<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>VARANASI &#8211; Peepal Media</title>
	<atom:link href="https://peepalmedia.com/tag/varanasi/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 17 Feb 2024 08:14:45 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>VARANASI &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಜ್ಞಾನವಾಪಿ ಮಸೀದಿ ತೀರ್ಪು: ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಿರ್ಧಾರ</title>
		<link>https://peepalmedia.com/gyanavapi-mosque-verdict-reappeal-to-high-court/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 02 Feb 2024 08:55:39 +0000</pubDate>
				<category><![CDATA[ದೇಶ]]></category>
		<category><![CDATA[ayodhya]]></category>
		<category><![CDATA[Bangalore]]></category>
		<category><![CDATA[breaking news]]></category>
		<category><![CDATA[gyanavapi]]></category>
		<category><![CDATA[gyanavapi mosque]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[kashi]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[ram]]></category>
		<category><![CDATA[state politics]]></category>
		<category><![CDATA[temple]]></category>
		<category><![CDATA[trend]]></category>
		<category><![CDATA[trending news]]></category>
		<category><![CDATA[VARANASI]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35575</guid>

					<description><![CDATA[ವಾರಾಣಾಸಿ: ಜ್ಞಾನವಾಪಿ ಮಸೀದಿದ ಆವರಣದಲ್ಲಿರುವ ‘ವ್ಯಾಸ್ ಕಾ ತೆಖಾನಾ’ದ ಒಳಗೆ ಹಿಂದೂ ಭಕ್ತರು ಪೂಜೆ ಸಲ್ಲಿಸಲು ಅವಕಾಶ ನೀಡಿ ವಾರಾಣಾಸಿ ಕೋರ್ಟ್ ಬುಧವಾರ ನೀಡಿತ್ತು. ಈ ತೀರ್ಪಿನ ವಿರುದ್ಧ ಅಲಹಾಬಾದ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಮುಸ್ಲಿಂ ಪರ ವಕೀಲ ಅಖ್ಲಾಕ್ ಅಹ್ಮದ್ ತಿಳಿಸಿದ್ದಾರೆ.ವಾರಣಾಸಿ ಕೋರ್ಟ್ನ ಈಗಿನ ತೀರ್ಪು 2022ರ ಅಡ್ವೊಕೇಟ್ ಕಮಿಷನರ್ ವರದಿ, ಎಎಸ್ಐ ವರದಿ ಮತ್ತು ನಮ್ಮ ಪರವಾಗಿ 1937ರಲ್ಲಿ ನೀಡಲಾಗಿದ್ದ ತೀರ್ಪನ್ನು ಕಡೆಗಣಿಸಿದೆ. 1993ಕ್ಕೆ ಮುನ್ನ ಇಲ್ಲಿ ಪ್ರಾರ್ಥನೆ ನಡೆಯುತ್ತಿತ್ತು ಎನ್ನುವುದನ್ನು ಸಾಬೀತುಪಡಿಸುವ [&#8230;]]]></description>
										<content:encoded><![CDATA[
<p><strong>ವಾರಾಣಾಸಿ: </strong>ಜ್ಞಾನವಾಪಿ ಮಸೀದಿದ ಆವರಣದಲ್ಲಿರುವ ‘ವ್ಯಾಸ್ ಕಾ ತೆಖಾನಾ’ದ ಒಳಗೆ ಹಿಂದೂ ಭಕ್ತರು ಪೂಜೆ ಸಲ್ಲಿಸಲು ಅವಕಾಶ ನೀಡಿ ವಾರಾಣಾಸಿ ಕೋರ್ಟ್ ಬುಧವಾರ ನೀಡಿತ್ತು. ಈ ತೀರ್ಪಿನ ವಿರುದ್ಧ ಅಲಹಾಬಾದ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಮುಸ್ಲಿಂ ಪರ ವಕೀಲ ಅಖ್ಲಾಕ್ ಅಹ್ಮದ್ ತಿಳಿಸಿದ್ದಾರೆ.<br>ವಾರಣಾಸಿ ಕೋರ್ಟ್ನ ಈಗಿನ ತೀರ್ಪು 2022ರ ಅಡ್ವೊಕೇಟ್ ಕಮಿಷನರ್ ವರದಿ, ಎಎಸ್ಐ ವರದಿ ಮತ್ತು ನಮ್ಮ ಪರವಾಗಿ 1937ರಲ್ಲಿ ನೀಡಲಾಗಿದ್ದ ತೀರ್ಪನ್ನು ಕಡೆಗಣಿಸಿದೆ. 1993ಕ್ಕೆ ಮುನ್ನ ಇಲ್ಲಿ ಪ್ರಾರ್ಥನೆ ನಡೆಯುತ್ತಿತ್ತು ಎನ್ನುವುದನ್ನು ಸಾಬೀತುಪಡಿಸುವ ಯಾವುದೇ ಸಾಕ್ಷಿಗಳನ್ನು ಹಿಂದೂ ಅರ್ಜಿದಾರರು ನೀಡಿಲ್ಲ. ಆ ಸ್ಥಳದಲ್ಲಿ ಅಂಥ ಯಾವುದೇ ವಿಗ್ರಹ ಸಹ ಇಲ್ಲ&#8221; ಎಂದು ಅಹ್ಮದ್‌ ತಿಳಿಸಿದ್ದಾರೆ.<br>ಬಾಬರಿ ಮಸೀದಿ ಪ್ರಕರಣದಲ್ಲಿ ಕೂಡಾ ಇಂಥದ್ದೇ ದೃಷ್ಟಿಕೋನ ಹೊಂದಲಾಗಿತ್ತು. ಒಳಗೆ ಏನೂ ಇರಲಿಲ್ಲ ಎನ್ನುವುದನ್ನು ಆಯುಕ್ತರ ವರದಿ ಮತ್ತು ಎಎಸ್ಐ ವರದಿ ಹೇಳಿತ್ತು. ಈ ತೀರ್ಪಿನ ಬಗ್ಗೆ ನಮಗೆ ತೀವ್ರ ಅಸಮಾಧಾನವಾಗಿದೆ ಎಂದು ಇನ್ನೊಬ್ಬ ವಕೀಲ ಮಿಅರಾಜುದ್ದೀನ್ ಸಿದ್ದೀಖಿ ಹೇಳಿದ್ದಾರೆ.<br>&#8220;ಇಂಥ ಯಾವುದೇ ತೀರ್ಪನ್ನು ನಾವು ಒಪ್ಪುವುದಿಲ್ಲ. ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಜಿಲ್ಲಾ ಅಧ್ಯಕ್ಷರು ಕೈಜೋಡಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ನಾವು ಕಾನೂನಾತ್ಮಕವಾಗಿ ಹೋರಾಡುತ್ತೇವೆ. ರಾಜಕೀಯ ಲಾಭ ಪಡೆಯಲು ಇದು ನಡೆಯುತ್ತಿದೆ ಎಂದು ಮಿಅರಾಜುದ್ದೀನ್ ಸಿದ್ದೀಖಿ ಸ್ಪಷ್ಟಪಡಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಜ್ಞಾನವಾಪಿ ಪ್ರಕರಣ: ಶಿವಲಿಂಗ ಪೂಜೆ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್</title>
		<link>https://peepalmedia.com/gnanavapi-case-court-adjourned-hearing-of-shivlinga-puja-application/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 14 Nov 2022 12:48:52 +0000</pubDate>
				<category><![CDATA[ದೇಶ]]></category>
		<category><![CDATA[fast-track court]]></category>
		<category><![CDATA[Gnanavapi Masjid]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[Mahendra Pandey]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[Shivling]]></category>
		<category><![CDATA[Sulabh Prakash]]></category>
		<category><![CDATA[VARANASI]]></category>
		<guid isPermaLink="false">https://peepalmedia.com/?p=15536</guid>

					<description><![CDATA[ವಾರಣಾಸಿ: ಇಲ್ಲಿನ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಪತ್ತೆಯಾಗಿರುವ ಶಿವಲಿಂಗದ ಪೂಜೆಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನು ತ್ವರಿತ ನ್ಯಾಯಾಲಯವು ನವೆಂಬರ್ 17 ಕ್ಕೆ ಮುಂದೂಡಿದೆ. ಈ ಕುರಿತು ಮಾಹಿತಿ ನೀಡಿದ ಸಹಾಯಕ ಜಿಲ್ಲಾ ಸರ್ಕಾರಿ ವಕೀಲ ಸುಲಭ್ ಪ್ರಕಾಶ್‌ರವರು, ಸಿವಿಲ್ ನ್ಯಾಯಾಧೀಶರಾದ (ಹಿರಿಯ ವಿಭಾಗ) ಮಹೇಂದ್ರ ಪಾಂಡೆ ಅವರು ತೀರ್ಪನ್ನು ನವೆಂಬರ್ 17 ರವರೆಗೆ ಮುಂದೂಡಿದ್ದಾರೆ ಎಂದು ತಿಳಿಸಿದ್ದಾರೆ. ವಿವಾದದ ಬಗ್ಗೆ ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ಅಕ್ಟೋಬರ್ 27 ರಂದು ಪ್ರಕರಣದ [&#8230;]]]></description>
										<content:encoded><![CDATA[
<p><strong>ವಾರಣಾಸಿ:</strong> ಇಲ್ಲಿನ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಪತ್ತೆಯಾಗಿರುವ ಶಿವಲಿಂಗದ ಪೂಜೆಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನು ತ್ವರಿತ ನ್ಯಾಯಾಲಯವು ನವೆಂಬರ್ 17 ಕ್ಕೆ ಮುಂದೂಡಿದೆ.</p>



<p>ಈ ಕುರಿತು ಮಾಹಿತಿ ನೀಡಿದ ಸಹಾಯಕ ಜಿಲ್ಲಾ ಸರ್ಕಾರಿ ವಕೀಲ ಸುಲಭ್ ಪ್ರಕಾಶ್‌ರವರು, ಸಿವಿಲ್ ನ್ಯಾಯಾಧೀಶರಾದ (ಹಿರಿಯ ವಿಭಾಗ) ಮಹೇಂದ್ರ ಪಾಂಡೆ ಅವರು ತೀರ್ಪನ್ನು ನವೆಂಬರ್ 17 ರವರೆಗೆ ಮುಂದೂಡಿದ್ದಾರೆ ಎಂದು ತಿಳಿಸಿದ್ದಾರೆ.</p>



<p>ವಿವಾದದ ಬಗ್ಗೆ ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ಅಕ್ಟೋಬರ್ 27 ರಂದು ಪ್ರಕರಣದ ಮೇಲಿನ ತನ್ನ ಆದೇಶವನ್ನು ನವೆಂಬರ್ 8 ಕ್ಕೆ ಕಾಯ್ದಿರಿಸಿತ್ತು. ನ್ಯಾಯಾಧೀಶರು ನವೆಂಬರ್ 8 ರಂದು ರಜೆಯಲ್ಲಿದ್ದ ಕಾರಣ, ಪ್ರಕರಣವನ್ನು ಸೋಮವಾರಕ್ಕೆ ಮುಂದೂಡಲಾಯಿತು.</p>



<p>ವಿಶ್ವ ವೇದ ಸನಾತನ ಸಂಘದ ಪ್ರಧಾನ ಕಾರ್ಯದರ್ಶಿ ಕಿರಣ್ ಸಿಂಗ್ ಮೇ 24 ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು, ದೂರಿನಲ್ಲಿ ಜ್ಞಾನವಾಪಿ ಸಂಕೀರ್ಣಕ್ಕೆ ಮುಸ್ಲಿಮರ ಪ್ರವೇಶವನ್ನು ನಿಷೇಧಿಸಬೇಕು, ಸಂಕೀರ್ಣವನ್ನು ಸನಾತನ ಸಂಘಕ್ಕೆ ಹಸ್ತಾಂತರಿಸಬೇಕು ಮತ್ತು ಶಿವಲಿಂಗಕ್ಕೆ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಬೇಕು ಎಂದು ಕೋರಿದ್ದರು.</p>



<p>ಈ ಹಿನ್ನಲೆಯಲ್ಲಿ, ಮೇ 25ರಂದು ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಈ ದಾವೆಯನ್ನು ತ್ವರಿತಗತಿ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಆದೇಶಿಸಿದ್ದರು.</p>



<p>ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ಕಮಿಷನರ್, ಜ್ಞಾನವಾಪಿ ಮಸೀದಿಯ ವ್ಯವಹಾರಗಳನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಸಮಿತಿ ಮತ್ತು ವಿಶ್ವನಾಥ ದೇವಸ್ಥಾನದ ಟ್ರಸ್ಟ್ ಅನ್ನು ಮೊಕದ್ದಮೆಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.</p>



<p>ಮಸೀದಿಯ ಹೊರಗೋಡೆಗಳಲ್ಲಿ ಹಿಂದೂ ದೇವತೆಗಳ ವಿಗ್ರಹಗಳ ದೈನಂದಿನ ಪೂಜೆಗೆ ಅನುಮತಿ ಕೋರಿ ಮಹಿಳೆಯರ ಗುಂಪೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿದ್ದ ಕೆಳ ನ್ಯಾಯಾಲಯ (ಸಿವಿಲ್ ನ್ಯಾಯಾಧೀಶರು-ಹಿರಿಯ ವಿಭಾಗ), ಏಪ್ರಿಲ್ 26 ರಂದು ಜ್ಞಾನವಾಪಿ ಸಂಕೀರ್ಣದ ವೀಡಿಯೊಗ್ರಾಫಿಕ್ ಸಮೀಕ್ಷೆಗೆ ಆದೇಶಿಸಿತ್ತು. ಈ ಅಭ್ಯಾಸದ ಸಮಯದಲ್ಲಿ ಮಸೀದಿ ಸಂಕೀರ್ಣದೊಳಗೆ &#8216;ಶಿವಲಿಂಗ&#8217; ಪತ್ತೆಯಾಗಿದೆ ಎಂದು ಹಿಂದೂ ಸಮುದಾಯದವರು ಹೇಳಿಕೊಂಡಿದ್ದರು.</p>



<p>ಆದಾಗ್ಯೂ, ಈ ರಚನೆಯು ʼವಜೂಖಾನಾʼ ಜಲಾಶಯದಲ್ಲಿನ ಕಾರಂಜಿಯ ಕಾರ್ಯವಿಧಾನದ ಒಂದು ಭಾಗವಾಗಿದೆ ಎಂದು ಮುಸ್ಲಿಂ ಸಮುದಾಯದವರು ಸಮರ್ಥಿಸಿಕೊಂಡಿದ್ದಾರೆ, ಅಲ್ಲಿ ಭಕ್ತರು &#8220;ನಮಾಜ್&#8221; ಸಲ್ಲಿಸುವ ಮೊದಲು ಧಾರ್ಮಿಕ ಅಭಿಷೇಕಗಳನ್ನು ನಡೆಸುತ್ತಾರೆ ಎಂದು ಹೇಳಿಕೊಂಡಿದ್ದರು.</p>



<p>ಸುಪ್ರೀಂ ಕೋರ್ಟ್ ಮೇ 20 ರಂದು ಸಿವಿಲ್ ನ್ಯಾಯಾಧೀಶರ ಹಿರಿಯ ವಿಭಾಗದಿಂದ ಜಿಲ್ಲಾ ನ್ಯಾಯಾಧೀಶರಿಗೆ ಪ್ರಕರಣವನ್ನು ವರ್ಗಾಯಿಸಿತ್ತು ಮತ್ತು ವಿಷಯದ ʼವಿವರಣೆʼ ಮತ್ತು ʼಸೂಕ್ಷ್ಮತೆಯನ್ನುʼ ಪರಿಶೀಲಿಸಿದಾಗ, 25-30 ವರ್ಷಗಳಿಗಿಂತ ಹೆಚ್ಚು ಅನುಭವ ಹೊಂದಿರುವ ಹಿರಿಯ ನ್ಯಾಯಾಂಗ ಅಧಿಕಾರಿ ಈ ಪ್ರಕರಣವನ್ನು ನಿಭಾಯಿಸುವುದು ಉತ್ತಮ ಎಂದು ಅಭಿಪ್ರಾಯಪಟ್ಟಿದೆ.</p>



<p>ಈ ಕಾರಣ ಜ್ಞಾನವಾಪಿ ಆವರಣದಲ್ಲಿ ಮುಚ್ಚಿದ ಭೂಗತ ಸ್ಥಳಗಳ ಸಮೀಕ್ಷೆಗೆ ಒತ್ತಾಯಿಸಿದ ಮತ್ತೊಂದು ಅರ್ಜಿಯನ್ನು ಜಿಲ್ಲಾ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದ ವಿಚಾರಣೆ ನವೆಂಬರ್ 11 ರಂದು ನಡೆಯಲಿದೆ.</p>
]]></content:encoded>
					
		
		
			</item>
	</channel>
</rss>
