<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>uday garudachar &#8211; Peepal Media</title>
	<atom:link href="https://peepalmedia.com/tag/uday-garudachar/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 29 Nov 2022 12:22:22 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>uday garudachar &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಬೆಂಗಳೂರು ಜಾತ್ರೆಯೊಂದರಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಕರೆ: ಬಿಜೆಪಿ ಶಾಸಕ ಉದಯ್ ಗರುಡಾಚಾರ್ ವಿರೋಧ</title>
		<link>https://peepalmedia.com/boycott-of-muslim-traders-at-bengaluru-fair-bjp-mla-uday-garudachar-opposes/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 29 Nov 2022 12:22:21 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[ರಾಜ್ಯ]]></category>
		<category><![CDATA[Bajrang Dal]]></category>
		<category><![CDATA[bengalure]]></category>
		<category><![CDATA[Boycott]]></category>
		<category><![CDATA[Hindu activists]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Muslim traders]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Subramanyaswara fair]]></category>
		<category><![CDATA[uday garudachar]]></category>
		<guid isPermaLink="false">https://peepalmedia.com/?p=16923</guid>

					<description><![CDATA[ಬೆಂಗಳೂರು: ನಗರದ ಸುಬ್ರಮಣ್ಯೇಶ್ವರ ಜಾತ್ರೆಯ ಸಂದರ್ಭದಲ್ಲಿ, ಮುಸ್ಲಿಂ ವ್ಯಾಪಾರಿಗಳು ತಮ್ಮ ವ್ಯಾವಹಾರಗಳನ್ನು &#160;ಬಹಿಷ್ಕರಿಸುವಂತೆ ಹಿಂದೂ ಕಾರ್ಯಕರ್ತರು ಕರೆ ನೀಡಿದ್ದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಶಾಸಕ ಉದಯ್‌ ಗುರುಡಾಚಾರ್‌ ಎಚ್ಚರಿಕೆ&#160; ನೀಡಿದ್ದಾರೆ. ಸಾವಿರಾರು ಭಕ್ತರು ಭಾಗವಹಿಸುವ ಜಾತ್ರೆಯ ಸಮಯದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಹಿಂದೂ ಕಾರ್ಯಕರ್ತರು ಮತ್ತು ಬಜರಂಗದಳ ಒತ್ತಾಯಿಸಿದೆ. ಈ ಕುರಿತು ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ್ ಬಿ.ಗರುಡಾಚಾರ್ ಅವರು ಹಿಂದೂ ಕಾರ್ಯಕರ್ತರ ಬೇಡಿಕೆಯಿಂದಾಗಿ ಯಾವುದೇ ಹೊಸ ನಿಯಮಗಳನ್ನು [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ನಗರದ ಸುಬ್ರಮಣ್ಯೇಶ್ವರ ಜಾತ್ರೆಯ ಸಂದರ್ಭದಲ್ಲಿ, ಮುಸ್ಲಿಂ ವ್ಯಾಪಾರಿಗಳು ತಮ್ಮ ವ್ಯಾವಹಾರಗಳನ್ನು &nbsp;ಬಹಿಷ್ಕರಿಸುವಂತೆ ಹಿಂದೂ ಕಾರ್ಯಕರ್ತರು ಕರೆ ನೀಡಿದ್ದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಶಾಸಕ ಉದಯ್‌ ಗುರುಡಾಚಾರ್‌ ಎಚ್ಚರಿಕೆ&nbsp; ನೀಡಿದ್ದಾರೆ.</p>



<p>ಸಾವಿರಾರು ಭಕ್ತರು ಭಾಗವಹಿಸುವ ಜಾತ್ರೆಯ ಸಮಯದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಹಿಂದೂ ಕಾರ್ಯಕರ್ತರು ಮತ್ತು ಬಜರಂಗದಳ ಒತ್ತಾಯಿಸಿದೆ.</p>



<p>ಈ ಕುರಿತು ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ್ ಬಿ.ಗರುಡಾಚಾರ್ ಅವರು ಹಿಂದೂ ಕಾರ್ಯಕರ್ತರ ಬೇಡಿಕೆಯಿಂದಾಗಿ ಯಾವುದೇ ಹೊಸ ನಿಯಮಗಳನ್ನು ಜಾರಿ ತರಲಾಗುವುದಿಲ್ಲ ಮತ್ತು ಎಲ್ಲಾ ಧರ್ಮಗಳ ಜನರು ತಮ್ಮ ವ್ಯವಹಾರಗಳನ್ನು ನಡೆಸಲು ಅನುಮತಿಸ ಇದೆ ಎಂದು ಸ್ಪಷ್ಟಪಡಿಸಿದ್ದಾರೆ.</p>



<p>ʼಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡುವುದು ಸಮಂಜಸವಲ್ಲ. ಹೀಗಾಗಿ ಜಾತ್ರೆಯಲ್ಲಿ ಯಾರಾದರೂ ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸಿದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದುʼ ಎಂದು ಉದಯ್‌ ಗುರುಡಾಚಾರ್‌ ಹೇಳಿದ್ದಾರೆ.</p>



<p>ʼನಾವು ಚುನಾಯಿತ ಪ್ರತಿನಿಧಿಗಳು ಮತ್ತು ಎಲ್ಲಾ ಧರ್ಮಗಳಿಗೆ ಸೇರಿದ ಜನರ ಮತಗಳನ್ನು ಪಡೆದ ನಂತರ ಚುನಾಯಿತರಾಗಿದ್ದೇವೆ. ಹೀಗಾಗಿ ತಾರತಮ್ಯಕ್ಕೆ ಆಸ್ಪದವೇ ಇಲ್ಲ. ಹಲವು ವರ್ಷಗಳಿಂದ ಅನುಸರಿಸಿಕೊಂಡು ಬಂದಿರುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲಾಗುವುದು&#8217; ಎಂದರು.</p>



<p>ಆದರೆ ಈ ನಿರ್ಧಾರದ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ ಹಿಂದೂ ಕಾರ್ಯಕರ್ತರು, ಮಸೀದಿಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಾರ ನಡೆಸಲು ಹಿಂದೂ ವ್ಯಾಪಾರಿಗಳಿಗೆ ಅವಕಾಶವಿಲ್ಲ ಎಂದು ವಾದಿಸಿದ್ದಾರೆ. ನಂತರ ತಮ್ಮ ವಿಧಾನಸಭಾ ಕ್ಷೇತ್ರದ ಮಸೀದಿಗಳ ಬಳಿ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡುವಂತೆ ಅವರು ಶಾಸಕನಿಗೆ ಸವಾಲು ಹಾಕಿದ್ದಾರೆ. ಅದಲ್ಲದೆ ಗರುಡಾಚಾರ್ ಅವರು ತಮ್ಮ ಕ್ಷೇತ್ರದ ಮಸೀದಿಗಳ ಸುತ್ತ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿರೋಧ ವ್ಯಕ್ತಪಡಿಸಿದ್ದಾರೆ.</p>



<p>ಈ ಕಾರಣ ಮಂಗಳವಾರದ ಜಾತ್ರೆಯ ಸಮಯದಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿದೆ.</p>
]]></content:encoded>
					
		
		
			</item>
		<item>
		<title>ಸುಬ್ರಮಣ್ಯ ಜಾತ್ರೆಯಲ್ಲಿ ಎಲ್ಲಾ ಧರ್ಮಗಳಿಗೂ ವ್ಯಾಪಾರಕ್ಕೆ ಅವಕಾಶ: ಉದಯ್‌ ಗರುಡಾಚಾರ್</title>
		<link>https://peepalmedia.com/business-opportunities-for-all-religions-at-subramanya-jatre-uday-garudachar/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 28 Nov 2022 10:35:43 +0000</pubDate>
				<category><![CDATA[ಬೆಂಗಳೂರು]]></category>
		<category><![CDATA[bengalure]]></category>
		<category><![CDATA[hindu sanghatane]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[subḩamanya temple]]></category>
		<category><![CDATA[uday garudachar]]></category>
		<category><![CDATA[writing]]></category>
		<guid isPermaLink="false">https://peepalmedia.com/?p=16802</guid>

					<description><![CDATA[ಬೆಂಗಳೂರು :  ನಾನು ಮನೆಯಲ್ಲಿ ಮಾತ್ರ ಬ್ರಾಹ್ಮಣ, ಹೊರಗೆ ಬಂದರೆ ನಾನು ವಿಶ್ವ ಮಾನವ. ಹಿಂದೂಗಳಿಗೆ ಮಸೀದಿಗಳ ಮುಂದೆ ವ್ಯಾಪಾರಕ್ಕೆ ಅವಕಾಶ ಕೊಡದೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ, ಇತರ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಮನವಿಗೆ ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ವಿವಿಪುರಂನಲ್ಲಿ ನಡೆಯುತ್ತಿರುವ ಸುಬ್ರಮಣ್ಯ ಜಾತ್ರೆಯಲ್ಲಿ ಹಿಂದೂ ಅಲ್ಲದೇ ಬೇರೆ ಯಾವುದೇ ಧರ್ಮದವರಿಗೆ ವ್ಯಾಪಾರ ಮಾಡಲು ಅನುಮತಿ ನೀಡಬಾರದು ಎಂದು ಹಿಂದೂ ಸಂಘಟನೆಗಳು ಬಿಬಿಎಂಪಿ [&#8230;]]]></description>
										<content:encoded><![CDATA[
<p><strong>ಬೆಂಗಳೂರು :</strong>  ನಾನು ಮನೆಯಲ್ಲಿ ಮಾತ್ರ ಬ್ರಾಹ್ಮಣ, ಹೊರಗೆ ಬಂದರೆ ನಾನು ವಿಶ್ವ ಮಾನವ. ಹಿಂದೂಗಳಿಗೆ ಮಸೀದಿಗಳ ಮುಂದೆ ವ್ಯಾಪಾರಕ್ಕೆ ಅವಕಾಶ ಕೊಡದೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ, ಇತರ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಸಲ್ಲಿಸಿದ್ದ ಮನವಿಗೆ ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಪ್ರತಿಕ್ರಿಯೆ ನೀಡಿದ್ದಾರೆ.</p>



<p>ಬೆಂಗಳೂರಿನ ವಿವಿಪುರಂನಲ್ಲಿ ನಡೆಯುತ್ತಿರುವ ಸುಬ್ರಮಣ್ಯ ಜಾತ್ರೆಯಲ್ಲಿ ಹಿಂದೂ ಅಲ್ಲದೇ ಬೇರೆ ಯಾವುದೇ ಧರ್ಮದವರಿಗೆ ವ್ಯಾಪಾರ ಮಾಡಲು ಅನುಮತಿ ನೀಡಬಾರದು ಎಂದು ಹಿಂದೂ ಸಂಘಟನೆಗಳು ಬಿಬಿಎಂಪಿ ಆಯುಕ್ತರಿಗೆ ಮತ್ತು ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು.</p>



<p>ಮೂರ್ತಿ ಪೂಜೆಯನ್ನು ನಂಬದೆ , ವ್ಯಾಪಾರದಲ್ಲಿ ಜಿಹಾದ್‌ ಮಾಡುವ, ಹಿಂದೂಗಳು ಪೂಜಿಸುವ ಗೋವನ್ನು ಕಡಿದು ತಿನ್ನುವವರಿಗೆ ಪ್ರತೀ ಭಾರಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅವರಿಗೆ ಹಿಂದೂ ಹಬ್ಬದಲ್ಲಿ ವ್ಯಾಪಾರ ಮಾಡುವುದಕ್ಕ ಯಾವುದೇ ರೀತಿಯ ಅರ್ಹತೆ ಇಲ್ಲಎಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದವು.</p>



<p>ಈ ಹಿನ್ನೆಲೆಯಲ್ಲಿ, ಇಂದು ವಿವಿ ಪುರಂನ ಸುಬ್ರಮಣ್ಯ ದೇವಾಲಯಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಉದಯ್‌ ಗರುಡಾಚಾರ್‌ ಅವರು ಪ್ರತಿಕ್ರಿಯೆ ನೀಡಿದ್ದು, ಮಾಧ್ಯಮಗಳ ಮುಂದೆ ಮಾತನಾಡಿದ ಇವರು, ʼನಾನು ಅಧಿಕಾರಕ್ಕೆ ಬಂದಾಗ ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸಿದ್ದೇನೆ. ಅಧಿಕಾರದಲ್ಲಿರುವಾಗ ನನಗೆ ಯಾವುದೇ ಜಾತಿ, ಧರ್ಮದ ಭೇದಭಾವವಿಲ್ಲ. ನಾನು ಮನೆಯಲ್ಲಿ ಮಾತ್ರ ಬ್ರಾಹ್ಮಣ ಹೊರಗೆ ಬಂದರೆ ನಾನು ವಿಶ್ವಮಾನವ. ಜಾತ್ರೆಯಲ್ಲಿ ಎಲ್ಲಾ ಧರ್ಮದವರಿಗೂ ಅವಕಾಶ ಮಾಡಿಕೊಡಬೇಕು. ಜಾತ್ರೆಗಳಲ್ಲಿ ಯಾವುದೇ ಗಲಾಟೆಗಳಿಗೆ ಅವಕಾಶ ಇರುವುದಿಲ್ಲ. ಒಂದು ವೇಳೆ ಈ ವಿರುದ್ಧ ನಡೆದುಕೊಂಡರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದುʼ ಎಂದು ಎಚ್ಚರಿಕೆ ನೀಡಿದ್ದಾರೆ.</p>



<p>ಮುಂದುವರೆದು ಮಾತನಾಡಿದ ಅವರು, ʼಹಿಂದೂಗಳಿಗೆ ದರ್ಗಾ ಮತ್ತು ಮಸೀದಿಗಳ ಮುಂದೆ ವ್ಯಾಪಾರಕ್ಕೆ ಅವಕಾಶ ನೀಡದೆ ಇರುವ ಬಗ್ಗೆ ಇನ್ನು ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿ. ಹಿಂದೂ ಕಾರ್ಯಕರ್ತರಾಗಿರುವ ಕೆಲವರು ಉದ್ಧೇಶಪೂರ್ವಕವಾಗಿ ಅವರಿಗೆ ಮಾಡಲಿಕ್ಕೆ ಬೇರೆ ಕೆಲಸ ಇಲ್ಲದೆ ಈ ರೀತಿಯ ಕೆಲಸಗಳನ್ನು ಮಾಡುತ್ತಾ ಕಾಲ ಕಳೆಯುತ್ತಿದ್ದಾರೆʼ ಎಂದು ಉದಯ್‌ ಗರುಡಾಚಾರ್‌ ಕಿಡಿಕಾರಿದ್ದಾರೆ.</p>
]]></content:encoded>
					
		
		
			</item>
	</channel>
</rss>
