<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>TAMILNADU CM &#8211; Peepal Media</title>
	<atom:link href="https://peepalmedia.com/tag/tamilnadu-cm/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sun, 21 Jan 2024 11:58:37 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>TAMILNADU CM &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ರಾಮಮಂದಿರ ಉದ್ಘಾಟನೆ : ತಮ್ಮ ನಿಲುವುಗಳಿಂದ ಗಮನ ಸೆಳೆದ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರ</title>
		<link>https://peepalmedia.com/governments-of-karnataka-and-tamil-nadu-have-attracted-attention-with-their-stances/</link>
		
		<dc:creator><![CDATA[Peepal Media Desk]]></dc:creator>
		<pubDate>Sun, 21 Jan 2024 11:58:36 +0000</pubDate>
				<category><![CDATA[ರಾಜಕೀಯ]]></category>
		<category><![CDATA[karnataka]]></category>
		<category><![CDATA[karnataka government]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[TAMILNADU CM]]></category>
		<guid isPermaLink="false">https://peepalmedia.com/?p=35249</guid>

					<description><![CDATA[ದೇಶಾದ್ಯಂತ ಜನವರಿ 22 ರಂದು ಎಲ್ಲಾ ಸರ್ಕಾರಿ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಯಾವುದೇ ಸರ್ಕಾರಿ ರಜೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಆದರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ರಜೆ [&#8230;]]]></description>
										<content:encoded><![CDATA[
<p>ದೇಶಾದ್ಯಂತ ಜನವರಿ 22 ರಂದು ಎಲ್ಲಾ ಸರ್ಕಾರಿ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಬೇಕೆಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಯಾವುದೇ ಸರ್ಕಾರಿ ರಜೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.</p>



<p>ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಆದರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.</p>



<p>ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ನಾಳೆ ವಿಶೇಷ ಪೂಜೆ ಇರಲಿದೆ ಎಂದು ತಿಳಿಸಿದರು.</p>



<p>ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಸರ್ಕಾರ ಯಾವುದೇ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಪುನಸ್ಕಾರಕ್ಕೆ ಬ್ರೇಕ್ ಹಾಕಿದೆ. ಡಿಎಂಕೆ ಆಡಳಿತ ಇರುವ ತಮಿಳುನಾಡಿನ ಎಂಕೆ ಸ್ಟಾಲಿನ್‌ ನೇತೃತ್ವದ ರಾಜ್ಯ ಸರ್ಕಾರ ಮಾತ್ರ ನಾಳಿನ ಅಯೋಧ್ಯೆಯ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಪೂಜೆ ಪುನಸ್ಕಾರ ನಡೆಸದಂತೆ ಆದೇಶ ಹೊರಡಿಸಿದೆ.</p>



<p>ಅಷ್ಟೆ ಅಲ್ಲದೆ ನಾಳೆ ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯಲಿರುವ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನೇರ ಪ್ರಸಾರ ಮಾಡದಂತೆ ಆದೇಶ ಹೊರಡಿಸಿದೆ ಎಂಬ ವರದಿ ತಮಿಳುನಾಡು ಮೂಲದಿಂದ ಕೇಳಿ ಬಂದಿದೆ</p>



<p>ತಮಿಳುನಾಡು ಸರ್ಕಾರದ ಈ ನಡೆ ವಿರುದ್ಧ ಸಿಡಿದೆದ್ದರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವಿಟ್ಟರ್‌ನಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಅವರು, 22 ಜನವರಿ 2024ರ (ನಾಳೆ) ಅಯೋಧ್ಯೆ ರಾಮಮಂದಿರ ಕಾರ್ಯಕ್ರಮಗಳ ನೇರ ಪ್ರಸಾರವನ್ನು ವೀಕ್ಷಿಸುವುದನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ತಮಿಳುನಾಡಿನಲ್ಲಿ ಶ್ರೀರಾಮನಿಗೆ ಸಂಬಂಧಿಸಿದ 200ಕ್ಕೂ ಹೆಚ್ಚು ದೇವಾಲಯಗಳಿವೆ. HR&amp;CE ವ್ಯಾಪ್ತಿಯಡಿ ಬರುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ/ಭಜನೆ/ಪ್ರಸಾದ/ಅನ್ನದಾನವನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಖಾಸಗಿ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಪೊಲೀಸರು ತಡೆಯುತ್ತಿದ್ದಾರೆ. ಪೆಂಡಾಲ್‌ಗಳನ್ನು ಕಿತ್ತು ಹಾಕುತ್ತೇವೆ ಎಂದು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ ನಡೆ. ಈ ದ್ವೇಷಪೂರಿತ ನೀತಿಯನ್ನು ಬಲವಾಗಿ ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">TN govt has banned watching live telecast of <a href="https://twitter.com/hashtag/AyodhaRamMandir?src=hash&amp;ref_src=twsrc%5Etfw">#AyodhaRamMandir</a> programmes of 22 Jan 24. In TN there are over 200 temples for Shri Ram. In HR&amp;CE managed temples no puja/bhajan/prasadam/annadanam in the name of Shri Ram is allowed. Police are stopping privately held temples also… <a href="https://t.co/G3tNuO97xS">pic.twitter.com/G3tNuO97xS</a></p>&mdash; Nirmala Sitharaman (@nsitharaman) <a href="https://twitter.com/nsitharaman/status/1748956241332965429?ref_src=twsrc%5Etfw">January 21, 2024</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಆದರೆ ಈ ಬಗ್ಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ನಡುವೆ ಬಿಜೆಪಿ ಉದ್ದೇಶಪೂರ್ವಕವಾಗಿ ಇಂತಹದೊಂದು ಸುದ್ದಿ ಬಿತ್ತರಿಸಿ ತಮಿಳುನಾಡು ಸರ್ಕಾರದ ವಿರುದ್ಧ ಅಭಿಪ್ರಾಯ ಹುಟ್ಟುವಂತೆ ಮಾಡಿದೆ ಎಂಬ ಮಾತುಗಳು ಕೇಳಿ ಬಂದಿದೆ.</p>



<p>ಇತ್ತ ತಮಿಳುನಾಡು ದೇವಸ್ಥಾನಗಳಲ್ಲಿ ಯಾವುದೇ ವಿಶೇಷ ಪೂಜೆ ಇಲ್ಲ ಎಂದಿದ್ದು, ಕರ್ನಾಟಕ ಸರ್ಕಾರ ಸರ್ಕಾರಿ ರಜೆ ಘೋಷಣೆ ಇಲ್ಲ ಎಂದಿರುವ ಎರಡೂ ನಿಲುವುಗಳು RSS ಹಾಗೂ ಬಿಜೆಪಿಗೆ ನುಂಗಲಾರದ ತುತ್ತಾಗಿದೆ.</p>



<p>ನಾಳೆ ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಬಿ.ಆರ್.ಎಸ್ ಮತ್ತು ಡಿಎಂಕೆ ನಾಯಕರ ಮೇಲೆ ಐಟಿ ಇಡಿ ದಾಳಿ ; ಬಿಜೆಪಿ ಸೇಡಿನ ರಾಜಕೀಯವೇ?</title>
		<link>https://peepalmedia.com/it-ed-attack-on-brs-and-dmk-leaders-is-bjp-revenge-politics/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Jun 2023 06:45:36 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[tamilnadu]]></category>
		<category><![CDATA[TAMILNADU CM]]></category>
		<category><![CDATA[telangana]]></category>
		<guid isPermaLink="false">https://peepalmedia.com/?p=22367</guid>

					<description><![CDATA[ಮಂಗಳವಾರದ ದಿನ ಆದಾಯ ತೆರಿಗೆ ಇಲಾಖೆ ಹೈದರಾಬಾದ್ ನ ಇಬ್ಬರು ಪ್ರಮುಖ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ. ಹಾಗೆಯೇ ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ಮೇಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ಏಕಾಏಕಿ ಬಂಧನವಾಗಿದೆ. ಈ ವೇಳೆ ಅಸ್ವಸ್ಥರಾಗಿದ್ದ ಬಾಲಾಜಿ ಅವರನ್ನು ಬುಧವಾರ ಮುಂಜಾನೆ ಚೆನ್ನೈನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಮೆಡಕ್‌ ಲೋಕಸಭಾ ಕ್ಷೇತ್ರದ ಸಂಸದ ಕೆ [&#8230;]]]></description>
										<content:encoded><![CDATA[
<p>ಮಂಗಳವಾರದ ದಿನ ಆದಾಯ ತೆರಿಗೆ ಇಲಾಖೆ ಹೈದರಾಬಾದ್ ನ ಇಬ್ಬರು ಪ್ರಮುಖ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ. ಹಾಗೆಯೇ ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ಮೇಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ಏಕಾಏಕಿ ಬಂಧನವಾಗಿದೆ. ಈ ವೇಳೆ ಅಸ್ವಸ್ಥರಾಗಿದ್ದ ಬಾಲಾಜಿ ಅವರನ್ನು ಬುಧವಾರ ಮುಂಜಾನೆ ಚೆನ್ನೈನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ.</p>



<p>ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಮೆಡಕ್‌ ಲೋಕಸಭಾ ಕ್ಷೇತ್ರದ ಸಂಸದ ಕೆ ಪ್ರಭಾಕರ್ ರೆಡ್ಡಿ ಮತ್ತು ಭೋಂಗಿರ್ ವಿಧಾನಸಭಾ ಕ್ಷೇತ್ರದ ಶಾಸಕ ಪೈಲ್ಲಾ ಶೇಖರ್ ರೆಡ್ಡಿ ಮೇಲೆ ದಾಳಿ ನಡೆಸಲಾಗಿದೆ. ಕೊಂಡಾಪುರದಲ್ಲಿರುವ ಸಂಸದರ ನಿವಾಸ, ಎಸ್‌ಎಲ್‌ಎನ್ ಟರ್ಮಿನಸ್ ವಿಲ್ಲಾದಲ್ಲಿ ಮುಂಜಾನೆಯಿಂದಲೇ ಶೋಧ ನಡೆಸಲಾಗುತ್ತಿದೆ.</p>



<p>ತೀರ್ಥ ಗ್ರೂಪ್ ಹೆಸರಿನಲ್ಲಿ ರಿಯಲ್ ಎಸ್ಟೇಟ್, ಗಣಿಗಾರಿಕೆ, ಸೌರಶಕ್ತಿ ಮತ್ತು ಲಿಥಿಯಂ ಬ್ಯಾಟರಿ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿರುವ ಶಾಸಕ ಶೇಖರರೆಡ್ಡಿ, ಹೈದರಾಬಾದ್ ಕರ್ನಾಟಕದಲ್ಲಿ ಹಲವು ವಸತಿ ಮತ್ತು ವಾಣಿಜ್ಯ ಯೋಜನೆಗಳನ್ನು ಪೂರ್ಣಗೊಳಿಸಿದ್ದಾರೆ. ಕಂಪನಿಯು ದಕ್ಷಿಣ ಆಫ್ರಿಕಾದಲ್ಲಿ ಗಣಿಗಾರಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ. 12 ಸ್ಥಳಗಳಲ್ಲಿ ಏಕಕಾಲಕ್ಕೆ ಐಟಿ ಶೋಧ ನಡೆಯುತ್ತಿದ್ದು, ಆದಾಯ ತೆರಿಗೆ ಪಾವತಿಯಲ್ಲಿನ ಅಕ್ರಮಗಳ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆಯಿಂದಲೇ ಬಿಆರ್‌ಎಸ್‌ ಶಾಸಕ ಶೇಖರ್‌ ರೆಡ್ಡಿ ಮತ್ತು ಅವರ ಸಿಬ್ಬಂದಿಯ ನಿವಾಸಗಳಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ. ಒಟ್ಟು 70 ತಂಡಗಳು ಈ ಶೋಧ ಕಾರ್ಯದಲ್ಲಿ ಭಾಗವಹಿಸಿವೆ. ಶೋಧ ಕಾರ್ಯಾಚರಣೆಯು ಮೂರು ದಿನಗಳ ಕಾಲ ಮುಂದುವರಿಯುವ ನಿರೀಕ್ಷೆಯಿದೆ.</p>



<p>ಇನ್ನು ಡಿಎಂಕೆ ಸಚಿವರಾದ ಸೆಂಥಿಲ್ ಬಾಲಾಜಿ ಅವರ ‘ಉದ್ಯೋಗ ಹಗರಣ‘ಕ್ಕೆ ಸಂಬಂಧಿಸಿದಂತೆ ಪೊಲೀಸ್ ಮತ್ತು ಇ.ಡಿ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಂಗಳವಾರ ಚೆನ್ನೈ, ಕರೂರ್ ಮತ್ತು ಈರೋಡ್‌ನಲ್ಲಿ ಇರುವ ಸೆಂಥಿಲ್ ಬಾಲಾಜಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ ಹುಡುಕಾಟವನ್ನು ಪ್ರಾರಂಭಿಸಿದೆ. ಈ ವೇಳೆ ಬಾಲಾಜಿ ಅವರ ಆರೋಗ್ಯ ಹದಗೆಟ್ಟಿತ್ತು. ಅವರಿಗೆ ಇ.ಡಿ ಅಧಿಕಾರಿಗಳು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಮತ್ತೋರ್ವ ಡಿಎಂಕೆ ಸಚಿವ ಪಿ.ಕೆ. ಶೇಕರ್ ಬಾಬು ಆರೋಪಿಸಿದ್ದಾರೆ.</p>



<p>ಹಾಗೆಯೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡಾ ಇಡಿ ಮತ್ತು ಐಟಿ ದಾಳಿ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು, &#8216;ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ ನಂತರವೂ ಸಚಿವ ಸೆಂಥಿಲ್ ಬಾಲಾಜಿ ಅವರಿಗೆ ಎದೆನೋವು ಬರುವಂತೆ ಚಿತ್ರಹಿಂಸೆ ನೀಡಿದ ಜಾರಿ ನಿರ್ದೇಶನಾಲಯದ ಉದ್ದೇಶವೇನು? ಪ್ರಕರಣಕ್ಕೆ ಅಗತ್ಯವಾದ ಕಾನೂನು ಕಾರ್ಯವಿಧಾನಗಳನ್ನು ಉಲ್ಲಂಘಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಮಾನವೀಯ ರೀತಿಯಲ್ಲಿ ವರ್ತಿಸುವುದು ಒಪ್ಪುವಂತದ್ದಲ್ಲ? ಬಿಜೆಪಿಯ ಈ ಬೆದರಿಕೆಗಳಿಗೆ ಡಿಎಂಕೆ ಮಣಿಯುವುದಿಲ್ಲ. ಭಯಪಡುವ ಅಗತ್ಯವಿಲ್ಲ. 2024ರ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಕೇಂದ್ರದ ಹಿಂದಿ ಹೇರಿಕೆಗೆ ವಿರೋಧ: ಅ,15 ರಂದು ಎಂ.ಕೆ. ಸ್ಟಾಲಿನ್ ಪಕ್ಷದಿಂದ ಪ್ರತಿಭಟನೆ</title>
		<link>https://peepalmedia.com/opposition-to-centers-imposition-of-hindi-on-15th-m-k-protest-by-stalins-party/</link>
		
		<dc:creator><![CDATA[Peepal Media]]></dc:creator>
		<pubDate>Thu, 13 Oct 2022 07:21:18 +0000</pubDate>
				<category><![CDATA[ದೇಶ]]></category>
		<category><![CDATA[hindiimposition]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[M K STALIN]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[protest]]></category>
		<category><![CDATA[TAMILNADU CM]]></category>
		<guid isPermaLink="false">https://peepalmedia.com/?p=10437</guid>

					<description><![CDATA[ಚೆನ್ನೈ: ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿಸುವ ಸಂಸದೀಯ ಸಮಿತಿಯ ಶಿಫಾರಸಿನ ವಿರುದ್ಧ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆಯ) ಯುವ ಮತ್ತು ವಿದ್ಯಾರ್ಥಿ ಘಟಕ ತಮಿಳುನಾಡಿನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ. ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಹಾಗೂ ಸ್ಟಾಲಿನ್‌ ಅವರ ಪುತ್ರ ಉದಯ್‌ ಸ್ಟಾಲಿನ್ ಮತ್ತು ವಿದ್ಯಾರ್ಥಿ ಘಟಕದ ಕಾರ್ಯದರ್ಶಿ ಸಿವಿಎಂಪಿ ಎಳಿಲರಸನ್‌ ಅವರು ಬುಧವಾರ ಜಂಟಿಯಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ [&#8230;]]]></description>
										<content:encoded><![CDATA[
<p style="font-size:20px"><strong>ಚೆನ್ನೈ: </strong>ಕೇಂದ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿಸುವ ಸಂಸದೀಯ ಸಮಿತಿಯ ಶಿಫಾರಸಿನ ವಿರುದ್ಧ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆಯ) ಯುವ ಮತ್ತು ವಿದ್ಯಾರ್ಥಿ ಘಟಕ ತಮಿಳುನಾಡಿನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ.</p>



<p style="font-size:20px">ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಹಾಗೂ ಸ್ಟಾಲಿನ್‌ ಅವರ ಪುತ್ರ ಉದಯ್‌ ಸ್ಟಾಲಿನ್ ಮತ್ತು ವಿದ್ಯಾರ್ಥಿ ಘಟಕದ ಕಾರ್ಯದರ್ಶಿ ಸಿವಿಎಂಪಿ ಎಳಿಲರಸನ್‌ ಅವರು ಬುಧವಾರ ಜಂಟಿಯಾಗಿ ಹೇಳಿಕೆಯನ್ನು ಬಿಡುಗಡೆ ಮಾಡಿದರು.</p>



<p style="font-size:20px">ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಕೇಂದ್ರವನ್ನು ಖಂಡಿಸಿದ ನಂತರ, ಅವರು ತಮ್ಮ ಹೇಳಿಕೆಯಲ್ಲಿ ʼಹಿಂದಿ ಹೇರಿಕೆʼ ವಿರುದ್ಧ ಇತಿಹಾಸದಲ್ಲಿ ಯುವಕರು ಮಾಡಿದ ತ್ಯಾಗವನ್ನು ಪಟ್ಟಿ ಮಾಡಿದ್ದಾರೆ. ಅಮಿತ್‌ ಶಾ ಅವರ ಶಿಪಾರಸು ಭವಿಷ್ಯದ ಪೀಳಿಗೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಹೀಗಾಗಿ ʼನಮ್ಮ ಮೇಲೆ ಇನ್ನೊಂದು ಭಾಷಾ ಯುದ್ಧವನ್ನು ಹೇರಬೇಡಿʼ ಎಂದು ಹೇಳಿದರು.</p>



<p style="font-size:20px">ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ʼಹಿಂದಿ ಹೇರಿಕೆ ನೀತಿʼ ವಿರುದ್ಧ ಪ್ರತಿಭಟನೆಯನ್ನು ಘೋಷಿಸಿದರು. ನಂತರ ಅಕ್ಟೋಬರ್ 15 ರಂದು ತಮಿಳುನಾಡಿನಾದ್ಯಂತ ಪ್ರತಿಭಟನೆ ನಡೆಸಲು ಡಿಎಂಕೆ ಯೋಜಿಸಿದೆ ಎಂದು ತಿಳಿಸಿದರು.</p>



<p style="font-size:20px">ಇದಕ್ಕೆ ಮೊದಲು ಅ.10ರಂದು ಸ್ಟಾಲಿನ್‌ ತಾವು ಮಾಡಿದ್ದ ಸರಣಿ ಟ್ವೀಟ್‌ ನಲ್ಲಿ &nbsp;ಹಿಂದಿ ಹೇರಿಕೆ ಪ್ರಯತ್ನದ ವಿರುದ್ಧ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದರು. ಅವರು ತಮ್ಮ ಟ್ವೀಟ್‌ ನಲ್ಲಿ ʼಭಾರತದ ಭಾಷಾ ವೈವಿದ್ಯತೆಯನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡಲು ಕೇಂದ್ರದ ಬಿಜೆಪಿ ಸರ್ಕಾರ ತೀವ್ರ ರೀತಿಯಲ್ಲಿ ನಡೆಸುತ್ತಿರುವ ಪ್ರಯತ್ನ ಆತಂಕದ ಮಟ್ಟ ತಲುಪಿದೆ. ಅಧಿಕೃತ ಭಾಷೆ ಕುರಿತ ಸಂಸದೀಯ ಸಮಿತಿಯ ವರದಿಯ <a href="https://peepalmedia.com/hindi-compulsory-in-all-institutes-committee-headed-by-amit-shah-recommended/">11ನೆಯ ಸಂಪುಟದ ಪ್ರಸ್ತಾವಗಳು</a> ಭಾರತದ ಆತ್ಮದ ಮೇಲೆ ನಡೆಸಿರುವ ನೇರವಾದ ಪ್ರಹಾರವಾಗಿʼ ಎಂದು ಬರೆದಿದ್ದರು. ಮುಂದುವರೆದು, ʼಹಿಂದಿ ಹೇರಿಕೆ ಮಾಡಿದ್ದೇ ಆದಲ್ಲಿ ಹಿಂದಿ ಮಾತನಾಡದ ವಿಶಾಲ ಜನಮೂಹವು ಎರಡನೆಯ ದರ್ಜೆಯ ನಾಗರಿಕರಾಗುತ್ತಾರೆ. ಹಿಂದಿ ಹೇರಿಕೆ ನಡೆಸುವುದು ಭಾರತದ ಸಮಗ್ರತೆಗೆ ವಿರುದ್ಧವಾದ ನಡೆ. ಆಳುವ ಬಿಜೆಪಿ ಸರ್ಕಾರವು ಹಿಂದೆ ನಡೆದ ಹಿಂದಿ ವಿರೋಧಿ ಚಳವಳಿಗಳಿಂದ ಪಾಠ ಕಲಿಯುವುದು ಒಳ್ಳೆಯದುʼ ಎಂದು ಸಹ ಬಿಜೆಪಿ ಸರ್ಕಾರವನ್ನು ಎಚ್ಚರಿಸಿದ್ದರು.</p>



<p style="font-size:20px">ಇದೇ ಸಂದರ್ಭದಲ್ಲಿ, ಕೇರಳದ <a href="https://peepalmedia.com/hindi-kaddaya-shipharasu-virodhisi-kerala-cm-modige-pathra/">ಮುಖ್ಯಮಂತ್ರಿ ಪಿಣರಾಯಿ ವಿಜಯನ್</a> ಸಹ ಅ.12ರಂದು ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಹಿಂದಿಯನ್ನು ಹೇರಲು ನಡೆಸುತ್ತಿರುವ ಪ್ರಯತ್ನಗಳನ್ನು ʼಒಪ್ಪಲಸಾಧ್ಯʼ ಎಂದಿದ್ದರು. ಕೇಂದ್ರ ಸರ್ಕಾರದ ಸೇವೆಗಳ ಪರೀಕ್ಷೆಗಳ ಮಾಧ್ಯಮವನ್ನು ಹಿಂದಿಯನ್ನಾಗಿಸುವ ಮತ್ತು ಐಐಟಿ, ಐಐಎಂಗಳಲ್ಲಿ ಅಧ್ಯಯನ ಭಾಷೆಯನ್ನು ಹಿಂದಿಯನ್ನಾಗಿಸುವ ಅಧಿಕೃತ ಭಾಷಾ ಸಂಸದೀಯ ಸಮಿತಿಯ ಪ್ರಸ್ತಾಪಗಳನ್ನು ಕೇರಳ ಸರ್ಕಾರ ಒಪ್ಪಲು ಸಾದ್ಯವೇ ಇಲ್ಲ ಎಂದು ತಿಳಿಸಿದ್ದರು.</p>



<p></p>



<p></p>
]]></content:encoded>
					
		
		
			</item>
	</channel>
</rss>
