<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>UT khadar &#8211; Peepal Media</title>
	<atom:link href="https://peepalmedia.com/tag/ut-khadar/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Fri, 23 Jun 2023 08:57:50 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>UT khadar &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಶಾಸಕರಿಗೆ ತಿಳುವಳಿಕೆ ಭಾಷಣ ; ವಿವಾದಾತ್ಮಕ ವ್ಯಕ್ತಿಗಳ ಆಯ್ಕೆ ಬಗ್ಗೆ ಪರಿಶೀಲನೆ</title>
		<link>https://peepalmedia.com/informative-speech-to-mlas-scrutiny-on-selection-of-controversial-persons/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 23 Jun 2023 08:49:35 +0000</pubDate>
				<category><![CDATA[ರಾಜಕೀಯ]]></category>
		<category><![CDATA[karnataka]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[ramesh babu]]></category>
		<category><![CDATA[UT khadar]]></category>
		<guid isPermaLink="false">https://peepalmedia.com/?p=22640</guid>

					<description><![CDATA[ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ತರಬೇತಿ ಕೊಡುವ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಮಾಡಲಾಗಿತ್ತು. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಮಾಡಿರುವ ಆಯ್ಕೆಯ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಧ್ಯಕ್ಕೆ ಸಂಪನ್ಮೂಲ ವ್ಯಕ್ತಿಗಳ ಹೆಸರುಗಳು ಇನ್ನೂ ಅಧಿಕೃತವಾಗಿಲ್ಲ ಎಂದು ತಿಳಿದು ಬಂದಿದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಆಯ್ಕೆ ಮಾಡಿರುವ ವ್ಯಕ್ತಿಗಳು ಧಾರ್ಮಿಕ ಪ್ರತಿನಿಧಿಗಳು, ವಿವಾದಾಸ್ಪದ ವ್ಯಕ್ತಿಗಳು ಆಗಿರುವ ಹಿನ್ನೆಲೆಯಲ್ಲಿ ಪ್ರವಚನವನ್ನು ಕೈ ಬಿಡಬೇಕು ಎಂದು ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ವಲಯ ಒಕ್ಕೊರಲಿನಿಂದ ಆಗ್ರಹಿಸಿದೆ. ‘ಶಿಬಿರಕ್ಕೆ [&#8230;]]]></description>
										<content:encoded><![CDATA[
<p>ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ತರಬೇತಿ ಕೊಡುವ ನಿಟ್ಟಿನಲ್ಲಿ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಮಾಡಲಾಗಿತ್ತು. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಮಾಡಿರುವ ಆಯ್ಕೆಯ ಬಗ್ಗೆ ಆಕ್ಷೇಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸಧ್ಯಕ್ಕೆ ಸಂಪನ್ಮೂಲ ವ್ಯಕ್ತಿಗಳ ಹೆಸರುಗಳು ಇನ್ನೂ ಅಧಿಕೃತವಾಗಿಲ್ಲ ಎಂದು ತಿಳಿದು ಬಂದಿದೆ.</p>



<p>ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಆಯ್ಕೆ ಮಾಡಿರುವ ವ್ಯಕ್ತಿಗಳು ಧಾರ್ಮಿಕ ಪ್ರತಿನಿಧಿಗಳು, ವಿವಾದಾಸ್ಪದ ವ್ಯಕ್ತಿಗಳು ಆಗಿರುವ ಹಿನ್ನೆಲೆಯಲ್ಲಿ ಪ್ರವಚನವನ್ನು ಕೈ ಬಿಡಬೇಕು ಎಂದು ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ವಲಯ ಒಕ್ಕೊರಲಿನಿಂದ ಆಗ್ರಹಿಸಿದೆ.</p>



<p>‘ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಸಾಮಾಜಿಕ ವಲಯಗಳಲ್ಲಿ ಅನೇಕ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಈ ವಿಚಾರವನ್ನು ಮರು ಪರಿಶೀಲಿಸಬೇಕು’ ಎಂದು ಕೆಪಿಸಿಸಿ ವಕ್ತಾರರಾದ ರಮೇಶ್‌ ಬಾಬು ಅವರು ಖಾದರ್ ಅವರಿಗೆ ಆಗ್ರಹ ಪತ್ರ ಬರೆದಿದ್ದಾರೆ.</p>



<figure class="wp-block-image size-full"><img fetchpriority="high" decoding="async" width="640" height="480" src="https://peepalmedia.com/wp-content/uploads/2023/06/images-2023-06-23T140809.609.jpeg" alt="" class="wp-image-22647" srcset="https://peepalmedia.com/wp-content/uploads/2023/06/images-2023-06-23T140809.609.jpeg 640w, https://peepalmedia.com/wp-content/uploads/2023/06/images-2023-06-23T140809.609-300x225.jpeg 300w, https://peepalmedia.com/wp-content/uploads/2023/06/images-2023-06-23T140809.609-150x113.jpeg 150w" sizes="(max-width: 640px) 100vw, 640px" /></figure>



<p>ಪತ್ರ ಮಾತ್ರವಲ್ಲದೆ ರಮೇಶ್ ಬಾಬು ಅವರು ಸುಧೀರ್ಘ ಚರ್ಚೆ ನಡೆಸಿದ್ದು, ಸಭಾಧ್ಯಕ್ಷರು ಇನ್ನೂ ಆಯ್ಕೆ ಅಂತಿಮಗೊಳಿಸದ ಹಿನ್ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿಗಳ ಹೆಸರು ಇನ್ನೂ ಅಧಿಕೃತ ಅಲ್ಲ ಎಂದು ಪ್ರತಿಕ್ರಯಿಸಿದ್ದಾರೆ‌. ಅಷ್ಟೆ ಅಲ್ಲದೆ ಕರ್ನಾಟಕ ವಿಧಾನಸಭೆಯ ಪರಂಪರೆಗೆ ಅನುಗುಣವಾಗಿ ಮತ್ತು ರಾಜ್ಯದ ಸಂಸ್ಕೃತಿಗೆ ಅನುಗುಣವಾಗಿ ಎಲ್ಲರ ಭಾವನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.</p>



<p>ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಅಲ್ಲದೇ ಖಾದರ್‌ಗೆ ಪತ್ರ ಬರೆದಿರುವ ‘ಜಾಗೃತ ನಾಗರಿಕರು ಕರ್ನಾಟಕ’ದ ಕೆ. ಮರುಳಸಿದ್ದಪ್ಪ, ಜಿ. ರಾಮಕೃಷ್ಣ, ವಿಜಯಾ, ಎಸ್.ಜಿ. ಸಿದ್ದರಾಮಯ್ಯ,&nbsp;ರಾಜೇಂದ್ರ ಚೆನ್ನಿ, ಕೆ.ಎಸ್. ವಿಮಲಾ,&nbsp;ಬಿ. ಶ್ರೀಪಾದ ಭಟ್, ಟಿ. ಸುರೇಂದ್ರ ರಾವ್‌, ಬಂಜಗೆರೆ ಜಯಪ್ರಕಾಶ್, ವಿ.ಪಿ. ನಿರಂಜನಾರಾಧ್ಯ, ಮೀನಾಕ್ಷಿ ಬಾಳಿ, ಎನ್. ಗಾಯತ್ರಿ, ವಸುಂಧರಾ ಭೂಪತಿ, ‘‌ನೀವು ಆಹ್ವಾನಿಸಿರುವವರಲ್ಲಿ ಕೆಲವರು ಕೋಮುವಾದಿ ನೀತಿಗಳ ಸಮರ್ಥಕರು ಹಾಗೂ ಸ್ವಂತದ ವ್ಯವಹಾರಗಳಲ್ಲಿ ವಿವಾದಾಸ್ಪದರು. ಇಂಥವರ ಭಾಷಣಗಳು ಹೊಸ ಶಾಸಕರಿಗೆ ಯಾವ ಬಗೆಯ ಮಾದರಿಗಳನ್ನು ಒದಗಿಸಬಲ್ಲುದು ಎಂಬ ಬಗ್ಗೆ ನಾವು ಆತಂಕಿತರಾಗಿದ್ದೇವೆ. ಈ ಧಾರ್ಮಿಕ ಪ್ರತಿನಿಧಿಗಳ ಉಪನ್ಯಾಸಗಳನ್ನು ರದ್ದು ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>



<p>ಅಷ್ಟೆ ಅಲ್ಲದೆ &#8216;ಜಾತ್ಯತೀತತೆ ಮತ್ತು ಮತ ನಿರಪೇಕ್ಷತೆ ಎಂದರೆ ರಾಜಕೀಯದೊಡನೆ ಧರ್ಮವನ್ನು ಬೆರೆಸದೇ ದೂರ ಇಡುವುದು ಎಂಬುದನ್ನು ದಯವಿಟ್ಟು ಮನನ ಮಾಡಿಕೊಳ್ಳಬೇಕು. ಯಾರಾದರೂ ಶಾಸಕರು ವೈಯಕ್ತಿಕವಾಗಿ ಯಾವುದಾದರೊಂದು ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವುದು ಅವರ ವೈಯಕ್ತಿಕ ಆಯ್ಕೆ. ಆದರೆ, ಶಾಸನ ಸಭೆ ಪ್ರವೇಶಿಸುವ ಮೊದಲು ಅವರೆಲ್ಲ ಧಾರ್ಮಿಕ ಪ್ರೇರೇಪಣೆ ಪಡೆದು ಬರಬೇಕೆಂದು ಭಾವಿಸಿರುವುದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ’ ಎಂದು ಖಾದರ್ ಅವರಿಗೆ ಬರೆದ ಪತ್ರದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.</p>



<p><font style="vertical-align: inherit;"><font style="vertical-align: inherit;">ತರಬೇತಿ ಶಿಬಿರ ನಡೆಯುತ್ತಿರುವ ಕುರಿತು ಬುಧವಾರ ಮಾಹಿತಿ ನೀಡಿದ್ದ ವಿಧಾನಸಭಾಧ್ಯಕ್ಷ ಯು.ಟಿ. </font><font style="vertical-align: inherit;">ಖಾದರ್‌, &#8216;ಧರ್ಮಸ್ಥಳದ ಧರ್ಮಾಧಿಕಾರಿ ಡಿ. </font><font style="vertical-align: inherit;">ವೀರೇಂದ್ರ ಹೆಗ್ಗಡೆ, ಜಮಾತೆ ಇಸ್ಲಾಮಿ ಹಿಂದ್‌ನ ಮಹಮ್ಮದ್‌ ಕುಂ, ಗುರುರಾಜ </font></font>ಕರ್ಜಗಿ, ರಾಜಯೋಗಿನಿ ಬ್ರಹ್ಮಕುಮಾರಿ ಆಶಾ ದೀದಿ, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್ ಅವರಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ಆಯ್ಕೆಯಾಗಿದ್ದಾರೆ&#8217; ಎಂದು ತಿಳಿಸಿದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿ<font style="vertical-align: inherit;"><font style="vertical-align: inherit;">ಕ ವಲಯಗಳಲ್ಲಿ ತೀವ್ರ ಆಕ್ಷೇಪ ಬಂದ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.</font></font></p>
]]></content:encoded>
					
		
		
			</item>
		<item>
		<title>ನೂತನ ಸರ್ಕಾರದ ವಿಧಾನ ಸಭಾಧ್ಯಕ್ಷರ ಸ್ಥಾನಕ್ಕೆ ಹೆಸರು ಅಂತಿಮ</title>
		<link>https://peepalmedia.com/the-name-for-the-position-of-speaker-of-the-house-of-assembly-of-the-new-government-is-final/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 23 May 2023 03:51:18 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜ್ಯ]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[Speaker]]></category>
		<category><![CDATA[state government]]></category>
		<category><![CDATA[UT khadar]]></category>
		<guid isPermaLink="false">https://peepalmedia.com/?p=21852</guid>

					<description><![CDATA[ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರದ ವಿವಿಧ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಬಹುತೇಕ ಅಂತಿಮಗೊಂಡಿದೆ. ಕಾಂಗ್ರೆಸ್ ನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್ ಹಾಗೂ ಟಿ.ಬಿ.ಜಯಚಂದ್ರ ಅವರುಗಳ ಹೆಸರುಗಳನ್ನು ಸ್ಪೀಕರ್ ಆಯ್ಕೆಯ ಪಟ್ಟಿಗೆ ಹೈಕಮಾಂಡ್ ಸೂಚಿಸಿತ್ತು. ಆದರೆ ಈ ಮೂವರೂ ನಾಯಕರು ಸ್ಪೀಕರ್ ಸ್ಥಾನಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಾಂಗ್ರೆಸ್ ನ ಇನ್ನೋರ್ವ ಹಿರಿಯ ನಾಯಕ ಯು.ಟಿ.ಖಾದರ್ [&#8230;]]]></description>
										<content:encoded><![CDATA[
<p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಸರ್ಕಾರದ ವಿವಿಧ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಬಹುತೇಕ ಅಂತಿಮಗೊಂಡಿದೆ.</p>



<p>ಕಾಂಗ್ರೆಸ್ ನ ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್ ಹಾಗೂ ಟಿ.ಬಿ.ಜಯಚಂದ್ರ ಅವರುಗಳ ಹೆಸರುಗಳನ್ನು ಸ್ಪೀಕರ್ ಆಯ್ಕೆಯ ಪಟ್ಟಿಗೆ ಹೈಕಮಾಂಡ್ ಸೂಚಿಸಿತ್ತು. ಆದರೆ ಈ ಮೂವರೂ ನಾಯಕರು ಸ್ಪೀಕರ್ ಸ್ಥಾನಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಎಐಸಿಸಿ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಾಂಗ್ರೆಸ್ ನ ಇನ್ನೋರ್ವ ಹಿರಿಯ ನಾಯಕ ಯು.ಟಿ.ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಮನವೊಲಿಸಲು ಸಫಲರಾಗಿದ್ದಾರೆ.</p>



<figure class="wp-block-image size-full"><img decoding="async" width="715" height="429" src="https://peepalmedia.com/wp-content/uploads/2023/05/images-2023-05-23T092329.187.jpeg" alt="" class="wp-image-21856" srcset="https://peepalmedia.com/wp-content/uploads/2023/05/images-2023-05-23T092329.187.jpeg 715w, https://peepalmedia.com/wp-content/uploads/2023/05/images-2023-05-23T092329.187-300x180.jpeg 300w, https://peepalmedia.com/wp-content/uploads/2023/05/images-2023-05-23T092329.187-150x90.jpeg 150w, https://peepalmedia.com/wp-content/uploads/2023/05/images-2023-05-23T092329.187-696x418.jpeg 696w" sizes="(max-width: 715px) 100vw, 715px" /></figure>



<p>ಇಂದು ಬೆಳಿಗ್ಗೆ 11 ಗಂಟೆಯ ಅವಧಿಗೆ ಹಿರಿಯ ನಾಯಕ ಯುಟಿ ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಬಹುತೇಕ ಯುಟಿ ಖಾರದ್ ಅವರು ಅವಿರೋಧ ಆಯ್ಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ವಿಧಾನಸಭೆ ಬುಲೆಟಿನ್ ಹೊರಡಿಸಿದ್ದು, ಮಂಗಳವಾರ ಮಧ್ಯಾಹ್ನ 12 ಗಂಟೆಯ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ. ವಿಧಾನ ಸಭಾಧ್ಯಕ್ಷರ ಸ್ಥಾನಕ್ಕೆ ಇಲ್ಲಿಯವರೆಗೂ ಸಾಮಾನ್ಯವಾಗಿ ಅವಿರೋಧ ಆಯ್ಕೆಯಾಗಿರುವ ಸಂಪ್ರದಾಯವಿದೆ. ಆ ನಿಟ್ಟಿನಲ್ಲಿ ಯುಟಿ ಖಾದರ್ ವಿರುದ್ಧ ಯಾರೂ ಕಣಕ್ಕಿಳಿಯುವುದು ಅಸಾಧ್ಯ ಎನ್ನಲಾಗಿದೆ.</p>



<p>ಸತತವಾಗಿ 5 ನೇ ಬಾರಿಗೆ ಮಂಗಳೂರಿನಿಂದ ಶಾಸಕರಾಗಿ ಆಯ್ಕೆಯಾಗುತ್ತಿರುವ ಯುಟಿ ಖಾದರ್ 2013 ರ ಸಿದ್ದರಾಮಯ್ಯ ಸರ್ಕಾರ ಮತ್ತು ಆ ನಂತರದ ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ವಿವಿಧ ಉನ್ನತ ಖಾತೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದಾರೆ. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿಯವರ ಸರ್ಕಾರದ ಅವಧಿಯಲ್ಲೂ ವಿಧಾನಸಭಾ ಪ್ರತಿಪಕ್ಷದ ಉಪನಾಯಕರಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಯುಟಿ ಖಾದರ್ ಅವರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಮನವೊಲಿಸಲು ಸಫಲವಾಗಿದೆ.</p>
]]></content:encoded>
					
		
		
			</item>
		<item>
		<title>ಇದು ಯಾವ ರೀತಿಯ ಪ್ರಜಾಪ್ರಭುತ್ವ ಸರ್ಕಾರ ? : ಯು.ಟಿ. ಖಾದರ್‌</title>
		<link>https://peepalmedia.com/idu-yava-reethiya-prajaprabhuthva-sarkara-ut-khadar/</link>
		
		<dc:creator><![CDATA[Peepal Media]]></dc:creator>
		<pubDate>Sat, 30 Jul 2022 09:23:33 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[BASAVARAJ BOMMAYI]]></category>
		<category><![CDATA[bjp]]></category>
		<category><![CDATA[breaking news]]></category>
		<category><![CDATA[Fazil]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[managlore]]></category>
		<category><![CDATA[mangalore]]></category>
		<category><![CDATA[masud]]></category>
		<category><![CDATA[murder]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[praveen nettaru]]></category>
		<category><![CDATA[state politics]]></category>
		<category><![CDATA[UT khadar]]></category>
		<guid isPermaLink="false">https://peepalmedia.com/?p=304</guid>

					<description><![CDATA[ಮಂಗಳೂರು : ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸರ್ಕಾರ ಹತ್ಯೆಯಾದ ಪ್ರವೀಣ್‌ ಕುಟುಂಬಕ್ಕೆ ಪರಿಹಾರ ನೀಡಿದ್ದು, ಇದೇ ವೇಳೆ ಹತ್ಯೆಯಾಗಿರುವ ಮಸೂಧ್‌ ಮತ್ತು ಫಾಝಿಲ್‌ ಕುಟುಂಬಕ್ಕೆ ಪರಿಹಾರ ನೀಡದಿರುವುದನ್ನ ಖಂಡಿಸಿ ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ. ಖಾದರ್, &#160;ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. &#160;ಪ್ರವೀಣ್‌ ಹತ್ಯೆಯಾದ ಬಳಿಕ ಬಸವರಾಜ್‌ ಬೊಮ್ಮಾಯಿ ಮನೆಗೆ ತೆರಳಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಕುಟುಂಬಕ್ಕೆ&#160; 25 ಲಕ್ಷ ಹಣ ಪರಿಹಾರ ನೀಡಿದ್ದಾರೆ. ಈ ವಿಚಾರವಾಗಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ʼಖಾದರ್‌ʼ ಒಬ್ಬ ರಾಜ್ಯದ ಮುಖ್ಯಮಂತ್ರಿ, [&#8230;]]]></description>
										<content:encoded><![CDATA[
<p class="has-medium-font-size"><strong>ಮಂಗಳೂರು :</strong> ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸರ್ಕಾರ ಹತ್ಯೆಯಾದ ಪ್ರವೀಣ್‌ ಕುಟುಂಬಕ್ಕೆ ಪರಿಹಾರ ನೀಡಿದ್ದು, ಇದೇ ವೇಳೆ ಹತ್ಯೆಯಾಗಿರುವ ಮಸೂಧ್‌ ಮತ್ತು ಫಾಝಿಲ್‌ ಕುಟುಂಬಕ್ಕೆ ಪರಿಹಾರ ನೀಡದಿರುವುದನ್ನ ಖಂಡಿಸಿ ವಿಧಾನಸಭೆಯ ಕಾಂಗ್ರೆಸ್ ಉಪನಾಯಕ ಯು.ಟಿ. ಖಾದರ್, &nbsp;ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>



<p class="has-medium-font-size">&nbsp;ಪ್ರವೀಣ್‌ ಹತ್ಯೆಯಾದ ಬಳಿಕ ಬಸವರಾಜ್‌ ಬೊಮ್ಮಾಯಿ ಮನೆಗೆ ತೆರಳಿದ್ದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಜೊತೆಗೆ ಕುಟುಂಬಕ್ಕೆ&nbsp; 25 ಲಕ್ಷ ಹಣ ಪರಿಹಾರ ನೀಡಿದ್ದಾರೆ. ಈ ವಿಚಾರವಾಗಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ʼಖಾದರ್‌ʼ ಒಬ್ಬ ರಾಜ್ಯದ ಮುಖ್ಯಮಂತ್ರಿ, &nbsp;ಈ ರೀತಿಯ ಘಟನೆಗಳಾದಾಗ ಒಂದು ಕುಟುಂಬಕ್ಕೆ ಮಾತ್ರ ಸಮಾಧಾನ ಹೇಳುವುದು ಪರಿಹಾರ ಘೋಷಿಸುವುದು, ಇನ್ನೊಬ್ಬರಿಗೆ ಪರಿಹಾರ ಘೋಷಿಸದೆ ಇರುವಂತದ್ದು ಎಷ್ಟರಮಟ್ಟಿಗೆ ಸರಿ, ಇದು ಯಾವ ರೀತಿಯ ಪ್ರಜಾಪ್ರಭುತ್ವ ಸರ್ಕಾರ ಎಂದು&nbsp; ಕಿಡಿಕಾರಿದ್ದಾರೆ. ಪ್ರತಿಯೊಬ್ಬ ತಾಯಿಗೂ ತನ್ನ ಮಕ್ಕಳನ್ನ ಕಳೆದುಕೊಂಡಾಗ ನೋವಾಗುತ್ತದೆ. ಅದರ ಬದಲು ಪ್ರವೀಣ್‌ ತಾಯಿಗೆ ಬೇರೆ ಮಸೂಧ್‌ ಮತ್ತು ಫಾಝಿಲ್‌ ತಾಯಂದಿರಿಗೆ ಬೇರೆ ನೋವು ಇರುವುದಿಲ್ಲ. ಎಲ್ಲಾ ತಾಯಂದಿರಿಗೂ ಸಮಾನ ನೋವಿರುತ್ತದೆ, ಆದರೆ ಬೊಮ್ಮಾಯಿ ಅವರು ಒಂದು ಕುಟುಂಬಕ್ಕೆ ಮಾತ್ರ ಸಮಾಧಾನ ಹಾಗೂ ಪರಿಹಾರ ನೀಡಿ ಉಳಿದ ಕುಟುಂಬಗಳಿಗೆ ಏನೂ ಹೇಳದೆ ಹೋಗಿರುವುದು ಸಮಂಜಸವಲ್ಲ. ಹಾಗಾಗಿ ಉಳಿದ ಕುಟುಂಬಗಳಿಗೂ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು. </p>
]]></content:encoded>
					
		
		
			</item>
	</channel>
</rss>
