<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>sriramulu &#8211; Peepal Media</title>
	<atom:link href="https://peepalmedia.com/tag/sriramulu/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 13 Dec 2022 06:08:32 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>sriramulu &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಹೊಸ ಬಸ್ ಘಟಕ ಉದ್ಘಾಟಿಸಿದ ಶ್ರೀರಾಮುಲು</title>
		<link>https://peepalmedia.com/sriramulu-inaugurated-a-new-bus-unit-in-manvi-town-of-raichur-district/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 13 Dec 2022 06:08:31 +0000</pubDate>
				<category><![CDATA[ರಾಜ್ಯ]]></category>
		<category><![CDATA[ರಾಯಚೂರು]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[manvi New bus unit]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Post Matric Girls Hostel for Scheduled Classes]]></category>
		<category><![CDATA[Rayachur]]></category>
		<category><![CDATA[sriramulu]]></category>
		<guid isPermaLink="false">https://peepalmedia.com/?p=18365</guid>

					<description><![CDATA[ಮಾನ್ವಿ: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಹೊಸ ಬಸ್ ಘಟಕ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಸಾರಿಗೆ ಸಚಿವ ಶ್ರೀರಾಮುಲು ಸೋಮುವಾರ ಉದ್ಘಾಟಿಸಿದ್ದಾರೆ. ಉದ್ಘಾಟನೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು ಅವರು, ಸರ್ಕಾರ ಮುಂದಿನ ನಾಲ್ಕೈದು ತಿಂಗಳಲ್ಲಿ ಹೊಸ ಬಸ್ ಗಳನ್ನು ಖರೀದಿ ಮಾಡುತ್ತಿದ್ದು, ರಾಯಚೂರು , ಬೀದರ್‍, ಕಲಬುರಗಿ ಜಿಲ್ಲೆಗಳಿಗೆ ಹೆಚ್ಚುವರಿ ಬಸ್ ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.&#160; ಅಲ್ಲದೇ ಚಾಲಕರು ವೇತನ ಪರಿಷ್ಕರಣೆ ಕುರಿತು ಮನವಿ [&#8230;]]]></description>
										<content:encoded><![CDATA[
<p><strong>ಮಾನ್ವಿ</strong>: ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಹೊಸ ಬಸ್ ಘಟಕ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಸಾರಿಗೆ ಸಚಿವ ಶ್ರೀರಾಮುಲು ಸೋಮುವಾರ ಉದ್ಘಾಟಿಸಿದ್ದಾರೆ.</p>



<figure class="wp-block-image size-large is-resized"><img fetchpriority="high" decoding="async" src="https://peepalmedia.com/wp-content/uploads/2022/12/ramulu-1024x683.jpg" alt="" class="wp-image-18368" width="432" height="280"/><figcaption class="wp-element-caption"> ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆಯ ದೃಶ್ಯ</figcaption></figure>



<p>ಉದ್ಘಾಟನೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು ಅವರು, ಸರ್ಕಾರ ಮುಂದಿನ ನಾಲ್ಕೈದು ತಿಂಗಳಲ್ಲಿ ಹೊಸ ಬಸ್ ಗಳನ್ನು ಖರೀದಿ ಮಾಡುತ್ತಿದ್ದು, ರಾಯಚೂರು , ಬೀದರ್‍, ಕಲಬುರಗಿ ಜಿಲ್ಲೆಗಳಿಗೆ ಹೆಚ್ಚುವರಿ ಬಸ್ ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.&nbsp; ಅಲ್ಲದೇ ಚಾಲಕರು ವೇತನ ಪರಿಷ್ಕರಣೆ ಕುರಿತು ಮನವಿ ಸಲ್ಲಿಸಿದ್ದು,&nbsp; ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.</p>



<p>ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಮತ್ತು ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.</p>



<p>ಈ ಸಂದರ್ಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹಾಗೂ&nbsp; ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ ಸೇರಿದಂತೆ ಸಾರಿಗೆ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ಡಬಲ್ ಇಂಜಿನ್ ಸರ್ಕಾರದ ಆಡಳಿತದಲ್ಲಿ ಸಾಮಾಜಿಕ ನ್ಯಾಯ ಸಮಾಧಿಯಾಗುತ್ತಿದೆ: ವಿ.ಎಸ್. ಉಗ್ರಪ್ಪ</title>
		<link>https://peepalmedia.com/social-justice-getting-buried-under-double-engine-government-rule-v-s-ugrappa/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 02 Dec 2022 12:46:34 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[sriramulu]]></category>
		<guid isPermaLink="false">https://peepalmedia.com/?p=17335</guid>

					<description><![CDATA[ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತದಲ್ಲಿದ್ದು ಪ್ರಧಾನಿ &#160;ಮೋದಿಯವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರದ ಅವಧಿಯಲ್ಲಿ ಸಾಮಾಜಿಕ ನ್ಯಾಯ ಸಮಾಧಿಯಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್ ಉಗ್ರಪ್ಪ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ವ್ಯವಸ್ಥೆಯ ಕಟ್ಟ ಕಡೆಯ ಬಡವರು ಅದರಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಮಕ್ಕಳ ಭವಿಷ್ಯದ ಮೇಲೆ ಚಪ್ಪಡಿ ಕಲ್ಲು ಎಳೆಯುವಂತಹ ಪ್ರಯತ್ನ ನರೇಂದ್ರ ಮೋದಿಯವರಿಂದ ನಡೆದಿದೆ ದೂರಿದ್ದಾರೆ. [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ರಾಜ್ಯ ಹಾಗೂ ರಾಷ್ಟ್ರದಲ್ಲಿ ಡಬಲ್ ಇಂಜಿನ್ ಸರ್ಕಾರ ಆಡಳಿತದಲ್ಲಿದ್ದು ಪ್ರಧಾನಿ &nbsp;ಮೋದಿಯವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರದ ಅವಧಿಯಲ್ಲಿ ಸಾಮಾಜಿಕ ನ್ಯಾಯ ಸಮಾಧಿಯಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಎಸ್ ಉಗ್ರಪ್ಪ ಆರೋಪಿಸಿದ್ದಾರೆ.</p>



<p>ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ವ್ಯವಸ್ಥೆಯ ಕಟ್ಟ ಕಡೆಯ ಬಡವರು ಅದರಲ್ಲೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಮಕ್ಕಳ ಭವಿಷ್ಯದ ಮೇಲೆ ಚಪ್ಪಡಿ ಕಲ್ಲು ಎಳೆಯುವಂತಹ ಪ್ರಯತ್ನ ನರೇಂದ್ರ ಮೋದಿಯವರಿಂದ ನಡೆದಿದೆ ದೂರಿದ್ದಾರೆ.</p>



<p>ಪ್ರಾಥಮಿಕ ಹಾಗೂ ಮಧ್ಯಮ ಶಾಲೆಗಳಲ್ಲಿ 22.56 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, 14.89 ಲಕ್ಷ ಶಾಲೆಗಳಲ್ಲಿ ಈ ಮಕ್ಕಳು ಕಲಿಯುತ್ತಿದ್ದಾರೆ. ಅದರಲ್ಲಿ 10.22 ಲಕ್ಷ ಸರ್ಕಾರಿಶಾಲೆಗಳು ಆಗಿವೆ. ಈ ಶಾಲೆಗಳಲ್ಲಿ ಗ್ರಾಮೀಣ ಭಾಗದ ಹಾಗೂ ಎಲ್ಲಾ ವರ್ಗದ ಮಕ್ಕಳು ಕಲಿಯುತ್ತಿದ್ದಾರೆ. ಶಿಕ್ಷಣ ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿತ್ತು ಎಂದರು.</p>



<p>ಕಾಂಗ್ರೆಸ್ ಅವಧಿಯಲ್ಲಿ ಸಂವಿಧಾನಕ್ಕೆ ಆರ್ಟಿಕಲ್ 21ಎ ಮೂಲಕ ಶಿಕ್ಷಣ ಹಕ್ಕು ತರುವ ಮೂಲಕ ಸಮಾಜದ ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ ಸಿಗುವಂತೆ ಮಾಡಲಾಗಿತ್ತು. ಇದರ ಜೊತೆಗೆ ಬಡವರು ಅಲ್ಪಸಂಖ್ಯಾತರು ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ವಿದ್ಯಾರ್ಥಿ ವೇತನ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು. ಈ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ಶೇಕಡ 75ರಷ್ಟು ಹಾಗೂ ರಾಜ್ಯ ಸರ್ಕಾರ ಶೇಕಡ 25 ರಷ್ಟು ನೀಡುತಿತ್ತು ಎಂದು ಹೇಳಿದರು.</p>



<p>ಈಗ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಮಾತನಾಡಿದ ನಂತರ ಈ ಅನುಪಾತ 60:40 ರಷ್ಟು ಆಗಿದೆ ಎಂಬ ಮಾಹಿತಿ ನೀಡಿದರು. ಆದರೆ ಇಲ್ಲಿ ಆಘಾತಕಾರಿ ವಿಚಾರ ಏನೆಂದರೆ, ಒಂದರಿಂದ ಎಂಟನೇ ತರಗತಿಯವರೆಗಿನ ಬಡ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ಮೋದಿಯವರ ಸರ್ಕಾರ ನಿಲ್ಲಿಸಿದೆ. ಮೋದಿ ಅವರ ಸರ್ಕಾರ ಮಕ್ಕಳ ಭವಿಷ್ಯದ ವಿಚಾರದಲ್ಲಿ ಇಂತಹ ಕೆಟ್ಟ ನಿರ್ಧಾರ ತೆಗೆದುಕೊಂಡಿದೆ. ಇದೇ ಕಾರಣಕ್ಕೆ ನಾನು ಮೋದಿ ಅವರನ್ನು ಆಧುನಿಕ ಭಸ್ಮಾಸುರರು ಎಂದು ಕರೆಯುತ್ತಿರುತ್ತೇನೆ ಎಂದು ಟೀಕಿಸಿದ್ದಾರೆ.</p>



<p>ದೇಶದ ಮುಂದಿನ ಶಿಲ್ಪಿಗಳ ಆಗುವಂತಹ ಮಕ್ಕಳ ಭವಿಷ್ಯ ಹಾಗೂ ಬದುಕಿನ ಜೊತೆ ಬಿಜೆಪಿ ನಾಯಕರು ಚೆಲ್ಲಾಟವಾಡುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದಾರೆ. ಇದನ್ನು ಅತ್ಯಂತ ಕಠಿಣ ಶಬ್ದಗಳಿಂದ ಖಂಡಿಸುತ್ತೇವೆ ಎಂದರು.</p>



<p>ಮೋದಿ ಅವರ ಸರ್ಕಾರ 2015 ರಿಂದ 2021 ರವರೆಗೆ ಸಂಸತ್ತಿನಲ್ಲಿ ನೀಡಲಾಗಿರುವ ಅಂಕಿ ಅಂಶಗಳ ಪ್ರಕಾರ ಕಳೆದ ಐದು ವರ್ಷಗಳಲ್ಲಿ ಶ್ರೀಮಂತರ ಸುಮಾರು 10 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕುಗಳ ಸಾಲವನ್ನು ಮನ್ನಾ ಮಾಡಿದೆ. ಕೇಂದ್ರ ಸರ್ಕಾರ ಬಡವರ ಪರವಾಗಿಲ್ಲಾ ಶ್ರೀಮಂತರ ಪರವಾಗಿ ಇದೆ ಎಂಬುದಕ್ಕೆ ಇದೇ ಸಾಕ್ಷಿ. 2017- 18ರಲ್ಲಿ 1.61 ಲಕ್ಷ ಕೋಟಿಯಷ್ಟು, 2018-19 ರಲ್ಲಿ 2.36 ಲಕ್ಷ ಕೋಟಿ, 2019-20 ರಲ್ಲಿ 2.34 ಲಕ್ಷ ಕೋಟಿ, 2020-21ರಲ್ಲಿ 2.02 ಲಕ್ಷ ಕೋಟಿ 2021- 22 ರಲ್ಲಿ 1.57 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನ ಮಾಡಿದೆ ಎಂದು ತಿಳಿಸಿದರು.</p>



<p>ಹಿಂದೂ ಪ್ರಾಜೆಕ್ಟ್ ಲಿಮಿಟೆಡ್ ಎಂಬ ಕಂಪನಿ 835 ಕೋಟಿ ಸಾಲ ಮಾಡಿದ್ದು, ಅದರಲ್ಲಿ 830 ಕೋಟಿಯನ್ನು ಮನ್ನಾ ಮಾಡಲಾಗಿದೆ. ಅದೇ ರೀತಿ ಕಿಂಗ್ಫಿಶರ್ ಏರ್ಲೈನ್ಸ್ ವಿವಿಧ ಬ್ಯಾಂಕುಗಳಲ್ಲಿ 1335 ಕೋಟಿ ಸಾಲ ಮಾಡಿದ್ದಾರೆ ಇದರಲ್ಲಿ 1935 ಕೋಟಿಯನ್ನು ಮನ್ನಾ ಮಾಡಲಾಗಿದೆ. ಅದೇ ರೀತಿ ಟ್ರಾನ್ಸ್ಪರಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1217 ಕೋಟಿ ಸಾಲ ಮಾಡಿದ್ದು ಅದರಲ್ಲಿ ಸಂಪೂರ್ಣ 1217 ಕೋಟಿ ಮನ್ನಾ ಮಾಡಿದೆ. ಕೆಎಸ್ಐ ಲಿಮಿಟೆಡ್ ಕಂಪನಿ, 861 ಕೋಟಿ ಸಾಲ ಪಡೆದಿದ್ದು ಇದರಲ್ಲಿ 859 ಕೋಟಿ ಮನ್ನ ಮಾಡಿದೆ. ಜೂಮ್ ಡೆವಲಪರ್ಸ್ ಕಂಪನಿ ಸಾಲ ಪಡೆದಿದ್ದು 1968 ಕೋಟಿ ಮೊನ್ನ ಆಗಿರುವುದು ಕೂಡ 1968 ಕೋಟಿ. ರೋಡ್ ಮ್ಯಾಕ್ ಗ್ಲೋಬಲ್ 2851 ಕೋಟಿ ಮನ್ನಾ ಆಗಿರುವುದು 1302ಕೋಟಿ. ಹೀಗೆ ಹಲವು ಕಂಪನಿಗಳ ಸಾಲ ಮನ್ನಾ ಮಾಡಲಾಗಿದೆ. ಆದರೆ ನಮ್ಮ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು ಕೇವಲ 400 ಕೋಟಿ ಮಾತ್ರ. ಇದನ್ನು ನೀಡಲು ಸಾಧ್ಯವಿಲ್ಲ ಎಂದರೆ ಇವರ ಆದ್ಯತೆ ಕೇವಲ ಹಣವಂತರು ಶ್ರೀಮಂತರು ಮಾತ್ರವೇ ಹೊರತು ಬಡವರು ಪರಿಶಿಷ್ಟರು ಅಲ್ಲ ಎಂದು ಹೇಳಿದರು.</p>



<p>ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಸಾಧ್ಯವಾಗದ ಸರ್ಕಾರ, ಅದಾನಿ ಅಂಬಾನಿ ಸೇರಿದಂತೆ ಕೆಲವೇ ಕೆಲವು ಮಂದಿಯ ಲಕ್ಷಾಂತರ ಕೋಟಿ ಸಾಲವನ್ನು ಮನ್ನಾ ಮಾಡುವ ಮೂಲಕ ಬಡ ಮಕ್ಕಳ ಶಿಕ್ಷಣದ ಮೇಲೆ ಚಪ್ಪಡಿ ಕಲ್ಲು ಎಳೆಯುತ್ತಿದ್ದಾರೆ. ಇವರು ಯಾವ ಮುಖ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p>ರಾಜ್ಯದಲ್ಲಿ 2013ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಈ ಸಮುದಾಯಗಳ ಜನಸಂಖ್ಯೆ ಅನುಗುಣವಾಗಿ ಬಜೆಟ್ ನಲ್ಲಿ ಎಲ್ಲಾ ಇಲಾಖೆಗಳಲ್ಲಿ ಹಣವನ್ನು ಮೀಸಲಿಡುವ ಕಾನೂನನ್ನು ಜಾರಿಗೆ ತರಲಾಯಿತು. ಇಂತಹ ಕಾನೂನು ಇರುವುದು ದೇಶದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಮಾತ್ರ. ಅದರ ಪರಿಣಾಮವಾಗಿ ಶೇಕಡ 17ರಷ್ಟು ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸುಮಾರು 30 ಸಾವಿರ ಕೋಟಿಗಿಂತ ಹೆಚ್ಚು ಅನುದಾನವನ್ನು ಪ್ರತಿ ವರ್ಷ ನೀಡಲಾಗುವುದು. ಈ ಅನ್ನದಾನವನ್ನು ಆಯಾ ವರ್ಷ ಬಳಕೆ ಮಾಡಿಕೊಳ್ಳಬೇಕು. ಹಾಗೂ ಈ ಹಣವನ್ನು ಬೇರೆ ವಿಚಾರಗಳಿಗೆ ವರ್ಗಾವಣೆ ಮಾಡಬಾರದು ಎಂದು ಕಾನೂನಿನಲ್ಲಿ ತಿಳಿಸಿದೆ. ಒಂದು ವೇಳೆ ಈ ಅನುದಾನ ಬಳಕೆ ಆಗದಿದ್ದರೆ ಅದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ಕಾನೂನನ್ನು ತರಲಾಗಿದೆ ಎಂದರು.</p>



<p>ರಾಜ್ಯ ಸರ್ಕಾರ ಈಗ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಬಗ್ಗೆ ಎಲ್ಲಿಲ್ಲದ ಪ್ರೀತಿಯ ಮಾತುಗಳನ್ನಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಅನುದಾನವನ್ನು ಈ ವರ್ಷ 29,165 ಕೋಟಿ ನೀಡಿದ್ದು, ಇದರ ಪೈಕಿ 15% ಗಿಂತ ಕಡಿಮೆ ಅನುದಾನ ಬಳಕೆಯಾಗಿದೆ. ಅದರಲ್ಲೂ ವಿಶೇಷವಾಗಿ ಉನ್ನತ ಶಿಕ್ಷಣ ಇಲಾಖೆಯಲ್ಲಿ 2.2% ನಷ್ಟು ಮಾತ್ರ ಬಳಕೆಯಾಗಿದೆ. ಕೌಶಲ್ಯ ಅಭಿವೃದ್ಧಿ ಇಲಾಖೆ 4.5% ಅನುದಾನವನ್ನು ಬಳಕೆ ಮಾಡಿದೆ. ಪರಿಶಿಷ್ಟರ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಮಿತಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಈ ಸಮಿತಿ ವರದಿ ನೀಡಿ ಮೂರು ವರ್ಷಗಳಾದರು ಯಾವುದೇ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ ಈಗ ರಾಜ್ಯಪಾಲರ ಮೂಲಕ ಸುಗ್ರೀವಾಜ್ಞೆ ಹೊರಡಿಸಿ, ಪರಿಶಿಷ್ಟ ಜಾತಿಯವರಿಗೆ 17%, ಪರಿಶಿಷ್ಟ ಪಂಗಡದವರಿಗೆ 7% ಮೀಸಲಾತಿ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.</p>



<p>2004-05ರಲ್ಲಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ, ಶಿಕ್ಷಣ ಹಾಗೂ ಉದ್ಯೋಗ ವಿಚಾರದಲ್ಲಿ ಈ ಮೀಸಲಾತಿಯನ್ನು ನೀಡಿತ್ತು. ರಾಜ್ಯ ಸರ್ಕಾರ ಸುಗ್ರೀವ ಹೊರಡಿಸಿದ್ದು ಆದರೆ ಇದುವರೆಗೂ ಯಾವುದೇ ಅಧಿಕೃತ ಆದೇಶವನ್ನು ಬಿಡುಗಡೆ ಮಾಡಿಲ್ಲ ಎಂಬ ಆಘಾತಕಾರಿ ವಿಚಾರ ಇಂದು ಬೆಳಗ್ಗೆ ತಿಳಿಯಿತು. ಬಿಜೆಪಿ ಸರ್ಕಾರಕ್ಕೆ ಪರಿಶಿಷ್ಟರಿಗೆ ಮೀಸಲಾತಿ ನೀಡಲು ನಿಜವಾಗಿ ಆಸಕ್ತಿ ಇದ್ದರೆ ಸುಗ್ರೀವಾಜ್ಞೆ ಹೊರಡಿಸಿದ ಮರುದಿನವೇ ಸರ್ಕಾರದ ಆದೇಶವನ್ನು ಹೊರಡಿಸಬೇಕಿತ್ತು ಎಂದರು.</p>



<p>ಇತ್ತೀಚಿಗೆ ಶ್ರೀರಾಮುಲು ಬಳ್ಳಾರಿ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತ ನಾವು ಕೈಗೆ ಬಳೆ ತೊಟ್ಟುಕೊಂಡಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಶ್ರೀರಾಮುಲು ಅವರು ಸ್ತ್ರೀ ಸಮುದಾಯಕ್ಕೆ ಅಪಚಾರ ಎಸಗಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿ ಆರ್ ಎಸ್ ಎಸ್ ಆಗ ಬಿಜೆಪಿಯವರು ಶ್ರೀರಾಮುಲುವರಿಂದ ಕ್ಷಮೆ ಹೇಳಿಸುತ್ತಾರೆ ಎಂದು ಭಾವಿಸಿದ್ದೆ. ಆದರೆ ಬಿಜೆಪಿಯವರಾಗಲಿ ಅಥವಾ ಆರ್ ಎಸ್ ಎಸ್ ನವರಾಗಲಿ ಹಿಂದುತ್ವದ ಪರವಾಗಿಲ್ಲಾ, ಅವರು ಮನುವಾದದ ಪರವಾಗಿದ್ದಾರೆ. ಸ್ತ್ರೀಯರನ್ನು ದ್ವಿತೀಯ ದರ್ಜೆ ಪ್ರಜೆಗಳಂತೆ ಕಾಣುತ್ತಾರೆ ಎಂಬುದು ಶ್ರೀರಾಮುಲು ಅವರ ಮಾತಿನ ಮೂಲಕ ಸ್ಪಷ್ಟವಾಗಿದೆ ಎಂದು ಹೇಳಿದರು.</p>



<p>ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರಿಗಾಗಿ ನೀಡಲಾಗಿರುವ ಅನುದಾನದಲ್ಲಿ ಕೇವಲ 15% ಮಾತ್ರ ಬಳಕೆಯಾಗಿದ್ದು, ಶ್ರೀರಾಮುಲು ಏನು ಮಾಡುತ್ತಿದ್ದರು? ಕೇಂದ್ರ ಸರ್ಕಾರ ಬಡ ಮಕ್ಕಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿದ್ದು ಈ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಯಾಕೆ ಒತ್ತಡ ತರುತ್ತಿಲ್ಲ? ನಿಮಗೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಕ್ಕಳು ಹಿಂದುಳಿದ, ಅಲ್ಪಸಂಖ್ಯಾತ ವರ್ಗದ ಮಕ್ಕಳು ಬೇಡವಾಗಿದ್ದಾರೆ. ಇದೆಲ್ಲವನ್ನು ನೋಡಿದರೆ ನೀವು ಸರ್ವಾಧಿಕಾರಿ ಪ್ರವೃತ್ತಿಯನ್ನು ಮೈಗೂಡಿಸಿಕೊಂಡಿದ್ದೀರಿ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದರು.</p>



<p>ಸರ್ಕಾರ ತನ್ನ ಈ ಪ್ರವೃತ್ತಿಯನ್ನು ಕೂಡಲೇ ನಿಲ್ಲಿಸಬೇಕು. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಜಮೀನು ಕೊಡಿಸುವ ಯೋಜನೆ ಇದೆ. ನಿಮ್ಮ ಆಡಳಿತದ ಅವಧಿಯಲ್ಲಿ ಪರಿಶಿಷ್ಟರಿಗೆ ಎಷ್ಟು ಜಮೀನನ್ನು ಕೊಡಿಸಿದ್ದೀರಿ. ನನ್ನ ಪ್ರಕಾರ ಈ ಸರ್ಕಾರ ಬಂದ ನಂತರ ಯಾರಿಗೂ ಜಮೀನು ಕೊಡಿಸಿಲ್ಲ. ಮಕ್ಕಳಿಗೆ ವಿದ್ಯಾರ್ಥಿ ವೇತನಗಳನ್ನು ನೀಡಿಲ್ಲ. ಪರಿಶಿಷ್ಟ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಮಾಡುತ್ತಿರುವಾಗ ಅವರಿಗೆ ವಿದ್ಯಾರ್ಥಿ ವೇತನ ನೀಡಿಲ್ಲ ಎಂದು ಹೇಳಿದರು.</p>



<p>ಪರಿಶಿಷ್ಟ ಸಮುದಾಯಕ್ಕೆ ನೀಡಲಾಗಿರುವ ಗಂಗಾ ಕಲ್ಯಾಣ ಕೊಳವೆಬಾವಿ ಯೋಜನೆ ಯಲ್ಲಿ ಅಕ್ರಮ ನಡೆದಿದೆ. ಹಾಗಿದ್ದರೆ ಈ ಸರ್ಕಾರ ಏನು ಮಾಡುತ್ತಿದೆ? ವಿಧಾನಸೌಧದಲ್ಲಿ ಮುಖ್ಯಮಂತ್ರಿ ಹಾಗೂ ಯಾವುದೇ ಸಚಿವರು ಇರುವುದಿಲ್ಲ. ಹೀಗಾಗಿ ವಿಧಾನಸೌಧಕ್ಕೆ ಬೀಗ ಹಾಕಿದ ರೀತಿಯಲ್ಲಿ ಇರುತ್ತದೆ ಎಂದು ವ್ಯಂಗಿಸಿದ್ದಾರೆ.</p>



<p>ಇದೆಲ್ಲದರ ಜೊತೆಗೆ ಬಿಜೆಪಿ ರೌಡಿಗಳನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ. ಪ್ರತಿ ಮಂತ್ರಿಗಳು ಒಂದಿಷ್ಟು ರೌಡಿಗಳನ್ನು ಹಂಚಿಕೊಳ್ಳಲು ಮುಂದಾಗಿದ್ದಾರೆ. ಇದರ ಪರಿಣಾಮವಾಗಿ ಬೆಂಗಳೂರು ಇಂದು ಅಪರಾಧಗಳ ನಗರವಾಗಿದೆ ಎಂದು ಟೀಕಿಸಿದರು.</p>



<p>ಮುಖ್ಯಮಂತ್ರಿಗಳು ಗೃಹ ಸಚಿವರು ಹಾಗೂ ಇತರೆ ಮಂತ್ರಿಗಳು ಈ ವರ್ಗದ ಜನರ ಅನುದಾನ ಬಳಕೆ, ವಿದ್ಯಾರ್ಥಿ ವೇತನ ವಿಚಾರವಾಗಿ ನಿರ್ಲಕ್ಷ್ಯ ವಹಿಸಿದೆ. ಮುಂದಿನ ಚುನಾವಣೆಯಲ್ಲಿ ಸೋಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಅರಿತು ಎಲ್ಲಾ ವಾಮ ಮಾರ್ಗಗಳನ್ನು ಹಿಡಿದಿದೆ ಎಂದರು.</p>



<p>ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಕಾಂಗ್ರೆಸ್ ಪರವಾಗಿರುವ ಪರಿಶಿಷ್ಟರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಮತಗಳನ್ನು ಕೈಬಿಡಲಾಗಿದೆ. ಅವರ ಪರವಾಗಿರುವ ಮತದಾರ ಹೆಸರು ಸೇರ್ಪಡೆ ಮಾಡಲಾಗುತ್ತಿದೆ. ಈ ಬಗ್ಗೆ ಆರಂಭದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದಾಗ ಏನೂ ನಡೆದಿಲ್ಲ ಎಂದು ಸರ್ಕಾರ ಹೇಳಿತ್ತು. ಆದರೆ ಚುನಾವಣಾ ಆಯೋಗ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿದೆ ಎಂದು ಹೇಳಿದ್ದಾದರು.</p>
]]></content:encoded>
					
		
		
			</item>
		<item>
		<title>ಹೂಡಿಕೆ, ಅಭಿವೃದ್ಧಿ ಹೆಸರಲ್ಲಿ ಸರ್ಕಾರದಿಂದ ಕೋಟಿ ಕೋಟಿ ಲೂಟಿ: ಎಂ. ಲಕ್ಷ್ಮಣ್‌ ಗಂಭೀರ ಆರೋಪ</title>
		<link>https://peepalmedia.com/crores-looted-by-the-government-in-the-name-of-investment-and-development-m-laxman-is-a-serious-charge/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 16 Nov 2022 11:34:05 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[congrees]]></category>
		<category><![CDATA[D K shivakumar]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[KPCC spokesperson]]></category>
		<category><![CDATA[M. Laxman]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[prathap simha]]></category>
		<category><![CDATA[siddaramayya]]></category>
		<category><![CDATA[sriramulu]]></category>
		<guid isPermaLink="false">https://peepalmedia.com/?p=15674</guid>

					<description><![CDATA[ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ರಾಜ್ಯ ಸರ್ಕಾರವು ಕೋಟಿ, ಕೋಟಿ ಹಣ ಲೂಟಿ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ. ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರ ವಾರದ ಹಿಂದೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ಕೋಟಿ ಹೂಡಿಕೆ ಒಪ್ಪಂದ ಮಾಡಿಕೊಂಡಿದ್ದು 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದಾರೆ. ಮುರುಗೇಶ್ ನಿರಾಣಿ ಅವರು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಜಾಗತಿಕ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ರಾಜ್ಯ ಸರ್ಕಾರವು ಕೋಟಿ, ಕೋಟಿ ಹಣ ಲೂಟಿ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.</p>



<p>ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರ ವಾರದ ಹಿಂದೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ಕೋಟಿ ಹೂಡಿಕೆ ಒಪ್ಪಂದ ಮಾಡಿಕೊಂಡಿದ್ದು 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದಾರೆ. ಮುರುಗೇಶ್ ನಿರಾಣಿ ಅವರು 2010 ಹಾಗೂ 2012ರಲ್ಲೂ ಕೈಗಾರಿಕಾ ಸಚಿವರಾಗಿದ್ದರು. ಆಗಲೂ ಇದೇ ರೀತಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದ್ದರು. 2010ರಲ್ಲಿ 3 ಲಕ್ಷ ಕೋಟಿ ಹೂಡಿಕೆ ಎಂದು ಘೋಷಣೆ ಮಾಡಿದ್ದರು. ಇಲ್ಲಿವರೆಗೂ ಅದರಲ್ಲಿ ಜಾರಿ ಆಗಿದ್ದು ಶೇ.14ರಷ್ಟು ಮಾತ್ರ. 3 ಲಕ್ಷ ಉದ್ಯೋಗ ಸೃಷ್ಟಿ ಎಂದಿದ್ದರು ಆದರೆ ಇಲ್ಲಿಯವರೆಗೂ ಸಿಕ್ಕಿರುವ ಕೆಲಸ 4 ಸಾವಿರ ಮಾತ್ರ. ಇನ್ನು 2012ರಲ್ಲಿ ಘೋಷಣೆ ಆಗಿದ್ದು 6.77 ಲಕ್ಷ ಕೋಟಿ, ಹೂಡಿಕೆ ಆಗಿದ್ದು ಶೇ.8ರಷ್ಟು ಅಂದರೆ 54 ಸಾವಿರ ಕೋಟಿ. ಅಂದು 4.5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದರು. ಆದರೆ ಸಿಕ್ಕಿದ ಉದ್ಯೋಗ ಕೇವಲ 3500 ಮಾತ್ರ ಎಂದು ಮಾಹಿತಿ ನೀಡಿದರು.</p>



<p>ಈಗ 2022ರಲ್ಲಿ ಘೋಷಣೆ ಆಗಿರುವುದು 9.89 ಲಕ್ಷ ಕೋಟಿ ಅದರಲ್ಲಿ ಮಾಡಿಕೊಂಡಿರುವ ಒಪ್ಪಂದ 2.83 ಲಕ್ಷ ಕೋಟಿ ಎಂದು ಹೇಳುತ್ತಿದ್ದು, 7 ಲಕ್ಷ ಮಂದಿಗೆ ಉದ್ಯೋಗ ಸಿಗಲಿದೆ ಎಂದು ಸರ್ಕಾರ ಹೇಳುತ್ತಿದೆ. ಇದೆಲ್ಲವೂ ರಾಜಕೀಯ ಗಿಮಿಕ್ ಆಗಿದೆ ಎಂದು ಲಕ್ಷ್ಮಣ್ ಅವರು ದೂರಿದ್ದಾರೆ.</p>



<p>ಈ ಬಂಡವಾಳ ಹೂಡಿಕೆದಾರರ ಕಾರ್ಯಕ್ರಮಕ್ಕಾಗಿ ಪ್ರಪಂಚದಾದ್ಯಂತ ಇವರು ಪ್ರಚಾರಕ್ಕಾಗಿ ಖರ್ಚು ಮಾಡಿರುವ ಹಣ 300 ಕೋಟಿ. ಭೂ ಬ್ಯಾಂಕ್ ಮೂಲಕ 1.5 ಲಕ್ಷ ಎಕರೆ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ. ಈ ಹಿಂದೆಯೂ ಭೂ ಬ್ಯಾಂಕ್ ಎಂದು ಮಾಡಿ ಕೈಗಾರಿಕೆಗೂ ನೀಡಲಿಲ್ಲ, ಎಲ್ಲವೂ ರಿಯಲ್ ಎಸ್ಟೇಟ್ ಪಾಲಾಯಿತು. ಈಗ ದೇವನಹಳ್ಳಿ ಸುತ್ತಮುತ್ತ ಸಾವಿರಾರು ಎಕರೆಯನ್ನು ರೈತರಿಂದ ಕಸಿದು ರಿಯಲ್ ಎಸ್ಟೇಟ್ ನವರಿಗೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>



<p>ಸಚಿವ ಮುರುಗೇಶ್ ನಿರಾಣಿ ಅವರ ಪುತ್ರ ಈ ಕಾರ್ಯಕ್ರಮದಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಆ ಸಮಿತಿಯಲ್ಲಿ ಅವರು ಇದ್ದು, ಕಾರ್ಯಕ್ರಮದ ಆಯೋಜನೆಯಲ್ಲೂ ಅವರ ಪಾತ್ರವಿತ್ತು. ಸಚಿವರ ಪುತ್ರ ಎನ್ನುವುದು ಹೊರತಾಗಿ ಉಳಿದ ಯಾವುದೇ ಅರ್ಹತೆ ಅವರಿಗೆ ಇಲ್ಲವಾಗಿದೆ. ಅವರನ್ನು ಯಾಕೆ ಇದರಲ್ಲಿ ಭಾಗವಹಿಸಲು ಅವಕಾಸ ನೀಡಿ ಅವರ ಮೂಲಕ ಯಾರಿಗೆ ಎಷ್ಟು ಎಕರೆ ಜಮೀನು ಕೊಡಿಸಿದ್ದೀರಿ ಎಂದು ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.</p>



<p>ಈ ಕಾರ್ಯಕ್ರಮದಲ್ಲಿ ಅತಿಥಿಗಳ ವಾಸ್ತವ್ಯಕ್ಕೆ ಸ್ಟಾರ್ ಹೋಟೇಲ್ ಗಳಿಗಾಗಿ 85 ಕೋಟಿಯಷ್ಟು ಖರ್ಚು ಮಾಡಿದ್ದಾರೆ. ಮೊನ್ನೆ ಪ್ರಧಾನಿ ಅವರು 4 ಗಂಟೆ ಆಗಮಿಸಿದ್ದಕ್ಕೆ ಜಾಹೀರಾತು ಹೊರತುಪಡಿಸಿ 48 ಕೋಟಿ ಖರ್ಚು ಮಾಡಲಾಗಿದೆ. ಇದು ಜನಸಾಮಾನ್ಯರ ಹಣವಾಗಿದೆ. ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ ಸರ್ಕಾರ ಎಂದು ಟೀಕಿಸಿದರು.</p>



<p>ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 144ಪೊಲೀಸ್ ಠಾಣೆಗಳಿವೆ. 44 ಟ್ರಾಫಿಕ್ ಪೊಲೀಸ್ ಠಾಣೆಗಳಿವೆ. ಒಟ್ಟು 188 ಠಾಣೆಗಳಿವೆ. ಇವುಗಳಿಂದ ಭ್ರಷ್ಟಾಚಾರದ ಮೂಲಕ ಬರುತ್ತಿರುವ ಆದಾಯ ವಾರ್ಷಿಕವಾಗಿ 250 ಕೋಟಿ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಹುದ್ದೆಗೆ 1.50 ಕೋಟಿ. ಉಪ್ಪಾರಪೇಟೆ ಠಾಣೆಯಲ್ಲಿ 1.25 ಕೋಟಿ, ಬಸವೇಶ್ವರ ನಗರ 1 ಕೋಟಿ. ಕೇವಲ ವರ್ಗಾವಣೆ ಧಂದೆಯಲ್ಲಿ 188 ಪೊಲೀಸ್ ಠಾಣೆಗಳ ಮೂಲಕ 250 ಕೋಟಿ ವಸೂಲಿ ಮಾಡಲಾಗಿದೆ. ಈ ವಿಚಾರವನ್ನು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಹಸ್ಯವಾಗಿ ನೀಡಿರುವ ಮಾಹಿತಿ. ಈ ವಿಚಾರ ತನಿಖೆ ಮೂಲಕ ಬಹಿರಂಗವಾಗಬೇಕು ಎಂದು ಒತ್ತಾಯಿಸಿದರು.</p>



<p>ಪೊಲೀಸ್ ಠಾಣೆಗಳಿಂದ ಪ್ರತಿನಿತ್ಯ ಆಗುತ್ತಿರುವ ವಸೂಲಿ 5 ಕೋಟಿ. ತಿಂಗಳಿಗೆ 150 ಕೋಟಿ ವಸೂಲಿ ಆಗುತ್ತಿದೆ. ಕಳೆದ ಮೂರುವರೆ ವರ್ಷಗಳಿಂದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾದ ನಂತರ ಸುಮಾರು 1 ಲಕ್ಷ ಕೋಟಿ ವಸೂಲಿ ಮಾಡಲಾಗಿದೆ. ಇದು ಹಾಲಿ 6 ಸಚಿವರು ಇಬ್ಬರು ಆಪ್ತರ ಬಳಿ ಈ ಹಣವಿದೆ. ಈ ವಿಚಾರವಾಗಿ ಹೈಕೋರ್ಟ್ ಹಾಗು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ, ಇಡಿ ಅಥವಾ ಸಿಬಿಐ ಮೂಲಕ ತನಿಖೆ ಆದರೆ 8 ಜನರ ಹೆಸರನ್ನು ನಾವು ನೀಡುತ್ತೇವೆ ಎಂದು ತಿಳಿಸಿದರು.</p>



<p>ಇಡಿ ಅವರು ಸಣ್ಣ ಪುಟ್ಟ ಪ್ರಕರಣ ಇಟ್ಟುಕೊಂಡು ಅವರು ಸಾಯುವ ವರೆಗೂ ಬಿಡುವುದಿಲ್ಲ. ನೀವು ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಿ. ಬೊಮ್ಮಾಯಿ ಅವರೇ ನೀವು ನಿಮ್ಮ ಮೂಗಿನ ನೇರಕ್ಕೆ ಎಲ್ಲವೂ ನಡೆಯುತ್ತಿದೆ. ನಿಮ್ಮ ಸುತ್ತಮುತ್ತಲಿನವರೇ ಈ 1 ಲಕ್ಷ ಕೋಟಿ ಒಡೆಯರು ಎಂದು ಹೇಳಿದರು.</p>



<p>ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಸಾವಿರ ಕಿ.ಮೀ ರಸ್ತೆಗಳಿದ್ದು, 32 ಸಾವಿರ ರಸ್ತೆಗುಂಡಿಗಳಿವೆ ಎಂದು ಸರ್ಕಾರ ಹೈಕೋರ್ಟ್ ಗೆ ನೀಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ 10 ಸಾವಿರ ರಸ್ತೆಗುಂಡಿ ಮುಚ್ಚಲಾಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಖರ್ಚಾಗಿರುವ ಹಣ 790 ಕೋಟಿ. ಇನ್ನು ಉಳಿದ 22 ಸಾವಿರ ಕೋಟಿ ರಸ್ತೆಗುಂಡಿ ಮುಚ್ಚಲು 1500 ಕೋಟಿ ಬೇಕಾಗುತ್ತದೆ. ಒಟ್ಟಾರೆ 2200 ಕೋಟಿ ಯನ್ನು ರಸ್ತೆ ಗುಂಡಿ ಮುಚ್ಚಲು ಬೇಕಾಗಿದೆ ಎಂದು ತಿಳಿಸಿದರು.</p>



<p>ಕೇಂದ್ರದ ಇಂಡಿಯನ್ ರೋಡ್ ಕಾಂಗ್ರೆಸ್ ಸಂಸ್ಥೆ ಪ್ರಕಾರ 1 ಕಿ.ಮೀ ರಸ್ತೆಯ ಡಾಂಬರೀಕರಣಕ್ಕೆ 1.5 ಕೋಟಿ ವೆಚ್ಚ ಬೀಳುತ್ತದೆ. ಇವರು 1 ಕಿ.ಮೀ ರಸ್ತೆಯ ರಸ್ತೆಗುಂಡಿ ಮುಚ್ಚಲು 2.25 ಕೋಟಿ ವೆಚ್ಚ ಮಾಡಿದ್ದಾರೆ. ಈ ಸರ್ಕಾರದಲ್ಲಿ ಯಾವ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದರು.</p>



<p>ಬೊಮ್ಮಾಯಿ ಅವರೇ ನೀವು ಸಂಕಲ್ಪ ಯಾತ್ರೆ ಮಾಡಲು ಹೊರಟಿದ್ದೀರಿ. ನಿಮ್ಮ ಸಂಕಲ್ಪ ಯಾತ್ರೆಯಲ್ಲಿ 3 ಗಂಟೆ ಭಾಷಣದಲ್ಲಿ ಎರಡೂವರೆ ಗಂಟೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಬೈಯ್ಯಲು ಮೀಸಲಿಡುತ್ತೀರಿ. ಈಗ ನೀವು ಇದಕ್ಕೆ ಉತ್ತರ ನೀಡಬೇಕು ಎಂದರು.</p>



<p>ಮೈಸೂರಿನಲ್ಲಿ ಕಿಡಿ ಹೊತ್ತಿಸಲು ಪ್ರತಾಪ್ ಸಿಂಹ ಎಂಬ ಸಂಸದರಾಗಿದ್ದಾರೆ. ಈ ಹಿಂದಿನ ಸರ್ಕಾರಗಳು ಮೈಸೂರು ಸಿಟಿಯನ್ನು ಪಾರಂಪರಿಕ ನಗರಿ ಎಂದು ಪರಿಗಣಿಸಬೇಕು ಎಂದು ಆರ್ಕಿಯಾಲಜಿ ಇಲಾಖೆಗೆ ಪ್ರಸ್ತಾವನೆ ನೀಡಲಾಗಿತ್ತು. ಈ ಪರ್ಸ್ತಾವನೆಯಲ್ಲಿ 350 ಕಟ್ಟಡಗಳನ್ನು ಪಾರಂಪರಿಕ ಕಟ್ಟಡ ಎಂದು ಗುರುತಿಸಿದ್ದು, ಇದರಲ್ಲಿ ಅರಮನೆ ಸೇರಿದಂತೆ 180 ಕಟ್ಟಡಗಳು ಸರ್ಕಾರಿ ಕಟ್ಟಡಗಳಾಗಿವೆ ಎಂದು ಮಾಹಿತಿ ನೀಡಿದರು.</p>



<p>ಇಡೀ ಪ್ರಪಂಚದಲ್ಲಿ 8 ಬಗೆಯ ಆರ್ಕಿಟೆಕ್ಚರ್ ಗಳನ್ನು ಬಳಸಲಾಗುತ್ತಿದೆ. ಮೈಸೂರು ಅರಮನೆಯ ಮೇಲ್ಬಾಗದ ಗೋಪುರವನ್ನು ಮೋಘಲರ ಆರ್ಕಿಟೆಕ್ಚರ್ ಎಂದು ಕರೆಯುತ್ತೇವೆ. ಬ್ರಿಟನ್ ಸೇರಿದಂತೆ ಪ್ರಪಂಚದಾದ್ಯಂತ ಈ ವಿನ್ಯಾಸ ಬಳಸಲಾಗಿದೆ. ಮೈಸೂರು ಅರಮನೆ ವಿನ್ಯಾಸ ಆಧಾರದ ಮೇಲೆ ಅಲ್ಲಿನ ಪಾಲಿಕೆ, ಶಾಸಕರು ಸೇರಿ ಅರಮನೆಯ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ&nbsp; ನಿರ್ಮಾಣ ಮಾಡಬೇಕಾದರೂ ಅದು ಅರಮನೆಯ ಪಾರಂಪರಿಕ ವಿನ್ಯಾಸವನ್ನೇ ಹೊಂದಿರ ಬೇಕು ಎಂದು ತೀರ್ಮಾನಿಸಲಾಗಿದೆ. ಇದು ಮೈಸೂರು ಪಾಲಿಕೆಯ ಬೈಲಾದಲ್ಲೂ ಇದೆ. ಒಂದು ಶೌಚಾಲಯ ಕಟ್ಟಿದರೂ ಅದರ ವಿನ್ಯಾಸ ಈ ರೀತಿ ಇರಬೇಕು ಎಂದು ಕಾನೂನು ಇದೆ ಎಂದು ಹೇಳಿದರು.</p>



<p>ಈ ಭಾಗದ ಮೂವರು ಶಾಸಕರ ಪೈಕಿ ಬಿಜೆಪಿ ಶಾಸಕ ರಾಮದಾಸ್ ಅವರು 18 ಬಸ್ ಶೆಲ್ಟರ್ ಗಳನ್ನು ತಮ್ಮ ಅನುದಾನದಲ್ಲಿ ಹಣ ನೀಡಿದ್ದು, 12 ಬಸ್ ಶೆಲ್ಟರ್ ನಿರ್ಮಾಣವಾಗಿವೆ. ಇವುಗಳ ಡೂಮ್ ಸ್ಟಕ್ಚರ್ ಏನು ಎಂದು ಅರ್ಥ ಮಾಡಿಕೊಳ್ಲುವ ಯೋಗ್ಯತೆ ಇಲ್ಲದ ವ್ಯಕ್ತಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೇಲೆ ಒತ್ತಡ ತಂದು ಪಾಲಿಕೆ ಹಾಗೂ ರಾಜ್ಯ ರಸ್ತೆ ಸಂಸ್ಥೆಗೆ ಪತ್ರ ಬರೆದು ಅದರಲ್ಲಿ ಇದು ಧರ್ಮವನ್ನು ಬಿಂಬಿಸುವ ವಿನ್ಯಾಸವಾಗಿದೆ. ಹೀಗಾಗಿ ಇದನ್ನು ತೆರವುಗೊಳಿಸಬೇಕು ಎಂದು ಅಧಿಕಾರಿ ಕೈಯಲ್ಲಿ ಸಂಸದರು ಪತ್ರ ಬರೆಸುತ್ತಾರೆ ಎಂದು ಹೇಳಿದರು.</p>



<p>ಇದಕ್ಕೆ ರಾಮದಾಸ್ ಅವರು ಸ್ಪಷ್ಟೀಕರಣ ನೀಡಿದ್ದು, ಇದು ಯಾವುದೇ ಧರ್ಮದ ಪ್ರತೀಕವಾಗಿಲ್ಲ. ಇದಕ್ಕೂ ಮಸೀದಿಗೆ ಸಂಬಂಧವಿಲ್ಲ ಹಾಗಾಗಿ ಇದನ್ನು ಒಡೆಯುವ ಪ್ರಶ್ನೆಯೇ ಇಲ್ಲ. ಪ್ರತಾಪ್ ಸಿಂಹ ಅವರು ರಾಜಕೀಯ ಮಾಡುವ ನಿಟ್ಟಿನಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದರು.</p>



<p>ಪ್ರತಾಪ್ ಸಿಂಹ ಕಳೆದ ಎಂಟು ವರ್ಷಗಳಿಂದ ಕೊಡಗನ್ನು ಸಂಪೂರ್ಣವಾಗಿ 25 ವರ್ಷ ಹಿಂದಕ್ಕೆ ತೆಗೆದುಕೊಂಡಿದ್ದು, ಮೈಸೂರನ್ನು ಸುಮಾರು 10 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಉಳಿದಿರುವ ಎರಡು ವರ್ಷಗಳಲ್ಲಿ ಇನ್ನು 10 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಇವರ ಯೋಗ್ಯತೆಗೆ ಕೇಂದ್ರದಿಂದ ನಯಾ ಪೈಸೆ ತರಲಿಲ್ಲ. ಆದರೆ ರಾಜ್ಯದಲ್ಲಿ ಕಿಡಿ ಹೊತ್ತಿಸಲು ನಾಲ್ಕೈದು ಜನರಿದ್ದು ಇವರು ಮೊದಲ ಎರಡು ಸ್ಥಾನಗಳಲ್ಲಿ ಬರುತ್ತಾರೆ. ಪ್ರಪ್ಲಾದ್ ಜೋಷಿ, ಸಿ.ಟಿ ರವಿ, ರವಿ ಕುಮಾರ್ ಇವರೆಲ್ಲರೂ ಸುಳ್ಲು ಹೇಳುವುದರಲ್ಲೇ ಪಿಹೆಚ್ಡಿ ಮಾಡಿಕೊಂಡಿದ್ದರೆ ಎಂದು ಕಾರವಾಗಿ ಟೀಕಿಸಿದರು.</p>



<p>ಪ್ರತಾಪ್‌ ಸಿಂಹ ಅವರು ಸತ್ಯಹರಿಶ್ಚಂದ್ರರ ಕುಟುಂಬಕ್ಕೆ ಸೇರಿದ್ದರೆ ನಾನು ಮೈಸೂರು ಡಿಸಿಗೆ ನೀಡಿರುವ ದೂರಿನಲ್ಲಿ ಸಂಸದರ ನಿಧಿಯ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದೇನೆ. ಇವರು ದಕ್ಷಿಣ ಕನ್ನಡದ ಕಿಕ್ಕಂಜೆ ಊರಿನಲ್ಲಿ ಡಾ.ಮುರಳಿಕೃಷ್ಣ ಎಂಬ ಇವರ ಸ್ನೇಹಿತರ ಆಸ್ಪತ್ರೆ ಇದೆ. ಅದಕ್ಕೆ ಇವರು 18 ಲಕ್ಷ ರೂಪಾಯಿಯ ಆಂಬುಲೆನ್ಸ್ ಅನ್ನು ದೇಣಿಗೆ ನೀಡುತ್ತಾರೆ. ಮುರಳಿಕೃಷ್ಣ ಅವರ ಮತ್ತೊಂದು ಕ್ಲೀನಿಕ್ ಹೊಯ್ಸಳ ಕ್ಲೀನಿಕ್ ಗೆ ನಿರ್ದೇಶಕರನ್ನಾಗಿ ಪ್ರತಾಪ್ ಸಿಂಹ ಅವರ ಪತ್ನಿ ಅರ್ಪಿತಾ ಸಿಂಹ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.</p>



<p>ಸಂಸದರ ನಿಧಿಯಿಂದ ಬೇರೆ ಜಿಲ್ಲೆ ಕ್ಷೇತ್ರಗಳಿಗೇ ದೇಣಿಗೆ ರೂಪದಲ್ಲಿ ನೀಡಲು ಅವಕಾಶವಿದೆ. ಆದರೆ ಅದಕ್ಕೆ ಒಂದು ಷರತ್ತು ಇದ್ದು, ನೀವು ಯಾವುದೇ ಟ್ರಸ್ಟ್, ಸೊಸೈಟಿ ಅಥವಾ ಸಹಕಾರಿ ಸೊಸೈಟಿ ಆಗಿರಬಾರದು. ಆದರೆ ಪ್ರತಾಪ್ ಸಿಂಹ ಅವರು ನೀಡಿರುವ ಹಣ ವೆಂಕಟಕೃಷ್ಣ ಯೂರತ್ರೇಯ ಮೆಮೋರಿಯಲ್ ಟ್ರಸ್ಟ್ ಗೆ ನೀಡಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ? ಇನ್ನು ಮೈಸೂರಿನಲ್ಲಿ ಒಂದು ಟ್ರಸ್ಟ್ ಗೆ ಹಣ ನೀಡಿದ್ದು, ಎಂ.ಗೋಪಿನಾಥ್ ಶೆಣೈ ಚಾರಿಟಬಲ್ ಟ್ರಸ್ಟ್ ಗೆ ನೀಡಿದ್ದಾರೆ. ಈ ಟ್ರಸ್ಟ್ ನ ವಿಳಾಸ ಹುಡುಕಿಕೊಂಡು ಹೋದಾಗ ಸರಸ್ವತಿಪುರಂ ನ ವಿಶ್ವಮಾನವ ರಸ್ತೆ 12ನೇ ನಂಬರ್ ಜಾಗದಲ್ಲಿ ಈ ಟ್ರಸ್ಟ್ ನ ಕಚೇರಿ ಬದಲು ಮೆಕ್ ಡೊನಾಲ್ಡ್ ಹೊಟೇಲ್ ಇದೆ. ಇದಕ್ಕೆ ಪ್ರತಾಪ್ ಸಿಂಹ ಅವರು ಉತ್ತರಿಸಬೇಕು. ಇದುವರೆಗೂ ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿ, ಎರಡು ಪತ್ರಿಕಾಗೋಷ್ಠಿ ಮಾಡಿದ್ದರೂ ಅವರು ಉತ್ತರ ನೀಡಿಲ್ಲ ಎಂದರು.</p>



<p>ಇಂತಹ ವ್ಯಕ್ತಿ ಬೆಂಗಳೂರು ಮೈಸೂರು ರಸ್ತೆಯನ್ನು ತನ್ನ ಮನೆ ಆಸ್ತಿಯಿಂದ ಮಾಡುತ್ತಿರುವಂತೆ ಮಂಡ್ಯ, ಮದ್ದೂರಿನಲ್ಲಿ ಫೇಸ್ಬುಕ್ ಲೈವ್ ಮಾಡುತ್ತಿದ್ದಾರೆ. ಈ ರೀತಿ ಮಾಡಿ ಗುತ್ತಿಗೆದಾರರಿಂದ 3 ಕೋಟಿಯಷ್ಟು ಲಂಚ ಪಡೆದಿದ್ದಾರೆ ಎಂದು ಮಂಡ್ಯದ ಜನ ಪತ್ರಿಕಾಗೋಷ್ಠಿ ಮಾಡಿ ಹೇಳುತ್ತಿದ್ದಾರೆ. ಇಂತಹ ವ್ಯಕ್ತಿ ಚುನಾವಣೆ ಸಮಯದಲ್ಲಿ ಕಿಡಿ ಹಚ್ಚಲು ಈ ರೀತಿ ಗೊಂದಲ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯವರ ಈ ಸುಳ್ಳು ಹೇಳಿಕೆಗಳನ್ನು ನಂಬಬಾರದು ಎಂದು ಜನರಲ್ಲಿ ಮನವಿ ಮಾಡಿಕೊಂಡರು.</p>



<p>ಅವರು ತಾವು ಇಂತಹ ಭರವಸೆ ನೀಡಿದ್ದು, ಅದರಲ್ಲಿ ಎಷ್ಟು ಭರವಸೆ ಈಡೇರಿಸಿದ್ದೇವೆ, ಇಂತಹ ಯೋಜನೆ ಮಾಡಿದ್ದೇವೆ ಎಂದು ತಮ್ಮ ಕೆಲಸದ ಪಟ್ಟಿ ನೀಡಿ ಮತ ಕೇಳಲಿ. ಅದನ್ನು ಬಿಟ್ಟು ದಿನಬೆಳಗಾದರೆ ಸಿದ್ದರಾಮಯ್ಯ ಅವರನ್ನು ನೆನೆಯುತ್ತಾರೆ. ಬಿಜೆಪಿ ನಾಯಕರು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಹೆಸರು ಬಳಸದೇ ಯಾವುದಾದರೂ ಒಂದು ಕಾರ್ಯಕ್ರಮವನ್ನು ಮಾಡಲಿ ಎಂದು ಸವಾಲು ಹಾಕಿದ್ದಾರೆ.</p>



<p>ಶ್ರೀರಾಮುಲು ಅವರು ಅಂದರಗಾನಿ ಎಂದು ವೀರಾವೇಷದಲ್ಲಿ ಮಾತನಾಡುವುದರ ಹೊರತಾಗಿ ಬೇರೇನು ಮಾಡಿಲ್ಲ. ಆ ಪದದ ಅರ್ಥ ಹುಡುಕುತ್ತಿದ್ದು ಈವರೆಗೂ ಸಿಕ್ಕಿಲ್ಲ. ಅವರು ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಅನ್ಯಾಯಾ ಮಾಡಿದ್ದಾರೆ ಎಂದು ಹೇಳುತ್ತಾರೆ. ಅವರು ಯಾವ ಕ್ಷೇತ್ರದವರು ಅವರು ಏನು ಅನ್ಯಾಯಾ ಮಾಡಿದ್ದಾರೆ ಎಂದು ಅರಿಯುತ್ತಿಲ್ಲ. ಶ್ರೀರಾಮುಲು ಅವರೇ ನೀವು ಮುಂದಿನ ಚುನಾವಣೆಯಲ್ಲಿ 25 ಸಾವಿರ ಮತಗಳ ಅಂತರದಲ್ಲಿ ಸೋಲುವುದು ನಿಶ್ಚಿತ. ನಿಮ್ಮನ್ನು ಸೋಲಿಸಲು ಎಲ್ಲ ವ್ಯವಸ್ಥೆಯನ್ನು ಜನ ಮಾಡಿಕೊಂಡಿದ್ದಾರೆ ಎಂದು ಹೇಳಿದರು.</p>



<p>ರಾಮದಾಸ್ ಹಾಗೂ ಪ್ರತಾಪ್ ಸಿಂಹ ಅವರ ನಡುವಣ ತಿಕ್ಕಾಟ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಒಳಗೆ ಅವರು ಬಟ್ಟೆ ಹರಿದುಕೊಂಡು ಹೊಡೆದಾಡಿ ಹೊರಗಡೆ ಏನೂ ಆಗಿಲ್ಲ ಎಂಬಂತೆ ಬಿಂಬಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಅನ್ನು ದೊಡ್ಡ ಮಟ್ಟಕ್ಕೆ ಹೋಗಲಿದ್ದು. ಜನಗಳು ಇದನ್ನು ಮನರಂಜನೆಯಾಗಿ ನೋಡಲಿದ್ದಾರೆ.</p>
]]></content:encoded>
					
		
		
			</item>
		<item>
		<title>ಸಚಿವ-ಶಾಸಕರ ಜಿದ್ದಾಜಿದ್ದಿ ; ಮಲಗಿದ ಶ್ರೀರಾಮುಲು, ಕೂತ ನಾಗೇಂದ್ರ</title>
		<link>https://peepalmedia.com/stubbornness-of-ministers-and-legislators-sleeping-sriramulu-sitting-nagendra/</link>
		
		<dc:creator><![CDATA[Peepal Media]]></dc:creator>
		<pubDate>Wed, 02 Nov 2022 09:11:59 +0000</pubDate>
				<category><![CDATA[ಬಳ್ಳಾರಿ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[sriramulu]]></category>
		<category><![CDATA[state politics]]></category>
		<guid isPermaLink="false">https://peepalmedia.com/?p=13719</guid>

					<description><![CDATA[ಉತ್ತರ ಕರ್ನಾಟಕ ಭಾಗದಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿದ ಅತಿವೃಷ್ಟಿಯಿಂದಾಗಿ ಆ ಭಾಗದ ಜನಜೀವನ ಹಾಗೂ ರೈತಾಪಿ ಕಾಯಕಕ್ಕೆ ದೊಡ್ಡ ಪ್ರಮಾಣದ ಹೊಡೆತ ಬಿದ್ದಿರುವುದು ಎಲ್ಲರೂ ತಿಳಿದ ವಿಷಯ. ಸಧ್ಯ ಈಗ ಒಂದು ಹಂತಕ್ಕೆ ಮಳೆ ನಿಂತಿದೆ. ಈ ಸಂಬಂಧ ಹಾನಿಗೊಳಗಾದ ಪ್ರದೇಶದ ದುರಸ್ತಿ ಕಾಮಗಾರಿ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಇದು ಸ್ಥಳೀಯ ಶಾಸಕ ಮತ್ತು ಸಚಿವರ ಜಿದ್ದಾಜಿದ್ದಿಗೆ ಕಾರಣವಾಗಿದೆ. ಬಳ್ಳಾರಿ ಜಿಲ್ಲೆಯ ಮೇಲ್ಸೇತುವೆ ರಿಪೇರಿ ಕಾಮಗಾರಿ ಸಂಬಂಧ ಬಳ್ಳಾರಿ ಗ್ರಾಮೀಣ ಕ್ಷೇತ್ರದ [&#8230;]]]></description>
										<content:encoded><![CDATA[
<p style="font-size:20px">ಉತ್ತರ ಕರ್ನಾಟಕ ಭಾಗದಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿದ ಅತಿವೃಷ್ಟಿಯಿಂದಾಗಿ ಆ ಭಾಗದ ಜನಜೀವನ ಹಾಗೂ ರೈತಾಪಿ ಕಾಯಕಕ್ಕೆ ದೊಡ್ಡ ಪ್ರಮಾಣದ ಹೊಡೆತ ಬಿದ್ದಿರುವುದು ಎಲ್ಲರೂ ತಿಳಿದ ವಿಷಯ. ಸಧ್ಯ ಈಗ ಒಂದು ಹಂತಕ್ಕೆ ಮಳೆ ನಿಂತಿದೆ. ಈ ಸಂಬಂಧ ಹಾನಿಗೊಳಗಾದ ಪ್ರದೇಶದ ದುರಸ್ತಿ ಕಾಮಗಾರಿ ವಿಚಾರದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಇದು ಸ್ಥಳೀಯ ಶಾಸಕ ಮತ್ತು ಸಚಿವರ ಜಿದ್ದಾಜಿದ್ದಿಗೆ ಕಾರಣವಾಗಿದೆ.</p>



<p style="font-size:20px">ಬಳ್ಳಾರಿ ಜಿಲ್ಲೆಯ ಮೇಲ್ಸೇತುವೆ ರಿಪೇರಿ ಕಾಮಗಾರಿ ಸಂಬಂಧ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ದುರಸ್ತಿ ಕಾಮಗಾರಿ ನಿರ್ವಹಿಸಿದ ಕ್ರೆಡಿಟ್ ತಗೆದುಕೊಳ್ಳಲು ನಾ ಮುಂದು ತಾ ಮುಂದು ಎಂದು ಹಠಕ್ಕೆ ಬಿದ್ದು ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಕಾಮಗಾರಿ ದುರಸ್ತಿ ಸಂದರ್ಭದಲ್ಲಿ ಈ ಇಬ್ಬರೂ ರಾಜಕಾರಣಿಗಳು ನಡೆದುಕೊಂಡ ರೀತಿ ಸಧ್ಯ ಬಳ್ಳಾರಿ ಭಾಗದಲ್ಲಿ ತಮಾಷೆಯ ಚರ್ಚೆಗೆ ಗ್ರಾಸವಾಗಿದೆ.</p>



<p style="font-size:20px">ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಹರಿಯುತ್ತಿರುವ ವೇದಾವತಿ ನದಿಗೆ ಇತ್ತೀಚೆಗೆ ದಾಖಲೆಯ ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರು ಹರಿದು ಬಂದಿದ್ದು, ಮೇಲ್ಸೇತುವೆಯ ಪಿಲ್ಲರ್ ಕುಸಿದ ಪರಿಣಾಮ ಈ ಭಾಗ ಮತ್ತು ನೆರೆಯ ಆಂಧ್ರಪ್ರದೇಶದ ಕರ್ನೂಲು ಭಾಗದ ರೈತರಿಗೂ ಹೆಚ್ಚು ಹಾನಿ ಆಗಿತ್ತು. ಪಿಲ್ಲರ್ ಕುಸಿದ ಹಿನ್ನೆಲೆಯಲ್ಲಿ ಕಳೆದ 20 ದಿನಗಳಿಂದ ಈ ಭಾಗಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗಿತ್ತು. ಇದರಿಂದ 20 ಗ್ರಾಮಗಳಲ್ಲಿ ಭತ್ತ ಬೆಳೆದ ರೈತರಿಗೆ ತೀವ್ರ ಸಮಸ್ಯೆ ಉಂಟಾಗಿತ್ತು.</p>



<p style="font-size:20px">ಈ ಸಂಬಂಧ ರೈತರ ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ನಾಗೇಂದ್ರ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ರೈತರು, ಸಂಘಟನೆಗಳು, ಸ್ಥಳೀಯ ಮುಖಂಡರು ಮತ್ತು ಗುತ್ತಿಗೆದಾರರ ಜೊತೆಗೆ ಮಾತನಾಡಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಜೊತೆಗೆ ಪಕ್ಕದ ಆಂದ್ರಪ್ರದೇಶದ ಜನಪ್ರತಿನಿಧಿಗಳ ಜೊತೆಗೆ ಮಾತನಾಡಿ ಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿ, ತಾತ್ಕಾಲಿಕ ಪಿಲ್ಲರ್ ನಿರ್ಮಾಣಕ್ಕೆ ಕಾಮಗಾರಿ ಶುರು ಮಾಡಿದ್ದರು.</p>



<p style="font-size:20px">ಇನ್ನೊಂದು ಮೂಲದಿಂದ ಇದರ ಬಗ್ಗೆ ಮಾಹಿತಿ ಅರಿತ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಚರ್ಚಿಸಿ, &#8220;ನಾನು ಇಲ್ಲೇ ಇದ್ದು ರೈತರಿಗೆ ನೀರು ಬಿಡಿಸಿಯೇ ಇಲ್ಲಿಂದ ತೆರಳುವುದು. ಅಲ್ಲಿಯವರೆಗೆ ಇಲ್ಲಿಂದ ನಿರ್ಗಮಿಸುವುದಿಲ್ಲ&#8221; ಎಂದು ಕಾಮಗಾರಿ ಸ್ಥಳದಲ್ಲೇ ವಾಸ್ತವ್ಯ ಹೂಡಿದರು. ಇನ್ನೂ ಮುಂದುವರಿದು ಅಲ್ಲಿಗೇ ಹಾಸಿಗೆ ತರಿಸಿ ಕಾಮಗಾರಿ ಸ್ಥಳದಲ್ಲೇ ನಿದ್ರೆಗೂ ಜಾರಿದರು.</p>



<p style="font-size:20px">ಇತ್ತ ಶಾಸಕ ನಾಗೇಂದ್ರ ಕೂಡಾ ನಾನೇನು ಕಮ್ಮಿನಾ ಎಂಬಂತೆ ಕಾಮಗಾರಿ ಸ್ಥಳದಲ್ಲೇ ಇದ್ದು ನಿದ್ರೆಯೂ ಮಾಡದೇ ರಾತ್ರಿ ಕಳೆದರು. ಅಷ್ಟೂ ಕಾಮಗಾರಿಯನ್ನು ನಾನೇ ನಿದ್ರೆ ಬಿಟ್ಟು ಮಾಡಿಸುವೆ ಎಂದು &#8220;ರೈತರ ಜಮೀನಿಗೆ ನೀರು ಹರಿಸಿಯೇ ನಾನು ಇಲ್ಲಿಂದ ತೆರಳುವೆ. ಅಲ್ಲಿಯವರೆಗೂ ನಿದ್ರೆ ಕೂಡಾ ಮಾಡಲ್ಲ&#8221; ಎಂದು ಕಾಮಗಾರಿ ಸ್ಥಳದಲ್ಲೇ ಚಳಿಗೆ ಬೆಂಕಿ ಹಾಕಿಕೊಂಡು ನಿದ್ರೆ ಬಿಟ್ಟು ಕಾಮಗಾರಿ ಮುಗಿಯುವ ವರೆಗೂ ಕಾದು ನೀರು ಹರಿದ ನಂತರವೇ ಅಲ್ಲಿಂದ ತೆರಳಿದ್ದಾರೆ.</p>



<p style="font-size:20px">ಸಧ್ಯ ಶಾಸಕರು ಮತ್ತು ಸಚಿವರಿಬ್ಬರ ಜಿದ್ದಾಜಿದ್ದಿನ ನಡುವೆ ರೈತರ ಜಮೀನಿಗೆ ನೀರು ಹರಿದು ಇಲ್ಲಿನ ರೈತ ಸಮುದಾಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಇವರ ಈ ಪೈಪೋಟಿಯ ಪ್ರಸಂಗ ಈಗ ಬಳ್ಳಾರಿ ಜಿಲ್ಲಾದ್ಯಂತ ಚರ್ಚೆಗೆ ಗ್ರಾಸವಾಗಿದೆ.</p>
]]></content:encoded>
					
		
		
			</item>
		<item>
		<title>ಅಕ್ರಮ ಗಣಿಗಾರಿಕೆಯಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆ: ರಾಮುಲುಗೆ ಬಳ್ಳಾರಿಯಲ್ಲೇ ಟಾಂಗ್‌ ಕೊಟ್ಟ ಸಿದ್ದರಾಮಯ್ಯ</title>
		<link>https://peepalmedia.com/looting-in-illegal-mining-is-your-achievement-siddaramaiah-slaps-ramulu-in-bellary/</link>
		
		<dc:creator><![CDATA[Peepal Media]]></dc:creator>
		<pubDate>Sat, 15 Oct 2022 12:20:15 +0000</pubDate>
				<category><![CDATA[ಬಳ್ಳಾರಿ]]></category>
		<category><![CDATA[ballary]]></category>
		<category><![CDATA[bengalure]]></category>
		<category><![CDATA[bharath jodo yathre]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Rahul Gandhi]]></category>
		<category><![CDATA[Siddaramaiah]]></category>
		<category><![CDATA[sriramulu]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=10909</guid>

					<description><![CDATA[ಕಾಂಗ್ರೆಸ್‌ ಪಕ್ಷ ಮತ್ತು ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರು ಈ ದೇಶಕ್ಕಾಗಿ ಏನು ಮಾಡಿಲ್ಲ ಎಂದಿದ್ದಾರೆ ಎಂದು ಬೆಳಿಗ್ಗೆ ಟ್ವೀಟ್‌ ಮೂಲಕ ಪ್ರಶ್ನಿಸಿದ್ದ ಸಚಿವ ರಾಮುಲುಗೆ ಬಳ್ಳಾರಿ ನೆಲದಲ್ಲೇ ಉತ್ತರ ಕೊಟ್ಟ ಸಿದ್ದರಾಮಯ್ಯ, 1977ರಲ್ಲಿ ವಿಜಯನಗರ ಉಕ್ಕಿನ ಕಾರ್ಖಾನೆಯನ್ನು ಸ್ಥಾಪನೆ ಮಾಡಿದ್ದು ಯಾರು ಗೊತ್ತಾ? ಸೋನಿಯಾ ಗಾಂಧಿ ಅವರು 1999ರಲ್ಲಿ ಬಳ್ಳಾರಿಯಿಂದ ಸ್ಪರ್ಧೆ ಮಾಡಿ ಲೋಕಸಭಾ ಸದಸ್ಯರಾದ ಮೇಲೆ 3,300 ಕೋಟಿ ರೂಪಾಯಿಯ ಕುಡತಿನಿ ವಿದ್ಯುತ್‌ ಯೋಜನೆ ಜಾರಿ ಮಾಡಿದ್ದರು. ಈಗ ಅವರು ಉತ್ತರ [&#8230;]]]></description>
										<content:encoded><![CDATA[
<p>ಕಾಂಗ್ರೆಸ್‌ ಪಕ್ಷ ಮತ್ತು ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರು ಈ ದೇಶಕ್ಕಾಗಿ ಏನು ಮಾಡಿಲ್ಲ ಎಂದಿದ್ದಾರೆ ಎಂದು ಬೆಳಿಗ್ಗೆ ಟ್ವೀಟ್‌ ಮೂಲಕ ಪ್ರಶ್ನಿಸಿದ್ದ ಸಚಿವ ರಾಮುಲುಗೆ ಬಳ್ಳಾರಿ ನೆಲದಲ್ಲೇ ಉತ್ತರ ಕೊಟ್ಟ ಸಿದ್ದರಾಮಯ್ಯ, 1977ರಲ್ಲಿ ವಿಜಯನಗರ ಉಕ್ಕಿನ ಕಾರ್ಖಾನೆಯನ್ನು ಸ್ಥಾಪನೆ ಮಾಡಿದ್ದು ಯಾರು ಗೊತ್ತಾ? ಸೋನಿಯಾ ಗಾಂಧಿ ಅವರು 1999ರಲ್ಲಿ ಬಳ್ಳಾರಿಯಿಂದ ಸ್ಪರ್ಧೆ ಮಾಡಿ ಲೋಕಸಭಾ ಸದಸ್ಯರಾದ ಮೇಲೆ 3,300 ಕೋಟಿ ರೂಪಾಯಿಯ ಕುಡತಿನಿ ವಿದ್ಯುತ್‌ ಯೋಜನೆ ಜಾರಿ ಮಾಡಿದ್ದರು. ಈಗ ಅವರು ಉತ್ತರ ಕೊಡಲಿ, ಬಳ್ಳಾರಿಯ ಅಭಿವೃದ್ಧಿಗೆ ಶ್ರೀರಾಮುಲು ಅಥವಾ ಬಿಜೆಪಿಯ ಕೊಡುಗೆ ಏನು? ಅಕ್ರಮ ಗಣಿಗಾರಿಕೆಯಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆ. ಎಂದು ಟೀಕಿಸಿದ್ದಾರೆ.</p>



<p>ಬಳ್ಳಾರಿಯಲ್ಲಿ ಇಂದು ನಡೆದ ಭಾರತ ಐಕ್ಯತಾ ಯಾತ್ರೆಯ ಬೃಹತ್‌ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ &nbsp;&nbsp;ಮಾತನಾಡಿ, &nbsp;ನಾನು ಶ್ರೀರಾಮುಲು ಅವರಿಗೆ ಇತಿಹಾಸ ನೆನಪಿಸಲು ಬಯಸುತ್ತೇನೆ. 1977ರಲ್ಲಿ ವಿಜಯನಗರ ಉಕ್ಕಿನ ಕಾರ್ಖಾನೆಯನ್ನು ಸ್ಥಾಪನೆ ಮಾಡಿದ್ದು ಯಾರು ಗೊತ್ತಾ? ಇಂದು ಸಾವಿರಾರು ಜನರಿಗೆ ಉದ್ಯೋಗ, ಆ ಮೂಲಕ ಅನ್ನಕ್ಕೆ ದಾರಿ ಆಗಿದ್ದರೆ ಅದಕ್ಕೆ ಕಾರಣ ಶ್ರೀಮತಿ ಇಂದಿರಾ ಗಾಂಧಿ ಅವರು. ಸೋನಿಯಾ ಗಾಂಧಿ ಅವರು 1999ರಲ್ಲಿ ಬಳ್ಳಾರಿಯಿಂದ ಸ್ಪರ್ಧೆ ಮಾಡಿ ಲೋಕಸಭಾ ಸದಸ್ಯರಾದ ಮೇಲೆ 3,300 ಕೋಟಿ ರೂಪಾಯಿಯ ಕುಡತಿನಿ ವಿದ್ಯುತ್‌ ಯೋಜನೆ ಜಾರಿ ಮಾಡಿದ್ದರು. ಈಗ ಅವರು ಉತ್ತರ ಕೊಡಲಿ, ಬಳ್ಳಾರಿಯ ಅಭಿವೃದ್ಧಿಗೆ ಶ್ರೀರಾಮುಲು ಅಥವಾ ಬಿಜೆಪಿಯ ಕೊಡುಗೆ ಏನು? ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 8 ವರ್ಷಗಳು ಕಳೆದಿದೆ, ಬಳ್ಳಾರಿಗೆ ಒಂದೇ ಒಂದು ರೂಪಾಯಿ ಉಪಯೋಗ ಆಗಿಲ್ಲ. ಶ್ರೀರಾಮುಲು ಚರ್ಚೆಗೆ ತಯಾರಾಗಿದ್ದಾರಂತೆ ಆದರೆ ಅವರಂಥ ಪೆದ್ದನ ಜೊತೆ ಚರ್ಚೆ ಮಾಡುವ ಹುಂಬತನದ ಕೆಲಸ ನಾವು ಮಾಡಲ್ಲ ಎಂದು ಹೇಳಿದ್ದಾರೆ.</p>



<p>ಬಳ್ಳಾರಿಯ ಅಕ್ರಮ ಗಣಿಗಾರಿಕೆಯಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆ. ಇದಕ್ಕೆ ಕುಮ್ಮಕ್ಕು ಕೊಟ್ಟವರು ಯಾರು? ಈ ಅಕ್ರಮಗಳ ವಿರುದ್ಧ ಬೆಂಗಳೂರಿಂದ ಬಳ್ಳಾರಿಗೆ ನಾವು ಪಾದಯಾತ್ರೆ ಮಾಡಿದ ಮೇಲೆ ಜನಾರ್ಧನ ರೆಡ್ಡಿ ಜೈಲು ಸೇರಿದ್ದು. ಇಂದು ಕೂಡ ಅವರ ವಿರುದ್ಧ ಅನೇಕ ಕ್ರಿಮಿನಲ್‌ ಮೊಕದ್ದಮೆಗಳಿವೆ. ಕಾಂಗ್ರೆಸ್‌ ವಿರುದ್ಧ ಮಾತನಾಡುವ ನೈತಿಕತೆ ರಾಮುಲು ಅವರಿಗೆ ಇಲ್ಲ. ಒಂದು ವೇಳೆ ಕಾಂಗ್ರೆಸ್‌ ಪಕ್ಷ ಬಳ್ಳಾರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ಮಾಡಲೇಬೇಕು ಎಂದಿದ್ದರೆ ನಮ್ಮ ಪಕ್ಷದ ನಾಯಕರಾದ ಉಗ್ರಪ್ಪನವರನ್ನು ಕಳಿಸಿಕೊಡ್ತೇವೆ ತಯಾರಾಗಿ ಎಂದು ಸವಾಲು ಎಸೆದಿದ್ದಾರೆ.</p>



<p>ಇಂದು ರಾಜ್ಯದ ಬಿಜೆಪಿ ಸರ್ಕಾರವನ್ನು 40% ಕಮಿಷನ್‌ ಸರ್ಕಾರ ಎಂದು ಕರೆಯುತ್ತಿದ್ದಾರೆ. ಈ ಮಾತನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದು ಇಲ್ಲಿನ ಸರ್ಕಾರ ಪ್ರತಿ ಕಾಮಗಾರಿಗೆ 40% ಕಮಿಷನ್‌ ಕೇಳುತ್ತಿದೆ ಎಂದು ಆರೋಪ ಮಾಡಿದ್ದಾರೆ. ಪತ್ರ ಬರೆದು 1 ವರ್ಷ ಆಯಿತು, ನರೇಂದ್ರ ಮೋದಿ ಅವರು ಈ ವರೆಗೆ ಯಾವ ಕ್ರಮ ಕೈಗೊಂಡಿಲ್ಲ. ನಾ ಖಾವೂಂಗ, ನಾ ಖಾನೆದೂಂಗ ಎನ್ನುವ ಮೋದಿ ಅವರು ಈಗೆಲ್ಲಿದ್ದಾರೆ? ಯಾಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದ್ದಾರೆ.</p>



<p></p>



<figure class="wp-block-image size-large"><img decoding="async" width="1024" height="576" src="https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2-1024x576.jpeg" alt="" class="wp-image-10911" srcset="https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2-1024x576.jpeg 1024w, https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2-300x169.jpeg 300w, https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2-768x432.jpeg 768w, https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2-1536x864.jpeg 1536w, https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2-150x84.jpeg 150w, https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2-696x392.jpeg 696w, https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2-1068x601.jpeg 1068w, https://peepalmedia.com/wp-content/uploads/2022/10/WhatsApp-Image-2022-10-15-at-2.28.02-PM-2.jpeg 1600w" sizes="(max-width: 1024px) 100vw, 1024px" /></figure>



<p>ರಾಹುಲ್‌ ಗಾಂಧಿಯವರು ಭಾರತ ಐಕ್ಯತಾ ಯಾತ್ರೆಯನ್ನು ಕೈಗೊಂಡಿರುವುದು ಮುಂದಿನ ಲೋಕಸಭಾ ಚುನಾವಣೆಯನ್ನೋ ಅಥವಾ ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯನ್ನು ಗೆಲ್ಲುವ ಉದ್ದೇಶದಿಂದ ಅಲ್ಲ. ದೇಶದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಪಾದಯಾತ್ರೆ. ಮಹತ್ಮಾ ಗಾಂಧಿ, ವಿನೋಬಾ ಭಾವೆ, ಚಂದ್ರಶೇಖರ್‌ ಅವರು ಪಾದಯಾತ್ರೆಯನ್ನು ಮಾಡಿದ್ದಾರೆ, ಆದರೆ ರಾಹುಲ್‌ ಗಾಂಧಿ ಅವರು ಏಕಕಾಲದಲ್ಲಿ ಸುಮಾರು 3,570 ಕಿ.ಮೀ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಇಷ್ಟೊಂದು ಉದ್ದನೆಯ ಪ್ರವಾಸ ಕೈಗೊಂಡಿರುವುದು ಇದೇ ಮೊದಲು. ಈಗಾಗಲೇ 1,000 ಕಿ.ಮೀ ನಡಿಗೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಕರ್ನಾಟಕದಲ್ಲಿ ಪಾದಯಾತ್ರೆ ಮುಗಿದ ಮೇಲೆ ಆಂದ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹೀಗೆ 12 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಾದಯಾತ್ರೆ ಸಾಗಲಿದೆ ಎಂದಿದ್ದಾರೆ.</p>



<p>ಈ ಪಾದಯಾತ್ರೆಯ ಉದ್ದೇಶವನ್ನು ಅನೇಕ ಬಾರಿ ರಾಹುಲ್‌ ಗಾಂಧಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇಂದು ದೇಶದಲ್ಲಿ ಜಾತಿ, ಧರ್ಮ, ವರ್ಗ, ಭಾಷೆಗಳ ಆಧಾರದ ಮೇಲೆ ಜನರನ್ನು ಒಡೆಯುವ ಕೆಲಸ ನಡೆಯುತ್ತಿದೆ, ಜನರ ಮನಸಲ್ಲಿ ವಿಷ ಹಿಂಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಈ ಮನುಷ್ಯ ವಿರೋಧಿ ಕೆಲಸ ಹೆಚ್ಚಾಗಿ ಆಗುತ್ತಿದೆ. ಎಲ್ಲಾ ಕಡೆ ದ್ವೇಷದ ರಾಜಕಾರಣ, ಹಿಂಸೆಯ ರಾಜಕಾರಣ ಮಾಡಲು ಆರಂಭಿಸಿರುವುದರಿಂದ ದಲಿರು, ಮಹಿಳೆಯರು, ಶೋಷಿತರು, ಅಲ್ಪಸಂಖ್ಯಾತ ಜನ ಭಯದಲ್ಲಿ ಬದುಕುವಂತಾಗಿದೆ. ಕುವೆಂಪು ಅವರು ಭಾರತ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು ಎಂದು ಹೇಳಿದ್ದರು, ಇಲ್ಲಿನ ಜನ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಬದುಕುವ ಪರಿಸ್ಥಿತಿ ನಿರ್ಮಾಣ ಆಗಬೇಕು ಎಂದು ಅವರು ಹೇಳಿದ್ದಾರೆ. ಆದರೆ ಆರ್‌,ಎಸ್‌,ಎಸ್‌ ಹಾಗೂ ಸಂಘ ಪರಿವಾರ ಧರ್ಮ ರಾಜಕಾರಣ ಮಾಡಿ ದೇಶ ಒಡೆಯುತ್ತಿದೆ ಎಂದು ಗುಡುಗಿದ್ದಾರೆ.</p>



<p>ಬಿಜೆಪಿ ಅವರು ರಾಹುಲ್‌ ಗಾಂಧಿ ಅವರ ಪಾದಯಾತ್ರೆಯನ್ನು ಲಘುವಾಗಿ ಟೀಕೆ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿ ಅವರ ಕುಟುಂಬ ದೇಶಕ್ಕಾಗಿ ತ್ಯಾಗ, ಬಲಿದಾನವನ್ನು ಮಾಡಿದೆ. ಈಗ ದೇಶಕ್ಕಾಗಿ ನಿಮ್ಮ ಕೊಡುಗೆ ಏನು ಎಂದು ಅಮಿತ್‌ ಶಾ ಹಾಗೂ ನರೇಂದ್ರ ಮೋದಿ ಅವರನ್ನು ನಾವು ಕೇಳಬೇಕಾಗಿದೆ. ಕಾಂಗ್ರೆಸ್‌ ಪಕ್ಷ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಮಹಾತ್ಮ ಗಾಂಧಿ, ನೆಹರು ಆದಿಯಾಗಿ ನಮ್ಮ ಪಕ್ಷದ ಅನೇಕರು ತ್ಯಾಗ ಮಾಡಿದ್ದಾರೆ, ಹುತಾತ್ಮರಾಗಿದ್ದಾರೆ. 1925ರಲ್ಲಿ ಆರಂಭವಾದ ಆರ್‌,ಎಸ್‌,ಎಸ್‌ ನವರಲ್ಲಿ ಈ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬ ವ್ಯಕ್ತಿ ಇದ್ದಾರ? ಕಾಂಗ್ರೆಸ್‌ ಪಕ್ಷ ತಂದು ಕೊಟ್ಟ ಸ್ವಾತಂತ್ರ್ಯವನ್ನು ಬಿಜೆಪಿಯವರು ಅನುಭವಿಸುತ್ತಿದ್ದಾರೆ.</p>



<p>ರಾಹುಲ್‌ ಗಾಂಧಿ ಅವರು ಪಾದಯಾತ್ರೆ ಆರಂಭ ಮಾಡಿದ ಮೇಲೆ ಬಿಜೆಪಿ ಈಗ ಜನಸಂಕಲ್ಪ ಯಾತ್ರೆ ಹೊರಟಿದೆ. ಆದರೆ 2023ಕ್ಕೆ ಬಿಜೆಪಿಯನ್ನು ಕಿತ್ತೆಸೆದು ಮತ್ತೆ ಕಾಂಗ್ರೆಸ್‌ ಸರ್ಕಾರವನ್ನು ಸ್ಥಾಪನೆ ಮಾಡಬೇಕು ಎಂದು ರಾಜ್ಯದ ಜನ ಸಂಕಲ್ಪ ಮಾಡಿದ್ದಾರೆ. ರಾಹುಲ್‌ ಗಾಂಧಿ ಅವರ ಪಾದಯಾತ್ರೆಗೆ ವ್ಯಕ್ತವಾಗುತ್ತಿರುವ ಅಭೂತಪೂರ್ವ ಸ್ಪಂದನೆ ಇಂದ ಬಿಜೆಪಿಗೆ ನಡುಕ ಹುಟ್ಟಿದೆ. ಅದೇ ಕಾರಣಕ್ಕೆ ಬಾಯಿಗೆ ಬಂದಂತೆ ಮಾತನಾಡಲು ಆರಂಭ ಮಾಡಿದ್ದಾರೆ.</p>



<p>ರಾಹುಲ್‌ ಗಾಂಧಿ ಅವರು ನನಗೆ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಅವಕಾಶ ಕೊಟ್ಟಿದ್ದರು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ನಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಮತ್ತು ಇದರ ಜೊತೆಗೆ ಹೆಚ್ಚುವರಿಯಾಗಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಬಿಜೆಪಿ 2018ರಲ್ಲಿ ನೀಡಿದ್ದ ಚುನಾವಣಾ ಪ್ರಣಾಳಿಕೆಯ ಭರವಸೆಗಳಲ್ಲಿ 10% ಭರವಸೆಗಳನ್ನು ಕೂಡ ಈಡೇರಿಸಿಲ್ಲ. ನಾಚಿಕೆಯಾಗಬೇಕು ಬಿಜೆಪಿ ನಾಯಕರಿಗೆ. ಈ ಸತ್ಯ ಜನರಿಗೆ ಗೊತ್ತಾಗಬೇಕೋ? ಬೇಡವೋ? ಒಡೆದಿರುವ ಜನರ ಮನಸುಗಳನ್ನು ಒಂದು ಮಾಡಬೇಕು ಎಂಬ ಕಾರಣಕ್ಕೆ ರಾಹುಲ್‌ ಗಾಂಧಿ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.</p>



<p>ಇಂದು ಬೆಲೆಯೇರಿಕೆ ಗಗನ ಮುಟ್ಟಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಚ್ಚಾತೈಲದ ಬೆಲೆ 125 ಡಾಲರ್‌ ಇದ್ದಾಗ ಡೀಸೆಲ್‌ ಬೆಲೆ 46 ಹಾಗೂ ಪೆಟ್ರೋಲ್‌ ಬೆಲೆ 71 ರೂಪಾಯಿ ಇತ್ತು. ಇಂದು ಪೆಟ್ರೋಲ್‌ ಬೆಲೆ 102 ಹಾಗೂ ಡೀಸೆಲ್‌ ಬೆಲೆ 95 ಆಗಿದೆ. 2016ರಲ್ಲಿ ಕಚ್ಚಾತೈಲ ಬೆಲೆ 40 ರಿಂದ 50 ಡಾಲರ್‌ ಒಳಗೆ ಇದ್ದರೂ ಪೆಟ್ರೋಲ್‌ ಡೀಸೆಲ್‌ ಬೆಲೆ ಇಳಿಕೆ ಮಾಡಿಲ್ಲ. ಗ್ಯಾಸ್‌ ಬೆಲೆ 2013ರಲ್ಲಿ 414 ಇತ್ತು, ಇಂದು ಅದು 1050 ಆಗಿದೆ. ಇದನ್ನು ಜನರಿಗೆ ತಿಳಿಸಲು ಪಾದಯಾತ್ರೆ ಮಾಡುತ್ತಿರುವುದು. ನರೇಂದ್ರ ಮೋದಿ ಅವರು ಯುವಕರಿಗೆ ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದರು. ಅಂದರೆ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಅದರ ಬದಲಿಗೆ ಸುಮಾರು 5 ರಿಂದ 6 ಲಕ್ಷ ಸಣ್ಣ ಮತ್ತು ಮಧ್ಯಮಗಾತ್ರದ ಕೈಗಾರಿಕೆಗಳು ಮುಚ್ಚಿ ಯುವಕರ ಬದುಕು ಬೀದಿ ಪಾಲಾಗಿದೆ.</p>



<p></p>



<figure class="wp-block-image size-large"><img decoding="async" width="1024" height="681" src="https://peepalmedia.com/wp-content/uploads/2022/10/WhatsApp-Image-2022-10-15-at-5.49.15-PM-1024x681.jpeg" alt="" class="wp-image-10915" srcset="https://peepalmedia.com/wp-content/uploads/2022/10/WhatsApp-Image-2022-10-15-at-5.49.15-PM-1024x681.jpeg 1024w, https://peepalmedia.com/wp-content/uploads/2022/10/WhatsApp-Image-2022-10-15-at-5.49.15-PM-300x199.jpeg 300w, https://peepalmedia.com/wp-content/uploads/2022/10/WhatsApp-Image-2022-10-15-at-5.49.15-PM-768x511.jpeg 768w, https://peepalmedia.com/wp-content/uploads/2022/10/WhatsApp-Image-2022-10-15-at-5.49.15-PM-150x100.jpeg 150w, https://peepalmedia.com/wp-content/uploads/2022/10/WhatsApp-Image-2022-10-15-at-5.49.15-PM-696x463.jpeg 696w, https://peepalmedia.com/wp-content/uploads/2022/10/WhatsApp-Image-2022-10-15-at-5.49.15-PM-1068x710.jpeg 1068w, https://peepalmedia.com/wp-content/uploads/2022/10/WhatsApp-Image-2022-10-15-at-5.49.15-PM.jpeg 1280w" sizes="(max-width: 1024px) 100vw, 1024px" /></figure>



<p></p>



<p>2022ಕ್ಕೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು, ಈಗ ರೈತರು ಕೃಷಿ ಚಟುವಟಿಕೆಗಳಿಗೆ ಮಾಡುವ ಖರ್ಚು ದುಪ್ಪಟ್ಟಾಗಿದೆ. ರೈತರಿಗೆ ಕನಿಷ್ಟ ಬೆಂಬಲ ಬೆಲೆ ಕೊಡದೆ ರೈತರ ಮನೆ ಹಾಳು ಮಾಡಿದ್ದಾರೆ. ಶ್ರೀಮತಿ ಇಂದಿರಾ ಗಾಂಧಿ ಅವರು ಜಾರಿ ಮಾಡಿದ್ದ ಭೂಸುಧಾರಣಾ ಕಾಯ್ದೆಯನ್ನು ತಿದ್ದುಪಡಿ ಮಾಡಿ ಟಾಟಾ, ಬಿರ್ಲಾ, ಅಂಬಾನಿ, ಅದಾನಿಯಂತವರು ಭೂಮಿ ಖರೀದಿಸಲು ಅವಕಾಶ ಮಾಡಿಕೊಟ್ಟು ಸಣ್ಣ ಹಿಡುವಳಿದಾರರನ್ನು ಬೀದಿಪಾಲು ಮಾಡಿದ್ದಾರೆ. ಹೀಗೆ ಆದರೆ ದೇಶ ಉಳೀತದಾ? &nbsp;</p>



<p>ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ ದೇಶದ ಸಾಲ ಇದ್ದಿದ್ದು 53 ಲಕ್ಷದ 11 ಸಾವಿರ ಕೋಟಿ. 2023ರ ವರ್ಷದ ಮಾರ್ಚ್‌ ಕೊನೆಗೆ ಅದು 155 ಲಕ್ಷ ಕೋಟಿ ಆಗುತ್ತದೆ. ಸ್ವಾತಂತ್ರ್ಯ ಬಂದ ಮೇಲಿಂದ ಇಷ್ಟು ಸಾಲ ಯಾವ ಸರ್ಕಾರವೂ ಮಾಡಿರಲಿಲ್ಲ. ಅಚ್ಚೇದಿನ್‌ ಆಯೇಗಾ ಎಂದಿದ್ದರು, ಇದೇನಾ ಅಚ್ಚೇದಿನ್? ಇದನ್ನು ಜನರಿಗೆ ಹೇಳಬೇಕಾ ಬೇಡ್ವಾ? ಎಂದು ಸಾಲು ಸಾಲು ಪ್ರಶ್ನೆಗಳನ್ನು ಎಸೆದಿದ್ದಾರೆ.</p>
]]></content:encoded>
					
		
		
			</item>
		<item>
		<title>ವಚನವಂಚನೆ ಸರ್ಕಾರ: ಬಿಜೆಪಿಗೆ ಸಿದ್ದರಾಮಯ್ಯ ಸವಾಲ್‌!</title>
		<link>https://peepalmedia.com/vachana-vanchane-sarkara-bjpge-siddaramayya-saval/</link>
		
		<dc:creator><![CDATA[Peepal Media]]></dc:creator>
		<pubDate>Mon, 29 Aug 2022 13:45:11 +0000</pubDate>
				<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[c t ravi]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[siddaramayya]]></category>
		<category><![CDATA[sriramulu]]></category>
		<category><![CDATA[state politics]]></category>
		<category><![CDATA[vachana vanchane sarkara]]></category>
		<guid isPermaLink="false">https://peepalmedia.com/?p=3366</guid>

					<description><![CDATA[ಬೆಂಗಳೂರು: ರಾಜ್ಯ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದಾಗ ನೀಡಿದ್ದ ಭರವಸೆಗಳನ್ನು ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದು, 3 ವರ್ಷಗಳ ನಂತರ ಎಷ್ಟು ವಚನಗಳನ್ನು ಈಡೇರಿಸಿದ್ದೀರಿ? ಉತ್ತರಿಸಿ ಎಂದು ಸವಾಲ್‌ ಹಾಕಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, 2018ರ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ಪಕ್ಷದವರು ರಾಜ್ಯದ ಜನತೆಗೆ ಸುಮಾರು 600 ಭರವಸೆಗಳನ್ನು ನೀಡಿದ್ದರು. ಅಧಿಕಾರಕ್ಕೆ ಬಂದು 3 ವರ್ಷಗಳ ನಂತರ ಎಷ್ಟು ವಚನಗಳನ್ನು ಈಡೇರಿಸಿದ್ದಾರೆ ಎಂದು ಉತ್ತರಿಸಲಿ. ನಾವು 2013ರ ಚುನಾವಣೆ ವೇಳೆ [&#8230;]]]></description>
										<content:encoded><![CDATA[
<p class="has-medium-font-size"><strong>ಬೆಂಗಳೂರು:</strong> ರಾಜ್ಯ ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದಾಗ ನೀಡಿದ್ದ ಭರವಸೆಗಳನ್ನು ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದು, 3 ವರ್ಷಗಳ ನಂತರ ಎಷ್ಟು ವಚನಗಳನ್ನು ಈಡೇರಿಸಿದ್ದೀರಿ? ಉತ್ತರಿಸಿ ಎಂದು ಸವಾಲ್‌ ಹಾಕಿದ್ದಾರೆ.</p>



<p class="has-medium-font-size">ಈ ಕುರಿತು ಟ್ವೀಟ್‌ ಮಾಡಿರುವ ಅವರು, 2018ರ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ಪಕ್ಷದವರು ರಾಜ್ಯದ ಜನತೆಗೆ ಸುಮಾರು 600 ಭರವಸೆಗಳನ್ನು ನೀಡಿದ್ದರು. ಅಧಿಕಾರಕ್ಕೆ ಬಂದು 3 ವರ್ಷಗಳ ನಂತರ ಎಷ್ಟು ವಚನಗಳನ್ನು ಈಡೇರಿಸಿದ್ದಾರೆ ಎಂದು ಉತ್ತರಿಸಲಿ. ನಾವು 2013ರ ಚುನಾವಣೆ ವೇಳೆ ಜನರಿಗೆ 165 ಭರವಸೆಗಳನ್ನು ನೀಡಿ, ಅವುಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಜೊತೆಗೆ ಹೆಚ್ಚುವರಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು, ಬಿಜೆಪಿತನ್ನ ಪ್ರಣಾಳಿಕೆಯ ಭರವಸೆಗಳಲ್ಲಿ 10% ಕೂಡ ಈಡೇರಿಸಿಲ್ಲ. ಉಳಿದ ಭರವಸೆಗಳ ಈಡೇರಿಕೆ ಯಾವಾಗ? ಎಂದು ಪ್ರಶ್ನಿಸಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">2018ರ ಚುನಾವಣೆ ಪ್ರಣಾಳಿಕೆಯಲ್ಲಿ <a href="https://twitter.com/BJP4Karnataka?ref_src=twsrc%5Etfw">@BJP4Karnataka</a> ಪಕ್ಷದವರು ರಾಜ್ಯದ ಜನತೆಗೆ ಸುಮಾರು 600 ಭರವಸೆಗಳನ್ನು ನೀಡಿದ್ದರು. ಅಧಿಕಾರಕ್ಕೆ ಬಂದು 3 ವರ್ಷಗಳ ನಂತರ ಎಷ್ಟು ವಚನಗಳನ್ನು ಈಡೇರಿಸಿದ್ದಾರೆ ಎಂದು ಉತ್ತರಿಸಲಿ. 1/15<a href="https://twitter.com/hashtag/%E0%B2%B5%E0%B2%9A%E0%B2%A8%E0%B2%B5%E0%B2%82%E0%B2%9A%E0%B2%A8%E0%B3%86?src=hash&amp;ref_src=twsrc%5Etfw">#ವಚನವಂಚನೆ</a> <a href="https://t.co/iaMLoCoxNz">pic.twitter.com/iaMLoCoxNz</a></p>&mdash; Siddaramaiah (@siddaramaiah) <a href="https://twitter.com/siddaramaiah/status/1564196113959514112?ref_src=twsrc%5Etfw">August 29, 2022</a></blockquote><script async src="https://platform.twitter.com/widgets.js" charset="utf-8"></script>
</div></figure>



<p class="has-medium-font-size">ರಾಜ್ಯದಲ್ಲಿ ಬಾಕಿ ಇರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 1.5 ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದು ಬಿಜೆಪಿ ಅವರು ವಚನ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಕೇವಲ 48 ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ಉಳಿದ ಒಂದು ಲಕ್ಷ ಕೋಟಿ ರೂಪಾಯಿಯ ಯೋಜನೆಗಳು ಜಾರಿಯಾಗೋದು ಯಾವಾಗ? ಎಂದು ಕೇಳಿದರು.</p>



<p class="has-medium-font-size">ಅಧಿಕಾರಕ್ಕೆ ಬಂದ ಕೂಡಲೇ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು ಬಿಜೆಪಿ ಅವರು ನೀಡಿದ್ದರು. ಹಿಂದೊಮ್ಮೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದಿದ್ದ ಬಿ.ಎಸ್.‌ ಯಡಿಯೂರಪ್ಪ ವಚನ ಭ್ರಷ್ಟತೆಯಲ್ಲಿ ನಿಸ್ಸೀಮರು ಎಂದು ಕಟುವಾಗಿ ಟೀಕಿಸಿದ್ದಾರೆ.</p>



<p class="has-medium-font-size">ಪರಿಶಿಷ್ಟ ಹಾಗೂ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್, &nbsp;ಬಾತ್ ರೂಂ ಕಿಟ್ ವಿತರಣೆ ಮಾಡುವ ಯೋಗ್ಯತೆ ಬಿಜೆಪಿ ಸರ್ಕಾರಕ್ಕೆ ಇಲ್ಲ. ಇದು ಅಸಮರ್ಥ ಮುಖ್ಯಮಂತ್ರಿಗಳಿಂದ ಮ್ಯಾನೇಜ್ ಮಾಡಲ್ಪಡುತ್ತಿರುವ ದಿವಾಳಿ ಸರ್ಕಾರ ಎಂದು ವ್ಯಂಗ್ಯವಾಡಿದ್ದಾರೆ.</p>



<p class="has-medium-font-size">ದೇವರಾಜ ಅರಸು ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ ಕಳೆದ 3 ವರ್ಷಗಳಿಂದ ಅಗತ್ಯ ಅನುದಾನ ನೀಡಿಲ್ಲ. ಖಾಲಿ ಕೈಲಿರುವ ನಿಗಮಗಳಿಂದ ಶೋಷಿತರ ಕಲ್ಯಾಣ ಸಾಧ್ಯವೇ ಬಿಜೆಪಿ? ಎಂದು ಸಿದ್ದರಾಮಯ್ಯ ಗುಡುಗಿದರು.</p>



<p class="has-medium-font-size">ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ 15 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿಕೊಟ್ಟಿದ್ದೆವು, ರಾಜೀವ್‌ ಗಾಂಧಿ ವಸತಿ ಯೋಜನೆ ಪ್ರಾಧಿಕಾರದಿಂದ ಯಾರು ಬೇಕಾದರೂ ಈ ಮಾಹಿತಿ ಪಡೆದುಕೊಳ್ಳಬಹುದು. ಇಡೀ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಂಜೂರು ಮಾಡಿ, ಕಟ್ಟಿಸಿಕೊಟ್ಟ ಒಂದೇ ಒಂದು ಮನೆ ತೋರಿಸಲಿ ಎಂದು ಸವಾಲ್‌ ಹಾಕಿದ್ದಾರೆ.</p>



<p class="has-medium-font-size">ನಾವು ಬೆಂಗಳೂರು ನಗರಕ್ಕೆ 1 ಲಕ್ಷ ಮನೆ ನಿರ್ಮಾಣ ಮಾಡಬೇಕೆಂದು ಬಜೆಟ್ ನಲ್ಲಿ ಹಣ ಒದಗಿಸಿ, 1072 ಎಕರೆ ಜಮೀನನ್ನು ನೀಡಿ, ಆನ್‌ ಲೈನ್‌ ಮೂಲಕ ಅರ್ಜಿ ಕರೆದು 50,000 ಮನೆಗಳನ್ನು ಮಂಜೂರು ಮಾಡಿದ್ದೆವು, ಬಿಜೆಪಿ ಸರ್ಕಾರ ಬಂದಮೇಲೆ ಎಲ್ಲಾ ಅರ್ಜಿಗಳನ್ನು ವಜಾ ಮಾಡಿದೆ. ಹೊಸದಾಗಿ ಅರ್ಜಿಯನ್ನು ಕರೆದಿಲ್ಲ ಎಂದು ಹೇಳಿದ್ದಾರೆ.</p>



<p class="has-medium-font-size">ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಲ ಜಾಸ್ತಿಯಾಗಿದೆ ಎಂದು ಸಿ.ಟಿ.ರವಿ ಹೇಳುತ್ತಿದ್ದರು. ನಮ್ಮ ಸರ್ಕಾರದ ಕೊನೆ ಬಜೆಟ್‌ ಮಂಡಿಸಿದಾಗ ರಾಜ್ಯದ ಮೇಲಿದ್ದ ಒಟ್ಟು ಸಾಲ 2.4 ಲಕ್ಷ ಕೋಟಿ. ನಾನು ಅಧಿಕಾರಕ್ಕೆ ಬರುವ ಮೊದಲು ಈ ಸಾಲ 1.36 ಲಕ್ಷ ಕೋಟಿ ಇತ್ತು. ನಮ್ಮನ್ನು ಸಾಲ ಮಾಡಿ ತುಪ್ಪ ತಿನ್ನುವವರು ಎಂದು ಟೀಕಿಸುತ್ತಿದ್ದ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಸಾಲ 5 ಲಕ್ಷದ 40 ಸಾವಿರ ಕೋಟಿಗೆ ಏರಿದೆ. ಕೇವಲ 4 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದು ಬಿಜೆಪಿ ಸಾಧನೆ ಅಲ್ಲವೇ? ಎಂದು ಪ್ರಶ್ನಿಸುವ ಮೂಲಕ ಸಿ.ಟಿ.ರವಿ ಅವರಿಗೆ ತಿರುಗೇಟು ನೀಡಿದ್ದಾರೆ.</p>



<p class="has-medium-font-size">ನಮ್ಮ ಅವಧಿಯಲ್ಲಿ ಸಾಲವು ರಾಜ್ಯದ ಜಿಡಿಪಿ ಯ 25% ಒಳಗಡೆ ಇತ್ತು, ಫಿಸ್ಕಲ್‌ ಢಿಫಿಸಿಟ್‌ 3% ಒಳಗಡೆ ಇತ್ತು ಹಾಗೂ ರಾಜಸ್ವ ಉಳಿಕೆ ಇತ್ತು. ಆದರೆ ಈ ವರ್ಷ 19,000 ಕೋಟಿ ವಿತ್ತೀಯ ಕೊರತೆ ಎದುರಿಸುತ್ತಿದ್ದೇವೆ. ಬಿಜೆಪಿ ನಾಯಕರು ಸಾಲ ಮಾಡಿ ಸಂಬಳ ಕೊಡುವಷ್ಟು ರಾಜ್ಯವನ್ನುದಿವಾಳಿಯೆಬ್ಬಿಸಿದ್ದಾರೆ.ಈ ವರ್ಷ ಸರ್ಕಾರವು ಅಸಲು ಮತ್ತು ಬಡ್ಡಿ ಸೇರಿ ಒಟ್ಟು 43,000 ಕೋಟಿ ಸಾಲದ ಮರುಪಾವತಿ ಮಾಡಬೇಕು. ನಾಚಿಕೆಗೆಟ್ಟ ಬಿಜಿಪಿ ನಾಯಕರು ಈ ಸಾಲದ ಹಣದಲ್ಲೂ 40% ಕಮಿಷನ್‌ ಹೊಡೆಯುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p class="has-medium-font-size">ರಾಜ್ಯದಲ್ಲಿ ಬಿಜಿಪಿ ಆಡಳಿತದಲ್ಲಿ ನಡೆದ ಹಗರಣಗಳು ಒಂದೊಂದಾಗಿ ಹೊರಬಂದು ಐಎಎಸ್, ಐಪಿಎಸ್ ಅಧಿಕಾರಿಗಳು ಜೈಲು ಸೇರಿದ್ದಾರೆ. ಮುಖ್ಯಮಂತ್ರಿಗಳಿಗೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲ. ಹಾಗಾಗಿಯೇ ಮಾಧುಸ್ವಾಮಿ ಅವರು ಇಲ್ಲಿ ಸರ್ಕಾರ ನಡೆಯುತ್ತಿಲ್ಲ, ಕೇವಲ ಮ್ಯಾನೇಜ್‌ ಮಾಡುತ್ತಿದ್ದೇವೆ ಎಂದು ಹೇಳಿದ್ದು. ಅಧಿಕಾರಕ್ಕೆ ಬಂದ 24 ಗಂಟೆಗಳ ಒಳಗೆ ಎಸ್.ಟಿ ಸಮುದಾಯಕ್ಕೆ 7.5% ಮೀಸಲಾತಿ ಕಲ್ಪಿಸಿಕೊಡುತ್ತೇವೆ, ಇದನ್ನು ಬೇಕಾದರೆ ರಕ್ತದಲ್ಲಿ ಬರೆದುಕೊಡ್ತೇನೆ ಎಂದಿದ್ದ ಶ್ರೀರಾಮುಲು ಮಹಾ ವಚನಭ್ರಷ್ಟ ಎಂದು ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>



<p class="has-medium-font-size">ತಮ್ಮ ವಚನ ಭ್ರಷ್ಟತೆಯನ್ನು ಮುಚ್ಚಿಡಲು &nbsp;ಬಿಜೆಪಿ ನಾಯಕರು ಜನರ ನಡುವೆ ಧರ್ಮ, ಭಾಷೆ, ಆಚಾರ, ವಿಚಾರಗಳಲ್ಲಿ ವಿವಾದ ಸೃಷ್ಟಿಸಿ, ತಮ್ಮನ್ನು ಧರ್ಮ ರಕ್ಷಕರಂತೆ ಬಿಂಬಿಸಿಕೊಳ್ಳುವ ಕೀಳು ರಾಜಕೀಯದ ಮೊರೆ ಹೋಗಿದ್ದಾರೆ. ರಾಜ್ಯದ ಜನ ಈ ನಾಟಕವನ್ನು ಅರ್ಥಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.</p>
]]></content:encoded>
					
		
		
			</item>
		<item>
		<title>ʼಮುಂದಿನ ಸಿಎಂ ಸಿದ್ದರಾಮಯ್ಯ ಆಗಲಿʼ: ಶ್ರೀರಾಮುಲು ಸ್ಫೋಟಕ ಹೇಳಿಕೆ</title>
		<link>https://peepalmedia.com/mundina-cm-siddaramayya-agali-sriramulu-spotaka-helike/</link>
		
		<dc:creator><![CDATA[Peepal Media]]></dc:creator>
		<pubDate>Tue, 16 Aug 2022 07:27:27 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[news]]></category>
		<category><![CDATA[next cm]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<category><![CDATA[sriramulu]]></category>
		<guid isPermaLink="false">https://peepalmedia.com/?p=1984</guid>

					<description><![CDATA[ಬಳ್ಳಾರಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮತ್ತೋಮ್ಮೆ ಸಿಎಂ ಆಗಲಿ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಮುಲು ಅವರು ಎಲ್ಲಾ ಹಿಂದುಳಿದ ಜಾತಿಗಳು ಒಂದಾಗಬೇಕೆಂಬ ಪ್ರಯತ್ನವನ್ನು ನಾನು ಮತ್ತು ಸಿದ್ದರಾಮಯ್ಯ ಮಾಡುತ್ತಿದ್ದೇವೆ ಎಂದರು. ಸಿದ್ದರಾಮಯ್ಯ ಮತ್ತು ನನ್ನ ಗೆಳೆತನವೇ ಬೇರೆ, ಬೇಕಾದರೆ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಹೇಗೆ ಗೆಲುವು ದಾಖಲಿಸಿದರೆಂದು ಒಮ್ಮೆ ಕೇಳಿ, ಅವರು ಬಹಿರಂಗವಾಗಿ ಹೇಳಲ್ಲ, ಸಂದರ್ಭ ಬಂದರೆ ಹೇಳುತ್ತೇನೆ. ಹಿಂದುಳಿದ [&#8230;]]]></description>
										<content:encoded><![CDATA[
<p class="has-medium-font-size"><strong>ಬಳ್ಳಾರಿ: </strong>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು  ಮತ್ತೋಮ್ಮೆ ಸಿಎಂ ಆಗಲಿ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ.</p>



<p class="has-medium-font-size">ಬಳ್ಳಾರಿ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಮುಲು ಅವರು ಎಲ್ಲಾ ಹಿಂದುಳಿದ ಜಾತಿಗಳು ಒಂದಾಗಬೇಕೆಂಬ ಪ್ರಯತ್ನವನ್ನು ನಾನು ಮತ್ತು ಸಿದ್ದರಾಮಯ್ಯ ಮಾಡುತ್ತಿದ್ದೇವೆ ಎಂದರು.</p>



<p class="has-medium-font-size">ಸಿದ್ದರಾಮಯ್ಯ ಮತ್ತು ನನ್ನ ಗೆಳೆತನವೇ ಬೇರೆ, ಬೇಕಾದರೆ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಹೇಗೆ ಗೆಲುವು ದಾಖಲಿಸಿದರೆಂದು ಒಮ್ಮೆ ಕೇಳಿ, ಅವರು ಬಹಿರಂಗವಾಗಿ ಹೇಳಲ್ಲ, ಸಂದರ್ಭ ಬಂದರೆ ಹೇಳುತ್ತೇನೆ. ಹಿಂದುಳಿದ ಸಮುದಾಯವನ್ನು ನಾವು ಬಿಟ್ಟು ಕೊಡುವುದಕ್ಕೆ ರೆಡಿ ಇಲ್ಲ. ಏಕೆಂದರೆ ಅದು ನಮ್ಮ ಸಮುದಾಯ” ಎಂದರು.</p>



<p class="has-medium-font-size">ಬಿಜೆಪಿಯಲ್ಲಿ ಹಿಂದುಳಿದ ಸಮುದಾಯದಿಂದ ನನಗೂ ಅವಕಾಶ ಬಂದರೆ ಬಿಜೆಪಿಯಿಂದ ಮುಖ್ಯಮಂತ್ರಿಯಾಗುವೆ. ರಾಮುಲು ಮುಖ್ಯಮಂತ್ರಿ ಆಗಬೇಕೆಂದು ಸಿದ್ದರಾಮಯ್ಯ ಅವರನ್ನು ಕೇಳಿದರೆ ಅವರೂ ಒಪ್ಪುತ್ತಾರೆ. ಜಾತಿ ವ್ಯವಸ್ಥೆಯಲ್ಲಿ ಇವೆಲ್ಲಾ ಮಾಡಬೇಕು,&nbsp;ಏಕೆಂದರೆ ಎಲ್ಲೋ ಒಂದು ಕಡೆ ಕ್ರಾಂತಿಯಾಗಬೇಕು, ನಮ್ಮಲ್ಲಿ ಯಾವಾಗಲು ಹೊಡಕಾಗಬಾರದು ಎಂದು ಹೇಳಿದರು. </p>



<p class="has-medium-font-size">ಈ ಹೇಳಿಕೆ ಕುರಿತು ಕುಳಿತಿದ್ದ ಜನರು ಕೇಳಿದ ಪ್ರಶ್ನೆಗೆ ನಾನು ಯಾರ ಗುಲಾಮನಲ್ಲ, ನನ್ನ ಕೆಲಸ ನಾನು ಮಾಡುತ್ತೇನೆ, ನಾನು ಬಹಿರಂಗವಾಗಿ ಹೇಳುತ್ತೇನೆ ಸಿದ್ದರಾಮಯ್ಯ ನವರು ಮುಂದಿನ ಸಿಎಂ ಆಗಬೇಕು ಎಂದು ಸ್ಫೋಟಕ ಹೇಳಿಕೆ ನೀಡುವ ಮೂಲಕ ಸಿದ್ದರಾಮಯ್ಯನವರನ್ನು ಹೊಗಳಿದ್ದಾರೆ. </p>
]]></content:encoded>
					
		
		
			</item>
	</channel>
</rss>
