<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>sri ramulu &#8211; Peepal Media</title>
	<atom:link href="https://peepalmedia.com/tag/sri-ramulu/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 29 Feb 2024 09:28:39 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>sri ramulu &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಜನಾರ್ದನ ರೆಡ್ಡಿ ಬಿಜೆಪಿಗೆ ಸೇರಿಸಿಕೊಳ್ಳಲು ಅಮಿತ್ ಅವರಲ್ಲಿ ಶ್ರೀರಾಮುಲು ಮನವಿ</title>
		<link>https://peepalmedia.com/sriramulu-requests-amit-to-include-janardana-reddy-in-bjp/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 29 Feb 2024 09:28:38 +0000</pubDate>
				<category><![CDATA[ರಾಜ್ಯ]]></category>
		<category><![CDATA[amit shah]]></category>
		<category><![CDATA[janardana reddy]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sri ramulu]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=36538</guid>

					<description><![CDATA[ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ‌ಪಕ್ಷದ ನಾಯಕ, ಶಾಸಕ ಜನಾರ್ದನ ರೆಡ್ಡಿ ಅವರನ್ನು‌ ಬಿಜೆಪಿಗೆ ಸೇರಿಸಿಕೊಳ್ಳಬೇಕು ಎಂದು ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, &#8216;ದೆಹಲಿಗೆ ಹೋಗಿದ್ದಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನಾರ್ದನ ರೆಡ್ಡಿ ಅವರ ಕುರಿತಾಗಿ ನನ್ನೊಂದಿಗೆ ಚರ್ಚಿಸಿದರು. ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ನಾನು ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದರು. ರೆಡ್ಡಿ ಈ ಭಾಗದಲ್ಲಿ ಶಕ್ತಿಯುತ ನಾಯಕ. ಅವರು [&#8230;]]]></description>
										<content:encoded><![CDATA[
<p>ಬಳ್ಳಾರಿ: ಕಲ್ಯಾಣ ರಾಜ್ಯ ಪ್ರಗತಿ‌ಪಕ್ಷದ ನಾಯಕ, ಶಾಸಕ ಜನಾರ್ದನ ರೆಡ್ಡಿ ಅವರನ್ನು‌ ಬಿಜೆಪಿಗೆ ಸೇರಿಸಿಕೊಳ್ಳಬೇಕು ಎಂದು ಅಮಿತ್ ಶಾ ಅವರಲ್ಲಿ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.</p>



<p><br>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, &#8216;ದೆಹಲಿಗೆ ಹೋಗಿದ್ದಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನಾರ್ದನ ರೆಡ್ಡಿ ಅವರ ಕುರಿತಾಗಿ ನನ್ನೊಂದಿಗೆ ಚರ್ಚಿಸಿದರು. ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ನಾನು ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದರು.</p>



<p><br>ರೆಡ್ಡಿ ಈ ಭಾಗದಲ್ಲಿ ಶಕ್ತಿಯುತ ನಾಯಕ. ಅವರು ಪಕ್ಷಕ್ಕೆ ಬಂದರೆ ಬಿಜೆಪಿಗೆ ಬರಲಿದೆ ಎಂದಿದ್ದೇನೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರಿಗೂ ಇದೇ ಅಭಿಪ್ರಾಯ ನೀಡಿದ್ದೇನೆ ಎಂದು ಅವರು ವಿವರಿಸಿದರು.</p>



<p><br>ನಮ್ಮಿಬ್ಬರ ವೈಮನಸ್ಸು ಇರುವುದು ನಿಜ. ಬೇರೆ ಬೇರೆ ಕಾರಣಕ್ಕೆ ದೂರವಿದ್ದೇವೆ. ಆದರೆ ಅವರು ಪಕ್ಷಕ್ಕೆ ಬಂದರೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಪಕ್ಷದ ವಿಚಾರವಾಗಿ ಒಗ್ಗೂಟ್ಟಾಗಿರುತ್ತೇವೆ ಎಂದರು.</p>



<p><br>ರಾಜ್ಯಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್‌ಗೆ ಮತ ಚಲಾಯಿಸಿದ್ದರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, &#8216;ಅದು ಅವರ ಪಕ್ಷದ ನಿರ್ಧಾರ. ಅದರ ಕುರಿತು ನಾನು ಏನು ಹೇಳುವುದಿಲ್ಲ ಎಂದರು.</p>



<p><br>ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಹಾಲಿ ಸಂಸದ ದೇವೇಂದ್ರಪ್ಪ ಅವರಿಗೇ ಕೊಟ್ಟರೆ ನನ್ನ ಅಭ್ಯಂತರವಿಲ್ಲ. ಅವರ ಪರವಾಗಿ ನಾವೆಲ್ಲ ದುಡಿಯುತ್ತೇವೆ. ಒಂದು ವೇಳೆ ನನಗೆ ನೀಡಿದರೂ ಸ್ಪರ್ಧಿಸುತ್ತೇನೆ ಎಂದರು.</p>



<p><br><strong>ಇಂದು ಪಾಕ್‌ ಪರ ಘೋಷಣೆ, ನಾಳೆ ಬಾಂಬ್<br></strong>ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣವನ್ನು ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದ್ದಾರೆ.</p>



<p><br>ಕಾಂಗ್ರೆಸ್ ಪಕ್ಷ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದ್ದು, ಭಯೋತ್ಪಾದಕರ ಪರವಾಗಿ ನಿಂತಿದೆ. ವಿಧಾನಸೌಧ ದೇಗುಲವಿದ್ದಂತೆ. ಇಂಥ ದೇಗುಲದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ಕಿಡಿಗೇಡಿ ಕೃತ್ಯ. ವಿಧಾನಸೌಧದಲ್ಲಿ ಘೋಷಣೆ ಕೂಗಿದವರು ಮುಂದೊಂದು ದಿನ ಅದೇ ವಿಧಾನಸೌಧದಲ್ಲಿ ಬಾಂಬ್ ಇಡುತ್ತಾರೆ ಎಂದು ಆರೋಪಿಸಿದರು.</p>



<p><br>ಬಳ್ಳಾರಿಯವರಾದ ನಾಸೀರ್ ಹುಸೇನ್ ಎರಡನೇ ಬಾರಿ ರಾಜ್ಯಸಭಾ ಸದಸ್ಯರಾಗಿದ್ದು ಖುಷಿಯಿದೆ. ಆದರೆ, ಅವರು ಮನಸ್ಸು ಮಾಡಿದ್ದರೆ ಘೋಷಣೆ ಕೂಗಿದವರನ್ನು ಜೈಲಿಗೆ ಕಳುಹಿಸಬಹುದಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಈ ರೀತಿಯ ಘಟನೆಗಳು ಹೆಚ್ಚುತ್ತಿವೆ. ಕಾಂಗ್ರೆಸ್ ಒಂದು ಕಡೆ ಸಂವಿಧಾನ ಜಾಗೃತಿ ಜಾಥಾ ನಡೆಸುತ್ತದೆ. ಆದರೆ ಸಂವಿಧಾನಕ್ಕೆ ಅಗೌರವ ತರುವಂತೆ ನಡೆದುಕೊಳ್ಳುತ್ತಾರೆ. ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಇದೇ ಕಾಂಗ್ರೆಸ್. ಎಂದು ದೂರಿದರು.</p>



<p><br>&#8216;ಪಾಕಿಸ್ತಾನ ಜಿಂದಾಬಾದ್&#8217; ಘೋಷಣೆಗೆ ಸಂಬಂಧಿಸಿದ ವಿಡಿಯೊವನ್ನು ಸರ್ಕಾರ ಎಫ್ಎಸ್ಎಲ್ ಪರಿಶೀಲನೆಗಾಗಿ ಕಳುಹಿಸಿದೆ.ಎಫ್ಎಸ್ಎಲ್ ವರದಿಯೂ ಸರ್ಕಾರದ ಪರವಾಗಿಯೇ ಬರುವ ಆತಂಕವಿದೆ. ಸರ್ಕಾರ ನಡೆಸುವ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಲಿ.ದೇಶದ್ರೋಹಿಗಳಿಗೆ ರಕ್ಷಣೆ ನೀಡುವುದು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಎಂದು ವ್ಯಂಗ್ಯವಾಡಿದರು.</p>
]]></content:encoded>
					
		
		
			</item>
		<item>
		<title>ರಿಪೇರಿ ಬಸ್‌ಗಳನ್ನು ಹಿಂಪಡೆದು ಹೊಸ ಬಸ್‌ಗಳ ಖರೀದಿ : ಶ್ರೀರಾಮುಲು</title>
		<link>https://peepalmedia.com/riperi-busgalannu-himpadedu-hosa-busgala-khareedi-sriramulu/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 04 Nov 2022 07:44:43 +0000</pubDate>
				<category><![CDATA[ಬೆಳಗಾವಿ]]></category>
		<category><![CDATA[bus]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[new bus]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sri ramulu]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=14096</guid>

					<description><![CDATA[ಬೆಳಗಾವಿ: ನವೆಂಬರ್‌ 3ರಂದು ಬೆಳಗಾವಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು, ʼರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 10ಲಕ್ಷ ಕಿಲೋಮೀಟರ್‌ ಗೂ ಹೆಚ್ಚು ಸಂಚರಿಸಿರುವ ಸುಮಾರು 30 ಸಾವಿರ ಬಸ್ ಗಳನ್ನು ಒಂದೊಂದಾಗಿಯೇ ಹಿಂದಕ್ಕೆ ಪಡಿದು ಹೊಸ ಬಸ್‌ಗಳನ್ನು ಖರೀದಿಸಲಾಗುವುದುʼ ಎಂದು ಹೇಳಿದ್ದಾರೆ. ʼಕೋವಿಡ್‌ ಲಾಕ್ಡೌನ್‌ ಸಂದರ್ಭದಲ್ಲಿ ಸಾರಿಗೆ ಸಿಬ್ಬಂದಿಯ ವೇತನಕ್ಕಾಗಿ ಸರ್ಕಾರದಿಂದ 4000 ಕೋಟಿ ರುಪಾಯಿಗಳನ್ನು ಅನುದಾನ ನೀಡಲಾಗಿತ್ತು. ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಉದ್ಯೋಗಾವಕಾಶ ಸೇರಿದಂತೆ ಅಗತ್ಯ [&#8230;]]]></description>
										<content:encoded><![CDATA[
<p><strong>ಬೆಳಗಾವಿ</strong>: ನವೆಂಬರ್‌ 3ರಂದು ಬೆಳಗಾವಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು, ʼರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 10ಲಕ್ಷ ಕಿಲೋಮೀಟರ್‌ ಗೂ ಹೆಚ್ಚು ಸಂಚರಿಸಿರುವ ಸುಮಾರು 30 ಸಾವಿರ ಬಸ್ ಗಳನ್ನು ಒಂದೊಂದಾಗಿಯೇ ಹಿಂದಕ್ಕೆ ಪಡಿದು ಹೊಸ ಬಸ್‌ಗಳನ್ನು ಖರೀದಿಸಲಾಗುವುದುʼ ಎಂದು ಹೇಳಿದ್ದಾರೆ.</p>



<p>ʼಕೋವಿಡ್‌ ಲಾಕ್ಡೌನ್‌ ಸಂದರ್ಭದಲ್ಲಿ ಸಾರಿಗೆ ಸಿಬ್ಬಂದಿಯ ವೇತನಕ್ಕಾಗಿ ಸರ್ಕಾರದಿಂದ 4000 ಕೋಟಿ ರುಪಾಯಿಗಳನ್ನು ಅನುದಾನ ನೀಡಲಾಗಿತ್ತು. ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ಸಾರಿಗೆ ಸಿಬ್ಬಂದಿ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಉದ್ಯೋಗಾವಕಾಶ ಸೇರಿದಂತೆ ಅಗತ್ಯ ನೆರವನ್ನು ನೀಡಲಾಗುವುದುʼ ಎಂದು ತಿಳಿಸಿದರು.</p>



<p>ʼಕೊರೋನಾ ಕಾರಣದಿಂದ ಸಾರಿಗೆ ಸಂಸ್ಥೆ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು. ಆದರೂ ಪ್ರಯಾಣಿಕರ ಅನುಕೂಲಕ್ಕಾಗಿ 3500 ಬಸ್‌ಗಳನ್ನು ಖರೀದಿಸಿದ್ದು, ಇನ್ನಷ್ಟು ಬಸ್‌ಗಳನ್ನು ಖರೀದಿಸಲಾಗುವುದು. 10 ಲಕ್ಷ ಕಿ.ಮೀ ಚಲಿಸಿರುವಂತಹ ಬಸ್‌ಗಳು ಬಹಳಷ್ಟು ರಿಪೇರಿಯ ಸ್ಥಿತಿಯಲ್ಲಿವೆ. ಈ ರೀತಿ ರಿಪೇರಿಯಾಗಿರುವ ಬಸ್ ಗಳನ್ನು ಒಂದೊಂದಾಗಿಯೇ ಹಿಂದಕ್ಕೆ ಪಡಿದು ಹೊಸ ಬಸ್‌ಗಳನ್ನು ಖರೀದಿಸಲಾಗುವುದುʼ &nbsp;ಎಂದು ಶ್ರೀರಾಮುಲು ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ಸರ್ಕಾರದ ಅಯೋಗ್ಯತನಕ್ಕೆ ಕನ್ನಡಿ ಹಿಡಿದು ತೋರಿಸಿದ ಶ್ರೀರಾಮುಲು: ಕಾಂಗ್ರೆಸ್‌ ಟೀಕೆ</title>
		<link>https://peepalmedia.com/sarkarada-ayogyathanakke-kannadi-hididu-torisida-sriramulu-congress-teeke/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 03 Nov 2022 11:29:33 +0000</pubDate>
				<category><![CDATA[ಬಳ್ಳಾರಿ]]></category>
		<category><![CDATA[ballari]]></category>
		<category><![CDATA[bengalure]]></category>
		<category><![CDATA[congress]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sri ramulu]]></category>
		<category><![CDATA[state politics]]></category>
		<category><![CDATA[vedavathi]]></category>
		<category><![CDATA[writing]]></category>
		<guid isPermaLink="false">https://peepalmedia.com/?p=14013</guid>

					<description><![CDATA[ಬಳ್ಳಾರಿ: ಬಳ್ಳಾರಿ ಉಸ್ತುವಾರಿ ಸಚಿವ ಶ್ರೀರಾಮುಲು ಕಾಲುವೆಗೆ ನೀರು ಹರಿಸಬೇಕೆಂದು ವೇದಾವತಿ ನದಿಯ ಬಳಿ ವಾಸ್ತವ್ಯ ಹೂಡಿದ್ದರು. ಈ ಹಿನ್ನಲೆಯಲ್ಲಿ ಶ್ರೀರಾಮುಲು ಅವರನ್ನು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಹರಿಯುತ್ತಿರುವ ವೇದಾವತಿ ನದಿಗೆ ಇತ್ತೀಚೆಗೆ ದಾಖಲೆಯ ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರು ಹರಿದು ಬಂದಿದ್ದು, ಮೇಲ್ಸೇತುವೆಯ ಪಿಲ್ಲರ್ ಕುಸಿದ ಪರಿಣಾಮ ಈ ಭಾಗ ಮತ್ತು ನೆರೆಯ ಆಂಧ್ರಪ್ರದೇಶದ ಕರ್ನೂಲು ಭಾಗದ ರೈತರಿಗೂ ಹೆಚ್ಚು ಹಾನಿ ಆಗಿತ್ತು. ಪಿಲ್ಲರ್ ಕುಸಿದ ಹಿನ್ನೆಲೆಯಲ್ಲಿ ಕಳೆದ [&#8230;]]]></description>
										<content:encoded><![CDATA[
<p>ಬಳ್ಳಾರಿ: ಬಳ್ಳಾರಿ ಉಸ್ತುವಾರಿ ಸಚಿವ ಶ್ರೀರಾಮುಲು ಕಾಲುವೆಗೆ ನೀರು ಹರಿಸಬೇಕೆಂದು ವೇದಾವತಿ ನದಿಯ ಬಳಿ ವಾಸ್ತವ್ಯ ಹೂಡಿದ್ದರು. ಈ ಹಿನ್ನಲೆಯಲ್ಲಿ ಶ್ರೀರಾಮುಲು ಅವರನ್ನು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ</p>



<p>ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಹರಿಯುತ್ತಿರುವ ವೇದಾವತಿ ನದಿಗೆ ಇತ್ತೀಚೆಗೆ ದಾಖಲೆಯ ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರು ಹರಿದು ಬಂದಿದ್ದು, ಮೇಲ್ಸೇತುವೆಯ ಪಿಲ್ಲರ್ ಕುಸಿದ ಪರಿಣಾಮ ಈ ಭಾಗ ಮತ್ತು ನೆರೆಯ ಆಂಧ್ರಪ್ರದೇಶದ ಕರ್ನೂಲು ಭಾಗದ ರೈತರಿಗೂ ಹೆಚ್ಚು ಹಾನಿ ಆಗಿತ್ತು. ಪಿಲ್ಲರ್ ಕುಸಿದ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ಈ ಭಾಗಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗಿತ್ತು. ಇದರಿಂದ 20 ಗ್ರಾಮಗಳಲ್ಲಿ ಭತ್ತ ಬೆಳೆದ ರೈತರಿಗೆ ತೀವ್ರ ಸಮಸ್ಯೆ ಉಂಟಾಗಿತ್ತು.</p>



<p>ಈ ಸಂಬಂಧ ರೈತರ ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ನಾಗೇಂದ್ರ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ರೈತರು, ಸಂಘಟನೆಗಳು, ಸ್ಥಳೀಯ ಮುಖಂಡರು ಮತ್ತು ಗುತ್ತಿಗೆದಾರರ ಜೊತೆಗೆ ಮಾತನಾಡಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಜೊತೆಗೆ ಪಕ್ಕದ ಆಂಧ್ರ ಪ್ರದೇಶದ ಜನಪ್ರತಿನಿಧಿಗಳ ಜೊತೆಗೆ ಮಾತನಾಡಿ ಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿ, ತಾತ್ಕಾಲಿಕ ಪಿಲ್ಲರ್ ನಿರ್ಮಾಣಕ್ಕೆ ಕಾಮಗಾರಿ ಶುರು ಮಾಡಿದ್ದರು.</p>



<p>ಇದರ ಬಗ್ಗೆ ಮಾಹಿತಿ ಅರಿತ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚಿಸಿ, “ನಾನು ಇಲ್ಲೇ ಇದ್ದು ರೈತರಿಗೆ ನೀರು ಬಿಡಿಸಿಯೇ ಇಲ್ಲಿಂದ ತೆರಳುವುದು. ಅಲ್ಲಿಯವರೆಗೆ ಇಲ್ಲಿಂದ ನಿರ್ಗಮಿಸುವುದಿಲ್ಲ” ಎಂದು ಕಾಮಗಾರಿ ಸ್ಥಳದಲ್ಲೇ ವಾಸ್ತವ್ಯ ಹೂಡಿದರು. ಇನ್ನೂ ಮುಂದುವರಿದು ಅಲ್ಲಿಗೇ ಹಾಸಿಗೆ ತರಿಸಿ ಕಾಮಗಾರಿ ಸ್ಥಳದಲ್ಲೇ ನಿದ್ರೆಗೂ ಜಾರಿದ್ದರು.</p>



<p>ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ʼಬಸವರಾಜ ಬೊಮ್ಮಾಯಿಯವರ ಅಸಾಮರ್ಥ್ಯವನ್ನು ಎತ್ತಿ ತೋರಿಸಲು ಸಚಿವ ಶ್ರೀ ರಾಮುಲು ಅವರು ಬಳ್ಳಾರಿ ವೇದಾವತಿ ನದಿ ಬಳಿ ಪ್ರತಿಭಟನೆ ಕುಳಿತಿದ್ದಾರೆ. ಅಧಿಕಾರಿಗಳು ಸಿಎಂ ಮಾತು ಕೇಳುವುದಿಲ್ಲ, ಸಚಿವರಿಗೂ, ಸಿಎಂಗೂ ಹಾಗೂ ಅಧಿಕಾರಿಗಳ ಮದ್ಯ ಸಮನ್ವಯತೆ ಇಲ್ಲ, ಇವರ ಧರಣಿ ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿʼ ಎಂದು ಕಾಂಗ್ರೆಸ್‌ ಟೀಕಿಸಿದೆʼ</p>
]]></content:encoded>
					
		
		
			</item>
	</channel>
</rss>
