<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>siddramaiah &#8211; Peepal Media</title>
	<atom:link href="https://peepalmedia.com/tag/siddramaiah/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 23 May 2024 12:31:43 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>siddramaiah &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಪ್ರಜ್ವಲ್ ಅವರನ್ನು ದೇಶಕ್ಕೆ ಕರೆತರಲು ಕೇಂದ್ರ ಸಿದ್ಧ, ಆದ್ರೆ ರಾಜ್ಯ ಸರ್ಕಾರ ಕತ್ತೆ ಕಾಯ್ತಿತ್ತಾ?: ಜೋಶಿ</title>
		<link>https://peepalmedia.com/center-is-ready-to-bring-prajwal-to-the-country-but-the-state-government-is-waiting-joshi/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 23 May 2024 12:28:15 +0000</pubDate>
				<category><![CDATA[ರಾಜಕೀಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[devegowda]]></category>
		<category><![CDATA[dks]]></category>
		<category><![CDATA[dkshi]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Prajwal Revanna]]></category>
		<category><![CDATA[siddramaiah]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=39816</guid>

					<description><![CDATA[ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ದೇಶಕ್ಕೆ ವಾಪಸ್‌ ಕರೆತರುವುದಕ್ಕಾಗಿ ಕೇಂದ್ರ ಸಹಕಾರ ನೀಡಲಿದೆ. ಆದರೆ, ರಾಜ್ಯ ಸರ್ಕಾರದ ಪ್ರತಿನಿಧಿಗಳು ಇಷ್ಟು ದಿನ ಕತ್ತೆ ಕಾಯುತ್ತಿದ್ದರೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಆದರೆ, ಕಾಂಗ್ರೆಸ್ ಪಕ್ಷವು ಕೇಂದ್ರದ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದೆ; ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಕೇಂದ್ರ ಸಚಿವರು ಆರೋಪಿಸಿದರು. [&#8230;]]]></description>
										<content:encoded><![CDATA[
<p>ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ದೇಶಕ್ಕೆ ವಾಪಸ್‌ ಕರೆತರುವುದಕ್ಕಾಗಿ ಕೇಂದ್ರ ಸಹಕಾರ ನೀಡಲಿದೆ. ಆದರೆ, ರಾಜ್ಯ ಸರ್ಕಾರದ ಪ್ರತಿನಿಧಿಗಳು ಇಷ್ಟು ದಿನ ಕತ್ತೆ ಕಾಯುತ್ತಿದ್ದರೇ? ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶವ್ಯಕ್ತಪಡಿಸಿದ್ದಾರೆ.</p>



<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಆದರೆ, ಕಾಂಗ್ರೆಸ್ ಪಕ್ಷವು ಕೇಂದ್ರದ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದೆ; ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ” ಎಂದು ಕೇಂದ್ರ ಸಚಿವರು ಆರೋಪಿಸಿದರು.</p>



<p>ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ತ್ವರಿತ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡನೇ ಪತ್ರ ಬರೆದಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೋಶಿ, “ರಾಜತಾಂತ್ರಿಕ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಇದೆ. ಇದುವರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಗೃಹ ಸಚಿವ ಪರಮೇಶ್ವರ ನನ್ನ ಪ್ರಶ್ನೆಗೆ ಉತ್ತರಿಸಿಲ್ಲ ಎಂದು ದೂರಿದರು.</p>



<p>ಏಪ್ರಿಲ್ 21 ರಂದು ಪ್ರಜ್ವಲ್ ಇರುವಂಥ ಸ್ಪಷ್ಟ ಕ್ಲಿಪ್ಪಿಂಗ್ ಒಳಗೊಂಡ ಮೊದಲ ಪೆನ್ ಡ್ರೈವ್ ಹೊರಬಂದಿದೆ. ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ವಿದೇಶಕ್ಕೆ ತೆರಳಿದ್ದಾರೆ. ಈ ಏಳು ದಿನಗಳ ಕಾಲ ರಾಜ್ಯ ಸರ್ಕಾರದವರು ಕತ್ತೆಗಳನ್ನು ಕಾಯುತ್ತಿದ್ದರಾ?  ಏಕೆ ಎಫ್‌ಐಆರ್ ದಾಖಲಿಸಿ ಬಂಧಿಸಲಿಲ್ಲ ಎಂದು ಜೋಶಿ ಪ್ರಶ್ನಿಸಿದರು.</p>



<p>&nbsp;ಪ್ರಜ್ವಲ್ ಅವರನ್ನು ವಿದೇಶದಿಂದ ವಾಪಸ್ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ಕಾನೂನು ಪ್ರಕಾರ ಅಗತ್ಯ ಪ್ರಕ್ರಿಯೆಗಳನ್ನು ಅನುಸರಿಸಿ ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದರು.</p>



<p>“ಆದರೆ, ನಾವು ಸಿಎಂ ಅಥವಾ ರಾಜ್ಯ ಸರ್ಕಾರ ಪತ್ರ ಬರೆದ ತಕ್ಷಣ ಈ ವಿಷಯ ಇತ್ಯರ್ಥ ಮಾಡಬೇಕೆಂಬುದು ಸರಿಯೇ? ರಾಜ್ಯ ಸರ್ಕಾರ ಮೊದಲ ಹಂತದ ಚುನಾವಣೆ ಮುಗಿಯುವವರೆಗೆ ಅಂದರೆ ಏಪ್ರಿಲ್ 26ರವರೆಗೆ ಸುಮ್ಮನಿತ್ತು. ಒಕ್ಕಲಿಗರ ಮತಗಳಿಗಾಗಿ ಸುಮ್ಮನಿತ್ತು. &nbsp;ಈಗ ಅವರು ಕೇಂದ್ರದ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ. ತನಿಖೆಗಿಂತ ಹೆಚ್ಚಾಗಿ ಈ ಪ್ರಕರಣದಲ್ಲಿ ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ಎಂದು ಜೋಶಿ ಹೇಳಿದರು.</p>



<p>ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ವಿದೇಶಾಂಗ ಮತ್ತು ಗೃಹ ಸಚಿವಾಲಯಗಳನ್ನು ಒತ್ತಾಯಿಸುವಂತೆ ಮುಖ್ಯಮಂತ್ರಿಗಳು ಮೇ 1 ರಂದು ಮೋದಿ ಅವರಿಗೆ ಪತ್ರ ಬರೆದಿದ್ದರು.</p>
]]></content:encoded>
					
		
		
			</item>
		<item>
		<title>ಕೇಂದ್ರದ ಬಜೆಟ್ ಗಾತ್ರ ಹೆಚ್ಚುತ್ತಿದೆ, ಆದ್ರೆ ಕನ್ನಡಿಗರ ತೆರಿಗೆ ಪಾಲು ಕಡಿಮೆಯಾಗ್ತಿದೆ: ಸಿದ್ದರಾಮಯ್ಯ</title>
		<link>https://peepalmedia.com/centers-budget-size-is-increasing-but-tax-share-of-kannadigas-is-decreasing-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 21 Feb 2024 08:24:49 +0000</pubDate>
				<category><![CDATA[ರಾಜಕೀಯ]]></category>
		<category><![CDATA[assembly speech]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[siddramaiah]]></category>
		<category><![CDATA[state budget]]></category>
		<category><![CDATA[taxt]]></category>
		<guid isPermaLink="false">https://peepalmedia.com/?p=36295</guid>

					<description><![CDATA[ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್‌ ಗಾತ್ರ ಹೆಚ್ಚುತ್ತಿರುವುದು ಒಳ್ಳೆಯದೇ, ಆದರೆ, ಕನ್ನಡಿಗರಿಗೆ, ಕರ್ನಾಟಕಕ್ಕೆ ಸಿಗಬೇಕಾದ ತೆರಿಗೆ ಪಾಲು, ಅನುದಾನ ಕಡಿಮೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ಸರಕಾರ ದುರ್ಬಲಗೊಳಿಸಬಾರದು ಎಂದು ಮುಖ್ಯಮಂತ್ರಿಗಳು ಪುನರುಚ್ಛರಿಸಿದರು. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತಿದೆ.ಆದರೆ, ಆದರೆ, ತೆರಿಗೆ ಹಂಚಿಕೆಯಲ್ಲಿ 2023-24ಕ್ಕೆ 37252 ಕೋಟಿ ರೂ. ಬರುತ್ತಿದೆ. [&#8230;]]]></description>
										<content:encoded><![CDATA[
<p>ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್‌ ಗಾತ್ರ ಹೆಚ್ಚುತ್ತಿರುವುದು ಒಳ್ಳೆಯದೇ, ಆದರೆ, ಕನ್ನಡಿಗರಿಗೆ, ಕರ್ನಾಟಕಕ್ಕೆ ಸಿಗಬೇಕಾದ ತೆರಿಗೆ ಪಾಲು, ಅನುದಾನ ಕಡಿಮೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>



<p><br>ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ಸರಕಾರ ದುರ್ಬಲಗೊಳಿಸಬಾರದು ಎಂದು ಮುಖ್ಯಮಂತ್ರಿಗಳು ಪುನರುಚ್ಛರಿಸಿದರು.</p>



<p><br>ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತಿದೆ.ಆದರೆ, ಆದರೆ, ತೆರಿಗೆ ಹಂಚಿಕೆಯಲ್ಲಿ 2023-24ಕ್ಕೆ 37252 ಕೋಟಿ ರೂ. ಬರುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಂದ 13005 ಕೋಟಿ , ಒಟ್ಟು 50257 ಕೋಟಿ ಮಾತ್ರ ರೂ. ಬರುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ಪಾಲು ಕೂಡ ನಿಯಮಬದ್ದವಾಗಿ ಹೆಚ್ಚಾಗಬೇಕು. ಆದರೆ, ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋದಂತೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲು, ಕನ್ನಡಿಗರ ಹಕ್ಕಿನ ತೆರಿಗೆ ಮತ್ತು ಅನುದಾನದ ಪಾಲು ಕಡಿಮೆ ಆಗುತ್ತಿದೆ. ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯ ಬಲಿಷ್ಠವಾದರೆ, ಕೇಂದ್ರ ಬಲಿಷ್ಠವಾಗುತ್ತದೆ ಎಂದು ಸಿದ್ದರಾಮಯ್ಯ ಮಂಡಿಸಿದರು.</p>



<p><br>ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಕೇಂದ್ರ ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ. ಆದರೆ ಅವರ ಮತ್ತು ಕೇಂದ್ರ ಸರಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ ಎನ್ನುತ್ತಾ ಕೇಂದ್ರದಿಂದ ರಾಜ್ಯಕ್ಕೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯದ ಅಂಕಿ ಅಂಶಗಳ ಕುರಿತು ಅವರು ಮಾಹಿತಿ ನೀಡಿದರು.</p>



<p><br>ರಾಜ್ಯಕ್ಕೆ ಮತ್ತು ರಾಜ್ಯದ ಜನತೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ನಾವು ಪ್ರಶ್ನಿಸಿದರೆ, ಪ್ರಧಾನಿ ಮೋದಿ ಅವರು ದೇಶ ವಿಭಜನೆಯ ಮಾತಾಡುತ್ತೇವೆ ಎನ್ನುತ್ತಾರೆ ಎಂದರು. ಇದಕ್ಕೆ ಬಿಜೆಪಿ ಸದಸ್ಯರು ಜೋರು ಧ್ವನಿಯಲ್ಲಿ ಪ್ರಧಾನಿ ಅವರು ಹಾಗೆ ಹೇಳಿಯೇ ಇಲ್ಲ ಎಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರಾದ ಪ್ರಕಾಶ್ ರಾಥೋಡ್ ಅವರು, ಪ್ರಧಾನಿ ಮೋದಿಯವರಂತೂ ಸುಳ್ಳು ಹೇಳುವುದು ಮೂಮೂಲು. ಬಿಜೆಪಿ ಸದಸ್ಯರೂ ಸುಳ್ಳು ಹೇಳುವುದನ್ನು ಮುಂದುವರೆಸಿದ್ದಾರೆ ಕಿಚಾಯಿಸಿದರು,</p>
]]></content:encoded>
					
		
		
			</item>
		<item>
		<title>ರಾಜ್ಯಪಾಲರಿಂದ ಕನ್ನಡ ಕಡ್ಡಾಯ ತಿರಸ್ಕಾರ</title>
		<link>https://peepalmedia.com/karnataka-governor-sends-ordinance-on-60-use-of-kannada/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 31 Jan 2024 09:14:02 +0000</pubDate>
				<category><![CDATA[ರಾಜ್ಯ]]></category>
		<category><![CDATA[Bangalore]]></category>
		<category><![CDATA[breakimg news]]></category>
		<category><![CDATA[breaking news]]></category>
		<category><![CDATA[dk shivakumar]]></category>
		<category><![CDATA[dks]]></category>
		<category><![CDATA[Governor]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karave]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[news update]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[siddramaiah]]></category>
		<category><![CDATA[state politics]]></category>
		<category><![CDATA[Thawar Chand Gehlot]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35501</guid>

					<description><![CDATA[ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಬಳಕೆಯ ಮಾಡುವಂತೆ ಕರ್ನಾಟಕ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಕರ್ನಾಟಕ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್ ತಿರಸ್ಕರಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 30 ಮಂಗಳವಾರ ತಿಳಿಸಿದ್ದಾರೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ (Kannada Language Comprehensive Development Act) ತಿದ್ದುಪಡಿ ತರಲು ಮತ್ತು ನಾಮ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಹೊರಡಿಸಲಾದ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಜನವರಿ 5ರಂದು ಅನುಮೋದನೆ ನೀಡಿತ್ತು. “ನಾವು [&#8230;]]]></description>
										<content:encoded><![CDATA[
<p><strong>ಬೆಂಗಳೂರು: </strong>ರಾಜ್ಯದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಬಳಕೆಯ ಮಾಡುವಂತೆ ಕರ್ನಾಟಕ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಕರ್ನಾಟಕ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್ ತಿರಸ್ಕರಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 30 ಮಂಗಳವಾರ ತಿಳಿಸಿದ್ದಾರೆ.</p>



<p>ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ (Kannada Language Comprehensive Development Act) ತಿದ್ದುಪಡಿ ತರಲು ಮತ್ತು ನಾಮ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಹೊರಡಿಸಲಾದ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಜನವರಿ 5ರಂದು ಅನುಮೋದನೆ ನೀಡಿತ್ತು.</p>



<p>“ನಾವು ಕಾನೂನನ್ನು ರಚಿಸಿದ್ದೇವೆ ಮತ್ತು ಸುಗ್ರೀವಾಜ್ಞೆಯನ್ನು ಅನುಮೋದಿಸಿದ್ದೇವೆ. ರಾಜ್ಯಪಾಲರು ಒಪ್ಪಿಗೆ ನೀಡಬಹುದಿತ್ತು. ಬದಲಿಗೆ ವಿಧಾನಸಭೆಯಲ್ಲಿ ಅಂಗೀಕಾರ ಆಗಬೇಕು ಎಂದು ವಾಪಸ್ ಕಳುಹಿಸಿದ್ದಾರೆ,” ಎಂದು ಡಿಕೆಶಿ ತಿಳಿಸಿದ್ದಾರೆ.</p>



<p>ಬೆಂಗಳೂರಿನಲ್ಲಿ ಅಂಗಡಿ- ಉದ್ಯಮಗಳನ್ನು ಗುರಿಯಾಗಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿತ್ತು.</p>



<p>ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತು ರಾಜಭವನದ ನಡುವಿನ ಮೊದಲ ಭಿನ್ನಾಭಿಪ್ರಾಯ ಈಗ ಬಹಿರಂಗವಾಗಿದೆ.</p>



<p>ಮುಂದಿನ ತಿಂಗಳು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನಕ್ಕೆ ಮುನ್ನವೇ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದು ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರ ಅಸಹಕಾರದ ಪ್ರಕರಣಗಳಲ್ಲಿ ಒಂದಾಗಲಿದೆ. ಗೆಹ್ಲೋಟ್ ಫೆಬ್ರವರಿ 12 ರಂದು ಶಾಸಕಾಂಗದ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.</p>



<p>ಶಿವಕುಮಾರ್ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರು ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದರು. ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಒತ್ತಾಯಿಸಿದ ನಂತರ ಗೆಹ್ಲೋಟ್ ಮೂರು ಮಸೂದೆಗಳಿಗೆ ಸಹಿ ಹಾಕಿದರು.</p>



<p>ಕ್ಲಿಯರ್ ಮಾಡಿದ ಬಿಲ್‌ಗಳಲ್ಲಿ ಒಂದು ವೈದ್ಯಕೀಯ ಪದವೀಧರರಿಗೆ ಕಡ್ಡಾಯ ಗ್ರಾಮೀಣ ಸೇವೆಯನ್ನು ತೆಗೆದುಹಾಕುವುದೂ ಸೇರಿದೆ. ಆದರೆ ಬೆಳಗಾವಿ ಅಧಿವೇಶನದಲ್ಲಿ ಅಂಗೀಕರಿಸಲಾದ 17 ವಿಧೇಯಕಗಳ ಪೈಕಿ ರಾಜ್ಯಪಾಲರು ಕೇವಲ ಐದಕ್ಕೆ ಮಾತ್ರ ಒಪ್ಪಿಗೆ ನೀಡಿದ್ದಾರೆ.</p>



<p>ಅಲ್ಲದೇ, ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸುವ ನಿರ್ಧಾರವು ರಾಜ್ಯ ಮತ್ತು ರಾಜಭವನದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸುವ ಸಾಧ್ಯತೆ ಇದೆ. ಇತ್ತೀಚೆಗೆ People’s Forum for Karnataka Education ರಾಜ್ಯದಲ್ಲಿ ಎನ್‌ಇಪಿಯ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ಮಧ್ಯಪ್ರವೇಶಿಸುವಂತೆ ಕೋರಿ 10 ಲಕ್ಷ ಸಹಿ ಸಂಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು.</p>
]]></content:encoded>
					
		
		
			</item>
	</channel>
</rss>
