<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>writing &#8211; Peepal Media</title>
	<atom:link href="https://peepalmedia.com/tag/writing/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Sat, 09 Aug 2025 03:29:52 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>writing &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಗಾಜಾ ವಶಕ್ಕೆ ಇಸ್ರೇಲ್ ಸಂಪುಟ ಒಪ್ಪಿಗೆ; ಇಸ್ರೇಲ್‌ಗೆ ಸೇನಾ ಉತ್ಪನ್ನಗಳನ್ನು ರಫ್ತು ಮಾಡದಿರಲು ಜರ್ಮನಿ ನಿರ್ಧಾರ</title>
		<link>https://peepalmedia.com/germany-decides-not-to-export-military-products-to-israel/</link>
		
		<dc:creator><![CDATA[Peepal Media]]></dc:creator>
		<pubDate>Sat, 09 Aug 2025 03:29:51 +0000</pubDate>
				<category><![CDATA[ವಿದೇಶ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=63871</guid>

					<description><![CDATA[ಟೆಲ್ ಅವೀವ್: ಗಾಜಾವನ್ನು ವಶಪಡಿಸಿಕೊಳ್ಳುವ ಯೋಜನೆಗೆ ಇಸ್ರೇಲ್‌ನ ಭದ್ರತಾ ಸಂಪುಟವು ಅನುಮೋದನೆ ನೀಡಿದೆ. ಸರ್ಕಾರದ ಪೂರ್ಣ ಪ್ರಮಾಣದ ಸಂಪುಟದ ಅನುಮೋದನೆ ದೊರೆತರೆ, ಈ ಯೋಜನೆಯು ತಕ್ಷಣವೇ ಜಾರಿಗೆ ಬರಲಿದೆ. ಇಸ್ರೇಲ್ ಈಗಾಗಲೇ ಗಾಜಾ ಗಡಿಗೆ ಭಾರಿ ಸಂಖ್ಯೆಯಲ್ಲಿ ಸೈನಿಕರನ್ನು ಕಳುಹಿಸಿದೆ ಎಂದು ಉಪಗ್ರಹ ಚಿತ್ರಗಳು ತೋರಿಸುತ್ತಿವೆ ಎಂಬ ವರದಿಗಳು ಬಂದಿವೆ. ಹಮಾಸ್ ಸಂಘಟನೆಯನ್ನು ನಾಶಪಡಿಸುವುದು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಿಸುವುದು, ಗಾಜಾವನ್ನು ಸೈನ್ಯರಹಿತ ಪ್ರದೇಶವನ್ನಾಗಿ ಮಾಡುವುದು, ಗಾಜಾಕ್ಕೆ ಇಸ್ರೇಲ್ ಭದ್ರತೆ ಒದಗಿಸುವುದು, ಮತ್ತು ಗಾಜಾವನ್ನು ತಾತ್ಕಾಲಿಕ ಸರ್ಕಾರಕ್ಕೆ ಹಸ್ತಾಂತರಿಸುವುದು [&#8230;]]]></description>
										<content:encoded><![CDATA[
<p>ಟೆಲ್ ಅವೀವ್: ಗಾಜಾವನ್ನು ವಶಪಡಿಸಿಕೊಳ್ಳುವ ಯೋಜನೆಗೆ ಇಸ್ರೇಲ್‌ನ ಭದ್ರತಾ ಸಂಪುಟವು ಅನುಮೋದನೆ ನೀಡಿದೆ. ಸರ್ಕಾರದ ಪೂರ್ಣ ಪ್ರಮಾಣದ ಸಂಪುಟದ ಅನುಮೋದನೆ ದೊರೆತರೆ, ಈ ಯೋಜನೆಯು ತಕ್ಷಣವೇ ಜಾರಿಗೆ ಬರಲಿದೆ. ಇಸ್ರೇಲ್ ಈಗಾಗಲೇ ಗಾಜಾ ಗಡಿಗೆ ಭಾರಿ ಸಂಖ್ಯೆಯಲ್ಲಿ ಸೈನಿಕರನ್ನು ಕಳುಹಿಸಿದೆ ಎಂದು ಉಪಗ್ರಹ ಚಿತ್ರಗಳು ತೋರಿಸುತ್ತಿವೆ ಎಂಬ ವರದಿಗಳು ಬಂದಿವೆ.<br><br>ಹಮಾಸ್ ಸಂಘಟನೆಯನ್ನು ನಾಶಪಡಿಸುವುದು, ಒತ್ತೆಯಾಳುಗಳನ್ನು ಬಿಡುಗಡೆ ಮಾಡಿಸುವುದು, ಗಾಜಾವನ್ನು ಸೈನ್ಯರಹಿತ ಪ್ರದೇಶವನ್ನಾಗಿ ಮಾಡುವುದು, ಗಾಜಾಕ್ಕೆ ಇಸ್ರೇಲ್ ಭದ್ರತೆ ಒದಗಿಸುವುದು, ಮತ್ತು ಗಾಜಾವನ್ನು ತಾತ್ಕಾಲಿಕ ಸರ್ಕಾರಕ್ಕೆ ಹಸ್ತಾಂತರಿಸುವುದು &#8211; ಈ ಐದು ಅಂಶಗಳೊಂದಿಗೆ ಇತ್ತೀಚಿನ ಯೋಜನೆಯನ್ನು ರೂಪಿಸಲಾಗಿದೆ. <br><br>ಗಾಜಾವನ್ನು ವಶಪಡಿಸಿಕೊಳ್ಳುವುದು ತಮ್ಮ ಉದ್ದೇಶವಲ್ಲ, ಹಮಾಸ್ ಉಗ್ರರ ಬಳಿ ಇರುವ ತಮ್ಮ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿಸಿಕೊಂಡು, ಆ ಪ್ರದೇಶವನ್ನು ತಾತ್ಕಾಲಿಕ ಸರ್ಕಾರಕ್ಕೆ ಹಸ್ತಾಂತರಿಸುವುದೇ ತಮ್ಮ ಗುರಿ ಎಂದು ಇಸ್ರೇಲ್ ಪ್ರಧಾನಿ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.<br><br>ಗಾಜಾವನ್ನು ವಶಪಡಿಸಿಕೊಳ್ಳುವ ಯೋಜನೆ ತಪ್ಪು ಎಂದು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿದ್ದಾರೆ. ಈ ಕ್ರಮವು ಮತ್ತಷ್ಟು ರಕ್ತಪಾತಕ್ಕೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ. ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಪ್ಪಿಸಲು ಈ ಯೋಜನೆಯನ್ನು ತಕ್ಷಣ ಹಿಂಪಡೆಯಬೇಕೆಂದು ಅವರು ಸಲಹೆ ನೀಡಿದ್ದಾರೆ. <br><br>ಮತ್ತೊಂದೆಡೆ, ಇಷ್ಟು ದಿನ ಇಸ್ರೇಲ್ ಅನ್ನು ಬಲವಾಗಿ ಬೆಂಬಲಿಸುತ್ತಿದ್ದ ಜರ್ಮನಿ, ತನ್ನ ನಿಲುವನ್ನು ಬದಲಾಯಿಸಿಕೊಂಡಿದೆ. ಇಸ್ರೇಲ್‌ಗೆ ಸೇನಾ ಉತ್ಪನ್ನಗಳನ್ನು ರಫ್ತು ಮಾಡಬಾರದೆಂದು ನಿರ್ಧರಿಸಲಾಗಿದೆ ಎಂದು ಜರ್ಮನ್ ಚಾನ್ಸೆಲರ್ ಫ್ರೆಡರಿಕ್ ಮೆರ್ಜ್ ತಿಳಿಸಿದ್ದಾರೆ.</p>
]]></content:encoded>
					
		
		
			</item>
		<item>
		<title>ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿ  ಐದು ಹಂತದ ಕುತಂತ್ರಗಳು: ರಾಹುಲ್‌ಗಾಂಧಿ</title>
		<link>https://peepalmedia.com/bjps-five-stage-tactics-in-maharashtra-elections-rahul-gandhi/</link>
		
		<dc:creator><![CDATA[Peepal Media]]></dc:creator>
		<pubDate>Sat, 07 Jun 2025 08:19:10 +0000</pubDate>
				<category><![CDATA[ದೇಶ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=60557</guid>

					<description><![CDATA[ಹೊಸದಿಲ್ಲಿ: ಕಳೆದ ನವೆಂಬರ್ 2024ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಐದು ಹಂತದ ಮ್ಯಾಜ್‌ ಫಿಕ್ಸಿಂಗ್‌ ಮಾಡಿಕೊಂಡಿದೆ. ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಹಾಗೂ ಅಜಿತ್ ಪವಾರ್ ನಾಯಕತ್ವದ ಎನ್‌ಸಿಪಿಯನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟವು 288 ಸ್ಥಾನಗಳ ಪೈಕಿ, 235 ಸ್ಥಾನಗಳಲ್ಲಿ ಭರ್ಜರಿ ಜಯಭೇರಿ [&#8230;]]]></description>
										<content:encoded><![CDATA[
<p><strong>ಹೊಸದಿಲ್ಲಿ:</strong>  ಕಳೆದ ನವೆಂಬರ್ 2024ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಐದು ಹಂತದ ಮ್ಯಾಜ್‌ ಫಿಕ್ಸಿಂಗ್‌ ಮಾಡಿಕೊಂಡಿದೆ.  ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.</p>



<p>ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ನಡೆದಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಹಾಗೂ ಅಜಿತ್ ಪವಾರ್ ನಾಯಕತ್ವದ ಎನ್‌ಸಿಪಿಯನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟವು 288 ಸ್ಥಾನಗಳ ಪೈಕಿ, 235 ಸ್ಥಾನಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿತ್ತು. ಈ ಪೈಕಿ ಬಿಜೆಪಿಯೊಂದೇ 132 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಕುರಿತು Indian Express ದಿನಪತ್ರಿಕೆಯ ಸಂಪಾದಕೀಯ ಪುಟದಲ್ಲಿ ಲೇಖನ ಬರೆದಿರುವ ರಾಹುಲ್ ಗಾಂಧಿ, ಬಿಜೆಪಿಯ ಗೆಲುವಿನ ಹಿಂದಿನ ಕುತಂತ್ರಗಳ ಬಗ್ಗೆ ಮಾತನಾಡಿದ್ದಾರೆ. </p>



<p>&#8220;ಮೊದಲ ಹಂತ ಚುನಾವಣಾ ಆಯೋಗ ನೇಮಕಾತಿಯ ತಿರುಚುವಿಕೆ, ಎರಡನೆ ಹಂತ ಮತಪಟ್ಟಿಗೆ ನಕಲಿ ಮತದಾರರ ಸೇರ್ಪಡೆ, ಮೂರನೆಯ ಹಂತ ಮತದಾನ ಪ್ರಮಾಣದಲ್ಲಿ ಏರಿಕೆ, ನಾಲ್ಕನೆಯ ಹಂತ ಬಿಜೆಪಿ ಗೆಲ್ಲಬೇಕಾದ ಅಗತ್ಯವಿರುವೆಡೆ ನಕಲಿ ಮತದಾನ ನಡೆಸುವುದು ಹಾಗೂ ಐದನೆಯ ಹಂತ ಸಾಕ್ಷ್ಯಾಧಾರಗಳನ್ನು ಬಚ್ಚಿಡುವುದು&#8221; ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದ್ದಾರೆ. ಅಲ್ಲದೆ ಈ ಲೇಖನದ ಪುಟವನ್ನು ಅವರು ತಮ್ಮ ಎಕ್ಸ್ ಪೋಸ್ಟ್‌ನೊಂದಿಗೂ ಹಂಚಿಕೊಂಡಿದ್ದಾರೆ.</p>



<p>ನಾನು ಸಣ್ಣ ಪ್ರಮಾಣದ ವಂಚನೆಯ ಕುರಿತು ಮಾತನಾಡುತ್ತಿಲ್ಲ. ಬದಲಿಗೆ ನಮ್ಮ ರಾಷ್ಡ್ರೀಯ ಸಂಸ್ಥೆಗಳನ್ನು ಕೈವಶ ಮಾಡಿಕೊಂಡು ಬೃಹತ್ ಪ್ರಮಾಣದ ವಂಚನೆ ಎಸಗಲಾಗಿದೆ ಎಂದು ಅವರು ದೂರಿದ್ದಾರೆ. </p>



<p>ಆದರೆ, ರಾಹುಲ್ ಗಾಂಧಿಯ ಆರೋಪಗಳನ್ನು ತಳ್ಳಿ ಹಾಕಿರುವ ಚುನಾವಣಾ ಆಯೋಗ, ನಮ್ಮ ಕಾರ್ಯವಿಧಾನ ಸ್ವಾಯತ್ತವಾಗಿಯೇ ಉಳಿದಿದ್ದು, ನಾವು ಸಾಂವಿಧಾನಿಕ ಕಾನೂನುಗಳಿಗೆ ಕಟಿಬದ್ಧವಾಗಿದ್ದೇವೆ ಎಂದು ಸ್ಪಷ್ಟನೆ ನೀಡಿದೆ. </p>



<p>ಈ ನಡುವೆ, ರಾಹುಲ್ ಗಾಂಧಿಯ ಆರೋಪಗಳನ್ನು &#8216;ಅಪಮಾನಕಾರಿ&#8217; ಎಂದು ಟೀಕಿಸಿರುವ ಬಿಜೆಪಿ, &#8220;ರಾಷ್ಟ್ರೀಯ ಸಂಸ್ಥೆಗಳಿಗೆ ಕಳಂಕ ಹಚ್ಚುವ ಕೆಲಸ ಮಾಡಿದೆ. ಈ ಆರೋಪಗಳ ಕುರಿತು ಚುನಾವಣಾ ಆಯೋಗವು ಪದೇ ಪದೇ ನಿಖರವಾಗಿ ವಿವರಿಸಿದ್ದರೂ ರಾಹುಲ್‌ ಗಾಂಧಿ ಹೀಗೆ ಮಾತನಾಡುವುದು ಸರಿಯಲ್ಲ ಎಂದು ಪ್ರತ್ಯುತ್ತರ ನೀಡಿದೆ. </p>



<p></p>
]]></content:encoded>
					
		
		
			</item>
		<item>
		<title>ಮಹಾರಾಷ್ಟ್ರದಲ್ಲಿ ಬಕ್ರೀದ್ ಸಮಯದಲ್ಲಿ ಜಾನುವಾರು ಮಾರುಕಟ್ಟೆಗಳ ಬಂದ್? :‌ ಕುರಿ ವ್ಯಾಪಾರಿಗಳಿಂದ ವಿರೋಧ</title>
		<link>https://peepalmedia.com/closure-of-cattle-markets-in-maharashtra-during-bakrid-opposition-from-sheep-traders/</link>
		
		<dc:creator><![CDATA[Peepal Media]]></dc:creator>
		<pubDate>Mon, 02 Jun 2025 10:08:50 +0000</pubDate>
				<category><![CDATA[ದೇಶ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=60190</guid>

					<description><![CDATA[ಮುಂಬೈ: ಜಾನುವಾರುಗಳ ಕಲ್ಯಾಣಕ್ಕಾಗಿ ಸ್ಥಾಪಿಸಲಾಗಿರುವ ಮಹಾರಾಷ್ಟ್ರ ಗೋಸೇವಾ ಆಯೋಗ ವು (ಎಂಜಿಎಸ್)ವು ಬಕ್ರೀದ್‌ಗೆ ಮುನ್ನ ಜೂ.1 ಮತ್ತು ಜೂ.8ರ ನಡುವೆ ಯಾವುದೇ ಜಾನುವಾರು ಮಾರುಕಟ್ಟೆಗಳು ಕಾರ್ಯ ನಿರ್ವಹಿಸಬಾರದು, ಪೂರ್ತಿಯಾಗಿ ಬಂದ್‌ ಆಗಿರಬೇಕು ಎಂದು ಆದೇಶ ಹೊರಡಿಸಿದೆ ಎಂದು ಮುಂಬೈ ಸ್ಥಳಿಯ ಸುದ್ದಿಸಂಸ್ಥೆಯು ರವಿವಾರ ವರದಿ ಮಾಡಿದೆ. ಬಕ್ರೀದ್‌ ಅನ್ನು ಜೂ.7ರಂದು ಆಚರಿಸಲಾಗುತ್ತಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವು ಆಡು ಮತ್ತು ಕುರಿಗಳನ್ನು ವಧೆಯನ್ನು ಒಳಗೊಂಡಿದೆ. ಬಹಳಷ್ಟು, ರೈತರು, ಕುರಿ- ಮೇಕೆ ಸಾಕಾಣಿಕೆದಾರರು ಭಕ್ರೀದ್‌ ಹಬ್ಬಕ್ಕಾಗಿಯೇ ಕುರಿ ಮೇಕೆಗಳನ್ನು [&#8230;]]]></description>
										<content:encoded><![CDATA[
<p>  ಮುಂಬೈ: ಜಾನುವಾರುಗಳ ಕಲ್ಯಾಣಕ್ಕಾಗಿ ಸ್ಥಾಪಿಸಲಾಗಿರುವ ಮಹಾರಾಷ್ಟ್ರ ಗೋಸೇವಾ ಆಯೋಗ ವು (ಎಂಜಿಎಸ್)ವು ಬಕ್ರೀದ್‌ಗೆ ಮುನ್ನ ಜೂ.1 ಮತ್ತು ಜೂ.8ರ ನಡುವೆ ಯಾವುದೇ ಜಾನುವಾರು ಮಾರುಕಟ್ಟೆಗಳು  ಕಾರ್ಯ ನಿರ್ವಹಿಸಬಾರದು, ಪೂರ್ತಿಯಾಗಿ ಬಂದ್‌ ಆಗಿರಬೇಕು ಎಂದು ಆದೇಶ ಹೊರಡಿಸಿದೆ ಎಂದು ಮುಂಬೈ ಸ್ಥಳಿಯ  ಸುದ್ದಿಸಂಸ್ಥೆಯು ರವಿವಾರ ವರದಿ ಮಾಡಿದೆ.</p>



<p> ಬಕ್ರೀದ್‌ ಅನ್ನು ಜೂ.7ರಂದು ಆಚರಿಸಲಾಗುತ್ತಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವು ಆಡು ಮತ್ತು ಕುರಿಗಳನ್ನು ವಧೆಯನ್ನು ಒಳಗೊಂಡಿದೆ. ಬಹಳಷ್ಟು,  ರೈತರು, ಕುರಿ- ಮೇಕೆ ಸಾಕಾಣಿಕೆದಾರರು ಭಕ್ರೀದ್‌ ಹಬ್ಬಕ್ಕಾಗಿಯೇ ಕುರಿ ಮೇಕೆಗಳನ್ನು ಸಾಕಿಕೊಂಡು ಹಬ್ಬ ನಡೆಯುವ ಸಂದರ್ಭದಲ್ಲಿ ಮಾರಾಡ ಮಾಡುತ್ತಾರೆ. ಗೋ ಹತ್ಯೆ ನೀಷೇದಕ್ಕಾಗಿ ಕುರಿ ಮೇಕೆಗಳನ್ನು ಮಾರಾಟ ಮಾಡುವ ಜಾನುವಾರು ಮಾರುಕಟ್ಟೆಗಳನ್ನು ಬಂದ್‌ ಮಾಡಿದರೆ  ನಾವು ಕುರಿ ಮೇಕೆ ವ್ಯಾಪಾರಿಗಳು ಎಲ್ಲಿಗೆ ಹೋಗಬೇಕು ಎಂದು ವಿರೋಧವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. </p>



<p>ಎಂಜಿಎಸ್ ಮೇ 27ರಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಅಕ್ರಮ ಗೋಹತ್ಯೆ ನಡೆಯದಂತೆ ನೋಡಿಕೊಳ್ಳಲು ಯಾವುದೇ ಜಿಲ್ಲೆಯಲ್ಲಿ ಜಾನುವಾರು ಮಾರುಕಟ್ಟೆಗಳು ಕಾರ್ಯ ನಿರ್ವಹಿಸುವಂತಿಲ್ಲ ಎಂದು ತನ್ನ ಆದೇಶ ಪತ್ರದಲ್ಲಿ ತಿಳಿಸಿದೆ. </p>



<p></p>
]]></content:encoded>
					
		
		
			</item>
		<item>
		<title>ಕವಿ, ಶಿಕ್ಷಕ ವೀರಣ್ಣ ಮಡಿವಾಳರ ಅಮಾನತು: ಸರ್ಕಾರದ ಕ್ರಮ ವಿರೋಧಿಸಿ ಕವಿ ಬರೆದ ಪತ್ರ ವೈರಲ್‌</title>
		<link>https://peepalmedia.com/poet-and-teacher-veeranna-madiwalas-suspension-poets-letter-opposing-government-action-goes-viral/</link>
		
		<dc:creator><![CDATA[Peepal Media]]></dc:creator>
		<pubDate>Fri, 30 May 2025 09:15:06 +0000</pubDate>
				<category><![CDATA[ಅಂಕಣ]]></category>
		<category><![CDATA[ಶಿಕ್ಷಣ]]></category>
		<category><![CDATA[governement office]]></category>
		<category><![CDATA[Government School]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[poetry]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=60051</guid>

					<description><![CDATA[ಬೆಳಗಾವಿ: ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಕೊಠಡಿ ನಿರ್ಮಾಣಕ್ಕೆ ಆಗ್ರಹಿಸಿದ್ದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ವಿರಣ್ಣ ಮಡಿವಾಳರ ವಿರುದ್ಧ ಶಿಕ್ಷಣ ಇಲಾಖೆ ಶಿಸ್ತು ಕ್ರಮದ ನೆಪವೊಡ್ಡಿ ಅಮಾನತುಗೊಳಿಸಿದೆ. ರಾಜ್ಯ ಸರಕಾರದ ಈ ಧೋರಣೆ ವಿರುದ್ಧ ತೀವ್ರ ಅಸಮಧಾನಗೊಂಡಿರುವ ಕವಿ ವೀರಣ್ಣ ಸುದೀಘ್ರ ಪತ್ರ ಬರೆದಿದ್ದು, ಆ ಪತ್ರ ಈ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಚಿಕ್ಕೋಡಿ ಜಿಲ್ಲೆಯ ರಾಯಭಾಗ ತಾಲೊಕಿನ ನಿಡಗುಂಡಿ ಗ್ರಾಮದ ಅಂಬೇಡ್ಕರ ನಗರದ ಕನ್ನಡ ಸರಕಾರಿ ಹಿರಿಯ [&#8230;]]]></description>
										<content:encoded><![CDATA[
<p>ಬೆಳಗಾವಿ:  ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಕೊಠಡಿ ನಿರ್ಮಾಣಕ್ಕೆ ಆಗ್ರಹಿಸಿದ್ದ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕವಿ ವಿರಣ್ಣ ಮಡಿವಾಳರ ವಿರುದ್ಧ ಶಿಕ್ಷಣ ಇಲಾಖೆ ಶಿಸ್ತು ಕ್ರಮದ ನೆಪವೊಡ್ಡಿ ಅಮಾನತುಗೊಳಿಸಿದೆ. ರಾಜ್ಯ ಸರಕಾರದ ಈ ಧೋರಣೆ ವಿರುದ್ಧ ತೀವ್ರ ಅಸಮಧಾನಗೊಂಡಿರುವ ಕವಿ ವೀರಣ್ಣ ಸುದೀಘ್ರ ಪತ್ರ ಬರೆದಿದ್ದು, ಆ ಪತ್ರ ಈ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. </p>



<p>ಚಿಕ್ಕೋಡಿ ಜಿಲ್ಲೆಯ ರಾಯಭಾಗ ತಾಲೊಕಿನ ನಿಡಗುಂಡಿ ಗ್ರಾಮದ ಅಂಬೇಡ್ಕರ ನಗರದ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ  ವೀರಣ್ಣ ಮಡಿವಾಳರ ಅವರೇ ಈ ಪತ್ರ ಬರೆದಿರುವುದು. ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಆ ಪತ್ರವನ್ನು ಇಲ್ಲಿ ಯಥಾವತ್ತಾಗಿ ನೀಡಲಾಗಿದೆ.</p>



<p>**** </p>



<p>ಗೆ,</p>



<p>ಮಾನ್ಯ ಕ್ಷೇತ್ರಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ, ರಾಯಬಾಗ.</p>



<p>ಮಾನ್ಯರೇ,</p>



<p>ವಿಷಯ: ತಾವು ನೀಡಿರುವ ಕಾರಣ ಕೇಳಿ ನೋಟೀಸ್ ಗೆ ನನ್ನ ಹೇಳಿಕೆಯನ್ನು ನೀಡುತ್ತಿರುವ ಕುರಿತು</p>



<p>ಉಲ್ಲೇಖ: ದಿನಾಂಕ:೨೭.೦೫.೨೦೨೫ ರಂದು ತಾವು ನನಗೆ ನೀಡಿರುವ ಕಾರಣ ಕೇಳಿ ನೋಟೀಸ್</p>



<p>ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಈ ಮೂಲಕ ತಮ್ಮ ಗಮನಕ್ಕೆ ತರಲು ಬಯಸುವುದೇನೆಂದರೆ ನಾನು ಕಳೆದ ಒಂಭತ್ತು ವರುಷಗಳಿಂದ ನಿಡಗುಂದಿಯ ಅಂಬೇಡ್ಕರ ನಗರ ಶಾಲೆಯ ಅಭಿವೃದ್ಧಿಗಾಗಿ ಅಲ್ಲಿನ ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದಕ್ಕಾಗಿ ತನುಮನಧನದಿಂದ ಸಮಯದ ರಜೆಯ ಹಂಗಿಲ್ಲದೆ ನಿರಂತರ ಶ್ರಮಿಸುತ್ತಿದ್ದೇನೆ. ದಾನಿಗಳ ಶಿಕ್ಷಣ ಪ್ರೇಮಿಗಳ ಮತ್ತು ಕರ್ನಾಟಕ ಘನಸರ್ಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯದೊಂದಿಗೆ ಅನೇಕ ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತ ಬಂದಿದ್ದೇವೆ. ಇದಕ್ಕೆ ಸಾಕ್ಷಿ ಎಂಬAತೆ ೨೦೨೪-೨೫ ನೇ ಸಾಲಿನ ಅತ್ಯುತ್ತಮ ಎಸ್ ಡಿ ಎಂ ಸಿ ಶಾಲೆ ಪ್ರಶಸ್ತಿ ಮತ್ತು ಒಂದು ಲಕ್ಷ ನಗದು ಬಹುಮಾನವೂ ಬಂದಿರುವುದು ತಮ್ಮ ಗಮನಕ್ಕಿದೆ. ಇವು ಇಲಾಖೆಗೆ ಮತ್ತು ಸರಕಾರಕ್ಕೆ ಘನತೆ ತರುವ ಕೆಲಸಗಳೆಂದು ತಮಗೆ ತಿಳಿಸಿ ಹೇಳಬೇಕಾಗಿಲ್ಲ.</p>



<figure class="wp-block-image"><img decoding="async" src="https://www.justkannada.in/wp-content/uploads/2025/05/school-1.jpg" alt=""/></figure>



<p>ಈ ನಾಡಿನ ಪ್ರಸಿದ್ಧ ಚಿಂತಕರಾದ ಟಿ.ಪಿ.ಅಶೋಕ ರವರು ನಮ್ಮ ಶಾಲೆಯನ್ನು “ಈ ಶಾಲೆ ಈ ದೇಶದ ಅತ್ಯುತ್ತಮ ಸರಕಾರಿ ಸಂಸ್ಥೆಗಳಲ್ಲಿ ಒಂದು ಮತ್ತು ಈ ಶಾಲೆಗೆ ಬಂದಾಗ ರಾಷ್ಟçಕವಿ, ನೋಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರರ ಶಾಂತಿನಿಕೇತನದಲ್ಲಿ ಕಾಲಿಟ್ಟ ಅನುಭವವಾಯಿತು” ಎಂದು ಹೊಗಳಿರುವುದು ನಮ್ಮ ಸರಕಾರಿ ಶಾಲೆಯನ್ನೇ. ಇದು ಇಲಾಖೆಗೆ ತಮಗೆ ಮುಜುಗರವುಂಟು ಮಾಡುವಂಥದೇ, ಇದರ ಹಿಂದೆ ಶ್ರಮಿಸಿದ ನನ್ನ ವರ್ತನೆಗಳು ‘ಅನಾಗರಿಕ’ವೇ?</p>



<p>ನಮ್ಮ ಶಾಲೆಯ ಕೆಲಸಗಳನ್ನು ಮೆಚ್ಚಿ ಈ ದೇಶದ ಪ್ರತಿಷ್ಠಿತ ಇಂಗ್ಲಿಷ್ ದಿನಪತ್ರಿಕೆಯಾದ ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆ ಒಂದು ತಂಡವನ್ನು ನಮ್ಮ ಶಾಲೆಯರೆಗೂ ಕಳುಹಿಸಿ ಲಕ್ಷಾಂತರ ರೂಪಾಯಿ ಖರ್ಚುಮಾಡಿ ಒಂದು ಸಾಕ್ಷö್ಯಚಿತ್ರ ನಿರ್ಮಿಸಿದೆ. ಇದರಿಂದ ಇಲಾಖೆಗೆ ಸರಕಾರಕ್ಕೆ ಘನತೆ ಮರ್ಯಾದೆ ಹೆಚ್ಚಿತೋ ಅಥವಾ ಕುಂದಿತೋ? ತಾವೇ ಕಾಳಜಿ ಮತ್ತು ಕರುಣೆಯ ಕಣ್ಣಿನಿಂದ ಯೋಚಿಸಿ.</p>



<p>ಹಲವಾರು ವರ್ಷಗಳ ಕಾಲ ಕಾದು, ನಮ್ಮ ಶಾಲೆಯಲ್ಲಿ ತರಗತಿ ಮತ್ತು ಮಕ್ಕಳ ಸಂಖ್ಯೆಗನುಗುಣವಾಗಿ ತರಗತಿ ಕೊಠಡಿಗಳಿಲ್ಲವೆಂದು ಮನಗಂಡು ಹಲವಾರು ತಾಲ್ಲೂಕು ಹಂತದ ಜಿಲ್ಲಾ ಹಂತದ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದರೂ ಏನೂ ಸ್ಪಂದನೆ ಸಿಗದೇ ಇದ್ದಾಗ ಅನಿವಾರ್ಯವಾಗಿ ನಾನು ನಮ್ಮ ಶಾಲೆಯಿಂದ ಬಿಇಒ ಕಛೇರಿವರೆಗೆ ಡಾ.ಬಾಬಾಸಾಹೇಬ ಅಂಬೇಡ್ಕರರವರ ಫೋಟೋ ಹಿಡಿದುಕೊಂಡು ಒಂದು ಭಿತ್ತಿಪತ್ರವನ್ನು ಹಿಡಿದುಕೊಂಡು ಗಾಂಧಿ ಟೋಪಿ ಧರಿಸಿ ಸುಮಾರು ಹದಿನೈದು ಕಿ.ಮೀ ಮೌನ ಕಾಲ್ನಡಿಗೆ ಜಾಥಾದೊಂದಿಗೆ ಬಿಇಒ ಕಛೇರಿವರೆಗೂ ಬಂದು ಬಿಇಒ ಕಛೇರಿಯ ಬಾಗಿಲಲ್ಲಿ ಕೂತು ಉಪವಾಸ ಸತ್ಯಾಗ್ರಹ ಮಾಡಿರುತ್ತೇನೆ. ನಮ್ಮ ಶಾಲಾ ಮಕ್ಕಳು “ನಮ್ಮನ್ನ ಎಲ್ಲಿ ಕೂರಿಸಿ ಪಾಠ ಮಾಡ್ತೀರಿ ಸರ್? ನಾವು ಮಳ್ಯಾಗ ಬಿಸಿಲಾಗ ಛಳಿಯಾಗ ಹೊರಗ ಕುಂದರಬೇಕೇನ್ರಿ?” ಎಂದೆಲ್ಲ ಪ್ರಶ್ನಿಸಿದಾಗ ನನ್ನ ಕರುಳು ಹಿಂಡಿದಂತಾಗಿ ನೊಂದು ಅಸಹಾಯಕನಾಗಿ ನಾನು ಈ ನಿರ್ಧಾರ ಕೈಗೊಂಡಿರುತ್ತೇನೆ.</p>



<p>ಹೀಗೆ ಉಪವಾಸ ಕುಳಿತ ನನ್ನನ್ನ ತಾವು ಶತ್ರುವಿನ ರೀತಿ ನಡೆಸಿಕೊಂಡಿರಿ. ಏಕವಚನದಲ್ಲಿ ಸಂಬೋಧಿಸಿ ನನ್ನ ಮೇಲೆ ಕ್ರಮ ಕೈಗೊಳ್ಳುವುದಾಗಿ ಬೆದರಿಸಿದಿರಿ. ನನ್ನನ್ನ ನಿಮ್ಮ ಅಧಿಕಾರ ಬಲದ ಮುಂದೆ ಯರ್ಕಶ್ಚಿತ್ ಎನ್ನುವ ರೀತಿಯಲ್ಲಿ ನಡೆಸಿಕೊಂಡಿರಿ. ತಾವು ನನ್ನನ್ನ ಏಕವಚನದಲ್ಲಿ ಸಂಬೋಧಿಸುವಾಗ ನನ್ನ ಎಂ.ಎ ಇಂಗ್ಲಿಷ್ ಪದವಿ ಮತ್ತು ಕೆಸೆಟ್ ಪ್ರಮಾಣಪತ್ರ ಮತ್ತು ಎಂ.ಎ ಕನ್ನಡ ಪದವಿ ಮತ್ತು ಕೆಸೆಟ್ ಪ್ರಮಾಣ ಪತ್ರಗಳು ನೆನಪಾಗಿ ಆಳದಲ್ಲಿ ನೊಂದೆ. ನಾನು ರಾಷ್ಟ್ರಪತಿಗಳಿಂದ ಪಡೆದ ಚಿನ್ನದ ಪದಕ ನನಗೆ ಒದಗಿರುವ ಪರಿಸ್ಥಿತಿ ನೋಡಿ ಅತ್ತಂಗಾಯಿತು, ನಾನು ಪಡೆದ ಕೇಂದ್ರ ಸರಕಾರ ಕೊಡಮಾಡುವ ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಡಮಾಡುವ ಕನ್ನಡದ ಚೊಚ್ಚಲ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಕರ್ನಾಟಕ ಘನ ಸರಕಾರ ಕೊಡಮಾಡುವ ನನಗೆ ನೀಡಿರುವ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ನಿರರ್ಥಕ ಎನ್ನಿಸಿದವು. ಅದೂ ಹೋಗಲಿ ಈ ನಾಡಿನ ಹತ್ತು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಿಗೆ ನಾನು ಬರೆದಿರುವ ಪದ್ಯಗಳು ಪಠ್ಯವಾಗಿ ಆಯ್ಕೆಯಾಗಿವೆ. ನೀವು ನನ್ನನ್ನ ಅಂವ ಇಂವ ಎಂದು ಸಂಬೋಧಿಸುವಾಗ ಇವಕ್ಕೆಲ್ಲ ಎಲ್ಲಿ ಅರ್ಥ ಬಂತು ಸರ್? ಯಾವುದು ‘ಅನಾಗರೀಕತೆ’ ಎಂಬುದನ್ನ ತಾವೇ ದಯಮಾಡಿ ಪರಿಶೀಲಿಸಲು ವಿನಂತಿಸುತ್ತೇನೆ. ನಾನು ಹುದ್ದೆಯಿಂದ ಪ್ರಾಥಮಿಕ ಶಾಲಾ ಶಿಕ್ಷಕನಾಗಿರಬಹುದು ಆದರೆ ಪ್ರವೃತ್ತಿ ಮತ್ತು ವಿದ್ಯಾರ್ಹತೆಯಿಂದ ನಾನು ಕಡಿಮೆಯಲ್ಲ ಎಂದು ತಮ್ಮ ಗಮನಕ್ಕೆ ತರಬಯಸುತ್ತೇನೆ.</p>



<figure class="wp-block-image"><img decoding="async" src="https://www.justkannada.in/wp-content/uploads/2025/05/madivalara.jpg" alt=""/></figure>



<p>ಕೇವಲ ನನ್ನ ಶಾಲೆ ಮಾತ್ರವಲ್ಲ ಇಡೀ ತಾಲ್ಲೂಕಿನ ಸಾವಿರಾರು ಮಕ್ಕಳಿಗೆ ಪ್ರವಾಹ ಸಂದರ್ಭದಲ್ಲಿ ಎಜುಕೇಶನ್ ಕಿಟ್ ಗಳನ್ನು ದಾನಿಗಳ ಸಹಾಯದಿಂದ ನೀಡಲು ನೆರವಾಗಿದ್ದೇನೆ. ದಿಗ್ಗೇವಾಡಿಯ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಮ್ಮ ಗೆಳೆಯರ ಸಹಾಯದಿಂದ ಒಂದು ಜೊತೆ ಸಮವಸ್ತ್ರ ನೀಡಲು ನೆರವಾಗಿದ್ದೇನೆ. ಪ್ರವಾಹ ಸಂದರ್ಭದಲ್ಲಿ ನೆರೆಯಿಂದ ಸಂತ್ರಸ್ತರಾಗಿದ್ದ ಅನೇಕ ಹಳ್ಳಿಗಳಿಗೆ ಲಕ್ಷಲಕ್ಷ ರೂಪಾಯಿಯ ಔಷಧ, ಬಟ್ಟೆ, ಹಾಸಿಗೆ ಮತ್ತು ಪಾತ್ರೆ ಪರಿಕರಗಳನ್ನ ದಾನಿಗಳ ಸಹಾಯದಿಂದ ನೀಡಿದ್ದು ತಮ್ಮ ಪ್ರಕಾರ ‘ಅನಾಗರಿಕ’ ವರ್ತನೆಯೇ ದಯಮಾಡಿ ನನ್ನ ವರ್ತನೆಗಳ ಕುರಿತು ನಿಮ್ಮ ಪೂರ್ವಾಗ್ರಹಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕೆಂದು ಕೋರುವೆ.</p>



<p>ತಮ್ಮ ನೋಟೀಸಿನಲ್ಲಿ ಹೇಳಿರುವಂತೆ ತಮಗೆ ನನ್ನ ಭಿತ್ತಿಪತ್ರ ಮಾತ್ರ ಕಾಣಿಸಿತು, ಆದರೆ ನಾನು ಕೈಯಲ್ಲಿ ಹಿಡಿದಿದ್ದ ನಮ್ಮ ಸಂವಿಧಾನ ಪಿತಾಮಹ ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರ ಫೋಟೋ ಯಾಕೆ ಕಾಣಿಸಲಿಲ್ಲ? ಅಥವಾ ಬಾಬಾಸಾಹೇಬರ ಫೋಟೋ ಹಿಡಿದು ನಡೆದು ಬಂದಿದ್ದರಿಂದ ಮತ್ತು ಅವರ ಫೋಟೊ ಇಟ್ಟುಕೊಂಡು, ರಾಷ್ಟçಪಿತ ಮಹಾತ್ಮಾಗಾಂಧೀಜಿ ಟೋಪಿ ಹಾಕಿಕೊಂಡು ಉಪವಾಸ ಕೂತಿದ್ದರಿಂದಲೇ ತಮಗೆ ನನ್ನ ಮೇಲೆ ಅಸಹನೆಯೇ?</p>



<p>ಸರಕಾರಿ ಶಾಲೆಗಳು ಸದ್ದಿಲ್ಲದೆ ಸಾಯುತ್ತಿರುವ ಈ ದಿನಮಾನಗಳಲ್ಲಿ ದಮನಿತ ಸಮುದಾಯಗಳು ವಾಸಿಸುವಂಥ, ದೀನರು ದುರ್ಬಲರು ವಾಸಿಸುವಂಥ, ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿರುವ ಜನಸಮುದಾಯ ವಾಸಿಸುವಂಥ ಮತ್ತು ಕಟ್ಟಡ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರ ಮಕ್ಕಳು ಓದುವಂಥ ಒಂದು ಶಾಲೆಯನ್ನು ಅಭಿವೃದ್ಧಿಪಡಿಸಿ ಇಂದು ಮಕ್ಕಳ ಸಂಖ್ಯೆಯನ್ನು ದ್ವಿಗುಣಗೊಳಿಸಿದ್ದು ನನ್ನ ಅನಾಗರಿಕ ವರ್ತನೆ ಹೇಗಾಗುತ್ತದೆ? ದಯಮಾಡಿ ತಿಳಿಸಿ. ನಾನು ಓದಿಕೊಂಡಿರುವ ಬಾಬಾಸಾಹೇಬರು, ಕಾರ್ಲ್ಮಾರ್ಕ್ಸ್, ಗಿಬ್ರಾನ್, ದೇವನೂರು ಮಹಾದೇವ, ಲಂಕೇಶ್, ಅನಂತಮೂರ್ತಿ, ಡಿ ಆರ್ ನಾಗರಾಜರು ಎಲ್ಲೂ ಇದು ಅನಾಗರಿಕ ವರ್ತನೆ ಎಂದು ಹೇಳಿಲ್ಲ. ತಾವು ಎಲ್ಲಿಯಾದರೂ ಈ ಕುರಿತು ರೆಫರೆನ್ಸ್ ಇದ್ದರೆ ನನ್ನ ಅಪತಿಳುವಳಿಕೆಯನ್ನು ಸರಿಪಡಿಸಬೇಕಾಗಿ ಕೋರುತ್ತೇನೆ.</p>



<p>ನಾನೊಬ್ಬ ಸರಕಾರಿ ನೌಕರ. ಸರಕಾರದ ಘನತೆ ತರುವ ಕೆಲಸ ಮಾಡುವುದು ನನ್ನ ಕರ್ತವ್ಯ. ಮತ್ತು ಅದನ್ನು ನಿರಂತರ ಮಾಡುತ್ತ ಬಂದಿದ್ದೇನೆ. ಹಾಗಾಗಿಯೇ ಇಲಾಖೆ ಮತ್ತು ಸರಕಾರವೇ ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನೂ ನೀಡಿದೆ ಮತ್ತು ಅಂತರಾಷ್ಟಿçÃಯ ಪ್ರಶಸ್ತಿಗಳೂ ಕೂಡ ನನ್ನ ಶಾಲಾ ಕೆಲಸಕ್ಕಾಗಿ ನೀಡಲ್ಪಟ್ಟಿವೆ. ಮತ್ತು ಇದುವರೆಗೆ ನನಗೆ ಸಿಕ್ಕ ಪ್ರಶಸ್ತಿ ಹಣ ಮತ್ತು ಗೌರವ ಧನವನ್ನು ನಮ್ಮ ಶಾಲಾ ಮಕ್ಕಳಿಗಾಗಿಯೇ ವಿನಿಯೋಗಿಸಿದ್ದೇನೆ.</p>



<p>ಮಕ್ಕಳು ಬಿಸಿಲಲ್ಲಿ, ಮಳೆಯಲ್ಲಿ, ಗಾಳಿಯಲ್ಲಿ ಕೂತು ಕಲಿಯಬೇಕಾದ ಅನಿವಾರ್ಯತೆ ಯಾವ ಮಕ್ಕಳಿಗೂ ಬರಬಾರದು. ಹಲವು ವರುಷಗಳ ನಮ್ಮ ಬೇಡಿಕೆಗೆ ಸ್ಪಂದನೆ ಸಿಗದೇ ಇದ್ದ ಕಾರಣದಿಂದ ಇಲಾಖೆಯ ಗಮನ ಸೆಳೆಯುವುದಕ್ಕಾಗಿ ನನ್ನನ್ನ ನಾನು ಶಿಕ್ಷಿಸಿಕೊಂಡು ಹದಿನೈದು ಕಿ.ಮೀ ಮೌನ ಕಾಲ್ನಡಿಗೆ ಜಾಥಾ ಮಾಡಿ ಬಿಇಒ ಕಛೇರಿ ಮುಂದೆ ಉಪವಾಸ ಸತ್ಯಾಗ್ರಹ ಕೂತಿದ್ದೇನೆ.</p>



<p>ಒಂದು ಕಡೆ ಶಾಲಾ ಶಿಕ್ಷಣ ಇಲಾಖೆಯ ಮಾನ್ಯ ಆಯುಕ್ತರಾಗಿದ್ದಂತ ಅನ್ಬುಕುಮಾರ್ ಸಾಹೇಬರು ನಮ್ಮ ಶಾಲಾ ಕೆಲಸಗಳನ್ನು ಮೆಚ್ಚಿ ಎರಡು ಕೊಠಡಿ ಮಂಜೂರು ಮಾಡಿ ಅಭಿನಂದಿಸಿ ಪತ್ರ ಬರೆಯುತ್ತಾರೆ. ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ಸನ್ಮಾನ್ಯ ಉಮಾಮಹಾದೇವನ್ ಮೇಡಂ ರವರು ನಮ್ಮ ಶಾಲಾ ಕೆಲಸಗಳನ್ನು ಮೆಚ್ಚಿ ಅಭಿನಂದನಾ ಪತ್ರ ಕಳುಹಿಸಿ ನಮ್ಮ ಶಾಲೆಗ ಭೇಟಿ ನೀಡುವುದಾಗಿ ತಿಳಿಸುತ್ತಾರೆ, ನಾನು ನಮ್ಮ ಶಾಲಾ ಮಕ್ಕಳ ದಯನೀಯ ಸ್ಥಿತಿಯನ್ನು ಕಂಡು ನನ್ನನ್ನು ನಾನೇ ಹಿಂಸೆಗೊಳಪಡಿಸಿಕೊAಡು ಉಪವಾಸ ಸತ್ಯಾಗ್ರಹ ಕೈಗೊಂಡರೆ ತಾವು ನನ್ನದು ‘ಅನಾಗರಿಕ’ ವರ್ತನೆಯೆಂದು ಕಾರಣ ಕೇಳಿ ನೋಟೀಸ್ ನೀಡುತ್ತೀರಿ. ಯಾವುದನ್ನು ನಂಬುವುದು ಎಂದು ತಿಳಿಯದ ಅತ್ಯಂತ ನೋವಿನ ಸಂದರ್ಭದಲ್ಲಿ ನಾನಿದ್ದೇನೆ.</p>



<p>ಹಲವಾರು ಜನರ ಬಳಿ ಕಾಡಿಬೇಡಿ ಮಾನ್ಯ ರಾಜ್ಯಪಾಲರ ಹೆಸರಿಗೆ ಶಾಲಾ ಮಕ್ಕಳಿಗಾಗಿ ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ಸರಕಾರಕ್ಕೆ ಇಲಾಖೆಗೆ ಶಾಲೆಗೆ ಹತ್ತುಗುಂಟೆ ಜಮೀನು ಖರೀದಿಸಿದ್ದು ಇಲಾಖೆಗೆ ಘನತೆ ತರುವಂಥ ಕೆಲಸವೆಂದು ನಾನು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ.</p>



<p>ನನ್ನ ಮನವಿ ಇಷ್ಟೇ. ನಾನು ನಮ್ಮ ಘನ ಸರಕಾರದ ಘನತೆ ಹೆಚ್ಚಿಸುವ ಕೆಲಸ ಮಾಡಿದ್ದೇನೆಯೇ ಹೊರತು, ಇಲಾಖೆಗೆ ಅಥವಾ ಸರಕಾರಕ್ಕೆ ಮುಜುಗರ ತರುವಂಥ ಕೆಲಸ ನಾನು ಮಾಡಿರುವುದಿಲ್ಲ ಎಂದು ಈ ಮೂಲಕ ನನ್ನ ಹೇಳಿಕೆಯನ್ನು ನೀಡುತ್ತಿದ್ದೇನೆ.</p>



<p>ದಯಮಾಡಿ ಪರಿಗಣಿಸಿ ಮತ್ತು ಶೀಘ್ರವೇ ನಮ್ಮ ಶಾಲಾ ಮಕ್ಕಳು ಮಳೆಯಲ್ಲಿ ನೆನೆಯದಂತೆ ಬಿಸಿಲಲ್ಲಿ ಬೇಯದಂತೆ ಶಾಲೆಯಲ್ಲಿ ಕಲಿತು ತಮ್ಮ ಬದುಕು ಕಟ್ಟಿಕೊಳ್ಳಲು ದಯಮಾಡಿ ನೆರವಾಗಿ, ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತಿದ್ದೇನೆ, ನಿಮಗೆ ಅಧಿಕಾರವಿದೆ ನಮ್ಮ ಶಾಲಾ ಮಕ್ಕಳಿಗೆ ನಾಲ್ಕು ಸುಸಜ್ಜಿತ ತರಗತಿ ಕೊಠಡಿಗಳನ್ನು ಕಟ್ಟಿಕೊಡಿ.</p>



<p>ನಾನು ಕನಸುಗಾರ, ಮಹಾತ್ವಾಕಾಂಕ್ಷಿ ಮತ್ತು ವಿದ್ಯಾರ್ಹತೆಯಿಂದಲೂ, ತಿಳುವಳಿಕೆಯಿಂದಲೂ ಅರ್ಹನಿದ್ದೇನೆ. ನಮ್ಮ ಶಾಲೆಯನ್ನು ಒಂದು ಅಂತರಾಷ್ಟಿçÃಯ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಯಾಗಿ ನಾನು ರೂಪಿಸಬೇಕಿದೆ. ಈಗ ಬಹುಭಾಷಾ ಪ್ರಯೋಗಾಲಯ ನಿರ್ಮಿಸಿದ್ದೇವೆ. ಲಕ್ಷಾಂತರ ರೂಪಾಯಿಯ ಪಾಠೋಪಕರಣ, ಪೀಠೋಪಕರಣ, ಕಂಪ್ಯೂಟರ್, ಸಿಸಿಟಿವಿ ಯನ್ನು ಶಾಲೆಯಲ್ಲಿ ಅಳವಡಿಸಿದ್ದೇವೆ. ನಾವಿನ್ನೂ ಗಣಿತ ಪ್ರಯೋಗಾಲಯ, ವಿಜ್ಞಾನ ಪ್ರಯೋಗಾಲಯ, ಸಮಾಜವಿಜ್ಞಾನ ಪ್ರಯೋಗಾಲಯ, ಅತ್ಯಾಧುನಿಕ ಗ್ರಂಥಾಲಯ ನಿರ್ಮಿಸಬೇಕಿದೆ. ಇದಕ್ಕೆಲ್ಲ ಕೊಠಡಿಗಳು ಬೇಕಿದೆ. ಇದು ‘ಅನಾಕರಿಕ’ ನ ಕನಸು ಎನಿಸಿದರೆ ನಾನು ತಮಗೆ ಏನು ಹೇಳಲಿ.</p>



<p>ತಾವು ನನ್ನ ಕೆಲಸಗಳನ್ನ ಕಾಳಜಿಯ ಕರುಣೆಯ ಕಣ್ಣುಗಳಿಂದ ಮಾನವೀಯ ಕಣ್ಣುಗಳಿಂದ ನೋಡಿದರೆ ಬಹುಶಃ ನಾನು ನಿಮಗೆ ‘ಅನಾಗರಿಕ’ನಾಗಿ ಕಾಣಿಸಲಾರೆ.</p>



<p>ಮತ್ತೊಮ್ಮೆ ತಮಗೆ ಕೈ ಮುಗಿದು ಬೇಡಿಕೊಳ್ಳುತ್ತೇನೆ. ನಮ್ಮ ಶಾಲಾ ಮಕ್ಕಳಿಗಾಗಿ ನಾಲ್ಕು ತರಗತಿ ಕೊಠಡಿಗಳನ್ನು ನಿರ್ಮಿಸಿಕೊಡಿ. ನಮ್ಮ ಕನಸಿನ ಶಾಲೆ ನಿರ್ಮಿಸಲು ನಮ್ಮ ಜೊತೆ ಕೈಜೋಡಿಸಿ.</p>



<p>ತಮ್ಮ ವಿಶ್ವಾಸಿ,</p>



<p><strong>ವೀರಣ್ಣ ಮಡಿವಾಳರ.</strong></p>



<p></p>
]]></content:encoded>
					
		
		
			</item>
		<item>
		<title>ಗೂಗಿ ವಾ ಥಿಯೋಂಗ: ನಮ್ಮೊಳಗಿರಬೇಕಾದ ಎಚ್ಚರ</title>
		<link>https://peepalmedia.com/googi-wa-thionga-the-alertness-that-must-be-within-us/</link>
		
		<dc:creator><![CDATA[Hanumanth Halageri]]></dc:creator>
		<pubDate>Thu, 29 May 2025 13:21:58 +0000</pubDate>
				<category><![CDATA[ಅಂಕಣ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[kannada actor]]></category>
		<category><![CDATA[kannada writing]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=59988</guid>

					<description><![CDATA[&#8216;ಅಧೀನಕ್ಕೊಳಪಟ್ಟವರು ಯಾವಾಗ ತಮ್ಮ ಯಜಮಾನನ ವಿಜಯವನ್ನು,ಅವನ ಸದ್ಗುಣಗಳನ್ನು ಹೊಗಳಲು ಪ್ರಾರಂಭಿಸುತ್ತಾರೋಆಗ ಆಳುವವನ ದಿಗ್ವಿಜಯಗಳಿಗೆ ಕೊನೆಯೆಂಬುದಿರುವುದಿಲ್ಲ.&#8217;-ಗೂಗಿ ವಾ ಥಿಯೋಂಗಾ, &#8216;ಡಿಕಾಲೊನೈಸಿಂಗ್ ಮೈಂಡ್&#8217; ಗೂಗಿ ವಾ ಥಿಯೋಂಗ ನಿನ್ನೆ (28.05.2025) ನಮ್ಮನ್ನಗಲಿದ್ದಾರೆ. ಕೀನ್ಯಾದ ಆದಿವಾಸಿ ಜನಾಂಗವೊಂದರಲ್ಲಿ ಜನಿಸಿ ಲೋಕ ಬೆರಗಾಗುವಂತೆ ಬದುಕಿದ ಗೂಗಿ ತಮ್ಮ 87ನೇ ವಯಸ್ಸಿನಲ್ಲಿ ಇಹಲೋಕವನ್ನು ತೊರೆದಿದ್ದಾರೆ. ಯುರೋಪಿನ ವಸಾಹತುಗಳಾಗಿದ್ದ ಪೂರ್ವ ಆಫ್ರಿಕಾದ ದೇಶಗಳ ಕಪ್ಪು ಜನರ ನೈಜ ಪ್ರತಿನಿಧಿಯಾಗಿ ಗೂಗಿ ನಿರಂತರವಾಗಿ ಬರೆದರು. ನಾನು ಬರೆದದ್ದು ಬರವಣಿಗಾಗಿ ಅಲ್ಲ, ಬರೆದದ್ದು ನನ್ನವರ ವಿಮೋಚನೆಗಾಗಿ. ನನ್ನ ಬರವಣಿಗೆಯಲ್ಲಿ [&#8230;]]]></description>
										<content:encoded><![CDATA[
<p><br>&#8216;ಅಧೀನಕ್ಕೊಳಪಟ್ಟವರು ಯಾವಾಗ ತಮ್ಮ ಯಜಮಾನನ ವಿಜಯವನ್ನು,<br>ಅವನ ಸದ್ಗುಣಗಳನ್ನು ಹೊಗಳಲು ಪ್ರಾರಂಭಿಸುತ್ತಾರೋ<br>ಆಗ ಆಳುವವನ ದಿಗ್ವಿಜಯಗಳಿಗೆ ಕೊನೆಯೆಂಬುದಿರುವುದಿಲ್ಲ.&#8217;<br>-ಗೂಗಿ ವಾ ಥಿಯೋಂಗಾ, &#8216;ಡಿಕಾಲೊನೈಸಿಂಗ್ ಮೈಂಡ್&#8217;</p>



<p><br>ಗೂಗಿ ವಾ ಥಿಯೋಂಗ ನಿನ್ನೆ (28.05.2025) ನಮ್ಮನ್ನಗಲಿದ್ದಾರೆ. ಕೀನ್ಯಾದ ಆದಿವಾಸಿ ಜನಾಂಗವೊಂದರಲ್ಲಿ ಜನಿಸಿ ಲೋಕ ಬೆರಗಾಗುವಂತೆ ಬದುಕಿದ ಗೂಗಿ ತಮ್ಮ 87ನೇ ವಯಸ್ಸಿನಲ್ಲಿ ಇಹಲೋಕವನ್ನು ತೊರೆದಿದ್ದಾರೆ. ಯುರೋಪಿನ ವಸಾಹತುಗಳಾಗಿದ್ದ ಪೂರ್ವ ಆಫ್ರಿಕಾದ ದೇಶಗಳ ಕಪ್ಪು ಜನರ ನೈಜ ಪ್ರತಿನಿಧಿಯಾಗಿ ಗೂಗಿ ನಿರಂತರವಾಗಿ ಬರೆದರು. <code>ನಾನು ಬರೆದದ್ದು ಬರವಣಿಗಾಗಿ ಅಲ್ಲ, ಬರೆದದ್ದು ನನ್ನವರ ವಿಮೋಚನೆಗಾಗಿ. ನನ್ನ ಬರವಣಿಗೆಯಲ್ಲಿ ಸೌಂದರ್ಯವಿದೆಯೇ? ಅಲಂಕಾರಗಳಿವೆಯೇ? ಪ್ರತಿಮೆಗಳಿವೆಯೇ ಎಂಬುದು ನಿಮಗೆ ಬಿಟ್ಟ ವಿಚಾರ. </code></p>



<p><code>ಆದರೆ ನಾನು ಬರೆದದ್ದು ನನ್ನ ಜನರ ಅತ್ಮಪ್ರತ್ಯಯಗಳ ಉಳುವಿಕೆಗಾಗಿ. ಯುರೋಪಿನ ಭ್ರಮೆಗಳು ನಮ್ಮ ಜನಾಂಗಗಳನ್ನು ಆವರಿಸಿಕೊಂಡುಬಿಟ್ಟವೆ. ಯುರೋಪ್ ನಮ್ಮ ಜನಾಂಗಗಳ ಅಂತರಂಗಗಳನ್ನು ಹೊಕ್ಕು ಕೂತಿದೆ. ನಮ್ಮ ದೇಶಗಳು ವಸಾಹತುಶಾಹಿಯಿಂದ ರಾಜಕೀಯ ಸ್ವಾತಂತ್ರ್ಯವನ್ನು ಮಾತ್ರ ಪಡೆದಿವೆ. ಆದರೆ ಮಾನಸಿಕವಾಗಿ ಇನ್ನೂ ಯುರೋಪಿನ ದಾಸ್ಯದಲ್ಲಿಯೇ ಬದುಕುತ್ತಿವೆ. ಇಂತಹ ಗುಲಾಮಗಿರಿಯಿಂದ ನನ್ನ ಜನ ವಿಮೋಚಿತರಾಗಬೇಕು ಎಂಬ ಕಾರಣಕ್ಕಾಗಿ ನಾನು ಬರೆದೆ’ ಎಂದು ಗೂಗಿ ತನ್ನ ಬರಹದ ಉದ್ದೇಶಗಳನ್ನು ಹೇಳಿಕೊಳ್ಳುತ್ತಲೇ ಬದುಕಿದರು.</code></p>



<p><code> ಹೀಗೆ ಬದುಕಿದ ಗೂಗಿ ಆಫ್ರಿಕಾದ ವಿವಿಧ ದೇಶಗಳ ಕಪ್ಪು ಜನರ ದಮನಿಗಳಲ್ಲಿ ಎಚ್ಚರಗಳ ದೀಪ ಹಚ್ಚಿದರು. ನೈಜೀರಿಯಾದ ಚಿನುವ ಅಚಿಬೆ, ವೋಲೆ ಸೋಯಿಂಕಾರಂತಹ ದೊಡ್ಡ ಲೇಖಕರಿಗೆ ಗೂಗಿ ಪ್ರೇರಣೆ ನೀಡಿದರು. ಜಾಗತಿಕ ಬಂಡವಾಳಶಾಹಿ ವ್ಯವಸ್ಥೆಯನ್ನು ಆಫ್ರಿಕಾದ ಲೇಖಕರು ರಾಜಕೀಯಾರ್ಥಿಕ ನೆಲೆಯಲ್ಲಿ ಮುಖಾಮುಖಿಯಾದರು. ಕೆನ್ ಸರೋವಿವಾ, ಫ್ರಾಂಜ್ ಫ್ಯಾನನ್, ಅಲ್ಬರ್ಟ್ ಮೆಮ್ಮಿ, ಏಮಿ ಸಿಸಾರೆ ತರಹದ ಚಿಂತಕ/ಹೋರಾಟಗಾರರಿಗೆ ಗೂಗಿ ಒಂದು ಸೈದ್ಧಾಂತಿಕ ವೇದಿಕೆಯನ್ನು ನಿರ್ಮಾಣ ಮಾಡಿದರು. </code></p>



<p><code>ತಮ್ಮ Petals of Blood ಕೃತಿಯಲ್ಲಿ ಗೂಗಿ;</code>ಅವರು ಬೈಬಲ್ ಹೊತ್ತುಕೊಂಡು ಬಂದರು, ಸೈನಿಕರು ಬಂದೂಕು ಹೊತ್ತು ಬಂದರು, ವಸಾಹತುಶಾಹಿಗಳು ಬಂಡವಾಳ ಹೂಡಲು ಬಂದರು. ಈ ಕ್ರಿಶ್ಚಿಯನ್ ಧರ್ಮ, ಬಂದೂಕು ಮತ್ತು ಬಂಡವಾಳಗಳೆಂಬ ತ್ರಿಮೂರ್ತಿಗಳು ಏಕತ್ರಗೊಂಡು ಆಫ್ರಿಕಾಕ್ಕೆ ಬಂದರು.’ ಎಂದು ಯುರೋಪಿನ ಸಾಮ್ರಾಜ್ಯಶಾಹಿಯನ್ನು ಗೂಗಿ ವಿಶ್ಲೇಷಿಸುತ್ತಾರೆ. ಧರ್ಮದ ಹರಡುವ ಭ್ರಮೆಗಳನ್ನು, ಯುದ್ಧಗಳ ಹಿಂಸೆಗಳನ್ನು ಮತ್ತು ಬಂಡವಾಳಶಾಹಿ ಆಧುನಿಕತೆಯು ನಮ್ಮ ಮುಂದೊಡ್ಡುವ ಪ್ರಲೋಭನೆಗಳನ್ನು ಪ್ರಜ್ಞಾಪೂರ್ವಕವಾಗಿ ನಿರಾಕರಿಸದಿದ್ದಲ್ಲಿ ನಮ್ಮ ವಿಮೋಚನೆ ಅಸಾಧ್ಯ ಎಂಬುದನ್ನು ಗೂಗಿ ಸಮಸ್ತ ತಳಸಮುದಾಯಗಳಿಗೆ ಅರುಹಿದರು. ಆದರೆ ಜಗತ್ತು ಇಂದು ಧಾರ್ಮಿಕ ಮತ್ತು ಜನಾಂಗೀಯ ಶ್ರೇಷ್ಟತೆಯ ಬೆನ್ನು ಬಿದ್ದಿದೆ. ಫ್ಯಾಸಿಸಂ ಮೈಮುರಿದು ಎದ್ದು ಕುಳಿತಿದೆ. ಸಾಮ್ರಾಜ್ಯಶಾಹಿ ತನ್ನ ಕಬಂಧಬಾಹುಗಳನ್ನು ಇನ್ನಿಲ್ಲದಂತೆ ವಿಸ್ತರಿಸುತ್ತಿದೆ.<br>ಗೂಗಿ ವಾ ಥಿಯೋಂಗಾ, ವೋಲೆ ಶೋಯಿಂಕಾ, ಅಚಿಬೆ, ಅಂಬೇಡ್ಕರ್ ರಂತಹ ಮಹಾನುಭಾವರು ಓದುವ ನಮ್ಮಗಳ ಆನಂದಕ್ಕೆ ಸೀಮಿತಗೊಳ್ಳಬಾರದು. ವರ್ತಮಾನವನ್ನು ಬದಲಿಸುವ ನಮ್ಮ ಶ್ರಮದಲ್ಲಿ ಅವರು ಪರ್ಯವಸಾನಗೊಳ್ಳಬೇಕು.<br></p>



<p>&#8211;<strong>ಎ.ಎಸ್‌.ಪ್ರಭಾಕರ<br>ಕನ್ನಡ ವಿವಿ, ಹಂಪಿ</strong></p>
]]></content:encoded>
					
		
		
			</item>
		<item>
		<title>ಯುದ್ಧ ಭೀತಿ: ಭಾರತದಲ್ಲಿ ಎಟಿಎಂಗಳು ಬಂದ್‌ ಆಗುತ್ತವೆಯೇ?</title>
		<link>https://peepalmedia.com/fear-of-war-will-atms-be-shut-down-in-india/</link>
		
		<dc:creator><![CDATA[Peepal Media]]></dc:creator>
		<pubDate>Fri, 09 May 2025 11:09:07 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ಸುಳ್ಳು ಸುದ್ದಿ ಪತ್ತೆ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=58602</guid>

					<description><![CDATA[ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಭಾರತದಲ್ಲಿ ಎಟಿಎಂಗಳು 3 ದಿನಗಳವರೆಗೆ ಬಂದ್‌ ಆಗುತ್ತವೆ ಎಂಬ ವದಂತಿ ಹರಡುತ್ತಿದೆ. ಆದರೆ, ಈ ಮಾಹಿತಿಯನ್ನು ಭಾರತ ಸರ್ಕಾರದ ಗೃಹ ಸಚಿವಾಲಯ ತಳ್ಳಿ ಹಾಕಿದೆ. ಭಾರತ ಸರ್ಕಾರವು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾಗರೀಕರಿಗೆ ದಾಳಿ ಮತ್ತು ಮುಷ್ಕರಗಳಂತಹ ತುರ್ತು ಪರಿಸ್ಥಿತಿಗಳಿಗೆ ಸಿದ್ಧರಾಗಲು ತರಬೇತಿ ನೀಡಲಾಗುತ್ತಿದೆ. ಈ ಬೆನ್ನಲ್ಲೆ ಎಟಿಎಂಗಳು ಬಂದ್‌ ಆಗುತ್ತವೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸೈಬರ್ ದಾಳಿಯ ನಂತರ ಸರ್ಕಾರವು [&#8230;]]]></description>
										<content:encoded><![CDATA[
<p>ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಭಾರತದಲ್ಲಿ ಎಟಿಎಂಗಳು  3 ದಿನಗಳವರೆಗೆ ಬಂದ್‌ ಆಗುತ್ತವೆ ಎಂಬ ವದಂತಿ ಹರಡುತ್ತಿದೆ. ಆದರೆ, ಈ ಮಾಹಿತಿಯನ್ನು ಭಾರತ ಸರ್ಕಾರದ ಗೃಹ ಸಚಿವಾಲಯ ತಳ್ಳಿ ಹಾಕಿದೆ. </p>



<p>ಭಾರತ ಸರ್ಕಾರವು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾಗರೀಕರಿಗೆ ದಾಳಿ ಮತ್ತು ಮುಷ್ಕರಗಳಂತಹ ತುರ್ತು ಪರಿಸ್ಥಿತಿಗಳಿಗೆ ಸಿದ್ಧರಾಗಲು ತರಬೇತಿ ನೀಡಲಾಗುತ್ತಿದೆ. ಈ ಬೆನ್ನಲ್ಲೆ ಎಟಿಎಂಗಳು ಬಂದ್‌ ಆಗುತ್ತವೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸೈಬರ್ ದಾಳಿಯ ನಂತರ ಸರ್ಕಾರವು ಕೆಲವು ದಿನಗಳವರೆಗೆ ಎಟಿಎಂಗಳನ್ನು ಮುಚ್ಚಲಿದೆ. ಆನ್‌ಲೈನ್‌ ವಹಿವಾಟಿಗೂ ಅಡಚಣೆಯಾಗಲಿದೆ ಎಂದು ವ್ಯಾಟ್ಸಪ್‌ ಫೇಸ್‌ಬುಕ್‌ ಟ್ವೀಟರ್‌ಗಳಲ್ಲಿ ಸಂದೇಶ ಹರಿದಾಡುತ್ತಿತ್ತು. </p>



<p>ಆದರೆ, &#8220;ಎಟಿಎಂಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಪಾಕಿಸ್ತಾನವು ತಪ್ಪು ಮಾಹಿತಿಯನ್ನು ಹರಡುವ ಮೂಲಕ ಭಾರತದಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಸಾರ್ವಜನಿಕರು ನಂಬಬಾರದು &#8221; ಎಂದು  ಕೇಂದ್ರ ಸರ್ಕಾರ ತಿಳಿಸಿದೆ.</p>



<ul class="wp-block-list">
<li>ಇಂಡಿಯಾ VS ಪಾಕಿಸ್ತಾನ ಇಂಪಾರ್ಟೆಂಟ್ ಎಂದು ವಾಟ್ಸಾಪ್ ಸಂದೇಶವು ಪ್ರಾರಂಭವಾಗುತ್ತದೆ. &#8221; ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಸೈಬರ್ ದಾಳಿಯಿಂದಾಗಿ ಭಾರತದಾದ್ಯಂತ ಎಟಿಎಂಗಳನ್ನು ಮುಚ್ಚಲಾಗುವುದು &#8220;.</li>



<li>&#8220;ಮುಂದಿನ 2 &#8211; 3 ದಿನಗಳವರೆಗೆ ಎಟಿಎಂಗಳನ್ನು ಮುಚ್ಚಲಾಗುವುದು &#8220;</li>



<li>&#8220;ಸೈಬರ್‌ ದಾಳಿ ಸಾಧ್ಯತೆ ಇದೆ ಯುದ್ಧದ ವೇಳೆ ಆನ್‌ಲೈನ್ ವಹಿವಾಟುಗಳನ್ನು ಮಾಡುವುದನ್ನು ತಪ್ಪಿಸಿ&#8221;</li>



<li>ಎಂಬ ಮೇಸೆಜ್‌  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. </li>



<li>ಆದರೆ ಇದು ಸುಳ್ಳು ಸುದ್ದಿ ಭಾರತದಾದ್ಯಂತ ಎಟಿಎಂಗಳನ್ನು ಮುಚ್ಚಲಾಗುತ್ತದೆ ಎಂಬ ಸುದ್ದಿಯನ್ನು ಪಿಐಬಿಯ ಸತ್ಯ &#8211; ಪರಿಶೀಲನಾ ಘಟಕವು ಕೂಡ ಪರಿಶೀಲನೆ ನಡೆದಿದೆ. ಇದೊಂದು<a href="https://vijaykarnataka.com/news/india/press-information-bureau-shared-series-of-fact-checks-and-burst-fake-news-plot-regarding-india-pakistan-tensions/articleshow/121018075.cms" target="_blank" rel="noreferrer noopener"> ನಕಲಿ ಸುದ್ದಿ ನಂಬ ಬೇಡಿ ಎಂದು ಪಿಐಬಿ ಜನರಿಗೆ ತಿಳಿಸಿದೆ</a>. ಇವುಗಳ ಜತೆಗೆ ಐಎನ್‌ಎಸ್‌ ವಿಕ್ರಾಂತ್‌, ಎಸ್‌ 400 ಕುರಿತ ಹಲವು ನಕಲಿ ವಿಡಿಯೋಗಳು ಕೂಡ ಹರಿದಾಡುತ್ತಿವೆ. ಅವುಗಳನ್ನು ನಂಬಬೇಡಿ ಎಂದು ಪಿಐಬಿ</li>
</ul>



<p></p>
]]></content:encoded>
					
		
		
			</item>
		<item>
		<title>ಬಾಲಕಿ ಮೇಲೆ ಅತ್ಯಾಚಾರ: ತಲೆಮರೆಸಿಕೊಂಡ ಆರೋಪಿ ವಿಶ್ವನಾಥ್‌ ಹೆಗಡೆ</title>
		<link>https://peepalmedia.com/rape-of-a-girl-accused-vishwanath-hegde-absconding/</link>
		
		<dc:creator><![CDATA[Peepal Media]]></dc:creator>
		<pubDate>Thu, 08 May 2025 11:05:21 +0000</pubDate>
				<category><![CDATA[ಅಪರಾಧ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=58507</guid>

					<description><![CDATA[ಶಿರಸಿ: ತಾಲೂಕಿನ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಹವ್ಯಕ ಬ್ರಾಹ್ಮಣ ಸಮುದಾಯದ ವಿಶ್ವನಾಥ್‌ ಹೆಗಡೆ (40) ಎಂಬಾತ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏಳನೇ ತರಗತಿ ವ್ಯಾಸಂಗ ಮುಗಿಸಿ ಬೇಸಿಗೆ ರಜೆಯ ಕಾರಣ ಮನೆಯಲ್ಲಿಯೇ ಇದ್ದ ಬಾಲಕಿ ಮೇಲೆ ವಿಶ್ವನಾಥ್‌ ಹೆಗಡೆ ಎಂಬಾತ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಮಗು ತನ್ನ ತಾಯಿಗೆ ಈ ವಿಷಯವನ್ನು ತಿಳಿಸಿದ್ದು, ತಾಯಿ ಆರೋಪಿಯ ಮನೆ ಬಾಗಿಲಿಗೆ ಹೋಗಿ ಕೇಳಿದ್ದಾರೆ. ಆದರೆ, [&#8230;]]]></description>
										<content:encoded><![CDATA[
<p>ಶಿರಸಿ: ತಾಲೂಕಿನ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಹವ್ಯಕ ಬ್ರಾಹ್ಮಣ ಸಮುದಾಯದ ವಿಶ್ವನಾಥ್‌ ಹೆಗಡೆ (40) ಎಂಬಾತ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>



<p>ಏಳನೇ ತರಗತಿ ವ್ಯಾಸಂಗ ಮುಗಿಸಿ ಬೇಸಿಗೆ ರಜೆಯ ಕಾರಣ ಮನೆಯಲ್ಲಿಯೇ ಇದ್ದ ಬಾಲಕಿ ಮೇಲೆ ವಿಶ್ವನಾಥ್‌ ಹೆಗಡೆ ಎಂಬಾತ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಮಗು ತನ್ನ ತಾಯಿಗೆ ಈ ವಿಷಯವನ್ನು ತಿಳಿಸಿದ್ದು, ತಾಯಿ ಆರೋಪಿಯ ಮನೆ ಬಾಗಿಲಿಗೆ ಹೋಗಿ ಕೇಳಿದ್ದಾರೆ. ಆದರೆ, ಆರೋಪಿ “ನಾನು ಹಾಗೇನೂ ಮಾಡಿಲ್ಲ. ನಾನೇ ಮಾಡಿದ್ದೇನೆ ಎನ್ನುವುದಕ್ಕೆ ನಿನ್ನ ಹತ್ತಿರ ಸಾಕ್ಷಿ ಇದೆಯೇ” ಎಂದು ಉಡಾಪೆಯಿಂದ ಮಾತಾಡಿದ್ದಾನೆ. ನಂತರ ತಾಯಿ, ಮಗುವಿನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಶಿರಸಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಪ್ರಕರಣದಡಿ ದೂರು ನೀಡಿದ್ದಾರೆ. ದೂರು ನೀಡಿದ ಮೂರ್ನಾಲ್ಕು ದಿನಗಳ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ದೌರ್ಜನ್ಯ ಪ್ರಕರಣವೆಂದು ದೂರು ದಾಖಲಿಸಿಕೊಂಡಿದ್ದು, ದೂರುದಾರರಿಗೆ ಪೊಲೀಸರು ಎಫ್‌ಐಆರ್‌ ಪ್ರತಿಯನ್ನೂ ಕೂಡ ನೀಡದೆ ಕಳುಹಿಸಿದ್ದಾರೆ ಎನ್ನಲಾಗಿದೆ. ‌ಮಗುವನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿದುಬಂದಿದೆ.</p>



<p>ಬುಧವಾರ ಬೆಳಿಗ್ಗೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡುವ ಕುರುಹು ತಿಳಿದ ಆರೋಪಿ ಪರಾರಿಯಾಗಿದ್ದಾನೆ. ಇಡೀ ದಿನ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾನೆಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ. ಆರೋಪಿ ತನ್ನ ಪ್ರಭಾವ ಬಳಸಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. </p>



<p></p>
]]></content:encoded>
					
		
		
			</item>
		<item>
		<title>ಬೆಲೆ ಏರಿಕೆ ವಿರೊಧಿಸಿ ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ : ಲಕ್ಷ್ಮೀ ಹೆಬ್ಬಾಳ್ಕರ್‌</title>
		<link>https://peepalmedia.com/massive-protest-rally-in-belgaum-against-price-hike-and-centre-lakshmi-hebbalkar/</link>
		
		<dc:creator><![CDATA[Peepal Media]]></dc:creator>
		<pubDate>Tue, 22 Apr 2025 11:47:12 +0000</pubDate>
				<category><![CDATA[ಬೆಳಗಾವಿ]]></category>
		<category><![CDATA[ರಾಜಕೀಯ]]></category>
		<category><![CDATA[ರಾಜ್ಯ]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=57674</guid>

					<description><![CDATA[ಬೆಳಗಾವಿ: ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಪ್ರಿಲ್ 27 ಅಥವಾ 28 ರಂದು ಬೃಹತ್ ಪ್ರತಿಭಟನೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಮಂಗಳವಾರ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನ್ಯಾಷನಲ್ [&#8230;]]]></description>
										<content:encoded><![CDATA[
<p>ಬೆಳಗಾವಿ: ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಪ್ರಿಲ್ 27 ಅಥವಾ 28 ರಂದು ಬೃಹತ್ ಪ್ರತಿಭಟನೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.</p>



<p>ಮಂಗಳವಾರ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ಕೇಂದ್ರದ ನೀತಿ ವಿರುದ್ಧ ಪ್ರತಿಭಟಿಸಲಾಗುವುದು ಎಂದರು.</p>



<p>ಕೇಂದ್ರ ಸರಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರವನ್ನು ಏರಿಕೆ ಮಾಡಿ, ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.</p>



<p>ಬಿಜೆಪಿ ನಾಯಕರು ತಮ್ಮ ಒಳಬೇಗುದಿಯನ್ನು ಮರೆಯಾಚಿಸುವ ಸಲುವಾಗಿ ರಾಜ್ಯ ಸರಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಹುಟ್ಟಿಕೊಂಡಿದ್ದೇ ಬೆಲೆ ಏರಿಕೆಯ ಕಾರಣದಿಂದ, ಗ್ಯಾರಂಟಿ ಯೋಜನೆಗಳಿಂದ ಬೆಲೆ ಏರಿಕೆಯಾಗುತ್ತಿದೆ ಎನ್ನುತ್ತಿರುವುದು ಶುದ್ಧ ಸುಳ್ಳು. ಬಿಜೆಪಿ ನಾಯಕರ ನಡುವಿನ ಆಂತರಿಕ ಕಚ್ಚಾಟವನ್ನು ಮರೆಮಾಚಲು ಜನರ ದಾರಿ ತಪ್ಪಿಸುವ ಸಲುವಾಗಿ ಜನಾಕ್ರೋಶ ಯಾತ್ರೆ ಮಾಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.</p>



<p><strong>ರಾಷ್ಟ್ರೀಯ ನಾಯಕರು ಪ್ರತಿಭಟನೆಯಲ್ಲಿ ಭಾಗಿ </strong></p>



<p>ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ರಾಷ್ಟ್ರೀಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದರು.</p>



<p>ನಗರದ ಸಿಪಿಎಡ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ, ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.</p>



<p><strong>ತನಿಖೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕರಿಗೆ ಕಿರುಕುಳ </strong></p>



<p>ಕಾಂಗ್ರೆಸ್ ನಾಯಕರ ಧ್ವನಿಯನ್ನು ದಮನ ಮಾಡುವ ಉದ್ದೇಶದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪಕ್ಷದ ಮುಖಂಡರ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ. ಇದರ ಬಗ್ಗೆ ಸತ್ಯಾಸತ್ಯತೆಯನ್ನು ಎಲ್ಲರೂ ಪರಿಶೀಲನೆ ಮಾಡಬೇಕು. ಬಿಜೆಪಿಯವರು ನ್ಯಾಷನಲ್ ಹೆರಾಲ್ಡ್ ಆಸ್ತಿ 5 ಸಾವಿರ ಕೋಟಿ ಇದೆ ಅಂತಾರೆ. ಆದರೆ ಐಟಿಯವರೇ 359 ಕೋಟಿ ಅಂತಾ ಹೇಳುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.</p>



<p>ಸುಳ್ಳುಗಳನ್ನು ಸತ್ಯ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾಕೆ ತರಲಾಯಿತು ಅನ್ನೋದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜನರ ದಾರಿ ತಪ್ಪಿಸುವುದೇ ಬಿಜೆಪಿಯವರ ಕೆಲಸ. ಜನ ಸಾಮಾನ್ಯರ ಬದಲಿಗೆ ಕೇಂದ್ರ ಸರಕಾರ ಅಂದಾನಿ, ಅಂಬಾನಿಯವರಿಗಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು</p>



<p>ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರ ಸಚಿವರಾದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. </p>



<p></p>
]]></content:encoded>
					
		
		
			</item>
		<item>
		<title>ನಾಳೆ ʼಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘʼಕ್ಕೆ ಚಾಲನೆ</title>
		<link>https://peepalmedia.com/karnataka-booksellers-publishers-and-authors-association-to-be-launched-tomorrow/</link>
		
		<dc:creator><![CDATA[Peepal Media]]></dc:creator>
		<pubDate>Tue, 22 Apr 2025 08:28:26 +0000</pubDate>
				<category><![CDATA[ಕಲೆ – ಸಾಹಿತ್ಯ]]></category>
		<category><![CDATA[bengalure]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=57647</guid>

					<description><![CDATA[ಬೆಂಗಳೂರು: ನಾಳೆ ಅಂದರೆ ಏಪ್ರಿಲ್‌ 23ರಂದು ಸಂಜೆ ಚಿತ್ರಕಲಾ ಪರಿಷತ್ತಿನ ದೇವರಾಜ ಅರಸು ಗ್ಯಾಲರಿಯಲ್ಲಿ ʼಕರ್ನಾಟಕ ಪುಸ್ತಕ ಮಾರಾಟಗಾರರು,ಪ್ರಕಾಶಕರು ಹಾಗೂ ಲೇಖಕರ ಸಂಘʼ ಚಾಲನೆ ಪಡೆಯಲಿದೆ. ಕನ್ನಡ ಪುಸ್ತಕೋದ್ಯಮವನ್ನು ಬೆಳೆಸುವುದು ಮತ್ತು ಪುಸ್ತಕ ಮಾರಾಟಗಾರರು, ಪ್ರಕಾಶಕರು ಮತ್ತು ಲೇಖಕರ ನಡುವೆ ಸೇತುವೆಯಾಗಿ ಕೆಲಸು ಮಾಡುವುದು ಈ ಸಂಘಟನೆಯ ಉದ್ದೇಶವಾಗಿದೆ ಎಂದು ಸಂಘಟನೆಯ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಪುಸ್ತಕಗಳಿಗೆ ಓದುಗರ ಕೊರತೆ ಕಾಡುತ್ತಿದೆ. ಕನ್ನಡ ಪುಸ್ತಕೋದ್ಯಮವೂ ಹೊಸ ಆಲೋಚನೆಗಳ ಅಲಭ್ಯತೆ ಮತ್ತು ಸರ್ಕಾರ-ಸಂಸ್ಥೆಗಳ ಸಮರ್ಪಕ ಬೆಂಬಲವಿಲ್ಲದೆ ಸಂಕಷ್ಟದಲ್ಲಿದೆ. [&#8230;]]]></description>
										<content:encoded><![CDATA[
<p>ಬೆಂಗಳೂರು:  ನಾಳೆ ಅಂದರೆ ಏಪ್ರಿಲ್‌ 23ರಂದು ಸಂಜೆ ಚಿತ್ರಕಲಾ ಪರಿಷತ್ತಿನ ದೇವರಾಜ ಅರಸು ಗ್ಯಾಲರಿಯಲ್ಲಿ ʼಕರ್ನಾಟಕ ಪುಸ್ತಕ ಮಾರಾಟಗಾರರು,ಪ್ರಕಾಶಕರು ಹಾಗೂ ಲೇಖಕರ ಸಂಘʼ ಚಾಲನೆ ಪಡೆಯಲಿದೆ. ಕನ್ನಡ ಪುಸ್ತಕೋದ್ಯಮವನ್ನು ಬೆಳೆಸುವುದು ಮತ್ತು ಪುಸ್ತಕ ಮಾರಾಟಗಾರರು, ಪ್ರಕಾಶಕರು ಮತ್ತು ಲೇಖಕರ ನಡುವೆ ಸೇತುವೆಯಾಗಿ ಕೆಲಸು ಮಾಡುವುದು ಈ ಸಂಘಟನೆಯ ಉದ್ದೇಶವಾಗಿದೆ ಎಂದು ಸಂಘಟನೆಯ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>ಕನ್ನಡ ಪುಸ್ತಕಗಳಿಗೆ ಓದುಗರ ಕೊರತೆ ಕಾಡುತ್ತಿದೆ. ಕನ್ನಡ ಪುಸ್ತಕೋದ್ಯಮವೂ ಹೊಸ ಆಲೋಚನೆಗಳ ಅಲಭ್ಯತೆ ಮತ್ತು ಸರ್ಕಾರ-ಸಂಸ್ಥೆಗಳ ಸಮರ್ಪಕ ಬೆಂಬಲವಿಲ್ಲದೆ ಸಂಕಷ್ಟದಲ್ಲಿದೆ. ಇಂಥ ಸನ್ನಿವೇಶದಲ್ಲಿ ತಮ್ಮ ಪುಸ್ತಕ ಪ್ರಕಟಿಸಬೇಕೆಂಬ ಆಶಯ ಇರುವ ಲೇಖಕರು, ಪುಸ್ತಕ ಮಾರಾಟವನ್ನೇ ಬದುಕಾಗಿಸಿಕೊಂಡ ದೂರದೂರುಗಳ ಪುಸ್ತಕ ಮಾರಾಟಗಾರರು ಹಾಗೂ ಸಣ್ಣ ಪ್ರಕಾಶಕರಿಗೆ ಸೂಕ್ತ ವೇದಿಕೆ ಕಲ್ಪಿಸಬೇಕೆಂಬ ಆಶಯದಿಂದ ಈ ಸಂಘವನ್ನು ಹುಟ್ಟು ಹಾಕಲಾಗುತ್ತಿದೆ. </p>



<p>ಸಂಘವು ಪುಸ್ತಕ ಪ್ರಕಾಶಕರು, ವಿತರಕರು ಮತ್ತು ಲೇಖಕರ ಮಧ್ಯೆ ಸಂಪರ್ಕ ಸೇತುವೆಯಂತೆ ಕಾರ್ಯ ನಿರ್ವಹಿಸುವ ಉದ್ದೇಶ ಹೊಂದಿದೆ. ವಿಚಾರಸಂಕಿರಣ, ಕಾರ್ಯಾಗಾರ, ತರಬೇತಿ ಮತ್ತು ಪ್ರಸಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು; ಇದಕ್ಕಾಗಿ ಪುಸ್ತಕ ಮೇಳ, ಪ್ರದರ್ಶನ ಹಮ್ಮಿಕೊಳ್ಳಲಾಗುತ್ತದೆ. ಸದಸ್ಯರ ಸಾಂಸ್ಕೃತಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸಾಂಸ್ಥಿಕ ಯೋಜನೆಗಳನ್ನು ರೂಪಿಸಲಾಗುತ್ತದೆ. ಅಂತಾರಾಷ್ಟ್ರೀಯ-ರಾಷ್ಟ್ರೀಯ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ಪುಸ್ತಕ ಪ್ರದರ್ಶನ/ಮೇಳಗಳನ್ನು ಸರ್ಕಾರದ ನಾನಾ ಇಲಾಖೆಗಳು, ಸಾರ್ವಜನಿಕ ಸಂಸ್ಥೆಗಳು, ನಿಗಮ-ಮಂಡಳಿಗಳು, ಪ್ರಾಧಿಕಾರಗಳು ಹಾಗೂ ಸ್ವಯಂಸೇವಾ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳುವುದು ಹಾಗೂ ಅಂತಾರಾಷ್ಟ್ರೀಯ-ರಾಷ್ಟ್ರೀಯ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ನಡೆಯುವ ಪುಸ್ತಕ ಪ್ರದರ್ಶನ/ಮೇಳಗಳಲ್ಲಿ ಪಾಲ್ಗೊಳ್ಳಲು ಸದಸ್ಯರಿಗೆ ನೆರವಾಗುವುದು ಸಂಘದ ಉದ್ದೇಶಗಳಲ್ಲಿ ಒಂದು. ಇದೆಲ್ಲವನ್ನೂ ಸಂಘಟನೆ ಮೂಲಕ, ಸಾಮೂಹಿಕ ಪ್ರಯತ್ನದ ಮೂಲಕ ಸಾಧ್ಯವಾಗಿಸುವ ಉದ್ದೇಶ ಹೊಂದಲಾಗಿದೆ. ಸಮಾನತೆ, ಸಮಸಮಾಜ ಮತ್ತು ಸಂವಿಧಾನ ನಮ್ಮ ಗುರಿಯಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>



<p><strong>ಪುಸ್ತಕಗಳ ಕುರಿತು ವಿಶೇಷ ಉಪನ್ಯಾಸ</strong></p>



<p>ಚಿಂತಕ ಡಾ. ರಹಮತ್‌ ತರಿಕೆರೆಯವರು ʼಸಮಕಾಲೀನ ಸಂದರ್ಭದಲ್ಲಿ ಪುಸ್ತಕಗಳುʼ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹಿರಿಯ ಲೇಖಕಿ ಆರ್.‌ ಪೂರ್ಣಿಮಾ, ದಲಿತ ಮುಖಂಡ ಮಾವಳ್ಳಿ ಶಂಕರ್‌, ಆಕೃತಿ ಪ್ರಕಾಶನದ ಗುರುಪ್ರಸಾದ್‌ ಡಿ.ಎನ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಸವರಾಜ ಸೂಳಿಭಾವಿ, ಧನಂಜಯ್‌,  ಮಾಧವ್‌ ಐತಾಳ್‌, ರಾಜೇಶ್ವರಿ, ಅಕ್ಷತಾ ಹುಂಚದಕಟ್ಟೆ, ವಿ.ಆರ್.ಕಾರ್ಪೆಂಟರ್‌, ಚಂದ್ರು ತುರಹುಣಸೆ, ಅನಿಲ್‌ ಚಿಕ್ಕದಳವಟ್ಟ ಮತ್ತು ನಿತೇಶ್‌ ಕುಂಟಾಡಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದ್ದಾರೆ. </p>



<p></p>
]]></content:encoded>
					
		
		
			</item>
		<item>
		<title>ಕರ್ನಾಟಕದ ನಾಲ್ವರು ಸೇರಿದಂತೆ 7 ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಶಿಫಾರಸು</title>
		<link>https://peepalmedia.com/supreme-court-recommends-transfer-of-7-high-court-judges-including-four-from-karnataka/</link>
		
		<dc:creator><![CDATA[Peepal Media]]></dc:creator>
		<pubDate>Mon, 21 Apr 2025 08:27:02 +0000</pubDate>
				<category><![CDATA[Uncategorized]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[writing]]></category>
		<guid isPermaLink="false">https://peepalmedia.com/?p=57569</guid>

					<description><![CDATA[ನವದೆಹಲಿ: ಕರ್ನಾಟಕದ ನಾಲ್ವರು ಸೇರಿದಂತೆ ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯ ಕೊಲಿಜಿಯಂ ಶಿಫಾರಸು ಹೊರಡಿಸಿದ್ದಾರೆ. ಆ ಶಿಫಾರಸು ಹೇಳಿಕೆಯಲ್ಲಿ, &#8220;ಹೈಕೋರ್ಟ್‌ಗಳಲ್ಲಿ ವೈವಿಧ್ಯತೆಯನ್ನು ಹೆಚ್ಚಿಸುವ ಮತ್ತು ನ್ಯಾಯಾಂಗದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದ, ಸುಪ್ರೀಂ ಕೋರ್ಟ್ ಕೊಲಿಜಿಯಂ ಎಪ್ರಿಲ್ 15, 2025 ಮತ್ತು ಎಪ್ರಿಲ್ 19, 2025 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಿದೆ&#8221; ಎಂದು ತಿಳಿಸಲಾಗಿದೆ. ಕರ್ನಾಟಕ [&#8230;]]]></description>
										<content:encoded><![CDATA[
<p><a href="https://whatsapp.com/channel/0029VaA8ju86LwHn9OQpEq28"></a> <a href="https://www.youtube.com/@VarthaBharatiNews?sub_confirmation=1"></a> <a href="https://news.google.com/publications/CAAqBwgKMJu-nQswrMi1Aw?hl=en-IN&amp;gl=IN&amp;ceid=IN:en" target="_blank" rel="noreferrer noopener"></a></p>



<p>ನವದೆಹಲಿ: ಕರ್ನಾಟಕದ ನಾಲ್ವರು ಸೇರಿದಂತೆ ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯ ಕೊಲಿಜಿಯಂ ಶಿಫಾರಸು ಹೊರಡಿಸಿದ್ದಾರೆ. </p>



<p>ಆ ಶಿಫಾರಸು ಹೇಳಿಕೆಯಲ್ಲಿ, &#8220;ಹೈಕೋರ್ಟ್‌ಗಳಲ್ಲಿ ವೈವಿಧ್ಯತೆಯನ್ನು ಹೆಚ್ಚಿಸುವ ಮತ್ತು ನ್ಯಾಯಾಂಗದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದ, ಸುಪ್ರೀಂ ಕೋರ್ಟ್ ಕೊಲಿಜಿಯಂ ಎಪ್ರಿಲ್ 15, 2025 ಮತ್ತು ಎಪ್ರಿಲ್ 19, 2025 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಿದೆ&#8221; ಎಂದು ತಿಳಿಸಲಾಗಿದೆ. </p>



<p>ಕರ್ನಾಟಕ ಹೈಕೋರ್ಟ್‌ನಿಂದ, ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೃಷ್ಣನ್ ನಟರಾಜನ್ ಅವರನ್ನು ಕೇರಳಕ್ಕೆ, ನ್ಯಾಯಮೂರ್ತಿ ನೆರನಹಳ್ಳಿ ಶ್ರೀನಿವಾಸನ್ ಸಂಜಯ್ ಗೌಡ ಅವರನ್ನು ಗುಜರಾತ್‌ಗೆ ಮತ್ತು ನ್ಯಾಯಮೂರ್ತಿ ದೀಕ್ಷಿತ್ ಕೃಷ್ಣ ಶ್ರೀಪಾದ್ ಅವರನ್ನು ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾಗಿದೆ.</p>



<p>ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ ಅವರನ್ನು ತೆಲಂಗಾಣ ಹೈಕೋರ್ಟ್‌ ನಿಂದ ಕರ್ನಾಟಕಕ್ಕೆ, ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಕಸೋಜು ಸುರೇಂದರ್ ಅಲಿಯಾಸ್ ಕೆ ಸುರೇಂದರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ಮತ್ತು ಆಂಧ್ರಪ್ರದೇಶ ಹೈಕೋರ್ಟ್‌ ನಿಂದ ನ್ಯಾಯಮೂರ್ತಿ ಕುಂಭಾಜದಲ ಮನ್ಮಧ ರಾವ್ ಅವರನ್ನು ಕರ್ನಾಟಕಕ್ಕೆ ವರ್ಗಾಯಿಸಲು ಶಿಫಾರಸು ಮಾಡಲಾಗಿದೆ.</p>
]]></content:encoded>
					
		
		
			</item>
	</channel>
</rss>
