<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>tamilnadu &#8211; Peepal Media</title>
	<atom:link href="https://peepalmedia.com/tag/tamilnadu/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 25 Oct 2023 15:29:35 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>tamilnadu &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ತಮಿಳುನಾಡು ರಾಜಭವನದ ಮೇಲೆ ಪೆಟ್ರೋಲ್ ಬಾಂಬ್ ದಾಳಿ‌</title>
		<link>https://peepalmedia.com/petro-bomb-hurled-at-tn-rajbhavan/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 25 Oct 2023 15:29:35 +0000</pubDate>
				<category><![CDATA[ದೇಶ]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[tamilnadu]]></category>
		<guid isPermaLink="false">https://peepalmedia.com/?p=30533</guid>

					<description><![CDATA[ಚೆನ್ನೈ: ರಾಜಭವನದ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಕಾರಣ ತಮಿಳುನಾಡು ರಾಜಭವನದಲ್ಲಿ ಬುಧವಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ. ದಾಳಿಯ ಮೂಲಕ ರಾಜಭವನದ ಮುಖ್ಯ ದ್ವಾರದ ಬ್ಯಾರಿಕೇಡ್‌ಗಳನ್ನು ಧ್ವಂಸಗೊಳಿಸಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಘಟನೆಗೆ ಕಾರಣನಾದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರಾಜಭವನದ ಮುಖ್ಯ ಗೇಟ್‌ಗೆ ದಾರಿಹೋಕನೊಬ್ಬ ಎರಡು ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದ್ದಾನೆ. ಇದರಿಂದ ಅಲ್ಲಿದ್ದ ಬ್ಯಾರಿಕೇಡ್‌ಗಳು ಧ್ವಂಸವಾಗಿವೆ. ರಸ್ತೆಯ [&#8230;]]]></description>
										<content:encoded><![CDATA[
<p>ಚೆನ್ನೈ: ರಾಜಭವನದ ಮೇಲೆ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ಕಾರಣ ತಮಿಳುನಾಡು ರಾಜಭವನದಲ್ಲಿ ಬುಧವಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.</p>



<p>ಈ ಘಟನೆಯಲ್ಲಿ ಯಾವುದೇ ಹಾನಿಯಾಗಿಲ್ಲ. ದಾಳಿಯ ಮೂಲಕ ರಾಜಭವನದ ಮುಖ್ಯ ದ್ವಾರದ ಬ್ಯಾರಿಕೇಡ್‌ಗಳನ್ನು ಧ್ವಂಸಗೊಳಿಸಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ಘಟನೆಗೆ ಕಾರಣನಾದ ವ್ಯಕ್ತಿಯನ್ನು ಬಂಧಿಸಿದ್ದಾರೆ.</p>



<p>ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರಾಜಭವನದ ಮುಖ್ಯ ಗೇಟ್‌ಗೆ ದಾರಿಹೋಕನೊಬ್ಬ ಎರಡು ಪೆಟ್ರೋಲ್ ಬಾಂಬ್‌ಗಳನ್ನು ಎಸೆದಿದ್ದಾನೆ. ಇದರಿಂದ ಅಲ್ಲಿದ್ದ ಬ್ಯಾರಿಕೇಡ್‌ಗಳು ಧ್ವಂಸವಾಗಿವೆ. ರಸ್ತೆಯ ಒಂದು ಭಾಗ ಹಾಳಾಗಿದೆ. ಕೂಡಲೇ ಅವನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕರುಕ ವಿನೋದ್ ಎಂದು ಗುರುತಿಸಲಾಗಿದೆ. ಘಟನೆ ನಡೆದಾಗ ರಾಜ್ಯಪಾಲರು ರಾಜಭವನದಲ್ಲಿದ್ದಂತೆ ಕಾಣುತ್ತದೆ.</p>



<p>ಸೈದಾಪೇಟೆ ನ್ಯಾಯಾಲಯದ ಹೊರಗೆ ನಿಲ್ಲಿಸಿದ್ದ ಬೈಕ್‌ಗಳಲ್ಲಿ ಪೆಟ್ರೋಲ್ ಕಳವು ಮಾಡಿದ್ದ ವಿನೋದ್ ರಾಜಭವನದತ್ತ ನಡೆದುಕೊಂಡು ಬಂದಿದ್ದಾನೆ. ಅವನು ನಿಧಾನವಾಗಿ ಎರಡು ಬಾಟಲಿಗಳಿಗೆ ಬೆಂಕಿ ಹಚ್ಚಿ ಅವುಗಳನ್ನು ಮುಖ್ಯ ಗೇಟಿನ ಕಡೆಗೆ ಎಸೆದನು. ನಂತರ ಅವನು ನೀಟ್ ಮಸೂದೆ ಹಾಗೂ ಆರ್ ಎನ್ ರವಿ ವಿರುದ್ಧ ರಾಜ್ಯಪಾಲರು ಘೋಷಣೆ ಕೂಗಿದನು.</p>



<p>ಆದರೆ ಅಷ್ಟರಲ್ಲಿ ಎಚ್ಚೆತ್ತ ಪೊಲೀಸ್ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ. ಆತನಿಂದ ಇನ್ನೂ ಎರಡು ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯಪಾಲ ಆರ್ ಎನ್ ರವಿ ಅವರು ನೀಟ್ ವಿರೋದಿ ಮಸೂದೆಗೆ ಅನುಮತಿ ನೀಡದ ಕಾರಣ ವಿನೋದ್ ಈ ದಾಳಿ ನಡೆಸಿರಬಹುದು ಎಂದು ಪ್ರಾಥಮಿಕವಾಗಿ ಭಾವಿಸಲಾಗಿದೆ.</p>



<p>ಈ ಪ್ರಕರಣದ ಇನ್ನೊಂದ ಅಂಶ ಏನೆಂದರೆ, 2022ರಲ್ಲಿ ಚೆನ್ನೈ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಪ್ರಕರಣದಲ್ಲಿ ವಿನೋದನನ್ನು ಬಂಧಿಸಲಾಗಿತ್ತು. ಆತ ಮೂರು ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಗೊಂಡಿದ್ದ.</p>



<p>ಈ ಘಟನೆಯ ವಿರುದ್ಧ ಬಿಜೆಪಿ ಡಿಎಂಕೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ರಾಜಭವನದ ಮೇಲಿನ ದಾಳಿಯು ಈ ಸರ್ಕಾರವು ಶಾಂತಿ ಮತ್ತು ಭದ್ರತೆಯನ್ನು ಎಷ್ಟರ ಮಟ್ಟಿಗೆ ರಕ್ಷಿಸುತ್ತದೆ ಎಂಬುದನ್ನು ಪ್ರತಿಬಿಂಬಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಸಂಘರ್ಷದ ಮಧ್ಯೆ ಗಾಜಾದಲ್ಲಿ ಸಿಕ್ಕಿಹಾಕಿಕೊಂಡಿರುವ ತಮಿಳುನಾಡಿನ ಪ್ರಾಧ್ಯಾಪಕಿ</title>
		<link>https://peepalmedia.com/associate-professor-from-tamil-nadu-straned-near-gaza/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 14 Oct 2023 11:19:03 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengalure]]></category>
		<category><![CDATA[breaking news]]></category>
		<category><![CDATA[gaza]]></category>
		<category><![CDATA[india]]></category>
		<category><![CDATA[Israel]]></category>
		<category><![CDATA[israeli–palestinian conflict]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[palestinian]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[tamilnadu]]></category>
		<category><![CDATA[trending news]]></category>
		<category><![CDATA[viral news]]></category>
		<category><![CDATA[War]]></category>
		<category><![CDATA[War against Palastine]]></category>
		<category><![CDATA[writing]]></category>
		<guid isPermaLink="false">https://peepalmedia.com/?p=29853</guid>

					<description><![CDATA[ಬೆಂಗಳೂರು,ಅಕ್ಟೋಬರ್.‌14: ತಿರುಚನಪಳ್ಳಿಯ ಅನ್ಬಿಲ್ ಧರ್ಮಲಿಂಗಂ ಕೃಷಿ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಹ ಪ್ರಾಧ್ಯಾಪಕರೊಬ್ಬರು ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ನಡುವೆ ಇಸ್ರೇಲ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ನೆಗೆವ್‌ನ ಬೆನ್-ಗುರಿಯನ್ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿದ್ದ ಹನಿ ನೀರಾವರಿ ಕುರಿತಾದ ಎರಡು ತಿಂಗಳ ತರಬೇತಿ ಕಾರ್ಯಕ್ರಮದಲ್ಲಿರುವ ಭಾಗವಹಿಸಿರುವ 40 ವರ್ಷ ಪ್ರಾಯದ ಎಸ್ ರಥಿಕಾ ಎಂಬ ಸಹ ಪ್ರಾಧ್ಯಾಪಕಿ ಸಂಘರ್ಷ ಭುಗಿಲೇಳುವ ಮೊದಲೇ, ಸೆಪ್ಟೆಂಬರ್ 23, 2023 ರಂದು ಇಸ್ರೇಲ್‌ಗೆ ತೆರಳಿದ್ದರು. ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ (ಟಿಎನ್‌ಎಯು) ಕೃಷಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು,ಅಕ್ಟೋಬರ್.‌14:</strong> ತಿರುಚನಪಳ್ಳಿಯ ಅನ್ಬಿಲ್ ಧರ್ಮಲಿಂಗಂ ಕೃಷಿ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಸಹ ಪ್ರಾಧ್ಯಾಪಕರೊಬ್ಬರು ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ನಡುವೆ ಇಸ್ರೇಲ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ.</p>



<p>ನೆಗೆವ್‌ನ ಬೆನ್-ಗುರಿಯನ್ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿದ್ದ ಹನಿ ನೀರಾವರಿ ಕುರಿತಾದ ಎರಡು ತಿಂಗಳ ತರಬೇತಿ ಕಾರ್ಯಕ್ರಮದಲ್ಲಿರುವ ಭಾಗವಹಿಸಿರುವ 40 ವರ್ಷ ಪ್ರಾಯದ ಎಸ್ ರಥಿಕಾ ಎಂಬ ಸಹ ಪ್ರಾಧ್ಯಾಪಕಿ ಸಂಘರ್ಷ ಭುಗಿಲೇಳುವ ಮೊದಲೇ, ಸೆಪ್ಟೆಂಬರ್ 23, 2023 ರಂದು ಇಸ್ರೇಲ್‌ಗೆ ತೆರಳಿದ್ದರು.</p>



<p>ತಮಿಳುನಾಡು ಕೃಷಿ ವಿಶ್ವವಿದ್ಯಾನಿಲಯದ (ಟಿಎನ್‌ಎಯು) ಕೃಷಿ ವಿಜ್ಞಾನ ವಿಭಾಗದ ಮುಖ್ಯಸ್ಥರಾಗಿರುವ ಸಹ ಪ್ರಾಧ್ಯಾಪಕ, ರಥಿಕಾ ಅವರ ಪತಿ ಟಿ ರಮೇಶ್, “ನನ್ನ ಪತ್ನಿ ಗಾಜಾಕ್ಕೆ ಸಮೀಪವಿರುವ ನೆಗೆವ್‌ನಲ್ಲಿ ನಿದ್ದೆಯಿಲ್ಲದೆ ದಿನ ಕಳೆಯುತ್ತಿದ್ದಾರೆ” ಎಂದು ತಿಳಿಸಿದ್ದಾರೆ.</p>



<p>ರಮೇಶ್‌ರವರು ಹೇಳುವಂತೆ ರಥಿಕಾ ಭೂಗತ ಬಂಕರ್‌ನಲ್ಲಿ ಅಡಗಿಕೊಂಡಿದ್ದು, ಸಂಘರ್ಷ ಕೊನೆಗೊಂಡ ನಂತರ ರಕ್ಷಣೆಗಾಗಿ ಕಾಯುತ್ತಿದ್ದಾರೆ. &#8220;ಸೈರನ್‌ಗಳು ಕೂಗಿದಾಗಲೆಲ್ಲಾ, ಅವರು ನೆಲಮಾಳಿಗೆಗೆ ಧಾವಿಸಿ ಬಂಕರ್‌ನಲ್ಲಿ ಆಶ್ರಯ ಪಡೆಯಬೇಕು, ಅಲ್ಲಿ ಅವರು ಸುಮಾರು 30 ನಿಮಿಷದಿಂದ ಒಂದು ಗಂಟೆಯವರೆಗೆ ಅಥವಾ ಕೆಲವೊಮ್ಮೆ ಸೈರನ್‌ ನಿಲ್ಲುವವರೆಗೆ ಇರಬೇಕಾಗಿದೆ&#8221; ಎಂದು ಅವರು ಹೇಳಿದರು.</p>



<p>ಕಳೆದ ನಾಲ್ಕು ದಿನಗಳಿಂದ ವಾಟ್ಸಾಪ್ ಮೂಲಕ ಪತ್ನಿಯನ್ನು ಸಂಪರ್ಕಿಸಿ, ಅವರ ಸುರಕ್ಷತೆಯ ಬಗ್ಗೆ ವಿಚಾರಿಸುತ್ತಿರುವ ರಮೇಶ್ ಸದ್ಯ ರಥಿಕಾ ಸುರಕ್ಷಿತವಾಗಿದ್ದು, ಮನೆಗೆ ಮರಳುವ ಆತಂಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಭಾರತೀಯ ರಾಯಭಾರಿ ಕಚೇರಿಯು ಈಗಾಗಲೇ ರಥಿಕಾರನ್ನು ಸಂಪರ್ಕಿಸಿದೆ.</p>
]]></content:encoded>
					
		
		
			</item>
		<item>
		<title>ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಕರವೇ ಪ್ರತಿಭಟನೆ: ಕಾರ್ಯಕರ್ತರ ಬಂಧನ</title>
		<link>https://peepalmedia.com/karave-protest-againts-cauvery-water-to-tamilnad/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 15 Sep 2023 08:35:46 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[bengalure]]></category>
		<category><![CDATA[Cauvery water]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[karnataka rakshana vedike]]></category>
		<category><![CDATA[kaveri]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[protest]]></category>
		<category><![CDATA[state politics]]></category>
		<category><![CDATA[tamilnadu]]></category>
		<category><![CDATA[tamilnd]]></category>
		<category><![CDATA[writing]]></category>
		<category><![CDATA[ಕರವೇ]]></category>
		<guid isPermaLink="false">https://peepalmedia.com/?p=27859</guid>

					<description><![CDATA[ಬೆಂಗಳೂರು, ಸೆಪ್ಟೆಂಬರ್.‌15: ರಾಜ್ಯ ಬರಗಾಲವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.  ಈ ಪ್ರತಿಭಟನೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರತಿಕೃತಿ ದಹಿಸಲಾಯಿತು. ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಕಾರ್ಯಕರ್ತರನ್ನು ಬಂಧಸಲಾಯಿತು. ರಾಜ್ಯದಾದ್ಯಂತ ವಾಡಿಕೆಯ ಮಳೆಯಾಗದ ಕಾರಣ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ರಾಜ್ಯದ 192 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತಮಿಳುನಾಡಿಗೆ [&#8230;]]]></description>
										<content:encoded><![CDATA[
<p><strong>ಬೆಂಗಳೂರು, ಸೆಪ್ಟೆಂಬರ್.‌15</strong>: ರಾಜ್ಯ ಬರಗಾಲವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.  ಈ ಪ್ರತಿಭಟನೆಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರತಿಕೃತಿ ದಹಿಸಲಾಯಿತು. ಕರವೇ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಕಾರ್ಯಕರ್ತರನ್ನು ಬಂಧಸಲಾಯಿತು.</p>



<figure class="wp-block-image size-large"><img fetchpriority="high" decoding="async" width="1024" height="683" src="https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-1-1024x683.jpeg" alt="" class="wp-image-27862" srcset="https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-1-1024x683.jpeg 1024w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-1-300x200.jpeg 300w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-1-768x512.jpeg 768w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-1-150x100.jpeg 150w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-1-696x464.jpeg 696w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-1-1068x712.jpeg 1068w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-1.jpeg 1380w" sizes="(max-width: 1024px) 100vw, 1024px" /></figure>



<p>ರಾಜ್ಯದಾದ್ಯಂತ ವಾಡಿಕೆಯ ಮಳೆಯಾಗದ ಕಾರಣ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ರಾಜ್ಯದ 192 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಬಗ್ಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ.</p>



<p>ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರವರು “ಕಾವೇರಿ ಬೇಸಿನ್‌ನಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿರುವುದರಿಂದ ಕೃಷ್ಣರಾಜಸಾಗರ ಜಲಾಶಯದಲ್ಲಿ ಕೇವಲ 20 ಟಿಎಂಸಿ ನೀರು. ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ. ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಘಾತಕಾರಿಯಾಗಿದೆ,” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>



<figure class="wp-block-image size-large"><img decoding="async" width="1024" height="683" src="https://peepalmedia.com/wp-content/uploads/2023/09/WhatsApp-Image-2023-09-15-at-1.09.21-PM-1-1024x683.jpeg" alt="" class="wp-image-27863" srcset="https://peepalmedia.com/wp-content/uploads/2023/09/WhatsApp-Image-2023-09-15-at-1.09.21-PM-1-1024x683.jpeg 1024w, https://peepalmedia.com/wp-content/uploads/2023/09/WhatsApp-Image-2023-09-15-at-1.09.21-PM-1-300x200.jpeg 300w, https://peepalmedia.com/wp-content/uploads/2023/09/WhatsApp-Image-2023-09-15-at-1.09.21-PM-1-768x512.jpeg 768w, https://peepalmedia.com/wp-content/uploads/2023/09/WhatsApp-Image-2023-09-15-at-1.09.21-PM-1-150x100.jpeg 150w, https://peepalmedia.com/wp-content/uploads/2023/09/WhatsApp-Image-2023-09-15-at-1.09.21-PM-1-696x464.jpeg 696w, https://peepalmedia.com/wp-content/uploads/2023/09/WhatsApp-Image-2023-09-15-at-1.09.21-PM-1-1068x712.jpeg 1068w, https://peepalmedia.com/wp-content/uploads/2023/09/WhatsApp-Image-2023-09-15-at-1.09.21-PM-1.jpeg 1380w" sizes="(max-width: 1024px) 100vw, 1024px" /></figure>



<p>ಬೆಂಗಳೂರಿಗೆ ಪ್ರತಿ ತಿಂಗಳು ಕುಡಿಯಲು ಒಂದೂವರೆ ಟಿಎಂಸಿ ನೀರು ಬೇಕು. ಕಾವೇರಿ ಕಣಿವೆಯ ರೈತರು ಹೊಲಗದ್ದೆಗಳಿಗೆ ನೀರಿಲ್ಲದೆ ಪರದಾಡುತ್ತಿದ್ದಾರೆ. ಕೈಗಾರಿಕೆಗಳಿಗೆ ಕೊಡಬೇಕಾದ ನೀರು ಕೂಡಾ ಇಲ್ಲ. ಹೀಗಿರುವಾಗ ಏಳು ಟಿಎಂಸಿ ನೀರು ಎಲ್ಲಿಂದ ತರಲು ಸಾಧ್ಯ? ಮಂಡ್ಯ ಭಾಗದ ರೈತರು ನೀರಿಗೆ ಏನು ಮಾಡಬೇಕು? ಬೆಂಗಳೂರಿನ ಒಂದೂವರೆ ಕೋಟಿ ಜನರು ಕುಡಿಯುವ ನೀರು ಇಲ್ಲದೆ ಸಾಯಬೇಕೆ? ಎಂದು ಟಿ ಎ ನಾರಾಯಣಗೌಡ ಪ್ರಶ್ನಿಸಿದ್ದಾರೆ.</p>



<p>ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಯಾವುದೋ ಪ್ರಾಧಿಕಾರದ ಆದೇಶ ದೊಡ್ಡದಲ್ಲ. ಈ ಪ್ರಾಧಿಕಾರದ ಆದೇಶ ಪಾಲಿಸಿ ತಮಿಳುನಾಡು ಕೇಳಿದಷ್ಟು ನೀರನ್ನು ಇದುವರೆಗೆ ಬಿಟ್ಟಿದ್ದೇ ರಾಜ್ಯ ಸರ್ಕಾರ ಮಾಡಿದ ದೊಡ್ಡ ತಪ್ಪು. ರಾಜ್ಯ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತಾಡುವುದನ್ನು &nbsp;ಬಿಟ್ಟು ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂಬ ದೃಢ ಘೋಷಣೆಯನ್ನು ಮಾಡಬೇಕು. ರಾಜ್ಯದ ಎಲ್ಲ ಸಂಸದರೂ ದೆಹಲಿಯಲ್ಲಿ ಧರಣಿ ನಡೆಸಬೇಕು, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>



<figure class="wp-block-image size-large"><img decoding="async" width="1024" height="683" src="https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-2-1024x683.jpeg" alt="" class="wp-image-27865" srcset="https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-2-1024x683.jpeg 1024w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-2-300x200.jpeg 300w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-2-768x512.jpeg 768w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-2-150x100.jpeg 150w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-2-696x464.jpeg 696w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-2-1068x712.jpeg 1068w, https://peepalmedia.com/wp-content/uploads/2023/09/WhatsApp-Image-2023-09-15-at-1.09.25-PM-2.jpeg 1380w" sizes="(max-width: 1024px) 100vw, 1024px" /></figure>



<figure class="wp-block-image size-large"><img loading="lazy" decoding="async" width="1024" height="683" src="https://peepalmedia.com/wp-content/uploads/2023/09/WhatsApp-Image-2023-09-15-at-1.09.24-PM-1024x683.jpeg" alt="" class="wp-image-27867" srcset="https://peepalmedia.com/wp-content/uploads/2023/09/WhatsApp-Image-2023-09-15-at-1.09.24-PM-1024x683.jpeg 1024w, https://peepalmedia.com/wp-content/uploads/2023/09/WhatsApp-Image-2023-09-15-at-1.09.24-PM-300x200.jpeg 300w, https://peepalmedia.com/wp-content/uploads/2023/09/WhatsApp-Image-2023-09-15-at-1.09.24-PM-768x512.jpeg 768w, https://peepalmedia.com/wp-content/uploads/2023/09/WhatsApp-Image-2023-09-15-at-1.09.24-PM-150x100.jpeg 150w, https://peepalmedia.com/wp-content/uploads/2023/09/WhatsApp-Image-2023-09-15-at-1.09.24-PM-696x464.jpeg 696w, https://peepalmedia.com/wp-content/uploads/2023/09/WhatsApp-Image-2023-09-15-at-1.09.24-PM-1068x712.jpeg 1068w, https://peepalmedia.com/wp-content/uploads/2023/09/WhatsApp-Image-2023-09-15-at-1.09.24-PM.jpeg 1380w" sizes="auto, (max-width: 1024px) 100vw, 1024px" /></figure>



<figure class="wp-block-image size-large"><img loading="lazy" decoding="async" width="1024" height="683" src="https://peepalmedia.com/wp-content/uploads/2023/09/WhatsApp-Image-2023-09-15-at-1.09.23-PM-1-1024x683.jpeg" alt="" class="wp-image-27868" srcset="https://peepalmedia.com/wp-content/uploads/2023/09/WhatsApp-Image-2023-09-15-at-1.09.23-PM-1-1024x683.jpeg 1024w, https://peepalmedia.com/wp-content/uploads/2023/09/WhatsApp-Image-2023-09-15-at-1.09.23-PM-1-300x200.jpeg 300w, https://peepalmedia.com/wp-content/uploads/2023/09/WhatsApp-Image-2023-09-15-at-1.09.23-PM-1-768x512.jpeg 768w, https://peepalmedia.com/wp-content/uploads/2023/09/WhatsApp-Image-2023-09-15-at-1.09.23-PM-1-150x100.jpeg 150w, https://peepalmedia.com/wp-content/uploads/2023/09/WhatsApp-Image-2023-09-15-at-1.09.23-PM-1-696x464.jpeg 696w, https://peepalmedia.com/wp-content/uploads/2023/09/WhatsApp-Image-2023-09-15-at-1.09.23-PM-1-1068x712.jpeg 1068w, https://peepalmedia.com/wp-content/uploads/2023/09/WhatsApp-Image-2023-09-15-at-1.09.23-PM-1.jpeg 1380w" sizes="auto, (max-width: 1024px) 100vw, 1024px" /></figure>



<figure class="wp-block-image size-large"><img loading="lazy" decoding="async" width="1024" height="683" src="https://peepalmedia.com/wp-content/uploads/2023/09/WhatsApp-Image-2023-09-15-at-1.09.20-PM-1024x683.jpeg" alt="" class="wp-image-27870" srcset="https://peepalmedia.com/wp-content/uploads/2023/09/WhatsApp-Image-2023-09-15-at-1.09.20-PM-1024x683.jpeg 1024w, https://peepalmedia.com/wp-content/uploads/2023/09/WhatsApp-Image-2023-09-15-at-1.09.20-PM-300x200.jpeg 300w, https://peepalmedia.com/wp-content/uploads/2023/09/WhatsApp-Image-2023-09-15-at-1.09.20-PM-768x512.jpeg 768w, https://peepalmedia.com/wp-content/uploads/2023/09/WhatsApp-Image-2023-09-15-at-1.09.20-PM-150x100.jpeg 150w, https://peepalmedia.com/wp-content/uploads/2023/09/WhatsApp-Image-2023-09-15-at-1.09.20-PM-696x464.jpeg 696w, https://peepalmedia.com/wp-content/uploads/2023/09/WhatsApp-Image-2023-09-15-at-1.09.20-PM-1068x712.jpeg 1068w, https://peepalmedia.com/wp-content/uploads/2023/09/WhatsApp-Image-2023-09-15-at-1.09.20-PM.jpeg 1380w" sizes="auto, (max-width: 1024px) 100vw, 1024px" /></figure>
]]></content:encoded>
					
		
		
			</item>
		<item>
		<title>ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳ ಪ್ರತಿಷ್ಠೆಯ ಕಣವಾದ ಮೇಕೆದಾಟು ಯೋಜನೆ</title>
		<link>https://peepalmedia.com/mekeddatu-scheme-is-the-pride-of-both-the-states/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 04 Jul 2023 07:14:36 +0000</pubDate>
				<category><![CDATA[ರಾಜಕೀಯ]]></category>
		<category><![CDATA[karnataka]]></category>
		<category><![CDATA[Mekedatu]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[tamilnadu]]></category>
		<guid isPermaLink="false">https://peepalmedia.com/?p=23121</guid>

					<description><![CDATA[ಸೋಮವಾರದ ದಿನ ಮೇಕೆದಾಟು ಆಣೆಕಟ್ಟು ಯೋಜನೆಯ ಕುರಿತಾದ ಮಹತ್ವದ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ನೀರಾವರಿ ಇಲಾಖೆಯ ಎಲ್ಲಾ ಪ್ರಮುಖ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ಮೇಕೆದಾಟು ಯೋಜನೆಯ ರೂಪುರೇಷೆ, ಅದರ ಕಾನೂನಿನ ತೊಡಕು, ಯೋಜನೆ ವಿಸ್ತರಿಸಿಕೊಳ್ಳುವ ವ್ಯಾಪ್ತಿ ಸೇರಿದಂತೆ ಪ್ರಮುಖ ವಿಚಾರವಾಗಿ ಚರ್ಚೆ ನಡೆಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶಾಸಕರು, ಸಂಸದರು ಹಾಗೂ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಈ ಸಭೆ ಈಗ ತಮಿಳುನಾಡು ಸರ್ಕಾರದ [&#8230;]]]></description>
										<content:encoded><![CDATA[
<p>ಸೋಮವಾರದ ದಿನ ಮೇಕೆದಾಟು ಆಣೆಕಟ್ಟು ಯೋಜನೆಯ ಕುರಿತಾದ ಮಹತ್ವದ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ನೀರಾವರಿ ಇಲಾಖೆಯ ಎಲ್ಲಾ ಪ್ರಮುಖ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು. ಸಭೆಯಲ್ಲಿ ಮೇಕೆದಾಟು ಯೋಜನೆಯ ರೂಪುರೇಷೆ, ಅದರ ಕಾನೂನಿನ ತೊಡಕು, ಯೋಜನೆ ವಿಸ್ತರಿಸಿಕೊಳ್ಳುವ ವ್ಯಾಪ್ತಿ ಸೇರಿದಂತೆ ಪ್ರಮುಖ ವಿಚಾರವಾಗಿ ಚರ್ಚೆ ನಡೆಸಲಾಗಿದೆ.</p>



<p>ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶಾಸಕರು, ಸಂಸದರು ಹಾಗೂ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಈ ಸಭೆ ಈಗ ತಮಿಳುನಾಡು ಸರ್ಕಾರದ ನಿದ್ದೆಗೆಡಿಸಿದೆ. ರಾಜಕೀಯವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಷ್ಟೇ ದೋಸ್ತಿ ಇದ್ದರೂ, ಅನಾದಿಕಾಲದಿಂದ ಬಂದ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರಾಜಕೀಯ ಸಂಘರ್ಷ ಮಾತ್ರ ಇದ್ದೇ ಇದೆ.</p>



<figure class="wp-block-image size-full is-resized"><img loading="lazy" decoding="async" src="https://peepalmedia.com/wp-content/uploads/2023/07/IMG-20230704-WA0008.jpg" alt="" class="wp-image-23123" width="373" height="269"/></figure>



<p>ಇತ್ತ ಮಾತುಕತೆ ಅಡಿಯಲ್ಲಿ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಮನಸ್ಸನ್ನು ಉಭಯ ನಾಯಕರು ಮಾಡಿದರೂ ತಮಿಳುನಾಡಿನಲ್ಲಿ ಮಾತ್ರ ಬಿಜೆಪಿ ಪಕ್ಷ ಮೇಕೆದಾಟು ವಿಚಾರದಲ್ಲಿ ದೊಡ್ಡ ಸಂಘರ್ಷ ಹುಟ್ಟು ಹಾಕುವ ಎಲ್ಲಾ ಮುನ್ಸೂಚನೆ ಕಂಡುಬಂದಿದೆ. ಇತ್ತ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೇಕೆದಾಟು ಯೋಜನೆಗೆ ಪಟ್ಟು ಹಿಡಿದಿದ್ದ ಡಿ.ಕೆ.ಶಿವಕುಮಾರ್ ಗೂ ಇದು ಪ್ರತಿಷ್ಠೆಯ ಕಣವಾಗಿದೆ. ಅಣೆಕಟ್ಟು ಕಟ್ಟುವುದನ್ನು ಪ್ರತಿಷ್ಠೆಯ ಕಣವಾಗಿಸಿಕೊಂಡಿರುವ ಡಿ.ಕೆ ಶಿವಕುಮಾರ್ ಅವರಿಗೆ ತಮಿಳುನಾಡು ಸರ್ಕಾರ ಅಡ್ಡಿಯಾಗುವ ಸಾಧ್ಯತೆ ಇದೆ.</p>



<p>ಇದರ ಜೊತೆಗೆ ಕೆಲವೇ ದಿನಗಳ ಹಿಂದೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಮಾತುಕಥೆ ನಡೆಸಿದ್ದೂ ಸಹ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆ ನಂತರ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ಅಲ್ಲಿನ ಪ್ರತಿಪಕ್ಷಗಳು ಸಮರ ಸಾರಿವೆ.</p>



<p>ಹಾಗೆಯೇ ತಮಿಳುನಾಡು ಜಲಸಂಪನ್ಮೂಲ ಸಚಿವರೂ ಸಹ ಈ ಯೋಜನೆ ಒಂದು ರಾಜಕೀಯ ಗಿಮಿಕ್ ಎಂದು ಪ್ರತಿಕ್ರಿಯಿಸಿದ್ದಾರೆ. &#8220;ಕಾನೂನಾತ್ಮಕವಾಗಿಯೂ ಈ ಯೋಜನೆ ಜಾರಿಗೆ ಹಲವು ಅಡ್ಡಿ ಇದೆ. ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಒಪ್ಪಿಗೆ ಸೂಚಿಸುವುದಿಲ್ಲ&#8221; ಎಂದು ಸ್ಪಷ್ಟಪಡಿಸಿದ್ದಾರೆ.</p>



<p>ಒಟ್ಟಾರೆ ಮೇಕೆದಾಟು ಯೋಜನೆ, ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಕ್ಕೆ ಪ್ರತಿಷ್ಠೆಯ ವಿಚಾರವಾಗಿದ್ದು, ಇಲ್ಲಿ ಯೋಜನೆ ಆದರೂ ಆಗದಿದ್ದರೂ ಎರಡೂ ರಾಜ್ಯಗಳ ರಾಜಕೀಯದಲ್ಲಿ ದೊಡ್ಡ ಮಟ್ಟದ ಪರಿಣಾಮ ಕೂಡಾ ಉಂಟಾಗಬಹುದು ಎಂದೇ ನಿರೀಕ್ಷಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ಬಿ.ಆರ್.ಎಸ್ ಮತ್ತು ಡಿಎಂಕೆ ನಾಯಕರ ಮೇಲೆ ಐಟಿ ಇಡಿ ದಾಳಿ ; ಬಿಜೆಪಿ ಸೇಡಿನ ರಾಜಕೀಯವೇ?</title>
		<link>https://peepalmedia.com/it-ed-attack-on-brs-and-dmk-leaders-is-bjp-revenge-politics/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 14 Jun 2023 06:45:36 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[tamilnadu]]></category>
		<category><![CDATA[TAMILNADU CM]]></category>
		<category><![CDATA[telangana]]></category>
		<guid isPermaLink="false">https://peepalmedia.com/?p=22367</guid>

					<description><![CDATA[ಮಂಗಳವಾರದ ದಿನ ಆದಾಯ ತೆರಿಗೆ ಇಲಾಖೆ ಹೈದರಾಬಾದ್ ನ ಇಬ್ಬರು ಪ್ರಮುಖ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ. ಹಾಗೆಯೇ ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ಮೇಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ಏಕಾಏಕಿ ಬಂಧನವಾಗಿದೆ. ಈ ವೇಳೆ ಅಸ್ವಸ್ಥರಾಗಿದ್ದ ಬಾಲಾಜಿ ಅವರನ್ನು ಬುಧವಾರ ಮುಂಜಾನೆ ಚೆನ್ನೈನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಮೆಡಕ್‌ ಲೋಕಸಭಾ ಕ್ಷೇತ್ರದ ಸಂಸದ ಕೆ [&#8230;]]]></description>
										<content:encoded><![CDATA[
<p>ಮಂಗಳವಾರದ ದಿನ ಆದಾಯ ತೆರಿಗೆ ಇಲಾಖೆ ಹೈದರಾಬಾದ್ ನ ಇಬ್ಬರು ಪ್ರಮುಖ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದೆ. ಹಾಗೆಯೇ ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ಮೇಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು ಏಕಾಏಕಿ ಬಂಧನವಾಗಿದೆ. ಈ ವೇಳೆ ಅಸ್ವಸ್ಥರಾಗಿದ್ದ ಬಾಲಾಜಿ ಅವರನ್ನು ಬುಧವಾರ ಮುಂಜಾನೆ ಚೆನ್ನೈನ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ.</p>



<p>ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಮೆಡಕ್‌ ಲೋಕಸಭಾ ಕ್ಷೇತ್ರದ ಸಂಸದ ಕೆ ಪ್ರಭಾಕರ್ ರೆಡ್ಡಿ ಮತ್ತು ಭೋಂಗಿರ್ ವಿಧಾನಸಭಾ ಕ್ಷೇತ್ರದ ಶಾಸಕ ಪೈಲ್ಲಾ ಶೇಖರ್ ರೆಡ್ಡಿ ಮೇಲೆ ದಾಳಿ ನಡೆಸಲಾಗಿದೆ. ಕೊಂಡಾಪುರದಲ್ಲಿರುವ ಸಂಸದರ ನಿವಾಸ, ಎಸ್‌ಎಲ್‌ಎನ್ ಟರ್ಮಿನಸ್ ವಿಲ್ಲಾದಲ್ಲಿ ಮುಂಜಾನೆಯಿಂದಲೇ ಶೋಧ ನಡೆಸಲಾಗುತ್ತಿದೆ.</p>



<p>ತೀರ್ಥ ಗ್ರೂಪ್ ಹೆಸರಿನಲ್ಲಿ ರಿಯಲ್ ಎಸ್ಟೇಟ್, ಗಣಿಗಾರಿಕೆ, ಸೌರಶಕ್ತಿ ಮತ್ತು ಲಿಥಿಯಂ ಬ್ಯಾಟರಿ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿರುವ ಶಾಸಕ ಶೇಖರರೆಡ್ಡಿ, ಹೈದರಾಬಾದ್ ಕರ್ನಾಟಕದಲ್ಲಿ ಹಲವು ವಸತಿ ಮತ್ತು ವಾಣಿಜ್ಯ ಯೋಜನೆಗಳನ್ನು ಪೂರ್ಣಗೊಳಿಸಿದ್ದಾರೆ. ಕಂಪನಿಯು ದಕ್ಷಿಣ ಆಫ್ರಿಕಾದಲ್ಲಿ ಗಣಿಗಾರಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ. 12 ಸ್ಥಳಗಳಲ್ಲಿ ಏಕಕಾಲಕ್ಕೆ ಐಟಿ ಶೋಧ ನಡೆಯುತ್ತಿದ್ದು, ಆದಾಯ ತೆರಿಗೆ ಪಾವತಿಯಲ್ಲಿನ ಅಕ್ರಮಗಳ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬುಧವಾರ ಬೆಳಗ್ಗೆಯಿಂದಲೇ ಬಿಆರ್‌ಎಸ್‌ ಶಾಸಕ ಶೇಖರ್‌ ರೆಡ್ಡಿ ಮತ್ತು ಅವರ ಸಿಬ್ಬಂದಿಯ ನಿವಾಸಗಳಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ. ಒಟ್ಟು 70 ತಂಡಗಳು ಈ ಶೋಧ ಕಾರ್ಯದಲ್ಲಿ ಭಾಗವಹಿಸಿವೆ. ಶೋಧ ಕಾರ್ಯಾಚರಣೆಯು ಮೂರು ದಿನಗಳ ಕಾಲ ಮುಂದುವರಿಯುವ ನಿರೀಕ್ಷೆಯಿದೆ.</p>



<p>ಇನ್ನು ಡಿಎಂಕೆ ಸಚಿವರಾದ ಸೆಂಥಿಲ್ ಬಾಲಾಜಿ ಅವರ ‘ಉದ್ಯೋಗ ಹಗರಣ‘ಕ್ಕೆ ಸಂಬಂಧಿಸಿದಂತೆ ಪೊಲೀಸ್ ಮತ್ತು ಇ.ಡಿ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಮಂಗಳವಾರ ಚೆನ್ನೈ, ಕರೂರ್ ಮತ್ತು ಈರೋಡ್‌ನಲ್ಲಿ ಇರುವ ಸೆಂಥಿಲ್ ಬಾಲಾಜಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ ಹುಡುಕಾಟವನ್ನು ಪ್ರಾರಂಭಿಸಿದೆ. ಈ ವೇಳೆ ಬಾಲಾಜಿ ಅವರ ಆರೋಗ್ಯ ಹದಗೆಟ್ಟಿತ್ತು. ಅವರಿಗೆ ಇ.ಡಿ ಅಧಿಕಾರಿಗಳು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಮತ್ತೋರ್ವ ಡಿಎಂಕೆ ಸಚಿವ ಪಿ.ಕೆ. ಶೇಕರ್ ಬಾಬು ಆರೋಪಿಸಿದ್ದಾರೆ.</p>



<p>ಹಾಗೆಯೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡಾ ಇಡಿ ಮತ್ತು ಐಟಿ ದಾಳಿ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದು, &#8216;ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ ನಂತರವೂ ಸಚಿವ ಸೆಂಥಿಲ್ ಬಾಲಾಜಿ ಅವರಿಗೆ ಎದೆನೋವು ಬರುವಂತೆ ಚಿತ್ರಹಿಂಸೆ ನೀಡಿದ ಜಾರಿ ನಿರ್ದೇಶನಾಲಯದ ಉದ್ದೇಶವೇನು? ಪ್ರಕರಣಕ್ಕೆ ಅಗತ್ಯವಾದ ಕಾನೂನು ಕಾರ್ಯವಿಧಾನಗಳನ್ನು ಉಲ್ಲಂಘಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಮಾನವೀಯ ರೀತಿಯಲ್ಲಿ ವರ್ತಿಸುವುದು ಒಪ್ಪುವಂತದ್ದಲ್ಲ? ಬಿಜೆಪಿಯ ಈ ಬೆದರಿಕೆಗಳಿಗೆ ಡಿಎಂಕೆ ಮಣಿಯುವುದಿಲ್ಲ. ಭಯಪಡುವ ಅಗತ್ಯವಿಲ್ಲ. 2024ರ ಚುನಾವಣೆಯಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>ಧಾರ್ಮಿಕ ಸಂಸ್ಥೆಗಳನ್ನು ಮುಕ್ತಗೊಳಿಸಲು ಸ್ಟಾಲಿನ್ ಗೆ ಸುಬ್ರಮಣಿಯನ್ ಸ್ವಾಮಿ ಮನವಿ</title>
		<link>https://peepalmedia.com/subramanian-swamy-appeals-to-stalin-to-free-religious-institutions/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 03 Dec 2022 03:52:53 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[MK Stalin]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Religious Temples]]></category>
		<category><![CDATA[Subrahmanian swamy]]></category>
		<category><![CDATA[Supreme Court]]></category>
		<category><![CDATA[tamilnadu]]></category>
		<guid isPermaLink="false">https://peepalmedia.com/?p=17379</guid>

					<description><![CDATA[ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಲ್ಲಾ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ಮಾಜಿ ಸಂಸದರಾದ ಸುಬ್ರಮಣಿಯನ್ ಸ್ವಾಮಿಯವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಪತ್ರದಲ್ಲಿ, ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳನ್ನು ಹಲವು ವರ್ಷಗಳಿಂದ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿ ಇಡುವುದು ಭಾರತ ಸಂವಿಧಾನದ 25 ಮತ್ತು 26 ನೇ ವಿಧಿಗೆ ವಿರುದ್ಧವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಒತ್ತಿ ಹೇಳಿದ್ದಾರೆ. ನಾನು [&#8230;]]]></description>
										<content:encoded><![CDATA[
<p style="font-size:20px">ಸುಪ್ರೀಂ ಕೋರ್ಟ್ ತೀರ್ಪಿನಂತೆ ಎಲ್ಲಾ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ಮಾಜಿ ಸಂಸದರಾದ ಸುಬ್ರಮಣಿಯನ್ ಸ್ವಾಮಿಯವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದಾರೆ.</p>



<p style="font-size:20px">ಈ ಕುರಿತಾಗಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಪತ್ರದಲ್ಲಿ, ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳನ್ನು ಹಲವು ವರ್ಷಗಳಿಂದ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿ ಇಡುವುದು ಭಾರತ ಸಂವಿಧಾನದ 25 ಮತ್ತು 26 ನೇ ವಿಧಿಗೆ ವಿರುದ್ಧವಾಗಿದೆ ಎಂದು ಸುಬ್ರಮಣಿಯನ್ ಸ್ವಾಮಿ ಒತ್ತಿ ಹೇಳಿದ್ದಾರೆ.</p>



<p style="font-size:20px">ನಾನು ಸುಪ್ರೀಂ ಕೋರ್ಟ್‌ನಲ್ಲಿ ಹೂಡಿದ್ದ ಪ್ರಕರಣವೊಂದರಲ್ಲಿ ತಮಿಳುನಾಡು ಸರ್ಕಾರ ಪ್ರತಿವಾದಿಯಾಗಿತ್ತು.&nbsp;2014ರಲ್ಲಿ ಆ ಪ್ರಕರಣದ ತೀರ್ಪು ಹೊರಬಿದ್ದಿದ್ದು, &#8216;ದೇವಸ್ಥಾನಗಳಲ್ಲಿ ಸರ್ಕಾರ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬಾರದು.&nbsp;ದೇವಸ್ಥಾನಗಳಲ್ಲಿ ಹಣಕಾಸಿನ ಅವ್ಯವಹಾರಗಳು, ಹಣಕಾಸಿನ ಸಮಸ್ಯೆಗಳು ಕಂಡುಬಂದರೆ, ಅವುಗಳನ್ನು ಪರಿಹರಿಸಲು ಸರ್ಕಾರವು ನಿರ್ದಿಷ್ಟ ಅವಧಿಯವರೆಗೆ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತದೆ ಎಂದು ಹೇಳಲಾಗಿದೆ.</p>



<p style="font-size:20px">ಅದರಂತೆ, ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸಿ, ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಎಲ್ಲಾ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳನ್ನು ಬಿಡುಗಡೆ ಮಾಡಬೇಕು.&nbsp;ಇಲ್ಲದಿದ್ದರೆ ತಮಿಳುನಾಡು ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇನೆ ಎಂದೂ ಸಹ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>



<p style="font-size:20px">ಈ ನಿಟ್ಟಿನಲ್ಲಿ ನಾನು ಈ ತೀರ್ಪಿನ ಪ್ಯಾರಾಗ್ರಾಫ್ ಸಂಖ್ಯೆ 64, 65, 66, 67 ಮತ್ತು 68 ರಲ್ಲಿ ಉಲ್ಲೇಖಿಸಿದ ಪ್ರಮುಖ ಅಂಶಗಳನ್ನು ಇಟ್ಟು ನಿಮ್ಮ ಗಮನವನ್ನು ಸೆಳೆಯುತ್ತೇನೆ. ಇದು ಇಲ್ಲಿನ ಸಮಸ್ಯೆಯನ್ನು ಸಾಕಷ್ಟು ಸ್ಪಷ್ಟತೆಯೊಂದಿಗೆ ಬಗೆಹರಿಸುತ್ತದೆ ಎಂದು ಸುಬ್ರಮಣಿಯನ್ ಸ್ವಾಮಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.</p>



<p style="font-size:20px">2014 ರಲ್ಲಿ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ತಮಿಳುನಾಡಿನ ಪ್ರಸಿದ್ಧ ನಟರಾಜ ದೇವಾಲಯವನ್ನು ರಾಜ್ಯದ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ಆದೇಶಿಸಿತ್ತು. ದೇವಸ್ಥಾನದ ಆಡಳಿತವನ್ನು ಅರ್ಚಕರೇ ಮಾಡಬೇಕೇ ಹೊರತು ಸರ್ಕಾರ ಇದರ ನಡುವೆ ಬರಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.</p>



<p style="font-size:20px">ಈ ಕುರಿತು ಸುಬ್ರಮಣಿಯನ್ ಸ್ವಾಮಿ ಅವರು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರಿಗೆ ಬರೆದ ಪತ್ರವನ್ನು ಟ್ವೀಟ್ ಮಾಡಿ &#8220;ಸಿಎಂ ಈ ವಿಷಯದಲ್ಲಿ ಸಂವಿಧಾನದ ಪ್ರಕಾರ ಮತ್ತು ನಟರಾಜ ದೇವಸ್ಥಾನದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು&#8221; ಎಂದು ಹೇಳಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">The CM should act according the Constitution in this matter and the Supreme Court judgment in Sabhanayagar Natarja Temple  case. <a href="https://t.co/FFbdBTIiJK">pic.twitter.com/FFbdBTIiJK</a></p>&mdash; Subramanian Swamy (@Swamy39) <a href="https://twitter.com/Swamy39/status/1598257550327435264?ref_src=twsrc%5Etfw">December 1, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ತಮಿಳುನಾಡು: ವಿದ್ಯುತ್ ಸಂಪರ್ಕದೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಶೇಷ ಶಿಬಿರಗಳು ಆರಂಭ</title>
		<link>https://peepalmedia.com/tamil-nadu-special-camps-to-link-aadhaar-number-with-electricity-connection-begin/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 28 Nov 2022 13:08:52 +0000</pubDate>
				<category><![CDATA[ದೇಶ]]></category>
		<category><![CDATA[india]]></category>
		<category><![CDATA[Link Aadhaar number with electricity connection]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[tamilnadu]]></category>
		<category><![CDATA[Tangedco]]></category>
		<category><![CDATA[V. Senthil Balaji]]></category>
		<guid isPermaLink="false">https://peepalmedia.com/?p=16831</guid>

					<description><![CDATA[ತಮಿಳುನಾಡು: ಇಲ್ಲಿನ ಜನರೇಷನ್ ಮತ್ತು ಡಿಸ್ಟ್ರಿಬ್ಯೂಷನ್ ಕಾರ್ಪೊರೇಷನ್ (Tangedco) ಸೋಮವಾರ ವಿದ್ಯುತ್ ಸಂಪರ್ಕದೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಶೇಷ ಶಿಬಿರಗಳು ಆರಂಭಿಸಿದೆ. ಹೊಸ ದಾಖಲಾತಿಗಳು ಮತ್ತು ತಮ್ಮ ವಿವರಗಳನ್ನು ಬದಲಾಯಿಸಲು ಬಯಸುವ ಗ್ರಾಹಕರಿಗಾಗಿ ಈ ಶಿಬಿರಗಳನ್ನು 2,811 ವಿಭಾಗ ಕಚೇರಿಗಳಲ್ಲಿ ಆಯೋಜಿಸಲಾಗಿದೆ ಎಂದು Tangedco ತಿಳಿಸಿದೆ. ಈ ಕುರಿತು ತಮಿಳುನಾಡು ವಿದ್ಯುತ್ ಸಚಿವ ವಿ.ಸೆಂಥಿಲ್ ಬಾಲಾಜಿ ಸುದ್ದಿಗಾರರೊಂದಿಗೆ ಮಾತನಾಡಿ, ಒಬ್ಬ ವ್ಯಕ್ತಿಯು ಅನೇಕ ಸಂಪರ್ಕಗಳನ್ನು ಹೊಂದಿದ್ದರೂ, ಅವುಗಳನ್ನು ಅವರ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದರಿಂದ ಸ್ಥಾನಮಾನದಲ್ಲಿ [&#8230;]]]></description>
										<content:encoded><![CDATA[
<p><strong>ತಮಿಳುನಾಡು:</strong> ಇಲ್ಲಿನ ಜನರೇಷನ್ ಮತ್ತು ಡಿಸ್ಟ್ರಿಬ್ಯೂಷನ್ ಕಾರ್ಪೊರೇಷನ್ (Tangedco) ಸೋಮವಾರ ವಿದ್ಯುತ್ ಸಂಪರ್ಕದೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಶೇಷ ಶಿಬಿರಗಳು ಆರಂಭಿಸಿದೆ.</p>



<p>ಹೊಸ ದಾಖಲಾತಿಗಳು ಮತ್ತು ತಮ್ಮ ವಿವರಗಳನ್ನು ಬದಲಾಯಿಸಲು ಬಯಸುವ ಗ್ರಾಹಕರಿಗಾಗಿ ಈ ಶಿಬಿರಗಳನ್ನು 2,811 ವಿಭಾಗ ಕಚೇರಿಗಳಲ್ಲಿ ಆಯೋಜಿಸಲಾಗಿದೆ ಎಂದು Tangedco ತಿಳಿಸಿದೆ.</p>



<p>ಈ ಕುರಿತು ತಮಿಳುನಾಡು ವಿದ್ಯುತ್ ಸಚಿವ ವಿ.ಸೆಂಥಿಲ್ ಬಾಲಾಜಿ ಸುದ್ದಿಗಾರರೊಂದಿಗೆ ಮಾತನಾಡಿ, ಒಬ್ಬ ವ್ಯಕ್ತಿಯು ಅನೇಕ ಸಂಪರ್ಕಗಳನ್ನು ಹೊಂದಿದ್ದರೂ, ಅವುಗಳನ್ನು ಅವರ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದರಿಂದ ಸ್ಥಾನಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಇದರಿಂದ ಅವರು 100 ಯುನಿಟ್ ಉಚಿತ ವಿದ್ಯುತ್ ಪಡೆಯುವುದನ್ನು ಮುಂದುವರಿಸುತ್ತಾರೆ ಎಂದು ಹೇಳಿದರು.</p>



<p>ಉತ್ಸವ ದಿನಗಳನ್ನು ಹೊರತುಪಡಿಸಿ ಡಿಸೆಂಬರ್ 31 ರವರೆಗೆ ಬೆಳಿಗ್ಗೆ 10.30 ರಿಂದ ಸಂಜೆ 5.15 ರವರೆಗೆ ಶಿಬಿರಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.</p>



<p>ಅಧಿಕಾರಿಗಳು ಎಲ್ಲಾ ವಿಭಾಗ ಕಚೇರಿಗಳಲ್ಲಿ ಹಿರಿಯ ನಾಗರಿಕರು ಮತ್ತು ವಿಕಲಚೇತನ ಗ್ರಾಹಕರಿಗಾಗಿ ಪ್ರತ್ಯೇಕ ಕೌಂಟರ್ ಅನ್ನು ತೆರೆಯುತ್ತಾರೆ. ʼಒಟ್ಟು 2.33 ಕೋಟಿ ದೇಶೀಯ ವಿದ್ಯುತ್ ಸಂಪರ್ಕಗಳಲ್ಲಿ, ಸುಮಾರು 15 ಲಕ್ಷ ಜನರು ಈಗಾಗಲೇ ತಮ್ಮ ಆಧಾರ್ ಸಂಪರ್ಕಗಳನ್ನು ಲಿಂಕ್ ಮಾಡಿದ್ದಾರೆʼ ಎಂದು ಸಚಿವರು ಹೇಳಿದರು.</p>



<p>ಆಧಾರ್ ಸಂಖ್ಯೆಯನ್ನು ವಿದ್ಯುತ್ ಸಂಪರ್ಕಗಳೊಂದಿಗೆ ಲಿಂಕ್ ಮಾಡುವ ಬಗ್ಗೆ ಸಂದೇಶಗಳನ್ನು ಗ್ರಾಹಕರ ಮೊಬೈಲ್ ಸಂಖ್ಯೆಗಳಿಗೆ ಕಳುಹಿಸಲಾಗುತ್ತಿದೆ ಎಂದು ಬಾಲಾಜಿ ಹೇಳಿದರು.</p>



<p>ಕಳೆದ ಕೆಲವು ದಿನಗಳಿಂದ ಗೃಹಬಳಕೆ, ಕೈಮಗ್ಗ, ವಿದ್ಯುತ್ ಮಗ್ಗ, ಗುಡಿಸಲುಗಳು ಮತ್ತು ಕೃಷಿ ವಿಭಾಗಗಳ ಅಡಿಯಲ್ಲಿ ಸಂಪರ್ಕಗಳ ಆಧಾರ್ ಲಿಂಕ್ ನಡೆಯುತ್ತಿದೆ ಎಂದರು.</p>
]]></content:encoded>
					
		
		
			</item>
		<item>
		<title>ಕೋಮು ಸೌಹಾರ್ದತೆಯನ್ನು ಕದಡುತ್ತಿರುವ ರಾಜ್ಯಪಾಲರನ್ನು ಪದಚ್ಯುತಗೊಳಿಸಿ: ತಮಿಳುನಾಡು ಸರ್ಕಾರ</title>
		<link>https://peepalmedia.com/sack-the-governer-asks-dmk-government-of-tamilnadu/</link>
		
		<dc:creator><![CDATA[Peepal Media]]></dc:creator>
		<pubDate>Wed, 09 Nov 2022 05:01:00 +0000</pubDate>
				<category><![CDATA[ದೇಶ]]></category>
		<category><![CDATA[Draupadi Murmu]]></category>
		<category><![CDATA[governer]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[r n ravikumar]]></category>
		<category><![CDATA[tamilnadu]]></category>
		<guid isPermaLink="false">https://peepalmedia.com/?p=14921</guid>

					<description><![CDATA[ಚೆನ್ನೈ: ತಮಿಳುನಾಡು ರಾಜ್ಯದ ರಾಜ್ಯಪಾಲ ಆರ್. ಎನ್. ರವಿಯವರನ್ನು “ರಾಜ್ಯದ ಶಾಂತಿಗೆ ಬೆದರಿಕೆ” ಎಂದು ಕರೆದಿರುವ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ, &#8220;ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವು ಜನ ಸೇವೆ ಮಾಡದಂತೆ ತೊಂದರೆ ನೀಡುತ್ತಿರುವುದಕ್ಕಾಗಿ” &#8221; ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದೆ. ಜೊತೆಗೆ ಅವರು ಕೋಮುದ್ವೇಷವನ್ನು ಪ್ರಚೋದಿಸುತ್ತಾರೆ ಎಂದು ಸಹ ಡಿಎಂಕೆ ಆರೋಪಿಸಿದೆ. &#8220;ರಾಜ್ಯಪಾಲ ಆರ್.ಎನ್. ರವಿಯವರು ಸಂವಿಧಾನ ಮತ್ತು ಕಾನೂನನ್ನು ಉಳಿಸಿ, ರಕ್ಷಿಸಿ ಮತ್ತು ಸಮರ್ಥಿಸುವುದಾಗಿ ಮಾಡಿದ್ದ ಪ್ರಮಾಣವಚವನ್ನು ಉಲ್ಲಂಘಿಸಿದ್ದಾರೆ&#8221; ಎಂದು ಡಿಎಂಕೆ [&#8230;]]]></description>
										<content:encoded><![CDATA[
<p>ಚೆನ್ನೈ: ತಮಿಳುನಾಡು ರಾಜ್ಯದ ರಾಜ್ಯಪಾಲ ಆರ್. ಎನ್. ರವಿಯವರನ್ನು “ರಾಜ್ಯದ ಶಾಂತಿಗೆ ಬೆದರಿಕೆ” ಎಂದು ಕರೆದಿರುವ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ, &#8220;ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಸರ್ಕಾರವು ಜನ ಸೇವೆ ಮಾಡದಂತೆ ತೊಂದರೆ ನೀಡುತ್ತಿರುವುದಕ್ಕಾಗಿ” &#8221; ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ರಾಷ್ಟ್ರಪತಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದೆ. ಜೊತೆಗೆ ಅವರು ಕೋಮುದ್ವೇಷವನ್ನು ಪ್ರಚೋದಿಸುತ್ತಾರೆ ಎಂದು ಸಹ ಡಿಎಂಕೆ ಆರೋಪಿಸಿದೆ.</p>



<p>&#8220;ರಾಜ್ಯಪಾಲ ಆರ್.ಎನ್. ರವಿಯವರು ಸಂವಿಧಾನ ಮತ್ತು ಕಾನೂನನ್ನು ಉಳಿಸಿ, ರಕ್ಷಿಸಿ ಮತ್ತು ಸಮರ್ಥಿಸುವುದಾಗಿ ಮಾಡಿದ್ದ ಪ್ರಮಾಣವಚವನ್ನು ಉಲ್ಲಂಘಿಸಿದ್ದಾರೆ&#8221; ಎಂದು ಡಿಎಂಕೆ ಅಧ್ಯಕ್ಷರು ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ. ವಿಧಾನಸಭೆಯು ಅಂಗೀಕರಿಸಿದ ಮಸೂದೆಗಳಿಗೆ ಸಹಿ ಹಾಕುವುದರಲ್ಲಿ ಅನವಶ್ಯಕ ವಿಳಬ ಎಸಗುತ್ತಾರೆ ಎಂದೂ ಅದು ಆರೋಪಿಸಿದೆ.</p>



<p>&#8220;ಅವರ ಕೆಲವು ಹೇಳಿಕೆಗಳು ದೇಶದ್ರೋಹಿ ಸ್ವರೂಪದಲ್ಲಿದ್ದು, ಅವರ ಹೇಳಿಕೆಗಳು ಸರ್ಕಾರದ ವಿರುದ್ಧ ಅಸಮಾಧನವನ್ನು ಪ್ರಚೋದಿಸುವಂತಿವೆ. ಮತ್ತು ಅವರು ಸಾಂವಿಧಾನಿಕ ಹುದ್ದೆಗೆ ಅನರ್ಹರಾಗಿದ್ದು, ವಜಾ ಮಾಡುವುದೇ ಇದಕ್ಕೆ ಪರಿಹಾರ&#8221; ಎಂದು ಪತ್ರ ಹೇಳುತ್ತದೆ.</p>



<p>ಕೆಲವೇ ದಿನಗಳ ಹಿಂದಷ್ಟೇ ಡಿಎಮ್‌ಕೆ ರಾಜ್ಯಪಾಲರ ವಿರುದ್ಧ ದೂರು ನೀಡಲು ತಮ್ಮೊಂದಿಗೆ ಕೈ ಜೋಡಿಸುವಂತೆ ಸಮಾನ ಮನಸ್ಕ ಪಕ್ಷಗಳ ಬಳಿ ವಿನಂತಿಸಿದ್ದನ್ನು ಈ ಹಿನ್ನೆಲೆಯಲ್ಲಿ ನೆನಪಿಸಿಕೊಳ್ಳಬಹುದಾಗಿದೆ. ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರು ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆನ್ನುವ ವಿಪಕ್ಷಗಳ ಕೂಗಿಗೆ ಈ ಘಟನೆ ಇನ್ನಷ್ಟು ಇಂಬು ನೀಡುತ್ತಿದ್ದು, ಇದಕ್ಕೆ ರಾಷ್ಟ್ರಪತಿಯವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಕೇರಳದಲ್ಲಿಯೂ ರಾಜ್ಯಪಾಲ ಮತ್ತು ಅಲ್ಲಿನ ರಾಜ್ಯ ಸರ್ಕಾರದ ನಡುವಿನ ತಿಕ್ಕಾಟ ಇತ್ತೀಚೆಗೆ ತಾರಕಕ್ಕೇರಿದ್ದು ಅಲ್ಲಿಯೂ ಇಂತಹ ಬೆಳವಣಿಗೆಗಳು ನಡೆಯಬಹುದೇ ಎನ್ನುವುದು ಸದ್ಯದ ಕುತೂಹಲವಾಗಿದೆ.</p>
]]></content:encoded>
					
		
		
			</item>
		<item>
		<title>ಬಿಜೆಪಿಯೇತರ ರಾಜ್ಯಗಳಲ್ಲಿ &#8216;ಸೂಪರ್ ಸಿಎಂ&#8217; ಆಗ ಹೊರಟ ರಾಜ್ಯಪಾಲರುಗಳಿವರು!</title>
		<link>https://peepalmedia.com/governors-who-left-as-super-cm-in-non-bjp-states/</link>
		
		<dc:creator><![CDATA[Pragath K R]]></dc:creator>
		<pubDate>Thu, 03 Nov 2022 10:08:44 +0000</pubDate>
				<category><![CDATA[ವಿಶೇಷ]]></category>
		<category><![CDATA[andrapradesh]]></category>
		<category><![CDATA[Governor]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[kerala]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[tamilnadu]]></category>
		<category><![CDATA[telangana]]></category>
		<guid isPermaLink="false">https://peepalmedia.com/?p=13983</guid>

					<description><![CDATA[ತಮಿಳುನಾಡಿನ ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿ ಆರ್ ಬಾಲು ಅವರು ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಅವರನ್ನು ತಕ್ಷಣವೇ ಹಿಂಪಡೆಯಬೇಕು ಅಥವಾ ಪದಚ್ಯುತಗೊಳಿಸಬೇಕು ಎಂಬುದಾಗಿ ಒತ್ತಾಯಿಸುವಂತೆ ತಮ್ಮ ಮಿತ್ರ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ಭಾರತದ ರಾಷ್ಟ್ರಪತಿಗಳಿಗೆ ಸಹಿ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಟಿ.ಆರ್.ಬಾಲು ಸಮಾನ ಮನಸ್ಕ ಪಕ್ಷಗಳ ಸದಸ್ಯರು ಮತ್ತು ಸಮಾನ ಮನಸ್ಕ ಸಂಸದರಿಗೆ ಪತ್ರ ಬರೆದಿದ್ದಾರೆ. ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ಡಿಎಂಕೆ ಪಕ್ಷದ ಸಂಸದೀಯ ನಾಯಕ ಟಿ.ಆರ್.ಬಾಲು ಅವರು [&#8230;]]]></description>
										<content:encoded><![CDATA[
<p style="font-size:20px">ತಮಿಳುನಾಡಿನ ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿ ಆರ್ ಬಾಲು ಅವರು ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಅವರನ್ನು ತಕ್ಷಣವೇ ಹಿಂಪಡೆಯಬೇಕು ಅಥವಾ ಪದಚ್ಯುತಗೊಳಿಸಬೇಕು ಎಂಬುದಾಗಿ ಒತ್ತಾಯಿಸುವಂತೆ ತಮ್ಮ ಮಿತ್ರ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ಭಾರತದ ರಾಷ್ಟ್ರಪತಿಗಳಿಗೆ ಸಹಿ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಟಿ.ಆರ್.ಬಾಲು ಸಮಾನ ಮನಸ್ಕ ಪಕ್ಷಗಳ ಸದಸ್ಯರು ಮತ್ತು ಸಮಾನ ಮನಸ್ಕ ಸಂಸದರಿಗೆ ಪತ್ರ ಬರೆದಿದ್ದಾರೆ.</p>





<p style="font-size:20px">ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ಡಿಎಂಕೆ ಪಕ್ಷದ ಸಂಸದೀಯ ನಾಯಕ ಟಿ.ಆರ್.ಬಾಲು ಅವರು ಗುರುವಾರದೊಳಗೆ ಈ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಜ್ಞಾಪಕ ಪತ್ರಕ್ಕೆ ಸಹಿ ಹಾಕಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಆ ಮೂಲಕ ತಮಿಳುನಾಡು ಸರ್ಕಾರ ಮತ್ತು ಗವರ್ನರ್ ನಡುವಿನ ಮಸುಕಿನ ಗುದ್ದಾಟ ಈಗ ಅಧಿಕೃತವಾಗಿ ಹೊರಬಿದ್ದಿದೆ.</p>



<p style="font-size:20px"><strong>ರಾಜ್ಯಪಾಲರ ಪದಚ್ಯುತಿಗೆ ಡಿಎಂಕೆ ಪಟ್ಟು ಹಿಡಿದದ್ಯಾಕೆ?</strong><br>PUC ಪರೀಕ್ಷಾ ಫಲಿತಾಂಶಗಳ ನಂತರವೇ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳುವಂತೆ ತಮಿಳುನಾಡು ಸರ್ಕಾರ ಹೊರಡಿಸಿದ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಪ್ರಸ್ತಾವನೆ ತಮಿಳುನಾಡು ವಿಧಾನ ಮಂಡಲದಲ್ಲೂ ಅಂಗೀಕರಿಸಿ ಅದು ರಾಜ್ಯಪಾಲರ ಕೈ ಸೇರಿತ್ತು ಎಂಬುದು ಪ್ರಮುಖ ಅಂಶ. ಆದರೆ ಈ ಪ್ರಸ್ತಾಪವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲ ಆರ್.ಎನ್.ರವಿಯವರು ಫೆಬ್ರವರಿ ತಿಂಗಳಿನಲ್ಲಿ ಅಸೆಂಬ್ಲಿಗೆ ಹಿಂದಿರುಗಿಸಿದ್ದಾರೆ. PUC ನಂತರದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ NEET ಪರೀಕ್ಷೆಗೆ ತಮಿಳುನಾಡು ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ಪರೋಕ್ಷವಾಗಿ ತಿರಸ್ಕರಿಸಿದ್ದು, ಇದು ಡಿಎಂಕೆ ಮತ್ತು ಮಿತ್ರಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.</p>



<p style="font-size:20px">ಅಷ್ಟಕ್ಕೂ ತಮಿಳುನಾಡು ಸರ್ಕಾರ ಈ ಪ್ರಸ್ತಾವನೆ ಮುಂದಿಟ್ಟ ಹಿನ್ನೆಲೆಯನ್ನು ನೋಡುವುದಾದರೆ, NEET ನ ಪ್ರಶ್ನೆ ಪತ್ರಿಕೆಯು CBSE ಪಠ್ಯಕ್ರಮವನ್ನು ಆಧರಿಸಿದ್ದು, ಇದು ತಮಿಳುನಾಡು ರಾಜ್ಯ ಮಂಡಳಿಯ ಶೈಕ್ಷಣಿಕ ಪಠ್ಯಕ್ರಮಕ್ಕಿಂತ ಬಹುತೇಕ ಭಿನ್ನವಾಗಿದೆ. ಹಾಗಾಗಿ NEET ಪರೀಕ್ಷೆಯು ರಾಜ್ಯ ಮಂಡಳಿಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿ ಮಾಡುತ್ತದೆ ಎಂಬ ಕಾರಣಕ್ಕಾಗಿ ತಮಿಳುನಾಡು ಸರ್ಕಾರ ಈ ಪರೀಕ್ಷೆಯನ್ನು ವಿರೋಧಿಸಿ ಹೊಸ ಪ್ರಸ್ತಾವನೆ ಮುಂದಿಟ್ಟಿತ್ತು.</p>



<p style="font-size:20px">ತಮಿಳುನಾಡು ರಾಜ್ಯಪಾಲರ ಪದಚ್ಯುತಿ ಮನವಿಯನ್ನು ಮುಂದಿಟ್ಟುಕೊಂಡು ದಕ್ಷಿಣದ ಇತರೆ ರಾಜ್ಯಗಳ ರಾಜ್ಯಪಾಲ ಮತ್ತು ಸರ್ಕಾರಗಳ ಮಸುಕಿನ ಗುದ್ದಾಟವನ್ನು ಸೂಕ್ಷ್ಮವಾಗಿ ಅವಲೋಕಿಸಬೇಕಿದೆ. ಇಲ್ಲಿ ಕೇಂದ್ರ ಸರ್ಕಾರ ಪರೋಕ್ಷವಾಗಿ ರಾಜ್ಯಪಾಲರನ್ನು ಮುಂದಿಟ್ಟು ಬಿಜೆಪಿಯೇತರ ಸರ್ಕಾರವನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಕೆಲಸ ಮಾಡುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಹೊರತುಪಡಿಸಿ ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ಸಂಘರ್ಷ ಈ ಎಲ್ಲಾ ಅನುಮಾನಗಳಿಗೆ ಸಾಕ್ಷಿ ಒದಗಿಸುತ್ತಿವೆ.</p>



<p style="font-size:20px"><strong>ಕೇರಳದ 9 ವಿವಿ ಗಳ ಉಪಕುಲಪತಿಗಳ ರಾಜೀನಾಮೆಗೆ ಗವರ್ನರ್ ಪಟ್ಟು</strong><br>ಇತ್ತೀಚೆಗೆ ಸುಪ್ರೀಂ ಕೋರ್ಟ್, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕವನ್ನು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕೇರಳ ರಾಜ್ಯಪಾಲ ಆರೀಫ್ ಖಾನ್ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಈ ಪೈಕಿ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿವಿಯ ಉಪಕುಲಪತಿಗಳೂ ಇದ್ದರು. ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ಕಳೆದ ಅಕ್ಟೋಬರ್ 24 ರ ಒಳಗೆ ರಾಜೀನಾಮೆಗೆ ಪಟ್ಟು ಹಿಡಿದಿದ್ದರು. ಇದು ಕೇರಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಕೆಂಗಣ್ಣಿಗೆ ಗುರಿಯಾಗಿತ್ತು. ರಾಜ್ಯಪಾಲರ ನಡೆ ಸಂಘಪರಿವಾರದ ಪಿತೂರಿಯಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸುವ ಅಜೆಂಡಾ ಆಗಿದೆ ಎಂದು ಕಮ್ಯುನಿಸ್ಟ್ ಪಕ್ಷ ಟೀಕಿಸಿತ್ತು.</p>



<figure class="wp-block-image size-full"><img loading="lazy" decoding="async" width="664" height="462" src="https://peepalmedia.com/wp-content/uploads/2022/11/images-2022-11-03T153239.875.jpeg" alt="" class="wp-image-13993" srcset="https://peepalmedia.com/wp-content/uploads/2022/11/images-2022-11-03T153239.875.jpeg 664w, https://peepalmedia.com/wp-content/uploads/2022/11/images-2022-11-03T153239.875-300x209.jpeg 300w, https://peepalmedia.com/wp-content/uploads/2022/11/images-2022-11-03T153239.875-150x104.jpeg 150w" sizes="auto, (max-width: 664px) 100vw, 664px" /></figure>



<p style="font-size:20px">ಹಾಗೆಯೇ ಕಳೆದ ಅಕ್ಟೋಬರ್ 25 ರಂದು ಕೇರಳ ಸರ್ಕಾರದ ಹಣಕಾಸು ಸಚಿವರನ್ನು ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಜ್ಯಪಾಲ ಆರೀಫ್ ಖಾನ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಪ್ರಾದೇಶಿಕತೆ ಮತ್ತು ಪ್ರಾಂಥೀಯತೆ ಹಿನ್ನೆಲೆಯಲ್ಲಿ ಉತ್ತರ ಭಾರತದ ವಿದ್ಯಾರ್ಥಿಗಳಿಗೆ ಇಲ್ಲಿನ ನೆಲದ ಬಗ್ಗೆ ಹೊಂದಿಕೊಳ್ಳಲು ಕಷ್ಟ ಆಗಬಹುದು ಎಂದಿದ್ದು ಆರೀಫ್ ಖಾನ್ ಅವರ &#8216;ವಜಾ&#8217; ಪತ್ರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂಬಂಧ ರಾಜ್ಯಪಾಲರ ಮನವಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರಸ್ಕರಿಸಿದ್ದರು.</p>



<p style="font-size:20px"><strong>ತೆಲಂಗಾಣದಲ್ಲೂ ಇದೆ ರಾಜ್ಯಪಾಲ ಮತ್ತು ಸರ್ಕಾರದ ಮಸುಕಿನ ಗುದ್ದಾಟ</strong><br>ಈ ಹಿಂದೆ ತಮಿಳುನಾಡಿನ ಬಿಜೆಪಿ ಪಕ್ಷದ ಪ್ರಮುಖ ಮುಖಂಡರಾಗಿದ್ದ ತೆಲಂಗಾಣ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ಮತ್ತು ತೆಲಂಗಾಣ ಸರ್ಕಾರದ ಮಸುಕಿನ ಗುದ್ದಾಟ ಸಹ ಅಷ್ಟು ಗುಟ್ಟಾಗೇನು ಉಳಿದಿಲ್ಲ. ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ ಸಂದರ್ಶನವೊಂದರಲ್ಲಿ ತೆಲಂಗಾಣ ಸರ್ಕಾರದ ಮೇಲಿರುವ ತಮ್ಮ ಅಸಮಾಧಾನವನ್ನು ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ಹೊರಹಾಕಿದ್ದು ತೀರಾ ಹಳೆಯ ವಿಷಯವಲ್ಲ. ಇದೇ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆಡಳಿತಾರೂಢ ಟಿಆರ್ಎಸ್ ಪಕ್ಷ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. ಜೊತೆಗೆ ತಾನು ಭಾಗವಹಿಸುವ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಬರದಂತೆ ಆಡಳಿತ ಪಕ್ಷ ತಡೆಯುತ್ತಿದೆ, ತನಗೆ ಸೂಕ್ತ ಭದ್ರತೆ ವ್ಯವಸ್ಥೆ ಕೂಡ ಸರ್ಕಾರ ಮಾಡಿಲ್ಲ ಎಂದು ತಮಿಳ್ ಸಾಯಿ ಸೌಂದರರಾಜನ್ ಆರೋಪಿಸಿದ್ದಾರೆ. ಜೊತೆಗೆ ರಾಜ್ಯಪಾಲರು ಇಲ್ಲಿಯವರೆಗೆ ಕರೆದ ಎರಡ್ಮೂರು ಔತಣಕೂಟಕ್ಕೂ ಸರ್ಕಾರದ ಪ್ರತಿನಿಧಿಗಳು ಗೈರು ಹಾಜರಾಗಿದ್ದು, ಇಲ್ಲೂ ಸಹ ಸರ್ಕಾರ ಮತ್ತು ರಾಜ್ಯಪಾಲರ ಸಂಬಂಧ ಸರಿ ಇಲ್ಲವಾಗಿದೆ.</p>



<figure class="wp-block-image size-full"><img loading="lazy" decoding="async" width="678" height="452" src="https://peepalmedia.com/wp-content/uploads/2022/11/images-2022-11-03T153506.780.jpeg" alt="" class="wp-image-13997" srcset="https://peepalmedia.com/wp-content/uploads/2022/11/images-2022-11-03T153506.780.jpeg 678w, https://peepalmedia.com/wp-content/uploads/2022/11/images-2022-11-03T153506.780-300x200.jpeg 300w, https://peepalmedia.com/wp-content/uploads/2022/11/images-2022-11-03T153506.780-150x100.jpeg 150w" sizes="auto, (max-width: 678px) 100vw, 678px" /></figure>



<p style="font-size:20px">ಇದಕ್ಕೆ ಟಿಆರ್ಎಸ್ ಪಕ್ಷ ಕೊಡುವ ಸಮಜಾಯಿಷಿ ಎಂದರೆ, ರಾಜ್ಯಪಾಲರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ತೊಡಕುಂಟು ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಸರ್ವಪಕ್ಷಗಳು ಅಂಗೀಕರಿಸಿದ ವಿಧೇಯಕಗಳನ್ನೂ ಮರುಪರಿಶೀಲನೆಗೆ ಒಡ್ಡಲಾಗುತ್ತಿದೆ. ರಾಜ್ಯಪಾಲರು ತಮ್ಮ ಹುದ್ದೆ ನಿರ್ವಹಿಸದೇ ಕೇಂದ್ರ ಬಿಜೆಪಿ ಸರ್ಕಾರದ ಪ್ರತಿನಿಧಿಯಂತೆ, RSS ಪ್ರತಿನಿಧಿಯಂತೆ ವರ್ತಿಸುವುದು ಆಡಳಿತಕ್ಕೆ ಸಮಸ್ಯೆ ಎದುರಾಗುತ್ತದೆ&#8217; ಎಂಬ ರೀತಿಯಲ್ಲಿ ಸಮರ್ಥಿಸಿದ್ದಾರೆ.</p>



<p style="font-size:20px">ಈ ಎಲ್ಲಾ ಬೆಳವಣಿಗೆ ಗಮನಿಸಿದರೆ ಕೇಂದ್ರ ಬಿಜೆಪಿ ಸರ್ಕಾರ ಬೇಕಂತಲೇ ರಾಜ್ಯಪಾಲರ ಮೂಲಕ ತನ್ನ ಹಿಡನ್ ಅಜೆಂಡಾವನ್ನು ರಾಜ್ಯ ಸರ್ಕಾರಗಳ ಮೇಲೆ ಹೇರಲು ಎಲ್ಲಾ ತಂತ್ರಗಳನ್ನ ರೂಪಿಸುತ್ತಿದೆ ಎನ್ನಲಾಗುತ್ತಿದೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗುವ ಮಟ್ಟಿಗೆ, ಪಟ್ಟಣ ಪ್ರದೇಶದ ಮಕ್ಕಳಿಗೆ ಅನುವು ಮಾಡಿ ಕೊಡುವಂತಹ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಕಡೆಯಿಂದ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸುತ್ತಿರುವುದು ಸ್ಪಷ್ಟ.</p>



<p style="font-size:20px">ತಮಿಳುನಾಡು ಮತ್ತು ಕೇರಳದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ರಾಜ್ಯಪಾಲರು ಅನವಶ್ಯಕವಾಗಿ ಸರ್ಕಾರಗಳ ನಿರ್ಧಾರವನ್ನು ಮರುಪರಿಶೀಲನೆಗೆ ಬಿಟ್ಟಿರುವುದು ಸಹಜವಾಗಿಯೇ ರಾಜ್ಯಪಾಲರು ತಮ್ಮ ಸೀಮಿತ ರೇಖೆಯನ್ನು ದಾಟುತ್ತಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ. ವಿಶೇಷವಾಗಿ ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳನ್ನೇ ಗುರಿಯಾಗಿಸಿಕೊಂಡು ರಾಜ್ಯಪಾಲರು ತಮ್ಮ ತಕರಾರುಗಳನ್ನು ಮುಂದಿಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ದೇಶದ ಪ್ರಮುಖ ದಕ್ಷಿಣ ಭಾರತದ ರಾಜ್ಯಗಳಾಗಿದ್ದು, ಇಲ್ಲಿ ಬಿಜೆಪಿ ಎಲ್ಲಾ ರೀತಿಗಳಲ್ಲೂ ಅಧಿಕಾರದಲ್ಲಿ ಮೂಗು ತೂರಿಸುವ ಕೆಲಸ ಮಾಡುತ್ತಿದೆ.</p>



<p style="font-size:20px">ಕೇವಲ ಕರ್ನಾಟಕ ಒಂದು ರಾಜ್ಯವನ್ನು ಉದಾಹರಣೆಗೆ ತಗೆದುಕೊಂಡು ಹೇಳುವುದಾದರೆ, ಕಳೆದ ಎರಡು ವರ್ಷಗಳಿಂದ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಬಿಜೆಪಿ ತಂದ ನಿರ್ಧಾರಗಳು ಮತ್ತು ನಿಲುವುಗಳು ಸ್ಪಷ್ಟವಾಗಿ ಸಂಘ ಪರಿವಾರದ ಅಜೆಂಡಾವನ್ನು ಹೇರಲಾಗುತ್ತಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ತಂದ ಅದ್ವಾನ ಮತ್ತು ಅದರಿಂದ ಸರ್ಕಾರಿ ಶಾಲೆಗಳ ಮಕ್ಕಳಿಗಾದ ದ್ವಂದ್ವಗಳು ಇನ್ನೂ ಮುಗಿದಿಲ್ಲ.</p>



<p style="font-size:20px">ತಮಿಳುನಾಡಿನ ರಾಜ್ಯಪಾಲರು ಸಹ ಇತ್ತೀಚೆಗೆ ಸ್ಪಷ್ಟವಾಗಿ ಬಿಜೆಪಿ ವಕ್ತಾರರಂತೆ ವರ್ತಿಸಿದ್ದೂ ಸಹ ಡಿಎಂಕೆ ರಾಜ್ಯಪಾಲರನ್ನು ಗುರಿಯಾಗಿಸಿದ್ದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕಳೆದ ಜೂನ್‌ ತಿಂಗಳಲ್ಲಿ, “ಸನಾತನ ಧರ್ಮ ವಿವಿಧತೆಯಲ್ಲಿ ಏಕತೆಯನ್ನು ಎತ್ತಿಹಿಡಿಯುತ್ತದೆ” ಎಂದು ಹೇಳಿಕೆ ನೀಡುವ ಮೂಲಕ ರಾಜ್ಯಪಾಲ ರವಿ ಅವರು ತಮ್ಮ ಸಂವಿಧಾನಿಕ ಮಿತಿಯನ್ನು ಮೀರುತ್ತಿದ್ದಾರೆ ಎಂದು ಡಿಎಂಕೆ ಆರೋಪಿಸಿತ್ತು. ನಂತರ ಆಗಸ್ಟ್‌ನಲ್ಲಿ, ಹಿಂಸಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಇರಬೇಕು ಮತ್ತು ಬಂದೂಕು ಬಳಸುವವ ವಿರುದ್ಧ ಬಂದೂಕಿನಿಂದಲೆ ವ್ಯವಹರಿಸಬೇಕು ಎಂದು ಅವರು ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದರು. ಸಧ್ಯ ಈ ಎಲ್ಲಾ ಬೆಳವಣಿಗೆ ಹಿಂದೆ ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ಕಡೆಗಳಲ್ಲಿ ರಾಜ್ಯಪಾಲರ ಮೂಲಕ ತನ್ನ ಕೆಲಸ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.</p>
]]></content:encoded>
					
		
		
			</item>
		<item>
		<title>ಹಿಂದಿ ಹೇರಿಕೆ ವಿರುದ್ಧ ನವೆಂಬರ್ 4 ರಂದು ತಮಿಳುನಾಡಿನಾದ್ಯಂತ ಸಾರ್ವಜನಿಕ ಸಭೆ</title>
		<link>https://peepalmedia.com/public-meeting-across-tamil-nadu-on-4th-november-against-hindi-imposition/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 28 Oct 2022 11:17:08 +0000</pubDate>
				<category><![CDATA[ದೇಶ]]></category>
		<category><![CDATA[DMK]]></category>
		<category><![CDATA[Hindi imposition]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[M K STALIN]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Public meeting]]></category>
		<category><![CDATA[tamilnadu]]></category>
		<guid isPermaLink="false">https://peepalmedia.com/?p=13286</guid>

					<description><![CDATA[ಚೆನ್ನೈ: ರಾಜ್ಯದಲ್ಲಿ ಹಿಂದಿ ಭಾಷೆ ಹೇರಿಕೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಚರ್ಚಿಸಲು ಮತ್ತು ವಿವರಿಸಲು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನವೆಂಬರ್ 4 ರಂದು ರಾಜ್ಯಾದ್ಯಂತ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕ ಸಭೆಯಲ್ಲಿ, ಅಧಿಕೃತ ಭಾಷೆಯ ಸಂಸದೀಯ ಸಮಿತಿಯ ವರದಿಯ ಶಿಫಾರಸುಗಳನ್ನು ಜಾರಿಗೆ ತರದಂತೆ ಕೇಂದ್ರವನ್ನು ಒತ್ತಾಯಿಸಿದ ಹಿಂದಿ ಭಾಷೆ ಹೇರಿಕೆಯ ವಿರುದ್ಧ , ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಸ್ಪೀಕರ್‌ಗಳು ವಿವರಿಸುತ್ತಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. [&#8230;]]]></description>
										<content:encoded><![CDATA[
<p style="font-size:20px"><strong>ಚೆನ್ನೈ:</strong> ರಾಜ್ಯದಲ್ಲಿ ಹಿಂದಿ ಭಾಷೆ ಹೇರಿಕೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಚರ್ಚಿಸಲು ಮತ್ತು ವಿವರಿಸಲು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನವೆಂಬರ್ 4 ರಂದು ರಾಜ್ಯಾದ್ಯಂತ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>



<p style="font-size:20px">ಸಾರ್ವಜನಿಕ ಸಭೆಯಲ್ಲಿ, ಅಧಿಕೃತ ಭಾಷೆಯ ಸಂಸದೀಯ ಸಮಿತಿಯ ವರದಿಯ ಶಿಫಾರಸುಗಳನ್ನು ಜಾರಿಗೆ ತರದಂತೆ ಕೇಂದ್ರವನ್ನು ಒತ್ತಾಯಿಸಿದ ಹಿಂದಿ ಭಾಷೆ ಹೇರಿಕೆಯ ವಿರುದ್ಧ , ತಮಿಳುನಾಡು ವಿಧಾನಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಸ್ಪೀಕರ್‌ಗಳು ವಿವರಿಸುತ್ತಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>



<p style="font-size:20px">ಇದಕ್ಕೂ ಮುನ್ನ ಅಕ್ಟೋಬರ್ 13 ರಂದು ಆಡಳಿತಾರೂಢ ಡಿಎಂಕೆಯ ಯುವ ಮತ್ತು ವಿದ್ಯಾರ್ಥಿ ಘಟಕವು ಕೇಂದ್ರದ ಹಿಂದಿ ಹೇರಿಕೆಗೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಘೋಷಿಸಿತು. ಇದಲ್ಲದೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ಕೇಂದ್ರವನ್ನು ಖಂಡಿಸಿದರು. ಸ್ಟಾಲಿನ್ ಅವರು ತಮ್ಮ ಹೇಳಿಕೆಯಲ್ಲಿ, ʼಹಿಂದಿ ಹೇರಿಕೆʼ ವಿರುದ್ಧ ಇತಿಹಾಸದಲ್ಲಿ ಮಾಡಿದ ಯುವಕರ ತ್ಯಾಗವನ್ನು ಪಟ್ಟಿ ಮಾಡಿದ್ದರು ಮತ್ತು ʼನಮ್ಮ ಮೇಲೆ ಮತ್ತೊಂದು ಭಾಷಾ ಯುದ್ಧವನ್ನು ಹೇರಬಾರದುʼ ಎಂದು ಸ್ಟಾಲಿನ್ ಹೇಳಿದ್ದರು.</p>



<p style="font-size:20px">ಅಕ್ಟೋಬರ್ 10 ರಂದು, ಸ್ಟಾಲಿನ್ ಅವರು, ʼಭಾರತದ ವೈವಿಧ್ಯತೆಯನ್ನು ನಿರಾಕರಿಸುವ ಹಿಂದಿ ಹೇರಿಕೆಗಾಗಿ ಕೇಂದ್ರ ಬಿಜೆಪಿ ಸರ್ಕಾರದ ಕಠಿಣ ಒತ್ತಡವು ಆತಂಕಕಾರಿ ವೇಗದಲ್ಲಿ ನಡೆಯುತ್ತಿದೆ. ಅಧಿಕೃತ ಭಾಷೆಯ ಸಂಸದೀಯ ಸಮಿತಿಯ ವರದಿಯ 11 ನೇ ಸಂಪುಟದಲ್ಲಿ ಮಾಡಲಾದ ಪ್ರಸ್ತಾಪಗಳು ಭಾರತದ ಆತ್ಮದ ಮೇಲೆ ಮಾಡುತ್ತಿರುವ ನೇರ ದಾಳಿ ಎಂದು ಟ್ವೀಟ್‌ ಮಾಡಿದ್ದರು.</p>



<p style="font-size:20px">ಹಿಂದಿ ಹೇರಿಕೆ ʼಅನುಷ್ಠಾನಗೊಂಡರೆ, ಹಿಂದಿಯೇತರ ಜನಸಂಖ್ಯೆಯನ್ನು ಅವರ ಸ್ವಂತ ನೆಲದಲ್ಲಿ ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಲಾಗುತ್ತದೆ. ಹಿಂದಿಯನ್ನು ಹೇರುವುದು ಭಾರತದ ಅಖಂಡತೆಗೆ ವಿರುದ್ಧವಾಗಿದೆ. ಹೀಗಾಗಿ ಬಿಜೆಪಿ ಸರ್ಕಾರವು ಹಿಂದಿ ವಿರೋಧಿ ಆಂದೋಲನಗಳಿಂದ ಪಾಠ ಕಲಿಯುವುದು ಒಳ್ಳೆಯದು ಎಂದು ಸ್ಟಾಲಿನ್ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದರು.</p>
]]></content:encoded>
					
		
		
			</item>
	</channel>
</rss>
