<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Uttarakashi &#8211; Peepal Media</title>
	<atom:link href="https://peepalmedia.com/tag/uttarakashi/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Tue, 28 Nov 2023 11:24:00 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>Uttarakashi &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಿಲ್ಕ್ಯಾರಾ ಸುರಂಗ ದುರಂತ: ಸಿಲುಕಿರುವ ಕಾರ್ಮಿಕರನ್ನು ಹೊರತರಲು ಕ್ಷಣಗಣನೆ</title>
		<link>https://peepalmedia.com/rescuers-break-through-silkyara-tunnel-rubble/</link>
		
		<dc:creator><![CDATA[Charan Aivarnad]]></dc:creator>
		<pubDate>Tue, 28 Nov 2023 11:16:07 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[breaking news]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Silkyara]]></category>
		<category><![CDATA[Silkyara tunne]]></category>
		<category><![CDATA[state politics]]></category>
		<category><![CDATA[trending news]]></category>
		<category><![CDATA[Uttarakashi]]></category>
		<category><![CDATA[Uttarakhand]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=33206</guid>

					<description><![CDATA[ಉತ್ತರಕಾಶಿ: ಕಳೆದ 16 ದಿನಗಳಿಂದ 41 ಕಾರ್ಮಿಕರು ಸಿಲುಕಿ ಹಾಕಿಕೊಂಡಿರುವ ಸಿಲ್ಕ್ಯಾರಾ ಸುರಂಗವನ್ನು‌ ಮಂಗಳವಾರ ರಕ್ಷಣಾ ಕಾರ್ಯಕರ್ತರು 60 ಮೀಟರ್ ಕೊರೆದಿದ್ದಾರೆ. ರಾಜ್ಯ ಸರ್ಕಾರದ ಮಾಹಿತಿ ಇಲಾಖೆ ಮುಖ್ಯಸ್ಥ ಬನ್ಸಿ ಧರ್ ತಿವಾರಿ ಈ ಪ್ರಕ್ರಿಯೆ ಮುಗಿದಿರುವ ಬಗ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಈ ಕೊರೆಯಲಾದ ಪ್ಯಾಸೇಜ್‌ಗೆ ಎಸ್ಕೇಪ್ ಪೈಪ್ ಅಳವಡಿಸುವ ಪ್ರಕ್ರಿಯೆ ಪೂರ್ಣಗೊಂಡಿರುವ ಬಗ್ಗೆ ತಿಳಿಸಿದ್ದಾರೆ. &#8220;ಶೀಘ್ರದಲ್ಲೇ ಎಲ್ಲಾ ಕಾರ್ಮಿಕರನ್ನು ಹೊರತರಲಾಗುವುದು&#8221; ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೂ [&#8230;]]]></description>
										<content:encoded><![CDATA[
<p><strong>ಉತ್ತರಕಾಶಿ: </strong>ಕಳೆದ 16 ದಿನಗಳಿಂದ 41 ಕಾರ್ಮಿಕರು ಸಿಲುಕಿ ಹಾಕಿಕೊಂಡಿರುವ ಸಿಲ್ಕ್ಯಾರಾ ಸುರಂಗವನ್ನು‌ ಮಂಗಳವಾರ ರಕ್ಷಣಾ ಕಾರ್ಯಕರ್ತರು 60 ಮೀಟರ್ ಕೊರೆದಿದ್ದಾರೆ. ರಾಜ್ಯ ಸರ್ಕಾರದ ಮಾಹಿತಿ ಇಲಾಖೆ ಮುಖ್ಯಸ್ಥ ಬನ್ಸಿ ಧರ್ ತಿವಾರಿ ಈ ಪ್ರಕ್ರಿಯೆ ಮುಗಿದಿರುವ ಬಗ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>



<p>ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಈ ಕೊರೆಯಲಾದ ಪ್ಯಾಸೇಜ್‌ಗೆ ಎಸ್ಕೇಪ್ ಪೈಪ್ ಅಳವಡಿಸುವ ಪ್ರಕ್ರಿಯೆ ಪೂರ್ಣಗೊಂಡಿರುವ ಬಗ್ಗೆ ತಿಳಿಸಿದ್ದಾರೆ. &#8220;ಶೀಘ್ರದಲ್ಲೇ ಎಲ್ಲಾ ಕಾರ್ಮಿಕರನ್ನು ಹೊರತರಲಾಗುವುದು&#8221; <a href="https://x.com/pushkardhami/status/1729419203395125658?s=20">ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.</a></p>



<p>ಇದಕ್ಕೂ ಮುನ್ನ ಎನ್‌ಎಚ್‌ಐಡಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹಮೂದ್ ಅಹ್ಮದ್ ಈ ಕೊರೆಯುವ ಕೆಲಸ ಮುಗಿದಿದೆ ಎಂದು ತಕ್ಷಣ ಖಚಿತಪಡಿಸಲಿಲ್ಲ. ಪೈಪ್‌ನ ಕೊನೆಯ ಭಾಗವನ್ನು ತಳ್ಳಲಾಗುತ್ತಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದರು.</p>



<p>ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಕಳೆದ ಹಲವು ದಿನಗಳಿಂದ ಕೊರೆಯಲಾದ ಮಾರ್ಗಕ್ಕೆ ಸ್ಟೀಲ್‌ ಚ್ಯೂಟ್‌ ತಳ್ಳಿ ಒಬ್ಬೊಬ್ಬರಾಗಿ ಕಾರ್ಮಿಕರನ್ನು ಹೊರತರುವ ನಿರೀಕ್ಷೆಯಿದೆ.</p>



<p>ಪ್ರತಿಯೊಬ್ಬ ಕಾರ್ಮಿಕನೂ ಚಕ್ರದ ಸ್ಟ್ರೆಚರ್ ಮೇಲೆ ಮಲಗುತ್ತಾನೆ, ಅದನ್ನು ರಕ್ಷಣಾ ತಂಡದವರು ಹೊರಗೆ ಹಗ್ಗಗಳನ್ನು ಬಳಸಿ ಎಳೆಯುತ್ತಾರೆ. ಇದು ಸುಮಾರು ಎರಡು ಅಥವಾ ಮೂರು ಗಂಟೆಗಳನ್ನು ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ.</p>



<p>ಚಾರ್ ಧಾಮ್ ಮಾರ್ಗದ ವಿಪತ್ತು ನಡೆದಿರುವ ಸ್ಥಳದಲ್ಲಿ ಈ ಸುದ್ದಿ ಹೊರಬೀಳುವ ಗಂಟೆಗಳ ಮುಂಚೆಯೇ ನಿರೀಕ್ಷೆಯ ವಾತಾವರಣ ನಿರ್ಮಾಣವಾಗಿತ್ತು. ಸ್ಟೀಲ್‌ ಚ್ಯೂಟ್‌ನಿಂದ ಒಂದೊಂದಾಗಿ ಹೊರಬರುವ ಕಾರ್ಮಿಕರನ್ನು ನೇರವಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬ್ಯುಲೆನ್ಸ್‌ಗಳು ಸುರಂಗದ ಬಾಯಿಯ ಬಳಿ ಸಾಲುಗಟ್ಟಿ ನಿಂತಿದ್ದವು.</p>



<p>ಆಂಬ್ಯುಲೆನ್ಸ್‌ಗಳ ಸಂಚಾರವನ್ನು ಸುಲಭಗೊಳಿಸಲು ಮಣ್ಣಿನ ರಸ್ತೆಯನ್ನು ವಿಸ್ತರಿಸಲಾಗಿದೆ. ಸುರಂಗದ ಬಾಯಿಯೊಳಗೆ ಸ್ಟ್ರೆಚರ್‌ಗಳನ್ನು ಕಳುಹಿಸಲಾಗುತ್ತಿದೆ.</p>



<p>ಎಲ್ &amp; ಟಿ ತಂಡದ ನಾಯಕ ಕ್ರಿಸ್ ಕೂಪರ್ &#8220;ಅವರು ಸಂಜೆ 5 ಗಂಟೆಯ ಮೊದಲು ಹೊರಬರುವ ಸಾಧ್ಯತೆಯಿದೆ&#8221; ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಸುರಂಗದ ಮೇಲಿನಿಂದ ಕಾರ್ಮಿಕರನ್ನು ತಲುಪಲು ಲಂಬಾಕಾರದ ಡ್ರಿಲ್ಲಿಂಗ್, ಏಕಕಾಲದಲ್ಲಿ ಕೊರೆಯುವ ಕಾರ್ಯಾಚರಣೆಯನ್ನು ಈಗ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>



<p>ಸೀಮಿತ ಜಾಗದಲ್ಲಿ ಕೈಯಲ್ಲಿ ಹಿಡಿಯುವ ಉಪಕರಣಗಳನ್ನು ಬಳಸಿಕೊಂಡು ಕೊನೆಯ ಹಂತದ ಕೊರೆಯುವಿಕೆಯನ್ನು ಮುಗಿಸಲು ಹನ್ನೆರಡು ಗಣಿಗಾರಿಕೆ ತಜ್ಞರನ್ನು ಕರೆತರಲಾಗಿದೆ.</p>



<p>ರಕ್ಷಿಸಲ್ಪಟ್ಟ ಕಾರ್ಮಿಕರಿಗಾಗಿ ಸಿಲ್ಕ್ಯಾರಾದಿಂದ ಸುಮಾರು 30 ಕಿಮೀ ದೂರದಲ್ಲಿರುವ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ 41 ಆಮ್ಲಜನಕ ಸಹಿತ ಹಾಸಿಗೆಗಳನ್ನು ಹೊಂದಿರುವ ವಿಶೇಷ ವಾರ್ಡ್ ಅನ್ನು ದಿನಗಳ ಹಿಂದೆಯೇ ಸಿದ್ಧಪಡಿಸಲಾಗಿತ್ತು.</p>
]]></content:encoded>
					
		
		
			</item>
		<item>
		<title>ಸುರಂಗ ಕುಸಿತ : ಬೆಳಿಗ್ಗೆ 9 ಗಂಟೆಯ ವೇಳೆಗೆ 41 ಕಾರ್ಮಿಕರ ರಕ್ಷಣೆ ಸಾಧ್ಯತೆ &#8211; ರಕ್ಷಣಾ ಅಧಿಕಾರಿಗಳು</title>
		<link>https://peepalmedia.com/41-workers-are-likely-to-be-rescued-by-9-am/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 23 Nov 2023 01:34:21 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[india]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Rescue]]></category>
		<category><![CDATA[Tunnel collapse]]></category>
		<category><![CDATA[Uttarakashi]]></category>
		<category><![CDATA[Uttarakhand]]></category>
		<guid isPermaLink="false">https://peepalmedia.com/?p=32983</guid>

					<description><![CDATA[ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಗುರುವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಹೊರತರುವ ನಿರೀಕ್ಷೆಯಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಬುಧವಾರ ಸಂಜೆಯಿಂದಲೇ ಹೊಸ ಅತ್ಯಾಧುನಿಕ ತಂತ್ರಜ್ಞಾನದ ಡ್ರಿಲ್ಲಿಂಗ್ ಮಷಿನ್ ನಿಂದ ಕಾರ್ಮಿಕರಿಗೆ ಸಮೀಪಿಸುವ ಕಾರ್ಯ ಭರದಿಂದ ಸಾಗಿದೆ. ಕಮಾಂಡೆಂಟ್ ನೇತೃತ್ವದ 15 ಜನರ ಎನ್‌ಡಿಆರ್‌ಎಫ್ ತಂಡವು ಕಳೆದ 10 ದಿನಗಳಿಂದ ಕುಸಿದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಒಬ್ಬೊಬ್ಬರಾಗಿ ಹೊರತೆಗೆಯಲು ಕಾರ್ಯ ನಿರ್ವಹಿಸುತ್ತಿದೆ.&#160;ಕಾರ್ಮಿಕರು ಸಿಲುಕಿರುವ ಅವಶೇಷಗಳ ಇನ್ನೊಂದು ಬದಿಗೆ [&#8230;]]]></description>
										<content:encoded><![CDATA[
<p>ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಗುರುವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಹೊರತರುವ ನಿರೀಕ್ಷೆಯಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಬುಧವಾರ ಸಂಜೆಯಿಂದಲೇ ಹೊಸ ಅತ್ಯಾಧುನಿಕ ತಂತ್ರಜ್ಞಾನದ ಡ್ರಿಲ್ಲಿಂಗ್ ಮಷಿನ್ ನಿಂದ ಕಾರ್ಮಿಕರಿಗೆ ಸಮೀಪಿಸುವ ಕಾರ್ಯ ಭರದಿಂದ ಸಾಗಿದೆ.</p>



<p>ಕಮಾಂಡೆಂಟ್ ನೇತೃತ್ವದ 15 ಜನರ ಎನ್‌ಡಿಆರ್‌ಎಫ್ ತಂಡವು ಕಳೆದ 10 ದಿನಗಳಿಂದ ಕುಸಿದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಒಬ್ಬೊಬ್ಬರಾಗಿ ಹೊರತೆಗೆಯಲು ಕಾರ್ಯ ನಿರ್ವಹಿಸುತ್ತಿದೆ.&nbsp;ಕಾರ್ಮಿಕರು ಸಿಲುಕಿರುವ ಅವಶೇಷಗಳ ಇನ್ನೊಂದು ಬದಿಗೆ ಪೈಪ್ ಮೂಲಕ ಹೇಗೆ ಹೋಗುತ್ತಾರೆ ಎಂಬುದರ ಕುರಿತು ಎನ್‌ಡಿಆರ್‌ಎಫ್ ಜವಾನರು ಅಣಕು ಡ್ರಿಲ್ ನಡೆಸಿದ್ದಾರೆ ಎಂದು ಎನ್‌ಡಿಆರ್‌ಎಫ್ ಸೆಕೆಂಡ್ ಇನ್ ಕಮಾಂಡ್ ರವಿಶಂಕರ್ ಬಧಾನಿ ಪಿಟಿಐಗೆ ತಿಳಿಸಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr"><a href="https://twitter.com/hashtag/WATCH?src=hash&amp;ref_src=twsrc%5Etfw">#WATCH</a> | Uttarkashi (Uttarakhand) tunnel rescue | Girish Singh Rawat, one of the members of the rescue operation team says, &quot; Rescue operation is almost in the last stage, I hope the result will come in 1-2 hours&#8230;pipeline is being inserted to take out the workers&#8230;the steel… <a href="https://t.co/Wp9EL5yZ5n">pic.twitter.com/Wp9EL5yZ5n</a></p>&mdash; ANI (@ANI) <a href="https://twitter.com/ANI/status/1727460346523427166?ref_src=twsrc%5Etfw">November 22, 2023</a></blockquote><script async src="https://platform.twitter.com/widgets.js" charset="utf-8"></script>
</div></figure>



<p>41 ಜನ ಕಾರ್ಮಿಕರ ರಕ್ಷಣೆಯ ನಂತರ ರಾಜ್ಯಕ್ಕೆ ಸೇರಿದ ಕಾರ್ಮಿಕರನ್ನು ಏರ್‌ಲಿಫ್ಟ್ ಮಾಡಲು ಜಾರ್ಖಂಡ್ ಸರ್ಕಾರ ಯೋಜಿಸಿದೆ.&nbsp;ಜಾರ್ಖಂಡ್‌ ಗೆ ಸೇರಿದ ಸುಮಾರು 15 ಕಾರ್ಮಿಕರು ಸುರಂಗದಲ್ಲಿ ಸಿಲುಕಿದ್ದಾರೆ.&nbsp;ರಕ್ಷಣಾ ಸ್ಥಳದಲ್ಲಿ ಹಾಜರಿದ್ದ ಜಾರ್ಖಂಡ್ ಕಾರ್ಮಿಕ ಇಲಾಖೆಯ ಅಧಿಕಾರಿಯೊಬ್ಬರು ಪಿಟಿಐಗೆ ರಾಜ್ಯ ಸರ್ಕಾರವು ತಮ್ಮ ರಾಜ್ಯಕ್ಕೆ ಸೇರಿದ ಕಾರ್ಮಿಕರನ್ನು ವಿಮಾನದಲ್ಲಿ ಕರೆತರಲು ಯೋಜಿಸಿದೆ ಎಂದು ತಿಳಿಸಿದ್ದಾರೆ.&nbsp;ರಕ್ಷಿಸಲ್ಪಟ್ಟ ಕಾರ್ಮಿಕರನ್ನು ಉತ್ತರಕಾಶಿಯ ಚಿಲ್ಯಾನಿಸೌರ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗುವುದು, ಅಲ್ಲಿ 41 ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಹೊಂದಿರುವ ಪ್ರತ್ಯೇಕ ವಾರ್ಡ್ ಅನ್ನು ಸಿದ್ಧಪಡಿಸಲಾಗಿದೆ ಎಂದು ಇನ್ನೊಬ್ಬ ಅಧಿಕಾರಿ ತಿಳಿಸಿದ್ದಾರೆ.</p>



<p>ಉತ್ತರಕಾಶಿ ಸುರಂಗ ಕುಸಿತದ ದುರ್ಘಟನೆ ನಂತರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ದೇಶದಾದ್ಯಂತ ನಿರ್ಮಾಣ ಹಂತದಲ್ಲಿರುವ ಎಲ್ಲಾ 29 ಸುರಂಗಗಳ ಸುರಕ್ಷತೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೈಗೊಳ್ಳಲಿದೆ ಎಂದು ಪ್ರಾಧಿಕಾರ ಹೇಳಿದೆ.&nbsp;&#8220;ಎನ್‌ಎಚ್‌ಎಐ ಅಧಿಕಾರಿಗಳು, ದೆಹಲಿ ಮೆಟ್ರೋ ರೈಲು ನಿಗಮದ (ಡಿಎಂಆರ್‌ಸಿ) ತಜ್ಞರ ತಂಡ ಮತ್ತು ಇತರ ಸುರಂಗ ತಜ್ಞರೊಂದಿಗೆ ಕಾಮಗಾರಿ ಹಂತದಲ್ಲಿರುವ ಸುರಂಗ ಯೋಜನೆಗಳನ್ನು ಪರಿಶೀಲಿಸಲಿದ್ದಾರೆ ಮತ್ತು ಈ ಬಗ್ಗೆ ಏಳು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದಾರೆ&#8221; ಎಂದು ಹೇಳಿಕೆ ತಿಳಿಸಿದೆ.</p>
]]></content:encoded>
					
		
		
			</item>
		<item>
		<title>ಉತ್ತರಕಾಶಿ ಸುರಂಗ ಕುಸಿತ : &#8216;ಕಾರ್ಮಿಕರ ರಕ್ಷಣೆಗೆ ಇನ್ನೂ 15 ದಿನ ಬೇಕಾಗಬಹುದು&#8217; ಎಂದ ಅಧಿಕಾರಿಗಳು</title>
		<link>https://peepalmedia.com/officials-said-that-another-15-days-may-be-required-for-the-protection-of-workers/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 22 Nov 2023 06:10:59 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[india]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Tunnel collapse]]></category>
		<category><![CDATA[Uttarakashi]]></category>
		<category><![CDATA[Uttarakhand]]></category>
		<guid isPermaLink="false">https://peepalmedia.com/?p=32889</guid>

					<description><![CDATA[ಉತ್ತರಾಕಾಂಡದ ಉತ್ತರ ಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 10 ದಿನ ಕಳೆದರೂ ಕಾರ್ಮಿಕರ ರಕ್ಷಣೆ ಆಗಿಲ್ಲ. ಸುಮಾರು 60 ಅಡಿ ಉದ್ದಕ್ಕೆ ಕುಸಿದಿರಬಹುದಾದ ಸುರಂಗದಲ್ಲಿ 41 ಕಾರ್ಮಿಕರು ಸಿಲುಕಿಕೊಂಡಿದ್ದು, ಅವರ ರಕ್ಷಣೆಗೆ ಇನ್ನೂ 15 ದಿನಗಳು ಆಗಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕಳೆದ ಶುಕ್ರವಾರ ಮಧ್ಯಾಹ್ನ ಆಗರ್ ಯಂತ್ರ ಉಪಯೋಗಿಸಿ ಸುರಂಗವನ್ನು ಕೊರೆದು ಕಾರ್ಮಿಕರ ರಕ್ಷಣೆಗೆ ಮುಂದಾಗಿತ್ತು. ಆದರೆ ಮಧ್ಯದಲ್ಲಿ ದೊಡ್ಡದಾದ ಕಲ್ಲು ಬಂಡೆ ಬಂದ ಹಿನ್ನೆಲೆಯಲ್ಲಿ ಕಾರ್ಮಿಕರು ಇರುವ ಜಾಗದಲ್ಲೇ ಭೂಮಿ ಕುಸಿಯಬಹುದಾದ [&#8230;]]]></description>
										<content:encoded><![CDATA[
<p>ಉತ್ತರಾಕಾಂಡದ ಉತ್ತರ ಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 10 ದಿನ ಕಳೆದರೂ ಕಾರ್ಮಿಕರ ರಕ್ಷಣೆ ಆಗಿಲ್ಲ. ಸುಮಾರು 60 ಅಡಿ ಉದ್ದಕ್ಕೆ ಕುಸಿದಿರಬಹುದಾದ ಸುರಂಗದಲ್ಲಿ 41 ಕಾರ್ಮಿಕರು ಸಿಲುಕಿಕೊಂಡಿದ್ದು, ಅವರ ರಕ್ಷಣೆಗೆ ಇನ್ನೂ 15 ದಿನಗಳು ಆಗಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>



<p>ಕಳೆದ ಶುಕ್ರವಾರ ಮಧ್ಯಾಹ್ನ ಆಗರ್ ಯಂತ್ರ ಉಪಯೋಗಿಸಿ ಸುರಂಗವನ್ನು ಕೊರೆದು ಕಾರ್ಮಿಕರ ರಕ್ಷಣೆಗೆ ಮುಂದಾಗಿತ್ತು. ಆದರೆ ಮಧ್ಯದಲ್ಲಿ ದೊಡ್ಡದಾದ ಕಲ್ಲು ಬಂಡೆ ಬಂದ ಹಿನ್ನೆಲೆಯಲ್ಲಿ ಕಾರ್ಮಿಕರು ಇರುವ ಜಾಗದಲ್ಲೇ ಭೂಮಿ ಕುಸಿಯಬಹುದಾದ ಸಾಧ್ಯತೆ ಕಂಡುಬಂದ ಕಾರಣ ಅದನ್ನು ಅಲ್ಲಿಗೇ ನಿಲ್ಲಿಸಲಾಯಿತು.</p>



<p>ಮುಂದಿನ ಎರಡು ದಿನಗಳಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಹಾಯದಿಂದ ಕಾರ್ಮಿಕರನ್ನು ಹೊರತರುವ ಎಲ್ಲಾ ಪ್ರಯತ್ನಗಳು ನಡೆದಿವೆ. ಸಧ್ಯಕ್ಕೆ ಡ್ರಿಲ್ಲಿಂಗ್ ಮಷಿನ್ ಸೂಕ್ತ ಆಯ್ಕೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಅದೂ ಕೂಡ ಕೆಲಸ ಮಾಡದಿದ್ದರೆ ಕಾರ್ಮಿಕರ ರಕ್ಷಣೆಗೆ ಇನ್ನೂ 15 ದಿನವರೆಗೂ ಹಿಡಿಯಬಹುದು ಎಂದು&nbsp;ಹೇಳಲಾಗಿದೆ.</p>



<p>ಈಗಾಗಲೇ 6 ಇಂಚಿನ ಪೈಪ್ ಮೂಲಕ 41 ಕಾರ್ಮಿಕರು ಸುರಕ್ಷತೆಯಿಂದ ಇರುವ ಬಗ್ಗೆ ವಿಡಿಯೋ ಸಾಕ್ಷಿ ಹೊರ ಬಿದ್ದಿದೆ. ಹಾಗೆಯೇ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಚಪಾತಿ, ವೆಜ್​ ಪಲಾವ್, ಮಟರ್​ ಪನೀರ್​ನಂತಹ ಬೇಯಿಸಿದ ಆಹಾರ ಪದಾರ್ಥಗಳನ್ನು 6 ಇಂಚಿನ ಪೈಪ್ ಮೂಲಕ ರವಾನಿಸಲಾಗುತ್ತಿದೆ. ಆಹಾರ ಪದಾರ್ಥಗಳ ಜೊತೆಗೆ ಆಕ್ಸಿಜನ್ ಮತ್ತು ನೀರನ್ನು ಕಳಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>



<p>ಕಳೆದ ಏಳೆಂಟು ದಿನಗಳಿಂದ ಘಟನಾ ಸ್ಥಳದಲ್ಲಿ ಎನ್​ಡಿಆರ್​ಎಫ್ , ಎಸ್​ಡಿಆರ್​ಎಫ್, ಐಟಿಬಿಪಿ, ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಕಾರ್ಮಿಕರ ರಕ್ಷಣೆಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.</p>
]]></content:encoded>
					
		
		
			</item>
	</channel>
</rss>
