<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Siddaramaiah &#8211; Peepal Media</title>
	<atom:link href="https://peepalmedia.com/tag/siddaramaiah/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 22 May 2025 06:50:21 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Siddaramaiah &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಅಲ್ಲಿ ಮಾತ್ರ ಮಳೆಹಾನಿ ಸಮಸ್ಯೆ: ಡಿ.ಕೆ.ಶಿ</title>
		<link>https://peepalmedia.com/rain-damage-problem-only-exists-wherever-there-are-bjp-mlas-d-k-s/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 22 May 2025 06:50:21 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[dk shivakumar]]></category>
		<category><![CDATA[dks]]></category>
		<category><![CDATA[flood]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=59487</guid>

					<description><![CDATA[ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ. ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿ, ಸಾವರ್ಜನಿಕರಿಗೆ ತೊಂದರೆಯಾಗಿರುವ ಹಿನ್ನಲೆಯಲ್ಲಿ, ರಾಜ್ಯದ ಮುಖ್ಯಮಂತ್ರಿ ಜೊತೆಗೆ ಉಪಮುಖ್ಯಮಂತ್ರಿಗಳು ಸಿಟಿ ರೌಂಡ್‌ ಹಾಕಿದ ಬಳಿಕ, ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ಪೋಸ್ಟ್‌ನಲ್ಲಿ, [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.</p>



<p>ರಾಜ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿ, ಸಾವರ್ಜನಿಕರಿಗೆ ತೊಂದರೆಯಾಗಿರುವ ಹಿನ್ನಲೆಯಲ್ಲಿ, ರಾಜ್ಯದ ಮುಖ್ಯಮಂತ್ರಿ ಜೊತೆಗೆ ಉಪಮುಖ್ಯಮಂತ್ರಿಗಳು ಸಿಟಿ ರೌಂಡ್‌ ಹಾಕಿದ ಬಳಿಕ, ಈ ಕುರಿತು ರಾಜ್ಯ ಕಾಂಗ್ರೆಸ್‌ ಘಟಕ ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಹಾನಿ ಸಮಸ್ಯೆ ಎದುರಾಗಿದೆ. ಇದು ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ.<br><br>ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ… <a href="https://t.co/LNayDsCK0a">pic.twitter.com/LNayDsCK0a</a></p>&mdash; Karnataka Congress (@INCKarnataka) <a href="https://twitter.com/INCKarnataka/status/1925415832018202991?ref_src=twsrc%5Etfw">May 22, 2025</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಪೋಸ್ಟ್‌ನಲ್ಲಿ, ಬೆಂಗಳೂರಿನಲ್ಲಿ ಎಲ್ಲೇಲ್ಲಿ ಮಳೆ ಹಾನಿಯಾಗಿದೇಯೋ ಆ ಎಲ್ಲಾ ಪ್ರದೇಶಗಳು ಬಿಜೆಪಿ ಶಾಸಕರು ಇರುವಂತಹ ಸ್ಥಳಗಳು, ಇವು ಬಿಜೆಪಿ ಶಾಸಕರ ಕೆಲಸದ ವೈಕರಿಯನ್ನ ತಿಳಿಸುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಅವರು ವ್ಯಂಗಿಸಿದ್ದಾರೆ ಎಂದು ಹೇಳಿದೆ.</p>



<p>ಜೊತೆಗೆ ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಕ್ಷೇತ್ರದಲ್ಲೂ ಪರಿಶೀಲನೆ ಮಾಡಿದ್ದೇವೆ. ಅವರು ಈ ಭಾಗದ ರಸ್ತೆ ಅಗಲೀಕರಣ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಅವರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.</p>



<p>ಈ ವಿಚಾರವಾಗಿ ಎಲ್ಲೆಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಾಗಿದೆಯೋ‌ ಆ ಜಾಗಗಳ ಫೋಟೊ, ವಿಡಿಯೊ ಮಾಡಿಕೊಂಡು ತುರ್ತು ವರದಿ ಸಲ್ಲಿಕೆ ಮಾಡುವಂತೆ ಡಿ.ಕೆ.ಶಿ ಅವರು ತಿಳಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಘಟಕ ತಮ್ಮ ಪೋಸ್ಟ್‌ ಹಂಚಿಕೊಂಡಿದೆ.</p>
]]></content:encoded>
					
		
		
			</item>
		<item>
		<title>ಸಿಎಂ-ಶಾಶಕರ ವೇತನ 100% ಹೆಚ್ಚಳ: ಐದನೇ ಸ್ಥಾನದಲ್ಲಿ ಕರ್ನಾಟಕ</title>
		<link>https://peepalmedia.com/100-increase-in-salaries-of-cms-and-governors-karnataka-in-fifth-place/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 25 Mar 2025 10:35:26 +0000</pubDate>
				<category><![CDATA[ರಾಜ್ಯ]]></category>
		<category><![CDATA[Chief Minister]]></category>
		<category><![CDATA[CM]]></category>
		<category><![CDATA[Delhi]]></category>
		<category><![CDATA[karnataka]]></category>
		<category><![CDATA[maharashtra]]></category>
		<category><![CDATA[MLA]]></category>
		<category><![CDATA[salary hike]]></category>
		<category><![CDATA[Siddaramaiah]]></category>
		<category><![CDATA[telangana]]></category>
		<category><![CDATA[uttara pradesh]]></category>
		<guid isPermaLink="false">https://peepalmedia.com/?p=55740</guid>

					<description><![CDATA[ಶುಕ್ರವಾರ ಕರ್ನಾಟಕ ವಿಧಾನಸಭೆಯು ಮುಖ್ಯಮಂತ್ರಿ ಮತ್ತು ಎಲ್ಲಾ ಶಾಸಕರಿಗೆ ಶೇ. 100 ರಷ್ಟು ವೇತನ ಹೆಚ್ಚಳವನ್ನು ಮಾಡುವ ಮಸೂದೆಗಳನ್ನು ಅಂಗೀಕರಿಸಿತು. ಇಷ್ಟಾಗಿಯೂ ಇವರು ಇತರ ನಾಲ್ಕು ರಾಜ್ಯಗಳ ಶಾಸಕರಿಗಿಂತ ಕಡಿಮೆ ಸಂಬಳ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಶಾಸಕರಿಗೆ ಅತಿ ಹೆಚ್ಚು ಸಂಬಳ ನೀಡುವ ಐದು ರಾಜ್ಯಗಳು: ತೆಲಂಗಾಣ ಮುಖ್ಯಮಂತ್ರಿಗಳ ವೇತನ &#8211; ವಸತಿ, ಪ್ರಯಾಣ ಮತ್ತು ಭದ್ರತೆಗೆ ಸಂಬಂಧಿಸಿದ ಭತ್ಯೆಗಳು ಸೇರಿದಂತೆ ತಿಂಗಳಿಗೆ &#8211; 4.10 ಲಕ್ಷ ರೂ. ಸಚಿವರ ವೇತನ &#8211; 3-3.5 ಲಕ್ಷ ರೂ. [&#8230;]]]></description>
										<content:encoded><![CDATA[
<p>ಶುಕ್ರವಾರ ಕರ್ನಾಟಕ ವಿಧಾನಸಭೆಯು ಮುಖ್ಯಮಂತ್ರಿ ಮತ್ತು ಎಲ್ಲಾ ಶಾಸಕರಿಗೆ ಶೇ. 100 ರಷ್ಟು ವೇತನ ಹೆಚ್ಚಳವನ್ನು ಮಾಡುವ ಮಸೂದೆಗಳನ್ನು ಅಂಗೀಕರಿಸಿತು. ಇಷ್ಟಾಗಿಯೂ ಇವರು ಇತರ ನಾಲ್ಕು ರಾಜ್ಯಗಳ ಶಾಸಕರಿಗಿಂತ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.</p>



<p>ಮುಖ್ಯಮಂತ್ರಿಗಳು ಮತ್ತು ಶಾಸಕರಿಗೆ ಅತಿ ಹೆಚ್ಚು ಸಂಬಳ ನೀಡುವ ಐದು ರಾಜ್ಯಗಳು:</p>



<p><strong>ತೆಲಂಗಾಣ</strong></p>



<ol class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; ವಸತಿ, ಪ್ರಯಾಣ ಮತ್ತು ಭದ್ರತೆಗೆ ಸಂಬಂಧಿಸಿದ ಭತ್ಯೆಗಳು ಸೇರಿದಂತೆ ತಿಂಗಳಿಗೆ &#8211; 4.10 ಲಕ್ಷ ರೂ.</p>



<p>ಸಚಿವರ ವೇತನ &#8211; 3-3.5 ಲಕ್ಷ ರೂ.</p>



<p>ಶಾಸಕರ ವೇತನ &#8211; 2.5 ಲಕ್ಷ ರೂ.</p>



<p><strong>ದೆಹಲಿ</strong></p>



<p>ಮುಖ್ಯಮಂತ್ರಿಗಳ ವೇತನ &#8211; 3.90 ಲಕ್ಷ ರೂ.</p>



<p>ಸಚಿವರ ಸಂಬಳ &#8211; 3 ಲಕ್ಷ ರೂ.</p>



<p>ಶಾಸಕರ ವೇತನ &#8211; 90,000 ರೂ.</p>



<p><strong>ಉತ್ತರ ಪ್ರದೇಶ</strong></p>



<ol start="3" class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; 3.65 ಲಕ್ಷ ರೂ.</p>



<p>ಸಚಿವರ ವೇತನ &#8211; 2-2.5 ಲಕ್ಷ ರೂ.</p>



<p>ಶಾಸಕರ ವೇತನ &#8211; 1.87 ಲಕ್ಷ ರೂ.</p>



<p><strong>ಮಹಾರಾಷ್ಟ್ರ</strong></p>



<ol start="4" class="wp-block-list"></ol>



<p>ಮುಖ್ಯಮಂತ್ರಿಗಳ ವೇತನ &#8211; 3.40 ಲಕ್ಷ ರೂ.</p>



<p>ಸಚಿವರ ವೇತನ &#8211; 2.5-3 ಲಕ್ಷ ರೂ.</p>



<p>ಶಾಸಕರ ವೇತನ &#8211; 1.60 ಲಕ್ಷ ರೂ.</p>



<p><strong>ಕರ್ನಾಟಕ (ಮಾರ್ಚ್ ನಂತರ)</strong></p>



<ol start="5" class="wp-block-list"></ol>



<p>ಮುಖ್ಯಮಂತ್ರಿಗಳ ಸಂಬಳ &#8211; 3 ಲಕ್ಷ ರೂ.</p>



<p>ಸಚಿವರ ವೇತನ &#8211; 2-2.5 ಲಕ್ಷ ರೂ.</p>



<p>ಶಾಸಕರ ವೇತನ &#8211; 1.60 ಲಕ್ಷ ರೂ.<br><br>ಈ‌ ಪಟ್ಟಿಯನ್ನು <a href="https://www.deccanherald.com/india/karnataka/salary-hike-takes-karnataka-cm-mlas-incomes-to-5th-rank-which-states-pay-higher-3457949#5">ಡೆಕ್ಕನ್‌ ಹೆರಾಲ್ಡ್‌</a> ಪ್ರಕಟಿಸಿದೆ. ಸಂಬಳವು ವಸತಿ, ಪ್ರಯಾಣ ಭತ್ಯೆಗಳು, ಭದ್ರತಾ ಪ್ರದೇಶ ಭತ್ಯೆಗಳು ಮತ್ತು ವೈದ್ಯಕೀಯ ಸೌಲಭ್ಯಗಳ ಜೊತೆಗೆ ವಿಧಾನಸಭಾ ಅಧಿವೇಶನಗಳಿಗೆ ಹಾಜರಾಗಲು ಒಂದು ದಿನದ ವೇತನವನ್ನು ಒಳಗೊಂಡಿದೆ. ಭತ್ಯೆಗಳ ಸಂಖ್ಯೆ ಮತ್ತು ಪ್ರಕಾರವು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.</p>



<p>ಭತ್ಯೆಗಳನ್ನು ಹೊರತುಪಡಿಸಿ ಸಿದ್ದರಾಮಯ್ಯ ಅವರ ಸಂಬಳ 1.5 ಲಕ್ಷ ರೂ. (ಹೆಚ್ಚಳದ ನಂತರ). ವಿವಿಧ ಭತ್ಯೆಗಳನ್ನು ಸೇರಿಸಿದರೆ ತಿಂಗಳಿಗೆ ಒಟ್ಟು 3 ಲಕ್ಷ ರೂ.</p>



<p>ಅದೇ ರೀತಿ, ಶಾಸಕರು ತಿಂಗಳಿಗೆ 1.25 ಲಕ್ಷ ರೂ. ಗಳಿಸುತ್ತಾರೆ ಮತ್ತು 25,000 ರೂ. ಪ್ರದೇಶ ಭತ್ಯೆ, ಪ್ರತಿ ಕಿ.ಮೀ.ಗೆ 35 ರೂ. ಪ್ರಯಾಣ ಭತ್ಯೆ ಮತ್ತು ವಿಧಾನಸಭಾ ಅಧಿವೇಶನಗಳ ಸಮಯದಲ್ಲಿ ದಿನಕ್ಕೆ 2,500 ರೂ. ಪಡೆಯುತ್ತಾರೆ.</p>



<p>ಹೆಚ್ಚುವರಿಯಾಗಿ, ಅವರಿಗೆ ಕ್ಷೇತ್ರ ಅಭಿವೃದ್ಧಿಗಾಗಿ ವಾರ್ಷಿಕವಾಗಿ 2 ಕೋಟಿ ರೂ.ಗಳನ್ನು ನಿಗದಿಪಡಿಸಲಾಗುತ್ತದೆ.</p>



<p>ಕರ್ನಾಟಕ ಸಚಿವರ ವೇತನ ಮತ್ತು ಭತ್ಯೆ (ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಶಾಸಕಾಂಗ ವೇತನ, ಪಿಂಚಣಿ ಮತ್ತು ಭತ್ಯೆ (ತಿದ್ದುಪಡಿ) ಮಸೂದೆಯನ್ನು ಯಾವುದೇ ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು, ವಿರೋಧ ಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.</p>



<p>&#8220;ಜೀವನ ವೆಚ್ಚದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಮುಖ್ಯಮಂತ್ರಿ ಸಚಿವರು, ರಾಜ್ಯ ಸಚಿವರು ಮತ್ತು ಉಪ ಮಂತ್ರಿಗಳ ವೇತನ ಮತ್ತು ಭತ್ಯೆಗಳನ್ನು ಬಹಳ ಸಮಯದಿಂದ ಪರಿಷ್ಕರಿಸಲಾಗಿಲ್ಲ,&#8221; ಎಂದು ಮಸೂದೆಯಲ್ಲಿ ಹೇಳಲಾಗಿದೆ.</p>
]]></content:encoded>
					
		
		
			</item>
		<item>
		<title>ಯಾದಗಿರಿ ಅತ್ಯಾಚಾರ ಪ್ರಕರಣ&#124; ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ: ಜಿ. ರಾಮಕೃಷ್ಣ</title>
		<link>https://peepalmedia.com/one-justice-for-the-poor-another-for-the-rich-in-rape-cases-gramakrishna/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 26 Feb 2025 05:34:58 +0000</pubDate>
				<category><![CDATA[ಯಾದಗಿರಿ]]></category>
		<category><![CDATA[ರಾಜ್ಯ]]></category>
		<category><![CDATA[CM]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[protest]]></category>
		<category><![CDATA[rape case]]></category>
		<category><![CDATA[Siddaramaiah]]></category>
		<category><![CDATA[yadagiri]]></category>
		<guid isPermaLink="false">https://peepalmedia.com/?p=54483</guid>

					<description><![CDATA[ಯಾದಗಿರಿ ಜಿಲ್ಲೆಯಲ್ಲಿ ಚಿಂದಿ ಆಯಲು ತೆರಳಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಫೆಬ್ರವರಿ 25, ಮಂಗಳವಾರ ಸಂಜೆ 5ಗಂಟೆಗೆ ವಿವಿಧ ಜನಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.&#160; ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು [&#8230;]]]></description>
										<content:encoded><![CDATA[
<p>ಯಾದಗಿರಿ ಜಿಲ್ಲೆಯಲ್ಲಿ ಚಿಂದಿ ಆಯಲು ತೆರಳಿದ್ದ ಬುಡ್ಗ ಜಂಗಮ ಅಲೆಮಾರಿ ಸಮುದಾಯದ ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಫೆಬ್ರವರಿ 25, ಮಂಗಳವಾರ ಸಂಜೆ 5ಗಂಟೆಗೆ ವಿವಿಧ ಜನಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.&nbsp;</p>



<p>ಹಿರಿಯ ಚಿಂತಕ ಜಿ ರಾಮಕೃಷ್ಣ ಅವರು ಮಾತನಾಡಿ, “ಈ ದೇಶದಲ್ಲಿ ನಡೆಯುತ್ತಿರುವ ಅನಾಚಾರ, ಅತ್ಯಾಚಾರ ಗಮನಿಸಿದರೆ ನಾವು ಮನುಷ್ಯರಾಗಿ ಬದುಕುತ್ತಿದ್ದೇವಾ ಎಂಬ ಅನುಮಾನ ಮೂಡುತ್ತಿದೆ. </p>



<p>ಉತ್ತರ ಪ್ರದೇಶದಲ್ಲಿ ದಲಿತ ಹೆಣ್ಣು ಮಗಳು ನದಿಯಲ್ಲಿ ಸ್ನಾನ ಮಾಡಲು ಇಳಿದಳೆಂದು ಕ್ರೂರಿಗಳು ಆಕೆಯನ್ನು ಬಡಿಗೆಗಳಿಂದ ಹೊಡೆದು ಸಾಯಿಸಿದ್ದರು. ಇಂಥವರಿಗೆ ರಕ್ಷಣೆ ಕೊಡುವ ಸಂಸ್ಕೃತಿ ನಮ್ಮ ದೇಶದಲ್ಲಿ ಇದೆ. ಇಂತಹ ಸಮಾಜದಲ್ಲಿ ನಾವಿನ್ನೂ ಫ್ಯಾಸಿಸ್ಟ್‌ ಆಗಿದ್ದೀವಾ, ಅರೆ ಫ್ಯಾಸಿಸ್ಟ್ ಆಗಿದ್ದೀವಾ, ಸೆಮಿ ಫ್ಯಾಸಿಸ್ಟ್ ಆಗಿದ್ದೀವಾ ಎಂದು ಚರ್ಚೆ ಮಾಡುತ್ತಿದ್ದೇವೆ. </p>



<p>ದೇಶದೆಲ್ಲೆಡೆ ಈಗ ಪುನೀತರಾದ ಜನರೇ ಇರುವುದು. ಗಂಗೆಯಲ್ಲಿ ಸ್ನಾನ ಮಾಡಿ ಬಂದಿದ್ದಾರೆ. ಐವತ್ತು ಕೋಟಿ ಜನರಲ್ಲಿ ನಲುವತ್ತು ಕೋಟಿ ಜನರಿಗೆ ಒಂದು ತರಹದ ನೀರು, ಇನ್ನು ಹತ್ತು ಕೋಟಿ ಜನರಿಗೆ ಒಂದು ತರಹದ ನೀರು. ನಾರಾಯಣ ಮೂರ್ತಿ, ಸುಧಾಮೂರ್ತಿ ತರದವರಿಗೆ ಬೇಲಿ ಕಟ್ಟಿ ಚೆನ್ನಾಗಿ ನೀರು ಹರಿಯುವ ಜಾಗ, ಸಾಮಾನ್ಯ ಜನರಿಗೆ ಚರಂಡಿ ನೀರು ಸೇರುವ ಜಾಗ.                                                  </p>



<p>ಇದೇ ರೀತಿ ಈ ಅತ್ಯಾಚಾರ ವಿಚಾರದಲ್ಲೂ ಬಡವರಿಗೆ ಒಂದು ನ್ಯಾಯ, ಉಳ್ಳವರಿಗೆ ಮತ್ತೊಂದು ನ್ಯಾಯ ಎಂಬಂತಾಗಿದೆ. ಯಾದಗಿರಿಯೇನು ಬೆಂಗಳೂರಲ್ಲ, ಪುಟ್ಟ ಹಳ್ಳಿ. ಆರೋಪಿಗಳನ್ನು ಪತ್ತೆ ಹಚ್ಚುವುದು ಅಷ್ಟೇವೇನು ಕಷ್ಟ ಅಲ್ಲ. ಆದರೆ, ಇದು ಅಧಿಕಾರಿಗಳಿಗೆ ಬಡವರ ಮೇಲೆ ಇರುವ ಅಸಡ್ಡೆ ತೋರಿಸುತ್ತದೆ” ಎಂದು ಹೇಳಿದರು.&nbsp;</p>



<figure class="wp-block-image size-large"><img fetchpriority="high" decoding="async" width="1024" height="460" src="https://peepalmedia.com/wp-content/uploads/2025/02/alemarisamudaya-1024x460.jpeg" alt="" class="wp-image-54488" srcset="https://peepalmedia.com/wp-content/uploads/2025/02/alemarisamudaya-1024x460.jpeg 1024w, https://peepalmedia.com/wp-content/uploads/2025/02/alemarisamudaya-300x135.jpeg 300w, https://peepalmedia.com/wp-content/uploads/2025/02/alemarisamudaya-768x345.jpeg 768w, https://peepalmedia.com/wp-content/uploads/2025/02/alemarisamudaya-1536x689.jpeg 1536w, https://peepalmedia.com/wp-content/uploads/2025/02/alemarisamudaya-150x67.jpeg 150w, https://peepalmedia.com/wp-content/uploads/2025/02/alemarisamudaya-696x312.jpeg 696w, https://peepalmedia.com/wp-content/uploads/2025/02/alemarisamudaya-1068x479.jpeg 1068w, https://peepalmedia.com/wp-content/uploads/2025/02/alemarisamudaya.jpeg 1600w" sizes="(max-width: 1024px) 100vw, 1024px" /></figure>



<p>ಇದೇ ವೇಳೆ ಮಾತನಾಡಿದ ದಲಿತ ಮುಖಂಡ ವಡ್ಡಗೆರೆ ನಾಗರಾಜಯ್ಯ, “ಇಬ್ಬರು ಹೆಣ್ಣು ಮಕ್ಕಳ ಅತ್ಯಾಚಾರ ಕೊಲೆ ನಡೆದು ಹತ್ತು ದಿನಗಳಾಗಿವೆ. ಆದರೆ, ಈವರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ, ಇದು ಹಲವು ಅನುಮಾನಗಳಿವೆ ಎಡೆ ಮಾಡಿಕೊಟ್ಟಿದೆ. </p>



<p>ಕರ್ನಾಟಕ ಎಂದಲ್ಲ, ಇಡೀ ದೇಶದಲ್ಲಿ ಪ್ರಸ್ತುತ ದಲಿತ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೆ, ಸರ್ಕಾರಗಳು, ಪೊಲೀಸರು ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಕರಣದಲ್ಲಿ ಸಂತ್ರಸ್ತ ಕುಟುಂಬಗಳ ಪರ ನಿಲ್ಲಬೇಕು. ಅತ್ಯಾಚಾರವೆಸಗಿ, ಕೊಲೆಗೈದವರನ್ನು ತಕ್ಷಣ ಬಂಧಿಸಬೇಕು” ಎಂದು ಒತ್ತಾಯಿಸಿದರು.</p>



<p>ಬರಹಗಾರ, ದಲಿತ ಮುಖಂಡ ಹುಲಿಕುಂಟೆ ಮೂರ್ತಿ ಮಾತನಾಡಿ, “ಆರೋಪಿಗಳು ಸಂತ್ರಸ್ತರ ಮನೆಗಳ ಬಳಿ ಹೋಗಿ ಧಮ್ಕಿ ಹಾಕಿರುವುದು ಗೊತ್ತಾಗಿದೆ. ಆದರೆ, ಪೊಲೀಸರು ಆರೋಪಿಗಳು ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಿಮಗೆ ಬಾಬಾ ಸಾಹೇಬರ ಮೇಲೆ ನಿಜಕ್ಕೂ ಗೌರವ ಇದ್ದರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಮನವಿ ಮಾಡಿದರು.</p>



<p>“ಇಡೀ ದೇಶದಲ್ಲಿ ಯಾವುದೇ ಸರ್ಕಾರ, ಅಲೆಮಾರಿಗಳಿಗೆ ಇದುವರೆಗೆ ಯಾವುದೇ ರೀತಿಯಲ್ಲಿ ರಕ್ಷಣೆ ಕೊಟ್ಟಿಲ್ಲ, ಮನೆ ಕೊಟ್ಟಿಲ್ಲ. ಯಾಕೆ ಅಲೆಮಾರಿಗಳಾಗಿದ್ದಾರೆ ಎಂಬ ಮೂಲ ಪ್ರಶ್ನೆ ಕೇಳಬೇಕಾಗಿದೆ. ಯಾರೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಿಲ್ಲ. </p>



<p>ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ನಾವು ಯಾಕೆ ಹೀಗಿದ್ದೇವೆ? ನಾವೀಗ ಒಟ್ಟಾಗಿ ಅಲೆಮಾರಿಗಳಿಗೆ ಭೂಮಿ ಕೊಡಿ ನೌಕರಿ ಕೊಡಿ ಎಂದು ಕೇಳಬೇಕಿದೆ. ಯಾದಗಿರಿಯ ಅತ್ಯಾಚಾರ ಪ್ರಕರಣದಲ್ಲಿ ಅರೋಪಿಗಳ ಬಂಧನ ಸರ್ಕಾರದ ಕೈಯಲ್ಲಿ ಆಗಲ್ಲ ಅಂತಲ್ಲ, ಪೊಲೀಸರು ಮನಸ್ಸು ಮಾಡಿದರೆ ಆರೋಪಿಗಳನ್ನು ಬಂಧಿಸುವುದು ಕಷ್ಟವೇನಲ್ಲ. ಹಾಗಾಗಿ, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು” ಎಂದು ಅಲೆಮಾರಿ ಸಮುದಾಯಗಳ ಹೋರಾಟಗಾರರು ಎಚ್ಚರಿಸಿದರು.</p>



<p>ಜೊತೆಗೆ ದೆಹಲಿಯ ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ದೇಶದೆಲ್ಲೆಡೆ ಸಾರ್ವಜನಿಕ ವಲಯದಲ್ಲಿ ಭುಗಿಲೆದ್ದ ಆಕ್ರೋಶ ಮತ್ತು ಅದಕ್ಕೆ ಸರ್ಕಾರ ಸ್ಪಂದಿಸಿ ರೀತಿಯಲ್ಲಿ ಬಡ, ದಲಿತ ಸಮುದಾಯಗಳ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಕೊಲೆ ನಡೆದಾಗ ಸ್ಪಂದಿಸದಿರುವುದು ದುರದೃಷ್ಟಕರ ಎಂದು ವಿವಿಧ ಸಂಘಟನೆಗಳ ಮುಖಂಡರು ವಿಷಾಧ ವ್ಯಕ್ತಪಡಿಸಿದರು.</p>
]]></content:encoded>
					
		
		
			</item>
		<item>
		<title>ಮೈಕ್ರೋ ಫೈನಾನ್ಸ್‌ಗಳ ವಸೂಲಿ ಕ್ರಮಕ್ಕೆ ಹೆದರಿ ಆತ್ಮಹತ್ಯೆ ಬೇಡ, ಸರ್ಕಾರ ನಿಮ್ಮ ಜೊತೆಗಿದೆ: ಸಿದ್ದರಾಮಯ್ಯ ಕರೆ</title>
		<link>https://peepalmedia.com/dont-commit-suicide-the-government-is-with-you-file-a-complaint-siddaramaiahs-appeal/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 31 Jan 2025 08:24:02 +0000</pubDate>
				<category><![CDATA[ರಾಜ್ಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[micro finance]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=53172</guid>

					<description><![CDATA[ಮೈಸೂರು ಜ 31: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ [&#8230;]]]></description>
										<content:encoded><![CDATA[
<ul class="wp-block-list">
<li>ಕೃಷಿ-ಕೈಗಾರಿಕೆ ಅಭಿವೃದ್ಧಿಯಾದರೆ ನಾಡಿನ ಅಭಿವೃದ್ಧಿ</li>



<li>ಸುತ್ತೂರು ಕ್ಷೇತ್ರ ಕೇವಲ ಧಾರ್ಮಿಕ ಕ್ಷೇತ್ರ ಅಲ್ಲ. ಅಧ್ಯಾತ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರವೂ ಹೌದು</li>



<li>ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ </li>



<li>ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ<br></li>
</ul>



<p><strong>ಮೈಸೂರು ಜ 31:</strong> ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು<br>ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.</p>



<p>ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>



<p>ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು.</p>



<p>ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ . ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ‌ ಅವರು ಮಾತು ಇವತ್ತಿಗೂ ಸತ್ಯ ಎಂದರು.</p>



<p>ಬಸವಣ್ಣನವರು 850 ವರ್ಷಗಳ ಹಿಂದೆ &#8220;ಇವ ನಾರವ ಎಂದು ಪ್ರಶ್ನಿಸದೆ, ಇವ ನಮ್ಮವ&#8221; ಎಂದು ಹೇಳಿ ಅಂದಿದ್ದರು. ಆದರೂ ಇವತ್ತಿಗೂ ನಾವು ಜಾತಿ ಕೇಳುವುದನ್ನು ನಿಲ್ಲಿಸಿಲ್ಲ, ಜಾತಿ-ಧರ್ಮದ ಅನಿಷ್ಠ ತಾರತಮ್ಯವನ್ನು ಇವತ್ತಿಗೂ ಕಾಣುತ್ತೇನೆ ಎಂದರು.</p>



<p>ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ. ಅದಕ್ಕೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯಗೊಳಿಸಿದೆ ಎಂದರು.</p>



<p>ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂಥಾ ಮೌಡ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗಾದಾಗ ಅವರ ವಿದ್ಯೆಗೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.</p>



<p>ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.</p>



<p>ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದರು.</p>



<p>ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು.</p>



<p>ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ ಎಂದರು.</p>



<p>ಬರಿ ಬಾಯಿ ಮಾತಿನಲ್ಲಿ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆಶಯಗಳು ಜಾರಿ ಆಗುವುದಿಲ್ಲ. ಆಶಯಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ಈ ಉದ್ದೇಶದಿಂದಲೇ ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು ಎಂದು ಕರೆ ನೀಡಿದರು.</p>



<p>ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದಾಗ ರಾಜ್ಯದ ಬೊಕ್ಕಸ ದಿವಾಳಿ ಆಗತ್ತೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯವರೇ ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಹೊಡೆದು ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಘೋಷಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.</p>



<p>ಆರ್ಥಿಕ, ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ಹೋಗಲು ಸಾಧ್ಯ. ನಮ್ಮ ಗ್ಯಾರಂಟಿಗಳು ಪ್ರತೀ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಚಲನೆ ನೀಡಿವೆ. ಜನರ ಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿದ್ದರಿಂದಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಸದೃಢವಾಗಿದೆ ಎಂದರು.</p>



<p>ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದರು.</p>



<p><strong>ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ</strong></p>



<p>ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ. ಕಾನೂನು ಕ್ರಮ ತಗೊತೀವಿ ಎಂದು ಸಿದ್ದರಾಮಯ್ಯ ಅವರು ಕರೆ ನೀಡಿದರು.</p>
]]></content:encoded>
					
		
		
			</item>
		<item>
		<title>ಮೂಡ ಹಗರಣ: ಸಿದ್ದರಾಮಯ್ಯ ಪತ್ನಿ, ಬಿಎಸ್ ಸುರೇಶ್‌ಗೆ ನೀಡಲಾದ ಇಡಿ ನೋಟಿಸ್‌ಗೆ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್</title>
		<link>https://peepalmedia.com/muda-scam-karnataka-high-court-stays-ed-notices-issued-to-siddaramaiahs-wife-bs-suresh/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 28 Jan 2025 07:31:42 +0000</pubDate>
				<category><![CDATA[ರಾಜ್ಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bs suresh]]></category>
		<category><![CDATA[ED]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Karnataka High Court]]></category>
		<category><![CDATA[muda]]></category>
		<category><![CDATA[muda scam]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=52968</guid>

					<description><![CDATA[ಬೆಂಗಳೂರು: ಮೂಡ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಬಿಎಸ್ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಹೊರಡಿಸಿದ್ದ ಸಮನ್ಸ್‌ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ತಡೆ ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಫೆಬ್ರವರಿ 10 ರಂದು ಮುಂದಿನ ವಿಚಾರಣೆಯವರೆಗೆ ಸಮನ್ಸ್‌ಗೆ ತಡೆ ನೀಡಿದೆ. ಈ ವಿಚಾರದಲ್ಲಿ ಕೇಂದ್ರ ಕಾನೂನು ಜಾರಿ ಸಂಸ್ಥೆ ಮುಂಜಾನೆ ಸಮನ್ಸ್ ಜಾರಿ ಮಾಡಿತ್ತು. ಮಂಗಳವಾರ ಪಾರ್ವತಿ ಅವರನ್ನು ವಿಚಾರಣೆಗೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ಮೂಡ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಬಿಎಸ್ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಹೊರಡಿಸಿದ್ದ ಸಮನ್ಸ್‌ಗೆ ಕರ್ನಾಟಕ ಹೈಕೋರ್ಟ್ ಸೋಮವಾರ ತಡೆ ನೀಡಿದೆ.</p>



<p>ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಫೆಬ್ರವರಿ 10 ರಂದು ಮುಂದಿನ ವಿಚಾರಣೆಯವರೆಗೆ ಸಮನ್ಸ್‌ಗೆ ತಡೆ ನೀಡಿದೆ.</p>



<p>ಈ ವಿಚಾರದಲ್ಲಿ ಕೇಂದ್ರ ಕಾನೂನು ಜಾರಿ ಸಂಸ್ಥೆ ಮುಂಜಾನೆ ಸಮನ್ಸ್ ಜಾರಿ ಮಾಡಿತ್ತು. ಮಂಗಳವಾರ ಪಾರ್ವತಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿತ್ತಾದರೂ, ಸುರೇಶ್‌ಗೆ ಯಾವಾಗ ಸಮನ್ಸ್ ನೀಡಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.</p>



<p>ನಂತರ ಪಾರ್ವತಿ ಮತ್ತು ಸುರೇಶ್ ಅವರು ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.</p>



<p>ವಿಚಾರಣೆಯಲ್ಲಿ, ಜಾರಿ ನಿರ್ದೇಶನಾಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್, ಪೂರ್ವಾಪೇಕ್ಷಿತ ಅಪರಾಧಗಳ ವಿವರಗಳನ್ನು ಸಂಗ್ರಹಿಸಲು&nbsp;<a href="https://www.livelaw.in/high-court/karnataka-high-court/karnataka-high-court-cbi-transfer-of-investigation-muda-scam-karnataka-cm-siddaramaiah-282141" rel="noreferrer noopener" target="_blank">ಸಮನ್ಸ್ ನೀಡುವ</a>&nbsp;ಅಧಿಕಾರವಿದೆ ಎಂದು ಹೇಳಿದರು ಎಂದು&nbsp;<em>ಲೈವ್ ಲಾ</em>&nbsp;ವರದಿ ಮಾಡಿದೆ.</p>



<p>ಆದರೆ ಈ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬಾಕಿ ಇರುವವರೆಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ತಿಳಿಸಿದರು.</p>



<p>ಈ ನ್ಯಾಯಾಲಯದ ಮುಂದೆ ಬಾಕಿ ಉಳಿದಿರುವ ಪ್ರಕ್ರಿಯೆಗಳಿಗೆ ಅಡ್ಡಿಯಾಗುವುದರಿಂದ ಸಮನ್ಸ್‌ಗೆ ತಡೆ ನೀಡಲಾಗುವುದು ಎಂದು ನಾಗಪ್ರಸನ್ನ ಹೇಳಿದರು.</p>



<p>ರಾಜ್ಯ ಸರ್ಕಾರದ ಯೋಜನೆಯಡಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 2021 ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಪ್ರದೇಶದಲ್ಲಿ 14 ಅತ್ಯಧಿಕ ಮೌಲ್ಯದ ವಸತಿ ನಿವೇಶನಗಳನ್ನು ಹಂಚಿಕೆ ಮಾಡಿರುವ ಆರೋಪ ರಾಜ್ಯದಾದ್ಯಂತ ಸಂಚಲನ ಸೃಷ್ಟಿಸಿತ್ತು. </p>



<p>ನಗರದ ಇನ್ನೊಂದು ಭಾಗದಲ್ಲಿ ಪಾರ್ವತಿ ಒಡೆತನದಲ್ಲಿದ್ದ 3.1 ಎಕರೆ ಜಮೀನಿಗೆ ಬದಲಾಗಿ ಇದನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ. ದಲಿತ ಕುಟುಂಬಗಳಿಂದ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.</p>



<p>ಸೆಪ್ಟೆಂಬರ್‌ನಲ್ಲಿ, ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ವಿಚಾರಣೆಗೆ ಒಳಪಡಿಸಲು ನೀಡಿದ್ದ ಅನುಮತಿಯನ್ನು <u>ಹೈಕೋರ್ಟ್</u> ಎತ್ತಿಹಿಡಿದ ನಂತರ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ <u>ಲೋಕಾಯುಕ್ತ ಪೊಲೀಸ್ ತನಿಖೆಗೆ</u> ಆದೇಶ ನೀಡಿತ್ತು.  </p>



<p><a href="https://www.livelaw.in/high-court/karnataka-high-court/karnataka-high-court-hearing-chief-minister-siddaramiah-against-governor-prosecution-sanction-muda-corruption-case-267034" rel="noreferrer noopener" target="_blank"><u></u></a><a href="https://www.ptinews.com/detail/national/MUDA%E2%80%93scam%E2%80%93-Karnataka-Guv-grants-sanction-for-prosecution-against-CM-Siddaramaiah/1745020" rel="noreferrer noopener" target="_blank"><u>ಗೆಹ್ಲೋಟ್ ಅವರ ನಿರ್ಧಾರವನ್ನು ಪ್ರಶ್ನಿಸಿ&nbsp;</u></a><a href="https://www.livelaw.in/high-court/karnataka-high-court/karnataka-high-court-hearing-chief-minister-siddaramiah-against-governor-prosecution-sanction-muda-corruption-case-267034" rel="noreferrer noopener" target="_blank"><u>ಸಿದ್ದರಾಮಯ್ಯ ಅವರು</u></a>&nbsp;ಆಗಸ್ಟ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಇದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಸಂಘಟಿತ ಪ್ರಯತ್ನದ ಭಾಗವಾಗಿದೆ ಎಂದು ವಾದಿಸಿದ್ದರು.</p>



<p>ಸೆಪ್ಟೆಂಬರ್ 27ರಂದು ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ, ಪಾರ್ವತಿ, ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಎಂಬವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.</p>



<p>ಸ್ವಾಮಿ ಅವರು ದೇವರಾಜು ಎಂಬುವರಿಂದ ವಿವಾದಿತ ಜಮೀನನ್ನು ಖರೀದಿಸಿ ಪಾರ್ವತಿಗೆ ಉಡುಗೊರೆಯಾಗಿ ನೀಡಿದ್ದರು.</p>



<p>ಮೂರು ದಿನಗಳ ನಂತರ, ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಆಧರಿಸಿ <u>ಜಾರಿ ನಿರ್ದೇಶನಾಲಯವು ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ.</u></p>



<p>ಅಕ್ಟೋಬರ್ 1 ರಂದು ಪಾರ್ವತಿ ಅವರು ನಿವೇಶನಗಳನ್ನು ಹಿಂದಿರುಗಿಸಲು ಮುಂದಾದರು. ನಂತರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು <u>14 ನಿವೇಶನಗಳನ್ನು ವಾಪಸ್ ಪಡೆಯುವುದಾಗಿ</u> ತಿಳಿಸಿದೆ .</p>



<p>ಅಕ್ಟೋಬರ್ 2 ರಂದು ಸಿದ್ದರಾಮಯ್ಯ ವಿರುದ್ಧ ದಾಖಲೆಗಳನ್ನು ತಿರುಚಿರುವ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯಕ್ಕೆ ಹೊಸ <u>ದೂರು ದಾಖಲಾಗಿತ್ತು.</u></p>



<p>ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಜಿಲ್ಲಾಧಿಕಾರಿಗಳು ಆ ಸಂದರ್ಭದಲ್ಲಿ ತಿಳಿಸಿದ್ದಕ್ಕೆ&nbsp;ನಗರಾಭಿವೃದ್ಧಿ ಸಚಿವ ಸುರೇಶ್ ಅವರು&nbsp;<a href="https://www.thehindu.com/news/national/karnataka/bjp-mla-seeks-ministers-resignation-over-muda-scam/article68601941.ece" rel="noreferrer noopener" target="_blank"><u>ಕ್ರಮಕೈಗೊಂಡಿಲ್ಲ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.</u></a></p>



<p>ಈ ಹಗರಣವನ್ನು ಮುಚ್ಚಿಹಾಕಲು ಸುರೇಶ್ ಅವರು ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು&nbsp;<a href="https://timesofindia.indiatimes.com/city/mysuru/bjps-nagendra-accuses-minister-suresh-of-protecting-muda-scam-officials/articleshow/116087329.cms" rel="noreferrer noopener" target="_blank"><u>ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ</u></a>&nbsp;ಎಂದು ಹಿಂದುತ್ವವಾದಿ ಪಕ್ಷ ಆರೋಪಿಸಿದೆ .</p>



<p>ಸೋಮವಾರ ಲೋಕಾಯುಕ್ತರು ಈ ಪ್ರಕರಣದ ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ ಎಂದು ಅಪರಿಚಿತ ಅಧಿಕಾರಿಗಳನ್ನು ಉಲ್ಲೇಖಿಸಿ <em>ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.</em></p>



<p><strong>ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ</strong></p>



<p>ಲೋಕಾಯುಕ್ತ ತನಿಖೆಯು ನ್ಯಾಯಯುತವಾಗಿಲ್ಲ ಎಂಬ ಆತಂಕದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧದ ಲೋಕಾಯುಕ್ತ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಸ್ವಯಂ ಪ್ರೇರಿತವಾಗಿ <a href="https://www.barandbench.com/news/litigation/state-siddaramaiah-oppose-plea-seeking-cbi-probe-in-muda-scam" target="_blank" rel="noreferrer noopener"><u>ವರ್ಗಾಯಿಸಲು ಸಾಧ್ಯವಿಲ್ಲ</u></a> ಎಂದು ಕರ್ನಾಟಕ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ತಿಳಿಸಿದೆ ಎಂದು <em>ಬಾರ್ ಮತ್ತು ಪೀಠ</em> ವರದಿ ಮಾಡಿದೆ.</p>



<p>ಪ್ರಕರಣದ ಮೂಲ ದೂರುದಾರರೂ ಆಗಿರುವ ಕಾರ್ಯಕರ್ತರೊಬ್ಬರು ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸುವ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಕೆ ಮಾಡಿದರು.</p>



<p>ರಾಜ್ಯ ಸಂಸ್ಥೆಯಾಗಿದ್ದರೂ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸುತ್ತಿರುವ ಲೋಕಾಯುಕ್ತರು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಸಾಧ್ಯವಾಗದಿರಬಹುದು ಎಂದು ಆರೋಪಿಸಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಮನವಿಯಲ್ಲಿ ಕೋರಲಾಗಿದೆ.</p>



<p>ಲೋಕಾಯುಕ್ತ ಕಾಯ್ದೆಯು ಲೋಕಾಯುಕ್ತಕ್ಕೆ ಮುಖ್ಯಮಂತ್ರಿ ಸೇರಿದಂತೆ ಜನಸೇವಕರು ಮತ್ತು ಸರ್ಕಾರಿ ಅಧಿಕಾರಿಗಳ ತನಿಖೆ ಮಾಡುವ ಅಧಿಕಾರವನ್ನು ನೀಡುತ್ತದೆ ಎಂದು ಸಿಬಲ್ ಪ್ರತಿಪಾದಿಸಿದರು.</p>
]]></content:encoded>
					
		
		
			</item>
		<item>
		<title>ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ</title>
		<link>https://peepalmedia.com/serious-action-against-anti-social-forces-chief-minister-siddaramaiah-warns/</link>
		
		<dc:creator><![CDATA[Peepal Media]]></dc:creator>
		<pubDate>Tue, 21 Jan 2025 08:29:52 +0000</pubDate>
				<category><![CDATA[ರಾಜಕೀಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[fascism]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Rahul Gandhi]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=52636</guid>

					<description><![CDATA[ಬೆಳಗಾವಿ, ಜನವರಿ 21: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು [&#8230;]]]></description>
										<content:encoded><![CDATA[
<pre class="wp-block-code"><code>* <strong>ಅನಾರೋಗ್ಯದ ಕಾರಣ ರಾಹುಲ್ ಗೈರು: </strong>
<strong>* ತಿರುಚಿ ಸುದ್ದಿ ಮಾಡಿದರೆ ಪತ್ರಿಕಾ ವೃತ್ತಿಯ ಬಗ್ಗೆ ಯಾವ ಸಂದೇಶ ಹೋಗುತ್ತದೆ: ಸಿ.ಎಂ ಪ್ರಶ್ನೆ</strong></code></pre>



<p><strong>ಬೆಳಗಾವಿ, ಜನವರಿ 21:</strong> ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.</p>



<p>ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.</p>



<p><strong>ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ</strong></p>



<p>ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.</p>



<p>ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು. ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.</p>



<p>&#8220;<strong>ಕಾಂಗ್ರೆಸ್ ಸಂವಿಧಾನದ ಪರವಾಗಿದೆ</strong>&#8220;</p>



<p>ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>



<p><strong>ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು</strong></p>



<p>ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು. ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಮುಖ್ಯಮಂತ್ರಿಗಳೇ, ತುಳುನಾಡಿನ ಕಂಬಳದಲ್ಲಿನ ಶ್ರೇಣಿಕೃತ ಜಾತಿ ವ್ಯವಸ್ಥೆಯನ್ನು ಗಮನಿಸಿ</title>
		<link>https://peepalmedia.com/chief-minister-note-the-hierarchical-caste-system-in-kambala-tulu-nadu/</link>
		
		<dc:creator><![CDATA[Peepal Media]]></dc:creator>
		<pubDate>Sun, 12 Jan 2025 16:46:35 +0000</pubDate>
				<category><![CDATA[ಅಂಕಣ]]></category>
		<category><![CDATA[bengalure]]></category>
		<category><![CDATA[CM]]></category>
		<category><![CDATA[india]]></category>
		<category><![CDATA[kambala]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=52171</guid>

					<description><![CDATA[ಕಂಬಳಕ್ಕೆ ಜಾತಿ, ಧರ್ಮದ ಬೇಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆ ಸತ್ಯಕ್ಕೆ ದೂರವಾಗಿರುವ ವಿಚಾರ. ಕಂಬಳ ಎನ್ನುವುದು ತುಳುವರ ಜನಪದ ಕ್ರೀಡೆ, ತುಳುವರ ಸಾಂಸ್ಕೃತಿಕ ಆಸ್ಮಿತೆ ಎಂದು ಬಿಂಬಿತವಾಗಿದೆ. ವಾಸ್ತವವಾಗಿ ಕಂಬಳ ಎನ್ನುವುದು ಫ್ಯೂಡಲ್ ವ್ಯವಸ್ಥೆಯ ಪಳೆಯುಳಿಕೆಯಾಗಿದ್ದು, ಈಗಲೂ ಕಂಬಳವನ್ನು ವಿಜೃಂಭಿಸುವುದು ಸಮಾಜದಲ್ಲಿ ಜಾತಿ ಆಧರಿತ ಅಸಮಾನತೆ ಮತ್ತು ಸಾಂಸ್ಕೃತಿಕ ಯಜಮಾನ್ಯದ ಪಾರಂಪರಿಕ ಆಚರಣೆಗಳನ್ನು ಇನ್ನೂ ಜಾರಿಯಲ್ಲಿಡುವ ವ್ಯವಸ್ಥಿತ ಹುನ್ನಾರವಾಗಿದೆ.ಒಂದು ನಿರ್ದಿಷ್ಟ ಜಾತಿಯ ಮೆರೆದಾಟಕ್ಕೆ ಮತ್ತು ಕೆಳಜಾತಿ, ಕೆಳವರ್ಗಗಳ ದಬ್ಬಾಳಿಕೆಗೆ ಮಾಧ್ಯಮವಾಗಿದ್ದ [&#8230;]]]></description>
										<content:encoded><![CDATA[
<p>ಕಂಬಳಕ್ಕೆ ಜಾತಿ, ಧರ್ಮದ ಬೇಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆ ಸತ್ಯಕ್ಕೆ ದೂರವಾಗಿರುವ ವಿಚಾರ. ಕಂಬಳ ಎನ್ನುವುದು ತುಳುವರ ಜನಪದ ಕ್ರೀಡೆ, ತುಳುವರ ಸಾಂಸ್ಕೃತಿಕ ಆಸ್ಮಿತೆ ಎಂದು ಬಿಂಬಿತವಾಗಿದೆ. ವಾಸ್ತವವಾಗಿ ಕಂಬಳ ಎನ್ನುವುದು ಫ್ಯೂಡಲ್ ವ್ಯವಸ್ಥೆಯ ಪಳೆಯುಳಿಕೆಯಾಗಿದ್ದು, ಈಗಲೂ ಕಂಬಳವನ್ನು ವಿಜೃಂಭಿಸುವುದು ಸಮಾಜದಲ್ಲಿ ಜಾತಿ ಆಧರಿತ ಅಸಮಾನತೆ ಮತ್ತು ಸಾಂಸ್ಕೃತಿಕ ಯಜಮಾನ್ಯದ ಪಾರಂಪರಿಕ ಆಚರಣೆಗಳನ್ನು ಇನ್ನೂ ಜಾರಿಯಲ್ಲಿಡುವ ವ್ಯವಸ್ಥಿತ ಹುನ್ನಾರವಾಗಿದೆ.<br>ಒಂದು ನಿರ್ದಿಷ್ಟ ಜಾತಿಯ ಮೆರೆದಾಟಕ್ಕೆ ಮತ್ತು ಕೆಳಜಾತಿ, ಕೆಳವರ್ಗಗಳ ದಬ್ಬಾಳಿಕೆಗೆ ಮಾಧ್ಯಮವಾಗಿದ್ದ ಕಂಬಳವನ್ನು ಇಡೀ ತುಳುನಾಡಿನ ಸಾಂಸ್ಕೃತಿಕ ಐಡೆಂಟಿಟಿಯ ರೂಪದಲ್ಲಿ ಬಿಂಬಿಸಲಾಗುತ್ತಿದೆ. ರೈತರು ತಮ್ಮ ಕೃಷಿ ಕಾಯಕದ ಬಿಡುವಿನ ವೇಳೆಯಲ್ಲಿ, ಕಂಬಳದ ಗದ್ದೆಯಲ್ಲಿ ಕೋಣಗಳನ್ನು ಓಡಿಸುವುದರ ಮೂಲಕ ಮನರಂಜನೆಯನ್ನು ಪಡೆದುಕೊಳ್ಳುತ್ತಾರೆ ಎಂಬುದಾಗಿ ಕಂಬಳದ ಸಮರ್ಥನೆ ಮಾಡಲಾಗುತ್ತಿದೆ. ಆದರೆ, ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಂಬಳದಲ್ಲಿ ಕಂಡುಬರುವ <code>ಸ್ಪರ್ಧೆ’ ಅಥವಾ</code>ಕ್ರೀಡೆ’ ಅನ್ನುವುದು ಕುಂಟಾಬಿಲ್ಲೆ ಅಥವಾ ಕಬ್ಬಡ್ಡಿಯಂತಹ ಸಹಜ ಮನೋರಂಜಕ ಪಂದ್ಯಾಟವಲ್ಲ. ಬದಲಿಗೆ ಅದು ಉಳ್ಳವರ ಆಟ- ಮೇಲಾಟದ, ಪೌರುಷದ ಮತ್ತು ಯಜಮಾನಿಕೆಯ ಅಭಿವ್ಯಕ್ತಿಯಾಗಿದೆ. ಮೂಲದಲ್ಲಿ ಕಂಬಳ ಬಂಟರ ಗುತ್ತಿನ ಅಧಿಕಾರವನ್ನು ಪ್ರತಿಷ್ಠಾಪಿಸಲು ಮತ್ತು ಅದಕ್ಕೆ ಸಾಂಸ್ಕೃತಿಕ ಮಾನ್ಯತೆಯನ್ನು ದಕ್ಕಿಸಿಕೊಳ್ಳುವ ಸಲುವಾಗಿ ಸೃಷ್ಠಿಯಾದ ಒಂದು ಆಚರಣೆಯಾಗಿದೆ. ಅಂದರೆ ಕಂಬಳ ಪ್ರಾರಂಭವಾಗಿದ್ದೇ ಒಕ್ಕಲು ರೈತರನ್ನು ಸುಲಿಯಲು ಮತ್ತು ಕೆಳ ಸಮುದಾಯಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಸಲುವಾಗಿ. ತುಳುನಾಡಿನಲ್ಲಿ ಜಾತಿ ಶ್ರೇಣೀಕರಣದ ಉಳಿವು ಮತ್ತು ಮುಂದುವರಿಕೆಯಲ್ಲಿ ಕಂಬಳದ ಪಾತ್ರ ಅಧ್ಯಯನಾರ್ಹ ವಿಚಾರವಾಗಿದೆ.<br>ಮೂಲದಲ್ಲಿ ಕಂಬಳದ ಕೋಣಗಳು ಬಂಟರ ಗುತ್ತಿನ ಮನೆಗಳಲ್ಲಿ ಮಾತ್ರ ಇರುತ್ತಿದ್ದವು. ಉಳುಮೆ ಮಾಡದ ಕೋಣಗಳನ್ನು ಕಂಬಳಕ್ಕಾಗಿಯೇ ಸಾಕುವುದು ಗುತ್ತಿನ ಮನೆಯ ಪ್ಯಾಶನ್ ಆಗಿತ್ತು. ದಷ್ಟಪುಷ್ಟವಾಗಿ ಕೊಬ್ಬಿರುತ್ತಿದ್ದ ಕಂಬಳದ ಕೋಣಗಳು ಗುತ್ತಿನ ಮನೆಗಳ ಗತ್ತಿಗೆ, ಪೌರುಷಕ್ಕೆ ಸಾಕ್ಷಿಯಾಗಿರುತ್ತಿದ್ದವು. ಅಂತಹ ಕೋಣಗಳನ್ನು ಸಾಕಿ ಸಲಹುವ ತಾಕತ್ತಿಲ್ಲದ ಬಡ ಹಾಗೂ ಸಣ್ಣ ರೈತರ, ಒಕ್ಕಲುದಾರರ ಮತ್ತು ಕೆಳಜಾತಿಗಳ ನಡುವೆ ಕಂಬಳ ಬಂಟರ ಗುತ್ತಿನ ಮನೆಗಳಿಗೆ ಹಿರಿಮೆಯನ್ನೂ, ಫ್ಯೂಡಲ್ ಅಧಿಕಾರದ ಛತ್ರವನ್ನೂ ನೀಡುತಿತ್ತು ; ಮತ್ತು ಇದೇ ಫ್ಯೂಡಲ್ ಅಧಿಕಾರದ ಬಲದಲ್ಲಿ ಗುತ್ತಿನ ಮನೆಗಳು ಸಮುದಾಯಗಳ ಸಂಪನ್ಮೂಲ ಹಾಗೂ ಉತ್ಪಾದನೆಯ ಮೇಲೂ ನಿಯಂತ್ರಣ ಸಾಧಿಸುತ್ತಿದ್ದವು. ಕಂಬಳದ ಕೋಣಗಳನ್ನು ಕೊಬ್ಬಿಸಲು, ಅವುಗಳಿಗೆ ಅಕ್ಕಿಯಲ್ಲಿ ಗಂಜಿ ಮಾಡಿ ತಿನ್ನಿಸಲು ಅಕ್ಕಿ, ದಾನ್ಯಗಳನ್ನು ಒಕ್ಕಲಿನ ರೈತರಿಂದ ಸಂಗ್ರಹಿಸಿಲಾಗುತ್ತಿತ್ತು. ಕೋಣಗಳಿಗೆ ತೆಂಗಿನ ಎಣ್ಣೆ ಹಚ್ಚಿ ಆರೈಕೆ ಮಾಡಲೆಂದೇ ಬಿಲ್ಲವರು, ದಲಿತರು ಮತ್ತಿತರ ಕೆಳವರ್ಗಗಳ ಹತ್ತಾರು ಸಂಖ್ಯೆಯ ಆಳುಗಳನ್ನು ನೇಮಿಸಿಕೊಳ್ಳಲಾಗುತ್ತಿತ್ತು. ಒಕ್ಕಲುದಾರ ಬಡ ರೈತ ಹಾಗೂ ಕೆಳಜಾತಿಗಳ ಶ್ರಮ ಹಾಗೂ ಸಂಪನ್ಮೂಲಗಳ ಮೇಲೆ ಹತೋಟಿ ಸಾಧಿಸಲು ಕಂಬಳ ಒಂದು ಮಾಧ್ಯಮದಂತೆ ಬಳಕೆಯಾಗುತಿತ್ತು. ಹೀಗಾಗಿಯೇ ಆ ಕಾಲದಲ್ಲಿ ರೈತ ಹಸಿವಿನಿಂದ ಸಾಯುತ್ತಿದ್ದರೂ ಊರ ಗುತ್ತಿನ ಕಂಬಳದ ಕೋಣಗಳಿಗೆ ಅಕ್ಕಿ ಗಂಜಿ, ಹುರುಳಿ ಕಾಳಿನ ಗಂಜಿಗೆ ಕೊರತೆಯಾಗುತ್ತಿರಲಿಲ್ಲ. ಹೀಗೆ ಕಂಬಳ ಜಾತಿ ಶ್ರೇಣೀಕರಣದ ಅಸಮಾನ ಮತ್ತು ಶೋಷಕ ಸ್ವರೂಪದೊಂದಿಗೆ ಅವಿಭಾಜ್ಯ ಸಂಬಂಧವನ್ನು ಹೊಂದಿದೆ. ಹಲವು ಅಮಾನವವೀಯ ಅಸ್ಪೃಶ್ಯತಾ ಆಚರಣೆಗಳು ಮತ್ತು ಅಜಲು ಪದ್ದತಿ ಈ ಕಂಬಳ ಕ್ರೀಡೆಯ ಮೂಲಕ ತೀರಾ ಇತ್ತಿಚ್ಚಿನವರೆಗೂ ನಡೆಯುತ್ತಿದ್ದವು.<br>ಕಂಬಳ ಅನ್ನೋದು ಹಲವು ಊರಿನ ಗುತ್ತು ಮನೆತನಗಳ ನಡುವೆ ನಡೆಯುತ್ತಿದ್ದ ಪ್ರತಿಷ್ಟಿತ ಸ್ಪರ್ಧೆಯಾಗಿದ್ದರಿಂದ ಪ್ರತಿಸ್ಪರ್ಧಿ ಗುತ್ತಿನ ಜನರು ಬಂದು ಕಂಬಳದ ಗದ್ದೆಯನ್ನು ಹಾಳು ಮಾಡಬಹುದು ಎಂಬ ಕಾರಣಕ್ಕಾಗಿ ಕೊರಗ ಎಂಬ ಅತಿ ಶೋಷಿತ ಸಮುದಾಯ <code>ಪನಿ ಕುಲ್ಲುನು’ ಎಂಬ ಸಂಪ್ರದಾಯವನ್ನು ಆಚರಿಸಬೇಕಿತ್ತು.</code>ಪನಿ ಕುಲ್ಲುನು’ ಅಂದರೆ ಕೊರಗರು ತಮ್ಮ ಹೆಂಡತಿ ಮಕ್ಕಳ ಜೊತೆ ಇಡೀ ರಾತ್ರಿ ಕಂಬಳ ಗದ್ದೆಯನ್ನು ಕಾಯಬೇಕು. ಇದಕ್ಕಿಂತಲೂ ಅಮಾನುಷವೆಂದರೆ, ಕಂಬಳ ನಡೆಯುವ ಒಂದೆರಡು ಗಂಟೆಗಳ ಮೊದಲು ಕಂಬಳ ಗದ್ದೆಯಲ್ಲಿ ಕೊರಗರು ಓಡಬೇಕು. ಕಂಬಳ ಗದ್ದೆಯಲ್ಲಿ ಗುತ್ತಿನ ಮನೆಯ ವೈರಿಗಳು ಗಾಜು, ಕಲ್ಲುಗಳನ್ನು ಹಾಕಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಕೊರಗರು ಓಡಿ ಪರಿಶೀಲನೆ ಮಾಡಬೇಕು. ಗುತ್ತಿನ ಕೊಣಗಳಿಗೆ ಗಾಜು ಚುಚ್ಚುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತದೆ. ಜಮೀನ್ದಾರಿ ಕುಟುಂಬಗಳ ಮಧ್ಯೆ ನಡೆಯುವ ಪಕ್ಕಾ ಫ್ಯೂಡಲ್ ಕ್ರೀಡೆಯಾಗಿರುವ ಕಂಬಳ ಈಗ ಸ್ವರೂಪದಲ್ಲಿ ಸ್ವಲ್ಪ ಮಾರ್ಪಾಡುಗಳನ್ನು ಹೊಂದಿದೆಯಾದರೂ ಆಳದಲ್ಲಿ ಫ್ಯೂಡಲ್ ವ್ಯವಸ್ಥೆಯನ್ನು ಜಾರಿಯಲ್ಲಿಡುವ ತಂತ್ರವೇ ಆಗಿದೆ.<br>ಸದ್ಯ ಕರಾವಳಿಯ ಹಲವೆಡೆ ನಡೆಯುತ್ತಿರುವ ಕಂಬಳದ ಸಂಚಾಲಕ ಸಮಿತಿಗಳನ್ನು ನೋಡಿದಲ್ಲಿ ಅದರ ವರ್ಗೀಯ ಮತ್ತು ಜಮೀನ್ದಾರಿ ಸ್ವರೂಪ ಮನದಟ್ಟಾಗುತ್ತದೆ. ಕರಾವಳಿಯ ಬಾರಾಡಿ ಬೀಡು (ಕಾರ್ಕಳದ ಸಮೀಪ), ಈದು (ಕಾರ್ಕಳ), ಮಿಯಾರು (ಕಾರ್ಕಳದ ಸಮೀಪ), ಐಕಳ ಬಾವ (ಮೂಡುಬಿದಿರೆ-ಮುಲ್ಕಿ ಮಧ್ಯೆ), ಬಂಗಾಡಿ (ಬೆಳ್ತಂಗಡಿ), ಹೊಕ್ಯಾಡಿಗೋಳಿ (ಬಂಟ್ವಾಳ), ಪಜೀರು (ಬಂಟ್ವಾಳ), ಪಿಲಿಕುಳ ನಿಸರ್ಗಧಾಮ (ಮಂಗಳೂರ ಸಮೀಪ), ಜಪ್ಪಿನಮೊಗರು (ಮಂಗಳೂರ ಸಮೀಪ), ತಲಪಾಡಿ ಪಂಜಾಳ (ಮಂಗಳೂರ ಸಮೀಪ), ಅಲ್ತಾರು (ಉಡುಪಿ), ಕಟಪಾಡಿ (ಉಡುಪಿ), ಅಡ್ವೆ, ನಂದಿಕೂರು, ಮೂಡುಬಿದಿರೆ, ಮುಲ್ಕಿ, ವೇಣೂರು, ಉಪ್ಪಿನಂಗಡಿ, ಪುತ್ತೂರು, ತೋನ್ಸೆಯಲ್ಲಿ ಕಂಬಳಗಳು ನಡೆಯುತ್ತಿದೆ. ಈ ಎಲ್ಲಾ ಕಂಬಳಗಳಲ್ಲಿ ಒಂದೋ ಬಂಟರು ಮುಖ್ಯಸ್ಥರಾಗಿರುತ್ತಾರೆ ಅಥವಾ ಜೈನರು ಸಂಚಾಲಕರಾಗಿರುತ್ತಾರೆ. ಕೋಣ ಓಡಿಸುವವರು, ಕೋಣದ ಚಾಕರಿ ಮಾಡುವವರು, ಕಂಬಳದ ಸ್ವಯಂಸೇವಕರೆಲ್ಲರೂ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. ಮುಲ್ಕಿ ಪಯ್ಯೊಟ್ಟು ಸದಾಶಿವ ಸಾಲ್ಯಾನ್ ಹೊರತುಪಡಿಸಿದಲ್ಲಿ ಬಹುತೇಕ ಕೋಣಗಳ ಮಾಲಿಕರು ಮಾತ್ರ ಈಗಲೂ ಗುತ್ತಿನ ಬಂಟರೇ ಆಗಿದ್ದಾರೆ ಎಂಬುದು ಗಮನಾರ್ಹ. ಈಗಲೂ ಮಂಗಳೂರಿಗೊಂದು ರೌಂಡ್ ಹೊಡೆದರೆ ಚೌಟ, ಶೆಟ್ಟಿ, ಹೆಗ್ಡೆಗಳ ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಗಳು ಕಂಬಳ ಸಂಬಂಧ ರಾರಾಜಿಸುತ್ತಿದೆ. ಇದು ಕರಾವಳಿಯಲ್ಲಿ ಬಂಟರ ಅಧಿಪತ್ಯವನ್ನು ಸಾರಲು ಹಾಕಲಾಗಿದೆಯೇ ಎಂಬ ಅನುಮಾನ ಹುಟ್ಟಿಸುವಂತಿದೆ. ಸಮಸಮಾಜದ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ.<br>ಕಂಬಳ ಎಂಬುದು ಕೇವಲ ಕ್ರೀಡೆಯಾಗಿ ಪ್ರಾರಂಭವೂ ಆಗಿಲ್ಲ. ಮುಂದುವರಿಕೆಯೂ ಅಲ್ಲ. ಕಂಬಳ ಎಂಬುದು ಜಮೀನ್ದಾರಿಗಳ ಐಶಾರಾಮಿ ಬದುಕಿನ ಪಳಿಯುಳಿಕೆಯಾಗಿ ಮುಂದುವರೆಯುತ್ತಿದೆ. ಕಂಬಳ ಎಂಬುದು ಬಹುಜನರ ಸಂಸ್ಕೃತಿಯೂ ಅಲ್ಲ. ಜನಪದ ಕ್ರೀಡೆಯೂ ಅಲ್ಲ. ಕಂಬಳ ಎಂಬುದು ಪಕ್ಕಾ ಬಹುಜನ ವಿರೋಧಿ ಫ್ಯೂಡಲ್ ವರ್ಗದ ಮೋಜಿನ ಆಟವಷ್ಟೆ. ಕಂಬಳದಲ್ಲಿ ಜಾತಿ ಹೊರತುಪಡಿಸಿ ಇನ್ನೇನೂ ಇಲ್ಲ.</p>



<ul class="wp-block-list">
<li><strong>ನವೀನ್‌ ಸೂರಿಂಜೆ</strong></li>
</ul>



<p></p>
]]></content:encoded>
					
		
		
			</item>
		<item>
		<title>ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ- ಮುಖ್ಯಮಂತ್ರಿ ಸಿದ್ದರಾಮಯ್ಯ</title>
		<link>https://peepalmedia.com/bjps-habit-is-to-oppose-good-work-cm-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 26 Dec 2024 06:05:44 +0000</pubDate>
				<category><![CDATA[ರಾಜಕೀಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[karnataka]]></category>
		<category><![CDATA[Karnataka Chief Minister Siddaramaiah]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=51229</guid>

					<description><![CDATA[ಬೆಳಗಾವಿ, ಡಿಸೆಂಬರ್ 26: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ [&#8230;]]]></description>
										<content:encoded><![CDATA[
<p>ಬೆಳಗಾವಿ, ಡಿಸೆಂಬರ್ 26: ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>



<p>ಅವರು ಇಂದು ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರಿಗೆ ಅಂತಿಮ ಗೌರವ ಸಲ್ಲಿಕೆಗೆ ತೆರಳುವ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.</p>



<p>ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.</p>
]]></content:encoded>
					
		
		
			</item>
		<item>
		<title>ಅಪಘಾತದಲ್ಲಿ ಮೃತರಾದ ಯೋಧರಿಗೆ ಸಿಎಂ ಅಂತಿಮ ಗೌರವ; ಕುಟುಂಬಕ್ಕೆ ಸರಕಾರದಿಂದ ನೆರವು</title>
		<link>https://peepalmedia.com/sim-pays-final-respects-to-soldiers-died-in-accident/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 26 Dec 2024 06:01:01 +0000</pubDate>
				<category><![CDATA[ರಾಜ್ಯ]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[karnataka]]></category>
		<category><![CDATA[Karnataka Chief Minister Siddaramaiah]]></category>
		<category><![CDATA[Siddaramaiah]]></category>
		<guid isPermaLink="false">https://peepalmedia.com/?p=51226</guid>

					<description><![CDATA[ಬೆಳಗಾವಿ ಡಿ. 26: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ [&#8230;]]]></description>
										<content:encoded><![CDATA[
<p><strong>ಬೆಳಗಾವಿ ಡಿ. 26:</strong> ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು.</p>



<p>ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.</p>



<p>ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.</p>



<p>ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.</p>



<p><strong>ಮೃತ ಯೋಧರು:</strong></p>



<ul class="wp-block-list">
<li>ದಯಾನಂದ ತಿರುಕಣ್ಣನವರ್ ಬೆಳಗಾವಿ</li>



<li>ಧನರಾಜ್ ಸುಭಾಷ್ ಚಿಕ್ಕೋಡಿ</li>



<li>ಮಹೇಶ್ ನಾಗಪ್ಪ ಬಾಗಲಕೋಟೆ</li>



<li>ಅನೂಪ್ ಪೂಜಾರಿ ಕುಂದಾಪುರ</li>
</ul>



<p></p>
]]></content:encoded>
					
		
		
			</item>
		<item>
		<title>ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿದ್ದರಾಮಯ್ಯ</title>
		<link>https://peepalmedia.com/steps-to-organize-belgaum-congress-session-centenary-celebrations-siddaramaiah/</link>
		
		<dc:creator><![CDATA[Murali Maluru]]></dc:creator>
		<pubDate>Sat, 21 Dec 2024 16:15:30 +0000</pubDate>
				<category><![CDATA[ಬೆಳಗಾವಿ]]></category>
		<category><![CDATA[BELAGAVI]]></category>
		<category><![CDATA[Siddaramaiah]]></category>
		<category><![CDATA[Steps to organize Belgaum Congress session centenary celebrations: Siddaramaiah]]></category>
		<guid isPermaLink="false">https://peepalmedia.com/?p=51043</guid>

					<description><![CDATA[ಬೆಂಗಳೂರು, ಡಿ.21: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ದತೆಗಳ ಪರಿಶೀಲನೆ ನಡೆಸಿದರು. ಬೆಳಗಾವಿಯಲ್ಲಿ ಎರಡು ದಿನಗಳ ಕಾರ್ಯಕ್ರಮಗಳ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ [&#8230;]]]></description>
										<content:encoded><![CDATA[
<p>ಬೆಂಗಳೂರು, ಡಿ.21: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.</p>



<p>ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ದತೆಗಳ ಪರಿಶೀಲನೆ ನಡೆಸಿದರು.</p>



<p>ಬೆಳಗಾವಿಯಲ್ಲಿ ಎರಡು ದಿನಗಳ ಕಾರ್ಯಕ್ರಮಗಳ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, 27ರಂದು ಸಾರ್ವಜನಿಕ ಸಮಾರಂಭ ನಡೆಯಲಿದೆ.</p>



<p>ಶತಮಾನೋತ್ಸವ ಸಮಾರಂಭಕ್ಕೆ ರಾಷ್ಟ್ರದೆಲ್ಲೆಡೆಯಿಂದ ಆಗಮಿಸಲಿರುವ ಸಂಸದರು, ಗಣ್ಯರಿಗೆ ವಸತಿ, ಊಟೋಪಚಾರ ಸೇರಿದಂತೆ ಸೂಕ್ತ ಆತಿಥ್ಯ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಸಮಿತಿಗಳಿಗೆ ಸೂಚಿಸಲಾಯಿತು.</p>



<p>ಡಿಸೆಂಬರ್ 27ರಂದು ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ನೆರವೇರಿಸುವ ಕುರಿತು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ನಿರ್ಧರಿಸಲಾಯಿತು</p>



<p>1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡನ್ನು ಪ್ರಥಮ ಬಾರಿಗೆ ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು. ಈಗ ಅದಕ್ಕೂ ನೂರು ವರ್ಷಗಳು ಸಂದ ಹಿನ್ನೆಲೆಯಲ್ಲಿ ಆ ಹಾಡನ್ನು ಪುನಃ ಶತಮಾನೋತ್ಸವ ಆಚರಣೆ ಯಲ್ಲಿ ಹಾಡಿಸುವ ಕುರಿತು ತೀರ್ಮಾನಿಸಲಾಯಿತು.</p>



<p>ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಏಕೀಕರಣದ ಮೊದಲ ಧ್ವನಿ ಬಲವಾಗಿ ಪ್ರತಿಪಾದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕನ್ನಡಿಗರ ಪಾಲಿಗೂ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.</p>



<p>ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಚಿವರಾದ ಪರಮೇಶ್ವರ್, ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಬೋಸರಾಜು, ಡಾ. ಎಂ ಸಿ ಸುಧಾಕರ್, ರಹೀಂಖಾನ್‌, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಮಧು ಬಂಗಾರಪ್ಪ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ&nbsp;ಭಾಗವಹಿಸಿದ್ದರು</p>
]]></content:encoded>
					
		
		
			</item>
	</channel>
</rss>
