<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>SoniaGandhi &#8211; Peepal Media</title>
	<atom:link href="https://peepalmedia.com/tag/soniagandhi/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 06 Aug 2023 11:26:43 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>SoniaGandhi &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಇಂಡಿಯಾ ಮೈತ್ರಿ ಕೂಟ: ಅಧ್ಯಕ್ಷರಾಗಿ ಸೋನಿಯಾ ಗಾಂಧಿ, ಸಂಚಾಲಕರಾಗಿಬಿಹಾರ ಸಿಎಂ ನಿತೀಶ್ ಕುಮಾರ್</title>
		<link>https://peepalmedia.com/sonia-will-be-president-of-oppn-allie/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 06 Aug 2023 11:26:43 +0000</pubDate>
				<category><![CDATA[ರಾಜಕೀಯ]]></category>
		<category><![CDATA[nitish kumar]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=24990</guid>

					<description><![CDATA[ಪಾಟ್ನಾ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA ಒಕ್ಕೂಟಕ್ಕೆ ಸೋನಿಯಾ ಗಾಂಧಿ ಅವರು ಅಧ್ಯಕ್ಷೆಯಾಗುವ ಸಾಧ್ಯತೆ ಇದ್ದು, ಇದೇ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಮೈತ್ರಿ ಕೂಟದ ಸಂಚಾಲಕರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ವಿಪಕ್ಷ ಒಕ್ಕೂಟದ 11 ಸದಸ್ಯನ್ನು ಒಳಗೊಂಡ ಸಮನ್ವಯ ಸಮಿತಿಗೆ ನಿತೀಶ್ ಕುಮಾರ್ ಕನ್ವೀನರ್ ಆಗುವ ನಿರೀಕ್ಷೆ ಇದ್ದು, INDIA ಮೈತ್ರಿ ಕೂಟದ ಮೂರನೇ ಸಭೆ ಆಗಸ್ಟ್‌ 31 ಹಾಗೂ ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ಆಯೋಜನೆಗೊಂಡಿದೆ. [&#8230;]]]></description>
										<content:encoded><![CDATA[
<p><strong>ಪಾಟ್ನಾ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA ಒಕ್ಕೂಟಕ್ಕೆ ಸೋನಿಯಾ ಗಾಂಧಿ ಅವರು ಅಧ್ಯಕ್ಷೆಯಾಗುವ ಸಾಧ್ಯತೆ ಇದ್ದು, ಇದೇ ವೇಳೆ ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನು ಮೈತ್ರಿ ಕೂಟದ ಸಂಚಾಲಕರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.</strong></p>



<p>ವಿಪಕ್ಷ ಒಕ್ಕೂಟದ 11 ಸದಸ್ಯನ್ನು ಒಳಗೊಂಡ ಸಮನ್ವಯ ಸಮಿತಿಗೆ ನಿತೀಶ್ ಕುಮಾರ್ ಕನ್ವೀನರ್ ಆಗುವ ನಿರೀಕ್ಷೆ ಇದ್ದು, INDIA ಮೈತ್ರಿ ಕೂಟದ ಮೂರನೇ ಸಭೆ ಆಗಸ್ಟ್‌ 31 ಹಾಗೂ ಸೆಪ್ಟೆಂಬರ್ 1ರಂದು ಮುಂಬೈನಲ್ಲಿ ಆಯೋಜನೆಗೊಂಡಿದೆ.</p>



<p>ಈ ಸಭೆಯಲ್ಲಿ ಅಧ್ಯಕ್ಷರು ಹಾಗೂ ಸಂಚಾಲಕರ ಆಯ್ಕೆ ಕುರಿತಾಗಿ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.</p>



<p>2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಾರಥ್ಯದ ಎನ್‌ಡಿಎ ವಿರುದ್ಧ ರಣತಂತ್ರ ರೂಪಿಸುತ್ತಿರುವ ಇಂಡಿಯಾ ಮೈತ್ರಿ ಕೂಟ, ತನ್ನ ಒಕ್ಕೂಟವನ್ನು ಇನ್ನಷ್ಟು ಬಲ ಪಡಿಸಲು ಹಾಗೂ ಇನ್ನಷ್ಟು ತೀಕ್ಷ್ಣವಾಗಿ ಸರ್ಕಾರದ ವಿರುದ್ಧ ಹೋರಾಡಲು ತಂತ್ರಗಾರಿಕೆ ರೂಪಿಸಲು ನಿರ್ಧರಿಸಿದ್ದು, ನಿತೀಶ್ ಕುಮಾರ್ ಇಂಡಿಯಾ ಮೈತ್ರಿ ಕೂಟದ ಸಂಚಾಲಕರನ್ನಾಗಿ ನೇಮಿಸಲು ಕಾಂಗ್ರೆಸ್ ನಾಯಕರೂ ಕೂಡಾ ಸಮ್ಮತಿ ಸೂಚಿಸಿದ್ದಾರೆ ಎಂದು ಬಿಹಾರದ ಮಹಾ ಮೈತ್ರಿ ಕೂಟದ ಮೂಲಗಳು ತಿಳಿಸಿವೆ. ಆದರೆ, ಮುಂಬೈ ಸಭೆಯಲ್ಲೇ ಈ ಕುರಿತಾಗಿ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>



<p>ಈ ಹಿಂದೆ ಯುಪಿಎ ಮೈತ್ರಿ ಕೂಟದ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರನ್ನೇ ಇಂಡಿಯಾ ಮೈತ್ರಿ ಕೂಟದ ಅಧ್ಯಕ್ಷರನ್ನಾಗಿ ಮುಂದುವರೆಸಲು ಕಾಂಗ್ರೆಸ್ ನಾಯಕರು ಬಯಸಿದ್ದಾರೆ. ಒಂದು ವೇಳೆ ಸೋನಿಯಾ ಗಾಂಧಿ ಅವರು ಅಧ್ಯಕ್ಷೆಯಾಗಲು ಸಮ್ಮತಿ ಸೂಚಿಸದಿದ್ದರೆ, ಅವರು ಹೆಸರಿಸುವ ಯಾರಿಗಾದರೂ ಅಧ್ಯಕ್ಷ ಪಟ್ಟ ಸಿಗಬಹುದಾಗಿದೆ. ಇನ್ನು ಸಮನ್ವಯ ಸಮಿತಿ ಮುಖ್ಯಸ್ಥರ ನೇಮಕ ವಿಚಾರದಲ್ಲೂ ಸೋನಿಯಾ ಗಾಂಧಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಹಾರ ಮಹಾ ಘಟಬಂಧನದ ವಿಶ್ವಾಸರ್ಹ ಮೂಲಗಳು ತಿಳಿಸಿವೆ.</p>
]]></content:encoded>
					
		
		
			</item>
		<item>
		<title>ತಾಂತ್ರಿಕ ದೋಷ: ಸೋನಿಯಾ ಮತ್ತು ರಾಹುಲ್ ಗಾಂಧಿ ವಿಮಾನ ಭೋಪಾಲದಲ್ಲಿ ತುರ್ತು ಭೂಸ್ಪರ್ಶ</title>
		<link>https://peepalmedia.com/technical-problem-in-flight-emergency-landing/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 18 Jul 2023 15:40:32 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[congrees]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=23936</guid>

					<description><![CDATA[ಭೋಪಾಲ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಇದ್ದರು. ತಾಂತ್ರಿಕ ದೋಷದಿಂದ ವಿಮಾನ ಭೋಪಾಲ್‌ನಲ್ಲಿ ಇಳಿಯಬೇಕಾಯಿತು. ಇನ್ನು ಇಬ್ಬರೂ ನಾಯಕರು ರಾತ್ರಿ 9.30ಕ್ಕೆ ನಿತ್ಯ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಭೋಪಾಲ್‌ನ ರಾಜಾ ಭೋಜ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ [&#8230;]]]></description>
										<content:encoded><![CDATA[
<p>ಭೋಪಾಲ್: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಇದ್ದರು. ತಾಂತ್ರಿಕ ದೋಷದಿಂದ ವಿಮಾನ ಭೋಪಾಲ್‌ನಲ್ಲಿ ಇಳಿಯಬೇಕಾಯಿತು.</p>



<p>ಇನ್ನು ಇಬ್ಬರೂ ನಾಯಕರು ರಾತ್ರಿ 9.30ಕ್ಕೆ ನಿತ್ಯ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ ಎಂದು ವರದಿಯಾಗಿದೆ.</p>



<p>ಭೋಪಾಲ್‌ನ ರಾಜಾ ಭೋಜ್ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದ್ದರು. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಭೋಪಾಲ್‌ನಲ್ಲಿ ಇಳಿಸಬೇಕಾಯಿತು. ಸೋನಿಯಾ ಮತ್ತು ರಾಹುಲ್ ಬೆಂಗಳೂರಿನಿಂದ ಚಾರ್ಟರ್ಡ್ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದರು. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಕಾಂಗ್ರೆಸ್ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಇದೀಗ ಇಬ್ಬರೂ ನಾಯಕರು ಇಂಡಿಗೋ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.</p>



<p>ಇಂದು ಬೆಂಗಳೂರಿನಲ್ಲಿ ನಡೆದ 26 ವಿರೋಧ ಪಕ್ಷಗಳ ಸಭೆಯಲ್ಲಿ ಪಾಲ್ಗೊಂಡು ರಾಹುಲ್ ಮತ್ತು ಸೋನಿಯಾ ಗಾಂಧಿ ದೆಹಲಿಗೆ ವಾಪಸಾಗುತ್ತಿದ್ದರು.</p>
]]></content:encoded>
					
		
		
			</item>
		<item>
		<title>40% ಕಮಿಷನ್ ಸರ್ಕಾರ ಕಿತ್ತೊಗೆಯಲು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮಿಸಿ: ಮಲ್ಲಿಕಾರ್ಜುನ್‌ ಖರ್ಗೆ</title>
		<link>https://peepalmedia.com/work-hard-for-congress-to-come-to-power-to-remove-40-commission-govt-mallikarjun-kharge/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 06 Nov 2022 14:00:38 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[40% govt]]></category>
		<category><![CDATA[bengalure]]></category>
		<category><![CDATA[congrees]]></category>
		<category><![CDATA[indhira gandhi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Mallikarjun Kharge]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rahulgandhi]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=14493</guid>

					<description><![CDATA[ಬೆಂಗಳೂರು: 40% ಕಮಿಷನ್ ಸರ್ಕಾರ ಕಿತ್ತೊಗೆಯಲು, ಕಾಂಗ್ರಸ್‌ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಕಾಂಗ್ರೆಸ್‌ ಪಕ್ಷದ ನಾಯಕರು, ಸದಸ್ಯರು ಹಾಗೂ ಕಾರ್ಯಕರ್ತರು ಒಟ್ಟಾಗಿ ಶ್ರಮಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಕುರಿತು ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಒಬ್ಬ ಕಾರ್ಮಿಕ ಕುಟುಂಬದಲ್ಲಿ ಹುಟ್ಟಿ ಬೆಳೆದು, ವಿದ್ಯಾರ್ಥಿ ಸಂಘಟನೆ ಕಟ್ಟಿ ಅದರ ಅಧ್ಯಕ್ಷನಾಗಿ ಜವಳಿ ಕಾರ್ಮಿಕರ ಸಂಘಗಳ ಜತೆ ಕೆಲಸ ಮಾಡಿ ಅಲ್ಲಿ ಆರಿಸಿ ಬಂದಿದ್ದೆ. ನಾವು ನಮ್ಮ ಸ್ವಂತ ಶಕ್ತಿ ಮೇಲೆ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> 40% ಕಮಿಷನ್ ಸರ್ಕಾರ ಕಿತ್ತೊಗೆಯಲು, ಕಾಂಗ್ರಸ್‌ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಕಾಂಗ್ರೆಸ್‌ ಪಕ್ಷದ ನಾಯಕರು, ಸದಸ್ಯರು ಹಾಗೂ ಕಾರ್ಯಕರ್ತರು ಒಟ್ಟಾಗಿ ಶ್ರಮಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>



<p style="font-size:20px">ಈ ಕುರಿತು ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಒಬ್ಬ ಕಾರ್ಮಿಕ ಕುಟುಂಬದಲ್ಲಿ ಹುಟ್ಟಿ ಬೆಳೆದು, ವಿದ್ಯಾರ್ಥಿ ಸಂಘಟನೆ ಕಟ್ಟಿ ಅದರ ಅಧ್ಯಕ್ಷನಾಗಿ ಜವಳಿ ಕಾರ್ಮಿಕರ ಸಂಘಗಳ ಜತೆ ಕೆಲಸ ಮಾಡಿ ಅಲ್ಲಿ ಆರಿಸಿ ಬಂದಿದ್ದೆ. ನಾವು ನಮ್ಮ ಸ್ವಂತ ಶಕ್ತಿ ಮೇಲೆ ಮುಂದೆ ಬಂದಾಗ ಬೇರೆಯವರು ಅದನ್ನು ಗುರುತಿಸುತ್ತಾರೆ. ಆಗ ನಿಮ್ಮಲ್ಲಿರುವ ಶಕ್ತಿಗೆ ಬೆಂಬಲ ಸಿಗುತ್ತದೆ ಎಂದು ಹೇಳಿದರು.</p>



<p style="font-size:20px">ನನ್ನ ಸಂಘಟನೆ ನೋಡಿ ಕಾಂಗ್ರೆಸ್ 1969ರಲ್ಲೀ ಇಬ್ಬಾಗ ಆದಾಗ ನಮ್ಮ ಜಿಲ್ಲೆಯ ಕನ್ವೀನರ್ ಧರ್ಮರಾವ್ ಅವರು ಗುಲ್ಬರ್ಗಾ ಬ್ಲಾಕ್ ಅಧ್ಯಕ್ಷರಾಗಿ ಪಕ್ಷ ಕಟ್ಟಲು ನೇರವಾಗಿ. ನಿಮಗೆ ಇತ್ತ ಭವಿಷ್ಯ ಇದೆ ಎಂದು ಪ್ರೋತ್ಸಾಹ ನೀಡಿದರು.</p>



<p style="font-size:20px">ದೇಶದಲ್ಲಿ ಕಾಂಗ್ರೆಸ್ ಬಲವಾಗಿ ಅಧಿಕಾರಕ್ಕೆ ಬರಲಿದೆ. ಇಂದಿರಾ ಗಾಂಧಿ ಅವರು ಬೆಳೆಯುತ್ತಾರೆ. ನೀವು ಪ್ರಮುಖರಾಗಿ ಇರಬೇಕು ಎಂದರು. ದೇವರಾಜ ಅರಸು ಅವರು ಕನ್ವೀನರ್ ಆಗಿದ್ದಾಗ ನಾನು, ಧರ್ಮ ಸಿಂಗ್ ಸೇರಿದಂತೆ 10-15 ಯುವಕರನ್ನು ಕರೆದು ಪಕ್ಷದ ಕೆಲಸ ಮಾಡಿ ನಿಮಗೆ ಪಕ್ಷದಿಂದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದರು.</p>



<p style="font-size:20px">1969ರಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾದೆ ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ, ಕೆಪಿಸಿಸಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷನಾಗಿ, ಕೆಪಿಸಿಸಿ ಅಧ್ಯಕ್ಷನಾಗಿ, ಸಿಡಬ್ಲ್ಯೂಸಿ ಸದಸ್ಯನಾಗಿ ಹಾಗೂ ಈಗ ಎಐಸಿಸಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ.</p>



<p style="font-size:20px">ನಾನು ಒಂದೇ ಬಾರಿಗೆ ಈ ಸ್ಥಾನಕ್ಕೆ ಜಿಗಿದಿಲ್ಲ. ಹಂತ ಹಂತವಾಗಿ ಬೆಳೆದಿದ್ದೇನೆ. ಎಲ್ಲವೂ ಒಂದೇ ಬಾರಿಗೆ ಆಗುವುದಿಲ್ಲ. ಇಂತಹ ಚಿಂತನೆ ಇರಬಾರದು. ಸೇವೆ ಮಾಡಬೇಕು, ಗುರಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.</p>



<p style="font-size:20px">ನಾವು ಅಧಿಕಾರಕ್ಕೆ ಪಕ್ಷ ಸೇರುವುದಿಲ್ಲ. ಪಕ್ಷದ ತತ್ವ ಸಿದ್ಧಾಂತ ಅರಿತು ಪಕ್ಷ ಅಧಿಕಾರಕ್ಕೆ ಬಂದಾಗ ಅದನ್ನು ಜಾರಿಗೊಳಿಸಲು ಕೆಲಸ ಮಾಡಬೇಕು. ಪಕ್ಷದ ತತ್ವ ಸಿದ್ಧಾಂತ ಬೆಳೆಸಲು ಶ್ರಮಿಸಬೇಕು. ನೆಹರೂ, ಅಂಬೇಡ್ಕರ್, ಗಾಂಧಿ ಅವರ ವಿಚಾರ ಅರಿಯದಿದ್ದರೆ ಮನಬಂದಂತೆ ನಡೆದುಕೊಳ್ಳುತ್ತಾರೆ. ಯಾರಿಗೆ ಬದ್ಧತೆ, ನಂಬಿಕೆ ಇರುತ್ತದೆಯೋ ಅವರು ಎಂದಿಗೂ ಪಕ್ಷ ಬಿಡುವುದಿಲ್ಲ ಎಂದರು.</p>



<p style="font-size:20px">ಹಲವು ಜನ ಮಂತ್ರಿ ಸ್ಥಾನ, ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ಬಿಡುತ್ತಾರೆ. ನಾವು ಕುರ್ಚಿಗಾಗಿ ಪಕ್ಷ ಸೇರಬಾರದು. ನಾವು ಇಂದು ನಂಬಿರುವ ತತ್ವ ಉಳಿಸಿ ಬೆಳೆಸಿಕೊಂಡು ಹೋಗಬೇಕು. ಆಮೂಲಕ ಪಕ್ಷಕ್ಕೆ ಶಕ್ತಿ ತುಂಬಬೇಕು. ನಮ್ಮ ವಿಚಾರಧಾರೆಗೆ ಧಕ್ಕೆ ಆದಾಗ ನನ್ನ ನೋವುಗಳನ್ನು ಬದಿಗಿಟ್ಟು ಪಕ್ಷದ ಜತೆಗೆ ಇರುತ್ತೇನೆ. ಇದನ್ನು ನಾವು ತಿಳಿಯಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.</p>



<p style="font-size:20px">ಬಹಳ ಮಂದಿ ನೀವು 70 ವರ್ಷದಲ್ಲಿ ಏನು ಮಾಡಿದ್ದೀರಿ ಎಂದು ಕೇಳುತ್ತಾರೆ. ನಾವು 70 ವರ್ಷದಲ್ಲಿ ಏನೂ ಮಾಡದಿದ್ದರೆ ದೇಶ ಇಷ್ಟು ಗಟ್ಟಿಯಾಗಿ ಒಂದಾಗಿರಲು ಸಾಧ್ಯವಾಗುತ್ತಿರಲಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಆಳವಾಗಿ ಬೇರೂರಿರುವುದು, ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಉಳಿಯಬೇಕು. ಆಗ ಮೋದಿ, ಶಾ ಉಳಿಯುತ್ತಾರೆ. ನಿಮಗೆ ಹಕ್ಕು, ಮೂಲಭೂತ ಅಧಿಕಾರ ಸಿಗುತ್ತದೆ. ನಾವು ಹೆದರಿ ಮನೆಯಲ್ಲಿ ಕೂತರೆ ಏನೂ ಆಗುವುದಿಲ್ಲ. ಈ ದೇಶ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಬೇಕಾದರೆ ನೀವು ಜನರನ್ನು ಸಂಘಟಿಸಬೇಕು. ಆಗ ದೇಶದಲ್ಲಿರುವ ಕೆಟ್ಟ ಸರ್ಕಾರ ಕಿತ್ತೊಗೆಯಲು ಸಾಧ್ಯ ಎಂದರು.</p>



<p style="font-size:20px">ಮೋದಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮನಬಂದಂತೆ ಮಾತನಾಡುತ್ತಾರೆ. ಇವರು ಮೋದಿ ಅವರ ಶಾಲೆಯಲ್ಲಿ ಕಲಿತವರೆ? ಇವರು ನಾವು ಮಾಡಿರುವ ಶಾಲೆ, ಕಾಲೇಜಿನಲ್ಲಿ ಓದಿ, ನಮ್ಮ ಸಾರ್ವಜನಿಕ ಉದ್ದಿಮೆಯಲ್ಲಿ ದುಡಿದು ಬೆಳೆದಿದ್ದಾರೆ. ಆದರೂ ಇವರು ನೀವು ಏನು ಮಾಡಿದ್ದೀರಿ ಎಂದು ಕೇಳುತ್ತಾರೆ ಎಂದು ಕಿಡಿಕಾರಿದರು.</p>



<p style="font-size:20px">ನಾವು ದೇಶ ರಕ್ಷಣೆ ಮಾಡಿ ದೇಶವನ್ನು ಒಗ್ಗಟ್ಟಾಗಿ ಇಟ್ಟಿದ್ದೇವೆ. ಬಾಂಗ್ಲಾ ಪ್ರತ್ಯೇಕ ದೇಶ ಮಾಡಿದ್ದು ಇಂದಿರಾ ಗಾಂಧಿ. ದೇಶದ ವಿದೇಶಾಂಗ ನೀತಿ ಮಾಡಿದ್ದು ನೆಹರೂ ಅವರು. ಪದೇ ಪದೇ ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಏನು ಮಾಡಿದ್ದಾರೆ ಎಂದು ಟೀಕೆ ಮಾಡುವುದಲ್ಲ. ಸೋನಿಯಾ ಗಾಂಧಿ ಅವರು ಮಾಡಿರುವ ತ್ಯಾಗ ನೀವು ಮಾಡಿಲ್ಲ. ಯುಪಿಎ ಮೊದಲ ಸರ್ಕಾರ ಸಮಯದಲ್ಲಿ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಆಗುವಂತೆ ಕೇಳಿದಾಗ ನಾನು ಪ್ರಧಾನಿ ಆಗುವುದಿಲ್ಲ ಎಂದು, ದೇಶದ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಸ್ಥಾನ ತ್ಯಾಗ ಮಾಡಿದರು ಎಂದು ಹೇಳಿದರು.</p>



<p style="font-size:20px">ನಾವು ಒಂದು ಚೇರ್ಮನ್, ಮಂತ್ರಿ ಸ್ಥಾನ, ಪಕ್ಷದ ಹುದ್ದೆ ಸಿಗಲಿಲ್ಲ ಎಂದರೆ ಮುನಿಸಿಕೊಳ್ಳುತ್ತೇವೆ. ಆ ಕುಟುಂಬದ ತ್ಯಾಗ ಬಲಿದಾನ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ಪ್ರಾಣತ್ಯಾಗ, ರಾಜಕೀಯದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ತ್ಯಾಗ ಮಾಡಿದ್ದಾರೆ. ಅವರು ಪ್ರಧಾನಿ ಆಗಬಹುದಿತ್ತು ಆದರೆ ಆಗಲಿಲ್ಲ. ಗಾಂಧಿ ಕುಟುಂಬ ಸದಸ್ಯರೇ ಅಧ್ಯಕ್ಷರಾಗಿ ಇರಬೇಕು ಎಂದು ಕೇಳಿದೆವು. ಆಗ ನಾವು ಆಗುವುದಿಲ್ಲ. ನೀವು ಚುನಾವಣೆ ನಡೆಸಿ ಅಲ್ಲಿ ಗೆಲ್ಲುವವರು ಪಕ್ಷದ ಅಧ್ಯಕ್ಷರಾಗುತ್ತಾರೆ ಎಂದು ಹೇಳಿದವರು ತ್ಯಾಗಮೂರ್ತಿ ಸೋನಿಯಾ ಗಾಂಧಿ &nbsp;ಎಂದು ಮಲ್ಲಿಕಾರ್ಜುನ್‌ ಖರ್ಗೆ ತಿಳಿಸಿದರು.</p>



<p style="font-size:20px">ಅವರು ಪಕ್ಷದಲ್ಲಿ ಒಗ್ಗಟ್ಟು ಇರಬೇಕು, ಬೆಳೆಯಬೇಕು ಎಂದು ಈ ತ್ಯಾಗ ಮಾಡಿದ್ದಾರೆ. ಇಂದು ಆರ್ ಎಸ್ ಎಸ್, ಮೋದಿ, ಶಾ ಅವರು ಕಿರುಕುಳ ನೀಡುತ್ತಿದ್ದಾರೆ. ಪದೇ ಪದೆ ನಮ್ಮ ಪಕ್ಷದ ವಿರುದ್ಧ ಮಾತನಾಡುತ್ತಾರೆ. ಗಾಂಧಿ ಕುಟುಂಬ ಈ ಚುನಾವಣೆ ನಿಲ್ಲಲಿಲ್ಲ, ಆದರೂ ಬಿಜೆಪಿ ಅವರು ಮಾತನಾಡುವುದು ನಿಲ್ಲಿಸಲ್ಲ. ನಮ್ಮ ಪಕ್ಷದ ಬಗ್ಗೆ ನಿಮಗೆ ಯಾಕೆ ಚಿಂತೆ? ದೇಶ ಮುನ್ನಡೆಸುವ ಬಗ್ಗೆ ಗಮನಹರಿಸಿ ಎಂದು ಹೇಳಿದರು.</p>



<p style="font-size:20px">ಈ ದೇಶದಲ್ಲಿ&nbsp; ಸ್ವತಂತ್ರ್ಯ ಸಿಗುವ ಮುನ್ನ 400 ಕಾಲೇಜು ಇದ್ದವು. ಇಂದು 11 ಲಕ್ಷ ಶಾಲೆ ಕಾಲೇಜು ಇವೆ. 1947ದಲ್ಲಿ 2 ಲಕ್ಷ ಪ್ರಾಥಮಿಕ ಶಾಲೆ ಇದ್ದವು. 2014ರಲ್ಲ 7 ಲಕ್ಷ ಪ್ರಾಥಮಿಕ ಶಾಲೆ ಇದ್ದವು. 877 ಹೈಸ್ಕೂಲ್ ಇದ್ದವು ಇಂದು 1 ಲಕ್ಷ ಹೈಸ್ಕೂಲ್ ಇದ್ದಾವೆ. 27 ವಿವಿ ಇದ್ದವು ಇಂದು 723 ವಿವಿ ಗಳಿವೆ ಎಂದು ಮಾಹಿತಿ ನೀಡಿದರು.</p>



<p style="font-size:20px">ಅಕ್ಷರಸ್ಥ ಪ್ರಮಾಣ ಶೇ16 ರಷ್ಟಿತ್ತು 2014ರಲ್ಲಿ ಇದು ಶೇ.74 ರಷ್ಟು ಆಯಿತು. ಪರಿಶಿಷ್ಟ ಜಾತಿ ಪಂಗಡದವರು 08%ರಷ್ಟು ಅಕ್ಷರಸ್ಥರು ಇದ್ದರು. ಇಂದು 67% ಇದ್ದಾರೆ ಎಂದರು.</p>



<p style="font-size:20px">ಸ್ವಾತಂತ್ರ ಪೂರ್ವದಲ್ಲಿ 4 ಲಕ್ಷ ಕಿಮೀ ಇದ್ದ ರಸ್ತೆ ಇಂದು 54 ಲಕ್ಷ ಕಿಮೀ ರಸ್ತೆ ಮಾಡಿದ್ದೇವೆ. ಸರ್ಕಾರಿ ನೌಕರಿ ವಿಚಾರ. ವಾಡಿ ಗದಗ 2200 ಕೋಟಿ ಯೋಜನೆಗೆ ನಾವು ನಿರ್ಧರಿಸಿದೆವು. ಅದಕ್ಕೆ ಅಂದಿನ ಸಿಎಂ ಸಿದ್ದರಾಮಯ್ಯ ಅಡಿಗಲ್ಲು ಹಾಕಬೇಕಿತ್ತು. ಆಗ ನಾನು ಈ ಯೋಜನೆಗೆ ಗೈರಾದೆ. ಕಾರಣ ಕೋಲಾರದಲ್ಲಿ ರೈಲ್ವೆ ಬೋಗಿ ಯೋಜನೆ ಮಂಜೂರು ಮಾಡಲು ಗೈರಾದೆ. ಆದರೆ ಮೋದಿ ಒಂದು ರೈಲು ಚಾಲನೆಗೂ ಹೋಗಿ ಪ್ರಚಾರ ಪಡೆಯುತ್ತಾರೆ. ನನ್ನ ಕಾಲದಲ್ಲಿ ಅಂತಹ 27 ರೈಲು ಆರಂಭಿಸಿದ್ದೇನೆ. ಇಂತಹ ದೊಡ್ಡ ಯೋಜನೆ ಕೊಟ್ಟರೂ ಪ್ರಚಾರ ಪಡೆಯಲಿಲ್ಲ ಎಂದು ಹೇಳಿದರು.</p>



<p style="font-size:20px">ಗುಜರಾತ್ ಚುನಾವಣೆಯಲ್ಲಿ ಕಳೆದ 9 ದಿನದಿಂದ ಪ್ರಚಾರ ಮಾಡುತ್ತಿದ್ದಾರೆ. ಯಾವ ಮಟ್ಟಕ್ಕೆ ಎಂದರೆ ಮೋರ್ಬಿ ಸೇತುವೆ ರಿಪೇರಿಗೆ 2 ಕೋಟಿ ನೀಡಲಾಗಿತ್ತು. ಇವರು 2 ಕೋಟಿ ಯೋಜನೆ ಉದ್ಘಟನೆ ಮಾಡಿದರು. ಇವರ ಕೈಗುಣವೋ ಏನೋ ಉದ್ಘಾಟನೆ ಮಾಡಿದ 5 ದಿನದಲ್ಲೇ ಸೇತುವೆ ಬಿದ್ದು ಹೋಯಿತು. 138 ಜನ ಸತ್ತರು. ಇದಕ್ಕೆ ಯಾರು ಜವಾಬ್ದಾರಿ ಹೊತ್ತರು? ಯಾರಾದರೂ ರಾಜೀನಾಮೆ ಕೊಟ್ಟರು? ಅದೇ ಪಶ್ಚಿಮ ಬಂಗಾಲದಲ್ಲಿ ಸೇತುವೆ ಬಿದ್ದಾಗ ದೇವರು ಇವರ ಆಡಳಿತ ನೋಡಿ ಬೇಸತ್ತು ಸೇತುವೆ ಕೆಡವಿದ್ದಾನೆ ಎಂದು ಹೇಳಿದ್ದರು ಎಂದರು.</p>



<p style="font-size:20px">ನಾವು ಮಾಡಿದ ಪ್ರತಿ ಕೆಲಸಕ್ಕೆ ಅಡ್ಡಗಾಲು ಹಾಕಿದ್ದಾರೆ. ಹೆಸರು ಬದಲಿಸುತ್ತಾರೆ. ನೀವು ಸತ್ಯನಾಶ ಮಾಡುತ್ತಿದ್ದೀರಿ. ನಾವು ಸತ್ಯದ ಪರವಾಗಿದ್ದೇವೆ. ನೀವು ಸುಳ್ಳು ಹೇಳಿ ಬದುಕುತ್ತಿದ್ದೀರಿ. ಮತ ಪಡೆಯಲು ಜಾತಿ ಧರ್ಮ ನಡುವೆ ದ್ವೇಷ ಬಿತ್ತುತ್ತಿದ್ದಾರೆ. ಮಹಿಳೆ ಮೇಲಿನ ದೌರ್ಜನ್ಯ ವಿರುದ್ಧ ಒಂದು ದಿನ ಧ್ವನಿ ಎತ್ತಿಲ್ಲ. ಮಾತೆತ್ತಿದರೆ ಗುಹೆ, ಮಂದಿರದಲ್ಲಿ ಪ್ರಾರ್ಥನೆ ಮಾಡುವುದಾಗಿದೆ. ದೇವರ ಪೂಜೆ ನಿಮ್ಮ ಮನೆಯಲ್ಲಿ ಮಾಡಿ. ಉಪವಾಸದಲ್ಲಿ ಜನ ಸಾಯಿತ್ತಿದ್ದು, ನಿರುದ್ಯೋಗ ಹೆಚ್ಚುತ್ತಿದೆ. ಬೆಲೆ ಏರಿಕೆಯಾಗಿದೆ. ರೂಪಾಯಿ ಮೌಲ್ಯ ಕುಸಿಯುತ್ತಿದೆ. ಈ ಬಗ್ಗೆ ಮಾತನಾಡುವ ಬದಲು ಕಾಂಗ್ರೆಸ್ ವಿರುದ್ಧ ಮಾತನಾಡುತ್ತಾರೆ ಎಂದು ಟೀಕಿಸಿದರು.</p>



<p style="font-size:20px">ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು 3500 ಕಿಮೀ ಪಾದಯಾತ್ರೆ ಆರಂಭಿಸಿದ ನಂತರ ಬಿಜೆಪಿಗೆ ನಡುಕ ಹುಟ್ಟಿದೆ. ಈಗ ರಾಹುಲ್ ಗಾಂಧಿ ಅವರ ಬಗ್ಗೆ ಜನರ ಪ್ರೀತಿ ಕಂಡು ದಿಗಿಲು ಹುಟ್ಟಿದೆ.</p>



<p style="font-size:20px">ನೀವು ಕಾಂಗ್ರೆಸ್ ಪಕ್ಷದ ಬಗ್ಗೆ ಯೋಚಿಸಬೇಡಿ. ನಾವು ಒಟ್ಟಾಗಿದ್ದೇವೆ. ನಮ್ಮನ್ನು ಬೇರೆ ಮಾಡಲು ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲಾ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಸರ್ಕಾರಿ ಹುದ್ದೆ ತುಂಬುತ್ತೆವೆ. ನಾವು ಅಧಿಕಾರದಲ್ಲಿದ್ದಾಗ ಶಿಕ್ಷಣ ಇಲಾಖೆಯಲ್ಲಿ 18 ಸಾವಿರ ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡಿದ್ದೆವು. ದೇಶದಲ್ಲಿ 14 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇವೆ. ಅವುಗಳನ್ನು ಯಾಕೆ ತುಂಬುತ್ತಿಲ್ಲ. ಕಾರಣ ಬಡವರು ದಲಿತರಿಗೆ ಉದ್ಯೋಗ ಸಿಗುತ್ತದೆ. ಹೀಗಾಗಿ ಅವರು ತುಂಬಲ್ಲ ಎಂದು ಹೇಳಿದರು.</p>



<p style="font-size:20px">ಯುವಕರಿಗೆ ಕೆಲಸ ಕೊಡಿ. ಬಡವರಿಗೆ ಹಣ ಬಂದರೆ ಅವರು ಹೊಟ್ಟೆ ತುಂಬಾ ಊಟ ಮಾಡುತ್ತಾರೆ. ರೈಲ್ವೆಯಲ್ಲಿ 1.34 ಲಕ್ಷ ಹುದ್ದೆ ತುಂಬುವುದಾಗಿ ಹೇಳಿದ್ದಾರೆ. ಈ ಹುದ್ದೆ ಹಲವು ವರ್ಷಗಳಿಂದ ಖಾಲಿ ಇದ್ದರೂ ತುಂಬಲಿಲ್ಲ. ಆದರೆ ಸಂಸತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ತುಂಮಬುವುದಾಗಿ ಹೇಳುತ್ತಿದ್ದಾರೆ ಎಂದರು.</p>



<p style="font-size:20px">ಹಿಮಾಚಲ, ಗುಜರಾತ್, ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿ ಹೇಳುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. 8 ವರ್ಷದಲ್ಲಿ 16 ಕೋಟಿ ಉದ್ಯೋಗ ಎಲ್ಲಿ? ಹೊಸ ಉದ್ಯೋಗ ಸೃಷ್ಟಿಸುವುದಿರಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳೇ ತುಂಬುತ್ತಿಲ್ಲ ಎಂದು ವ್ಯಂಗಿಸಿದರು.</p>



<p style="font-size:20px">ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಬೇಕಾದ ಅನುದಾನ, ಸಿದ್ದರಾಮಯ್ಯ ಅವರ ಕಾಲದಲ್ಲಿ ತರಲಾದ ಎಸ್ ಸಿಪಿ ಟಿಎಸ್ ಪಿ ಯೋಜನೆ ಅನುದಾನ ನೀಡದೆ, ಅವುಗಳನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದರು.</p>



<p style="font-size:20px"><strong>ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು</strong></p>



<p style="font-size:20px">ನನಗೆ ಇಂದು ನೀವು ಗೌರವಿಸಿ ಅಭಿನಂದಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೀರಿ. ನೀವು ನನಗೆ ಯಾವಾಗ ಗೌರವ ನೀಡುತ್ತೀರಿ ಎಂದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಾಗ ಗೌರವ ಸಲ್ಲಿಸಿದಂತೆ ಆಗುತ್ತದೆ. ಈ ಹಾರ ತುರಾಯಿ ಸಾಮಾನ್ಯ. ನನಗೆ ನಿಜವಾಗಿ ಗೌರವ ಸಲ್ಲುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗ ಮಾತ್ರ. ಹೀಗಾಗಿ ವೇದಿಕೆ ಮೇಲೆ ಇರುವ ನಾಯಕರು ತಮ್ಮ ಸಣ್ಣ ಪುಟ್ಟ ವ್ಯತ್ಯಾಸ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.</p>



<p style="font-size:20px">40% ಕಮಿಷನ್ ಸರ್ಕಾರ ಕಿತ್ತೊಗೆಯಲು ನಮ್ಮ ಸರ್ಕಾರ ಬರಬೇಕು. ಅದಕ್ಕಾಗಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕು. ಅನೇಕ ಕಾರ್ಯಕ್ರಮಗಳು ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನೀಡಿದ್ದೀರಿ. ಈಗ ಮತ್ತೆ ಅದೇ ಕೆಲಸ ಮಾಡಬೇಕು ಎಂದರು.</p>



<p style="font-size:20px">ನಾವು ಒಗ್ಗಟ್ಟಾಗಿ ಮುಂದೆ ಸಾಗಿದರೆ ಇದನ್ನು ಸಾಧಿಸಬಹುದು. ಮುನಿಸಿಕೊಂಡಿರುವವರು, ನಮ್ಮಿಂದ ದೂರ ಆಗಿರುವವರು, ಹೊಸ ಯುವಕರನ್ನು ಪಕ್ಷಕ್ಕೆ ಕರೆ ತನ್ನಿ. ಪಕ್ಷದ ಅಧ್ಯಕ್ಷನಾದ ನಂತರ ನಾನು ಮಾಡಬೇಕಾದ ಕೆಲಸಗಳು ಇವೆ. ಉದಯಪುರ ಸಭೆ ನಿರ್ಣಯಗಳನ್ನು ಕಾರ್ಯಕ್ರಮಗಳನ್ನು ಜಾರಿ ತರಲು ಆರಂಭಿಸಿದ್ದು, ಎಲ್ಲವನ್ನೂ ಒಂದೊಂದಾಗಿ ಅನುಷ್ಟಾನಕ್ಕೆ ತರಲು ಮುಂದಾಗಿದ್ದೇನೆ ಎಂದು ತಿಳಿಸಿದರು.</p>



<p style="font-size:20px">ಯುವಕರಿಗೆ 50%, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಎಲ್ಲಾ ಘಟಕಗಳಿಗೆ ಜವಾಬ್ದಾರಿ ನೀಡಿ. ಸಂಘಟನೆಗೆ ಅವಕಾಶ ನೀಡಿ ಎಂದರು.</p>



<p style="font-size:20px">ಮಾಧ್ಯಮಗಳಲ್ಲಿ ನಮ್ಮ ವಿಚಾರ ಹೆಚ್ಚು ಪ್ರಚಾರ ಆಗುವುದಿಲ್ಲ. ಹೀಗಾಗಿ ಮನೆ ಮನೆಗೆ ಹೋಗಿ ಪಕ್ಷದ ಪರ ಪ್ರಚಾರ ಮಾಡಿ. ನಾವು ಪಟ್ಟಣ ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಜನರಿಗೆ ಮನವರಿಕೆ ಮಾಡಿದಾಗ ಮಾತ್ರ ಬಿಜೆಪಿ ಎದುರಿಸಲು ಸಾಧ್ಯ. ಪಕ್ಷಕ್ಕೆ ಶಕ್ತಿ ತುಂಬಲು ಸಾಧ್ಯ. ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆಯಿಂದ ಸಿಗುತ್ತಿರುವ ಲಾಭವನ್ನು ಸರಿಯಾಗಿ ಬಳಸಿಕೊಳ್ಳಬೇಕು. ರಾಜ್ಯದ ಯಾತ್ರೆ ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಹೇಳಿದ ಅವರು, ಅದ್ದೂರಿ ಸ್ವಾಗತ ಮಾಡಿದ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿದರು.</p>
]]></content:encoded>
					
		
		
			</item>
		<item>
		<title>ಮುಂಬರುವ ಚುನಾವಣೆಯಲ್ಲಿ 40% ಸರ್ಕಾರವನ್ನು ಕಿತ್ತೊಗೆಯಬೇಕೆಂಬುವುದೇ ʼಜನ ಸಂಕಲ್ಪʼ: ಸಿದ್ದರಾಮಯ್ಯ</title>
		<link>https://peepalmedia.com/peoples-resolve-to-remove-40-government-in-upcoming-elections-siddaramaiah/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 15 Oct 2022 14:47:45 +0000</pubDate>
				<category><![CDATA[ಬಳ್ಳಾರಿ]]></category>
		<category><![CDATA[ರಾಜ್ಯ]]></category>
		<category><![CDATA[40% govt]]></category>
		<category><![CDATA[bengalure]]></category>
		<category><![CDATA[bharath jodo yathre]]></category>
		<category><![CDATA[bjp]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rahulgandhi]]></category>
		<category><![CDATA[siddaramayya]]></category>
		<category><![CDATA[SoniaGandhi]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=10988</guid>

					<description><![CDATA[ಬಳ್ಳಾರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 40% ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎನ್ನುವುದೇ ʼಜನ ಸಂಕಲ್ಪʼ ಎಂದು ವಿರೋಧ ಪಕ್ಷದ ನಾಯಕ ಸಿದದ್ದರಾಮಯ್ಯ ಟೀಕಿಸಿದರು. ಬಳ್ಳಾರಿಯಲ್ಲಿ ನಡೆದ ಭಾರತ ಐಕ್ಯತಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಪಾದಯಾತ್ರೆ. ರಾಜಕೀಯ ಅಧಿಕಾರ ಗಳಿಸುವ ಉದ್ದೇಶದಿಂದ ಕೈಗೊಂಡ ಪಾದಯಾತ್ರೆ ಇದಲ್ಲ. ಜಾತಿ, ಧರ್ಮ, ವರ್ಗಗಳ ಆಧಾರದಲ್ಲಿ ಒಡೆದಿರುವ ಭಾರತವನ್ನು ಒಂದುಗೂಡಿಸುವ &#160;ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಪ್ರಯತ್ನವೇ ಭಾರತಐಕ್ಯತಾಯಾತ್ರೆ ಎಂದು ಹೇಳಿದರು. ಏಕಕಾಲದಲ್ಲಿ [&#8230;]]]></description>
										<content:encoded><![CDATA[
<p style="font-size:20px"><strong>ಬಳ್ಳಾರಿ:</strong> ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 40% ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎನ್ನುವುದೇ ʼಜನ ಸಂಕಲ್ಪʼ ಎಂದು ವಿರೋಧ ಪಕ್ಷದ ನಾಯಕ ಸಿದದ್ದರಾಮಯ್ಯ ಟೀಕಿಸಿದರು.</p>



<p style="font-size:20px">ಬಳ್ಳಾರಿಯಲ್ಲಿ ನಡೆದ ಭಾರತ ಐಕ್ಯತಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಪಾದಯಾತ್ರೆ. ರಾಜಕೀಯ ಅಧಿಕಾರ ಗಳಿಸುವ ಉದ್ದೇಶದಿಂದ ಕೈಗೊಂಡ ಪಾದಯಾತ್ರೆ ಇದಲ್ಲ. ಜಾತಿ, ಧರ್ಮ, ವರ್ಗಗಳ ಆಧಾರದಲ್ಲಿ ಒಡೆದಿರುವ ಭಾರತವನ್ನು ಒಂದುಗೂಡಿಸುವ &nbsp;ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಪ್ರಯತ್ನವೇ ಭಾರತಐಕ್ಯತಾಯಾತ್ರೆ ಎಂದು ಹೇಳಿದರು.</p>



<p style="font-size:20px">ಏಕಕಾಲದಲ್ಲಿ ಸುಮಾರು 3,570 ಕಿ.ಮೀ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಪ್ರವಾಸ ಕೈಗೊಂಡಿರುವುದು ಇದೇ ಮೊದಲು. ಈಗಾಗಲೇ 1,000 ಕಿ.ಮೀ ನಡಿಗೆಯನ್ನು ರಾಹುಲ್‌ ಗಾಂಧಿ ಅವರು ಯಶಸ್ವಿಯಾಗಿ ಮುಗಿಸಿದ್ದಾರೆ. ಅತೀ ಮುಖ್ಯವಾಗಿ ಪಾದಯಾತ್ರೆಗೆ ನಿರೀಕ್ಷೆಗೂ ಮೀರಿದ ಜನಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.</p>



<p style="font-size:20px">ಬಿಜೆಪಿಯ ದ್ವೇಷ, ಹಿಂಸೆ, ಧರ್ಮ ರಾಜಕಾರಣದಿಂದ ದಲಿತರು, ಮಹಿಳೆಯರು, ಶೋಷಿತರು, ಅಲ್ಪಸಂಖ್ಯಾತ ಸಮುದಾಯದ ಜನ ಭಯದಲ್ಲಿ ಬದುಕುವಂತಾಗಿದೆ. &#8220;ಸರ್ವಜನಾಂಗದ ಶಾಂತಿಯ ತೋಟ&#8221;ವೆಂಬ ಕುವೆಂಪು ಅವರ ಆಶಯಕ್ಕೆ ವಿರುದ್ಧ ದಿಕ್ಕಿನಲ್ಲಿ ದೇಶ ಸಾಗುತ್ತಿದೆ ಎಂದರು.</p>



<p style="font-size:20px">ದೇಶದ ಸ್ವಾತಂತ್ರ್ಯ ಕಾಂಗ್ರೆಸ್ ನ ಹೋರಾಟದ ಫಲ. ಮಹಾತ್ಮ ಗಾಂಧಿ, ನೆಹರು ಆದಿಯಾಗಿ ನಮ್ಮ ಪಕ್ಷದ ಅನೇಕರ ತ್ಯಾಗ, ಬಲಿದಾನ, ಜೈಲುವಾಸದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. 1925ರಲ್ಲಿ ಆರಂಭವಾದ ಆರ್‌,ಎಸ್‌,ಎಸ್‌ ನವರಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬನೇ ಒಬ್ಬ ವ್ಯಕ್ತಿ ಇದ್ದಾರ? ಎಂದು ವಾಗ್ದಾಳಿ ನಡಿಸಿದರು.</p>



<p style="font-size:20px">1977ರಲ್ಲಿ ವಿಜಯನಗರ ಉಕ್ಕಿನ ಕಾರ್ಖಾನೆಯನ್ನು ಸ್ಥಾಪನೆ ಮಾಡಿ, ಇಂದು ಸಾವಿರಾರು ಜನರಿಗೆ ಉದ್ಯೋಗ, ಆ ಮೂಲಕ ಅನ್ನಕ್ಕೆ ದಾರಿ ಆಗಿದ್ದರೆ ಅದಕ್ಕೆ ಇಂದಿರಾ ಗಾಂಧಿ ಅವರು ಕಾರಣ. ಗಣಿ ಲೂಟಿ ಮಾಡಿದ್ದೇ ಬಳ್ಳಾರಿಗೆ ಬಿಜೆಪಿ ಕೊಡುಗೆ ಸೋನಿಯಾ ಗಾಂಧಿ ಅವರು 1999ರಲ್ಲಿ ಬಳ್ಳಾರಿಯಿಂದ ಸ್ಪರ್ಧೆ ಮಾಡಿ ಲೋಕಸಭಾ ಸದಸ್ಯರಾದ ಮೇಲೆ 3,300 ಕೋಟಿಯ ಕುಡತಿನಿ ವಿದ್ಯುತ್‌ ಯೋಜನೆ ಜಾರಿ ಮಾಡಿದ್ದರು. ಆದರೆ ಕಳೆದ ಎಂಟು ವರ್ಷಗಳಿಂದ &nbsp;ನರೇಂದ್ರ ಮೋದಿ ಸರ್ಕಾರ ಬಳ್ಳಾರಿಗೆ ಯಾವ ಕೊಡುಗೆ ನೀಡಿದೆ? ಎಂದು ಪ್ರಶ್ನಿಸಿದರು.</p>



<p style="font-size:20px">ಬಿಜೆಪಿ ನಾಯಕರು ಬಳ್ಳಾರಿಯಿಂದ ದೋಚಿದ್ದು ಬಿಟ್ಟರೆ, ಬಳ್ಳಾರಿಗೆ ನೀಡಿರುವ ಕೊಡುಗೆ ಶೂನ್ಯ. ಬೇಕಿದ್ದರೆ ಬಳ್ಳಾರಿಯ ಅಭಿವೃದ್ಧಿ ವಿಚಾರಗಳ ಬಗ್ಗೆ ಸಚಿವ ಬಿ ಶ್ರೀರಾಮುಲು ಅವರು ನಮ್ಮ ಪಕ್ಷದ ಉಗ್ರಪ್ಪನವರ ಜೊತೆ ಬಹಿರಂಗ ಚರ್ಚೆಗೆ ಬರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>



<p style="font-size:20px">ಬೆಲೆಯೇರಿಕೆ, ದ್ವೇಷರಾಜಕಾರಣ, ಸಾಮಾಜಿಕ ಅಶಾಂತಿಯಿಂದ ನೊಂದಿರುವ ಜನ ಪ್ರವಾಹದಂತೆ ಬಂದು ನಮ್ಮ ಪಾದಯಾತ್ರೆಯನ್ನು ಕೂಡಿಕೊಳ್ಳುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 40% ಕಮಿಷನ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು &#8220;ಜನ ಸಂಕಲ್ಪ&#8221; ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.</p>



<p style="font-size:20px">ರಾಹುಲ್‌ ಗಾಂಧಿ &nbsp;ಮತ್ತು ಸೋನಿಯಾ ಗಾಂಧಿ ಅವರು ನನಗೆ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಮುಕ್ತ ಅವಕಾಶ ಕೊಟ್ಟಿದ್ದರು. ನಮ್ಮ ಸರ್ಕಾರ ಜನರಿಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿ, ನುಡಿದಂತೆ ನಡೆದಿದೆ. ಆದರೆ ಬಿಜೆಪಿ ತನ್ನ ಪ್ರಣಾಳಿಕೆಯ 10% ಭರವಸೆಯನ್ನೂ ಈಡೇರಿಸಿಲ್ಲ ಎಂದು ಹೇಳಿದರು.</p>



<p style="font-size:20px">ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನೀಡಿದ್ದ ಪ್ರತಿ ಭರವಸೆಯೂ ಹುಸಿಯಾಗಿದ್ದು, ಬೆಲೆಯೇರಿಕೆ, ನಿರುದ್ಯೋಗ, ಬಡತನ ಇಂಥಾ ಹತ್ತಾರು ಸಮಸ್ಯೆಗಳು ದೇಶದ ಜನರ ಬದುಕು ಕಸಿದಿದೆ. ಈ ಉದ್ದೇಶಕ್ಕಾಗಿಯೇ ರಾಹುಲ್ ಗಾಂಧಿ ಅವರು ಭಾರತ‌ಐಕ್ಯತಾಯಾತ್ರೆ ಮೂಲಕ ಸಂಕಷ್ಟದಲ್ಲಿರುವ ಜನರ ಜೊತೆ ನಿಂತಿದ್ದಾರೆ. ಹೀಗಾಹಿ ರಾಹುಲ್‌ ಗಾಂಧಿ ಅವರು ಭಾರತ‌ ಐಕ್ಯತಾ ಯಾತ್ರೆ ಎಂಬ ಬಹುದೊಡ್ಡ ಸಾಹಸಕ್ಕೆ ಕೈ ಹಾಕಿರುವುದಕ್ಕಾಗಿ ಅವರಿಗೆ ತುಂಬುಹೃದಯದ ಧನ್ಯವಾದ ಅರ್ಪಿಸುತ್ತೇನೆ. ದೇಶ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗೆ ಈ ಯಾತ್ರೆಯ ಅನಿವಾರ್ಯತೆ ಇದೆ ಎಂದು ಸಿದ್ದರಾಮಯ್ಯ ಹೇಳಿದರು.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಜನರ ತೆರಿಗೆ ಹಣವನ್ನು ಹಗಲು ದರೋಡೆ ಮಾಡಿದೆ: ಯಡಿಯೂರಪ್ಪ</title>
		<link>https://peepalmedia.com/congress-looted-peoples-tax-money-in-broad-daylight-yeddyurappa/</link>
		
		<dc:creator><![CDATA[Peepal Media]]></dc:creator>
		<pubDate>Tue, 11 Oct 2022 11:36:52 +0000</pubDate>
				<category><![CDATA[ರಾಜ್ಯ]]></category>
		<category><![CDATA[ರಾಯಚೂರು]]></category>
		<category><![CDATA[B S YADIYURAPPA]]></category>
		<category><![CDATA[congrees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rahulgandhi]]></category>
		<category><![CDATA[rayachuru]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=10087</guid>

					<description><![CDATA[ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಪಕ್ಷದ ನಾಯಕರು ಜನರ ತೆರಿಗೆ ಹಣವನ್ನು ಲೂಟಿ ಮಾಡಿ ಹಗಲು ದರೋಡೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ. ರಾಯಚೂರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಹಗಲು ದರೋಡೆಯಲ್ಲಿ ನಿರತರಾಗಿತ್ತು ಎಂದು ಇಂದಿನ ವಿಧಾನ ಸಭೆಯ ಅಧ್ಯಕ್ಷರಾಗಿರುವಂತಹ ರಮೇಶ್‌ ಕುಮಾರ್‌ ಹೇಳಿದ್ದಾರೆ. ಈ ಮಾತಿಗೆ [&#8230;]]]></description>
										<content:encoded><![CDATA[
<p style="font-size:20px"><strong>ರಾಯಚೂರು:</strong> ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಪಕ್ಷದ ನಾಯಕರು ಜನರ ತೆರಿಗೆ ಹಣವನ್ನು ಲೂಟಿ ಮಾಡಿ ಹಗಲು ದರೋಡೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.</p>



<p style="font-size:20px">ರಾಯಚೂರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಹಗಲು ದರೋಡೆಯಲ್ಲಿ ನಿರತರಾಗಿತ್ತು ಎಂದು ಇಂದಿನ ವಿಧಾನ ಸಭೆಯ ಅಧ್ಯಕ್ಷರಾಗಿರುವಂತಹ ರಮೇಶ್‌ ಕುಮಾರ್‌ ಹೇಳಿದ್ದಾರೆ. ಈ ಮಾತಿಗೆ ಭಾರತ ಐಕ್ಯತಾ ಯಾತ್ರೆ ನಡೆಸುತ್ತಿರುವ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಕೂಡ ವಿರೋಧ ಮಾಡಿಲ್ಲ. ಇದರ ಅರ್ಥ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಮೇಲೆ ಜನರು ಕೊಟ್ಟಂತಹ ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಉಪಯೋಗಿಸಿಕೊಳ್ಳದೇನೆ ರಾತ್ರಿ, ಹಗಲು ದರೋಡೆಯಲ್ಲಿ ನಿರತರಾಗಿದ್ದರು ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷೀ ಬೇಕಿಲ್ಲ ಎಂದರು.</p>



<p style="font-size:20px">ಮುಂದುವರೆದು ಮಾತನಾಡಿದ ಅವರು, ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದಲ್ಲಿ ಕೂಡ ಕಲ್ಲಿದ್ದಲು ಹಗರಣ, ಕಾಮಲ್‌ವೆಲ್ತ್‌, 2ಜಿ ಹಗರಣ ಸೇರಿದಂತೆ 12 ಲಕ್ಷ ಕೋಟಿ.ರೂ ಅವ್ಯವಹಾರ ನಡೆದಿದೆ ಎಂದು ಯಡಿಯೂರಪ್ಪ ಹೇಳಿದರು.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್‌ ಪಕ್ಷವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇನೆ: ಮಲ್ಲಿಕಾರ್ಜುನ ಖರ್ಗೆ</title>
		<link>https://peepalmedia.com/will-take-congress-party-to-new-heights-mallikarjuna-kharge/</link>
		
		<dc:creator><![CDATA[Peepal Media]]></dc:creator>
		<pubDate>Tue, 11 Oct 2022 05:55:59 +0000</pubDate>
				<category><![CDATA[ದೇಶ]]></category>
		<category><![CDATA[congrees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[Mallikarjun Kharge]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rahulgandhi]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=9992</guid>

					<description><![CDATA[ಗುವಾಹಟಿ: ʼಸಾಮೂಹಿಕ ನಾಯಕತ್ವʼದಲ್ಲಿ ನಂಬಿಕೆ ಇದೆ ಹೀಗಾಗಿ ಪಕ್ಷವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎಲ್ಲಾ ಸದಸ್ಯರೊಂದಿಗೆ ಕೆಲಸ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಈಶಾನ್ಯ ಭಾಗದ ಕಾಂಗ್ರೆಸ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, &#8216;ಉದಯಪುರ ಘೋಷಣೆ&#8217;ಯನ್ನು ಜಾರಿಗೆ ತರುವುದು ಮತ್ತು ಮಹಿಳೆಯರು ಹಾಗೂ ಒಬಿಸಿ, ಎಸ್ಸಿ, ಎಸ್ಟಿ, ಜನಾಂಗಕ್ಕೆ ಸೇರಿದವರನ್ನು ಒಳಗೊಂಡಂತೆ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಪಕ್ಷಕ್ಕೆ ನೇಮಿಸುವ ಮೂಲಕ ಪಕ್ಷದಲ್ಲಿ &#8216;ಹೊಸ ರಕ್ತ&#8217; ತರುವುದು ತಮ್ಮ [&#8230;]]]></description>
										<content:encoded><![CDATA[
<p style="font-size:21px"><strong>ಗುವಾಹಟಿ:</strong> ʼಸಾಮೂಹಿಕ ನಾಯಕತ್ವʼದಲ್ಲಿ ನಂಬಿಕೆ ಇದೆ ಹೀಗಾಗಿ ಪಕ್ಷವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎಲ್ಲಾ ಸದಸ್ಯರೊಂದಿಗೆ ಕೆಲಸ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.</p>



<p style="font-size:21px">ಈಶಾನ್ಯ ಭಾಗದ ಕಾಂಗ್ರೆಸ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, &#8216;ಉದಯಪುರ ಘೋಷಣೆ&#8217;ಯನ್ನು ಜಾರಿಗೆ ತರುವುದು ಮತ್ತು ಮಹಿಳೆಯರು ಹಾಗೂ ಒಬಿಸಿ, ಎಸ್ಸಿ, ಎಸ್ಟಿ, ಜನಾಂಗಕ್ಕೆ ಸೇರಿದವರನ್ನು ಒಳಗೊಂಡಂತೆ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಪಕ್ಷಕ್ಕೆ ನೇಮಿಸುವ ಮೂಲಕ ಪಕ್ಷದಲ್ಲಿ &#8216;ಹೊಸ ರಕ್ತ&#8217; ತರುವುದು ತಮ್ಮ ಪ್ರಾಥಮಿಕ ಗುರಿಯಾಗಿದೆ ಎಂದು ಹೇಳಿದರು.</p>



<p style="font-size:21px">ನನಗೆ ಸಮಾಲೋಚನೆ ಮತ್ತು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ. ಜನರು ನನ್ನನ್ನು ಹಿಂಬಾಲಿಸುವುದರಲ್ಲಿ ನನಗೆ ನಂಬಿಕೆ ಇಲ್ಲ, ಆದರೆ ಅವರು ನನ್ನ ಪಕ್ಕದಲ್ಲಿ ನಡೆಯಬೇಕೆಂದು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.</p>



<p style="font-size:21px">ಮುಂದುವರೆದು ಮಾತನಾಡಿದ ಅವರು, ಗಾಂಧಿ ಕುಟುಂಬದ ಯಾವುದೇ ಸದಸ್ಯರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಿಲ್ಲದ ಕಾರಣ, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿರುವುದಾಗಿ ಖರ್ಗೆ ಹೇಳಿದರು.</p>



<p style="font-size:21px">ಸೋನಿಯಾ ಮತ್ತು ರಾಹುಲ್ ಗಾಂಧಿ ಇಬ್ಬರೂ ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಭರವಸೆ ನೀಡಿದ್ದರಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಪ್ರತಿನಿಧಿಗಳೇ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ ಎಂದು ಖರ್ಗೆ ತಿಳಿಸಿದರು.</p>



<p style="font-size:21px">ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ದೇಶ ಮತ್ತು ಪ್ರತಿಪಕ್ಷಗಳನ್ನು ವಿಭಜಿಸುವುದು ಬಿಜೆಪಿಯವರ ಉದ್ದೇಶವಾಗಿದೆ. ಹೀಗಾಗಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪಕ್ಷದ ಸದಸ್ಯರು ಒಗ್ಗಟ್ಟಾಗಿರಬೇಕು ಎಂದು ಅವರು ಒತ್ತಾಯಿಸಿದರು.</p>



<p style="font-size:21px">ಈ ಹಿಂದೆ ಇಂದಿರಾ ಮತ್ತು ರಾಜೀವ್ ಗಾಂಧಿ ಅವರು ಮುಂದಿಟ್ಟಿದ್ದ ಜವಾಹರಲಾಲ್ ನೆಹರೂ ಅವರ ಪರಂಪರೆಯನ್ನು ಕಾಂಗ್ರೆಸ್ ರಕ್ಷಿಸಬೇಕಿದೆ. ಈ ಹಿನ್ನಲೆಯಲ್ಲಿ 20 ವರ್ಷಗಳ ಕಾಲ ಪಕ್ಷದ ಚುಕ್ಕಾಣಿ ಹಿಡಿದ ನಂತರ ಜ್ಞಾನ ಮತ್ತು ಅನುಭವ ಹೊಂದಿರುವ ಸೋನಿಯಾ ಗಾಂಧಿ ಅವರ ಮಾತನ್ನು ಕೇಳುವುದು ನಮ್ಮ ಕರ್ತವ್ಯ ಎಂದು ಖರ್ಗೆ ಹೇಳಿದರು.</p>
]]></content:encoded>
					
		
		
			</item>
		<item>
		<title>ಭಾರತ ಐಕ್ಯತಾ ಯಾತ್ರೆಯಲ್ಲಿ ನಡೆದ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ</title>
		<link>https://peepalmedia.com/congress-leader-sonia-gandhi-in-bharat-jodo-yatra/</link>
		
		<dc:creator><![CDATA[Peepal Media]]></dc:creator>
		<pubDate>Thu, 06 Oct 2022 05:57:43 +0000</pubDate>
				<category><![CDATA[ರಾಜಕೀಯ]]></category>
		<category><![CDATA[bharath jodo yathre]]></category>
		<category><![CDATA[congrees]]></category>
		<category><![CDATA[DK SHIVKUMAR]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[siddaramayya]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=9017</guid>

					<description><![CDATA[ಅನಾರೋಗ್ಯದ ಹಿನ್ನೆಲೆಯಿಂದ ಸುದೀರ್ಘ ಅವಧಿಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಇದ್ದ ಸೋನಿಯಾ ಗಾಂಧಿಯವರು ಇಂದು &#8216;ಭಾರತ ಐಕ್ಯತಾ ಯಾತ್ರೆ&#8217;ಯಲ್ಲಿ ಹೆಜ್ಜೆ ಹಾಕಿದ್ದಾರೆ. ಇಂದು ಬೆಳಿಗ್ಗೆ ಮಂಡ್ಯದಿಂದ ಶುರುವಾದ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಜೊತೆಗೆ ಸೋನಿಯಾಗಾಂಧಿಯವರು ಕೆಲವಷ್ಟು ದೂರ ಹೆಜ್ಜೆ ಹಾಕಿದರು. ಆಯುಧ ಪೂಜೆ ಮತ್ತು ವಿಜಯದಶಮಿ ಕಾರಣದಿಂದ ಎರಡು ದಿನಗಳ ಕಾಲ ವಿರಾಮ ತಗೆದುಕೊಂಡಿದ್ದ ಭಾರತ ಐಕ್ಯತಾ ಯಾತ್ರೆ ಇಂದು ಬೆಳಿಗ್ಗೆಯಿಂದ ಮತ್ತೆ ಚಾಲನೆ ಪಡೆದುಕೊಂಡಿದೆ. ಯಾತ್ರೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ [&#8230;]]]></description>
										<content:encoded><![CDATA[
<p style="font-size:20px">ಅನಾರೋಗ್ಯದ ಹಿನ್ನೆಲೆಯಿಂದ ಸುದೀರ್ಘ ಅವಧಿಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಇದ್ದ ಸೋನಿಯಾ ಗಾಂಧಿಯವರು ಇಂದು &#8216;ಭಾರತ ಐಕ್ಯತಾ ಯಾತ್ರೆ&#8217;ಯಲ್ಲಿ ಹೆಜ್ಜೆ ಹಾಕಿದ್ದಾರೆ. ಇಂದು ಬೆಳಿಗ್ಗೆ ಮಂಡ್ಯದಿಂದ ಶುರುವಾದ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಜೊತೆಗೆ ಸೋನಿಯಾಗಾಂಧಿಯವರು ಕೆಲವಷ್ಟು ದೂರ ಹೆಜ್ಜೆ ಹಾಕಿದರು.</p>



<p style="font-size:20px">ಆಯುಧ ಪೂಜೆ ಮತ್ತು ವಿಜಯದಶಮಿ ಕಾರಣದಿಂದ ಎರಡು ದಿನಗಳ ಕಾಲ ವಿರಾಮ ತಗೆದುಕೊಂಡಿದ್ದ ಭಾರತ ಐಕ್ಯತಾ ಯಾತ್ರೆ ಇಂದು ಬೆಳಿಗ್ಗೆಯಿಂದ ಮತ್ತೆ ಚಾಲನೆ ಪಡೆದುಕೊಂಡಿದೆ. ಯಾತ್ರೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಕಳೆದ ಸೋಮವಾರವೇ ಕರ್ನಾಟಕಕ್ಕೆ ಬಂದಿದ್ದ ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಎರಡು ದಿನಗಳ ದಸರಾ ವಿರಾಮದ ನಂತರ ತಮ್ಮ ಪುತ್ರ ರಾಹುಲ್ ಜೊತೆಗೆ ಇಂದು ನಡಿಗೆಯಲ್ಲಿ ಜೊತೆಯಾದರು.</p>



<figure class="wp-block-image size-large"><img fetchpriority="high" decoding="async" width="819" height="1024" src="https://peepalmedia.com/wp-content/uploads/2022/10/IMG-20221006-WA0016-819x1024.jpg" alt="" class="wp-image-9022" srcset="https://peepalmedia.com/wp-content/uploads/2022/10/IMG-20221006-WA0016-819x1024.jpg 819w, https://peepalmedia.com/wp-content/uploads/2022/10/IMG-20221006-WA0016-240x300.jpg 240w, https://peepalmedia.com/wp-content/uploads/2022/10/IMG-20221006-WA0016-768x960.jpg 768w, https://peepalmedia.com/wp-content/uploads/2022/10/IMG-20221006-WA0016-150x188.jpg 150w, https://peepalmedia.com/wp-content/uploads/2022/10/IMG-20221006-WA0016-300x375.jpg 300w, https://peepalmedia.com/wp-content/uploads/2022/10/IMG-20221006-WA0016-696x870.jpg 696w, https://peepalmedia.com/wp-content/uploads/2022/10/IMG-20221006-WA0016.jpg 1024w" sizes="(max-width: 819px) 100vw, 819px" /></figure>



<p style="font-size:20px">ಕರ್ನಾಟಕದ ರಾಜಕೀಯ ಬೆಳವಣಿಗೆಯಲ್ಲಿ ಇದು ರಾಜ್ಯದ ಸಾರ್ವತ್ರಿಕ ಚುನಾವಣಾ ವರ್ಷವೂ ಆಗಿರುವುದರಿಂದ ಕಾಂಗ್ರೆಸ್ ನ ಈ ಭಾರತ್ ಐಕ್ಯತಾ ಯಾತ್ರೆ ಹಲವಷ್ಟು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕೂಡಾ ನಾನಾ ರೀತಿಯ ತಂತ್ರಗಾರಿಕೆಯಲ್ಲಿ ತೊಡಗಿದೆ.</p>



<p style="font-size:20px">ಸಧ್ಯ &#8216;ಸೋನಿಯಾಗಾಂಧಿಯವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವುದು ಪಕ್ಷಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಯುವ ಜನತೆ ಯಾತ್ರೆಯಲ್ಲಿ ಜೊತೆಯಾಗಲು ಇದು ಮತ್ತಷ್ಟು ಹುರುಪು ನೀಡಿದೆ. ವಿಜಯದಶಮಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಿಸಲಿದೆ‌. ಪಾದಯಾತ್ರೆ ಮೂಲಕ ಪ್ರತಿಯೊಬ್ಬ ಮುಖಂಡರೂ ತಳಮಟ್ಟದ ಸಾಮಾನ್ಯ ಮತದಾರರನ್ನೂ ತಲುಪುವ ಉದ್ದೇಶ ಕೂಡಾ ಈಡೇರುತ್ತಿದೆ. ಸೋನಿಯಾ ಗಾಂಧಿ ಅವರು ಕರ್ನಾಟಕದ ಬೀದಿಗಳಲ್ಲಿ ನಡೆಯಲು ಬಂದಿರುವುದು ನಮಗೆ ಹೆಮ್ಮೆ, ನಾವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು ಬಿಜೆಪಿ ತನ್ನ ಅಂಗಡಿಯನ್ನು ಮುಚ್ಚುವ ಹಾದಿಯಲ್ಲಿದೆ&#8217; ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಬಿಜೆಪಿ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ: ಬೊಮ್ಮಾಯಿಗೆ ಡಿ.ಕೆ.ಶಿ ತಿರುಗೇಟು</title>
		<link>https://peepalmedia.com/bjp-party-is-out-on-bail-dk-shis-revenge-for-bomma/</link>
		
		<dc:creator><![CDATA[Peepal Media]]></dc:creator>
		<pubDate>Sun, 02 Oct 2022 08:24:42 +0000</pubDate>
				<category><![CDATA[ಮೈಸೂರು]]></category>
		<category><![CDATA[ರಾಜ್ಯ]]></category>
		<category><![CDATA[bail]]></category>
		<category><![CDATA[bharath jodo yathre]]></category>
		<category><![CDATA[congrees]]></category>
		<category><![CDATA[D K shivakumar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[mysore]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[rahulgandhi]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=8550</guid>

					<description><![CDATA[ಮೈಸೂರು: ಕಾಂಗ್ರೆಸ್‌ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಹೌದು, ನಾನು ಜಾಮೀನಿನ ಮೇಲೆ ಇದ್ದೇನೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಬಿಜೆಪಿಯ ಹತ್ತಾರು ಮಂದಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಅಷ್ಟೇಲ್ಲಾ ಏಕೆ ಯಡಿಯೂರಪ್ಪ ವಿರುದ್ಧ ಕೇಸ್ ಇಲ್ಲವೇ? ಎಂದು ಪ್ರಶ್ನಿಸಿದರು. ನನ್ನ [&#8230;]]]></description>
										<content:encoded><![CDATA[
<p style="font-size:20px"><strong>ಮೈಸೂರು:</strong> ಕಾಂಗ್ರೆಸ್‌ ಪಕ್ಷದವರು ಜಾಮೀನಿನ ಮೇಲೆ ಹೊರಗಿದ್ದಾರೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ.</p>



<p style="font-size:20px">ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿದ ಅವರು, ಹೌದು, ನಾನು ಜಾಮೀನಿನ ಮೇಲೆ ಇದ್ದೇನೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಬಿಜೆಪಿಯ ಹತ್ತಾರು ಮಂದಿ ಕೂಡ ಜಾಮೀನಿನ ಮೇಲೆ ಇದ್ದಾರೆ. ಅಷ್ಟೇಲ್ಲಾ ಏಕೆ ಯಡಿಯೂರಪ್ಪ ವಿರುದ್ಧ ಕೇಸ್ ಇಲ್ಲವೇ? ಎಂದು ಪ್ರಶ್ನಿಸಿದರು.</p>



<p style="font-size:20px">ನನ್ನ ವಿರುದ್ಧ ಬೊಮ್ಮಾಯಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ನನ್ನನ್ನು ಪರಪ್ಪನ ಅಗ್ರಹಾರಕ್ಕೆ (ಕೇಂದ್ರ ಕಾರಾಗೃಹ) ಕಳುಹಿಸಲಿ, ನಾನು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದು ಡಿ.ಕೆ.ಶಿ ಹೇಳಿದರು.</p>
]]></content:encoded>
					
		
		
			</item>
		<item>
		<title>ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್</title>
		<link>https://peepalmedia.com/soniyaa-gandhige-mattomme-covid-positive/</link>
		
		<dc:creator><![CDATA[Peepal Media]]></dc:creator>
		<pubDate>Sat, 13 Aug 2022 08:15:07 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[congrees]]></category>
		<category><![CDATA[covid 19]]></category>
		<category><![CDATA[jairamramesh]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[SoniaGandhi]]></category>
		<category><![CDATA[twitter]]></category>
		<guid isPermaLink="false">https://peepalmedia.com/?p=1716</guid>

					<description><![CDATA[ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ಕಾಂಗ್ರೆಸ್ ಮುಂಖಡ ಜೈ ರಾಮ್ ರಮೇಶ್ ಟ್ವೀಟ್ ಮೂಲಕ ಹೇಳಿದ್ದಾರೆ.]]></description>
										<content:encoded><![CDATA[
<p class="has-medium-font-size">ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್ ಆಗಿರುವುದರಿಂದ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ಕಾಂಗ್ರೆಸ್ ಮುಂಖಡ ಜೈ ರಾಮ್ ರಮೇಶ್ ಟ್ವೀಟ್ ಮೂಲಕ ಹೇಳಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="und" dir="ltr">Congress President Smt.Sonia Gandhi has tested positive for Covid-19 today. She will remain in isolation as per Govt. protocol.<br><br>आज कांग्रेस अध्यक्ष श्रीमती सोनिया गांधी का कोविड-19 टेस्ट रिपोर्ट पॉजिटिव आया है। वह सरकार द्वारा जारी प्रोटोकॉल का पालन करते हुए आइसोलेशन में रहेंगी।</p>&mdash; Jairam Ramesh (@Jairam_Ramesh) <a href="https://twitter.com/Jairam_Ramesh/status/1558346448106029056?ref_src=twsrc%5Etfw">August 13, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಭಾರತೀಯ ಪ್ರಜಾಪ್ರಭುತ್ವದ ಸಾವನ್ನು ನೋಡುತ್ತಿದ್ದೇವೆ: ರಾಹುಲ್ ಗಾಂಧಿ</title>
		<link>https://peepalmedia.com/bharateeya-prajaprabhutvada-saavannu/</link>
		
		<dc:creator><![CDATA[Peepal Media]]></dc:creator>
		<pubDate>Fri, 05 Aug 2022 06:03:31 +0000</pubDate>
				<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[congress]]></category>
		<category><![CDATA[democracy]]></category>
		<category><![CDATA[ED]]></category>
		<category><![CDATA[EnforcementDirectorate]]></category>
		<category><![CDATA[GDP]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[protest]]></category>
		<category><![CDATA[rahulgandhi]]></category>
		<category><![CDATA[SoniaGandhi]]></category>
		<guid isPermaLink="false">https://peepalmedia.com/?p=555</guid>

					<description><![CDATA[ನವದೆಹಲಿ: ಪ್ರತಿಪಕ್ಷ ನಾಯಕರ ವಿರುದ್ಧ ಎಲ್ಲ ಕೇಂದ್ರೀಯ ಸಂಸ್ಥೆಗಳನ್ನು ನರೇಂದ್ರ ಮೋದಿ ಸರಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ರೀತಿಯು ಭಾರತದಲ್ಲಿ ಆರಂಭಗೊಂಡಿರುವ ಸರ್ವಾಧಿಕಾರದ ಯುಗವನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಳು ದಶಕಗಳಲ್ಲಿ ಹಂತಹಂತವಾಗಿ ಕಾಂಗ್ರೆಸ್ ಪಕ್ಷವು ಕಟ್ಟಿದ ಪ್ರಜಾಪ್ರಭುತ್ವದ ಸ್ಥಂಭವನ್ನು ಕೇವಲ ಐದು ವರ್ಷಗಳಲ್ಲಿ ನಾಶಪಡಿಸಲಾಗಿದೆ. ನಾವು ಈಗ ಭಾರತೀಯ ಪ್ರಜಾಪ್ರಭುತ್ವದ ಸಾವನ್ನು ನೋಡುತ್ತಿದ್ದೇವೆ. ಈ ಸರ್ಕಾರದ ಏಕೈಕ ಅಜೆಂಡಾ ಜನರ ಸಮಸ್ಯೆಗಳನ್ನು [&#8230;]]]></description>
										<content:encoded><![CDATA[
<pre class="wp-block-preformatted has-medium-font-size"><strong>ನವದೆಹಲಿ:</strong> ಪ್ರತಿಪಕ್ಷ ನಾಯಕರ ವಿರುದ್ಧ ಎಲ್ಲ ಕೇಂದ್ರೀಯ ಸಂಸ್ಥೆಗಳನ್ನು ನರೇಂದ್ರ ಮೋದಿ ಸರಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ರೀತಿಯು ಭಾರತದಲ್ಲಿ ಆರಂಭಗೊಂಡಿರುವ ಸರ್ವಾಧಿಕಾರದ ಯುಗವನ್ನು ತೋರಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಳು ದಶಕಗಳಲ್ಲಿ ಹಂತಹಂತವಾಗಿ ಕಾಂಗ್ರೆಸ್ ಪಕ್ಷವು ಕಟ್ಟಿದ ಪ್ರಜಾಪ್ರಭುತ್ವದ ಸ್ಥಂಭವನ್ನು ಕೇವಲ ಐದು ವರ್ಷಗಳಲ್ಲಿ ನಾಶಪಡಿಸಲಾಗಿದೆ. ನಾವು ಈಗ ಭಾರತೀಯ ಪ್ರಜಾಪ್ರಭುತ್ವದ ಸಾವನ್ನು ನೋಡುತ್ತಿದ್ದೇವೆ. ಈ ಸರ್ಕಾರದ ಏಕೈಕ ಅಜೆಂಡಾ ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುವುದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಏರುತ್ತಿರುವ ಬೆಲೆಗಳು, ನಿರುದ್ಯೋಗ ಮತ್ತು ಸರಕು ಮತ್ತು ಸೇವಾ ತೆರಿಗೆ ಅಥವಾ ಜಿಎಸ್ಟಿ ದರ ಏರಿಕೆ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ. ಪಕ್ಷದ ನಾಯಕರು ದೆಹಲಿಯ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸಲು ಯೋಜಿಸಿದ್ದಾರೆ, ಅದೇ ರೀತಿ ಕಾಂಗ್ರೆಸ್‌ನ ರಾಜ್ಯ ಘಟಕಗಳು ದೇಶಾದ್ಯಂತ ಇದೇ ರೀತಿಯ ಪ್ರತಿಭಟನೆಗಳನ್ನು ನಡೆಸಲಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿತ್ತು.

ಈ ಸರ್ಕಾರದ ವಿರುದ್ಧ ಮಾತನಾಡುವ ಯಾರಾದರೂ ಕೆಟ್ಟದಾಗಿ ದಾಳಿ ಮಾಡುತ್ತಾರೆ. ಜೈಲಿಗೆ ಹಾಕುತ್ತಾರೆ. ಜನರ ಸಮಸ್ಯೆಗಳನ್ನು ಎತ್ತಲು ಬಿಡುತ್ತಿಲ್ಲ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಇಂದು ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ, ನಾಲ್ಕು ಜನರ ಸರ್ವಾಧಿಕಾರವಿದೆ ಎಂದು ಕಿಡಿಕಾರಿದರಲ್ಲದೆ, ಉಭಯ ಸದನಗಳ ಸ್ಪೀಕರ್‌ಗಳು ವಿರೋಧಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿರುವುದು ವಿಷಾಧನೀಯ ಎಂದರು.

ರಾಹುಲ್ ಗಾಂಧಿ ಮತ್ತು ಅವರ ತಾಯಿ ಮತ್ತು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಜೂನ್‌ನಲ್ಲಿ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಐದು ದಿನಗಳ ಕಾಲ ಸುಮಾರು 50 ಗಂಟೆಗಳ ಕಾಲ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಪ್ರಶ್ನಿಸಿತ್ತು, ನಂತರ ಸೋನಿಯಾ ಗಾಂಧಿಯವರನ್ನೂ ಸಹ ವಿಚಾರಣೆಗೆ ಒಳಪಡಿಸಲಾಗಿತ್ತು.</pre>
]]></content:encoded>
					
		
		
			</item>
	</channel>
</rss>
