<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>tiger &#8211; Peepal Media</title>
	<atom:link href="https://peepalmedia.com/tag/tiger/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 04 Nov 2022 13:47:21 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>tiger &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಊಟಿಯಲ್ಲಿ ಕಾಣಿಸಿಕೊಂಡ ಹುಲಿ: ಬೆಚ್ಚಿಬಿದ್ದ ನೆಟ್ಟಿಗರು</title>
		<link>https://peepalmedia.com/ootiyalli-kaanisikonda-huli-becchibidda-nettigaru/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 04 Nov 2022 13:47:19 +0000</pubDate>
				<category><![CDATA[ಚಾಮರಾಜನಗರ]]></category>
		<category><![CDATA[bengalure]]></category>
		<category><![CDATA[chamarajnagar]]></category>
		<category><![CDATA[forest]]></category>
		<category><![CDATA[kannada]]></category>
		<category><![CDATA[ooti]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[social media]]></category>
		<category><![CDATA[tiger]]></category>
		<category><![CDATA[uti]]></category>
		<category><![CDATA[writing]]></category>
		<guid isPermaLink="false">https://peepalmedia.com/?p=14217</guid>

					<description><![CDATA[ಚಾಮರಾಜನಗರ: ಅರಣ್ಯಾಧಿಕಾರಿಯೊಬ್ಬರು ಸೆರೆ ಹಿಡಿದ ವಿಡೀಯೊ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಅರಣ್ಯ ನಾಶದ ಚರ್ಚೆಗೆ ನಾಂದಿ ಹಾಡಿದೆ. ಬಹಳಷ್ಟು ಜನರು ಈ ವಿಡಿಯೋವನ್ನು ಶೇರ್‌ ಮಾಡಿಕೊಂಡು ಹುಲಿ ಮತ್ತು ಅದರ ಆವಾಸಸ್ಥಾನಗಳ ಕುರಿತು ಚರ್ಚೆ ಮಾಡಲಾರಂಭಿಸಿದ್ದಾರೆ. ಐಆರ್‌ಎಸ್‌ ಅಧಿಕಾರಿಯಾದ ಅನಂತ್‌ ರೂಪನಗುಡಿಯವರು ಟ್ವಿಟರ್‌ ಮೂಲಕ ಹಂಚಿಕೊಂಡಿರುವ ವಿಡಿಯೋ ಮತ್ತು ಫೋಟೊಗಳಲ್ಲಿ ಹುಲಿಯ ವಿವಿಧ ಭಾವ ಭಂಗಿಗಳು ಮತ್ತು ಅದು ಆಗಷ್ಟೇ ಹಿಡಿದ ಬೇಟೆಯನ್ನು ಎಳೆದೊಯ್ಯುತ್ತಿರುವುದನ್ನು ಕಾಣಬಹುದಾಗಿದೆ. ಈ ಬೇಟೆಗೆ ಬಂದಿರುವ ಹುಲಿಯ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ [&#8230;]]]></description>
										<content:encoded><![CDATA[
<p><strong>ಚಾಮರಾಜನಗರ:</strong> ಅರಣ್ಯಾಧಿಕಾರಿಯೊಬ್ಬರು ಸೆರೆ ಹಿಡಿದ ವಿಡೀಯೊ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಅರಣ್ಯ ನಾಶದ ಚರ್ಚೆಗೆ ನಾಂದಿ ಹಾಡಿದೆ. ಬಹಳಷ್ಟು ಜನರು ಈ ವಿಡಿಯೋವನ್ನು ಶೇರ್‌ ಮಾಡಿಕೊಂಡು ಹುಲಿ ಮತ್ತು ಅದರ ಆವಾಸಸ್ಥಾನಗಳ ಕುರಿತು ಚರ್ಚೆ ಮಾಡಲಾರಂಭಿಸಿದ್ದಾರೆ.</p>



<p>ಐಆರ್‌ಎಸ್‌ ಅಧಿಕಾರಿಯಾದ ಅನಂತ್‌ ರೂಪನಗುಡಿಯವರು ಟ್ವಿಟರ್‌ ಮೂಲಕ ಹಂಚಿಕೊಂಡಿರುವ ವಿಡಿಯೋ ಮತ್ತು ಫೋಟೊಗಳಲ್ಲಿ ಹುಲಿಯ ವಿವಿಧ ಭಾವ ಭಂಗಿಗಳು ಮತ್ತು ಅದು ಆಗಷ್ಟೇ ಹಿಡಿದ ಬೇಟೆಯನ್ನು ಎಳೆದೊಯ್ಯುತ್ತಿರುವುದನ್ನು ಕಾಣಬಹುದಾಗಿದೆ. ಈ ಬೇಟೆಗೆ ಬಂದಿರುವ ಹುಲಿಯ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್‌ ಆಗುತ್ತಿದ್ದು, ಜನರು ಕಾಮೆಂಟ್‌ಗಳ ಮುಖಾಂತರ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.</p>



<p>ಈ ಕುರಿತು ಕಾಮೆಂಟ್‌ ಮಾಡಿರುವ ಶ್ರೀಮೋಯಿ ಚೌಧರಿಯರು, ʼಸಫಾರಿಗಳ ಸಮಯದಲ್ಲಿಯೂ &nbsp;ಹುಲಿಯನ್ನು ಗುರುತಿಸುವುದು ತುಂಬಾ ಕಷ್ಟಕರವಾಗಿದೆ. ಅದಕ್ಕಾಗಿಯೇ ಊಟಿಯ ಇಂದು ನಗರದ ಮೀಸಲು ಅರಣ್ಯದ ಅಂಚಿನಲ್ಲಿ ಹುಲಿ ಕಾಣಿಸಿಕೊಂಡಾಗ ಜನರು ಆಘಾತಕ್ಕೊಳಗಾಗಿದ್ದಾರೆ. ಭವ್ಯವಾದ ಹುಲಿಯ ವೀಡಿಯೊಗಳು ಮತ್ತು ಚಿತ್ರಗಳು ಈಗ ಟ್ವಿಟ್ಟರ್ ನಲ್ಲಿ ವೈರಲ್ ಆಗಿವೆʼ ಎಂದು ಹೇಳಿದ್ದಾರೆ.</p>



<p>ಹುಲಿಯು ಮಾನವ ವಾಸಸ್ಥಾನಕ್ಕೆ ಇಷ್ಟು ಹತ್ತಿರದಲ್ಲಿ ಇರುವುದನ್ನು ನೋಡಿ ಜನರು ಆಘಾತಕ್ಕೊಳಗಾಗಿದ್ದಾರೆ. ನೈಸರ್ಗಿಕ ಆವಾಸಸ್ಥಾನದ ನಾಶವು ಹೇಗೆ ಹುಲಿಗಳನ್ನು ಕಾಡಿನ ಹೊರಗೆ ಬರುವಂತೆ ಮಾಡಿದೆ ಎಂಬುದರ ಬಗ್ಗೆ ಅನೇಕರು ಬರೆದಿದ್ದಾರೆ.</p>



<p>&#8220;ಮನುಷ್ಯರು ಇರುವಾಗ ಆ ಹುಲಿಗಳು ಎಚ್ಚರದಿಂದ ಇರಬೇಕು. ನಮ್ಮ ಮನರಂಜನೆಗಾಗಿ ನಾವು ಅವುಗಳ ವಾಸದ ಸ್ಥಳವನ್ನು ಅತಿಕ್ರಮಿಸಿದ್ದೇವೆ ಎಂದು ನಾನು ಭಾವಿಸುತ್ತೇನೆ&#8221; ಎಂದು ಟ್ವಿಟರ್ ಬಳಕೆದಾರರೊಬ್ಬರು ಬರೆದಿದ್ದಾರೆ. &#8220;ಹುಲಿ ತುಂಬಾ ಸುಂದರವಾಗಿ ಕಾಣುತ್ತಿದೆ&#8221; ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.</p>



<p>“ಇದು ಮಾನವರು ಅರಣ್ಯವನ್ನು ಮಿತಿಯಿಲ್ಲದೆ ಆಕ್ರಮಿಸಿರುವುದರ ಸ್ಪಷ್ಟ ಸೂಚನೆಯಾಗಿದೆ. ಹುಲಿಗಳು ಜಾನುವಾರುಗಳ ಮೇಲೆ ದಾಳಿಗಿಳಿಯುವುದು ಅವು ಮುಂದೆ ಮನುಷ್ಯರನ್ನು ತಿನ್ನಲು ತೊಡಗುವುದರ ಮುನ್ಸೂಚನೆಯಾಗಿದೆ. ಇಂತಹ ಬೆಳವಣಿಗೆ ನನ್ನನ್ನು ನೋವಿಗೆ ದೂಡುತ್ತಿದೆ.” ಎಂದು ಮತ್ತೊಬ್ಬರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.</p>
]]></content:encoded>
					
		
		
			</item>
		<item>
		<title>’ಮಾದೇವ’ನಿಗೆ ಸೋನಲ್ ಮೊಂಥೆರೋ ಮತ್ತೆ ‘ರಾಬರ್ಟ್’ ಜೋಡಿಯ ಮೋಡಿ</title>
		<link>https://peepalmedia.com/maadevnige-sonal-monthero-mtte-raabart-jodiya-modi/</link>
		
		<dc:creator><![CDATA[Peepal Media]]></dc:creator>
		<pubDate>Wed, 27 Jul 2022 08:25:25 +0000</pubDate>
				<category><![CDATA[ಸಿನಿಮಾ]]></category>
		<category><![CDATA[actors]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[movie]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[raabart]]></category>
		<category><![CDATA[sinema]]></category>
		<category><![CDATA[tiger]]></category>
		<category><![CDATA[writing]]></category>
		<guid isPermaLink="false">https://peepalmedia.com/?p=120</guid>

					<description><![CDATA[ಮರಿ ಟೈಗರ್ ವಿನೋದ್ ಪ್ರಭಾಕರ್ ಬತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ [&#8230;]]]></description>
										<content:encoded><![CDATA[
<p class="has-medium-font-size">ಮರಿ ಟೈಗರ್ ವಿನೋದ್ ಪ್ರಭಾಕರ್ ಬತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.</p>



<p class="has-medium-font-size">ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ ಸಿನಿಮಾ ಸಾರಥಿ ನವೀನ್ ಬಿ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಾದೇವ ಚಿತ್ರದಲ್ಲಿ ಸೋನಲ್ 80ರ ದಶಕದ ಮಧ್ಯಮವರ್ಗದ ಹುಡುಗಿಯಾಗಿ ಬಣ್ಣ ಹಚ್ಚಲಿದ್ದಾರೆ. </p>



<p class="has-medium-font-size">80 ದಶಕದ ಎಮೋಷನಲ್ ಹಾಗೂ ಮಾಸ್ ಎಲಿಮೆಂಟ್ ಕಂಟೆಂಟ್ ಹೊಂದಿರುವ ಮಾದೇವ ಸಿನಿಮಾ ರೈಲು ಮತ್ತು ಜೈಲಿನ ಬ್ಯಾಕ್ ಡ್ರಾಪ್ ನಲ್ಲಿ ನಡೆಯಲಿದೆ. ವಿನೋದ್ ಪ್ರಭಾಕರ್ ಈ ಹಿಂದಿನ ಪಾತ್ರಗಳಿಗಿಂತ ಈ ಚಿತ್ರದಲ್ಲಿ ಡಿಫರೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್‌ನಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆ. ಹಿರಿಯ ನಟಿ ಶ್ರುತಿ, ಪೋಷಕ ಕಲಾವಿದ ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದು, ಬಾಲಕೃಷ್ಣ ತೋಟ ಕ್ಯಾಮೆರಾ ವರ್ಕ್, ಪ್ರದ್ಯೋಥನ್ ಮ್ಯೂಸಿಕ್&nbsp; ಸಿನಿಮಾಕ್ಕಿದೆ. ಗಾಯತ್ರಿ ರಾಜೇಶ್ ಹಾಗೂ ಲವ್ ಗುರು ಸುಮನ್ ನಿರ್ಮಾಣದ ಮಾದೇವ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ.</p>
]]></content:encoded>
					
		
		
			</item>
	</channel>
</rss>
