<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>sowjanya case &#8211; Peepal Media</title>
	<atom:link href="https://peepalmedia.com/tag/sowjanya-case/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 25 Mar 2025 10:09:14 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>sowjanya case &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಧರ್ಮಸ್ಥಳ ಮತ್ತು ಹೆಗ್ಗಡೆ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ</title>
		<link>https://peepalmedia.com/john-doe-warrant-issued-against-those-making-derogatory-statements-about-dharmasthala-and-heggade-family/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 25 Mar 2025 10:07:33 +0000</pubDate>
				<category><![CDATA[ಕೋರ್ಟು - ಕಾನೂನು]]></category>
		<category><![CDATA[dharmasthala]]></category>
		<category><![CDATA[Dr.D.Veerendra Heggade]]></category>
		<category><![CDATA[Soujanya murder case]]></category>
		<category><![CDATA[sowjanya case]]></category>
		<guid isPermaLink="false">https://peepalmedia.com/?p=55726</guid>

					<description><![CDATA[ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದು ಮತ್ತು ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಜಾನ್ ಡೋ (ಅಶೋಕಕುಮಾರ್ ಆದೇಶ) ಆದೇಶ ಹೊರಡಿಸಿದೆ. ಈ ಸಂಬಂಧ ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ವಾದ ಮಂಡಿಸಿದ್ದು, ದಾವೆಯನ್ನು ವಿಚಾರಣೆ ನಡೆಸಿದ ಸಿಸಿಎಚ್‌–11ನೇ ನ್ಯಾಯಾಲಯ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಸಾಮಾಜಿಕ [&#8230;]]]></description>
										<content:encoded><![CDATA[
<p>ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದು ಮತ್ತು ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಜಾನ್ ಡೋ (ಅಶೋಕಕುಮಾರ್ ಆದೇಶ) ಆದೇಶ ಹೊರಡಿಸಿದೆ.</p>



<p>ಈ ಸಂಬಂಧ ಹಿರಿಯ ನ್ಯಾಯವಾದಿ ಎಸ್. ರಾಜಶೇಖರ್ ಹಿಳಿಯಾರು ವಾದ ಮಂಡಿಸಿದ್ದು, ದಾವೆಯನ್ನು ವಿಚಾರಣೆ ನಡೆಸಿದ ಸಿಸಿಎಚ್‌–11ನೇ ನ್ಯಾಯಾಲಯ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇತರ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ತೆಗೆದುಹಾಕುವಂತೆ ಸೂಚನೆ ನೀಡಿದೆ</p>



<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾನ್ ಡೋ ಆದೇಶದ ಅನ್ವಯ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ ಆ್ಯಪ್‌, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಯೂಟ್ಯೂಬ್‌, ಟಿ.ವಿ.ಚಾನೆಲ್‌ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮ ಪ್ರಕಾರಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಅಥವಾ ಮಾತನಾಡಬಾರದು ಎಂದು ನಿರ್ಬಂಧ ಹೇರಿದೆ.</p>



<p><strong>ಜಾನ್ ಡೋ (john doe) ಆದೇಶ </strong>ಅಜ್ಞಾತ ಅಥವಾ ಪತ್ತೆಯಾಗದವರ ವಿರುದ್ಧ ಜಾರಿಯಾಗುವ ಕಾನೂನು ಕ್ರಮ ಇದಾಗಿದ್ದು, ಸಾಮಾಜಿಕ ಜಾಲತಾಣಗಳು ಮತ್ತು ಟಿವಿ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಅವಹೇಳನಕಾರಿ ಹೇಳಿಕೆ ಮತ್ತು ಅಪಪ್ರಚಾರಕ್ಕೆ ಕಡಿವಾಣ ಹಾಕಲಿದೆ. ನ್ಯಾಯಾಲಯ ಹೊರಡಿಸಿರುವ ಈ ಆದೇಶವನ್ನು ಉಲ್ಲಂಘಿಸಿದ್ದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. </p>
]]></content:encoded>
					
		
		
			</item>
		<item>
		<title>ಸಮೀರ್ ಗೆ ಬಿಗ್ ರಿಲೀಫ್, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರಿಗೆ ಹೈಕೋರ್ಟ್ ತರಾಟೆ</title>
		<link>https://peepalmedia.com/big-relief-for-sameer-high-court-slams-police-for-filing-suo-motu-complaint/</link>
		
		<dc:creator><![CDATA[Peepal Media]]></dc:creator>
		<pubDate>Thu, 06 Mar 2025 13:01:57 +0000</pubDate>
				<category><![CDATA[ರಾಜ್ಯ]]></category>
		<category><![CDATA[ballary]]></category>
		<category><![CDATA[karnatakahighcourt]]></category>
		<category><![CDATA[police]]></category>
		<category><![CDATA[smeer]]></category>
		<category><![CDATA[sowjanya]]></category>
		<category><![CDATA[sowjanya case]]></category>
		<guid isPermaLink="false">https://peepalmedia.com/?p=54874</guid>

					<description><![CDATA[ಬಳ್ಳಾರಿ : ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಬಿಗ್ ರಿಲೀಫ್ ಸಿಕ್ಕಿದೆ. ಅವರನ್ನು ಅರೆಸ್ಟ್ ಮಾಡುವಂತಿಲ್ಲ ಹಾಗೂ ಪೊಲೀಸ್‌ ಠಾಣೆಗೂ ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಕಾನೂನು ಉಲ್ಲಂಘಸಿ ಪೂಲೀಸರು ನೋಟಿಸ್ ಕೊಟ್ಟಿದ್ದಾರೆ ಎಂದು ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಈ ಬಗ್ಗೆ ಮಾಜಿ ಪಿಎಸ್ಐ ಗಿರೀಶ್ ಮಟ್ಟಣ್ಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.  ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ [&#8230;]]]></description>
										<content:encoded><![CDATA[
<p><strong>ಬಳ್ಳಾರಿ :</strong> ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಬಿಗ್ ರಿಲೀಫ್ ಸಿಕ್ಕಿದೆ. ಅವರನ್ನು ಅರೆಸ್ಟ್ ಮಾಡುವಂತಿಲ್ಲ ಹಾಗೂ ಪೊಲೀಸ್‌ ಠಾಣೆಗೂ ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಕಾನೂನು ಉಲ್ಲಂಘಸಿ ಪೂಲೀಸರು ನೋಟಿಸ್ ಕೊಟ್ಟಿದ್ದಾರೆ ಎಂದು ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. </p>



<p>ಈ ಬಗ್ಗೆ ಮಾಜಿ ಪಿಎಸ್ಐ ಗಿರೀಶ್ ಮಟ್ಟಣ್ಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. </p>



<p>ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ.ಡಿ. ವಿಡಿಯೋ ಮಾಡಿದ್ದರು, ಇದು ಸಾಮಾಜಿಕ ಜಾಣತಾಣಗಳಲ್ಲಿ ಸಕತ್ ವೈರಲ್ ಆಗುವ ಮೂಲಕ ಸೌಜನ್ಯ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ಬರುವಂತೆ ಮಾಡಿತ್ತು. </p>



<p>ಈ ಬಗ್ಗೆ ಪರ ವಿರೋಧ ಚರ್ಚೆಗಳು ಹೆಚ್ಚಾಗಿ ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. </p>



<p>ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲೆ ಧಾರ್ಮಿಕ ಭಾವನೆ ಹೊಂದಿರುವ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿ ವೀಡಿಯೋ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.</p>



<p>ಬುಧವಾರ ರಾತ್ರಿ ಸಮೀರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ -299 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.</p>



<p>ತಡರಾತ್ರಿ 10.45 ಗಂಟೆಗೆ ಸಮೀರ್ ಎಂಡಿ ಅವರಿಗೆ ನೋಟಿಸ್ ನೀಡಿದ್ದರು. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದ ಸಮೀರ್ ನನಗೆ ಪೊಲೀಸ್ ನೋಟಿಸ್ ಬಂದಿದೆ ಆದರೆ ಇದರ ಬಗ್ಗೆ ನನಗೆ ಯಾವುದೇ ಭಯ ಇಲ್ಲ. ಯಾಕೆಂದರೆ ನಾನು ಮಾಡಿದಂತಹ ಸೌಜನ್ಯ ಪ್ರಕರಣದ ವೀಡಿಯೋ ಸಂಬಂಧ ಎಲ್ಲ ಆಧಾರಗಳನ್ನು ಇಟ್ಟುಕೊಂಡು ಮಾತನಾಡಿದ್ದೇನೆ. </p>



<p>ಈ ವೀಡಿಯೋಗೆ ಒಂದು ಮಿಲಿಯನ್ ವ್ಯೂವ್ಸ್‌ ಬರುತ್ತಿದ್ದಂತಯೇ ಸಾಮಾಜಿಕ ಮಾಧ್ಯಮದಲ್ಲಿ ನನ್ನ ವೈಯಕ್ತಿಕ ಮಾಹಿತಿ ಮತ್ತು ನನ್ನ ವಿಳಾಸ ಲೀಕ್‌ ಆಯಿತು. ನಂತರ ನನಗೆ ಹಲವಾರು ಜೀವ ಬೆದರಿಕೆ ಕರೆಗಳ ಬರಲು ಪ್ರಾರಂಭವಾದವು. ಪೊಲೀಸರ ಬಳಿ ಹೋದರೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆಯೂ ನನಗಿರಲಿಲ್ಲ. ಬಳಿಕ ನಾನು ಕೂಡಲೇ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಂಡದ ಸದಸ್ಯರನ್ನು ಸಂಪರ್ಕಿಸಿದೆ. ಅವರು ನನಗೆ ದೈರ್ಯ ನೀಡಿ ವಕೀಲರ ಸಹಾಯವನ್ನು ನೀಡಿದ್ದಾರೆ ಎಂದು ಸಮೀರ್ ವೀಡಿಯೊದಲ್ಲಿ ತಿಳಿಸಿದ್ದರು. </p>



<p>ಇದೀಗ ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ಸಮೀರ್ ಅವರಿಗೆ ರಿಲೀಫ್ ನೀಡಿದ್ದು, ಅವರನ್ನು ಅರೆಸ್ಟ್ ಮಾಡುವಂತಿಲ್ಲ ಎಂದು ಪೊಲೀಸರಿಗೆ ತಾಕೀತು ಮಾಡಿದೆ. ಜೊತೆಗೆ ಕಾನೂನು ಉಲ್ಲಂಘಿಸಿ ನೋಟಿಸ್ ಕೊಟ್ಟಿರುವುದಾಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.&nbsp;</p>
]]></content:encoded>
					
		
		
			</item>
		<item>
		<title>ಸೌಜನ್ಯ ಪರ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಗೆ ಪೊಲೀಸ್ ನೋಟಿಸ್</title>
		<link>https://peepalmedia.com/police-notice-issued-to-youtuber-sameer-for-making-pro-civility-video/</link>
		
		<dc:creator><![CDATA[Peepal Media]]></dc:creator>
		<pubDate>Thu, 06 Mar 2025 08:36:23 +0000</pubDate>
				<category><![CDATA[ರಾಜ್ಯ]]></category>
		<category><![CDATA[Dharmastala]]></category>
		<category><![CDATA[karnataka congrees]]></category>
		<category><![CDATA[murder]]></category>
		<category><![CDATA[rape]]></category>
		<category><![CDATA[sowjanya case]]></category>
		<category><![CDATA[youtube]]></category>
		<guid isPermaLink="false">https://peepalmedia.com/?p=54866</guid>

					<description><![CDATA[ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಡಿಯೋ ಮಾಡಿದ್ದ ಸಮೀರ್ ಎಂ.ಡಿ. ಅವರ ಮನೆಗೆ ಮಾರ್ಚ್ 6ರ, ಬುಧವಾರ ತಡರಾತ್ರಿ ಪೊಲೀಸರು ಪ್ರವೇಶಿಸಿದ್ದಾರೆ. ಬಂಧಿಸಲು ಯತ್ನಿಸಿ, ಆನಂತರ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಬುಧವಾರ ರಾತ್ರಿ 1ಗಂಟೆ ಸುಮಾರಿ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿರುವ ಸಮೀರ್ ತಮ್ಮ ಮೇಲಾಗುತ್ತಿರುವ ಟ್ರೋಲ್ ಗಳು, ಮತ್ತು ಅವರ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ.  ಸಮೀರ್ ತಮ್ಮ ಯೂಟ್ಯೂಬ್ ನಲ್ಲಿ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ [&#8230;]]]></description>
										<content:encoded><![CDATA[
<p>ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಡಿಯೋ ಮಾಡಿದ್ದ ಸಮೀರ್ ಎಂ.ಡಿ. ಅವರ ಮನೆಗೆ ಮಾರ್ಚ್ 6ರ, ಬುಧವಾರ ತಡರಾತ್ರಿ ಪೊಲೀಸರು ಪ್ರವೇಶಿಸಿದ್ದಾರೆ. ಬಂಧಿಸಲು ಯತ್ನಿಸಿ, ಆನಂತರ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಬುಧವಾರ ರಾತ್ರಿ 1ಗಂಟೆ ಸುಮಾರಿ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿರುವ ಸಮೀರ್ ತಮ್ಮ ಮೇಲಾಗುತ್ತಿರುವ ಟ್ರೋಲ್ ಗಳು, ಮತ್ತು ಅವರ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ. </p>



<p>ಸಮೀರ್ ತಮ್ಮ ಯೂಟ್ಯೂಬ್ ನಲ್ಲಿ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಗೆ ಮಾಡಿದ್ದ ವೀಡಿಯೊವೊಂದು ಹೆಚ್ಚು ವೈರಲ್ ಆಗಿತ್ತು, ಆ ಮೂಲಕ ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಸಮೀರ್ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿರುವವರಿಗೆ ಪ್ರತಿಕ್ರಿಯೆ ನೀಡಿರುವ ಸಮೀರ್, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಈ  ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂಬ ಆದೇಶ ನೀಡಲಾಗಿದ್ದು, ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. </p>



<p>ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.</p>



<p>ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.</p>



<p>ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.</p>



<p>ಪ್ರಸ್ತುತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಆದರೆ, ನಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದೇನೆ, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.</p>



<p>“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.</p>
]]></content:encoded>
					
		
		
			</item>
	</channel>
</rss>
