<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>viral &#8211; Peepal Media</title>
	<atom:link href="https://peepalmedia.com/tag/viral/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Wed, 12 Feb 2025 12:22:04 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>viral &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ʼನರೆಗಾʼದಿಂದಾಗಿ ಕಾರ್ಮಿಕರು ಸಿಗುತ್ತಿಲ್ಲ: L&#038;T ಅಧ್ಯಕ್ಷರಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ</title>
		<link>https://peepalmedia.com/workers-not-available-due-to-narega-another-controversial-statement-from-lt-chairman/</link>
		
		<dc:creator><![CDATA[Peepal Media]]></dc:creator>
		<pubDate>Wed, 12 Feb 2025 12:22:04 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[bengalure]]></category>
		<category><![CDATA[controversial tweet]]></category>
		<category><![CDATA[Controversy]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[viral]]></category>
		<guid isPermaLink="false">https://peepalmedia.com/?p=53800</guid>

					<description><![CDATA[ನವದೆಹಲಿ: ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂದು ಹೇಳಿ ವಿವಾದ ಸೃಷ್ಠಿಸಿದ್ದ ಎಲ್‌ ಆ್ಯಂಡ್ ಟಿ ಅಧ್ಯಕ್ಷ ಎಸ್‌. ಎನ್ ಸುಬ್ರಹ್ಮಣ್ಯನ್ ಅವರ ಮತ್ತೊಂದು ಹೇಳಿಕೆ ನೀಡಿದ್ದಾರೆ. ಸರ್ಕಾರದ ನರೆಗಾ ಯೋಜನೆಯಿಂದ ಕಟ್ಟಡಗಳ ನಿರ್ಮಾಣಕ್ಕೆ ಕಾರ್ಮಿಕರು ಸಿಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಚೆನ್ನೈನಲ್ಲಿ ಮಂಗಳವಾರ ಸಿಐಐ ಸಂಘಟಿಸಿದ್ದ ‘ಸೌತ್ ಗ್ಲೋಬಲ್ ಲಿಂಕೇಜಸ್ ಸಮ್ಮಿಟ್–2025’ರಲ್ಲಿ ಮಾತನಾಡಿದ ಅವರು, ತಮ್ಮ ಊರಿನಲ್ಲಿ ಜನ ಸುಖವಾಗಿರುವುದರಿಂದ ಕೆಲಸಕ್ಕಾಗಿ ಬೇರೆ ಕಡೆ ಹೋಗಲು ನಿರಾಕರಿಸುತ್ತಿದ್ದಾರೆ. ಹೀಗಾಗಿ ನಿರ್ಮಾಣ ವಲಯದಲ್ಲಿ ಕಾರ್ಮಿಕರ ಕೊರತೆಯಾಗಿದೆ. [&#8230;]]]></description>
										<content:encoded><![CDATA[
<p><strong>ನವದೆಹಲಿ: </strong>ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂದು ಹೇಳಿ ವಿವಾದ ಸೃಷ್ಠಿಸಿದ್ದ ಎಲ್‌ ಆ್ಯಂಡ್ ಟಿ ಅಧ್ಯಕ್ಷ ಎಸ್‌. ಎನ್ ಸುಬ್ರಹ್ಮಣ್ಯನ್ ಅವರ ಮತ್ತೊಂದು ಹೇಳಿಕೆ ನೀಡಿದ್ದಾರೆ. ಸರ್ಕಾರದ ನರೆಗಾ ಯೋಜನೆಯಿಂದ ಕಟ್ಟಡಗಳ ನಿರ್ಮಾಣಕ್ಕೆ ಕಾರ್ಮಿಕರು ಸಿಗುತ್ತಿಲ್ಲ ಎಂದು ಅವರು  ಹೇಳಿದ್ದಾರೆ. </p>



<p>ಚೆನ್ನೈನಲ್ಲಿ ಮಂಗಳವಾರ ಸಿಐಐ ಸಂಘಟಿಸಿದ್ದ ‘ಸೌತ್ ಗ್ಲೋಬಲ್ ಲಿಂಕೇಜಸ್ ಸಮ್ಮಿಟ್–2025’ರಲ್ಲಿ ಮಾತನಾಡಿದ ಅವರು, ತಮ್ಮ ಊರಿನಲ್ಲಿ ಜನ ಸುಖವಾಗಿರುವುದರಿಂದ ಕೆಲಸಕ್ಕಾಗಿ ಬೇರೆ ಕಡೆ ಹೋಗಲು ನಿರಾಕರಿಸುತ್ತಿದ್ದಾರೆ. ಹೀಗಾಗಿ ನಿರ್ಮಾಣ ವಲಯದಲ್ಲಿ ಕಾರ್ಮಿಕರ ಕೊರತೆಯಾಗಿದೆ. ಭಾರತೀಯರು ಕಚೇರಿಗಿಂತ ಮನೆಯಿಂದಲೇ ಕೆಲಸ ಮಾಡಲು ಬಯಸುತ್ತಾರೆ ಎಂದಿದ್ದಾರೆ. </p>



<p>‘ನಿರ್ಮಾಣ ವಲಯದಲ್ಲಿ ಕಾರ್ಮಿಕರು ಸಿಗುವುದೇ ಕಷ್ಟವಾಗಿದೆ. ನೆಮ್ಮದಿಯ ಜೀವನ ಬಯಸುವುದರಿದ ಅವರು ಊರು ಬಿಟ್ಟು ಬರುತ್ತಿಲ್ಲ. ನರೇಗಾ, ನೇರ ನಗದು ವರ್ಗಾವಣೆ ಹಾಗೂ ಜನಧನ ಖಾತೆಗಳಿಂದಾಗಿ ಕಾರ್ಮಿಕರ ಲಭ್ಯತೆ ಕಡಿಮೆಯಾಗುತ್ತಿದೆ. ಅವಕಾಶಗಳನ್ನು ಹುಡುಕಿಕೊಂಡು ಜನ ವಲಸೆ ಹೋಗುತ್ತಿಲ್ಲ. ಸ್ಥಳೀಯ ಆರ್ಥಿಕತೆ ಚೆನ್ನಾಗಿರುವುದರಿಂದಲೂ ಆಗಿರಬಹುದು. ಅಥವಾ ಸರ್ಕಾರದ ವಿವಿಧ ಯೋಜನೆಗಳಿಂದಲೂ ಆಗಿರಬಹುದು’ ಎಂದು ಹೇಳಿದ್ದಾರೆ. </p>



<p>ಹಣದುಬ್ಬರಕ್ಕೆ ಅನುಗುಣವಾಗಿ ಕಾರ್ಮಿಕರ ವೇತನವನ್ನು ಪರಿಷ್ಕರಿಸಬೇಕಿದೆ. ಮಧ್ಯಪ್ರಾಚ್ಯದಲ್ಲಿ 3.5 ಪಟ್ಟು ಹೆಚ್ಚಿನ ವೇತನ ಸಿಗುವುದರಿಂದ ಭಾರತೀಯ ಕಾರ್ಮಿಕರು ಅಲ್ಲಿಗೆ ವಲಸೆ ಹೋಗುತ್ತಿದ್ದಾರೆ. ವಲಸೆ ಸಮಸ್ಯೆ ಕೂಡ ಕಾರ್ಮಿಕರ ಕೊರತೆಗೆ ಕಾರಣ ಎಂದಿದ್ದಾರೆ. </p>



<p>‘ಐಟಿ ಉದ್ಯೋಗಿಯನ್ನು ಕಚೇರಿಗೆ ಬಂದು ಕೆಲಸ ಮಾಡಿ ಎಂದು ಹೇಳಿ. ಆಗ ಅವರು ಕೆಲಸಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಅವರು ಅರೋಪಿಸಿದ್ದಾರೆ.</p>



<p> ನಾನು 1983 ರಲ್ಲಿ ಎಲ್ &amp; ಟಿ ಗೆ ಸೇರಿದಾಗ, ನನ್ನ ಬಾಸ್, ನೀವು ಚೆನ್ನೈನವರಾಗಿದ್ದರೆ, ದೆಹಲಿಗೆ ಹೋಗಿ ಕೆಲಸ ಮಾಡಿ ಎಂದು ಹೇಳಿದ್ದರು. ಇಂದು ನಾನು ಚೆನ್ನೈನ ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಿ ದೆಹಲಿಗೆ ಹೋಗಿ ಕೆಲಸ ಮಾಡಲು ಹೇಳಿದರೆ, ಅವರು ರಾಜೀನಾಮೆ ನೀಡುತ್ತಾರೆ. ಸ್ಥಳಾಂತರಗೊಳ್ಳಲು ಐಟಿ ವಲಯದಲ್ಲಿ ಹಿಂದೇಟು ಹಾಕುತ್ತಾರೆ ಎಂದು ಅವರು  ಹೇಳಿದ್ದಾರೆ. </p>



<p>‘ಭಾನುವಾರದಂದು ಸಹ ಕೆಲಸ ಮಾಡಬೇಕು. ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ? ನಿಮ್ಮ ಹೆಂಡತಿಯನ್ನು ಎಷ್ಟು ಹೊತ್ತು ನೋಡುತ್ತಾ ಕೂಡುತ್ತಿರಿ? ಕಚೇರಿಗೆ ಹೋಗಿ ಕೆಲಸ ಮಾಡಲು ಪ್ರಾರಂಭಿಸಿ. ನಾನು ಭಾನುವಾರವೂ ಕೆಲಸ ಕೆಲಸ ಮಾಡುತ್ತೇನೆ’ ಎಂದು ಅವರು ಹೇಳಿದ್ದ ಹೇಳಿಕೆ ಭಾರಿ ವಿವಾದ ಹುಟ್ಟು ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.</p>
]]></content:encoded>
					
		
		
			</item>
		<item>
		<title>ಸಾಧುಗಳ ವೇಷದಲ್ಲಿದ್ದವರು ಮುಸಲ್ಮಾನರೇ? Fact Check</title>
		<link>https://peepalmedia.com/muslims-were-caught-in-surat-posing-as-sadhus-fact-check/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 08 Nov 2024 13:15:38 +0000</pubDate>
				<category><![CDATA[ಸತ್ಯ ಶೋಧ]]></category>
		<category><![CDATA[communal]]></category>
		<category><![CDATA[communal issues]]></category>
		<category><![CDATA[Fact check]]></category>
		<category><![CDATA[hindu]]></category>
		<category><![CDATA[hindutva]]></category>
		<category><![CDATA[Muslim]]></category>
		<category><![CDATA[viral]]></category>
		<guid isPermaLink="false">https://peepalmedia.com/?p=48572</guid>

					<description><![CDATA[ಸಾಧುಗಳಂತೆ ಕೇಸರಿ ಬಟ್ಟೆ ತೊಟ್ಟು ಮೂವರಲ್ಲಿ ಓರ್ವ ವ್ಯಕ್ತಿ ಹಿಂದೂ ಧರ್ಮದ ಬಗ್ಗೆ ಪ್ರಶ್ನೆ ಮಾಡುತ್ತಾನೆ. ಅವರು ಸರಿಯಾದ ಉತ್ತರವನ್ನು ನೀಡುವುದಿಲ್ಲ. ಹಾಗಾಗಿ ಈ ಹಿಂದೂ ಸನ್ಯಾಸಿಗಳಂತೆ ವೇಷ ಧರಿಸಿರುವವರು ಮುಸ್ಲಿಮರು ಎಂಬ ಒಂದು ವೀಡಿಯೋ ವೈರಲ್‌ ಆಗಿತ್ತು. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಈ ಕೇಸರಿ ಬಟ್ಟೆ ತೊಟ್ಟಿರುವವರಲ್ಲಿ, &#8220;ಕನಿಷ್ಠ ಒಂದು&#160;ಶ್ಲೋಕವನ್ನು&#160;(ಸಂಸ್ಕೃತದಲ್ಲಿ ಒಂದು ಶ್ಲೋಕ) ಹೇಳಿ, ಅಥವಾ ನಾವು ನಿಮ್ಮನ್ನು ಹೋಗಲು ಬಿಡುವುದಿಲ್ಲ. ನಿಮಗೆ ಎಷ್ಟು ದೇವರ ಹೆಸರುಗಳು ಗೊತ್ತು?” ಎಂದು ಕೇಳುತ್ತಾನೆ. ಇದಕ್ಕೆ ಆ [&#8230;]]]></description>
										<content:encoded><![CDATA[
<p>ಸಾಧುಗಳಂತೆ ಕೇಸರಿ ಬಟ್ಟೆ ತೊಟ್ಟು ಮೂವರಲ್ಲಿ ಓರ್ವ ವ್ಯಕ್ತಿ ಹಿಂದೂ ಧರ್ಮದ ಬಗ್ಗೆ ಪ್ರಶ್ನೆ ಮಾಡುತ್ತಾನೆ. ಅವರು ಸರಿಯಾದ ಉತ್ತರವನ್ನು ನೀಡುವುದಿಲ್ಲ. ಹಾಗಾಗಿ ಈ ಹಿಂದೂ ಸನ್ಯಾಸಿಗಳಂತೆ ವೇಷ ಧರಿಸಿರುವವರು ಮುಸ್ಲಿಮರು ಎಂಬ ಒಂದು ವೀಡಿಯೋ ವೈರಲ್‌ ಆಗಿತ್ತು.</p>



<p>ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಈ ಕೇಸರಿ ಬಟ್ಟೆ ತೊಟ್ಟಿರುವವರಲ್ಲಿ, &#8220;ಕನಿಷ್ಠ ಒಂದು&nbsp;<em>ಶ್ಲೋಕವನ್ನು</em>&nbsp;(ಸಂಸ್ಕೃತದಲ್ಲಿ ಒಂದು ಶ್ಲೋಕ) ಹೇಳಿ, ಅಥವಾ ನಾವು ನಿಮ್ಮನ್ನು ಹೋಗಲು ಬಿಡುವುದಿಲ್ಲ. ನಿಮಗೆ ಎಷ್ಟು ದೇವರ ಹೆಸರುಗಳು ಗೊತ್ತು?” ಎಂದು ಕೇಳುತ್ತಾನೆ. ಇದಕ್ಕೆ ಆ ಮೂವರಲ್ಲಿ ಒಬ್ಬ ವ್ಯಕ್ತಿ, &#8220;ನಾವು&nbsp;<em>ಭೋಲೆನಾಥನನ್ನು</em>&nbsp;ಆರಾಧಿಸುತ್ತೇವೆ &#8221; ಎಂದು ಉತ್ತರಿಸುತ್ತಾನೆ. </p>



<p>ವೀಡಿಯೋ ಮಾಡುತ್ತಿರುವ ವ್ಯಕ್ತಿ, &#8220;ನಿಮಗೆ ಒಂದೇ ಒಂದು ಹಿಂದೂ ದೇವತೆಯ ಹೆಸರು ತಿಳಿಯದಿದ್ದರೆ ನಿಮ್ಮನ್ನು ನಿಜವಾದ ಸಾಧುಗಳು ಎಂದು ಹೇಗೆ ನಂಬುವುದು,&#8221; ಎಂದು ಕೇಳುತ್ತಾರೆ. ಅಷ್ಟು ಹೊತ್ತಗೆ ಸುತ್ತಮುತ್ತ ಜನ ಸೇರುತ್ತಾರೆ, ಈ ಮೂವರು ಖಾವಿದಾರಿಗಳನ್ನು &#8216;ಬಾಂಗ್ಲಾದೇಶಿ&#8217; ಮತ್ತು &#8216;ರೋಹಿಂಗ್ಯಾ&#8217; ಎಂದೆಲ್ಲಾ ಬೈಯುತ್ತಾರೆ, ಕೆಲವರು ಪೆಟ್ಟು ಹೊಡೆಯಲು ಹೇಳುತ್ತಾರೆ.</p>



<p>ಆಮೇಲೆ ಈ ವೀಡಿಯೋ ರೆಕಾರ್ಡ್ ಮಾಡುತ್ತಿರುವ ವ್ಯಕ್ತಿ ಈ ಮೂವರು ಸಾಧುಗಳಲ್ಲಿ ಒಬ್ಬನ ಹೆಸರು &#8216;ಸಲ್ಮಾನ್&#8217; ಎಂದು ಸುತ್ತಮುತ್ತ ಸೇರಿದವರಿಗೆ ಹೇಳುತ್ತಾನೆ, ಅದನ್ನು ಸಾಬೀತುಪಡಿಸಲು ಐಡಿ ಕಾರ್ಡ್‌ ಕೂಡ ತೋರಿಸುತ್ತಾನೆ. </p>



<p>ಗುಜರಾತಿ ನ್ಯೂಸ್ ಚಾನೆಲ್ Zee 24 Kalak (@Zee24Kalak) ನವೆಂಬರ್ 2 ರಂದು ಈ ಘಟನೆಯ ಕುರಿತು ಗುಜರಾತಿ ಭಾಷೆಯಲ್ಲಿ ಟ್ವೀಟ್ ಮಾಡಿದೆ: “ಸಾಧುವಿನ ವೇಷದಲ್ಲಿದ್ದ ಸಲ್ಮಾನ್ ಸಿಕ್ಕಿಬಿದ್ದಿದ್ದಾನೆ! ಸೂರತ್‌ನಲ್ಲಿ ಸಾಧು ಭಿಕ್ಷೆ ಬೇಡುತ್ತಿದ್ದ ಸತ್ಯವನ್ನು ಐಡಿ ಚೆಕ್‌ನಿಂದ ಬಯಲಾದ ವಂಚನೆ,&#8221; ಎಂದು ಟೈಟಲ್‌ ನೀಡಲಾಗಿದೆ. (&nbsp;<a href="https://archive.is/kQybb" target="_blank" rel="noreferrer noopener">ಆರ್ಕೈವ್</a>&nbsp;)</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="gu" dir="ltr">સાધુના વેશમાં સલમાનનાથ પકડાયો! સુરતમાં ભીક્ષા માગી રહેલા સાધુનું આઇડી ચેક કરાતા ફૂટ્યો ભાંડો<a href="https://twitter.com/hashtag/Gujarat?src=hash&amp;ref_src=twsrc%5Etfw">#Gujarat</a> <a href="https://twitter.com/hashtag/Viral?src=hash&amp;ref_src=twsrc%5Etfw">#Viral</a> <a href="https://twitter.com/hashtag/ViralVideo?src=hash&amp;ref_src=twsrc%5Etfw">#ViralVideo</a> <a href="https://twitter.com/hashtag/Trending?src=hash&amp;ref_src=twsrc%5Etfw">#Trending</a> <a href="https://twitter.com/hashtag/TrendingNow?src=hash&amp;ref_src=twsrc%5Etfw">#TrendingNow</a> <a href="https://twitter.com/hashtag/India?src=hash&amp;ref_src=twsrc%5Etfw">#India</a> <a href="https://twitter.com/hashtag/Surat?src=hash&amp;ref_src=twsrc%5Etfw">#Surat</a> <a href="https://t.co/891kz7qBdG">pic.twitter.com/891kz7qBdG</a></p>&mdash; Zee 24 Kalak (@Zee24Kalak) <a href="https://twitter.com/Zee24Kalak/status/1852752530348122214?ref_src=twsrc%5Etfw">November 2, 2024</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಗೋದಿ ಮೀಡಿಯಾ OpIndia (@OpIndia_in&nbsp;) ಕೂಡ Zee 24 Kalak ಅವರ ಟ್ವೀಟ್ ಇರುವ&nbsp;<a href="https://hindi.opindia.com/national/salman-was-begging-as-hindus-in-saffron-with-his-companions-in-surat-gujarat-video-viral/" target="_blank" rel="noreferrer noopener">ವರದಿಯನ್ನು</a>&nbsp;ಪ್ರಕಟಿಸಿದೆ.&nbsp;<br>ಜೊತಗೆ ತಮ್ಮ ಅಧಿಕೃತ X ಹ್ಯಾಂಡಲ್‌ನಲ್ಲಿ ಈ ವರದಿಯ ಲಿಂಕ್ ಅನ್ನು ಪೋಸ್ಟ್ ಮಾಡಿದೆ.  “ಸಲ್ಮಾನ್ ಮತ್ತು ಅವನ ಸಹಚರರು ಕೇಸರಿ ಬಟ್ಟೆಗಳನ್ನು ಧರಿಸಿ ಭಿಕ್ಷೆ ಬೇಡುತ್ತಿದ್ದರು. ಗುರುತಿನ ಚೀಟಿಯ ಮೂಲಕ ಅವರ ನಿಜವಾದ ಗುರುತು ಬಯಲಾಗಿದೆ. ಅವರಿಗೆ ಯಾವುದೇ ಶ್ಲೋಕವನ್ನು ಪಠಿಸಲು ಅಥವಾ ಹಿಂದೂ ದೇವರು ಮತ್ತು ದೇವತೆಗಳ ಹೆಸರನ್ನು ಸರಿಯಾಗಿ ಹೇಳಲು ಸಾಧ್ಯವಾಗಲಿಲ್ಲ,&#8221; ಎಂಬ ಟೈಟಲನ್ನು ಓಪ್‌ಇಂಡಿಯಾ ತನ್ನ X ನಲ್ಲಿ ಪೋಸ್ಟ್‌ ಮಾಡಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="hi" dir="ltr">भगवा वस्त्र पहन सलमान और उसके साथी भीख माँग रहे थे। आईडी कार्ड से उनकी असली पहचान सामने आई। वे न कोई श्लोक सुना सके और न ही हिंदू देवी-देवताओं का ठीक से नाम बता सके।<a href="https://twitter.com/hashtag/surat?src=hash&amp;ref_src=twsrc%5Etfw">#surat</a> <a href="https://twitter.com/hashtag/Muslims?src=hash&amp;ref_src=twsrc%5Etfw">#Muslims</a> <a href="https://t.co/RpzS60uCZ7">https://t.co/RpzS60uCZ7</a></p>&mdash; ऑपइंडिया (@OpIndia_in) <a href="https://twitter.com/OpIndia_in/status/1853248297416135101?ref_src=twsrc%5Etfw">November 4, 2024</a></blockquote><script async src="https://platform.twitter.com/widgets.js" charset="utf-8"></script>
</div><figcaption class="wp-element-caption">ಹಿಂದಿಯಲ್ಲಿ ಇರುವ ಓಪ್‌ಇಂಡಿಯಾ ವರದಿಯ ಶೀರ್ಷಿಕೆಯಲ್ಲಿ ಹೀಗೆ ಹೇಳಲಾಗಿದೆ: “ಸಂಸ್ಕೃತ ಶ್ಲೋಕಗಳನ್ನು ಕೇಳಿದಾಗ, ಅವನು ಪ್ರಾರ್ಥಿಸಲು ಪ್ರಾರಂಭಿಸಿದನು, ಅವನಿಗೆ ಒಂದೇ ಒಂದು ಹಿಂದೂ ದೇವರ ಹೆಸರನ್ನು ಹೇಳಲು ಸಾಧ್ಯವಾಯಿತು: ಸಲ್ಮಾನ್ ಮತ್ತು ಗ್ಯಾಂಗ್ ಸೂರತ್‌ನಲ್ಲಿ &#8216;ಸಾಧು&#8217;ಗಳಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದರು, ಈ ರಹಸ್ಯವು ಐಡಿ ಕಾರ್ಡ್‌ ಮೂಲಕ ಬಹಿರಂಗವಾಯಿತು.&#8221; <br><br>ತನ್ನ ವರದಿಯಲ್ಲಿ ಮೂವರು ವ್ಯಕ್ತಿಗಳು &#8216;ಸಾಧುಗಳ ವೇಷ ಧರಿಸಿ ತಿರುಗಾಡುತ್ತಿದ್ದ ಮುಸ್ಲಿಮರು&#8217; ಮತ್ತು ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು OpIndia ಹೇಳಿಕೊಂಡಿದೆ. (ಆರ್ಕೈವ್ <a href="https://archive.is/ozZlY" target="_blank" rel="noreferrer noopener">1</a>,&nbsp;<a href="https://archive.is/UL0TQ" target="_blank" rel="noreferrer noopener">2</a>,&nbsp;<a href="https://archive.is/KMBET" target="_blank" rel="noreferrer noopener">3</a>)</figcaption></figure>



<p>ಮತ್ತೊಂದು ಕೂಗುಮಾರಿ ಚಾನೆಲ್ , ಸುದರ್ಶನ್ ನ್ಯೂಸ್ (@SudarshanNewsTV), ಈ ಘಟನೆಯ ಕುರಿತು ವೀಡಿಯೊ ವರದಿಯನ್ನು ಈ  ರೀತಿಯ ಶೀರ್ಷಿಕೆಯ ಜೊತೆಗೆ ಹಂಚಿಕೊಂಡಿದೆ: &#8220;ಗುಜರಾತ್‌ನ ಸೂರತ್‌ನಲ್ಲಿ, &#8216;ಜಿಹಾದಿ&#8217; ಸಲ್ಮಾನ್ ಮತ್ತು ಅವನ ಗ್ಯಾಂಗ್ ಸಾಧುಗಳಂತೆ ಪೋಸ್ ಕೊಡುತ್ತಾ ಭಿಕ್ಷೆ ಬೇಡುತ್ತಿದ್ದರು &#8230; ಕೇಸರಿ ವಸ್ತ್ರಗಳನ್ನು ಧರಿಸಿ ಸಾಧುಗಳಂತೆ ಪೋಸು ಕೊಟ್ಟ ಈ ಮೂರು &#8216;ಜಿಹಾದಿಗಳು&#8217; ಬಂಧಿಸಲಾಗಿದೆ. (&nbsp;<a href="https://archive.is/EwDAJ" target="_blank" rel="noreferrer noopener">ಆರ್ಕೈವ್</a>&nbsp;)</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="hi" dir="ltr">गुजरात के सूरत में ‘साधु’ बन भीख मांग रहा था जिहादी सलमान और उसकी गैंग&#8230;<br><br>साधू वेश में भगवा वस्त्र पहन कर घूम रहे 3 जिहादी गिरफ्तार&#8230;<a href="https://twitter.com/hashtag/Surat?src=hash&amp;ref_src=twsrc%5Etfw">#Surat</a> <a href="https://twitter.com/hashtag/Gujarat?src=hash&amp;ref_src=twsrc%5Etfw">#Gujarat</a> <a href="https://t.co/RQDu5uWvIk">pic.twitter.com/RQDu5uWvIk</a></p>&mdash; Sudarshan News (@SudarshanNewsTV) <a href="https://twitter.com/SudarshanNewsTV/status/1853383294391636450?ref_src=twsrc%5Etfw">November 4, 2024</a></blockquote><script async src="https://platform.twitter.com/widgets.js" charset="utf-8"></script>
</div><figcaption class="wp-element-caption">ಆರೆಸ್ಸೆಸ್ ಮುಖವಾಣಿ ಪಾಂಚಜನ್ಯ (@epanchjanya) ಕೂಡ ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಹಿಂದಿಯಲ್ಲಿರುವ ಈ ಟ್ವೀಟ್‌ನಲ್ಲಿ, “ಸಾಧುಗಳ ವೇಷದಲ್ಲಿ ಸಿಕ್ಕಿಬಿದ್ದ ಮುಸ್ಲಿಮರು! ನೀವು ಸಾಧು ಆಗಬೇಕೆಂದಿದ್ದರೆ, ಹಿಂದೂವಾಗಿ ಯಾಕೆ ಬದಲಾಗಬಾರದು? ಸಲ್ಮಾನ್ ಎಂಬ ಮುಸ್ಲಿಂ ವ್ಯಕ್ತಿ ಕೇಸರಿ ವೇಷ ಧರಿಸಿ ಸಾಧುವಿನಂತೆ ಪೋಸು ಕೊಟ್ಟು ಭಿಕ್ಷೆ ಬೇಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನವೆಂಬರ್ 3, 2024 ರಂದು ನಡೆದಿದ್ದು, ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಇದೇ ಮೊದಲಲ್ಲ-ಸಾಧುಗಳ ವೇಷ ಧರಿಸಿದ ಮುಸ್ಲಿಮರು ಈ ಹಿಂದೆ 16 ಬಾರಿ ಸಿಕ್ಕಿಬಿದ್ದಿದ್ದಾರೆ!” (<a href="https://archive.is/6fh1t" target="_blank" rel="noreferrer noopener">ಆರ್ಕೈವ್</a>&nbsp;)</figcaption></figure>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="hi" dir="ltr">साधु भेष में पकड़े गए मुस्लिम!<br><br>साधु ही बनना है तो हिन्दू क्यों नहीं बन जाते!<br><br>भगवा वस्त्र पहना हुआ मुस्लिम युवक सलमान, साधु के भेष में भीख माँगते हुए पकड़ा गया।<br><br>गुजरात के सूरत में 3 नवंबर, 2024 को ये घटना हुई जिसके बाद पुलिस ने उसे गिरफ्तार किया।<br><br>ऐसा पहली बार नहीं 16 बार हो… <a href="https://t.co/3knDytJfXo">pic.twitter.com/3knDytJfXo</a></p>&mdash; Panchjanya (@epanchjanya) <a href="https://twitter.com/epanchjanya/status/1853426572537000040?ref_src=twsrc%5Etfw">November 4, 2024</a></blockquote><script async src="https://platform.twitter.com/widgets.js" charset="utf-8"></script>
</div><figcaption class="wp-element-caption">ಈ ವೀಡಿಯೋ ಫೇಸ್ಬುಕ್‌, X, ವಾಟ್ಸಾಪ್‌ ಗ್ರೂಪುಗಳಲ್ಲಿ ಜನರು ಹಂಚಿಕೊಂಡಿದ್ದಾರೆ. (ನೋಡಿ: <a href="https://archive.is/gFT8p" target="_blank" rel="noreferrer noopener">&nbsp;@ajaychauhan41</a>&nbsp;,&nbsp;<br><a href="https://archive.is/XTZVV" target="_blank" rel="noreferrer noopener">@Sudanshutrivedi</a>)</figcaption></figure>



<p><strong>ಸತ್ಯ ಏನು?</strong></p>



<p>ಸತ್ಯಾನ್ವೇಷಣೆಯ ನಂತರ ಈ ಮೂವರೂ ಸಂತರು ಹಿಂದೂಗಳು ಎಂಬುದು ಕಂಡುಬಂದಿದೆ. ದೈನಿಕ್ ಭಾಸ್ಕರ್ ಗ್ರೂಪ್‌ನ ಗುಜರಾತಿ ದಿನಪತ್ರಿಕೆ ದಿವ್ಯಾ ಭಾಸ್ಕರ್ ಈ ಬಗ್ಗೆ&nbsp;<a href="https://x.com/Divya_Bhaskar/status/1853390257640898813" target="_blank" rel="noreferrer noopener">ವರದಿ</a> ಮಾಡಿದೆ. ನವೆಂಬರ್ 4 ರಂದು, ಪೊಲೀಸ್ ತನಿಖೆಯ ನಂತರ ಇವರು&nbsp;ಮೂವರೂ ಹಿಂದೂಗಳು ಮತ್ತು ಜುನಾಗಢದಿಂದ ಬಂದವರು ಎಂದು&nbsp;<a href="https://www.divyabhaskar.co.in/amp/local/gujarat/surat/news/suspicion-of-a-person-of-another-religion-masquerading-as-a-monk-133906340.html" target="_blank" rel="noreferrer noopener">ತಿಳಿದುಬಂದಿದೆ</a>&nbsp;ಎಂದು ವರದಿ ಹೇಳುತ್ತದೆ.</p>



<p>ಸೂರತ್‌ನ ಅದಾಜನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆರ್‌ಬಿ ಗೋಜಿಯಾ ಅವರು ಮೂವರು ಸನ್ಯಾಸಿಗಳನ್ನು ಅನುಮಾನಾಸ್ಪದ ವ್ಯಕ್ತಿಗಳೆಂದು ವರದಿ ಮಾಡಿದ್ದಾರೆ ಮತ್ತು ನಂತರ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು&nbsp;<a href="https://www.divyabhaskar.co.in/amp/local/gujarat/surat/news/suspicion-of-a-person-of-another-religion-masquerading-as-a-monk-133906340.html" target="_blank" rel="noreferrer noopener">ವರದಿ</a>&nbsp;ಉಲ್ಲೇಖಿಸಿದೆ.&nbsp;ವಿಚಾರಣೆಯ ನಂತರ, ಪರಿಶೀಲನೆಗಾಗಿ, ಅವರ ನಿಜವಾದ ಗುರುತನ್ನು ನಿರ್ಧರಿಸಲು ಜುನಾಗಢದಲ್ಲಿ ತನಿಖೆಯನ್ನು ಪ್ರಾರಂಭಿಸಲಾಯಿತು. ಅವರು ನೀಡಿದ ಹೆಸರುಗಳು ಸತ್ಯವಾಗಿವೆ ಎಂದು ಕಂಡುಬಂದಿದೆ. ಒಬ್ಬ ವ್ಯಕ್ತಿಯ ಹೆಸರು ಸಲ್ಮನಾಥ್ ಆಗಿದ್ದು, ಆತನನ್ನು ಸಲ್ಮಾನ್‌, ಓರ್ವ ಮುಸಲ್ಮಾನ ಎಂದು ಹಿಂದೂಗಳು ಭಾವಿಸಿ ಆತನ ಮೇಲೆಗೆ ಹಲ್ಲೆಗೆ ಮುಂದಾಗಿದ್ದಾರೆ. ಆದರೆ, ಆತ ಹಿಂದೂ ಎಂಬುದು ದೃಢಪಟ್ಟಿದೆ.</p>



<p>Alt News ಈತನ ಮತದಾರ ಚೀಟಿಯನ್ನು ವರದಿ ಮಾಡಿದ್ದು, ಈ ಚೀಟಿಯಲ್ಲಿ ಈತನ ಹೆಸರು ಹೆಸರು ಸಲ್ಮನಾಥ್ ಪರ್ಮಾರ್ ಮತ್ತು ಅವನ ತಂದೆಯ ಹೆಸರು ಸೂರಮ್ನಾಥ್ ಪರ್ಮಾರ್ ಎಂದು ಉಲ್ಲೇಖಿಸಲಾಗಿದೆ.&nbsp;<br></p>



<p>ರಜಪೂತರಲ್ಲಿ <a href="https://forebears.io/surnames/parmar#meaning" target="_blank" rel="noreferrer noopener">ಪರ್ಮಾರ್</a>&nbsp;ಎಂಬ ಉಪನಾಮವಿದೆ. ಈ ಪರ್ಮಾರರು ಹೆಚ್ಚಾಗಿ ಉತ್ತರ ಮತ್ತು ಮಧ್ಯ ಭಾರತದಿಂದ, ವಿಶೇಷವಾಗಿ ರಾಜಸ್ಥಾನ, ಗುಜರಾತ್, ಪಂಜಾಬ್, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಮಹಾರಾಷ್ಟ್ರದಿಂದ ಬಂದವರು.</p>



<p><em>ಆದ್ದರಿಂದ ಸಾಧುವಿನ ವೇಷ</em> ಧರಿಸಿದ ಮೂವರು ಮುಸ್ಲಿಮರು ಭಿಕ್ಷೆ ಬೇಡುತ್ತಿದ್ದಾರೆ ಎಂಬುದು ಹಸಿಹಸಿ ಸುಳ್ಳು, ಭಿಕ್ಷೆ ಬೇಡುತ್ತಿದ್ದವರು ಹಿಂದೂ ಸಾಧುಗಳೇ ಆಗಿದ್ದಾರೆ.</p>



<p>ಈ ರೀತಿ ಹಿಂದೂ ಸಾಧುಗಳನ್ನು ಮುಸಲ್ಮಾನರು ಎಂದು ಕರೆದು ಕಿರುಕುಳ ನೀಡಿದ್ದು ಇದೇ ಮೊದಲೇನಲ್ಲ. <a href="https://www.altnews.in/up-meerut-sadhus-thrashed-suspicion-of-being-child-kidnappers-video-viral-with-false-muslim-angle/" target="_blank" rel="noreferrer noopener">ಈ 2024 ರ ಜುಲೈನಲ್ಲಿ</a> ಮೀರತ್‌ನಲ್ಲಿ ಮೂವರು ಸಾಧುಗಳ ಗುಂಪಿಗೆ ಮುಸ್ಲಿಮರು ಎಂಬ ಹಣೆಪಟ್ಟಿ ಕಟ್ಟಲಾಯಿತು. ಸಂಚಾರಿ ಸನ್ಯಾಸಿಗಳನ್ನು ಮಕ್ಕಳ ಅಪಹರಣಕಾರರು ಎಂದು ಸುಳ್ಳು ಆರೋಪ ಹೊರಿಸಿದ ಘಟನೆಗಳೂ ನಡೆದಿವೆ. </p>



<p></p>
]]></content:encoded>
					
		
		
			</item>
		<item>
		<title>ಬಾಂಗ್ಲಾದೇಶ ಬಿಕ್ಕಟ್ಟಿನ ಬಗ್ಗೆ ಭಾರತೀಯ ಮಾಧ್ಯಮಗಳಿಂದ ಸುಳ್ಳು ಸುದ್ದಿಗಳು</title>
		<link>https://peepalmedia.com/hate-news-by-indian-media-bangladesh/</link>
		
		<dc:creator><![CDATA[Charan Aivarnad]]></dc:creator>
		<pubDate>Tue, 20 Aug 2024 07:16:18 +0000</pubDate>
				<category><![CDATA[ಸುಳ್ಳು ಸುದ್ದಿ ಪತ್ತೆ]]></category>
		<category><![CDATA[bangladesh]]></category>
		<category><![CDATA[fake]]></category>
		<category><![CDATA[Fake news]]></category>
		<category><![CDATA[indian media]]></category>
		<category><![CDATA[viral]]></category>
		<guid isPermaLink="false">https://peepalmedia.com/?p=44090</guid>

					<description><![CDATA[ಬೆಂಗಳೂರು: ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು ಬಾಂಗ್ರಾದೇಶದ ಬಗ್ಗೆ ವದಂತಿ ಹಬ್ಬಿಸುತ್ತಿವೆ ಎಂದು ಬಾಂಗ್ಲಾದೇಶ ಮೂಲದ ಸತ್ಯ ತಪಾಸಣೆ ವೆಬ್‌ಸೈಟ್ ರೂಮರ್ ಸ್ಕ್ಯಾನರ್ ವರದಿಯಲ್ಲಿ ಬಹಿರಂಗಪಡಿಸಿದೆ. ಈ ತನಿಖಾ ಘಟಕವು X ನಲ್ಲಿ 50 ಖಾತೆಗಳನ್ನು ಗುರುತಿಸಿದೆ, ಅದು ಬಾಂಗ್ಲಾದೇಶದಲ್ಲಿ ಇತ್ತೀಚಿನ ಘಟನೆಗಳಿಗೆ ಸಂಬಂಧಿಸಿದ ಚಿತ್ರಗಳು, ವೀಡಿಯೊಗಳು ಮತ್ತು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಕೋಮುದ್ವೇಷವನ್ನು ಹರಡಿಸುತ್ತಿವೆ ಎಂದು ಹೇಳಿದೆ. ಈ ಪ್ರತಿಯೊಂದು ಖಾತೆಯಲ್ಲಿ ಕನಿಷ್ಠ ಒಂದು ಪೋಸ್ಟ್ ಕೋಮು ದ್ವೇಷದ ಮತ್ತು ಸುಳ್ಳು ಮಾಹಿತಿ ಪ್ರಕಟವಾಗಿದೆ ಎಂದು Surge [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು ಬಾಂಗ್ರಾದೇಶದ ಬಗ್ಗೆ ವದಂತಿ ಹಬ್ಬಿಸುತ್ತಿವೆ ಎಂದು ಬಾಂಗ್ಲಾದೇಶ ಮೂಲದ ಸತ್ಯ ತಪಾಸಣೆ ವೆಬ್‌ಸೈಟ್ ರೂಮರ್ ಸ್ಕ್ಯಾನರ್ ವರದಿಯಲ್ಲಿ ಬಹಿರಂಗಪಡಿಸಿದೆ.</p>



<p>ಈ ತನಿಖಾ ಘಟಕವು X ನಲ್ಲಿ 50 ಖಾತೆಗಳನ್ನು ಗುರುತಿಸಿದೆ, ಅದು ಬಾಂಗ್ಲಾದೇಶದಲ್ಲಿ ಇತ್ತೀಚಿನ ಘಟನೆಗಳಿಗೆ ಸಂಬಂಧಿಸಿದ ಚಿತ್ರಗಳು, ವೀಡಿಯೊಗಳು ಮತ್ತು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಕೋಮುದ್ವೇಷವನ್ನು ಹರಡಿಸುತ್ತಿವೆ ಎಂದು ಹೇಳಿದೆ.</p>



<p>ಈ ಪ್ರತಿಯೊಂದು ಖಾತೆಯಲ್ಲಿ ಕನಿಷ್ಠ ಒಂದು ಪೋಸ್ಟ್ ಕೋಮು ದ್ವೇಷದ ಮತ್ತು ಸುಳ್ಳು ಮಾಹಿತಿ ಪ್ರಕಟವಾಗಿದೆ ಎಂದು<a href="https://rumorscanner.com/en/rs-iu-en/communal-propaganda-in-x-accounts-about-bangladesh/120392"> Surge of Communal Misinformation on X During Bangladesh’s Political Crisis </a>ಎಂಬ ಈ ವರದಿ ಹೇಳಿದೆ.</p>



<p>ಆಗಸ್ಟ್ 5 ರಿಂದ 13 ರವರೆಗೆ, ಆ 50 ಖಾತೆಗಳಲ್ಲಿ ಮಾಡಲಾಗಿದ್ದ  ಪೋಸ್ಟ್‌ಗಳನ್ನು 154 ಮಿಲಿಯನ್ ಗೂ ಅಧಿಕ ಜನ ನೋಡಿದ್ದು , 72% ರಷ್ಟು ನಕಲಿ ಮತ್ತು ದಾರಿತಪ್ಪಿಸುವ ಮಾಹಿತಿಯನ್ನು ಹರಡುವ ಖಾತೆಗಳು ಭಾರತದಲ್ಲಿವೆ ಎಂದು ಹೇಳಿದೆ. ಹಲವಾರು ಜವಾಬ್ದಾರಿಯುತ ವ್ಯಕ್ತಿಗಳು ಮತ್ತು ಭಾರತದ ಮುಖ್ಯವಾಹಿನಿಯ ಮಾಧ್ಯಮಗಳು ಕೂಡ ಈ ಕೆಲವು ತಪ್ಪು ಮಾಹಿತಿಯನ್ನು ಪ್ರಚಾರ ಮಾಡುತ್ತಿವೆ ಎಂದು ವರದಿ ಹೇಳಿದೆ. ಇದಲ್ಲಿ <a href="https://ghostarchive.org/archive/aLAWr">ನ್ಯೂಸ್ ಮಧ್ಯಪ್ರದೇಶ</a> ಮತ್ತು <a href="https://archive.is/Lm2hG">ನ್ಯೂಸ್ 24</a> ಕೂಡ ಸೇರಿವೆ.</p>



<p>ಹಿಂದೂ ಮಹಿಳೆಯರು ಮತ್ತು ಮಕ್ಕಳ ಶಿಬಿರದಲ್ಲಿ ಬಾಂಬ್‌ಗಳನ್ನು ಸ್ಫೋಟಿಸುವ ಮೂಲಕ ಜಿಹಾದಿಗಳು ನೂರಾರು ಮಹಿಳೆಯರನ್ನು ಕೊಂದಿದ್ದಾರೆ ಎಂದು ಹೇಳುವ ವೀಡಿಯೊವನ್ನು ದೀಪಕ್ ಶರ್ಮಾ ಎಂಬ X ಖಾತೆಯಿಂದ ಆಗಸ್ಟ್ 9 ರಂದು ಪೋಸ್ಟ್ ಮಾಡಲಾಗಿದೆ. ವೀಡಿಯೋವನ್ನು ಪರಿಶೀಲಿಸಿದಾಗ, ಜುಲೈ 7 ರಂದು ಜಗನ್ನಾಥ ದೇವರ ರಥಯಾತ್ರೆಯ ಸಂದರ್ಭದಲ್ಲಿ ವಿದ್ಯುದಾಘಾತದಿಂದ ಐದು ಜನರ ಸಾವಿನ ವಿಡಿಯೋ ಇದು ಎಂದು ತಿಳಿದುಬಂದಿದೆ. &nbsp;</p>



<p>ಕಾಣೆಯಾದ ತನ್ನ ಮಗನ ಪತ್ತೆಗೆ ಒತ್ತಾಯಿಸುತ್ತಿರುವ ಹಿಂದೂ ವ್ಯಕ್ತಿಯ ವೀಡಿಯೊವನ್ನು ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ANI), NDTV ಮತ್ತು ಮಿರರ್ ನೌ ತಮ್ಮ X ನಲ್ಲಿ ಹಂಚಿಕೊಂಡಿವೆ. ರೂಮರ್ ಸ್ಕ್ಯಾನರ್ ಇದರ ಹಿಂದಿನ ಸುಳ್ಳನ್ನು ಪತ್ತೆ ಮಾಡಿದ್ದು, ಇದು ಬಾಬುಲ್ ಹೌಲಾಡರ್ ಎಂಬ ಮುಸ್ಲಿಂ ವ್ಯಕ್ತಿ 2013 ರಿಂದ ಕಾಣೆಯಾದ ತನ್ನ ಮಗನನ್ನು ಪತ್ತೆ ಹಚ್ಚಲು ಆಗ್ರಹಿಸಿ ನಡೆಸಿದ ಪ್ರತಿಭಟನೆಯ ವಿಡಿಯೋವಾಗಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">Correction: The below tweet has been deleted since this person is not from the minority Hindu community. Error regretted. <a href="https://t.co/EY8FBnJc1g">pic.twitter.com/EY8FBnJc1g</a></p>&mdash; ANI (@ANI) <a href="https://twitter.com/ANI/status/1823386700342612344?ref_src=twsrc%5Etfw">August 13, 2024</a></blockquote><script async src="https://platform.twitter.com/widgets.js" charset="utf-8"></script>
</div></figure>


<div class="wp-block-image">
<figure class="aligncenter size-full is-resized"><img fetchpriority="high" decoding="async" width="568" height="805" src="https://peepalmedia.com/wp-content/uploads/2024/08/image-3.png" alt="" class="wp-image-44093" style="width:307px;height:auto" srcset="https://peepalmedia.com/wp-content/uploads/2024/08/image-3.png 568w, https://peepalmedia.com/wp-content/uploads/2024/08/image-3-212x300.png 212w, https://peepalmedia.com/wp-content/uploads/2024/08/image-3-150x213.png 150w, https://peepalmedia.com/wp-content/uploads/2024/08/image-3-300x425.png 300w" sizes="(max-width: 568px) 100vw, 568px" /></figure></div>


<p>ಸುಳ್ಳುಸುದ್ದಿ ಹರಡಲು ಹೆಸರಾಗಿರುವ OpIndia ನ ಮುಖ್ಯ ಸಂಪಾದಕಿ ನೂಪುರ್ ಜೆ ಶರ್ಮಾ ತನ್ನ X ಹ್ಯಾಂಡಲ್‌ನಿಂದ ಎಂದಿನಂತೆ <a href="https://x.com/UnSubtleDesi/status/1822570087892787331?t=nItpJ6hM34NDoB-jTsw0Gw&amp;s=19">ಸುಳ್ಳು ಸುದ್ದಿ</a>ಗಳನ್ನು ಹರಡಿದ್ದರು. ಇದನ್ನು ಆಕೆಯ ಗಮನಕ್ಕೆ ತಂದ ರೂಮರ್‌ ಸ್ಕಾನರ್‌ನ ಸದಸ್ಯರೊಬ್ಬರನ್ನು ಆಕೆ ಆಗಸ್ಟ್ 11 ರಂದು X ನಲ್ಲಿ ಬ್ಲಾಕ್‌ ಮಾಡಿದ್ದಾರೆ.</p>



<p>ಭಾರತ ಮಾತ್ರವಲ್ಲ ಇತರ ದೇಶಗಳಲ್ಲೂ ಬಾಂಗ್ಲಾದೇಶದ ಬಗ್ಗೆ ಸುಳ್ಳನ್ನು ಹರಡಲಾಗಿದೆ ಎಂದು ರೂಮರ್‌ ಸ್ಕ್ಯಾನರ್‌ ಹೇಳಿದೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಕ್ರಿಕೆಟಿಗ ಲಿಟನ್ ದಾಸ್ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಹೇಳುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಾಸ್ತವದಲ್ಲಿ, ಈ <a href="https://ghostarchive.org/archive/5U8q4">ದೃಶ್ಯಾವಳಿಗಳು</a> ಮಶ್ರಫ್‌ ಎಂಬವರ ಮನೆಯ ಮೇಲೆ ನಡೆದ ಬೆಂಕಿ ದಾಳಿಯಾಗಿದ್ದವು. ಲಿಟನ್ ಅವರ ಮನೆಯಲ್ಲಿ ಅಂತಹ ಯಾವುದೇ ಘಟನೆ ಸಂಭವಿಸಿಲ್ಲ ಎಂದು ರೂಮರ್‌ ಸ್ಕ್ಯಾನರ್‌ ಹೇಳಿದೆ.</p>
]]></content:encoded>
					
		
		
			</item>
		<item>
		<title>ವೈರಲ್‌ ಆಯ್ತು ಶತಾಯುಷಿಗಳ ಲವ್‌ ಸ್ಟೋರಿ: ವೃದ್ಧಾಶ್ರಮದಲ್ಲೇ ಲವ್‌ ಮಾಡಿ ಮದುವೆಯಾದ ಹಿರಿಜೀವಗಳು</title>
		<link>https://peepalmedia.com/viral-love-story-a-couple-of-centenarians-who-fell-in-love-and-got-married-in-an-old-age-home/</link>
		
		<dc:creator><![CDATA[Peepal Media]]></dc:creator>
		<pubDate>Mon, 27 May 2024 07:10:18 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[homestay]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[lovestory]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[viral]]></category>
		<category><![CDATA[writing]]></category>
		<guid isPermaLink="false">https://peepalmedia.com/?p=39961</guid>

					<description><![CDATA[ಪ್ರೀತಿಗೆ ಜಾತಿ, ವರ್ಣ, ಅಂತಸ್ತು, ವಯಸ್ಸಿನ ಇರಲ್ಲ ಅನ್ನೋ ಮಾತಿದೆ. ಅಮೇರಿಕದಲ್ಲೊಂದು ಶತಾಯುಷಿಗಳ ಜೋಡಿ ಈ ಮಾತಿಗೆ ಪುಷ್ಠಿ ಕೊಡುವಂತೆ ತಮ್ಮ ಶತಾಯುಷ್ಯದಲ್ಲಿ ಪ್ರೀತಿಸಿ ಮದುವೆಯಾಗಿದ್ದಾರೆ. 102 ವರ್ಷದ ಮಾರ್ಜೋರಿ ಫುಟರ್‌ಮ್ಯಾನ್‌ 100 ವರ್ಷ ವಯಸ್ಸಿನ ಬರ್ನಿ ಲಿಟ್‌ಮ್ಯಾನ್‌ ಅವರನ್ನು ಪ್ರೀತಿಸಿ ಮದುವೆಯಾಗಿದ್ದು, ಈ ಸುದ್ದಿ ಈಗ ಸಾಕಷ್ಟು ವೈರಲ್‌ ಆಗುತ್ತಿದೆ. ಈ ಅಪರೂಪದ ಘಟನೆ ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಮಾರ್ಜೋರಿ ಮತ್ತು ಬರ್ನಿ ಲಿಟ್‌ಮ್ಯಾನ್‌ ಒಂದೇ ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದರು. ಅವರಿಗೆ [&#8230;]]]></description>
										<content:encoded><![CDATA[
<p>ಪ್ರೀತಿಗೆ ಜಾತಿ, ವರ್ಣ, ಅಂತಸ್ತು, ವಯಸ್ಸಿನ ಇರಲ್ಲ ಅನ್ನೋ ಮಾತಿದೆ. ಅಮೇರಿಕದಲ್ಲೊಂದು ಶತಾಯುಷಿಗಳ ಜೋಡಿ ಈ ಮಾತಿಗೆ ಪುಷ್ಠಿ ಕೊಡುವಂತೆ  ತಮ್ಮ ಶತಾಯುಷ್ಯದಲ್ಲಿ ಪ್ರೀತಿಸಿ ಮದುವೆಯಾಗಿದ್ದಾರೆ. 102 ವರ್ಷದ ಮಾರ್ಜೋರಿ ಫುಟರ್‌ಮ್ಯಾನ್‌ 100 ವರ್ಷ ವಯಸ್ಸಿನ ಬರ್ನಿ ಲಿಟ್‌ಮ್ಯಾನ್‌ ಅವರನ್ನು ಪ್ರೀತಿಸಿ ಮದುವೆಯಾಗಿದ್ದು, ಈ ಸುದ್ದಿ ಈಗ ಸಾಕಷ್ಟು ವೈರಲ್‌ ಆಗುತ್ತಿದೆ. </p>



<p>ಈ ಅಪರೂಪದ ಘಟನೆ ಅಮೇರಿಕಾದ ಪೆನ್ಸಿಲ್ವೇನಿಯಾದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ಮಾರ್ಜೋರಿ ಮತ್ತು ಬರ್ನಿ ಲಿಟ್‌ಮ್ಯಾನ್‌ ಒಂದೇ ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದರು. ಅವರಿಗೆ ವಯಸ್ಸಾಗಿದೆ ಎಂದು ಅವರಿಬ್ಬರ ಕುಟುಂಬದವರು ವೃದ್ಧಾಶ್ರಮಕ್ಕೆ ಸೇರಿಸಿದ್ದರು. ಆದರೆ, ಈ ಇಬ್ಬರು ವೃದ್ಧ ಜೀವಿಗಳು ಆ ವೃದ್ಧಾಶ್ರಮದಲ್ಲೇ ಬಿಡುವು ಸಿಕ್ಕಾಗಲೆಲ್ಲ  ಡೇಟ್‌ ಮಾಡುತ್ತಿದ್ದರು. ಕಳೆದ 9 ವರ್ಷಗಳಿಂದ ಡೇಟಿಂಗ್‌ ಮಾಡುತ್ತಿದ್ದರು ಎಂದು ವೃದ್ಧಾಶ್ರಮದ ಸಿಬ್ಬಂಧಿ ತಿಳಿಸಿದ್ದಾರೆ. </p>



<p>ಇಳಿ ವಯಸ್ಸಿನಲ್ಲಿ ಬದುಕು ಬಹಳಷ್ಟು ಬೋರಾಗತೊಗಿತ್ತು. ಜೀವನದ ಇಳಿಸಂಜೆಯಲ್ಲಿ ತಮ್ಮ ಒಂಟಿತನ ಕಳೆಯಲು ಹಳೆಯದೆಲ್ಲವನ್ನು ಮರೆತು ಹಾಯಾಗಿರಲು ನಾವು ಪ್ರೀತಿಸತೊಡಗಿದೇವು ಎಂದು ಈ ಜೋಡಿ ಹೇಳಿಕೊಂಡಿದೆ.  ನಂತರ ಇವರ ಪ್ರೀತಿಯ ಬಗ್ಗೆ ಕುಟುಂಬಸ್ಥರ ಬಳಿ ತಿಳಿಸಿದಾಗ ಇಬ್ಬರ ಕುಟುಂಬಸ್ಥರು ಸಂತೋಷದಿಂದ ಮದುವೆ ಮಾಡಿಕೊಡಲು ಒಪ್ಪಿಗೆ ನೀಡಿದ್ದಾರೆ.  “ತನ್ನ ಅಜ್ಜ ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದಾದ ನಮಗೆಲ್ಲರಿಗೂ ಆಶ್ಚರ್ಯವಾಯಿತು. ಮೊದಲಿಗೆ ಸ್ವಲ್ಪ ಬೇಸರವೂ ಆಯಿತು. ಆದರೆ, ಅವರ ಬದಕು ಅವರ ಆಯ್ಕೆ ಎಂಬ ಸತ್ಯ ಅರಿವಿಗೆ ಬಂದು  ಖುಷಿಯೂ ಆಯಿತು” ಎಂದು  ಲಿಟ್‌ಮನ್‌ ಮೊಮ್ಮಗಳು ಸಾರಾ ಲಿಟಮನ್‌ ಹೇಳಿದ್ದಾರೆ.</p>



<p>ಮಾರ್ಜೋರಿ ಮತ್ತು ಬರ್ನಿ ಲಿಟ್‌ಮನ್‌ ಇವರಿಬ್ಬರಿಗೂ ಇದು ಎರಡನೇ ಮದುವೆ.  ಕುಟುಂಬಸ್ಥರೆಲ್ಲರೂ ಸೇರಿ ಮೇ 19 ರಂದು ಕಾನೂನುಬದ್ಧವಾಗಿ ಶತಾಯುಸಿ ಜೋಡಿಗೆ ಅದ್ಧೂರಿಯಾಗಿ ಮದುವೆ ಮಾಡಿದ್ದಾರೆ. ಈ ಕುರಿತ ಪೋಸ್ಟ್‌ ಒಂದನ್ನು @pubity ಎಂಬ ಇನ್‌ಸ್ಟಾಗ್ರಾಮ್‌ ಪೇಜ್‌ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, ಆ ಫೋಟೋ <a href="https://www.instagram.com/p/C7VfHMltyyV/?utm_source=ig_embed&amp;ig_rid=315445a9-09fd-401c-a631-82790b510e81">ಇಲ್ಲಿದೆ ನೊಡಿ</a><a href="https://www.instagram.com/p/C7VfHMltyyV/?utm_source=ig_embed&amp;ig_rid=315445a9-09fd-401c-a631-82790b510e81" data-type="link" data-id="https://www.instagram.com/p/C7VfHMltyyV/?utm_source=ig_embed&amp;ig_rid=315445a9-09fd-401c-a631-82790b510e81">.</a> ನೆಟ್ಟಿಗರು ನವ ಜೋಡಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಸಿಎಎ: ಕೇಂದ್ರ ಹೇಳಿದ ಎಂಟು ಅಪ್ಪಟ ಸುಳ್ಳುಗಳು!</title>
		<link>https://peepalmedia.com/positive-narrative-on-caa-2019-and-centres-8-lie/</link>
		
		<dc:creator><![CDATA[Charan Aivarnad]]></dc:creator>
		<pubDate>Wed, 13 Mar 2024 11:24:49 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp]]></category>
		<category><![CDATA[breaking]]></category>
		<category><![CDATA[breaking news]]></category>
		<category><![CDATA[CAA]]></category>
		<category><![CDATA[CAA NRC]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[NRC]]></category>
		<category><![CDATA[peepal]]></category>
		<category><![CDATA[politics]]></category>
		<category><![CDATA[protest]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[Trending]]></category>
		<category><![CDATA[viral]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=36965</guid>

					<description><![CDATA[ನಿನ್ನೆ, ಮಾರ್ಚ್‌ 12, 2024 ಮಂಗಳವಾರ ಕೇಂದ್ರ ಗೃಹ ಸಚಿವಾಲಯ ಪೌರತ್ವ (ತಿದ್ದುಪಡಿ) ಕಾಯ್ದೆ-2019 ರ ಬಗ್ಗೆ ಎರಡು ಪುಟಗಳ ಒಂದು ಸಕಾರಾತ್ಮಕ ನಿರೂಪಣೆಯೊಂದನ್ನು ಪ್ರಕಟ ಮಾಡಿತ್ತು. ಇದರಲ್ಲಿ ಸಿಎಎ ಬಗ್ಗೆ ಅನೇಕ ಸುಳ್ಳು ಮತ್ತು ಅರ್ಧ ಸತ್ಯಗಳನ್ನು ಹೇಳಲಾಗಿದ್ದು, ಅತ್ಯಂತ ಕಳಪೆಯಾಗಿ ಇದ್ದನ್ನು ಡ್ರಾಫ್ಟ್‌ ಮಾಡಲಾಗಿದೆ. ಇದನ್ನು ತನ್ನ ಪ್ರೆಸ್‌ ಇನ್‌ಫರ್ಮೇಷನ್‌ ಬ್ಯೂರೋ (Press Information Bureau – PIB) ವೆಬ್‌ಸೈಟಿನಲ್ಲಿ ಪ್ರಕಟ ಮಾಡಿತ್ತು, ಅದರ X ನಲ್ಲಿಯೂ ಪ್ರಕಟ ಮಾಡಲಾಗಿತ್ತು. ಆದರೆ ಈಗ ಇದರ [&#8230;]]]></description>
										<content:encoded><![CDATA[
<p>ನಿನ್ನೆ, ಮಾರ್ಚ್‌ 12, 2024 ಮಂಗಳವಾರ ಕೇಂದ್ರ ಗೃಹ ಸಚಿವಾಲಯ ಪೌರತ್ವ (ತಿದ್ದುಪಡಿ) ಕಾಯ್ದೆ-2019 ರ ಬಗ್ಗೆ ಎರಡು ಪುಟಗಳ ಒಂದು ಸಕಾರಾತ್ಮಕ ನಿರೂಪಣೆಯೊಂದನ್ನು ಪ್ರಕಟ ಮಾಡಿತ್ತು. ಇದರಲ್ಲಿ ಸಿಎಎ ಬಗ್ಗೆ ಅನೇಕ ಸುಳ್ಳು ಮತ್ತು ಅರ್ಧ ಸತ್ಯಗಳನ್ನು ಹೇಳಲಾಗಿದ್ದು, ಅತ್ಯಂತ ಕಳಪೆಯಾಗಿ ಇದ್ದನ್ನು ಡ್ರಾಫ್ಟ್‌ ಮಾಡಲಾಗಿದೆ.</p>



<p>ಇದನ್ನು ತನ್ನ ಪ್ರೆಸ್‌ ಇನ್‌ಫರ್ಮೇಷನ್‌ ಬ್ಯೂರೋ (Press Information Bureau – PIB) ವೆಬ್‌ಸೈಟಿನಲ್ಲಿ ಪ್ರಕಟ ಮಾಡಿತ್ತು, ಅದರ X ನಲ್ಲಿಯೂ ಪ್ರಕಟ ಮಾಡಲಾಗಿತ್ತು. ಆದರೆ ಈಗ ಇದರ ಅಧಿಕೃತ ಪ್ರತಿಗಳನ್ನು ಅಲ್ಲಿಂದ ಡಿಲಿಟ್‌ ಮಾಡಲಾಗಿದ್ದು, ಎಲ್ಲಿಯೂ ಲಭ್ಯವಿಲ್ಲ!</p>



<p>ಇದನ್ನು ಮಂಗಳವಾರ ಸಂಜೆ 6:43 ಕ್ಕೆ ಪಿಐಬಿ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಿ, ಆ ನಂತರ ಡಿಲಿಟ್‌ ಮಾಡಲಾಗಿದೆ. ತನ್ನ X ಖಾತೆಯಲ್ಲಿ CAA Myth Busters ಎಂದು ಪೋಸ್ಟ್‌ ಮಾಡಿತ್ತು, ಅಲ್ಲಿಂದಲೂ ಅದು ಕಾಣೆಯಾಗಿದೆ. Positive Narrative on Citizenship Amendment Act-2019 ಎಂಬ ಈ ಪ್ರಕಟಣೆಯನ್ನು ಯಾಕೆ ಎಲ್ಲಾ ಕಡೆಗಳಿಂದಲೂ ತೆಗೆದುಹಾಕಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.</p>



<p>ಈ ಎರಡು ಪುಟಗಳ ಪ್ರಕಟಣೆಯಲ್ಲಿ ಒಟ್ಟು ಎಂಟು ಪ್ರಶ್ನೆಗಳನ್ನು ಹಾಕಿ, ಅವುಗಳಿಗೆ ಉತ್ತರವನ್ನು ನೀಡಲಾಗಿದೆ. ಇದರ ತುಂಬಾ ಮೋದಿಯವರು ತಮ್ಮ ʼಮೇರೆ ಪ್ಯಾರೆ ದೇಶವಾಸಿಯೋ ..ʼಗಳ ತಲೆಗೆ ಸುಳ್ಳುಗಳನ್ನು ತುಂಬಲು ಯತ್ನಿಸಿದ್ದಾರೆ. ಇದರಲ್ಲಿ ಕೇಂದ್ರ ಸರ್ಕಾರ ಹಸಿ ಹಸಿ ಸುಳ್ಳುಗಳನ್ನೂ, ಅರ್ಧ ಸತ್ಯಗಳನ್ನೂ ಹೇಳಿದೆ. ಒಟ್ಟಾರೆ ಸಿಎಎ ಬಗ್ಗೆ ಪಾಸಿಟಿವ್‌ ಎಂದು ಕಳಪೆ ನಿರೂಪಣೆಗಳನ್ನು ನೀಡಲಾಗಿದೆ.</p>



<p>ಇಲ್ಲಿ, ಗೃಹ ಸಚಿವಾಲಯದ ಈ ಸುಳ್ಳು ಪ್ರಶ್ನೋತ್ತರಗಳನ್ನು ಭಾಷಾಂತರ ಮಾಡಿ, ವಿಶ್ಲೇಷಣೆ ನಡೆಸಲಾಗಿದ್ದು, ಒಂದೊಂದು ಪ್ರಶ್ನೆಗಳನ್ನೂ ʼಪ್ರಶ್ನಿಸಲಾಗಿದೆʼ. ಈ ಪ್ರಕಟಣೆಯ ಪಿಡಿಎಫ್‌ ಸಂಗ್ರಹಿಸಲಾಗಿದ್ದು ಇಲ್ಲಿ ಓದಿ: <a href="https://www.scribd.com/document/712812911/Positive-narrative-on-Citizenship-Amendment-Act-2019" data-type="link" data-id="https://www.scribd.com/document/712812911/Positive-narrative-on-Citizenship-Amendment-Act-2019">Positive Narrative on Citizenship Amendment Act-2019</a></p>


<div class="wp-block-image">
<figure class="aligncenter size-full is-resized"><img decoding="async" width="560" height="799" src="https://peepalmedia.com/wp-content/uploads/2024/03/image-5.png" alt="" class="wp-image-36971" style="width:332px;height:auto" srcset="https://peepalmedia.com/wp-content/uploads/2024/03/image-5.png 560w, https://peepalmedia.com/wp-content/uploads/2024/03/image-5-210x300.png 210w, https://peepalmedia.com/wp-content/uploads/2024/03/image-5-150x214.png 150w, https://peepalmedia.com/wp-content/uploads/2024/03/image-5-300x428.png 300w" sizes="(max-width: 560px) 100vw, 560px" /></figure></div>

<div class="wp-block-image">
<figure class="aligncenter size-full is-resized"><img decoding="async" width="544" height="452" src="https://peepalmedia.com/wp-content/uploads/2024/03/image-6.png" alt="" class="wp-image-36972" style="width:314px;height:auto" srcset="https://peepalmedia.com/wp-content/uploads/2024/03/image-6.png 544w, https://peepalmedia.com/wp-content/uploads/2024/03/image-6-300x249.png 300w, https://peepalmedia.com/wp-content/uploads/2024/03/image-6-150x125.png 150w" sizes="(max-width: 544px) 100vw, 544px" /></figure></div>


<p class="has-text-align-center" style="font-size:20px"><strong><span style="text-decoration: underline;">ಸಿಎಎ-2019 ರ ಬಗ್ಗೆ ಧನಾತ್ಮಕ ನಿರೂಪಣೆ</span></strong></p>



<p class="has-text-align-center">ಪ್ರಕಟಣೆ: 12&nbsp; ಮಾರ್ಚ್‌ 2024 6:43PM, ಪಿಐಬಿ ದೆಹಲಿ</p>



<p>ಸ್ವತಂತ್ರ ನಂತರ ಇತರ ಧರ್ಮದ ಭಾರತೀಯ ನಾಗರಿಕರಂತೆ ತಮ್ಮ ಆಚರಣೆಗಳನ್ನು ನಡೆಸುತ್ತಾ, ಆನಂದದಿಂದ ಬದುಕುತ್ತಿರುವ ಭಾರತೀಯ ಮುಸ್ಲೀಮರು ತಮ್ಮ ಹಕ್ಕುಗಳನ್ನು ಸಂಭ್ರಮಿಸಲು ಅವರ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಮೊಟಕುಗೊಳಿಸದೆ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಧಾರ್ಮಿಕ ಆಧಾರದ ಮೇಲೆ ಕಿರುಕುಳಕ್ಕೊಳಗಾಗಿ ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಭಾರತವನ್ನು ಪ್ರವೇಶಿಸಿದ ಫಲಾನುಭವಿಗಳಿಗಾಗಿ, ಅವರಿಗಾದ ಕಿರುಕುಳವನ್ನು ಸಮಾಧಾನಪಡಿಸಲು ಪರಿಹಾರವಾಗಿ CAA (ಪೌರತ್ವ ತಿದ್ದುಪಡಿ ಕಾಯ್ದೆ) 2019 ರ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಅರ್ಹತಾ ಅವಧಿಯನ್ನು 11 ರಿಂದ 5 ವರ್ಷಗಳಿಗೆ ಕಡಿಮೆ ಮಾಡಲಾಗಿದೆ.</p>



<p><strong>ಸತ್ಯ ಏನು? </strong>ಇಲ್ಲಿ ಉಲ್ಲೇಖ ಮಾಡಲಾಗಿರುವ &nbsp;“compensation for appeasing their persecution &#8211; ಅವರಿಗಾದ ಕಿರುಕುಳವನ್ನು ಸಮಾಧಾನಪಡಿಸಲು ಪರಿಹಾರವಾಗಿ ” ಎಂದರೆ ಎನು ಎಂಬುದು ಸ್ಪಷ್ಟವಾಗಿಲ್ಲ. ಈ ಹೇಳಿಕೆಯೇ ಆಪ್ರಾಮಾಣಿಕತೆಯಿಂದ ಕೂಡಿದೆ. ಈ ಮೂರು ದೇಶಗಳಲ್ಲಿ ಕಿರುಕುಳಕ್ಕೆ ಒಳಗಾದವರಿಗೆ ಪರಿಹಾರ ನೀಡುತ್ತೇವೆ, “generous treatment – ಉದಾರತೆಯಿಂದ ನಡೆಸಿಕೊಳ್ಳುತ್ತೇವೆ” ಎಂದು ಹೇಳುವ ಕೇಂದ್ರದ ಮುಂದೆ ಕೆಲವು ಪ್ರಶ್ನೆಗಳಿವೆ:</p>



<ol class="wp-block-list">
<li>ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ- ಈ ಮೂರು ದೇಶಗಳಿಂದ ಬಂದವರಿಗೆ ಮಾತ್ರ ಯಾಕೆ ಈ ಸೌಲಭ್ಯ?</li>



<li>ಧಾರ್ಮಿಕ ಕಿರುಕುಳ ಮಾತ್ರ ಯಾಕೆ? ಲಿಂಗಾಧಾರಿತ ಕಿರುಕುಳ, ಜನಾಂಗೀಯ ಕಿರುಕುಳ ಅಥವಾ ರಾಜಕೀಯ ಕಿರುಕುಳ, ವರ್ಣಬೇಧದ ಕಿರುಕುಳ, ಇತ್ಯಾದಿ ಕಿರುಕುಳದಿಂದ ಆ ದೇಶಗಳನ್ನು ಬಿಟ್ಟು ಬಂದವರನ್ನು ಯಾಕೆ ಪರಿಗಣಿಸಿಲ್ಲ?</li>



<li>ಈ ದೇಶಗಳಲ್ಲಿ ಮುಸ್ಲೀಂ ಸಮುದಾಯಕ್ಕೆ ಸೇರಿದ ಕೆಲ ಪಂಗಡಗಳೂ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿವೆ. ಅವುಗಳನ್ನು ಯಾಕೆ ಇಲ್ಲಿ ಸೇರಿಸಿಲ್ಲ?</li>



<li>ಡಿಸೆಂಬರ್ 31, 2014ರಂದು ಮತ್ತು ಅದಕ್ಕೆ ಮೊದಲು ಬಂದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮುಸ್ಲೀಮರು ಬಿಡಿ, ಆಮೇಲೆ ಸಕಾರಣಗಳನ್ನು ಇಟ್ಟುಕೊಂಡು ಭಾರತಕ್ಕೆ ಬಂದಿರುವ ʼಮುಸ್ಲೀಮೇತರರʼ ಕಥೆ ಏನು? ಅವರನ್ನು ಏನು ಮಾಡುತ್ತೀರಿ? ಮತ್ತು ಅದೇ ದಿನಾಂಕವನ್ನು ಯಾಕೆ ಪರಿಗಣಿಸಲಾಗಿದೆ?</li>
</ol>



<p>ಕೇಂದ್ರದ ಬಳಿ ಈ ಪ್ರಶ್ನೆಗಳಿಗೆ ಉತ್ತರವಿಲ್ಲ!</p>



<p></p>



<p class="has-text-align-center"><strong>***************</strong></p>



<p style="font-size:18px"><strong>ಪ್ರಶ್ನೋತ್ತರಗಳ ವಿಶ್ಲೇಷಣೆ:</strong></p>



<p style="font-size:16px">1. <strong>ಪ್ರಶ್ನೆ: ಭಾರತೀಯ ಮುಸ್ಲಿಮರ ಮೇಲೆ ಕಾಯಿದೆ ಬೀರುವ ಪರಿಣಾಮಗಳೇನು?</strong></p>



<p><strong>ಗೃಹ ಸಚಿವಾಲಯದ ಉತ್ತರ: </strong>ಭಾರತೀಯ ಮುಸ್ಲಿಮರು ಈ ಬಗ್ಗೆ ಚಿಂತೆ ಮಾಡಬೇಕಿಲ್ಲ, ಏಕೆಂದರೆ ಸಿಎಎ ಅವರ ಪೌರತ್ವದ ಮೇಲೆ ಪರಿಣಾಮ ಬೀರಬಲ್ಲ ಯಾವುದೇ ನಿಬಂಧನೆಯನ್ನು ಹೊಂದಿಲ್ಲ ಮತ್ತು ಇದು ಪ್ರಸ್ತುತ ದೇಶದಲ್ಲಿರುವ 18 ಕೋಟಿ ಮುಸ್ಲಿಮರಿಗೆ ಯಾವುದೇ ರೀತಿಯಲ್ಲೂ ಸಂಬಂಧ ಪಟ್ಟಿಲ್ಲ. ಅವರು ತಮ್ಮ ಹಿಂದೂ ಸಹ-ನಾಗರಿಕರಂತೆ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ಈ ಕಾಯಿದೆ ಯಾವುದೇ ಭಾರತೀಯ ನಾಗರಿಕನೂ ತನ್ನ ಪೌರತ್ವವನ್ನು ಸಾಬೀತುಪಡಿಸಲು ಯಾವುದೇ ದಾಖಲೆಯನ್ನು ನೀಡಬೇಕೆಂದು ಹೇಳುವುದಿಲ್ಲ.</p>



<p><strong>ನಿಜ ಏನು? </strong>ನಿರಾಶ್ರಿತರು ಮತ್ತು ನುಸುಳುಕೋರರ ಬಗೆಗಿನ ಮೋದಿ ಸರ್ಕಾರದ ನೀತಿಗಳ ವಿಚಾರದಲ್ಲಿ ಒಂದು ‘ಕ್ರೊನೋಲಜಿʼ  ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಈ ಹಿಂದೆ ಅನೇಕ ಬಾರಿ ಹೇಳಿದ್ದರು. 2019ರ ಎಪ್ರಿಲ್‌ನಲ್ಲಿ, “ಮೊದಲು ನಾವು ಪೌರತ್ವ ತಿದ್ದುಪಡಿ ಮಸೂದೆಯನ್ನು (ಸಿಎಬಿ) ತರುತ್ತೇವೆ, ಪ್ರತಿಯೊಬ್ಬ ನಿರಾಶ್ರಿತರಿಗೂ ಪೌರತ್ವ ಸಿಗುತ್ತದೆ ಮತ್ತು ಅದರ ನಂತರ ನಾವು ನಾಗರಿಕರ ರಾಷ್ಟ್ರೀಯ ನೋಂದಣಿಯನ್ನು ತರುತ್ತೇವೆ. ಆದ್ದರಿಂದ ನಿರಾಶ್ರಿತರು ಚಿಂತಿಸಲು ಯಾವುದೇ ಕಾರಣವಿಲ್ಲ. ಆದರೆ ನುಸುಳುಕೋರರು ಖಂಡಿತವಾಗಿಯೂ ಚಿಂತೆಯಾಬೇಕು, ಅವರಲ್ಲಿ ಒಂದು ಕಾರಣವಿದೆ. ಆದ್ದರಿಂದ ಕ್ರೊನೋಲಜಿಯನ್ನು ಅರ್ಥಮಾಡಿಕೊಳ್ಳಿ,” ಎಂದು ಹೇಳಿದ್ದರು. “ಕ್ರೊನೋಲಜಿ ಸಮಜಿಯೇ” ಎಂಬ ಶಾ ಭಾಷಣದ ಈ ವಿಡಿಯೋ ತುಂಬಾ ವೈರಲ್‌ ಆಗಿತ್ತು. &#8220;ಎನ್‌ಆರ್‌ಸಿ ಬಂಗಾಳಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ಇರುತ್ತದೆ, ಏಕೆಂದರೆ &#8220;ಎಲ್ಲೆಡೆ ನುಸುಳುಕೋರರು ತುಂಬಿದ್ದಾರೆ,&#8221; ಎಂದು ಅವರು ಹೇಳಿದ್ದರು. ಡಿಸೆಂಬರ್ 10, 2019 ರಂದು ಸಂಸತ್ತಿನಲ್ಲಿ NRC ಖಂಡಿತವಾಗಿಯೂ ಬರಲಿದೆ ಮತ್ತು ಅದನ್ನು ಜಾರಿಗೆ ತಂದಾಗ &#8220;ಒಬ್ಬ ನುಸುಳುಕೋರನಿಗೂ ಉಳಿಗಾಲವಿಲ್ಲ,” ಎಂದು ಅಮಿತ್‌ ಶಾ ಹೇಳಿದ್ದರು.</p>



<p>ಅಂದರೆ, ಶಾ ಹೇಳಿದ್ದು, ಎನ್‌ಆರ್‌ಸಿ ಒಂದು ಪ್ರಕ್ರಿಯೆ, &nbsp;ಭಾರತದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಪೌರತ್ವವನ್ನು ಅವರು ಒದಗಿಸುವ ದಾಖಲೆಗಳ ಆಧಾರದ ಮೇಲೆ ಪರೀಕ್ಷಿಸಲಾಗುತ್ತದೆ. ಎನ್‌ಆರ್‌ಸಿಯನ್ನು ಮೊದಲು ಜಾರಿಗೆ ತಂದ ಅಸ್ಸಾಂನಲ್ಲಿ ಅದು ಉಂಟುಮಾಡಿದ ಅಪಾಯಗಳು ನಮ್ಮ ಕಣ್ಣ ಮುಂದೆ ಇವೆ. ಅಸ್ಸಾಮಿನಲ್ಲಿ ಸರಿಯಾದ ದಾಖಲೆಗಳನ್ನು ನೀಡಿ ಸಾಬೀತು ಮಾಡಲಾಗದ ಸುಮಾರು 19 ಲಕ್ಷ ಜನರನ್ನು ಭಾರತೀಯ ನಾಗರಿಕರೆಂದು ಪರಿಗಣಿಸದೆ ಹೊರಗಿಡಲಾಗಿದೆ. ಇವರಲ್ಲಿ ಬಹುತೇಕರು ಹಿಂದೂಗಳು.</p>



<p>ಸಿಎಎ ಹಿಂದಿನ ಉದ್ದೇಶವೆಂದರೆ, ಎನ್‌ಆರ್‌ಸಿಯಲ್ಲಿ ದಾಖಲೆ ನೀಡಲಾಗದೆ ಪೌರತ್ವದಿಂದ ಹೊರಗಿಡಲ್ಪಟ್ಟ ಹಿಂದೂಗಳಿಗೆ ಸಿಎಎ ಪೌರತ್ವ ನೀಡುತ್ತದೆ. ಆದರೆ ಈ ಇಡೀ ಪ್ರಕ್ರಿಯೆಯಲ್ಲಿ ವಿಫಲರಾದ ಮುಸ್ಲಿಮರಿಗೆ ಯಾವುದೇ ಮಾರ್ಗವಿಲ್ಲ. ಅವರನ್ನು &#8216;ನುಸುಳುಕೋರರು&#8217; ಎಂದು ಬ್ರಾಂಡ್ ಮಾಡಿ ಹಿಂಸಿಸುವ ಸಾಧ್ಯತೆಗಳಿವೆ.</p>



<p>ಆದ್ದರಿಂದ ಸದ್ಯ ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿರುವ ಈ ‌ʼಪಾಸಿಟಿವ್ ನರೇಟಿವ್‌ʼ ಪ್ರಕಟಣೆಯಲ್ಲಿ ಹೇಳಿರುವುದಕ್ಕೆ ಅರ್ಥವಿಲ್ಲ, ಅದೊಂದು ಸುಳ್ಳು. ಸದ್ಯ ಎನ್‌ಆರ್‌ಸಿಯನ್ನು ಜಾರಿಗೆ ತರುವ ತನ್ನ ಯೋಜನೆಗಳನ್ನು ಮೋದಿ ಸರ್ಕಾರ ಕೈಬಿಟ್ಟಿದ್ದರೂ, ಭಾರತೀಯ ಮುಸ್ಲಿಮರು ತಮ್ಮ ಪೌರತ್ವದ ಮೇಲೆ ಸಿಎಎ ಪರಿಣಾಮ ಬೀರುತ್ತದೆ ಎಂದು ಚಿಂತೆ ಮಾಡಬೇಡಿ ಎಂದಿರುವುದರಲ್ಲಿ ಸತ್ಯವೇ ಇಲ್ಲ.</p>



<p>ಈಗ, ಭಾರತದ ಮುಸ್ಲೀಂ ಮತ್ತು ಹಿಂದೂ ಮಹಿಳೆಯರಿಬ್ಬರು ದಾಖಲೆ ಇಲ್ಲದ ಎಂದೋ ಹಿಂದೆ ಬಾಂಗ್ಲಾದಿಂದ ಬಂದಿರುವ ಅವರದೇ ಧರ್ಮದ ಪುರುಷರನ್ನು ಮದುವೆ ಆಗಿತ್ತಾರೆ ಎಂದುಕೊಳ್ಳಿ. ತಿದ್ದುಪಡಿ ಮಾಡದ ಪೌರತ್ವ ಕಾಯ್ದೆಯಡಿಯಲ್ಲಿ ತಾಯಂದಿರು ಭಾರತೀಯರಾದರೂ ಅವರ ಮಕ್ಕಳನ್ನು &#8216;ಅಕ್ರಮ ವಲಸಿಗರು&#8217; ಎಂದು ಪರಿಗಣಿಸಲಾಗುತ್ತದೆ ಮತ್ತು ಮಕ್ಕಳನ್ನು ಅವರ ತಂದೆಯೊಂದಿಗೆ ಗಡೀಪಾರು ಮಾಡಬೇಕಾಗುತ್ತದೆ. ಒಂದು ವೇಳೆ CAA ಈ ಹಿಂದೂ ಕುಟುಂಬಕ್ಕೆ ಭಾರತದಲ್ಲಿ ಬದುಕಲು ಅವಕಾಶ ನೀಡಿದರೂ, ಮುಸ್ಲೀಂ ಮಹಿಳೆ ಮಾತ್ರ ತನ್ನ ಪತಿ ಮತ್ತು ಮಕ್ಕಳನ್ನು ಬಾಂಗ್ಲಾಕ್ಕೆ ಕಳಿಸಬೇಕಾಗುತ್ತದೆ. ಆಕೆಗೆ ಇರುವ ಎರಡು ಅವಕಾಶಗಳೆಂದರೆ: ಒಂದೋ ತನ್ನ ಕುಟುಂಬದ ಜೊತೆಗೆ ಭಾರತವನ್ನು ಬಿಡಬೇಕು, ಇಲ್ಲವೇ ತನ್ನ ಪತಿ ಮತ್ತು ಮಕ್ಕಳನ್ನು ಬಾಂಗ್ಲಕ್ಕೆ ಕಳುಹಿಸಿ ಒಂಟಿಯಾಗಿ ಭಾರತದಲ್ಲೇ ಬದುಕಬೇಕು.</p>



<p style="font-size:16px"><strong>2. ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನಕ್ಕೆ ಈ ಅಕ್ರಮ ಮುಸ್ಲಿಂ ವಲಸಿಗರನ್ನು ವಾಪಸು ಕಳುಹಿಸಲು ಯಾವುದೇ ನಿಬಂಧನೆ ಅಥವಾ ಒಪ್ಪಂದವಿದೆಯೇ?</strong></p>



<p><strong>ಗೃಹ ಸಚಿವಾಲಯದ ಉತ್ತರ:</strong> ಮುಸ್ಲೀಂ ವಲಸಿಗರನ್ನು ಈ ದೇಶಗಳಿಗೆ ಮರಳಿ ಕಳುಹಿಸಲು ಭಾರತ ಈ ದೇಶಗಳೊಂದಿಗೆ ಯಾವುದೇ ರೀತಿಯ ಒಪ್ಪಂದವನ್ನು ಮಾಡಿಕೊಂಡಿಲ್ಲ. ಈ ಪೌರತ್ವ ಕಾಯ್ದೆಗೂ ಅಕ್ರಮ ವಲಸಿಗರ ಗಡೀಪಾರಿಗೂ ಯಾವುದೇ ಸಂಬಂಧ ಇಲ್ಲ. ಆದ್ದರಿಂದ ಸಿಎಎ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂಬ ಮುಸ್ಲಿಮರು ಮತ್ತು ವಿದ್ಯಾರ್ಥಿಗಳು ಹಾಗೂ ಒಂದು ವರ್ಗದ ಜನರ ವಾದಕ್ಕೆ ಅರ್ಥವಿಲ್ಲ. </p>



<p><strong>ನಿಜ ಏನು?</strong> ಇದೊಂದು ಭಯಂಕರ ಮೋಸ ಮತ್ತು ಹಸಿಹಸಿ ಸುಳ್ಳು. ಭಾರತದಲ್ಲಿ <a href="https://www.indiacode.nic.in/bitstream/123456789/2259/3/A1946-31.pdf" data-type="link" data-id="https://www.indiacode.nic.in/bitstream/123456789/2259/3/A1946-31.pdf">ವಿದೇಶಿಯರ ಕಾಯಿದೆ (ವಿಭಾಗ 3)</a> &#8211; Foreigners Act (Section 3) &nbsp;ಮತ್ತು <a href="https://www.mha.gov.in/PDF_Other/act1920_17042017.pdf" data-type="link" data-id="https://www.mha.gov.in/PDF_Other/act1920_17042017.pdf">ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯಿದೆ</a> (ವಿಭಾಗ 5) &#8211; Passport (Entry into India) Act (Section 5) ಎಂಬ ಎರಡು ಕಾಯಿದೆಗಳಿವೆ. ಇವು ಭಾರತದಲ್ಲಿ ಅಕ್ರಮವಾಗಿ ವಾಸಿಸುವವರನ್ನು ಗಡಿಪಾಡು ಮಾಡಲು ಸರ್ಕಾರಕ್ಕೆ ಅಧಿಕಾರವನ್ನು ನೀಡಿವೆ. ಈಗಾಗಲೇ ದೇಶದಲ್ಲಿ ಅಕ್ರಮವಾಗಿ ತಂಗಿದ್ದಾರೆ ಎಂದು ಕಂಡುಬಂದಿರುವ ವ್ಯಕ್ತಿಗಳನ್ನು ಗಡೀಪಾರು ಮಾಡಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.</p>



<p>ಆ ವ್ಯಕ್ತಿಯನ್ನು ಆತನ ದೇಶಕ್ಕೆ ಗಡಿಪಾರು ಮಾಡಲು ಯಾವುದೇ ಒಪ್ಪಂದಗಳು ಇಲ್ಲದೇ ಇದ್ದಾಗ, ಆತನಿಗೆ ಜೈಲು ಶಿಕ್ಷೆ ನೀಡಲಾಗುತ್ತದೆ ಅಥವಾ ಡಿಟೆನ್ಷನ್‌ ಕ್ಯಾಂಪ್‌ಗೆ ಹಾಕಲಾಗುತ್ತದೆ. ಈ ಎರಡು ಕಾಯಿದೆಗಳನ್ನು ಬಳಸುವುದಿಲ್ಲ ಎಂಬುದು ಯಾವ ಗ್ಯಾರಂಟಿ? ಒಂದು ವೇಳೆ ʼಅಕ್ರಮ ವಲಸಿಗ ಮುಸ್ಲೀಮರನ್ನುʼ ಜೈಲು ಅಥವಾ ಡಿಟೆನ್ಸಷನ್‌ ಕ್ಯಾಂಪಿಗೆ ಹಾಕದೇ ಇದ್ದರೂ, ಅವರ ಮತದಾನದ ಹಕ್ಕನ್ನು ಕಸಿಯುವ ಸಾಧ್ಯತೆಯಿದೆ.</p>



<p style="font-size:16px"><strong>3. ಅಕ್ರಮ ವಲಸಿಗ ಎಂದರೆ ಯಾರು?</strong></p>



<p><strong>ಗೃಹ ಸಚಿವಾಲಯದ ಉತ್ತರ:</strong> ಪೌರತ್ವ ಕಾಯ್ದೆ, 1955 ರಂತೆ, ಈ ಸಿಎಎ ಕೂಡ ಕಾನೂನುಬಾಹಿರ ವಲಸಿಗರನ್ನು ಮಾನ್ಯತೆ ಇರುವ ಯಾವುದೇ ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿರುವ ವಿದೇಶಿ ಎಂದು ಪರಿಗಣಿಸುತ್ತದೆ.</p>



<p><strong>ನಿಜ ಏನು?</strong> 2003 ರಲ್ಲಿ <a href="https://www.refworld.org/legal/legislation/natlegbod/2004/en/14043" data-type="link" data-id="https://www.refworld.org/legal/legislation/natlegbod/2004/en/14043">ವಾಜಪೇಯಿ ಸರ್ಕಾರವು &#8216;ಅಕ್ರಮ ವಲಸಿಗರು&#8217; ನ್ಯಾಚುರಲೈಸೇಷನ್ </a>ಅಥವಾ ಮದುವೆಯ ಮೂಲಕ ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಲು ಪೌರತ್ವ ಕಾಯ್ದೆಯಲ್ಲಿ ತಿದ್ದುಪಡಿ ತಂದಿತು . 2016 ರಲ್ಲಿ ಮೋದಿ ಸರ್ಕಾರವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದಿರುವ ಮುಸ್ಲಿಮೇತರ &#8216;ಅಕ್ರಮ ವಲಸಿಗರನ್ನು&#8217; ಈ ಕಾನೂನಿನಿಂದ ಹೊರಗಿಡಲು <a href="https://prsindia.org/billtrack/the-citizenship-amendment-bill-2016" data-type="link" data-id="https://prsindia.org/billtrack/the-citizenship-amendment-bill-2016">ಕಾಯಿದೆಯಲ್ಲಿ ತಿದ್ದುಪಡಿ</a>ಯನ್ನು ಮಾಡಿತು. ಇದು ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದಿರುವ ʼಅಕ್ರಮ ವಲಸಿಗ ಹಿಂದೂಗಳಿಗೆʼ ವಿನಾಯಿತಿಯನ್ನು ನೀಡಿದೆ. CAA-2019 ಈಗ ಇದನ್ನು ಒಂದು ಹೆಜ್ಜೆ ಮುಂದಕ್ಕೆ ತೆಗೆದುಕೊಂಡು ಹೋಗಿ, ಅವರ ಪೌರತ್ವದ ಟ್ರ್ಯಾಕಿಂಗ್ ಮಾಡುವ ಪ್ರಕ್ರಿಯೆಗೆ ವೇಗವನ್ನು ನೀಡಿದೆ. &nbsp;</p>



<p>ಸರಳವಾಗಿ ಹೇಳುವುದಾದರೆ, ಡಿಸೆಂಬರ್ 31, 2014 ರವರೆಗೆ ಮಾನ್ಯತೆ ಇರುವ ದಾಖಲೆಗಳಿಲ್ಲದೆ ಭಾರತಕ್ಕೆ ಬಂದಿರುವ ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಅಫ್ಘಾನಿಸ್ತಾನದ ಮುಸ್ಲೀಮರನ್ನು ಮಾತ್ರ ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುತ್ತದೆ, ಮುಸ್ಲೀಮೇತರರನ್ನು ಅಲ್ಲ! ಧರ್ಮದ ಆಧಾರದ ಮೇಲೆ ಮಾಡುವ ಈ ತಾರತಮ್ಯ ಭಾರತೀಯ ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ಸಂವಿಧಾನದ ಆರ್ಟಿಕಲ್‌ 26ವನ್ನು ಉಲ್ಲಂಘಿಸುತ್ತದೆ.</p>



<p style="font-size:16px"><strong>4. ಇಸ್ಲಾಂ ಮೇಲೆ ಈ ಕಾಯಿದೆ ಬೀರುವ ಪ್ರಭಾವವೇನು?</strong></p>



<p><strong>ಗೃಹ ಸಚಿವಾಲಯದ ಉತ್ತರ: </strong>ಆ ಮೂರು ಮುಸ್ಲಿಂ ರಾಷ್ಟ್ರಗಳಲ್ಲಿ ಅಲ್ಪಸಂಖ್ಯಾತರ (ಮುಸ್ಲೀಮೇತರ) ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದಾಗಿ ಇಸ್ಲಾಂ ಧರ್ಮಕ್ಕೆ ಪ್ರಪಂಚದಾದ್ಯಂತ ಕೆಟ್ಟ ಕಳಂಕ ಬಂದಿದೆ. ಎಷ್ಟೇ ಆದರೂ ಇಸ್ಲಾಂ ಒಂದು ಶಾಂತಿಯುತ ಧರ್ಮ, ಧಾರ್ಮಿಕತೆಯ ಆಧಾರದಲ್ಲಿ ದ್ವೇಷ/ಹಿಂಸೆ/ ಕಿರುಕುಳ ನೀಡುವುದನ್ನು ಅದು ಎಂದಿಗೂ ಬೋಧಿಸುವುದಿಲ್ಲ. ಈ ಶೋಷಣೆಗೆ ಸಹಾನುಭೂತಿ ಮತ್ತು ಪರಿಹಾರವನ್ನು ನೀಡಲು ತಂದಿರುವ ಈ ಕಾಯಿದೆ ಇಸ್ಲಾಂ ಧರ್ಮವನ್ನು ಈ ಕಳಂಕದಿಂದ ರಕ್ಷಿಸುತ್ತದೆ. </p>



<p><strong>ನಿಜ ಏನು?</strong> ಧಾರ್ಮಿಕತೆಯ ಕಾರಣಕ್ಕೆ ಕಿರುಕುಳಕ್ಕೆ ಒಳಗಾದವರನ್ನು ಮುಸ್ಲೀಂ ರಾಷ್ಟ್ರಗಳಿಂದ ಮಾತ್ರ ಯಾಕೆ ಎತ್ತಿಕೊಳ್ಳಲಾಗಿದೆ ಎಂಬುದು ಅರ್ಥವಾಗಿಲ್ಲ. ಇಲ್ಲಿ ಮುಸ್ಲಿಮೇತರ ನೆರೆಯ ರಾಷ್ಟ್ರಗಳಾದ ಮ್ಯಾನ್ಮಾರ್, ಚೀನಾ ಮತ್ತು ಶ್ರೀಲಂಕಾದಲ್ಲಿ ದೌರ್ಜನ್ಯಕ್ಕೆ ಒಳಗಾದ ಮುಸ್ಲೀಮೇತರರಿಗೆ ಅವಕಾಶ ಇಲ್ಲವೇ? ಮುಸ್ಲಿಂ ರಾಷ್ಟ್ರಗಳಲ್ಲಿ ನಡೆದ ಶೋಷಣೆಯಲ್ಲಿ ಮಾತ್ರ ಏನು ಸ್ಪೆಷಾಲಿಟಿ ಇದೆ ಎಂಬುದನ್ನು ಕೇಂದ್ರ ವಿವರಿಸಿಲ್ಲ. ಈಗ ಚೀನಾದಲ್ಲಿ ಓರ್ವ ಹಿಂದೂವಿನ ಮೇಲೆ ದೌರ್ಜನ್ಯವಾದರೆ ಆತ ಏನು ಮಾಡಬೇಕು? ಇದಕ್ಕಾಗಿ ಕೇಂದ್ರ ಬೇರೆಯದೇ ಕಾನೂನನ್ನು ತರುತ್ತದೆಯೇ? &nbsp;ತಾನು ಕಳಂಕದಿಂದ ರಕ್ಷಿಸಲು ಹೊರಟಿರುವ ʼಇಸ್ಲಾಂʼನಿಂದ ಮುಸ್ಲೀಮರನ್ನು ಬೇರೆಯಾಗಿ ಕೇಂದ್ರ ಹೇಗೆ ನೋಡುತ್ತದೆ? </p>



<p>ಸಿಎಎ ಇಸ್ಲಾಂ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಇಟ್ಟುಕೊಳ್ಳೋಣ, ಆದರೆ ಇದು ನಮ್ಮ ʼಐಡಿಯಾ ಆಫ್‌ ಇಂಡಿಯಾʼ, ಭಾರತದ ಎಲ್ಲರನ್ನೂ ಒಳಗೊಂಡು ಬೆಳೆಯುವ ಸಾಂಸ್ಕೃತಿಕ ಮೌಲ್ಯಗಳಿಗೆ ವಿರುದ್ದವಾಗಿದೆ. ಭಾರತ ಮೂರು ಸಾವಿರ ವರ್ಷಗಳ ಹಿಂದಿನಿಂದಲೂ ಲೆಕ್ಕವಿಲ್ಲದಷ್ಟು ಜನಾಂಗಗಳಿಗೆ ನೆಲೆಯನ್ನು ನೀಡಿದೆ. ಆದರೆ ಇತಿಹಾಸದಲ್ಲಿ ಮೊದಲ ಬಾರಿಗೆ ಮನುಷ್ಯನ ಪೌರತ್ವವನ್ನು, ಬದುಕುವ ಹಕ್ಕನ್ನು ಹತ್ತಿಕ್ಕಲು ಧರ್ಮವನ್ನು ಮಾನದಂಡವಾಗಿ ಬಳಸಿದೆ, ಇದು ಭಾರತದ ಸಂಸ್ಕೃತಿ, ಮೌಲ್ಯಗಳಿಗೆ ಬಗೆದ ದ್ರೋಹ.</p>



<p style="font-size:16px"><strong>5. ಭಾರತದ ಪೌರತ್ವ ಪಡೆಯಲು ಮುಸ್ಲಿಮರಿಗೆ ನಿರ್ಬಂಧವಿದೆಯೇ?</strong></p>



<p><strong>ಗೃಹ ಸಚಿವಾಲಯದ ಉತ್ತರ:</strong> ಇಲ್ಲ, ಪೌರತ್ವ ಕಾಯ್ದೆಯ ಸೆಕ್ಷನ್ 6 ರ ಅಡಿಯಲ್ಲಿ ಭಾರತದ ಪೌರತ್ವವನ್ನು ಪಡೆಯಲು ಜಗತ್ತಿನ ಯಾವ ಮೂಲೆಯಿಂದಾದ ಮುಸ್ಲೀಮರು ಬಂದರೂ, ಅವರಿಗೆ ಯಾವುದೇ ನಿರ್ಬಂಧವಿಲ್ಲ, ಪೌರತ್ವವನ್ನು ನ್ಯಾಚುರಲೈಸೇಷನ್‌ ಆಧಾರದಲ್ಲಿ ನೀಡಲಾಗುತ್ತದೆ.</p>



<p><strong>ನಿಜ ಏನು?</strong> 2003 ರಿಂದ ಪೌರತ್ವ ಕಾಯಿದೆಯು ಅಕ್ರಮ ವಲಸಿಗರಾಗಿರುವ ಯಾರೇ ಆದರೂ ಭಾರತದ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿರ್ಬಂಧಿಸುತ್ತದೆ. ಆದರೆ, ಈ ಸಿಎಎ ಮಾತ್ರ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದಿರುವ ʼಮುಸ್ಲಿಮೇತರ ಅಕ್ರಮ ವಲಸಿಗರಿಗೆʼ ಮತ್ತು ಅವರಿಗೆ ಭಾರತದಲ್ಲಿ ಹುಟ್ಟಿದ ಅವರ ಮಕ್ಕಳಿಗೆ ಭಾರತದ ಪೌರತ್ವವನ್ನು ಪಡೆಯಲು ಅವಕಾಶ ನೀಡುತ್ತದೆ. ಆದರೆ ಅಕ್ರಮ ವಲಸಿಗರು ಮುಸ್ಲೀಮರಾದರೆ, ಅವರಿಗೆ ಇದು ಸಾಧ್ಯವಿಲ್ಲ. </p>



<p style="font-size:16px"><strong>6. ಈ ತಿದ್ದುಪಡಿಯ ಅಗತ್ಯವೇನು?</strong></p>



<p><strong>ಗೃಹ ಸಚಿವಾಲಯದ ಉತ್ತರ:</strong> ಆ ಮೂರು ದೇಶಗಳಲ್ಲಿ ಕಿರುಕುಳಕ್ಕೊಳಗಾಗಿರುವ (ಮುಸ್ಲೀಮೇತರ) ಅಲ್ಪಸಂಖ್ಯಾತರಿಗೆ ಕರುಣೆ ತೋರಿಸಲು, ಈ ಕಾಯಿದೆಯು ಭಾರತದ ಉದಾರ ಸಂಸ್ಕೃತಿಯ ಪ್ರಕಾರ ಅವರ ಸಂತೋಷ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಭಾರತೀಯ ಪೌರತ್ವವನ್ನು ಪಡೆಯಲು ಅವರಿಗೆ ಅವಕಾಶವನ್ನು ನೀಡುತ್ತದೆ. ಪೌರತ್ವ ವ್ಯವಸ್ಥೆಯನ್ನು ಕಸ್ಟಮೈಸ್ ಮಾಡಲು ಮತ್ತು ಅಕ್ರಮ ವಲಸಿಗರನ್ನು ನಿಯಂತ್ರಿಸಲು ಈ ಕಾಯಿದೆಯ ಅಗತ್ಯವಿದೆ.</p>



<p><strong>ನಿಜ ಏನು?</strong> ಕಿರುಕುಳಕ್ಕೊಳಗಾದ ಜನರಿಗೆ ಈ ಮಟ್ಟಿಗೆ ಔದಾರ್ಯ ತೋರಿಸಲು ಧರ್ಮ ಆಧಾರಿತ ವಿನಾಯಿತಿಯನ್ನು ನೀಡುವ ಅಗತ್ಯವಿರಲಿಲ್ಲ. ತಮ್ಮ ಮೂಲದ ದೇಶದಲ್ಲಿ ಶೋಷಣೆಗೆ ಒಳಗಾಗುವ ಭಯವನ್ನು ಹೊಂದಿರುವ ಯಾವುದೇ ಅಕ್ರಮ ವಲಸಿಗರಿಗೆ ಭಾರತದಲ್ಲಿ ಅನಿರ್ದಿಷ್ಟಾವಧಿಯ ವರೆಗೆ ಉಳಿಯಲು ಅನುಮತಿ ನೀಡಲಾಗುವುದು ಮತ್ತು ಸರಿಯಾದ ಸಮಯ ಸಂದರ್ಭದಲ್ಲಿ ಅವರು ಭಾರತೀಯ ಪೌರತ್ವಕ್ಕೆ ಅರ್ಹರಾಗುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಬೇಕಾಗಿತ್ತು. ಈ ರೀತಿಯೇ ಬೇರೆಲ್ಲಾ ದೇಶಗಳು ತಮ್ಮಲ್ಲಿ ಇರುವ ನಿರಾಶ್ರಿತರನ್ನು ʼನ್ಯಾಚುರಲೈಸ್‌ʼ ಮಾಡುವುದು, ಇದಕ್ಕೆ ನಿರಾಶ್ರಿತನ ಧರ್ಮವನ್ನು ನೀಡುವ ಅಗತ್ಯವಿಲ್ಲ.</p>



<p style="font-size:16px"><strong>7. ಸರ್ಕಾರ ತೆಗೆದುಕೊಂಡಿರುವ ಹಿಂದಿನ ಕ್ರಮಗಳೇನು?</strong></p>



<p><strong>ಗೃಹ ಸಚಿವಾಲಯದ ಉತ್ತರ:</strong> 2016 ರಲ್ಲಿ ಕೇಂದ್ರ ಸರ್ಕಾರ ಆ ಮೂರು ದೇಶಗಳ ಅಲ್ಪಸಂಖ್ಯಾತರನ್ನು ಭಾರತದಲ್ಲಿ ಉಳಿಯಲು ಬೇಕಾದ ದೀರ್ಘಾವಧಿ ವೀಸಾವನ್ನು ಪಡೆಯಲು ಅರ್ಹರನ್ನಾಗಿ ಮಾಡಿದೆ.</p>



<p><strong>ಸತ್ಯ ಏನು? </strong>&nbsp;ಆದರೆ ಕೇಂದ್ರ ಕೆಲವು ವಿಚಾರಗಳನ್ನು ಮರೆತಂತಿದೆ. ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್‌ ಆಡಳಿತದಿಂದ ಪಲಾಯನ ಮಾಡಿ ಭಾರತಕ್ಕೆ ಬರಲು ಬಯಸಿದ ಸಿಖ್‌ಗಳಿಗೆ ಭಾರತದ ವೀಸಾ ಸಿಗುವುದು ಸುಲಭವಿರಲಿಲ್ಲ. <a href="https://www.hindustantimes.com/world-news/hed-not-have-died-this-brutally-had-wife-of-sikh-man-killed-in-kabul-attack-101655656793779.html" data-type="link" data-id="https://www.hindustantimes.com/world-news/hed-not-have-died-this-brutally-had-wife-of-sikh-man-killed-in-kabul-attack-101655656793779.html">ಕಾಬೂಲ್‌ನಲ್ಲಿ ಭಯೋತ್ಪಾದಕರಿಂದ ಹತ್ಯೆಯಾದ ಸಿಖ್ ವ್ಯಕ್ತಿ</a>ಗೆ ಭಾರತ ವೀಸಾವನ್ನೇ ನೀಡಿರಲಿಲ್ಲ. 2021-22ರಲ್ಲಿ ಭಾರತದಲ್ಲಿ ಉಳಿಯಲು ಬಯಸಿದ <a href="https://timesofindia.indiatimes.com/city/jaipur/no-indian-citizenship-1500-pak-hindus-return-in-18-mths/articleshow/93699054.cms" data-type="link" data-id="https://timesofindia.indiatimes.com/city/jaipur/no-indian-citizenship-1500-pak-hindus-return-in-18-mths/articleshow/93699054.cms">1500 ಪಾಕಿಸ್ತಾನಿ ಹಿಂದೂಗಳು </a>ಭಾರತ ಸರ್ಕಾರ ಉಂಟು ಮಾಡಿದ ಒತ್ತಡ ಮತ್ತು ಅನೇಕ ಅಡೆತಡೆಗಳಿಂದಾಗಿ ಮರಳಿ ಪಾಕಿಸ್ತಾನಕ್ಕೆ ಹೋಗಬೇಕಾಯ್ತು. ಮ್ಯಾನ್ಮಾರ್‌ನಲ್ಲಿ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ಭಾರತ ಸರ್ಕಾರ ಗಡಿಪಾರು ಮಾಡಿದೆ.</p>



<p style="font-size:16px"><strong>8. ಯಾವುದೇ ವಿದೇಶಿ ದೇಶದಿಂದ ಬರುವ ಮುಸ್ಲಿಂ ವಲಸಿಗರಿಗೆ ಯಾವುದಾದರೂ ನಿರ್ಬಂಧವಿದೆಯೇ?</strong></p>



<p><strong>ಗೃಹ ಸಚಿವಾಲಯದ ಉತ್ತರ:</strong> ಸಿಎಎ ನ್ಯಾಚುರಲೈಸೇಷನ್‌ ಕಾನೂನುಗಳನ್ನು ರದ್ದುಗೊಳಿಸುವುದಿಲ್ಲ. ಆದ್ದರಿಂದ, ಯಾವುದೇ&nbsp;ದೇಶದಿಂದ ವಲಸೆ ಬಂದಿರುವ ಮುಸಲ್ಮಾನ ಸೇರಿದಂತೆ ಯಾವುದೇ ವ್ಯಕ್ತಿ ಭಾರತೀಯ ಪ್ರಜೆಯಾಗಲು ಬಯಸಿದರೆ, ಆತ ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಈ ಕಾಯಿದೆಯು ಆ ಮೂರು ಇಸ್ಲಾಮಿಕ್ ದೇಶಗಳಲ್ಲಿ ತಮ್ಮ ರೀತಿಯ ಇಸ್ಲಾಂ ಪದ್ದತಿಗಳನ್ನು ಅನುಸರಿಸಿದ ಕಾರಣಕ್ಕೆ ಕಿರುಕುಳಕ್ಕೊಳಗಾದ ಯಾವುದೇ ಮುಸಲ್ಮಾನನ್ನು ಸದ್ಯ ಇರುವ ಕಾನೂನುಗಳ ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವುದನ್ನು ತಡೆಯುವುದಿಲ್ಲ. </p>



<p><strong>ನಿಜ ಏನು? &nbsp;</strong>ಈ ಉತ್ತರವನ್ನು ನೋಡಿ, ಕೇಂದ್ರಕ್ಕೆ ಒಂದು ವಿಚಾರ ಚೆನ್ನಾಗಿ ತಿಳಿದಂತಿದೆ: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಮುಸ್ಲಿಮರು ತಮ್ಮದೇ ಆದ ಭಿನ್ನ ಇಸ್ಲಾಂ ಸಂಸ್ಕೃತಿಯನ್ನು (ಡಿಫರೆಂಟ್‌ ವರ್ಷನ್‌ ಆಫ್‌ ಇಸ್ಲಾಂ) ಅನುಸರಿಸಿದ ಕಾರಣಕ್ಕೆ ಅಲ್ಲಿ ಅವರು ಕಿರುಕುಳಕ್ಕೆ ಒಳಗಾಗಿದ್ದಾರೆ ಎಂಬುದು. ಆದರೆ ಅವರು ಮಾನ್ಯತೆ ಇರುವ ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದರೆ ಅಥವಾ ವೀಸಾದ ಅವಧಿಯನ್ನು ಮೀರಿದರೆ ಅವರು ಸಹಜವಾಗಿಯೇ &nbsp;ಅಕ್ರಮ ವಲಸಿಗರು ಎಂದು ಪರಿಗಣಿಸಲ್ಪಡುತ್ತಾರೆ.&nbsp;ಹೀಗಾಗಿ ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ಭಾರತೀಯ ಪೌರತ್ವಕ್ಕೆ ಅವರು ಅನರ್ಹರಾಗುತ್ತಾರೆ. ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಅವರಿಗೆ ಸಾಧ್ಯವಿಲ್ಲ.</p>



<p>ಇವಿಷ್ಟು ಕೇಂದ್ರ ಸರ್ಕಾರದ ಅರೆಬೆಂದ ಸುಳ್ಳುಗಳಿಂದ ತುಂಬಿರುವ, ಜನರ ದಿಕ್ಕು ತಪ್ಪಿಸಲೆಂದೇ ಪ್ರಕಟ ಮಾಡಿರುವ ಸಿಎಎಯ ಬಗ್ಗೆ ಧನಾತ್ಮಕ ನಿರೂಪಣೆ. ಆದರೆ, ಇದನ್ನು ಪ್ರಕಟಿಸಿ ದಿನ ಒಂದು ಕಳೆಯುವ ಮೊದಲೇ ತೆಗೆದು ಹಾಕಿದ್ದಾರೆ. ಇದರಲ್ಲಿ ಇರುವ ಸುಳ್ಳು ಕೇಂದ್ರಕ್ಕೆ ಗೊತ್ತಿದೆ. ಜನ ಬುದ್ದಿವಂತರಾಗಿ, ಈ ಸುಳ್ಳು ಪ್ರಶ್ನೋತ್ತರಾವಳಿಯನ್ನು ವಿಶ್ಲೇಷಣೆ ಮಾಡಿದರೆ ಕೇಂದ್ರದ ಕಪಟ ತಂತ್ರ ಹೊರಗೆ ಬರುತ್ತದೆ ಎಂಬುದು ಅದಕ್ಕೆ ಗೊತ್ತಾಗಿದೆ, ಹಾಗಾಗಿ ಡಿಲಿಟ್‌ ಮಾಡಿದ್ದಾರೆ&#8230;ಅಷ್ಟೇ!</p>
]]></content:encoded>
					
		
		
			</item>
		<item>
		<title>ಎಲೆಕ್ಟೋರಲ್‌ ಬಾಂಡು: ಹೆಚ್ಚು ಉಂಡವರು ಯಾರು?</title>
		<link>https://peepalmedia.com/who-benefited-from-electoral-bonds/</link>
		
		<dc:creator><![CDATA[Charan Aivarnad]]></dc:creator>
		<pubDate>Wed, 06 Mar 2024 08:57:50 +0000</pubDate>
				<category><![CDATA[ರಾಜಕೀಯ]]></category>
		<category><![CDATA[Bangalore]]></category>
		<category><![CDATA[bjp]]></category>
		<category><![CDATA[congress]]></category>
		<category><![CDATA[electoral bonds]]></category>
		<category><![CDATA[india]]></category>
		<category><![CDATA[JDS]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[news updates]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[RBI]]></category>
		<category><![CDATA[Scam]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[trending news]]></category>
		<category><![CDATA[viral]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=36703</guid>

					<description><![CDATA[2017-2018 ರಿಂದ 2022-2023 ರವರೆಗೆ ಮಾರಾಟವಾದ ಸುಮಾರು 12,000 ಕೋಟಿ ರುಪಾಯಿಗಳ ಒಟ್ಟು ಎಲೆಕ್ಟೋರಲ್ ಬಾಂಡ್‌ಗಳಲ್ಲಿ ಸುಮಾರು 55% ಅಥವಾ 6,564 ಕೋಟಿ ರುಪಾಯಿ ಬಾಂಡ್‌ಗಳನ್ನು ಬಿಜೆಪಿ ಸ್ವೀಕರಿಸಿದೆ. ಅಲ್ಲದೇ, ಈ ಐದು ವರ್ಷಗಳ ಅವಧಿಯಲ್ಲಿ ಮಾರಾಟವಾದ ಎಲ್ಲಾ ಬಾಂಡ್‌ಗಳಲ್ಲಿ ಕೇವಲ 9.5% ರಷ್ಟು 1,135 ಕೋಟಿ ರುಪಾಯಿ ಬಾಂಡ್‌ಗಳನ್ನು ಕಾಂಗ್ರೇಸ್‌ ಹಾಗೂ ತೃಣಮೂಲ ಕಾಂಗ್ರೆಸ್ ಚುನಾವಣಾ ಬಾಂಡ್‌ಗಳಿಂದ 1,096 ಕೋಟಿ ರೂಪಾಯಿಗಳನ್ನು ಪಡೆದಿದೆ. 2017ರಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರ ತಂದಿರುವ ಎಲೆಕ್ಟೋರಲ್ ಬಾಂಡ್ [&#8230;]]]></description>
										<content:encoded><![CDATA[
<p>2017-2018 ರಿಂದ 2022-2023 ರವರೆಗೆ ಮಾರಾಟವಾದ ಸುಮಾರು 12,000 ಕೋಟಿ ರುಪಾಯಿಗಳ ಒಟ್ಟು ಎಲೆಕ್ಟೋರಲ್ ಬಾಂಡ್‌ಗಳಲ್ಲಿ ಸುಮಾರು 55% ಅಥವಾ 6,564 ಕೋಟಿ ರುಪಾಯಿ ಬಾಂಡ್‌ಗಳನ್ನು ಬಿಜೆಪಿ ಸ್ವೀಕರಿಸಿದೆ. </p>



<p>ಅಲ್ಲದೇ, ಈ ಐದು ವರ್ಷಗಳ ಅವಧಿಯಲ್ಲಿ ಮಾರಾಟವಾದ ಎಲ್ಲಾ ಬಾಂಡ್‌ಗಳಲ್ಲಿ ಕೇವಲ 9.5% ರಷ್ಟು 1,135 ಕೋಟಿ ರುಪಾಯಿ ಬಾಂಡ್‌ಗಳನ್ನು ಕಾಂಗ್ರೇಸ್‌ ಹಾಗೂ ತೃಣಮೂಲ ಕಾಂಗ್ರೆಸ್ ಚುನಾವಣಾ ಬಾಂಡ್‌ಗಳಿಂದ 1,096 ಕೋಟಿ ರೂಪಾಯಿಗಳನ್ನು ಪಡೆದಿದೆ.</p>



<p>2017ರಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರ ತಂದಿರುವ ಎಲೆಕ್ಟೋರಲ್ ಬಾಂಡ್ (Eelectoral bonds) ಯೋಜನೆಯು ಅಸಂವಿಧಾನಿಕ ಮತ್ತು ಮಾಹಿತಿ ಹಕ್ಕು ಹಾಗೂ <a href="https://indiankanoon.org/doc/1218090/" data-type="link" data-id="https://indiankanoon.org/doc/1218090/">19(1)(ಎ) ವಿಧಿ</a>ಯನ್ನು ಉಲ್ಲಂಘಿಸುತ್ತದೆ ಎಂದು ಫೆಬ್ರವರಿ 15 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. 2017 ರಲ್ಲಿ ಸಲ್ಲಿಸಲಾದ ಅರ್ಜಿಗಳನ್ನು ಆಲಿಸಲು ನ್ಯಾಯಾಲಯವು ಎಂಟು ವರ್ಷಗಳನ್ನು ತೆಗೆದುಕೊಂಡಿತು ಅಲ್ಲದೇ ಈ ಯೋಜನೆಯನ್ನು ರದ್ದು ಮಾಡಲು ಈ ಹಿಂದೆ ನಿರಾಕರಿಸಿತ್ತು. ಈ ವರ್ಷದ ಜನವರಿಯಲ್ಲಿ ನೂರಾರು ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮಾರಾಟ ಮಾಡಿದೆ.</p>



<p>ಹಾಗಾದರೆ ಈ ಯೋಜನೆಯಿಂದ ಯಾರು ಹೆಚ್ಚು ಲಾಭ ಪಡೆದರು ಮತ್ತು ನ್ಯಾಯಾಲಯದಿಂದ ವಿಳಂಬವಾದ ನಿರ್ಧಾರದಿಂದ ಯಾರಿಗೆ ಹೆಚ್ಚು ಪ್ರಯೋಜನವಾಗಿದೆ?</p>



<p>ಇತ್ತೀಚಿನ ಕಂತು ಸೇರಿದಂತೆ ಒಟ್ಟು 16,518.11 ಕೋಟಿ ರುಪಾಯಿಗಳ ಎಲೆಕ್ಟೋರಲ್ ಬಾಂಡ್‌ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದುವರೆಗೆ ಮಾರಾಟ ಮಾಡಿದೆ.</p>


<div class="wp-block-image">
<figure class="aligncenter size-full is-resized"><img loading="lazy" decoding="async" width="948" height="913" src="https://peepalmedia.com/wp-content/uploads/2024/03/image-2.png" alt="" class="wp-image-36705" style="width:458px;height:auto" srcset="https://peepalmedia.com/wp-content/uploads/2024/03/image-2.png 948w, https://peepalmedia.com/wp-content/uploads/2024/03/image-2-300x289.png 300w, https://peepalmedia.com/wp-content/uploads/2024/03/image-2-768x740.png 768w, https://peepalmedia.com/wp-content/uploads/2024/03/image-2-150x144.png 150w, https://peepalmedia.com/wp-content/uploads/2024/03/image-2-696x670.png 696w" sizes="auto, (max-width: 948px) 100vw, 948px" /><figcaption class="wp-element-caption">ಮೂಲ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್</figcaption></figure></div>


<p>ಮೊದಲೇ ಹೇಳಿದಂತೆ, 2017-2018 ಮತ್ತು 2022-2023 ರ ನಡುವೆ ಮಾರಾಟವಾದ 12,008 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳಲ್ಲಿ ಸುಮಾರು 55% ಬಿಜೆಪಿಗೆ ಹೋಗಿದೆ. </p>



<p>2022-23ರಲ್ಲಿ ಬಿಜೆಪಿಯ ಒಟ್ಟು ಆದಾಯದ 54%, ಅಂದರೆ 2,120.06 ಕೋಟಿ ರುಪಾಯಿ ಚುನಾವಣಾ ಬಾಂಡ್‌ಗಳಿಂದ ಬಂದಿದೆ ಎಂದು ದಿ ಹಿಂದೂ ಇತ್ತೀಚೆಗೆ ವರದಿ ಮಾಡಿದೆ. 2018 ಮತ್ತು 2023 ರ ನಡುವಿನ ಆರು ವರ್ಷಗಳ ಅವಧಿಯಲ್ಲಿ, ಬಿಜೆಪಿಯ ಒಟ್ಟು ದೇಣಿಗೆಯಲ್ಲಿ 52% ಕ್ಕಿಂತ ಹೆಚ್ಚು, ಅಂದರೆ 5271.9751 ಕೋಟಿ ರೂಪಾಯಿ ಮೌಲ್ಯ ಹಣ ಚುನಾವಣಾ ಬಾಂಡ್‌ಗಳಿಂದ ಬಂದಿದೆ ಎಂದು <a href="https://adrindia.org/sites/default/files/Analysis_of_Donations_to_Registered_Recognised_Political_Parties_FY_2016-17_to_2021-22.pdf" data-type="link" data-id="https://adrindia.org/sites/default/files/Analysis_of_Donations_to_Registered_Recognised_Political_Parties_FY_2016-17_to_2021-22.pdf">ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್</a> ತಿಳಿಸಿದೆ.</p>



<p>2022-23ರಲ್ಲಿ ಚುನಾವಣಾ ಬಾಂಡ್‌ಗಳಿಂದ ಕಾಂಗ್ರೆಸ್ 171 ಕೋಟಿ ರೂಪಾಯಿ ದೇಣಿಗೆ ಪಡೆದಿತ್ತು.</p>



<p>ಪ್ರಾದೇಶಿಕ ಪಕ್ಷಗಳೂ ಕೂಡ ಎಲೆಕ್ಟೋರಲ್ ಬಾಂಡ್‌ಗಳ ಮೂಲಕ ದೊಡ್ಡ ಮೊತ್ತದ ಹಣವನ್ನು ಪಡೆದಿವೆ. ಭಾರತ್ ರಾಷ್ಟ್ರ ಸಮಿತಿಯು 2022-23 ರಲ್ಲಿ ಎಲೆಕ್ಟೋರಲ್‌ ಬಾಂಡ್‌ಗಳ ಮೂಲಕ 529 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ಸ್ವೀಕರಿಸಿ ಪ್ರಾದೇಶಿಕ ಪಕ್ಷಗಳಲ್ಲಿ ಪ್ರಥಮ ಸ್ಥಾನದಲ್ಲಿದೆ. ಚುನಾವಣಾ ಬಾಂಡ್‌ಗಳ ಮೂಲಕ 329 ಕೋಟಿ ರುಪಾಯಿ ದೇಣಿಗೆ ಪಡೆದಿರುವ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಿಜೆಡಿ 152 ಕೋಟಿ ರುಪಾಯಿ ಮತ್ತು ವೈಎಸ್‌ಆರ್ ಕಾಂಗ್ರೆಸ್ 52 ಕೋಟಿ ರುಪಾಯಿ ದೇಣಿಗೆ ಪಡೆದಿವೆ. ಬಿಆರ್‌ಎಸ್ ಹೊರತುಪಡಿಸಿ ಈ ನಾಲ್ಕು ಪಕ್ಷಗಳು 2021-22ರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ದೊಡ್ಡ ಮೊತ್ತದ ಹಣವನ್ನು ಪಡೆದಿವೆ. ಟಿಎಂಸಿ 528 ಕೋಟಿ ರುಪಾಯಿ, ಡಿಎಂಕೆಗೆ 306 ಕೋಟಿ ರುಪಾಯಿ, ಬಿಜೆಡಿ 291 ಕೋಟಿ ರುಪಾಯಿ ಮತ್ತು ವೈಎಸ್‌ಆರ್‌ ಕಾಂಗ್ರೇಸ್ 60 ಕೋಟಿ‌ ರುಪಾಯಿ ಪಡೆದಿವೆ.</p>


<div class="wp-block-image">
<figure class="aligncenter size-large"><a href="https://peepalmedia.com/?attachment_id=36717"><img loading="lazy" decoding="async" width="1024" height="427" src="https://peepalmedia.com/wp-content/uploads/2024/03/image-3-1024x427.png" alt="" class="wp-image-36717" srcset="https://peepalmedia.com/wp-content/uploads/2024/03/image-3-1024x427.png 1024w, https://peepalmedia.com/wp-content/uploads/2024/03/image-3-300x125.png 300w, https://peepalmedia.com/wp-content/uploads/2024/03/image-3-768x320.png 768w, https://peepalmedia.com/wp-content/uploads/2024/03/image-3-150x63.png 150w, https://peepalmedia.com/wp-content/uploads/2024/03/image-3-696x290.png 696w, https://peepalmedia.com/wp-content/uploads/2024/03/image-3-1068x445.png 1068w, https://peepalmedia.com/wp-content/uploads/2024/03/image-3.png 1300w" sizes="auto, (max-width: 1024px) 100vw, 1024px" /></a><figcaption class="wp-element-caption"><a href="https://public.flourish.studio/visualisation/16811897/?utm_source=embed&amp;utm_campaign=visualisation/16811897" data-type="link" data-id="https://public.flourish.studio/visualisation/16811897/?utm_source=embed&amp;utm_campaign=visualisation/16811897">TEMPLATE CREDITS</a><br><a href="https://app.flourish.studio/%E2%80%A020762">Line, bar and pie charts</a> by <strong>Flourish team</strong></figcaption></figure></div>


<p><br>ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದ ಮೊದಲ ಸಾರ್ವತ್ರಿಕ ಚುನಾವಣೆಯಾದ 2019 ರ ಲೋಕಸಭಾ ಚುನಾವಣೆ ಇಲ್ಲಿಯ ವರೆಗೆ ಜಗತ್ತು ಕಂಡ ಅತ್ಯಂತ ದುಬಾರಿ ಚುನಾವಣೆಯಾಗಿದೆ ಎಂದು <a href="https://www.bloomberg.com/news/articles/2019-06-03/india-s-bitterly-fought-poll-becomes-the-world-s-most-expensive" data-type="link" data-id="https://www.bloomberg.com/news/articles/2019-06-03/india-s-bitterly-fought-poll-becomes-the-world-s-most-expensive">ಬ್ಲೂಮ್‌ಬರ್ಗ್ ವರದಿ</a> ಮಾಡಿದೆ . ಸುಮಾರು 8.7 ಶತಕೋಟಿ ಡಾಲರ್‌ಗಳನ್ನು ಈ ಚುನಾವಣೆಯಲ್ಲಿ ಭಾರತದ ರಾಜಕೀಯ ಪಕ್ಷಗಳು ಖರ್ಚು ಮಾಡಿದ್ದು, 2014ರ ಚುನಾವಣೆಗೆ ಖರ್ಚು ಮಾಡಿದ್ದಕ್ಕಿಂತ ದುಪ್ಪಟ್ಟು ಹಣ ವ್ಯಯಿಸಲಾಗಿದೆ.  </p>



<p>ಎಲೆಕ್ಟೋರಲ್‌ ಬಾಂಡ್‌ಗಳನ್ನು ಪರಿಚಯಿಸಿದಾಗಿನಿಂದಲೂ, ಸಾಮಾಜಿಕ ಕಾರ್ಯಕರ್ತರು ಮೋದಿ ಸರ್ಕಾರದ ಚುನಾವಣಾ ಬಾಂಡ್‌ಗಳ ಯೋಜನೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಈ ಯೋಜನೆ ಜಾರಿಗೆ ಬಂದಾಗ ಆಗಿನ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಇದರ ಬಗ್ಗೆ ಕಳವಳ ವ್ಯಕ್ತಪಡಿಸಿದಾಗ ಕೇಂದ್ರ ಹಣಕಾಸು ಇಲಾಖೆ ನಿರ್ಲಕ್ಷ್ಯ ಮಾಡಿತ್ತು. ಯಾವುದೇ ರೀತಿಯ ಸಾರ್ವಜನಿಕ ಸಮಾಲೋಚನೆ ನಡೆಸದೆ ಇದನ್ನು ಹೇಗೆ ಜಾರಿಗೆ ತಂದರು ಎಂಬ ಬಗ್ಗೆ ಅನೇಕ ಆರ್ಥಿಕ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದರು. </p>



<p>ಈ ಯೋಜನೆಯ ಬಗ್ಗೆ ನ್ಯಾಯಾಲಯಗಳಲ್ಲಿ ಪ್ರಶ್ನೆಗಳನ್ನು ಸಲ್ಲಿಸಲಾಯಿತು. ಈ ಯೋಜನೆಯು ಅನಾಮಧೇಯ ವ್ಯಕ್ತಿಗಳಿಂದ ದೇಣಿಗೆಗಳನ್ನು ಸ್ವೀಕರಿಸಲು ಅನುಮತಿ ನೀಡುವ ಮೂಲಕ, ರಾಜಕೀಯ ಪಕ್ಷಗಳು ಮತ್ತು ದೊಡ್ಡ ದೊಡ್ಡ ಉದ್ಯಮಿಗಳ ನಡುವೆ ಅನೈತಿಕ ಸಂಬಂಧವನ್ನು ಏರ್ಪಡಿಸುವ ಮೂಲಕ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡಲಿದೆ ಎಂದು ಆರೋಪಿಸಿದ್ದರು. ಸುಮಾರು ಏಳು ವರ್ಷಗಳ ನಂತರ, ಸುಪ್ರೀಂ ಕೋರ್ಟ್ ಆ ಎಲ್ಲಾ ಕಳವಳಗಳನ್ನು ಪರಿಗಣಿಸಿ ಇಲೆಕ್ಟೋರಲ್‌ ಬಾಂಡ್‌ಗಳನ್ನು ರದ್ದು ಮಾಡಿದೆ. ಖರೀದಿಸಿದ ಎಲ್ಲಾ ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಿಡುಗಡೆ ಮಾಡುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ನ್ಯಾಯಾಲಯವು ಆದೇಶಿಸಿದೆ.</p>



<p>(ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)  ಚುನಾವಣಾ ಬಾಂಡ್ ಪ್ರಕರಣದಲ್ಲಿ ಮಾರ್ಚ್ 6ರ ಗಡುವನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟನ್ನು ಸಂಪರ್ಕಿಸಿರುವ ಹಿನ್ನಲೆಯಲ್ಲಿ ಈ ವರದಿ)</p>



<figure class="wp-block-embed is-type-wp-embed is-provider-peepal-media wp-block-embed-peepal-media"><div class="wp-block-embed__wrapper">
<blockquote class="wp-embedded-content" data-secret="YSXEGDWcv0"><a href="https://peepalmedia.com/sbi-asks-supreme-court-for-time-till-june-end-to-hand-over-details-of-electoral-bonds/">ಚುನಾವಣಾ ಬಾಂಡ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ತಲುಪಿದ SBI, ಇದು ಮೋದಿ ಸರ್ಕಾರದ ಕಾಲ ಕಳೆಯುವ ಆಟವೇ?</a></blockquote><iframe loading="lazy" class="wp-embedded-content" sandbox="allow-scripts" security="restricted"  title="&#8220;ಚುನಾವಣಾ ಬಾಂಡ್‌ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ತಲುಪಿದ SBI, ಇದು ಮೋದಿ ಸರ್ಕಾರದ ಕಾಲ ಕಳೆಯುವ ಆಟವೇ?&#8221; &#8212; Peepal Media" src="https://peepalmedia.com/sbi-asks-supreme-court-for-time-till-june-end-to-hand-over-details-of-electoral-bonds/embed/#?secret=u0MhQvsH3C#?secret=YSXEGDWcv0" data-secret="YSXEGDWcv0" width="600" height="338" frameborder="0" marginwidth="0" marginheight="0" scrolling="no"></iframe>
</div></figure>
]]></content:encoded>
					
		
		
			</item>
		<item>
		<title>ಮೂರ್ತಿ ಕ್ಲಾಸಿಕಲ್ ಲೈಬ್ರರಿ ಸಮಿತಿಯಿಂದ ವಿನಾಕಾರಣ ವಿದ್ವಾಂಸರ ವಜಾ</title>
		<link>https://peepalmedia.com/five-of-the-eight-members-of-the-murty-classical-library-of-india-editorial-board-were-allegedly-dismissed/</link>
		
		<dc:creator><![CDATA[Charan Aivarnad]]></dc:creator>
		<pubDate>Wed, 06 Mar 2024 08:22:11 +0000</pubDate>
				<category><![CDATA[ದೇಶ]]></category>
		<category><![CDATA[Bangalore]]></category>
		<category><![CDATA[bengalure]]></category>
		<category><![CDATA[breaking]]></category>
		<category><![CDATA[breaking news]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Murty Classical Library of India]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[trending news]]></category>
		<category><![CDATA[viral]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=36697</guid>

					<description><![CDATA[ಮೂರ್ತಿ ಕ್ಲಾಸಿಕಲ್ ಲೈಬ್ರರಿ ಆಫ್ ಇಂಡಿಯಾ (ಎಂಸಿಎಲ್‌ಐ) ಸಂಪಾದಕೀಯ ಮಂಡಳಿಯ ಎಂಟು ಸದಸ್ಯರಲ್ಲಿ ಐವರನ್ನು ಕಾರಣವಿಲ್ಲದೇ ಯಾವುದೇ ಸ್ಪಷ್ಟೀಕರಣ ನೀಡದೆ ವಜಾಗೊಳಿಸಲಾಗಿದೆ ಎಂದು ಇತಿಹಾಸಕಾರ ರಾಜೀವ್ ಕಿನ್ರಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಕಿನ್ರಾ ಸೇರಿದಂತೆ ಎಲ್ಲಾ ಐದು ಸದಸ್ಯರು ಮತ್ತು ಅದರ ಮೇಲ್ವಿಚಾರಣಾ ಮಂಡಳಿಯ ಅಧ್ಯಕ್ಷರಾದ ಹಾರ್ವರ್ಡ್ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಜಾನ್ ಎಲ್ ಲೋಯೆಬ್‌ ಅಸೋಸಿಯೇಟ್ ಪ್ರೊಫೆಸರ್ ಪರಿಮಳ್ ಪಾಟೀಲ್ ನಡುವೆ ನಡೆಯುತ್ತಿರುವ ಗುದ್ದಾಟವನ್ನು ಬಹಿರಂಗಗೊಳಿಸಿದೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ [&#8230;]]]></description>
										<content:encoded><![CDATA[
<p>ಮೂರ್ತಿ ಕ್ಲಾಸಿಕಲ್ ಲೈಬ್ರರಿ ಆಫ್ ಇಂಡಿಯಾ (ಎಂಸಿಎಲ್‌ಐ) ಸಂಪಾದಕೀಯ ಮಂಡಳಿಯ ಎಂಟು ಸದಸ್ಯರಲ್ಲಿ ಐವರನ್ನು ಕಾರಣವಿಲ್ಲದೇ ಯಾವುದೇ ಸ್ಪಷ್ಟೀಕರಣ ನೀಡದೆ ವಜಾಗೊಳಿಸಲಾಗಿದೆ ಎಂದು ಇತಿಹಾಸಕಾರ ರಾಜೀವ್ ಕಿನ್ರಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.</p>



<p>ಇದರಲ್ಲಿ ಕಿನ್ರಾ ಸೇರಿದಂತೆ ಎಲ್ಲಾ ಐದು ಸದಸ್ಯರು ಮತ್ತು ಅದರ ಮೇಲ್ವಿಚಾರಣಾ ಮಂಡಳಿಯ ಅಧ್ಯಕ್ಷರಾದ ಹಾರ್ವರ್ಡ್ ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗದ ಜಾನ್ ಎಲ್ ಲೋಯೆಬ್‌ ಅಸೋಸಿಯೇಟ್ ಪ್ರೊಫೆಸರ್ ಪರಿಮಳ್ ಪಾಟೀಲ್ ನಡುವೆ ನಡೆಯುತ್ತಿರುವ ಗುದ್ದಾಟವನ್ನು ಬಹಿರಂಗಗೊಳಿಸಿದೆ. </p>



<p>ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪುತ್ರ ರೋಹನ್ ಸ್ಥಾಪಿಸಿದ MCLI, ಓದುಗರಿಗಾಗಿ ಭಾರತೀಯ ಸಾಹಿತ್ಯ ಪಠ್ಯಗಳನ್ನು ಭಾಷಾಂತರಿಸುವ ಕೆಲಸಕ್ಕಾಗಿ ಹೆಸರುವಾಸಿಯಾಗಿದೆ. ಜನವರಿ 2015 ರಲ್ಲಿ ಸ್ಥಾಪಿತವಾದ ಈ ಸಂಸ್ಥೆ ಬಂಗಾಳಿ, ಗುಜರಾತಿ, ಹಿಂದಿ, ಕನ್ನಡ, ಮರಾಠಿ, ಪಂಜಾಬಿ, ಸಂಸ್ಕೃತ, ತಮಿಳು, ತೆಲುಗು, ಉರ್ದು, ಇತರ ಭಾರತೀಯ ಭಾಷೆಗಳು ಮತ್ತು ಪರ್ಷಿಯನ್ ಭಾಷೆಗಳಲ್ಲಿ ಭಾರತೀಯ ಸಾಹಿತ್ಯಗಳನ್ನು ಪ್ರಕಟಿಸುತ್ತದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">A public statement from myself and the other (now former) members of the editorial board of the Murty Classical Library of India.  Please share.  <a href="https://twitter.com/hashtag/academictwitter?src=hash&amp;ref_src=twsrc%5Etfw">#academictwitter</a> <a href="https://twitter.com/hashtag/MCLI?src=hash&amp;ref_src=twsrc%5Etfw">#MCLI</a> <a href="https://t.co/tkzZMzvMVg">pic.twitter.com/tkzZMzvMVg</a></p>&mdash; Rajeev Kinra (@rkkinra) <a href="https://twitter.com/rkkinra/status/1764702308741283932?ref_src=twsrc%5Etfw">March 4, 2024</a></blockquote><script async src="https://platform.twitter.com/widgets.js" charset="utf-8"></script>
</div></figure>



<p>2015 ರಲ್ಲಿ ಪ್ರಾರಂಭವಾದಾಗಿನಿಂದ ಹಿಂದುತ್ವವಾದಿಗಳಿಂದ ಗುರಿಯಾಗಿರುವ MCLI ಎರಡು ವರ್ಷಗಳ ಹಿಂದೆ ಅದರ ಸಂಪಾದಕ ಶೆಲ್ಡನ್ ಪೊಲಾಕ್ ಅವರನ್ನು ಹೊರಹಾಕಿದಾಗ ಸುದ್ದಿಯಾಗಿತ್ತು. ಸದ್ಯದ ಹೇಳಿಕೆಯಲ್ಲಿ ವಿಟ್ನಿ ಕಾಕ್ಸ್ (ಶಿಕಾಗೋ ವಿಶ್ವವಿದ್ಯಾಲಯ), ಮರಿಯಾ ಹೇಮ್ (ಅಮ್ಹೆರ್ಸ್ಟ್ ಕಾಲೇಜ್), ರಾಜೀವ್ ಕಿನ್ರಾ (ನಾರ್ತ್ವೆಸ್ಟರ್ನ್ ಯೂನಿವರ್ಸಿಟಿ), ಫ್ರಾನ್ಸೆಸ್ಕಾ ಒರ್ಸಿನಿ (ಎಸ್ಒಎಎಸ್, ಲಂಡನ್ ವಿಶ್ವವಿದ್ಯಾಲಯ) ಮತ್ತು ಅರ್ಚನಾ ವೆಂಕಟೇಶನ್ (ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯ, ಡೇವಿಸ್) ಈ ಅನಿರೀಕ್ಷಿತ ಕ್ರಮವನ್ನು ಟೀಕಿಸಿದ್ದಾರೆ.</p>


<div class="wp-block-image">
<figure class="aligncenter size-full is-resized"><img loading="lazy" decoding="async" width="862" height="896" src="https://peepalmedia.com/wp-content/uploads/2024/03/image-1.png" alt="" class="wp-image-36701" style="width:494px;height:auto" srcset="https://peepalmedia.com/wp-content/uploads/2024/03/image-1.png 862w, https://peepalmedia.com/wp-content/uploads/2024/03/image-1-289x300.png 289w, https://peepalmedia.com/wp-content/uploads/2024/03/image-1-768x798.png 768w, https://peepalmedia.com/wp-content/uploads/2024/03/image-1-150x156.png 150w, https://peepalmedia.com/wp-content/uploads/2024/03/image-1-300x312.png 300w, https://peepalmedia.com/wp-content/uploads/2024/03/image-1-696x723.png 696w" sizes="auto, (max-width: 862px) 100vw, 862px" /></figure></div>


<p>ಹೇಳಿಕೆಯಲ್ಲಿ, ಸ್ಥಾಪಕ ಸಂಪಾದಕರಾದ ಪ್ರೊಫೆಸರ್ ಶೆಲ್ಡನ್ ಪೊಲಾಕ್ ಅವರನ್ನು &#8220;ನಿವೃತ್ತಿಗೂ ಎರಡು ವರ್ಷಗಳ ಮೊದಲು ಯಾವುದೇ ಕಾರಣವಿಲ್ಲದೆ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿತ್ತು&#8221; ಎಂದು ಹೇಳಲಾಗಿದ್ದು, 2022 ರಿಂದ ಗ್ರಂಥಾಲಯವು ಸಂಪಾದಕರಿಲ್ಲದೆ ಹೇಗೆ ಕೆಲಸ ಮಾಡುತ್ತಿದ್ದೆ ಎಂದು ಪ್ರಶ್ನಿಸಲಾಗಿದೆ.</p>



<p>“ಪ್ರೊ. ಪಾಟೀಲ್ ಉತ್ತರಾಧಿಕಾರಿಯನ್ನು ನೇಮಿಸುವುದಿಲ್ಲ ಎಂದು ನಿರ್ಧರಿಸಿದ್ದರು. ನಾವು ಪದೇ ಪದೇ ಆ ನಿರ್ಧಾರದ ಬಗ್ಗೆ ಮತ್ತು ಸಂಭವನೀಯ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದೇವೆ. ಆದರೆ ನಿರ್ಧಾರ ತೆಗೆದುಕೊಳ್ಳುವಿಕೆಯಲ್ಲಿ ಪಾರದರ್ಶಕತೆಯ ಕೊರತೆಯಿದ್ದು, ಹೊಸ ಯೋಜನೆಗಳ ಸ್ವಾಧೀನ ಮತ್ತು ಅನುಮೋದನೆ ಹಾಗೂ ಒಪ್ಪಂದಗಳ ವಿಚಾರದಲ್ಲಿ ಸಮಸ್ಯೆಗಳಿವೆ,&#8221; ಎಂದು ಪ್ರೊ. ಪಾಟೀಲ್ ಮತ್ತು ಹಾರ್ವರ್ಡ್ ಯೂನಿವರ್ಸಿಟಿ ಪ್ರೆಸ್‌ನ ಅಪಾರದರ್ಶಕ ಮತ್ತು ನಿರ್ವಹಣಾ ಶೈಲಿಯ ಬಗ್ಗೆ ತಕರಾರು ಎತ್ತಲಾಗಿದೆ. </p>



<p>&#8220;ಕಳೆದ ಹದಿನೆಂಟು ತಿಂಗಳುಗಳಲ್ಲಿ, ಸಂಪಾದಕೀಯ ಮಂಡಳಿಯ ಪಾತ್ರಗಳು ಮತ್ತು ಜವಾಬ್ದಾರಿಗಳು ಹೆಚ್ಚು ಅಸ್ಪಷ್ಟವಾಗಿದ್ದರೂ, ಪ್ರೊ. ಪಾಟೀಲ್ ಅವರೊಂದಿಗಿನ ಸಂವಹನವು ಪರಿಣಾಮಕಾರಿಯಾಗಿ ನಡೆಯದೆ ನಿಂತುಹೋದಾಗ, ನಾವು ಪುಸ್ತಕದ ಹಸ್ತಪ್ರತಿಗಳೊಂದಿಗೆ ಅನುವಾದಕರೊಂದಿಗೆ ದಣಿವರಿಯಿಲ್ಲದೆ ಕೆಲಸ ಮಾಡಿದೆವು&#8221; ಎಂದು ಅವರು ಹೇಳಿಕೆಯಲ್ಲಿ ಹೇಳಿದ್ದಾರೆ. </p>



<p>“ಅಪಭ್ರಂಶ, ಬಾಂಗ್ಲಾ, ಹಿಂದಿ (ಬ್ರಜಭಾಷಾ ಮತ್ತು ಅವಧಿ), ಕನ್ನಡ, ಪಾಲಿ, ಪಂಜಾಬಿ, ಪರ್ಷಿಯನ್, ಸಂಸ್ಕೃತ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ 43 ಪುಸ್ತಕಗಳ ಅನುವಾದ ಮತ್ತು ಪ್ರಕಟಣೆಯನ್ನು ಸಂಪಾದನೆ ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ನಾವೆಲ್ಲಾ ಒಟ್ಟಾಗಿ ಹೊಂದಿದ್ದೇವೆ. ಭವಿಷ್ಯದಲ್ಲಿ ಈ ಕೆಲಸವನ್ನು ಯಾರು ಕೈಗೆತ್ತಿಕೊಳ್ಳಬೇಕು ಮತ್ತು ಪ್ರಸ್ತುತ ಸಂಪಾದಿಸುತ್ತಿರುವ ಭಾಷಾಂತರಗಳು ಏನಾಗುತ್ತವೆ?&#8221; ಎಂದು ಈ ಹೇಳಿಕೆಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ</p>



<p><strong>ಹಿಂದಿನ ವಿವಾದ</strong></p>



<p>ಲೈಬ್ರರಿಯ ಸಂಪಾದಕತ್ವದಿಂದ ವಿದ್ವಾಂಸ ಶೆಲ್ಡಾನ್‌ ಪೋಲಕ್‌ ಅವರನ್ನು ತೆಗೆದುಹಾಕುವಂತೆ ಹಿಂದುತ್ವವಾದಿ ಶಿಕ್ಷಣತಜ್ಞರು 2016ರಲ್ಲಿ ಸಹಿ ಮಾಡಿ ಮನವಿ ಮಾಡಿದ್ದರು. </p>



<p>ಇದರಲ್ಲಿ ಪೊಲಾಕ್  ಅವರನ್ನು&#8221;ನಮ್ಮ ನಾಗರೀಕತೆಯಲ್ಲಿ ಪಾಲಿಸುವ ಮತ್ತು ಪಾಲಿಸುವ ಅನೇಕ ಆದರ್ಶಗಳು ಮತ್ತು ಮೌಲ್ಯಗಳ ಬಗ್ಗೆ ಆಳವಾದ ವಿರೋಧವನ್ನು ಹೊಂದಿದ್ದಾರೆ&#8221; ಎಂದು ಹೇಳಲಾಗಿತ್ತು. ನಮಗೆ &#8220;ಸಂಬಂಧಿತ ಭಾರತೀಯ ಭಾಷೆಗಳಲ್ಲಿ ಪಾಂಡಿತ್ಯ ಮಾತ್ರವಲ್ಲದೆ, ಭಾರತದ ಬೌದ್ಧಿಕ ಸಂಪ್ರದಾಯಗಳ ಬಗ್ಗೆ ಆಳವಾದ ಅರಿವು ಹೊಂದಿರುವ ವಿದ್ವಾಂಸರ ತಂಡದ&#8221; ಅಗತ್ಯವಿದೆ ಎಂದು ಅದರಲ್ಲಿ ಉಲ್ಲೇಖಿಸಲಾಗಿತು. </p>



<p>ಪೊಲಾಕ್ ಅತ್ಯಂತ ಪ್ರಸಿದ್ಧ ವಿದ್ವಾಂಸ. ಅರವಿಂದ್ ರಘುನಾಥನ್ ಕೊಲಂಬಿಯಾ ವಿಶ್ವವಿದ್ಯಾಲಯದ ದಕ್ಷಿಣ ಏಷ್ಯಾದ ಅಧ್ಯಯನಗಳ ಪ್ರಾಧ್ಯಾಪಕರಾಗಿರುವ ಇವರು, ಕೊಲಂಬಿಯಾದಲ್ಲಿ ಸಂಸ್ಕೃತ ಮತ್ತು ಭಾರತೀಯ ಅಧ್ಯಯನಗಳ ವಿಲಿಯಂ ಬಿ. ರಾನ್ಸ್‌ಫೋರ್ಡ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ಪೊಲಾಕ್ ಅವರು ಸಂಸ್ಕೃತ ಮತ್ತು ಭಾರತೀಯ ಅಧ್ಯಯನಗಳಲ್ಲಿ ಸ್ನಾತಕೋತ್ತರ (1973) ಮತ್ತು ಪಿಎಚ್‌ಡಿ (1975) ಅನ್ನು ಸಹ ಹೊಂದಿದ್ದಾರೆ.</p>



<p>ಪೊಲಾಕ್ ಅವರ ವಿದ್ವತ್ತನ್ನು ಪ್ರಶ್ನಿಸುವುದರ ಜೊತೆಗೆ, ಅರ್ಜಿಯಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ 2016 ರಲ್ಲಿ ನಡೆದ ಪ್ರತಿಭಟನೆಯನ್ನು ಬೆಂಬಲಿಸುವುದಕ್ಕಾಗಿ ವಿರೋಧ ವ್ಯಕ್ತಪಡಿಸಲಾಗಿತ್ತು. &#8220;ಅವರು ಭಾರತದ ಸಮಗ್ರತೆಗೆ ಅಗೌರವ ತೋರಿಸಿದ್ದಾರೆ&#8221; ಎಂದು ಹೇಳಲಾಗಿತ್ತು.</p>



<p>ಹಿಂದುತ್ವ ಪ್ರೇರಿತ ವಿದ್ವಾಂಸರ ಈ ಆರೋಪಗಳನ್ನು ವಿರೋಧಿಸಿ ಲೇಖಕ ಮತ್ತು ಪತ್ರಕರ್ತ ರಘು ಕಾರ್ನಾಡ್, ಅರ್ಜಿದಾರರು ಮೂರ್ತಿ ಲೈಬ್ರರಿಯ ಯಾವುದೇ ಪ್ರಕಟಣೆಗಳನ್ನು ಓದಿಲ್ಲ, ಅವರು ಓದಿದ್ದರೆ ಈ ರೀತಿ ದೂರು ನೀಡುತ್ತಿರಲಿಲ್ಲ ಎಂದು 2016 ರಲ್ಲಿ ಬಿಸಿನೆಸ್ ಸ್ಟ್ಯಾಂಡರ್ಡ್‌ಗೆ ತಿಳಿಸಿದ್ದರು .</p>



<p>ರಾಮಚಂದ್ರ ಗುಹಾ ಅವರಂತಹ ಅನೇಕ ವಿದ್ವಾಂಸರು ಇದನ್ನು &#8220;ಕ್ಷುಲ್ಲಕ ಮತ್ತು ಪ್ರೇರಿತ&#8221; ಆರೋಪ ಎಂದು ಕರೆದಿದ್ದರು, ಕಾಂಚ ಇಲಯ್ಯ ಇದನ್ನು &#8220;ಬ್ರಾಹ್ಮಣೀಯ ಮತ್ತು ಬೌದ್ಧಿಕವಲ್ಲದ&#8221; ಎಂದು ಕರೆದಿದ್ದರು.</p>
]]></content:encoded>
					
		
		
			</item>
		<item>
		<title>ಒಂದು ದೇಶ-ಒಂದು ಚುನಾವಣೆ: ಸರ್ವಾಧಿಕಾರದ ಕೈಗೆ ಭಾರತ?</title>
		<link>https://peepalmedia.com/one-nation-one-election-will-lead-to-elected-dictatorship-in-india/</link>
		
		<dc:creator><![CDATA[Charan Aivarnad]]></dc:creator>
		<pubDate>Mon, 04 Mar 2024 13:09:18 +0000</pubDate>
				<category><![CDATA[ಅಂಕಣ]]></category>
		<category><![CDATA[Bangalore]]></category>
		<category><![CDATA[dictatorship]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[modiji]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[one nation one election]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[trending news]]></category>
		<category><![CDATA[viral]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=36647</guid>

					<description><![CDATA[ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ʼಒಂದು ದೇಶ &#8211; ಒಂದು ಚುನಾವಣೆʼ ವರದಿಗೆ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಪೀಪಲ್‌ ಮೀಡಿಯಾದಲ್ಲಿ ಬಂದಿರುವ ಚರಣ್‌ ಐವರ್ನಾಡುರವರ ಹಿಂದಿನ ಲೇಖನವನ್ನು ಓದಿ. ****** 2023ರ ಮೇನಲ್ಲಿ ಟರ್ಕಿ ದೇಶದ ಅಧ್ಯಕ್ಷರಾಗಿ ರೆಸೆಪ್ ತಯ್ಯಿಪ್ ಎರ್ಡೊಗನ್ ಮತ್ತೆ ಆಯ್ಕೆಯಾದಾಗ, ಅವರನ್ನು ಅಭಿನಂದಿಸಿವರಲ್ಲಿ ಮೊದಲಿಗರು ನಮ್ಮ ದೇಶದ ಘನವೆತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು. ಹೇಳಿಕೇಳಿ ಪಾಶ್ಚಿಮಾತ್ಯ ಚಿಂತಕರು &#160;ಎರ್ಡೊಗನ್ ಅವರನ್ನು ಚುನಾಯಿತ ಸರ್ವಾಧಿಕಾರಿ [&#8230;]]]></description>
										<content:encoded><![CDATA[
<p>ನರೇಂದ್ರ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ʼಒಂದು ದೇಶ &#8211; ಒಂದು ಚುನಾವಣೆʼ ವರದಿಗೆ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಪೀಪಲ್‌ ಮೀಡಿಯಾದಲ್ಲಿ ಬಂದಿರುವ ಚರಣ್‌ ಐವರ್ನಾಡುರವರ ಹಿಂದಿನ ಲೇಖನವನ್ನು ಓದಿ.</p>



<p class="has-text-align-center">******</p>



<p>2023ರ ಮೇನಲ್ಲಿ ಟರ್ಕಿ ದೇಶದ ಅಧ್ಯಕ್ಷರಾಗಿ ರೆಸೆಪ್ ತಯ್ಯಿಪ್ ಎರ್ಡೊಗನ್ ಮತ್ತೆ ಆಯ್ಕೆಯಾದಾಗ, ಅವರನ್ನು ಅಭಿನಂದಿಸಿವರಲ್ಲಿ ಮೊದಲಿಗರು ನಮ್ಮ ದೇಶದ ಘನವೆತ್ತ ಪ್ರಧಾನಮಂತ್ರಿ ನರೇಂದ್ರ ಮೋದಿಯವರು. ಹೇಳಿಕೇಳಿ ಪಾಶ್ಚಿಮಾತ್ಯ ಚಿಂತಕರು &nbsp;ಎರ್ಡೊಗನ್ ಅವರನ್ನು ಚುನಾಯಿತ ಸರ್ವಾಧಿಕಾರಿ ಎಂದು ಕರೆಯುತ್ತಾರೆ. ಮೊದಲು ಪ್ರಧಾನಿಯಾಗಿ, ನಂತರ ಟರ್ಕಿಯ ಅಧ್ಯಕ್ಷರಾದ ಇವರು 20 ವರ್ಷಗಳಿಂದ ಅಧಿಕಾರದಲ್ಲಿದ್ದಾರೆ.</p>



<p>ನೀವು ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮೋದಿಜಿ ಈ ಚುನಾಯಿತ ಸರ್ವಾಧಿಕಾರಿಯಿಂದ ಸ್ಪೂರ್ತಿಯನ್ನು ಪಡೆದಂತೆ ಕಾಣುತ್ತದೆ. ಇದೇನು ಬಿಜೆಪಿ ಹಾಗೂ ಅದರ ಅಡುಗೆ ಮನೆ ಆರ್‌ಎಸ್‌ಎಸ್‌ಗೆ ಹೊಸದೇನಲ್ಲ.</p>



<p>ಪ್ರಾದೇಶಿಕ ರಾಷ್ಟ್ರೀಯತೆಯನ್ನು ಸದಾ ವಿರೋಧಿಸುತ್ತಿದ್ದ ಆರ್‌ಎಸ್‌ಎಸ್‌ನ ಎರಡನೇ ಸರಸಂಚಾಲಕ ಮಾಧವ ಸದಾಶಿವ ಗೋಲ್ವಾಲ್ಕರ್‌ ತಮ್ಮ <a href="https://archive.org/details/in.ernet.dli.2015.66003" data-type="link" data-id="https://archive.org/details/in.ernet.dli.2015.66003">We, or Our Nationhood Defined</a> ಎಂಬ ಪುಸ್ತಕದಲ್ಲಿ ಈ ಪ್ರಪಂಚ ಕಂಡ ಅತ್ಯಂತ ಕ್ರೂರ ಸರ್ವಾಧಿಕಾರಿ ಜರ್ಮನಿಯ ಹಿಟ್ಲರ್‌ನನ್ನು ಹಾಡಿ ಹೊಗಳುತ್ತಾರೆ. ಪ್ರಾದೇಶಿಕ ರಾಷ್ಟ್ರೀಯತೆಯನ್ನು ಬಿಟ್ಟು ಭಾರತ, ಜನಾಂಗೀಯ ರಾಷ್ಟ್ರೀಯತೆಯನ್ನು ಒಪ್ಪಲು ಹಿಟ್ಲರ್‌ನಿಂದ ಸ್ಪೂರ್ತಿ ಪಡೆಯುವಂತೆ ಹೇಳುತ್ತಾರೆ. ಜರ್ಮನಿಯನ್ನು ಧ್ವಂಸ ಮಾಡಿದ ಹಿಟ್ಲರ್‌ ಸರ್ವಾಧಿಕಾರದ ಜನಾಂಗೀಯ ಶುದ್ಧೀಕರಣವನ್ನು ಅವರು ಭಾರತದ ಅಗತ್ಯ ಎಂದು ಹೇಳುತ್ತಾರೆ.</p>



<p><strong>ಇದನ್ನು ಓದಿ:</strong><a href="https://peepalmedia.com/center-approves-one-country-one-election-report/" data-type="link" data-id="https://peepalmedia.com/center-approves-one-country-one-election-report/"> ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರದ ಅನುಮೋದನೆ</a></p>



<p>ಹಾಗಾಗಿ, ಸರ್ವಾಧಿಕಾರಿಗಳು ಇನ್ನೊಂದು ದೇಶದ ಸರ್ವಾಧಿಕಾರಿಯನ್ನು ಹೊಗಳುವುದು, ಮತ್ತು ಅವನಿಗಿಂತ ಒಂದು ಹೆಜ್ಜೆ ಮುಂದೆ ಹೋಗುವುದು ಚರಿತ್ರೆಯಲ್ಲಿ ಆಗಾಗ ಕಂಡುಬಂದಿದೆ.</p>



<p>2017 ರಲ್ಲಿ ಎರ್ಡೋಗನ್ ದೇಶದ ಸರ್ವಶಕ್ತ ಅಧ್ಯಕ್ಷರಾಗಿ ಹೊರಹೊಮ್ಮಲು ಅವರು ಅಲ್ಪಸಂಖ್ಯಾತ ಕುರ್ದಿಗಳ ಮೇಲೆ ಸಾಂಪ್ರದಾಯಿಕ ಇಸ್ಲಾಮಿಸ್ಟ್‌ಗಳನ್ನು ಎತ್ತಿಕಟ್ಟಿದ್ದರು. ಇದರಿಂದ ಮೋದಿಯವರು ಸ್ಪೂರ್ತಿ ಪಡೆದಿದ್ದಾರಾ? ಇದನ್ನು ನೀವೇ ಯೋಚಿಸಬೇಕು.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">Congratulations <a href="https://twitter.com/RTErdogan?ref_src=twsrc%5Etfw">@RTErdogan</a> on re-election as the President of Türkiye! I am confident that our bilateral ties and cooperation on global issues will continue to grow in the coming times.</p>&mdash; Narendra Modi (@narendramodi) <a href="https://twitter.com/narendramodi/status/1663030103830298625?ref_src=twsrc%5Etfw">May 29, 2023</a></blockquote><script async src="https://platform.twitter.com/widgets.js" charset="utf-8"></script>
</div></figure>



<p>ಎರ್ಡೋಗನ್ ನಂತೆ ಮೋದಿಯವರಲ್ಲಿ ಕಂಡು ಬರುವ ಮಹತ್ವದ ಸಾಮ್ಯತೆ ಎಂದರೆ ತನಗೆ ಬೇಕಾದವರನ್ನು ಶಾಸನಬದ್ಧ ಸ್ಥಾನಗಳಿಗೆ ನೇಮಿಸುವುದು. ಸರ್ವಾಧಿಕಾರಿಯ ಪ್ಲೈಬುಕ್‌ನಲ್ಲಿ ಇರುವ ರಹಸ್ಯ, ಕುತಂತ್ರ ಮತ್ತು ಆಶ್ಚರ್ಯ ಈ ಮೂರನ್ನೂ ನೀಡಬಹುದು.</p>



<p>ಇಡೀ ದೇಶವನ್ನು ರಹಸ್ಯವಾಗಿ ಇಡಲಾಗಿದೆ. ಮುಕ್ತವಾಗಿ ನಡೆಯಬೇಕಾದ ಸಂಸದೀಯ ಚರ್ಚೆಗಳನ್ನು ನಿಲ್ಲಿಸಲಾಗುತ್ತಿದೆ. ಇತ್ತೀಚೆಗೆ ಸಂಸತ್‌ ಅಧಿವೇಶನ ಹೇಗೆ ನಡೆಯಿತು ಎಂಬುದನ್ನೇ ಗಮನಿಸಿ, ಇದ್ದಕ್ಕಿದ್ದಂತೆ 2023ರ ಆಗಸ್ಟ್ 31 ರಂದು, ಸಂಸದೀಯ ವ್ಯವಹಾರಗಳ ಸಚಿವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಬಹಳ ವಿಚಿತ್ರದ ಸಂದೇಶವೊಂದನ್ನು ನೀಡಿದರು. ಸೆಪ್ಟೆಂಬರ್ 18 ರಿಂದ 22 ರವರೆಗೆ <a href="https://www.thehindu.com/news/national/parliament-session-from-september-18-to-22-without-question-hour-private-members-business-notification/article67263933.ece" data-type="link" data-id="https://www.thehindu.com/news/national/parliament-session-from-september-18-to-22-without-question-hour-private-members-business-notification/article67263933.ece">ಪ್ರಶ್ನೋತ್ತರ ಅವಧಿಯಿಲ್ಲದೆ ಸಂಸತ್ತಿನ ವಿಶೇಷ ಅಧಿವೇಶನ</a> ನಡೆಯಲಿದೆ ಎಂದು ಅವರು ಘೋಷಿಸಿದರು</p>



<p>ಅಧಿವೇಶನದ ಅಜೆಂಡಾವನ್ನು 2023ರ ಸೆಪ್ಟೆಂಬರ್ 13 ರ ಬುಧವಾರದವರೆಗೆ ರಹಸ್ಯವಾಗಿಡಲಾಗಿತ್ತು. ಇದು ಕಾರ್ಯಸೂಚಿಯ ಬಗ್ಗೆ ಹೆಚ್ಚಿನ ಊಹಾಪೋಹಗಳಿಗೆ ಕಾರಣವಾಯಿತು. ಅಜೆಂಡಾವನ್ನು ರಹಸ್ಯವಾಗಿ ಇಟ್ಟ ಮೇಲೆ <a href="https://www.ndtv.com/india-news/parliament-will-discuss-one-nation-one-election-panel-report-union-minister-pralhad-joshi-4349145" data-type="link" data-id="https://www.ndtv.com/india-news/parliament-will-discuss-one-nation-one-election-panel-report-union-minister-pralhad-joshi-4349145">ಪ್ರಹ್ಲಾದ್‌ ಜೋಶಿ ಒಂದು ರಾಷ್ಟ್ರ- ಒಂದು ಚುನಾವಣೆಯ ಸಾಧ್ಯತೆಯನ್ನು</a> ಅಧ್ಯಯನ ಮಾಡಲು ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದರು. ಮರುದಿನ, ಅಮಿತ್ ಶಾ ಅವರನ್ನೊಳಗೊಂಡ ಎಂಟು ಸದಸ್ಯರ ಸಮಿತಿಗೆ ಔಪಚಾರಿಕವಾಗಿ ಸೂಚಿಸಲಾಯಿತು.</p>



<p>ಇದು ಸರ್ವಾಧಿಕಾರದ ಎಲ್ಲಾ ಲಕ್ಷಣಗಳನ್ನೂ ತೋರಿಸುತ್ತದೆ. ಆದರೆ ಅಮಿತ್‌ ಶಾ ಅವರು ಕೋವಿಂದ್ ಅವರನ್ನು ಜೂನ್ 2 ಕ್ಕೂ ಮೊದಲೇ ಇದಕ್ಕೆ ನಿಯೋಜಿಸಿದ್ದರು. ಕೋವಿಂದ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಹನ್ನೆರಡು ರಾಜ್ಯಗಳ ರಾಜ್ಯಪಾಲರನ್ನು ಭೇಟಿ ಮಾಡಿದ್ದರು.</p>



<p>ಸಮಿತಿಯಲ್ಲಿನ ಎಲ್ಲಾ ಎಂಟು ಸದಸ್ಯರು ಕೇಂದ್ರ ಸರ್ಕಾರದ ಬೆಂಬಲಿಗರು. ಇದರ ಓರ್ವ ಸದಸ್ಯ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ಸಮಿತಿಗೆ ರಾಜೀನಾಮೆ ನೀಡಿ ಹೊರಬಂದರು.</p>



<p>ಅಂದರೆ, ಪ್ರಹ್ಲಾದ್‌ ಜೋಶಿ ಅಧಿಕೃತವಾಗಿ ಒಂದು ದೇಶ-ಒಂದು ಚುನಾವಣೆಯ ಪರಿಶೀಲನೆಗೆ ಸಮಿತಿ ರಚಿಸುವ ಅಧಿಕೃತ ಘೋಷಣೆ ಮಾಡುವ ಮೊದಲೇ ಅಮೀತ್‌ ಶಾ ಈ ಸಮಿತಿಯನ್ನು ಮಾಡಿದ್ದರು. ಅಂದರೆ, ಈ ಬಗ್ಗೆ ಇಡೀ ದೇಶಕ್ಕೆ ಗೊತ್ತಾಗದಂತೆ ರಹಸ್ಯವಾಗಿ ಇಡಲಾಗಿತ್ತು.</p>



<p>ಈಗ 2029ಕ್ಕೆ ಲೋಕಸಭಾ, ರಾಜ್ಯ ವಿಧಾನ ಸಭಾ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ “ಒಂದು ದೇಶ- ಒಂದು ಚುನಾವಣೆ”ಯನ್ನು ಜಾರಿಗೊಳಿಸಲು ಭಾರತದ ಸಂವಿಧಾನದಲ್ಲಿ ಹೊಸ ಅಧ್ಯಾಯವನ್ನು ಸೇರಿಸಲು ಕಾನೂನು ಆಯೋಗ ಶಿಫಾರಸ್ಸುಗಳನ್ನು ನೀಡಲಿದೆ.</p>



<p>ನಿವೃತ್ತ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ಈ ಆಯೋಗವು ಐದು ವರ್ಷಗಳ ಅವಧಿಯಲ್ಲಿ ಮೂರು ಹಂತಗಳಲ್ಲಿ ಚುನಾವಣೆಗಳನ್ನು ಸಿಂಕ್ರೊನೈಸೇಶನ್ ಮಾಡಲು ಶಿಫಾರಸು ಮಾಡುವ ಸಾಧ್ಯತೆಯಿದೆ.</p>



<p>ಈ ಒಂದು ದೇಶ-ಒಂದು ಚುನಾವಣೆ ಯಾಕೆ ಬೇಕು ಎಂಬುದಕ್ಕೆ ಮೋದಿ ಕೊಡುವ ಕಾರಣಗಳು ತುಂಬಾ ವಿಚಿತ್ರವಾಗಿದೆ. ದೇಶದ ಬೇರೆ ಬೇರೆ ಕಡೆ ಆಗಾಗ ಚುನಾವಣೆಗಳಿ ನಡೆಯುತ್ತಿದ್ದರೆ ಖರ್ಚು ಜಾಸ್ತಿ, ಚುನಾವಣೆಯ ಸಂದರ್ಭದಲ್ಲಿ ಪದೇ ಪದೇ Model Code of Conduct (MCC) ಜಾರಿಗೆ ತಂದರೆ ಅಗತ್ಯ ಸೇವೆಗಳನ್ನು ಪೂರೈಸುವಂತ ಸರ್ಕಾರದ ಕೆಲಸಗಳಿಗೆ ತೊಡಕಾಗುತ್ತದೆ, ಚುನಾವಣೆಗಳನ್ನು ನಡೆಸಲು ನಿಯೋಜಿಸಲಾದ ಸರ್ಕಾರಿ ಸಿಬ್ಬಂದಿಯ ಮೇಲೆ ಅನಗತ್ಯ ಹೊರೆ ಬೀಳುತ್ತದೆ.</p>



<p>ಎಂಸಿಸಿ ಮೂಲಭೂತ ಸೇವೆಗಳನ್ನು ನೀಡಲು ಸರ್ಕಾರಕ್ಕೆ ತೊಡಕನ್ನು ಉಂಟು ಮಾಡುತ್ತದೆ ಎಂದರೆ ಇದು ಬೇರೆ ಬೇರೆ ಪಕ್ಷಳು ಚುನಾವಣಾ ಆಯೋಗದ ಜೊತೆಗೆ ಕುಳಿತು ಮಾತನಾಡಿ ಪರಿಹರಿಸಬಹುದಾದ ಸಮಸ್ಯೆ. ಆದರೆ ಮಾರ್ಚ್ 2016 ರ ನಂತರ ಯೋಜನೆಗೆ ಬೇಕಾದ ಉಭಯಪಕ್ಷೀಯ ಬೆಂಬಲವನ್ನು ಪಡೆಯಲು ಸರ್ಕಾರವು ಯಾವುದೇ ರೀತಿಯ ಪ್ರಯತ್ನವನ್ನು ಮಾಡಲಿಲ್ಲ.</p>



<p>ಸೆಪ್ಟೆಂಬರ್ 2023 ರಲ್ಲಿ ಕೇಂದ್ರ ಸರ್ಕಾರ ತರಾತುರಿಯಲ್ಲಿ ಕೋವಿಂದ್ ನೇತೃತ್ವದ ಸಮಿತಿಯನ್ನು ನೇಮಿಸಿತು ಮತ್ತು ಒಪ್ಪಿಗೆಯಿಲ್ಲದೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನು ಸಮಿತಿಗೆ ಸೇರಿಸಿತು. ಅವರು ತಮ್ಮ ಸ್ಥಾನಕ್ಕೆ ಒಪ್ಪಿಗೆ ಇಲ್ಲದೆ ನೇಮಕ ಮಾಡಿದ ಕಾರಣ ರಾಜೀನಾಮೆಯನ್ನು ನೀಡಿದರು.</p>



<p>ನಿಮಗೆ ಅಚ್ಚರಿ ಆಗಬಹುದು, ಇವರ ತಂತ್ರ ಎಷ್ಟು ಗುಪ್ತವಾಗಿ, ಪರಿಣಾಮಕಾರಿಯಾಗಿ ಮಾಡಲಾಗಿದೆ ಎಂಬುದು. 1984 ರಿಂದ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ವನ್‌ ನೇಷನ್‌ &#8211; ವನ್‌ ಇಲೆಕ್ಷನ್‌ ಭರವಸೆಯನ್ನು ನೀಡುತ್ತಾ ಬಂದಿದೆ. 2017 ರ ಜುಲೈಯಲ್ಲಿ ರಾಮ್‌ ನಾಥ್‌ ಕೋವಿಂದ್‌ ರಾಷ್ಟ್ರಪತಿಯಾಗಿ ಆಯ್ಕೆಯಾದ ಮೇಲೆ 2018 ರ ಜನವರಿಯಲ್ಲಿ ಸಂಸತ್ತಿನ ಉಭಯ ಸದನಗಳಿಗೆ ತಮ್ಮ ಮೊದಲ ರಾಷ್ಟ್ರಪತಿ ಭಾಷಣ ನೀಡುತ್ತಾರೆ. ಅದರಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾಪ ಮಾಡುತ್ತಾರೆ. ಅಲ್ಲಿಂದಲೇ ಪ್ರಧಾನಿ ಮೋದಿಯವರ ಈ ಒಂದು ದೇಶ-ಒಂದು ಚುನಾವಣೆಗೆ ರಾಷ್ಟ್ರಪತಿ ಮುದ್ರೆ ಬೀಳಲು ಶುರುವಾಯ್ತು.</p>



<p>ನರೇಂದ್ರ ಮೋದಿಯವರು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಈ ಯೋಜನೆ ಜಾರಿಗೊಳ್ಳುವುದು ನಿಶ್ಚಿತ. ಆದರೆ ಇದು ಪ್ರಪಂಚದ ಆತ್ಯಂತ ದೊಡ್ಡ ಪ್ರಜಾಪ್ರಭುತ್ವ ಭಾರತದ ಮೇಲೆ ಹೊಡೆಯುವ ಪೆಟ್ಟು ಅಂತಿಂಥ ಹೊಡೆತ ಅಲ್ಲ. ಇದು ಪ್ರಜಾಪ್ರಭುತ್ವದಿಂದ ಚುನಾಯಿತ ಸರ್ವಾಧಿಕಾರಕ್ಕೆ ಭಾರತ ಮಗ್ಗಲು ಬದಲಿಸುವ ಸಾಧ್ಯತೆ ಇದೆ.</p>



<p>ಭಾರತದಂತಹ ರಾಜಕೀಯವಾಗಿ ವೈವಿಧ್ಯಮಯವಾಗಿರುವ ರಾಷ್ಟ್ರದಲ್ಲಿ, ಆವರ್ತಕ ಚುನಾವಣೆಗಳು ಒಂದೇ ಪಕ್ಷಕ್ಕೆ ಸಂಪೂರ್ಣ ಅಧಿಕಾರವನ್ನು ನೀಡುವುದಿಲ್ಲ. ಜನರು ಬೇರೆ ಬೇರೆ ಚುನಾವಣೆಗಳಿಗೆ ಭಿನ್ನ ಅಭಿಪ್ರಾಯಗಳನ್ನು ಹೊಂದಿರುತ್ತಾರೆ. ಸ್ಥಳೀಯ ಮಟ್ಟದಲ್ಲಿ ಅವರು ತಮ್ಮ ಮತವನ್ನು ಯಾರಿಗೆ, ಯಾಕೆ ಹಾಕಬೇಕು ಎಂಬುದನ್ನು ಸ್ಥಳೀಯ ಆದ್ಯತೆಗಳು, ಸಮಸ್ಯೆಗಳ ಮೇಲೆ ನಿರ್ಧರಿಸುತ್ತಾರೆ. ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಬಂದಾಗ ಜನರ ಉದ್ದೇಶ, ಆಭಿಪ್ರಾಯಗಳು ಬದಲಾಗುತ್ತದೆ. ಬದಲಾಗಲೇ ಬೇಕು. ಆಗ ಮಾತ್ರ ಅಧಿಕಾರದ ವಿಕೇಂದ್ರೀಕರಣ ಸಮರ್ಪಕವಾಗಿ ಜಾರಿಯಾಗುವುದು.</p>



<p>ನೀವೇ ಈ ಉದಾಹರಣೆಗಳನ್ನು ನೋಡಿ, ಇಂದಿರಾ ಗಾಂಧಿಯವರ ಹತ್ಯೆಯ ನಂತರ ನಡೆದ ಸಂಸತ್ತಿನ ಚುನಾವಣೆಯ ಜೊತೆ ಜೊತೆಗೆ ಪ್ರತಿಯೊಂದು ರಾಜ್ಯ ಚುನಾವಣೆಗಳು ನಡೆದಿದ್ದರೆ, ಭಾರತದ ರಾಜಕೀಯ ಇತಿಹಾಸವು ಬೇರೆ ಆಗಿರುತ್ತಿತ್ತು. 1989 ರ ಚುನಾವಣೆಯಲ್ಲಿ ರಾಜೀವ್ ಗಾಂಧಿ ಸೋತ ನಂತರೂ ಅವರು ಅಧಿಕಾರದಲ್ಲಿ ಮುಂದುವರಿಯುತ್ತಿದ್ದರು. ಹಾಗೆಯೇ, 2019 ರಲ್ಲಿ ಪುಲ್ವಾಮಾ-ಬಾಲಾಕೋಟ್ ಅವಳಿ ಘಟನೆಗಳು ನಡೆದಾಗಲೂ ಬಿಜೆಪಿ ಅಧಿಕಾರಕ್ಕೆ ಬಂತು.</p>



<p>ಅಮೆರಿಕದ ಸೆಂಟರ್ ಫಾರ್ ಸ್ಟ್ರಾಟೆಜಿಕ್ ಮತ್ತು ಇಂಟರ್ನ್ಯಾಷನಲ್ ಸ್ಟಡೀಸ್ ಹೇಳುವಂತೆ 2014ರಲ್ಲಿ ಸಂಸತ್‌ ಚುನಾವಣೆಯ ಜೊತೆಗೆ ಎಲ್ಲಾ ರಾಜ್ಯಗಳ ಚುನಾವಣೆಗಳು ನಡೆದಿದ್ದರೆ, ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿತ್ತು.</p>



<p>2020 ರಲ್ಲಿ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ <a href="https://casi.sas.upenn.edu/iit/balasubramaniam-bhatiya-das" data-type="link" data-id="https://casi.sas.upenn.edu/iit/balasubramaniam-bhatiya-das">ಸೆಂಟರ್ ಫಾರ್ ದಿ ಅಡ್ವಾನ್ಸ್ಡ್ ಸ್ಟಡಿ ಆಫ್ ಇಂಡಿಯಾ </a>ಪ್ರಕಟಿಸಿದ ವರದಿಯಲ್ಲಿ ಏಕಕಾಲಕ್ಕೆ ಎಲ್ಲಾ ರಾಜ್ಯಗಳಲ್ಲಿ ಚುನಾವಣೆ ನಡೆದರೆ ಮತದಾರರು ಅಭ್ಯರ್ಥಿಗಿಂತ ಪಕ್ಷದ ಕಡೆಗೆ ನೋಡಿ ಮತ ಹಾಕುತ್ತಾರೆ ಎಂದು ಹೇಳಲಾಗಿದೆ. ಒಂದೇ ಪಕ್ಷದ ಅಭ್ಯರ್ಥಿ ಎಷ್ಟೇ ಬರಗೆಟ್ಟ ನಾಯಕನಾಗಿದ್ದರೂ, ಭ್ರಷ್ಟನಾಗಿದ್ದರೂ ಅವನು ಗೆಲ್ಲುವ ಸಾಧ್ಯತೆ 20% ಹೆಚ್ಚಾಗುತ್ತದೆ ಎಂದು ಈ ವರದಿ ಹೇಳುತ್ತದೆ.</p>



<p>ಬಿಜೆಪಿ ಸರ್ಕಾರ 2019ರಲ್ಲಿ ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಅವ್ಯವಸ್ಥೆ ಮತ್ತು ಸಾಂವಿಧಾನಿಕ ಅಸ್ತವ್ಯಸ್ತತೆಗೆ ಕಾರಣ Fixed-term Parliaments Act, 2011ನಿಂದ ಪಾಠ ಕಲಿತಿಲ್ಲ. ಈ ಕರಾಳ ಕಾಯ್ದೆಯನ್ನು ಮಾರ್ಚ್ 2022ರಲ್ಲಿ ಎಲ್ಲಾ ಪಕ್ಷಗಳೂ ಆ ದೇಶದಲ್ಲಿ ತೀರ್ಮಾನಿಸಿ ರದ್ದು ಮಾಡಲಾಯಿತು.</p>



<p>ಆದರೆ, ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಮೇ 12, 2021 ರಂದು The Dissolution and Calling of Parliament Bill ಜಾರಿಗೆ ತಂದು, ಅದಕ್ಕೆ ಮಾರ್ಚ್ 24, 2022 ರಂದು ರಾಜ ಸಮ್ಮತಿಯೂ ಸಿಕ್ಕಿತು. ಇದು ಸ್ಥಿರ ಅವಧಿಯ ಸಂಸತ್ತಿನ ಕಾಯ್ದೆ 2011ಯನ್ನು ತೆಗೆದು ಹಾಕಿತು. ರಾಜ ಪರಿವಾರದ ಒಪ್ಪಿಗೆಯಂತೆ ಈ ದೇಶದಲ್ಲಿ ತನಗೆ ಬೇಕಾದಾಗ ಸಂಸತ್ತನ್ನು ವಿಸರ್ಜಿಸಿ ಚುನಾವಣೆ ನಡೆಸುವ ಅಧಿಕಾರವನ್ನು ಅಲ್ಲಿನ ಪ್ರಧಾನಿಗೆ ನೀಡಲಾಯ್ತು. ಇದು ಪ್ರಜಾಸತಾತ್ಮಕತೆಗೆ ವಿರುದ್ಧವಾಗಿದೆ.</p>



<p>Fixed-term Parliaments Act, 2011 ಹೇಗೆ ಬ್ರಟೀಷ್‌ ಸಂವಿಧಾನದ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರಿತೋ, ಮೋದಿಯವರ ಏಕಕಾಲಕ್ಕೆ ಚುನಾವಣೆ ಎಂಬ ಯೋಜನೆಯೂ ಇದೇ, ಇದಕ್ಕೂ ಹೆಚ್ಚಿನ ದುಷ್ಪರಿಣಾಮಗಳನ್ನು ಬೀರುವ ಸಾಧ್ಯತೆಗಳಿವೆ. ಸಂವಿಧಾನದಲ್ಲಿ ತಿದ್ದುಪಡಿ ಜೊತೆಗೆ, ಏಕಕಾಲದ ಚುನಾವಣೆಗೆ ಬೇಕಾದ ಒಂದು ಸ್ಥಿರ ಕ್ಯಾಲೆಂಡರನ್ನು ಸಂವಿಧಾನಕ್ಕೆ ಸೇರಿಸಬೇಕಾಗುತ್ತದೆ.</p>



<p>ಮುಖ್ಯವಾಗಿ, &nbsp;ಮುಂದಿನ ಸಂಸದೀಯ ಚುನಾವಣೆ ನಡೆದಾಗ, ಎಲ್ಲಾ ರಾಜ್ಯಗಳ ಅಸೆಂಬ್ಲಿಗಳನ್ನು ವಿಸರ್ಜಿಸಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಹಲವಾರು ರಾಜ್ಯಗಳ ಅಸೆಂಬ್ಲಿಗಳ ಅಧಿಕಾರಾವಧಿಯನ್ನು 2024 ಮತ್ತು 2029 ರ ನಡುವೆ ಮೊಟಕುಗೊಳಿಸಬೇಕಾಗುತ್ತದೆ, ಇಲ್ಲವೇ ವಿಸ್ತರಿಸಬೇಕಾಗುತ್ತದೆ.</p>



<p>ಒಂದು ವೇಳೆ ಹೀಗಾದರೆ, ಈ ದೇಶ ಪ್ರಜಾಪ್ರಭುತ್ವವಾಗಿ ಉಳಿಯುವುದಿಲ್ಲ. ಜನಾದೇಶವನ್ನು ಏಕಾಏಕಿಯಾಗಿ ಮೊಟುಕುಗೊಳಿಸುವುದು, ಅಸೆಂಬ್ಲಿಗಳನ್ನು ವಿಸರ್ಜಿಸುವುದು ಎಂದರೆ ದೇಶದ ನಾಗರಿಕನ ಅಧಿಕಾರ, ಹಕ್ಕುಗಳನ್ನು ಕಸಿದುಕೊಂಡ ಹಾಗೆಯೇ.</p>



<p>ಮೋದಿಯವರ ಈ ಯಾವುದೇ ಯೋಜನೆ, ಯೋಚನೆಗಳು ಭಾರತದ ಒಳಿತಿಗಲ್ಲ. ಇದು ಭಾರತದ ಕೇಡುಗಾಲ. ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟ ಹಾಗೇ, ಮೋದಿಯವರು ಒಂದು ದೇಶ-ಒಂದು ಚುನಾವಣೆಯ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅತಂತ್ರಗೊಳಿಸಲು ಮುಂದಾಗಿದ್ದಾರೆ.</p>



<p>ಅವರ ಉದ್ದೇಶ ತುಂಬಾ ಸ್ಪಷ್ಟ. ಈ ದೇಶವನ್ನು ಒಂದು ಕಾರ್ಪೋರೇಟ್‌ ಕಂಪನಿಯ ರೀತಿಯಲ್ಲಿ ನಡೆಸುವುದು. ಆಗ ಭಾರತ &nbsp;ಜನಾದೇಶವೇ ಸರ್ವೋಚ್ಚವಾಗಿರುವ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಉಳಿಯುವುದಿಲ್ಲ.</p>



<p>ಭಿನ್ನ ರಾಜಕೀಯ ಪಕ್ಷಗಳು ರಾಜ್ಯಗಳಲ್ಲಿ ಆಡಳಿತ ನಡೆಸುವ ಬಹುಪಕ್ಷೀಯ ಪ್ರಜಾಪ್ರಭುತ್ವವನ್ನು ನಾಶ ಮಾಡಿ, ಇಡೀ ದೇಶದ ರಾಜಕೀಯ ವ್ಯವಸ್ಥೆಯನ್ನು ಏಕಪಕ್ಷೀಯಗೊಳಿಸುವುದು. ಇದನ್ನು ಜನರಿಗೆ ಅರ್ಥಮಾಡಿಸಿ, ಈ ಸರ್ವಾಧಿಕಾರಕ್ಕೆ ಜನರು ಒಗ್ಗುವಂತೆ ಮಾಡಲು ಬಿಜೆಪಿ ಅನೇಕ ಪ್ರಯತ್ನಗಳನ್ನು ಮಾಡಿದೆ. ಇದರಲ್ಲಿ ತುಂಬಾ ಅಪಾಯಕಾರಿ ನಡೆ ಎಂದರೆ, ವಿರೋಧ ಪಕ್ಷದ ನಾಯಕರು ಇಲ್ಲದೆ ಸಂಸತ್‌ ಕಲಾಪಗಳು ನಡೆದದ್ದು, ಮೂರು ಕ್ರಿಮಿನಲ್‌ ಕಾನೂನು ಕಾಯಿದೆಗಳನ್ನು, ಟೆಲಿಕಾಮ್‌ ಬಿಲ್‌ಗಳನ್ನು ಅವರ ಉಪಸ್ಥಿತಿ ಇಲ್ಲದೇ ಜಾರಿಗೆ ತಂದದ್ದು.</p>



<p>ಇದನ್ನು ಜನ ಸಂಭ್ರಮಿಸಿದರೆ, ಈ ಜನರನ್ನು ಸರ್ವಾಧಿಕಾರಕ್ಕೆ ಮತ್ತು ಗುಲಾಮಗಿರಿಗೆ ಒಗ್ಗಿಸುವುದು ತುಂಬಾ ಸುಲಭ ಎಂಬುದು ಬಿಜೆಪಿಗೆ ಅರ್ಥವಾಗಿದೆ.</p>



<p>ವನ್‌ ನೇಷನ್‌ &#8211; ವನ್‌ ಇಲೆಕ್ಷನ್‌ ಕಾಂಗ್ರೇಸಿಗೆ ಮಾತ್ರ ದೊಡ್ಡ ಪೆಟ್ಟು ಎಂದು ಇತರ ರಾಜಕೀಯ ಪಕ್ಷಗಳು ಭಾವಿಸಿದರೆ ಅದು ಮೂರ್ಖತನ. ಈಗ ಬಿಜೆಪಿ ಜೊತೆಗೆ ದೋಸ್ತಿ ಮಾಡಿ ಹಸಿರು ಶಾಲಿನಿಂದ ಕೇಸರಿ ಶಾಲಿಗೆ ಬದಲಾಗಿರುವ ಕುಮಾರ ಸ್ವಾಮಿಯವರ ಮೂರ್ಖತನವೂ ಕೂಡ. ಇದು ಕೇವಲ ವಿರೋಧ ಪಕ್ಷಗಳಿಗೆ ಸಂಕಷ್ಟ ಮಾತ್ರವಲ್ಲ, ಬಿಜೆಪಿಯ ರಾಜಕೀಯ ಮಿತ್ರಪಕ್ಷಗಳ ಅಸ್ತಿತ್ವಕ್ಕೂ ಅಪಾಯ ತಂದಿಡಲಿದೆ ಎಂಬುದನ್ನು ಮರೆಯಬಾರದು. ಏಕಕಾಲದ ಚುನಾವಣೆ ಎಂಬ ಬಿಜೆಪಿಯ ಕಪಟ, ಕ್ರೂರ ತಂತ್ರ ಭಾರತದ ಪ್ರಾದೇಶಿಕ ಪಕ್ಷಗಳನ್ನು ಕೊಂದು ಹಾಕಲಿದೆ.</p>



<p>ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಒಂದು ದೇಶ-ಒಂದು ಚುನಾವಣೆ ಎಂಬ ಬಿಜೆಪಿಯ ನಡೆ ದೇಶಕ್ಕೆ ಮುಂದೆ ಒದಗಬಹುದಾದ ಕರಾಳ ದಿನಗಳ ಮುನ್ಸೂಚನೆ, ಇದನ್ನು ದೇಶದ ಪ್ರತಿಯೊಬ್ಬ ನಾಗರಿಕ ಅರ್ಥಮಾಡಿಕೊಂಡು, ಈ ದೇಶ ವಿರೋಧಿ ನಡೆಯನ್ನು ವಿರೋಧಿಸಬೇಕು.<br><br>&#8211;<strong> ಚರಣ್‌ ಐವರ್ನಾಡು, ಬೆಂಗಳೂರು</strong></p>
]]></content:encoded>
					
		
		
			</item>
		<item>
		<title>ಬಿಜೆಪಿ ಸಂಸದ ಗೌತಮ್ ಗಂಭೀರ್ ರಾಜಕೀಯ ನಿವೃತ್ತಿ</title>
		<link>https://peepalmedia.com/bjp-mp-gautam-gambhir-retires-from-politics/</link>
		
		<dc:creator><![CDATA[Peepal Media Desk]]></dc:creator>
		<pubDate>Sat, 02 Mar 2024 08:01:09 +0000</pubDate>
				<category><![CDATA[ರಾಜಕೀಯ]]></category>
		<category><![CDATA[Bangalore]]></category>
		<category><![CDATA[breaking]]></category>
		<category><![CDATA[breaking news]]></category>
		<category><![CDATA[cricket]]></category>
		<category><![CDATA[gowtham gambhir]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news updates]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[trend]]></category>
		<category><![CDATA[Trending]]></category>
		<category><![CDATA[viral]]></category>
		<category><![CDATA[writing]]></category>
		<guid isPermaLink="false">https://peepalmedia.com/?p=36593</guid>

					<description><![CDATA[ನವದೆಹಲಿ: ಅಲ್ಪಾವಧಿಯ ರಾಜಕೀಯ ಜೀವನದಿಂದ ಬೇಸತ್ತಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು, ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಬಿಡುಗಡೆಗೊಳಿಸುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಶನಿವಾರ ಮನವಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಪೂರ್ವ ದೆಹಲಿಯ ಸಂಸದರಾಗಿರುವ ಗಂಭೀರ್, ತಮ್ಮ X ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ [&#8230;]]]></description>
										<content:encoded><![CDATA[
<p><strong>ನವದೆಹಲಿ: </strong>ಅಲ್ಪಾವಧಿಯ ರಾಜಕೀಯ ಜೀವನದಿಂದ ಬೇಸತ್ತಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು, ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಬಿಡುಗಡೆಗೊಳಿಸುವಂತೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಶನಿವಾರ ಮನವಿ ಸಲ್ಲಿಸಿದ್ದಾರೆ.</p>



<p>ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಪೂರ್ವ ದೆಹಲಿಯ ಸಂಸದರಾಗಿರುವ ಗಂಭೀರ್, ತಮ್ಮ X ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಸಿದ್ದಾರೆ.</p>



<p>“ನನ್ನ ಮೇಲೆ ಬೇಕಾದಷ್ಟು ಕ್ರಿಕೆಟ್ ಸಂಬಂಧಿತ ಜವಾಬ್ದಾರಿಗಳಿವೆ. ನಾನು ಆ ಕಡೆಗೆ ಗಮನ ನೀಡಬೇಕಿದೆ. ಹಾಗಾಗಿ ನನ್ನನ್ನು ರಾಜಕೀಯ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಅರ್ಪಿಸುತ್ತೇನೆ, ಜೈ ಹಿಂದ್,” ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.</p>



<p>ಭಾರತೀಯ ಕ್ರಿಕೇಟ್ ತಂಡದ ಮಾಜಿ ಕ್ರಿಕೆಟಿಗರಾಗಿರುವ‌ ಗೌತಮ್ ಗಂಭೀರ್, 2007ರಲ್ಲಿ ಟಿ20 ಹಾಗೂ 2011ರಲ್ಲಿ ಏಕದಿನ‌ ಪಂದ್ಯದಲ್ಲಿ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತದ ಪರ 147 ಏಕದಿನ, 58 ಟೆಸ್ಟ್ ಹಾಗೂ 37 ಟಿ20 ಪಂದ್ಯಗಳನ್ನು ಆಡಿದ್ದು, ಕ್ರಮವಾಗಿ 5,238 ರನ್, 4,154 ರನ್ ಮತ್ತು 932 ರನ್. ಅವರು 154 ಐಪಿಎಲ್ ಪಂದ್ಯಗಳಿಂದ 4,218 ರನ್ ಭಾರಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಗಂಭೀರ್ ನಾಯಕತ್ವದಲ್ಲಿ 2012 ಮತ್ತು 2014 ರಲ್ಲಿ ಚಾಂಪಿಯನ್‌ಶಿಪ್ ಗೆದ್ದಿತ್ತು. ಕಳೆದ ಎರಡು ಎಡಿಷನ್‌ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಆಗಿದ್ದ ಇವರು, ಈಗ ಮತ್ತೊಮ್ಮೆ ಕೆಕೆಆರ್ ತಂಡದ ಮೆಂಟರ್ ಆಗಿ ನೇಮಕಗೊಂಡಿರುವುದನ್ನು ನಾವು ನೆನಪಿಸಿಕೊಳ್ಳಬಹುದು. &nbsp;</p>
]]></content:encoded>
					
		
		
			</item>
		<item>
		<title>ಐಟಿ ಕಾಯ್ದೆ ಬಳಸಿ ಕೇಂದ್ರದಿಂದ ಪತ್ರಿಕಾ ಸ್ವಾತಂತ್ರ್ಯದ ಹರಣ:‌ ವರದಿ ತೆಗೆಯಲು ಕ್ಯಾರವನ್‌ಗೆ ಆದೇಶ</title>
		<link>https://peepalmedia.com/centre-uses-it-acts-to-attack-press-freedom-asks-the-caravan-to-remove-report/</link>
		
		<dc:creator><![CDATA[Peepal Media]]></dc:creator>
		<pubDate>Tue, 13 Feb 2024 07:29:01 +0000</pubDate>
				<category><![CDATA[ದೇಶ]]></category>
		<category><![CDATA[army]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[breaking news]]></category>
		<category><![CDATA[Central Government]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[Military]]></category>
		<category><![CDATA[modi]]></category>
		<category><![CDATA[narendra modi]]></category>
		<category><![CDATA[news]]></category>
		<category><![CDATA[news updates]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[poonch]]></category>
		<category><![CDATA[state politics]]></category>
		<category><![CDATA[the caravan \]]></category>
		<category><![CDATA[trend]]></category>
		<category><![CDATA[Trending]]></category>
		<category><![CDATA[trending news]]></category>
		<category><![CDATA[viral]]></category>
		<category><![CDATA[viral news]]></category>
		<category><![CDATA[writing]]></category>
		<guid isPermaLink="false">https://peepalmedia.com/?p=35889</guid>

					<description><![CDATA[ವಿವಾದಾತ್ಮಕ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ 2021 ಮತ್ತು 2023 ರಲ್ಲಿ ತಿದ್ದುಪಡಿ ತಂದು, ಈ ಕಾಯ್ದೆಯನ್ನು ಮಾಧ್ಯಮ ಸಂಸ್ಥೆಗಳ ವಿರುದ್ಧ ಬಳಸಲಾಗುತ್ತಿದೆ. ದಿ ಕ್ಯಾರವಾನ್ ನಿಯತಕಾಲಿಕೆಯಲ್ಲಿ ಪ್ರಕಟವಾದ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಸೇನೆ ವಿರುದ್ಧ ಮಾಡಲಾಗಿರುವ ಚಿತ್ರಹಿಂಸೆ ಮತ್ತು ಕೊಲೆಯ ಆರೋಪಗಳ ಬಗೆಗಿನ ಲೇಖನವನ್ನು ತೆಗೆದುಹಾಕಲು ಆದೇಶಿಸಲಾಗಿದೆ. ಐಟಿ ಕಾಯಿದೆಯ ಸೆಕ್ಷನ್ 69 ಎ ಅಡಿಯಲ್ಲಿ ತಮಗೆ ನೋಟಿಸ್ ಕಳುಹಿಸಿದ್ದು. ಈ ಆದೇಶವನ್ನು ಪ್ರಶ್ನಿಸುವುದಾಗಿ ದಿ ಕ್ಯಾರವಾನ್ ತನ್ನ ಎಕ್ಸ್‌ನಲ್ಲಿ ಪ್ರಕಟಿಸಿತು. &#8220;ಆದೇಶದ [&#8230;]]]></description>
										<content:encoded><![CDATA[
<p>ವಿವಾದಾತ್ಮಕ ಮಾಹಿತಿ ತಂತ್ರಜ್ಞಾನ ಕಾಯ್ದೆಗೆ 2021 ಮತ್ತು 2023 ರಲ್ಲಿ ತಿದ್ದುಪಡಿ ತಂದು, ಈ ಕಾಯ್ದೆಯನ್ನು ಮಾಧ್ಯಮ ಸಂಸ್ಥೆಗಳ ವಿರುದ್ಧ ಬಳಸಲಾಗುತ್ತಿದೆ. ದಿ ಕ್ಯಾರವಾನ್ ನಿಯತಕಾಲಿಕೆಯಲ್ಲಿ ಪ್ರಕಟವಾದ  ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಸೇನೆ ವಿರುದ್ಧ ಮಾಡಲಾಗಿರುವ ಚಿತ್ರಹಿಂಸೆ ಮತ್ತು ಕೊಲೆಯ ಆರೋಪಗಳ ಬಗೆಗಿನ ಲೇಖನವನ್ನು ತೆಗೆದುಹಾಕಲು ಆದೇಶಿಸಲಾಗಿದೆ.</p>



<p>ಐಟಿ ಕಾಯಿದೆಯ ಸೆಕ್ಷನ್ 69 ಎ ಅಡಿಯಲ್ಲಿ ತಮಗೆ ನೋಟಿಸ್ ಕಳುಹಿಸಿದ್ದು. ಈ ಆದೇಶವನ್ನು ಪ್ರಶ್ನಿಸುವುದಾಗಿ ದಿ ಕ್ಯಾರವಾನ್ ತನ್ನ ಎಕ್ಸ್‌ನಲ್ಲಿ ಪ್ರಕಟಿಸಿತು. &#8220;ಆದೇಶದ ವಿಷಯವು ಗೌಪ್ಯವಾಗಿದೆ&#8221; ಎಂದು ಮ್ಯಾಗಝೈನ್ ಹೇಳಿದೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="en" dir="ltr">This is to inform readers we have received an order from the Ministry of Information &amp; Broadcasting under Section 69A of the IT Act, directing us to take down this story in 24 hrs:<a href="https://t.co/wbaEfoZsJ8">https://t.co/wbaEfoZsJ8</a>.<br><br>The order’s content is confidential. We will be challenging this order.</p>&mdash; The Caravan (@thecaravanindia) <a href="https://twitter.com/thecaravanindia/status/1757261541190385767?ref_src=twsrc%5Etfw">February 13, 2024</a></blockquote><script async src="https://platform.twitter.com/widgets.js" charset="utf-8"></script>
</div></figure>



<p>24 ಗಂಟೆಗಳ ಒಳಗೆ ತನ್ನ ವೆಬ್‌ಸೈಟ್‌ನಿಂದ‌ ಈ ಲೇಖನವನ್ನು ತೆಗೆದುಹಾಕದಿದ್ದರೆ, ಇಡೀ ವೆಬ್‌ಸೈಟ್ ಅನ್ನು ನಾಶಮಾಡಲಾಗುವುದು ಎಂದು ದಿ ಕ್ಯಾರವಾನ್‌ಗೆ ಎಚ್ಚರಿಕೆ ನೀಡಲಾಗಿದೆ. ಲೇಖನವನ್ನು ಚಂದಾದಾರರಿಗೆ ಕಳುಹಿಸುವ ಮತ್ತು ಮುದ್ರಿತ ಪತ್ರಿಕೆಯಲ್ಲಿಯೂ ಸೇರಿಸಲಾಗಿದೆ.</p>



<p>ನಿಯತಕಾಲಿಕದ ಫೆಬ್ರವರಿ ಸಂಚಿಕೆಯಲ್ಲಿ ಪ್ರಕಟವಾದ ಪತ್ರಕರ್ತೆ ಜತೀಂದರ್ ಕೌರ್ ತೂರ್ ಅವರು ಬರೆದಿರುವ ಲೇಖನ ‘Screams from the Army Post’&#8217; ಒಂದು ವಿಸ್ತೃತ ವರದಿಯಾಗಿದೆ. ಇದರಲ್ಲಿ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಚಾರವಾದ ಡಿಸೆಂಬರ್ 22, 2023 ರಂದು ಅಪರಿಚಿತ ಸೈನಿಕರಿಂದ ನಡೆದ ಮೂವರು ನಾಗರಿಕರ ಹತ್ಯೆಯ ಸುತ್ತ ವರದಿ ಮಾಡಲಾಗಿದೆ. ಸೇನಾ ಕಸ್ಟಡಿಯಲ್ಲಿ ನಾಗರಿಕರನ್ನು ಕೊಲ್ಲಲಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದು, ಈ ಚಿತ್ರಹಿಂಸೆ ನೀಡುತ್ತಿರುವ ವೀಡಿಯೊಗಳು ಕೂಡ ವೈರಲ್ ಆಗಿತ್ತು. ಆ ಸಂದರ್ಭದಲ್ಲಿ ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಸೇನೆ ಹೇಳಿತ್ತು.</p>


<div class="wp-block-image">
<figure class="aligncenter size-large is-resized"><img loading="lazy" decoding="async" width="1024" height="512" src="https://peepalmedia.com/wp-content/uploads/2024/02/image-8-1024x512.png" alt="" class="wp-image-35895" style="width:481px;height:auto" srcset="https://peepalmedia.com/wp-content/uploads/2024/02/image-8-1024x512.png 1024w, https://peepalmedia.com/wp-content/uploads/2024/02/image-8-300x150.png 300w, https://peepalmedia.com/wp-content/uploads/2024/02/image-8-768x384.png 768w, https://peepalmedia.com/wp-content/uploads/2024/02/image-8-150x75.png 150w, https://peepalmedia.com/wp-content/uploads/2024/02/image-8-696x348.png 696w, https://peepalmedia.com/wp-content/uploads/2024/02/image-8-1068x534.png 1068w, https://peepalmedia.com/wp-content/uploads/2024/02/image-8.png 1200w" sizes="auto, (max-width: 1024px) 100vw, 1024px" /><figcaption class="wp-element-caption"><strong><em>ಅಪರಿಚಿತ ಸೈನಿಕರಿಂದ ನಾಗೆರಿಕರಿಗೆ ಹಿಂಸೆ, ವಿಡಿಯೋ ಸ್ಕ್ರೀನ್‌ಶಾಟ್</em></strong></figcaption></figure></div>


<p>ದಿ ಕ್ಯಾರವಾನ್‌ನ ಈ ವರದಿಯಲ್ಲಿ ಮೃತರ ಕುಟುಂಬಗಳನ್ನು ಮಾತನಾಡಿಸಲಾಗಿದ್ದು, ಸಾವಿನ ನಂತರ ಸೈನ್ಯವು ಇವುಗಳಲ್ಲಿ ಒಂದು ಕುಟುಂಬಕ್ಕೆ  10 ಲಕ್ಷ ಪರಿಹಾರ ನೀಡಿತ್ತು. 25 ಮಂದಿಗೆ ಸೈನ್ಯ &#8220;ಚಿತ್ರಹಿಂಸೆ&#8221; ನೀಡಿದ್ದು, ಇವರಲ್ಲಿ ಮೂವರು ಹತರಾಗಿದ್ದಾರೆ ಎಂದು ವರದಿ ಹೇಳಿದೆ. ಈ ಹಿಂಸೆಗೆ ಆದೇಶ ನೀಡಿದ ಬ್ರಿಗೇಡಿಯರ್ ಹೆಸರನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>



<p>ದಿ ಕಾರವಾನ್  ಪೊಲೀಸ್, ಸೇನೆ ಮತ್ತು ಜಿಲ್ಲಾಡಳಿತ ಸೇರಿದಂತೆ ಅನೇಕ ಅಧಿಕಾರಿಗಳನ್ನು ಈ ಘಟನೆಯ ಬಗ್ಗೆ ಹೇಳಿಕೆ ನೀಡಲು ಸಂಪರ್ಕಿಸಿದೆ. ಆದರೆ ಈ ಯಾವುದೇ ಅಧಿಕಾರಿಗಳು ಪತ್ರಿಕೆಯ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರಲಿಲ್ಲ.</p>


<div class="wp-block-image">
<figure class="aligncenter size-full is-resized"><img loading="lazy" decoding="async" width="891" height="425" src="https://peepalmedia.com/wp-content/uploads/2024/02/image-9.png" alt="" class="wp-image-35903" style="width:540px;height:auto" srcset="https://peepalmedia.com/wp-content/uploads/2024/02/image-9.png 891w, https://peepalmedia.com/wp-content/uploads/2024/02/image-9-300x143.png 300w, https://peepalmedia.com/wp-content/uploads/2024/02/image-9-768x366.png 768w, https://peepalmedia.com/wp-content/uploads/2024/02/image-9-150x72.png 150w, https://peepalmedia.com/wp-content/uploads/2024/02/image-9-696x332.png 696w" sizes="auto, (max-width: 891px) 100vw, 891px" /></figure></div>


<p>ವಿವಾದಾತ್ಮಕ ಐಟಿ ನಿಯಮಗಳು ಯಾವುದೇ ವಿಚಾರಣೆ ನಡೆಸದೆ ಏಕಾಏಕಿ ಸುದ್ದಿ ವೆಬ್‌ಸೈಟ್‌ಗಳು ಸೇರಿದಂತೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ವರದಿಗಳನ್ನು, ಮಾಹಿತಿಗಳನ್ನು ತೆಗೆದುಹಾಕಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ತುರ್ತು ಅಧಿಕಾರವನ್ನು ನೀಡುತ್ತದೆ. ಹಲವಾರು ಮಾಧ್ಯಮ ಸಂಸ್ಥೆಗಳು ಮತ್ತು ನಾಗರಿಕ ಸಂಸ್ಥೆಗಳು ನ್ಯಾಯಾಲಯದಲ್ಲಿ ಈ ನಿಯಮಗಳನ್ನು ಪ್ರಶ್ನಿಸಿ ವಿಚಾರಣೆಗಾಗಿ ಅರ್ಜಿಗಳನ್ನು ಸಲ್ಲಿಸಿವೆ. </p>



<p></p>
]]></content:encoded>
					
		
		
			</item>
	</channel>
</rss>
