p>



<p>ಹೀಗಾಗಿಯೇ ಅವರನ್ನು ಬ್ರಿಟನ್ನಿನ ಕಾರ್ಪೊರೇಟುಗಳು, ಭಾರತೀಯ ಮೋದಿಗಳು ಇಬ್ಬರು ಅಬ್ಬರದಿಂದ ಸ್ವಾಗತಿಸಿದ್ದಾರೆ. ಅದರೆ ಬ್ರಿಟನ್ನಿನ ಬಡಜನರು, ಇತರ ವರ್ಣೀಯರು, ಅಲ್ಪಸಂಖ್ಯಾತರು, ನಿರಾಶ್ರಿತರು, ಸುನುಕರ ಆಯ್ಕೆಯಿಂದ ಕಂಗಾಲಾಗಿದ್ದಾರೆ.</p>



<p>ಬ್ರಿಟನ್ನಿನ ಅತ್ಯಂತ ಪ್ರತಿಗಾಮಿ ಕನ್ಸರ್ವೇಟಿವ್ ಪಕ್ಷದ ಪ್ರಧಾನಿಯಾಗಿರುವ ರಿಶಿ ಸುನುಕ್ ಪ್ರತಿನಿಧಿಸುತ್ತಿರುವುದು ಅತ್ಯಂತ ಜನವಿರೋಧಿ ಆರ್ಥಿಕ ಹಾಗೂ ರಾಜಕೀಯ ನೀತಿಗಳನ್ನು.<br>ಇದರ ಬಗ್ಗೆ ಬ್ರಿಟನ್ನಿನ South Asia Solidarity Group- ದಕ್ಷಿಣ ಏಷಿಯ ಸೌಹಾರ್ದ ಸಂಘಟನೆ ಯು ಒಂದು ಹೇಳಿಕೆಯನ್ನು ಬಿಡುಗಡೆ ಮಾಡಿದೆ.<br>(<a href="https://southasiasolidarity.org/rishi-sunak-will-intensify-racism-and-poverty-and-strengthen-hindutva-fascism-in-the-uk-and-globally">https://southasiasolidarity.org/rishi-sunak-will-intensify-racism-and-poverty-and-strengthen-hindutva-fascism-in-the-uk-and-globally</a>)</p>



<p><strong>ಆ ಹೇಳಿಕೆಯ ಕನ್ನಡಾನುವಾದ ಕೆಳಗಿದೆ.</strong></p>



<p>ಈ ಸಂಘಟನೆ ಬ್ರಿಟನ್ನಿನಲ್ಲಿ ಕಳೆದ ಹಲವಾರು ದಶಕಗಳಿಂದ ಕೆಲಸ ಮಾಡುತ್ತಿರುವ ಏಷಿಯಾ ದೇಶಗಳ ಮೂಲದವರ ಸಂಘಟನೆಯಾಗಿದೆ.</p>



<p>ಈ ಸಂಘಟನೆಯು ಬಡದೇಶಗಳ ಮೇಲೆ ಸಾಮ್ರಾಜ್ಯಶಾಹಿ ಆಕ್ರಮಣ, ಯುದ್ಧ, ನವ ಉದಾರವಾದಿ ಜಾಗತಿಕ ಬಂಡವಳಶಾಹಿ ಆಕ್ರಮಣ ಗಳ ವಿರುದ್ಧ ಧ್ವನಿ ಎತ್ತುತ್ತಿರುವುದಲ್ಲದೇ, ಏಷಿಯಾ ದೇಶಗಳಲ್ಲಿ ಜನರು ಇದರ ಬಗ್ಗೆ ನಡೆಸುತ್ತಿರುವ ಹೋರಟಗಳಿಗೆ ಸೌಹಾರ್ದ ಹಾಗೂ ಬೆಂಬಲವನ್ನು ನೀಡುತ್ತಾ ಬಂದಿದೆ.</p>



<p>ಎಲ್ಲಾ ದೇಶದ ಶೋಷಕರು ಜನಶತ್ರುಗಳೇ<br>ಎಲ್ಲಾ ದೇಶದ ಹೋರಾಟಗಾರರು ಬಂಧುಗಳೇ</p>



<p>ಎಂಬ ನೆಲೆಯಲ್ಲಿ ಕೆಲಸ ಮಾಡುತ್ತಿರುವ ಈ ಸಂಘಟನೆ ರಿಶಿ ಸುನುಕರ ನೀತಿಗಳು ಮತ್ತು ಧೋರಣೆಗಳು ಬ್ರಿಟನ್ನಿನ ಬಡವರಿಗೆ ಹಾಗೂ ಜಾಗತಿಕ ಪ್ರಜಾತಂತ್ರಕ್ಕೆ ಎಷ್ಟು ಅಪಯಕಾರಿ ಎಂಬುದನ್ನು ಈ ಹೇಳಿಕೆಯಲ್ಲಿ ವಿವರಿಸಿವೆ.</p>



<p><strong>ಬಿಡುವು ಮಾಡಿಕೊಂಡು ಓದಿ..</strong></p>



<p>&#8221; South Asia Solidarity Group-ದಕ್ಷಿಣ ಏಶಿಯಾ ಸೌಹರ್ದ ಸಂಘಟನೆ&#8221;</p>



<p>ರಿಶಿ ಸುನುಕ್ ಅವರು ಬಡತನ ಮತ್ತು ಜನಾಂಗೀಯವಾದವನ್ನು ಹೆಚ್ಚಿಸುತ್ತಾರೆ ಮತ್ತು ಯುನೈಟೆಡ್ ಕಿಗ್‌ಡಂನಲ್ಲು (UK) ಹಾಗೂ ಜಗತ್ತಿನ ಇತರೆಡೆಗಳಲ್ಲು ಹಿಂದೂತ್ವ ಫ಼್ಯಾಸಿಸಂ ಅನ್ನು ಗಟ್ಟಿಗೊಳಿಸುತ್ತಾರೆ!</p>



<p>ರಿಶಿ ಸುನುಕ್ ಅವರನ್ನು ಯುನೈಟೆಡ್ ಕಿಂಗ್‌ಡಂ (ಯು.ಕೆ.)ನ ಮೊಟ್ಟ ಮೊದಲ ಏಶಿಯನ್ ಪ್ರಧಾನಿ ಎಂದು ಕೊಂಡಾಡಲಾಗುತ್ತಿದೆ. ಹಾಗಿದ್ದಲ್ಲಿ ಆತನ ನಿಜವಾದ ಅಸ್ಮಿತೆ ಏನು ಮತ್ತು ಅದು ಆತನ ಗೃಹ ಹಾಗೂ ವಿದೇಶಿ ನೀತಿಗಳ ಮೇಲೆ ಯಾವ ರೀತಿಯ ಪ್ರಭಾವ ಬೀರಬಹುದು?</p>



<p>ರಿಶಿ ಸುನುಕ್ ಅವರು ಯು.ಕೆಯ ಸಂಸದರಲ್ಲೇ ಅತಿ ಶ್ರೀಮಂತ ಸಂಸದ. ಚಿಕ್ಕಂದಿನಲ್ಲಿ ಅತ್ಯಂತ ದುಬಾರಿ ಖಾಸಗಿ ಶಿಕ್ಷಣವನ್ನು ಪಡೆದುಕೊಂಡವರು ಮತ್ತು ಅ ನಂತರ ಅಕ್ಸ್‌ಫ಼ರ್ಡ್ ಮತ್ತು ಗೋಲ್ದ್‌ಮಾನ್ ಸಾಶ್ಸ್ ನಲ್ಲಿ ಕಲಿತವರು. ಇವೆಲ್ಲದರಿಂದ ಅವರು ಬ್ರಿಟಿಶ್ ಸಮಾಜದ ಪ್ರತಿಷ್ಟಿತ ವರ್ಗಗಳಲ್ಲಿ ಮನೆಮಾಡಿರುವ ದುರಹಂಕಾರಿ ಮೇಲರಿಮೆಗಳನ್ನು ಹಾಗೂ ಬಡವರು ಹಾಗೂ ದುರ್ಬಲರ ಬಗ್ಗೆ ತಿರಸ್ಕಾರ ಹಾಗೂ ದ್ವೇಷಗಳನ್ನು ಮೈಗೋಡಿಸಿಕೊಂಡಿದ್ದಾರೆ.</p>



<p>2008ರ ಹಣಕಾಸು ಕುಸಿತದ ಸಂದರ್ಭದಲ್ಲಿ ಬ್ರಿಟನ್ ಸರ್ಕಾರವು ಕಟ್ಟುನಿಟ್ಟಿನ ಆರ್ಥಿಕ ನೀತಿಗಳನ್ನು ಜಾರಿ ಮಾಡಿದ್ದರ ಪರಿಣಾಮವಾಗಿ ಯುನೈಟೆಡ್ ಕಿಂಗ್‌ಡಂ ನಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು. ಆದರೆ ಅದೇ ಸಂದರ್ಭದಲ್ಲೇ ರಿಶಿ ಸುನುಕ್ ಅವರು ಅಪಾರ ಸಂಪತ್ತನ್ನು ಸಂಪಾದಿಸಿದರು.<br>ಕೋವಿಡ್ ಕಾಲದಲ್ಲಿ ಬ್ರಿಟನ್ ಸರ್ಕಾರದ ಹಣಕಾಸು ಮಂತ್ರಿಯಾಗಿ (ಚಾನ್ಸಲರ್) ದ್ದ ರಿಶಿ ಸುನುಕ್ ಅವರು ಕೋವಿಡ್ ಸಾಂಕ್ರಾಮಿಕದ ಸಂದರ್ಭವನ್ನು ನಿಭಾಯಿಸಲು ಅತ್ಯಂತ ಬಡಕುಟುಂಬಗಳಿಗೆ ಅನುಕೂಲಕಾರಿಯಾಗಿದ್ದ ಸಾರ್ವತ್ರಿಕ ಸಾಲ ಯೋಜನೆಯನ್ನು ವಾರಕ್ಕೆ 20 ಪೌಂಡುಗಳಷ್ಟು ಹೆಚ್ಚಿಸುವ ಯೋಜನೆಯನ್ನು ಸ್ಥಗಿತಗೊಳಿಸಿದ್ದರು.<br>(<a href="https://www.opendemocracy.net/en/rishi-sunak-could-become-pm-heres-what-he-doesnt-want-you-to-know">https://www.opendemocracy.net/en/rishi-sunak-could-become-pm-heres-what-he-doesnt-want-you-to-know</a>)</p>



<p>ಈ ಜುಲೈನಲ್ಲಿ ಈ ಸಾರ್ವತ್ರಿಕ ಸಾಲ ಕಡಿತವನ್ನು ಘೋಶಿಸುವ ಹೊತ್ತಿನಲ್ಲಿ ರಿಷಿ ಸುನುಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿಯೊಂದಿಗೆ ತಾವು 2015ರಲ್ಲಿ 1.5 ಮಿಲಿಯನ್ ಪೌಂಡ್ ಕೊಟ್ಟು ಯಾರ್ಕ್ ಶೈರ್ ನಲ್ಲಿ ಖರೀದಿಸಿದ್ದ ಐಶರಾಮಿ ವಿಲ್ಲಾದಲ್ಲಿ ಈಜುಕೊಳ, ಜಿಮ್ ಮತ್ತು ಟೆನ್ನಿಸ್ ಕೋರ್ಟನ್ನು ನಿರ್ಮಿಸುವ ಯೋಜನೆಯನ್ನು ರೂಪಿಸುತ್ತಿದ್ದರು. ರಿಶಿ ಅವರ ಹೆಂಡತಿ ಅಕ್ಷತಾ ಮೂರ್ತಿಯವರು ಕೋಟ್ಯಾಧಿಪತಿ ಮತ್ತು ಇನ್ಫೋಸಿಸ್ ನ ಸಹ ಸಂಸ್ಥಾಪಕರಾದ ನಾರಾಯಣಮೂರ್ತಿಯವರ ಮಗಳಾಗಿದ್ದು ಅದರ ವ್ಯವಹಾರದಲ್ಲೂ ಪಾಲುದಾರರಾಗಿದ್ದಾರೆ.</p>



<p>ಆಡಂ ಬೈಶಾಸ್ಕಿ ಯವರು ಬರೆಯುವಂತೆ ಸುನುಕ್ ಅವರು ಯುನೈಟೆಡ್ ಕಿಂಗ್‌ಡ ನ ಹಲವಾರು ಕಡೆ ಕೋಟ್ಯಾಂತರ ಪೌಂಡ್ ಬೆಲೆಬಾಲುವ ಐಷರಾಮಿ ಬಂಗಲೆಗಳನ್ನು ಹೊಂದಿರುವುದು ಮಾತ್ರವಲ್ಲದೆ ಕಪ್ಪುಹಣದ ಕೇಂದ್ರವಾಗಿರುವ ಕೇಮ್ಯಾನ್ ಐಲಾಂಡ್‌ ನಲ್ಲೂ ತಮ್ಮ ಅಪಾರ ಸಂಪತ್ತನ್ನು ಕೂಡಿಟ್ಟಿದ್ದಾರೆ.</p>



<p>ಅಷ್ಟು ಮಾತ್ರವಲ್ಲ ಈ ಹಿಂದೆ ಲೇಬರ್ ಪಾರ್ಟಿಯು ಯು.ಕೆಯ ನಗರ ಪ್ರದೇಶಗಳಲ್ಲಿ ಬಡವರಿಗೆಂದು (ಅವರಲ್ಲಿ ಬಹಳಷ್ಟು ಜನ ಏಷಿಯನ್ನರು) ವಿತರಿಸಿದ್ದ ಸಂಪನ್ಮೂಲಗಳನ್ನು ಕಸಿದುಕೊಂಡು ವಿಲಾಸಿ ವರ್ಗಗಳ ಐಷಾರಾಮಕ್ಕೆ ಒದಗಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ತಮ್ಮ ವರ್ಗಮಿತ್ರರಿಗೆ ಭರವಸೆ ನೀಡಿದ್ದಾರೆ.</p>



<p>ರಿಶಿಯವರ ಟೋರಿ (ಕನ್ಸರ್ವೇಟಿವ್) ಪಕ್ಷವು ಸಮಾಜದ ವೈವಿಧ್ಯತೆಯನ್ನು ಎತ್ತಿ ಹಿಡಿಯುವ ತಮ್ಮ ನಿಲುವಿನ ಬಗ್ಗೆ ಎಷ್ಟೇ ಕೊಚ್ಚಿಕೊಂಡರೂ ರಿಶಿ ಸುನುಕ್ ಅವರು ಮಾತ್ರ ಇತರ ವರ್ಣೀಯರ ಸ್ನೇಹಿತರಂತೂ ಅಲ್ಲವೇ ಅಲ್ಲ.</p>



<p>ಬ್ರಿಟನ್ನಿನಲ್ಲಿ ಕಪ್ಪು ಜನರನ್ನು ಮತ್ತು ಮುಸ್ಲಿಮರನ್ನು ಗುರಿ ಮಾಡಿ ಬ್ರಿಟನ್ನಿನ ಪೊಲೀಸರು ನಡೆಸುವ ಜನಾಂಗೀಯ ಮತ್ತು ಹಿಂಸಾತ್ಮಕ Stop And Search ( ಬೇಕಾಬಿಟ್ಟಿ ತಡೆಯುವ, ಶೋಧಿಸುವ) ನೀತಿಗಳನ್ನು ಇನ್ನಷ್ಟು ಹೆಚ್ಚಿಸುವ ಭರವಸೆಯನ್ನು ನೀಡಿದಾರೆ. ರಾಜಕೀಯ ಸರಿತನಗಳು ತನ್ನ ದಾರಿಗೆ ಅಡ್ಡವಾಗುವುದಿಲ್ಲ ಎಂದು ಘೋಷಿಸಿರುವ ರಿಷಿಯವರು ಮುಸ್ಲಿಮರನ್ನು ವಿನಾಕಾರಣ ನಿಂದಿಸುವ ತೀವ್ರ ಬಲಪಂಥೀಯ ಹೇಳಿಕೆಗಳಾದ &#8220;ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮರು&#8221; ಎಂಬ ಹೇಳಿಕೆಯನ್ನು ಪದೇಪದೇ ಬಳಸುತ್ತಾರೆ.<br>(<a href="https://www.express.co.uk/news/politics/1651595/Rishi-sunak-child-groomers-conservatives-grooming-gangs">https://www.express.co.uk/news/politics/1651595/Rishi-sunak-child-groomers-conservatives-grooming-gangs</a>)</p>



<p>ಇದರ ಜೊತೆಗೆ ಮುಸ್ಲಿಮರನ್ನು ಗುರಿಯಾಗಿರಿಸಿಕೊಂಡಿರುವ ಹಾಗೂ ತನ್ನ ಇಸ್ಲಾಮೋಫ಼ೋಬಿಕ್ (ಮುಸ್ಲಿಮರನ್ನು ದುರುಳೀಕರಿಸುವ) ಧೋರಣೆಯಿಂದಾಗಿ ತೀವ್ರ ಟೀಕೆಗೊಳಗಾಗಿದ್ದ PREVENT ಕಾರ್ಯಕ್ರಮವನ್ನು ಮತ್ತೆ ಪ್ರಾರಂಭಿಸುವ ಭರವಸೆಯನ್ನೂ ನೀಡಿದ್ದಾರೆ.<br>(<a href="https://www.independent.co.uk/news/uk/politics/rishi-sunak-extremism-terrorism-prevent-b2137158.html">https://www.independent.co.uk/news/uk/politics/rishi-sunak-extremism-terrorism-prevent-b2137158.html</a>)</p>



<p>ಇನ್ನು ನಿರಾಶ್ರಿತ ವಲಸೆಗಾರರ ಪ್ರಶ್ನೆಗೆ ಬರುವುದಾದರೆ ಅವರನ್ನು ರವಾಂಡಾ ದೇಶದ ಮೃತ್ಯು ಸದೃಶ ಶಿಬಿರಗಳಿಗೆ ಅಟ್ಟಿಬಿಡಬೇಕೆಂಬ ಪ್ರೀತಿ ಪಟೇಲರ ಫ಼್ಯಾಸಿಸ್ಟ್ ನೀತಿಯನ್ನು ಅಪ್ಪಿಕೊಳ್ಳಲು ಅವರು ತುದಿಗಾಲಲ್ಲಿ ನಿಂತಿದ್ದಾರೆ.</p>



<p>ವಿಪರ್ಯಾಸವೆಂದರೆ ರಿಶಿ ಸುನುಕರ ಪೂರ್ವಜರೇ ನಿರಾಶ್ರಿತರಾಗಿ ಯುನೈಟೆಡ್ ಕಿಂಗ್‌ಡಂ ಗೆ ಬಂದಿದ್ದರು. ಮತ್ತು ಈ ರವಾಂಡಾ ನೀತಿಯು ದುಬಾರಿಯಾಗಿದ್ದು ಪರಿಣಾಮಕಾರಿಯಾಗಿಲ್ಲವೆಂಬುದು ಈಗಾಗಲೇ ರುಜುವಾತಾಗಿದೆ.</p>



<p>ಇದಲ್ಲದೆ ರಿಷಿ ಸುನುಕ್ ಅವರು ಮೋದಿ ಅಳ್ವಿಕೆಗೆ ಸನಿಹವಾಗಿರುವುದು ಕೂಡ ಸ್ಪಷ್ಟವಾಗಿದೆ. ಜಗತ್ತಿನಾದ್ಯಂತ ಹಿಂದೂತ್ವವಾದಿ ಶಕ್ತಿಗಳೊಂದಿಗೆ ಮಿತ್ರತ್ವ ಹೊಂದಿರುವ ಇಸ್ರೇಲಿನೊಂದಿಗೆ ಅವರಿಗಿರುವ ಸ್ನೇಹ ಎಲ್ಲರಿಗೂ ಗೊತ್ತಿರುವ ಸಂಗತಿಯೇ.</p>



<p>ರಿಷಿ ಸುನುಕ್ ಅವರು ಜೆರುಸೊಲೆಮ್ ಅನ್ನು ಇಸ್ರೇಲಿನ ರಾಜಧಾನಿಯಾಗಿ ಜಗತ್ತು ಒಪ್ಪಿಕೊಳ್ಳಬೇಕೆಂಬುದನ್ನು ಬೆಂಬಲಿಸುತ್ತಾರೆ.</p>



<p>ಅಲ್ಲದೇ ಇಸ್ರೇಲಿನ ಘಾತುಕತನವನ್ನು ಜಗತ್ತಿನಾದ್ಯಂತ ಬಯಲು ಮಾಡುತ್ತಿರುವ Boycott, Disinvest, Sanction(BDS)- (ಇಸ್ರೇಲನ್ನು-ಬಹಿಷ್ಕರಿಸಿ, ಹೂಡಿಕೆ ಹಿಂತೆಗೆದುಕೊಳ್ಳಿ ಮತ್ತು ನಿರ್ಬಂಧ ವಿಧಿಸಿ) ಚಳವಳಿಯ ಮೇಲೆ ಶಾಸನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನೂ ನೀಡಿದ್ದಾರೆ.</p>



<p>ಅವರ ಮಾವ ನಾರಾಯಣಮೂರ್ತಿ ಸ್ಥಾಪಿಸಿರುವ ಇನ್‌ಫ಼ೋಸಿಸ್ ಸಂಸ್ಥೆಯು ಇಸ್ರೇಲಿನಲ್ಲಿ ಸಾಕಷ್ಟು ಹೂಡಿಕೆಗಳನ್ನು ಮಾಡಿದ್ದು ಅದರ ಸಹ ಉಸ್ತುವಾರಿಯನ್ನು ಇಸ್ರೇಲಿನ ಮಿಲಿಟರಿ ಬೇಹುಗಾರಿಕೆ ಸಂಸ್ಥೆ ಘಟಕ-೮೨೦೦ರ ಭಾಗವಾಗಿದ್ದ ಉರಿ ಲೆವಿನ್ ನಿರ್ವಹಿಸುತ್ತಾರೆ.<br>(<a href="https://twitter.com/Lowkey0nline/status/1583423329620307969">https://twitter.com/Lowkey0nline/status/1583423329620307969</a>)</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">Rishi Sunak&#39;s family has significant business interests in Israel.<br><br>Their company, Infosys, is co-directed by Uri Levine, formerly of Israeli Military Intelligence Unit 8200.<br><br>Infosys and its subsidiaries there all employ former Israeli military personnel.</p>&mdash; Lowkey (@Lowkey0nline) <a href="https://twitter.com/Lowkey0nline/status/1583423329620307969?ref_src=twsrc%5Etfw">October 21, 2022</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಮೋದಿ ಸರ್ಕಾರದ ಬಗೆಗಿನ ಯಾವುದೇ ವಿಮರ್ಶೆಯನ್ನು ಅಥವಾ ಬ್ರಿಟನ್ನಿನಲ್ಲಿರುವ ಹಿಂದುತ್ವ ಫ಼್ಯಾಸಿಸ್ಟರ ಯಾವುದೇ ಶಾಖೆಗಳ ಮೇಲಿನ ವಿಮರ್ಶೆಯನ್ನು &#8211; ಹಿಂದೂಫ಼ೋಬಿಯ- ಹಿಂದುಗಳನ್ನು ದುರುಳಿಕರಿಸುವ<br>-ತಂತ್ರ ಎಂದು ಪ್ರಚಾರ ಮಾಡುವ ಹಿಂದೂತ್ವ ಫ಼್ಯಾಸಿಸ್ಟರ ಪ್ರಯತ್ನಗಳನ್ನು ರಿಶಿ ಸುನುಕ್ ಅವರು ಬೆಂಬಲಿಸುವ ಎಲ್ಲಾ ಸಾಧ್ಯತೆಗಳಿವೆ.</p>



<p>ಕಳೆದ ಹಲವಾರು ವರ್ಷಗಳಿಂದ ಹೆಚ್ಚೆಚ್ಚು ಪಾಶ್ಚಿಮಾತ್ಯ ರಾಜಕಾರಣಿಗಳು ಮತ್ತು ವಿಶ್ಲೇಷಕರು ಮೋದಿಯವರ ನರಮೇಧ ನೀತಿಗಳನ್ನು ಟೀಕಿಸುವುದು ಹೆಚ್ಚುತ್ತಿದ್ದಂತೆ ಮೋದಿ ಸರ್ಕಾರದ ವಿದೇಶಿ ಕಚೇರಿಗಳು ಅವನ್ನು ನಗಣ್ಯಗೊಳಿಸುವ ಹತಾಷ ಪ್ರಯತ್ನದಲ್ಲಿ ತೊಡಗಿಕೊಂಡಿವೆ.</p>



<p>ಹಿಂದೂಫ಼ೋಬಿಯಾ- ಹಿಂದು ದುರುಳೀಕರಣ ಎಂಬುದು Black Lives Matter Movement &#8211; ಕಪ್ಪು ಜನರ ಜೀವಕ್ಕೂ ಬೆಲೆ ಇದೆ ಎಂಬ ಚಳವಳಿಯನ್ನು ನಗಣ್ಯಗೊಳಿಸಲು ಹುಟ್ಟಿಕೊಂಡ ’ White Lives Matter’- ಬಿಳಿ ಜೀವಕ್ಕೆ ಬೆಲೆ ಇದೆ -ಎಂಬ ಬಿಳಿಯ ಶ್ರೇಷ್ಟತೆಯನ್ನು ಪ್ರತಿಪಾದಿಸುವ ಬಿಳಿ ದುರಭಿಮಾನಿ ಜನಾಂಗೀಯ ಪ್ರತಿಕ್ರಿಯೆಗೆ ಸಮಾನವಾದದ್ದು ಎಂಬುದನ್ನು ನಾವು ಸೂಚಿಸುತ್ತಲೇ ಬಂದಿದ್ದೇವೆ. ಇದು ತನ್ನಂತೆಯೇ ಒಂದು ನವನಾಜಿ ಚಳವಳಿಯಾಗಿ ಬೆಳೆಯುತ್ತಿದೆ.</p>



<p>ಭಾರತದಲ್ಲಿರುವ ಹಿಂದೂ ಬಹುಸಂಖ್ಯಾತರು ಅಲ್ಲಿನ ಅಲ್ಪಸಂಖ್ಯಾತರಿಂದ ಯೋಜಿತ ದಾಳಿಗೆ ತುತ್ತಾಗುತ್ತಿದ್ದಾರೆ ಎಂಬ ಹಿಂದೂಫ಼ೋಬಿಯಾದ ತಿಳವಳಿಕೆಯು ಪಾಶ್ಚಿಮಾತ್ಯ ಸಂದರ್ಭದಲ್ಲಿ ಬಿಳಿಯರಿಗೆ ಅನ್ವಯವಾಗುತ್ತದೆ.<br>(<a href="https://southasiasolidarity.org/keir-starmer-dont-pander-to-the-right-believing-in-hinduphobia/">https://southasiasolidarity.org/keir-starmer-dont-pander-to-the-right-believing-in-hinduphobia/</a>)</p>



<p>ಎರಡನ್ನೂ ಕೂಡ ಅಲ್ಪಸಂಖ್ಯಾತ ಹಾಗೂ ದಮನಿತ ಜನರ ಮೇಲೆ ತಾವು ನಡೆಸುವ ಜನಾಂಗೀಯ ಮತ್ತು ಫ಼್ಯಾಸಿಸ್ಟ್ ದಾಳಿಗಳ ವಿರುದ್ಧ ನಡೆಯುವ ಪ್ರತಿರೋಧಗಳ ವಿರುದ್ಧ ನೆಪವಾಗಿ ಹಾಗೂ ಪ್ರತಿಕ್ರಿಯೆಯಾಗಿ ಬಳಸಲಾಗುತ್ತದೆ.</p>



<p>ಕಳೆದ ತಿಂಗಳು ಲೈಸೆಸ್ಟರ್ ನಲ್ಲಿ ಮುಖವಾಡ ಧರಿಸಿದ ಸಶಸ್ತ್ರ ಹಿಂದೂತ್ವವಾದಿಗಳು ಏಶಿಯನ್ ಸಮುದಾಯಗಳ ವಸತಿ ಪ್ರದೇಶದಲ್ಲಿ ಮೆರವಣಿಗೆ ನಡೆಸಿದ್ದರ ಹಿಂದಿನ ಉದ್ದೇಶ ಮುಸ್ಲಿಮರನ್ನು ಪ್ರಚೋದಿಸಿ ತಮ್ಮ ಹಿಂದೂಫ಼ೋಬಿಯಾ ಎಂಬ ಕಥನವನ್ನು ಮತ್ತಷ್ಟು ಗಟ್ಟಿಗೊಳಿಸಿಕೂಳ್ಳುವುದೇ ಆಗಿತ್ತು.</p>



<p>ರಿಶಿ ಸುನುಕ್ ಅವರು ಪ್ರಧಾನಿಯಾಗುವುದರೊಂದಿಗೆ ಈ ಶಕ್ತಿಗಳು ಇನ್ನಷ್ಟು ಬಲಗೊಳ್ಳುತ್ತಾರೆ.</p>



<p>ಅಲ್ಲದೇ ಈ ಬಗೆಯ ಕೋಮುವಾದಿ ಹಿಂಸಾಚಾರವನ್ನು ದೇಶದ ಇತರ ಭಾಗಗಳಿಗೂ ವಿಸ್ತರಿಸುವ ಶಕ್ತಿಯನ್ನು ಪಡೆದುಕೊಳ್ಳುತ್ತಾರೆ.</p>



<p>ಇದನ್ನು ತಡೆಗಟ್ಟಲೇಬೇಕು.</p>



<figure class="wp-block-image size-full is-resized"><img loading="lazy" decoding="async" src="https://peepalmedia.com/wp-content/uploads/2022/10/image-70.png" alt="" class="wp-image-13015" width="132" height="115"/></figure>



<p><strong>ಶಿವಸುಂದರ್</strong><br>ಚಿಂತಕರು</p>
]]></content:encoded>
					
		
		
			</item>
	</channel>
</rss>
