<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>yadiyurappa &#8211; Peepal Media</title>
	<atom:link href="https://peepalmedia.com/tag/yadiyurappa/feed/" rel="self" type="application/rss+xml" />
	<link>https://peepalmedia.com</link>
	<description>ಸತ್ಯ &#124; ನ್ಯಾಯ &#124;ಧರ್ಮ</description>
	<lastBuildDate>Thu, 19 Dec 2024 09:09:21 +0000</lastBuildDate>
	<language>en-GB</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=6.8.3</generator>

<image>
	<url>https://peepalmedia.com/wp-content/uploads/2022/07/cropped-cropped-WhatsApp-Image-2022-07-22-at-3.09.48-PM-32x32.jpeg</url>
	<title>yadiyurappa &#8211; Peepal Media</title>
	<link>https://peepalmedia.com</link>
	<width>32</width>
	<height>32</height>
</image> 
	<item>
		<title>ಸಾಕ್ಷಿಗಳ ಹೇಳಿಕೆ ಆಧರಿಸಿ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್</title>
		<link>https://peepalmedia.com/pocso-case-against-yediyurappa-cannot-be-quashed-based-on-witness-statements/</link>
		
		<dc:creator><![CDATA[Peepal Media Desk]]></dc:creator>
		<pubDate>Thu, 19 Dec 2024 09:08:50 +0000</pubDate>
				<category><![CDATA[ಅಪರಾಧ]]></category>
		<category><![CDATA[B S YADIYURAPPA]]></category>
		<category><![CDATA[Bangalore]]></category>
		<category><![CDATA[bengaluru]]></category>
		<category><![CDATA[bjp]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[karnataka bjp]]></category>
		<category><![CDATA[pocso]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=50928</guid>

					<description><![CDATA[ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ (POCSO) ದಾಖಲಾಗಿರುವ ಪ್ರಕರಣವನ್ನು ಸಂತ್ರಸ್ತೆಯ ಹೇಳಿಕೆಗೆ ವಿರುದ್ಧವಾಗಿರುವ ಇತರ ಸಾಕ್ಷಿಗಳ ಅಭಿಪ್ರಾಯವನ್ನು ಪರಿಗಣಿಸಿ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 18, ಬುಧವಾರ ತನ್ನ ಪ್ರಾಥಮಿಕ ಅಭಿಪ್ರಾಯ ವ್ಯಕ್ತಪಡಿಸಿದೆ. “S.161 ಮತ್ತು S.164 Crpc ಅಡಿಯಲ್ಲಿ ದಾಖಲಾದ ಹೇಳಿಕೆಗಳ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸುವುದು ಲಭ್ಯವಿಲ್ಲ, ಇದು ನನ್ನ ಪ್ರಾಥಮಿಕ ಹೇಳಿಕೆಯಾಗಿದೆ. ಸೆಕ್ಷನ್ 161 ಮತ್ತು ಸೆಕ್ಷನ್ 164 [&#8230;]]]></description>
										<content:encoded><![CDATA[
<p><strong>ಬೆಂಗಳೂರು:</strong> ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ (POCSO) ದಾಖಲಾಗಿರುವ ಪ್ರಕರಣವನ್ನು ಸಂತ್ರಸ್ತೆಯ ಹೇಳಿಕೆಗೆ ವಿರುದ್ಧವಾಗಿರುವ ಇತರ ಸಾಕ್ಷಿಗಳ ಅಭಿಪ್ರಾಯವನ್ನು ಪರಿಗಣಿಸಿ ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಡಿಸೆಂಬರ್ 18, ಬುಧವಾರ ತನ್ನ ಪ್ರಾಥಮಿಕ ಅಭಿಪ್ರಾಯ ವ್ಯಕ್ತಪಡಿಸಿದೆ.</p>



<p>“S.161 ಮತ್ತು S.164 Crpc ಅಡಿಯಲ್ಲಿ ದಾಖಲಾದ ಹೇಳಿಕೆಗಳ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸುವುದು ಲಭ್ಯವಿಲ್ಲ, ಇದು ನನ್ನ ಪ್ರಾಥಮಿಕ ಹೇಳಿಕೆಯಾಗಿದೆ. ಸೆಕ್ಷನ್ 161 ಮತ್ತು ಸೆಕ್ಷನ್ 164 ರ ಅಡಿಯಲ್ಲಿ ನೀಡಲಾದ ಹೇಳಿಕೆಗಳನ್ನು ಆಧರಿಸಿ, ಪ್ರಕ್ರಿಯೆಗಳನ್ನು ರದ್ದುಗೊಳಿಸಬಹುದಾದ ಒಂದು ತೀರ್ಪನ್ನು ನನಗೆ ತೋರಿಸಿ,&#8221; ಎಂಬ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಮಾತುಗಳನ್ನು <a href="https://www.livelaw.in/high-court/karnataka-high-court/karnataka-hc-cannot-quash-pocso-proceedings-b-s-yediyurappa-statement-of-witnesses-denied-alleged-incident-278778" target="_blank" rel="noreferrer noopener"><em>ಲೈವ್ ಲಾ</em></a> ವರದಿ ಮಾಡಿದೆ.</p>



<p>“ಇದು POCSO ಅಡಿಯಲ್ಲಿ ದಾಖಲಾಗಿರುವ ಪ್ರಕರಣವಾಗಿದೆ. ಬಲಿಪಶುವನ್ನು ಕೋಣೆಯೊಳಗೆ ಕರೆದೊಯ್ದಿಲ್ಲ ಎಂಬುದಕ್ಕೆ ಸಾಕ್ಷಿಗಳ ಸಾಕ್ಷ್ಯವನ್ನು ಅಡ್ಡ ಪರೀಕ್ಷೆಗೆ ಒಳಪಡಿಸಬೇಕೇ? ಅವಳನ್ನು (ಬಲಿಪಶು) ಸಹ ಅಡ್ಡ ಪರೀಕ್ಷೆಗೆ ಒಳಪಡಿಸಬೇಕು. ವಿಚಾರಣೆಗೆ ಒಳಪಡಿಸದಿದ್ದಲ್ಲಿ ಹೇಳಿಕೆಗಳು ದೇವವಾಣಿಯಾಗಳಾಗುತ್ತಾ,  (ಸಾಕ್ಷಿಗಳ) ಹೇಳಿಕೆಯನ್ನು ಸರಿಯೆಂದು ಪರಿಗಣಿಸಿ ಸಂಪೂರ್ಣ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕಾ, ಅದನ್ನು ವಿಚಾರಣೆಗೆ ಒಳಪಡಿಸಬಾರದಾ, ಸಂತ್ರಸ್ತೆಯ ಹೇಳಿಕೆಗಳು ಸುಳ್ಳು ಎಂದು ನೀವು ಹೇಗೆ ಹೇಳುತ್ತೀರಿ?&#8221; ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪ್ರಶ್ನಿಸಿದ್ದಾರೆ. </p>



<p>ಹೇಳಿಕೆಗಳು ವಿಚಾರಣೆಯನ್ನು ರದ್ದುಗೊಳಿಸುವ ಒಂದು ಭಾಗವಾಗಬಹುದೇ ಎಂಬ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಲು ನ್ಯಾಯಾಲಯವು ವಕೀಲರಿಗೆ ಸೂಚಿಸಿತು.</p>



<p>“ಸೆಕ್ಷನ್ 161 ಹೇಳಿಕೆಗಳನ್ನು ನಂಬಲಾಗುವುದಿಲ್ಲ, ಏಕೆಂದರೆ ಅವುಗಳನ್ನು ನಿಮಗೆ ತಿಳಿದಿಲ್ಲದ ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಲಾಗಿದೆ. ಹಾಗಿದ್ದೂ, ಸೆಕ್ಷನ್ 164 ಹೇಳಿಕೆಯು ಉನ್ನತ ಪೀಠದಲ್ಲಿದೆ ಏಕೆಂದರೆ ಅದು ಮ್ಯಾಜಿಸ್ಟ್ರೇಟ್ ಮುಂದೆ ಇದೆ,” ಎಂದು ನ್ಯಾಯಾಲಯ ಹೇಳಿದೆ.</p>



<p>ಫೆಬ್ರವರಿಯಲ್ಲಿ ಸಹಾಯ ಕೋರಿ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿದಾಗ ಮಾಜಿ ಮುಖ್ಯಮಂತ್ರಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿ ಮಾಡಿದ ಆರೋಪ ಮಾಡಿದ್ದರು. ಯಡಿಯೂರಪ್ಪ ವಿರುದ್ಧ ಮಾರ್ಚ್ 14 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ದೂರು ದಾಖಲಿಸಲಾಗಿದೆ.</p>
]]></content:encoded>
					
		
		
			</item>
		<item>
		<title>ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: BJP-JDS ಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ</title>
		<link>https://peepalmedia.com/i-am-not-scared-i-will-not-resign-cm-siddaramaiah-challenges-bjp-jds/</link>
		
		<dc:creator><![CDATA[Murali Maluru]]></dc:creator>
		<pubDate>Tue, 24 Sep 2024 13:43:41 +0000</pubDate>
				<category><![CDATA[ರಾಜಕೀಯ]]></category>
		<category><![CDATA[bjp reaction on muda case]]></category>
		<category><![CDATA[CM siddaramaiah]]></category>
		<category><![CDATA[d k Shivakumar speech]]></category>
		<category><![CDATA[de notification case]]></category>
		<category><![CDATA[H D KUMARASWAMY]]></category>
		<category><![CDATA[high court]]></category>
		<category><![CDATA[muda]]></category>
		<category><![CDATA[muda case]]></category>
		<category><![CDATA[r ashok]]></category>
		<category><![CDATA[Siddaramaiah]]></category>
		<category><![CDATA[siddramaiah reacts on muda case]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=46064</guid>

					<description><![CDATA[ಬೆಂಗಳೂರು ಸೆ24: ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು. ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ? ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರ. ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು. [&#8230;]]]></description>
										<content:encoded><![CDATA[
<p><strong>ಬೆಂಗಳೂರು ಸೆ24:</strong> ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು.</p>



<p>ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>



<p>ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ? ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರ. ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮನ್ನು ರಾಜಕೀಯವಾಗಿ ಎದುರಿಗೆ ಗೆಲ್ತೀನಿ. ನಿಮ್ಮ ಷಡ್ಯಂತ್ರ ಸೋಲಿಸ್ತೀನಿ ಎಂದು ಬಹಿರಂಗವಾಗಿ ತೊಡೆತಟ್ಟಿದರು.</p>



<p>ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದ್ದೇವೆ</p>



<p>ರಾಜ್ಯದ ಆರ್ಥಿಕ-ಸಾಮಾಜಿಕ ಪ್ರಗತಿಗೆ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಬೇಕು. ಕೃಷಿ, ಕೈಗಾರಿಕೆ ಬೆಳವಣಿಗೆ ಆದರೆ ಮಾತ್ರ GDP ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.</p>



<p>ಕೃಷಿ ಮತ್ತು ಕೈಗಾರಿಕೆ ಹಾಗೂ ವಸತಿಗೆ ಅಪಾರ ಪ್ರಮಾಣದ ವಿದ್ಯುತ್ ಅಗತ್ಯ. ಕೃಷಿ, ಕೈಗಾರಿಕೆ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗದಿಂದ ಜಿಡಿಪಿ ಪ್ರಗತಿಯಾಗುತ್ತದೆ. ಆದ್ದರಿಂದ ನಾವು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಗಳಾಗುವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. ಅದರ ಭಾಗವಾಗಿಯೇ ಈ ವಿದ್ಯುತ್ ಉತ್ಪಾದನಾ ತಯಾರಿಕಾ ಘಟಕ ಲೋಕಾರ್ಪಣೆ ಮಾಡಿದ್ದೇನೆ ಎಂದರು.</p>



<p>1500 ಮೌಲ್ಯದ ಕೋಟಿ ವಿದ್ಯುತ್ ಅನ್ನು ನಾವು ಹೊರಗಡೆಗೆ ಮಾರಾಟ ಮಾಡಿದ್ದೇವೆ. ಕಳೆದ ವರ್ಷ ಮಳೆ ಬರಲಿಲ್ಲ. ಬರಗಾಲ ಇತ್ತು. ಬರಗಾಲದಲ್ಲೂ ಕೂಡ ನಾವು ಅಗತ್ಯ ವಿದ್ಯುತ್ ಪೂರೈಸಿದೆವು.</p>



<p>2030 ಕ್ಕೆ 60000 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಇದೆ. ಇದನ್ನು ನಾನು ಬಜೆಟ್ ನಲ್ಲೇ ಘೋಷಿಸಿದ್ದೇನೆ. ವರ್ಷದಿಂದ ವರ್ಷಕ್ಕೆ ವಿದ್ಯುತ್ ಬಳಕೆ, ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ನಾವು ಉತ್ಪಾದನೆ ಹೆಚ್ಚಿಸಿ ಸ್ವಾವಲಂಬಿ ಆಗಿದ್ದೇವೆ. ನಾವು ಹೊರಗಡೆಗೆ ವಿದ್ಯುತ್ ಮಾರಾಟ ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ ಎಂದರು.</p>



<p>ಯಲಹಂಕದ ವಿದ್ಯುತ್ ಸ್ಥಾವರಕ್ಕೆ ನಾವೇ ನಮ್ಮ ಸರ್ಕಾರದಲ್ಲೇ ಶಂಕು ಸ್ಥಾಪನೆ ಮಾಡಿದ್ದೆವು. ಈಗ ನಮ್ಮದೇ ಸರ್ಕಾರ ಇದನ್ನು ಲೋಕಾರ್ಪಣೆ ಕೂಡ ಮಾಡಿದ್ದೇವೆ.</p>



<p>ಬೋನಸ್ ಘೋಷಣೆ</p>



<p>ಯಲಹಂಕ ವಿದ್ಯುತ್ ಸ್ಥಾವರದ ಆರಂಭಕ್ಕೆ ಶ್ರಮಿಸಿದ ಎಲ್ಲಾ ಕಾರ್ಮಿಕರಿಗೆ 5000 ರೂಪಾಯಿ ಬೋನಸ್ ಅನ್ನು ಇದೇ ಸಂದರ್ಭದಲ್ಲಿ ಸಿಎಂ ಘೋಷಿಸಿದರು.</p>



<p>ವಿದ್ಯುತ್ ಸ್ಥಾವರದ ಶಬ್ದ ಸಂಪೂರ್ಣ ಕಡಿಮೆ ಮಾಡಲು ಶ್ರಮಿಸುತ್ತಿದ್ದೇವೆ.</p>



<p>ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
]]></content:encoded>
					
		
		
			</item>
		<item>
		<title>ರೈತರ ಬಲಿ ಪಡೆದ ಯಡಿಯೂರಪ್ಪ ಮಗನಿಗೆ ಮತ ಕೇಳಲು ಆತ್ಮಸಾಕ್ಷಿ ಒಪ್ಪುವುದೇ? : ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ</title>
		<link>https://peepalmedia.com/will-conscience-agree-to-vote-for-yeddyurappas-son-who-was-a-victim-of-farmers/</link>
		
		<dc:creator><![CDATA[Peepal Media Desk]]></dc:creator>
		<pubDate>Mon, 18 Mar 2024 09:07:05 +0000</pubDate>
				<category><![CDATA[ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ]]></category>
		<category><![CDATA[ದೇಶ]]></category>
		<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[ರಾಜಕೀಯ]]></category>
		<category><![CDATA[india]]></category>
		<category><![CDATA[karnataka]]></category>
		<category><![CDATA[narendra mdi]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[Siddaramaiah]]></category>
		<category><![CDATA[state politics]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=37139</guid>

					<description><![CDATA[ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು? – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನೆ &#8220;ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ [&#8230;]]]></description>
										<content:encoded><![CDATA[
<p>ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು? – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನೆ</p>



<p>&#8220;ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್‌ ಪ್ರಿಂಟ್‌ ಮಾಡುವ ಮೆಷಿನ್‌ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು.<br>ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?&#8221; ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ.</p>



<p>2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು? ಎಂದು ಸಿದ್ದರಾಮಯ್ಯ ಖಡಕ್ಕಾಗಿ ಪ್ರಶ್ನಿಸಿದ್ದಾರೆ.</p>



<p>&#8216;ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ?&#8217; ಎಂದು ಸಿದ್ದರಾಮಯ್ಯ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>



<p>&#8216;ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್‌ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈ ವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ‌ ರೈತರನ್ನು ಕೈಬಿಟ್ಟಿತ್ತು.<br>ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು?&#8217; ಎಂದು ತಮ್ಮ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>



<p>ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗಿನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್‌ ದೌರ್ಜನ್ಯಗಳಿಗೆ ಬಲಿಯಾದರು.<br>ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ? ಎಂದು ಕೇಂದ್ರ ಸರ್ಕಾರದ ರೈತ ವಿರೋಧಿ ನಿಲುವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿದ್ದಾರೆ.</p>
]]></content:encoded>
					
		
		
			</item>
		<item>
		<title>Breaking News : ಯಡಿಯೂರಪ್ಪ ವಿರುದ್ಧ ಪೋಕ್ಸೋ (POCSO) ದಾಖಲು</title>
		<link>https://peepalmedia.com/file-pocso-against-yeddyurappa/</link>
		
		<dc:creator><![CDATA[Peepal Media Desk]]></dc:creator>
		<pubDate>Fri, 15 Mar 2024 01:33:26 +0000</pubDate>
				<category><![CDATA[ಬ್ರೇಕಿಂಗ್ ಸುದ್ದಿ]]></category>
		<category><![CDATA[karnataka]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[POCSO act]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=37024</guid>

					<description><![CDATA[ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ 17 ವರ್ಷದ ಮಗಳು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಹಾಯ ಪಡೆಯಲು ಫೆಬ್ರವರಿ 2 ರಂದು ತೆರಳಿದ್ದಾಗ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಸದಾಶಿವನಗರ ಪೊಲೀಸರು ಗುರುವಾರ (ಮಾರ್ಚ್ 14) ತಡರಾತ್ರಿ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (81) ವಿರುದ್ಧ 17 ವರ್ಷದ ಹೆಣ್ಣು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ [&#8230;]]]></description>
										<content:encoded><![CDATA[
<p>ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ 17 ವರ್ಷದ ಮಗಳು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಹಾಯ ಪಡೆಯಲು ಫೆಬ್ರವರಿ 2 ರಂದು ತೆರಳಿದ್ದಾಗ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.</p>



<p>ಸದಾಶಿವನಗರ ಪೊಲೀಸರು ಗುರುವಾರ (ಮಾರ್ಚ್ 14) ತಡರಾತ್ರಿ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (81) ವಿರುದ್ಧ 17 ವರ್ಷದ ಹೆಣ್ಣು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012 (POCSO) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.</p>



<p>ಪೋಕ್ಸೊ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು&nbsp;ಪೊಲೀಸ್ ಮೂಲಗಳು ತಿಳಿಸಿವೆ.</p>



<figure class="wp-block-image size-full is-resized"><img fetchpriority="high" decoding="async" width="400" height="225" src="https://peepalmedia.com/wp-content/uploads/2024/03/images-22.jpeg" alt="" class="wp-image-37027" style="width:377px;height:auto" srcset="https://peepalmedia.com/wp-content/uploads/2024/03/images-22.jpeg 400w, https://peepalmedia.com/wp-content/uploads/2024/03/images-22-300x169.jpeg 300w, https://peepalmedia.com/wp-content/uploads/2024/03/images-22-150x84.jpeg 150w" sizes="(max-width: 400px) 100vw, 400px" /></figure>



<figure class="wp-block-image size-full"><img decoding="async" width="715" height="429" src="https://peepalmedia.com/wp-content/uploads/2024/03/images-23.jpeg" alt="" class="wp-image-37030" srcset="https://peepalmedia.com/wp-content/uploads/2024/03/images-23.jpeg 715w, https://peepalmedia.com/wp-content/uploads/2024/03/images-23-300x180.jpeg 300w, https://peepalmedia.com/wp-content/uploads/2024/03/images-23-150x90.jpeg 150w, https://peepalmedia.com/wp-content/uploads/2024/03/images-23-696x418.jpeg 696w" sizes="(max-width: 715px) 100vw, 715px" /></figure>



<p>ಸಂತ್ರಸ್ತೆಯ ಜೊತೆಗಿದ್ದ ತಾಯಿ ಗುರುವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದು, ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.</p>



<p>ಪೊಲೀಸ್ ಮೂಲಗಳ ಪ್ರಕಾರ, ಫೆಬ್ರವರಿ 2, 2024 ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯ ಪಡೆಯಲು ತಾಯಿ ಮತ್ತು ಮಗಳು ಹೋಗಿದ್ದಾಗ ಈ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.</p>
]]></content:encoded>
					
		
		
			</item>
		<item>
		<title>ಅಸಮಾಧಾನಿತರನ್ನು ವಿಶ್ವಾಸಕ್ಕೆ ತಗೆದುಕೊಳ್ಳುತ್ತಾರಾ ಬಿಜೆಪಿ ಹೊಸ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ?</title>
		<link>https://peepalmedia.com/will-vijayendra-take-the-disaffected-into-confidence/</link>
		
		<dc:creator><![CDATA[Peepal Media Desk]]></dc:creator>
		<pubDate>Tue, 14 Nov 2023 07:43:09 +0000</pubDate>
				<category><![CDATA[ರಾಜಕೀಯ]]></category>
		<category><![CDATA[by vijayendra]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[politics]]></category>
		<category><![CDATA[state politics]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=32037</guid>

					<description><![CDATA[ರಾಜ್ಯ ವಿಧಾನಸಭಾ ಚುನಾವಣೆ ನಂತರ ಕರ್ನಾಟಕ ಬಿಜೆಪಿ ಅಕ್ಷರಶಃ ದಿಕ್ಕು ದೆಸೆಯಿಲ್ಲದ ಅತಂತ್ರ ಸ್ಥಿತಿಯಲ್ಲಿತ್ತು. ಒಂದು ಕಡೆ ವಿಪಕ್ಷ ನಾಯಕನಿಲ್ಲ, ಇನ್ನೊಂದು ಕಡೆ ರಾಜ್ಯಾಧ್ಯಕ್ಷ ಇದ್ದರೂ ಆ ಸ್ಥಾನ ಸಂಪೂರ್ಣ ಕೋಮಾ ಸ್ಥಿತಿಗೆ ಹೋಗಿತ್ತು. ಇಂತಹ ಸ್ಥಿತಿಯಲ್ಲಿ ಇದ್ದ ಬಿಜೆಪಿಗೆ ಈಗ ಹೊಸ ರಾಜ್ಯಾಧ್ಯಕ್ಷರ ಆಯ್ಕೆಯಾಗಿದೆ. ಆದರೆ ಹೊಸ ರಾಜ್ಯಾಧ್ಯಕ್ಷರ ಆಯ್ಕೆಗೆ ಈಗ ಬಿಜೆಪಿಯಲ್ಲಿ ಬಹಿರಂಗವಾಗಿಯೇ ಬಿನ್ನಮತ ಸ್ಪೋಟಗೊಂಡಿದೆ. ಕುಟುಂಬ ರಾಜಕಾರಣದ ವಿರುದ್ಧವೇ ದನಿ ಏರಿಸಿಕೊಂಡು ಬಂದ ಬಿಜೆಪಿಯಲ್ಲೇ ಈಗ ಕುಟುಂಬ ರಾಜಕಾರಣ ನಡೆಯುತ್ತಿದೆ. ಕೇವಲ ಯಡಿಯೂರಪ್ಪ [&#8230;]]]></description>
										<content:encoded><![CDATA[
<p>ರಾಜ್ಯ ವಿಧಾನಸಭಾ ಚುನಾವಣೆ ನಂತರ ಕರ್ನಾಟಕ ಬಿಜೆಪಿ ಅಕ್ಷರಶಃ ದಿಕ್ಕು ದೆಸೆಯಿಲ್ಲದ ಅತಂತ್ರ ಸ್ಥಿತಿಯಲ್ಲಿತ್ತು. ಒಂದು ಕಡೆ ವಿಪಕ್ಷ ನಾಯಕನಿಲ್ಲ, ಇನ್ನೊಂದು ಕಡೆ ರಾಜ್ಯಾಧ್ಯಕ್ಷ ಇದ್ದರೂ ಆ ಸ್ಥಾನ ಸಂಪೂರ್ಣ ಕೋಮಾ ಸ್ಥಿತಿಗೆ ಹೋಗಿತ್ತು. ಇಂತಹ ಸ್ಥಿತಿಯಲ್ಲಿ ಇದ್ದ ಬಿಜೆಪಿಗೆ ಈಗ ಹೊಸ ರಾಜ್ಯಾಧ್ಯಕ್ಷರ ಆಯ್ಕೆಯಾಗಿದೆ.</p>



<p>ಆದರೆ ಹೊಸ ರಾಜ್ಯಾಧ್ಯಕ್ಷರ ಆಯ್ಕೆಗೆ ಈಗ ಬಿಜೆಪಿಯಲ್ಲಿ ಬಹಿರಂಗವಾಗಿಯೇ ಬಿನ್ನಮತ ಸ್ಪೋಟಗೊಂಡಿದೆ. ಕುಟುಂಬ ರಾಜಕಾರಣದ ವಿರುದ್ಧವೇ ದನಿ ಏರಿಸಿಕೊಂಡು ಬಂದ ಬಿಜೆಪಿಯಲ್ಲೇ ಈಗ ಕುಟುಂಬ ರಾಜಕಾರಣ ನಡೆಯುತ್ತಿದೆ. ಕೇವಲ ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕೆ ರಾಜ್ಯಾಧ್ಯಕ್ಷ ಗಿಟ್ಟಿಸಿಕೊಂಡ ಬಗ್ಗೆ ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರೇ ಅಸಮಾಧಾನ ಹೊರ ಹಾಕಿದ್ದಾರೆ.</p>



<p>ಸಧ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿಯಲ್ಲಿ ಇದ್ದವರ ಪಟ್ಟಿ ಮಾಡ್ತಾ ಹೋದರೆ ಸಿಗೋದು ಹತ್ತು ಹಲವು ಹೆಸರುಗಳು. ಅದರಲ್ಲಿ ಸದಾನಂದ ಗೌಡ, <a href="http://ವಿ.ಸೋಮಣ್ಣ">ವಿ.ಸೋಮಣ್ಣ</a>, ಯಡಿಯೂರಪ್ಪರ ಟೀಕಿಸುತ್ತಲೇ ಬಂದಿರುವ ಬಸನಗೌಡ ಪಾಟೀಲ್ ಯತ್ನಾಳ್ ಇನ್ನೂ ಹಲವರು ತಮ್ಮದೇ ವರ್ಚಸ್ಸಿನಿಂದ ಗುರುತಿಸಿಕೊಂಡವರಾದರೆ,&nbsp; <a href="http://ಬಿ.ಎಲ್">ಬಿ.ಎಲ್</a> ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ <a href="http://ಆರ್.ಅಶೋಕ್">ಆರ್.ಅಶೋಕ್</a>, ಅಶ್ವತ್ ನಾರಾಯಣ್, ಅರವಿಂದ ಬೆಲ್ಲದ್, <a href="http://ಸಿ.ಟಿ.ರವಿ">ಸಿ.ಟಿ.ರವಿ</a>, ಮುರುಗೇಶ್ ನಿರಾಣಿ ಇನ್ನೂ ಹತ್ತು ಹಲವು ಮಂದಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಪೈಪೋಟಿ ನೀಡಿದ್ದರು.</p>



<p>ರಾಜ್ಯಾಧ್ಯಕ್ಷರ ಹುದ್ದೆ ಆಯ್ಕೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಸಿಟಿ ರವಿಯವರು &#8220;ಇಂತಹ ಸಮಯದಲ್ಲಿ ನಾನು ಏನೇ ಮಾತನಾಡಿಜರೂ ಅದು ಅಪಾರ್ಥಕ್ಕೆ ಗುರಿಯಾಗುತ್ತದೆ. ನಾನು ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ&#8221; ಎಂದು ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದರು.</p>



<p>ಹಾಗೆಯೇ <a href="http://ಆರ್.ಅಶೋಕ್">ಆರ್.ಅಶೋಕ್</a>, ಅಶ್ವತ್ ನಾರಾಯಣ್, ಅರವಿಂದ ಬೆಲ್ಲದ್, <a href="http://ಸಿ.ಟಿ.ರವಿ">ಸಿ.ಟಿ.ರವಿ</a>, ಮುರುಗೇಶ್ ನಿರಾಣಿ ಇನ್ನೂ ಹಲವು ನಾಯಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಷ್ಟೆ ಅಲ್ಲದೆ ಕರಾವಳಿ ಭಾಗಕ್ಕೆ ಈ ವರೆಗೂ ಇದ್ದ ವಿಶೇಷ ಪ್ರಾತಿನಿಧ್ಯ ಕೂಡಾ ಈ ಬಾರಿ ಇಲ್ಲದಾಗಿದೆ. ದೊಡ್ಡ ನಾಯಕರು ಅಥವಾ ಶಾಸಕರ ಮಟ್ಟದಲ್ಲಿ ಅಸಮಾಧಾನ ಇರದಿದ್ದರೂ ಕಾರ್ಯಕರ್ತರ ಮಟ್ಟದಲ್ಲೂ ಈ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.</p>



<p>ಬಿಜೆಪಿ ಹೈಕಮಾಂಡ್ ಲಿಂಗಾಯತ ಪ್ರಾತಿನಿಧ್ಯವನ್ನು ಮತ್ತೆ ಮುನ್ನೆಲೆಗೆ ತರಲು ಈ ದಾರಿ ಅನಿವಾರ್ಯವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಏನೇ ಆದರೂ ಈಗಾಗಲೇ ಲಿಂಗಾಯತ ಮತಗಳು ಬಹುತೇಕ ಕಾಂಗ್ರೆಸ್ ಪರ ತಿರುಗಿದ್ದು ಇದನ್ನು ಬಿಜೆಪಿ ಸೆಳೆಯುವುದು ಒಂದು ಸವಾಲೇ ಸರಿ.</p>



<p>ಹೊಸ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನವೆಂಬರ್ 17 ಕ್ಕೆ ಬಿಜೆಪಿ ಶಾಸಕಾಂಗ ಸಭೆ ಕರೆದಿದ್ದಾರೆ. &#8216;ಎಲ್ಲಾ ಶಾಸಕರಿಗೂ ಆಹ್ವಾನ ನೀಡುತ್ತೇನೆ, ಪ್ರಮುಖ ಮುಖಂಡರಿಗೂ ಆಹ್ವಾನ ನೀಡುತ್ತೇನೆ,ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲಿದ್ದೇನೆ&#8217; ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.</p>



<p>ಜೊತೆಗೆ &#8216;ಕೇವಲ ಜಿಲ್ಲಾ ಘಟಕದ ಅಧ್ಯಕ್ಷರುಗಳನ್ನು ಮಾತ್ರ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದೇನೆ. ಉಳಿದಂತೆ ಮಾಧ್ಯಮಗಳ ಮೂಲಕ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಲಿದ್ದೇನೆ&#8217; ಎಂದು ವಿಜಯೇಂದ್ರ ಹೇಳಿದ್ದಾರೆ.</p>



<p>ಏನೇ ಇರಲಿ. ದಿಕ್ಕು ದೆಸೆ ಇಲ್ಲದಂತಿದ್ದ ಬಿಜೆಪಿಗೆ ಹೇಳಿಕೊಳ್ಳೋದಕ್ಕಾದರೂ ಒಬ್ಬ ರಾಜ್ಯಾಧ್ಯಕ್ಷ ಸಿಕ್ಕಿದ್ದಾರೆ. ಬಳಲಿ ಬೆಂಡಾಗಿರೋ ಬಿಜೆಪಿ ಮರುಹುಟ್ಟು ಪಡೆಯೋಕೆ ಇರೋ ಅಡ್ಡಗಾಲನ್ನು ದಾಟಿ ಹೇಗೆ ಮುಂಬರುತ್ತೆ ಅನ್ನೋದು ಗಮನಿಸಬೇಕಾದ ವಿಚಾರ.</p>
]]></content:encoded>
					
		
		
			</item>
		<item>
		<title>ವಿಜಯನಗರದಲ್ಲಿ ಪಿಕೆ ಹಳ್ಳಿ ಹೋಬಳಿಯಾಗಿ ಪರಿವರ್ತನೆ: ಸಿಎಂ</title>
		<link>https://peepalmedia.com/vijayanagaradalli-pk-halli-hobaliyagi-parivartane-cm/</link>
		
		<dc:creator><![CDATA[Peepal Media]]></dc:creator>
		<pubDate>Wed, 12 Oct 2022 12:56:57 +0000</pubDate>
				<category><![CDATA[ರಾಜ್ಯ]]></category>
		<category><![CDATA[anand sing]]></category>
		<category><![CDATA[BASAVARAJ BOMMAYI]]></category>
		<category><![CDATA[bengalure]]></category>
		<category><![CDATA[bjp]]></category>
		<category><![CDATA[CM]]></category>
		<category><![CDATA[hosapete]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[vijaya nagara]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=10342</guid>

					<description><![CDATA[ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಿಕೆ ಹಳ್ಳಿಯನ್ನು ಹೋಬಳಿ ಯಾಗಿ ಪರಿವರ್ತಿಸಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ಜಿಲ್ಲೆಯ ಮರಿಯಮ್ಮನಹಳ್ಳಿ ಕುಡಿಯುವ ನೀರಿನ ಯೋಜನೆ ಡಿಪಿಆರ್ ಆಗಿದ್ದು, ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಎರಡೂ ಜಿಲ್ಲೆಯಿಂದ 10 ಸೀಟು ಗೆಲ್ಲಿಸಬೇಕು. ಎರಡು‌ ಜಿಲ್ಲೆಗಳಿಗೆ ಸುಪ್ರೀಂ ಕೊರ್ಟ್ ಆದೇಶದಿಂದ 20 ಸಾವಿರ ಕೋಟಿ ಬಂದಿದ್ದು, ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಮಾಡಿ, [&#8230;]]]></description>
										<content:encoded><![CDATA[
<p><strong>ಹೊಸಪೇಟೆ:</strong> ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಿಕೆ ಹಳ್ಳಿಯನ್ನು ಹೋಬಳಿ ಯಾಗಿ ಪರಿವರ್ತಿಸಿ ಆದೇಶ ಹೊರಡಿಸಲಾಗುವುದು ಎಂದು  ತಿಳಿಸಿದರು.</p>



<p>ಜಿಲ್ಲೆಯ ಮರಿಯಮ್ಮನಹಳ್ಳಿ ಕುಡಿಯುವ ನೀರಿನ ಯೋಜನೆ ಡಿಪಿಆರ್ ಆಗಿದ್ದು, ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಎರಡೂ ಜಿಲ್ಲೆಯಿಂದ 10 ಸೀಟು ಗೆಲ್ಲಿಸಬೇಕು. ಎರಡು‌ ಜಿಲ್ಲೆಗಳಿಗೆ ಸುಪ್ರೀಂ ಕೊರ್ಟ್ ಆದೇಶದಿಂದ 20 ಸಾವಿರ ಕೋಟಿ ಬಂದಿದ್ದು, ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಮಾಡಿ, ಮಾದರಿ ಜಿಲ್ಲೆಗಳನ್ನಾಗಿ ಮಾಡಲಾಗುವುದು. ವಿಜಯನಗರ ಗತವೈಭವವನ್ನು ಪುನರ್ ಸ್ಥಾಪಿಸಲು ಭಾಜಪ ಸರ್ಕಾರ ಶ್ರಮವಹಿಸಲಿದ್ದು, ಜನರ ಆಶೀರ್ವಾದವಿರಲಿ ಎಂದು ತಿಳಿಸಿದರು.</p>



<p>ಆನಂದ ಸಿಂಗ್ ಅವರು ಹೃದಯ ಶ್ರೀಮಂತಿಕೆಯುಳ್ಳವರು. ಎಲ್ಲ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ‌. ಜಿಲ್ಲೆಯ ರಚನೆಗೆ ಕಾರಣೀಭೂತರಾಗಿದ್ದಾರೆ. ಜಿಲ್ಲೆಯಲ್ಲಿ ಅವರ ನಾಯಕತ್ವದಲ್ಲಿ ಎಲ್ಲರೂ ಮುಂದುವರೆಯಬೇಕು.75 ಸಮುದಾಯಗಳ ನಾಯಕರನ್ನು ಈ ವೇದಿಕೆಯಲ್ಲಿ ಒಗ್ಗೂಡಿಸಿದ್ದಾರೆ. ಆನಂದ್ ಸಿಂಗ್ ಹಾಗೂ ರಾಮುಲು ಅವರ ಸಂಘಟನಾ ಶಕ್ತಿ ಇದೆ. ಸೋಮಲಿಂಗಪ್ಪ, ಗೋಪಾಲಕೃಷ್ಣ, ಸೋಮಶೇಖರ್ ರೆಡ್ಡಿ ಎಲ್ಲರು ಇದ್ದಾರೆ. ಈ ಭಾಗದ ಜನರ ಒಳಿತಿಗಾಗಿ ಎಲ್ಲರೂ ಶ್ರಮಿಸುತ್ತಿದ್ದಾರೆ ಎಂದರು.</p>



<p></p>
]]></content:encoded>
					
		
		
			</item>
		<item>
		<title>ಎಸ್ಸಿ ಎಸ್ಟಿ ಸಮುದಾಯವರಿಗೆ ನ್ಯಾಯ ಕೊಡಿಸುತ್ತೇನೆ: ಸಿಎಂ ಬೊಮ್ಮಾಯಿ</title>
		<link>https://peepalmedia.com/sc-st-samudayagalige-nyaya-kodisuttene-cm-bommai/</link>
		
		<dc:creator><![CDATA[Peepal Media]]></dc:creator>
		<pubDate>Wed, 12 Oct 2022 12:45:39 +0000</pubDate>
				<category><![CDATA[ರಾಜ್ಯ]]></category>
		<category><![CDATA[ವಿಜಯನಗರ]]></category>
		<category><![CDATA[anand sing]]></category>
		<category><![CDATA[BASAVARAJ BOMMAYI]]></category>
		<category><![CDATA[bjp]]></category>
		<category><![CDATA[hosapete]]></category>
		<category><![CDATA[india]]></category>
		<category><![CDATA[janasankalpa yatre]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[MLA]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[vijaya nagara]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=10338</guid>

					<description><![CDATA[ಹೊಸಪೇಟೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಈ ಸಮುದಾಯಗಳಿಗೆ ನ್ಯಾಯ ಕೊಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದರು. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಭಯವಿಲ್ಲ. ನಮ್ಮ ಸರ್ಕಾರ ರೈತ ಕೂಲಿಕಾರ್ಮಿಕರಿಗೆ, ನೇಕಾರರು, ಮೀನುಗಾರರು, ಟ್ಯಾಕ್ಸಿ ಹಾಗೂ ಆಟೋಚಾಲಕರ ಮಕ್ಕಳಿಗೂ ವಿದ್ಯಾನಿಧಿ ಕೊಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಬಡಿಗರು, ಕಮ್ಮಾರರು, [&#8230;]]]></description>
										<content:encoded><![CDATA[
<p><strong>ಹೊಸಪೇಟೆ:</strong> ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಈ ಸಮುದಾಯಗಳಿಗೆ ನ್ಯಾಯ ಕೊಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>



<p>ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದರು.</p>



<p>ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಭಯವಿಲ್ಲ. ನಮ್ಮ ಸರ್ಕಾರ ರೈತ ಕೂಲಿಕಾರ್ಮಿಕರಿಗೆ, ನೇಕಾರರು, ಮೀನುಗಾರರು, ಟ್ಯಾಕ್ಸಿ ಹಾಗೂ ಆಟೋಚಾಲಕರ ಮಕ್ಕಳಿಗೂ ವಿದ್ಯಾನಿಧಿ ಕೊಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಬಡಿಗರು, ಕಮ್ಮಾರರು, ವಿಶ್ವಕರ್ಮರು, ಮೇದಾರರು ಸೇರಿದಂತೆ ಕುಶಲಕರ್ಮಿಗಳಿಗೆ 50 ಸಾವಿರ ಧನಸಹಾಯ ನೀಡಲಾಗುತ್ತಿದೆ. ಜಗಜೀವನರಾಂ ಹೆಸರಿನಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀಸಾಮರ್ಥ್ಯ ಯೋಜನೆಯಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಯುವಕರ ಸಂಘಕ್ಕೆ ಆರ್ಥಿಕ ನೆರವು ನೀಡಿ, ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ 5 ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ.</p>



<p><strong>ಈಗ ಜನರಿಗೆ ಭಯವಿಲ್ಲ:</strong></p>



<p>ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರಿಗೆ ಭಯವಿಲ್ಲ. ಎಸ್ಸಿ ಎಸ್ಟಿ ಸಮುದಾಯವರಿಗೆ ಮೀಸಲಾತಿ ಹೆಚ್ಚಳ ಮಾಡುವ ಬೇಡಿಕೆ ಇದ್ದರೂ ನೀವು ನಿರ್ಧಾರ ಮಾಡಿಲ್ಲ. ನಾವು ನಿರ್ಧಾರ ಮಾಡಿದರೆ ಅದನ್ನು ಪ್ರಶ್ನಿಸುತ್ತೀರಾ. ನಮಗೂ ಕಾನೂನು ಗೊತ್ತಿದೆ.‌ಈ ಸಮುದಾಯಕ್ಕೆ ನ್ಯಾಯ ಕೊಡಿಸಲು ನಾನು ನಿಲ್ಲುತ್ತೇನೆ‌ ಎಂಬ ವಚನ ಕೊಡುತ್ತೇನೆ.<br>ಬಿಜೆಪಿ ಸರ್ಕಾರದಲ್ಲಿ ದೀನ ದಲಿತರು ಭಯಭೀತರಾಗಿದ್ದಾರೆ‌. ಅಂತ ಹೇಳಿದ್ದಿರಿ, ಆದರೆ ನೀವು ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಪ್ರಯತ್ನ ಮಾಡಿದ್ದಿರಿ ಆಗ ಜನರಿಗೆ ಭಯ ಇತ್ತು. ನಾವು ವೀರಶೈವ ಲಿಂಗಾಯತರನ್ನು ಒಂದಾಗುವಂತೆ ಮಾಡಿದ್ದೇವೆ.<br>ನಿಮ್ಮ ಕಾಲದಲ್ಲಿ ಕೊಲೆಗಳು ನಡೆಯುತ್ತಿದ್ದವು ಜನರು ಭಯಭೀತರಾಗಿದ್ದರು‌ . ಆ ಭಯ ಈಗ ಇಲ್ಲ ಎಂದರು.</p>



<p><strong>ಏಕ್ ಭಾರತ ಶ್ರೇಷ್ಟ ಭಾರತ:</strong></p>



<p>ಪ್ರಧಾನಿ ನರೇಂದ್ರ ಮೊದಿಯವರು ಏಕ್ ಭಾರತ ಶ್ರೇಷ್ಟ ಭಾರತ ಎಂದು ಹೇಳಿದ್ದಾರೆ‌. ಪ್ರಧಾನಿಮೋದಿಯವರ ನಾಯಕತ್ವದಲ್ಲಿ ದೇಶ ಮುನ್ನಡೆಯಲು ಜನ ಬಯಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು, ನವಕರ್ನಾಟಕ ನಿರ್ಮಾಣಕ್ಕಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ ಎಂದರು.</p>



<p>ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್, ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.</p>



<p>ಇದನ್ನೂ ಓದಿ: <a href="https://peepalmedia.com/congress-muluguttiruva-hadagu/">ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಸಿಎಂ ಬೊಮ್ಮಾಯಿ</a></p>
]]></content:encoded>
					
		
		
			</item>
		<item>
		<title>ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯ ಬಿಜೆಪಿಯ ಮೂಲ ಸಿದ್ಧಾಂತ: ಸಿಎಂ ಬೊಮ್ಮಾಯಿ</title>
		<link>https://peepalmedia.com/samajada-kattakadeya-vyaktiya-udaya-bjpya-moola-siddanta-cm-bommai/</link>
		
		<dc:creator><![CDATA[Peepal Media]]></dc:creator>
		<pubDate>Wed, 12 Oct 2022 09:15:08 +0000</pubDate>
				<category><![CDATA[ರಾಜ್ಯ]]></category>
		<category><![CDATA[ವಿಜಯನಗರ]]></category>
		<category><![CDATA[anand sing]]></category>
		<category><![CDATA[BASAVARAJ BOMMAYI]]></category>
		<category><![CDATA[bjp]]></category>
		<category><![CDATA[CM]]></category>
		<category><![CDATA[hosapete]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[vijaya nagara]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=10281</guid>

					<description><![CDATA[ಹೊಸಪೇಟೆ: ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯದವೇ BJP ಸರ್ಕಾರ ಮೂಲ ಸಿದ್ಧಾಂತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹೊಸಪೇಟೆಯಲ್ಲಿ ಏರ್ಪಡಿಸಲಾಗಿದ್ದ ಜನಸಂಕಲ್ಪಯಾತ್ರೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿ ಅವಧಿಯನ್ನು ವಿಸ್ತರಣೆ ಮಾಡುವ ದಿಟ್ಟ ನಿಲುವನ್ನು ತೆಗೆದುಕೊಂಡರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯದ ಆಶಯದಂತೆ ದೀನದಯಾಳ್ ಉಪಾಧ್ಯಾಯ ಅವರು ಅಂತ್ಯೋದಯ ಕಾರ್ಯಕ್ರಮ ಕೈಗೊಂಡರು. ಅಂತ್ಯೋದಯ ಮೂಲ ಸಿದ್ಧಾಂತವೇ [&#8230;]]]></description>
										<content:encoded><![CDATA[
<p><strong>ಹೊಸಪೇಟೆ:</strong> ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯದವೇ BJP ಸರ್ಕಾರ ಮೂಲ ಸಿದ್ಧಾಂತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>



<p>ಹೊಸಪೇಟೆಯಲ್ಲಿ ಏರ್ಪಡಿಸಲಾಗಿದ್ದ ಜನಸಂಕಲ್ಪಯಾತ್ರೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿ ಅವಧಿಯನ್ನು ವಿಸ್ತರಣೆ ಮಾಡುವ ದಿಟ್ಟ ನಿಲುವನ್ನು ತೆಗೆದುಕೊಂಡರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯದ ಆಶಯದಂತೆ ದೀನದಯಾಳ್ ಉಪಾಧ್ಯಾಯ ಅವರು ಅಂತ್ಯೋದಯ ಕಾರ್ಯಕ್ರಮ ಕೈಗೊಂಡರು. ಅಂತ್ಯೋದಯ ಮೂಲ ಸಿದ್ಧಾಂತವೇ ಬಿಜೆಪಿಯದ್ದು. ಸಿದ್ದರಾಮಯ್ಯ ಅವರಿಗೆ ಇದು ಗೊತ್ತಿಲ್ಲ ಎಂದರು.</p>



<p><strong>ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಕ್ರಾಂತಿಕಾರಿ ಹೆಜ್ಜೆ:</strong></p>



<p>ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದ್ದೇವೆ. ಮುಂದಿನ ಹೆಜ್ಜೆಗಳನ್ನು ಕೂಡ ಇಡುತ್ತೇವೆ. ಇದರ ಬಗ್ಗೆ ಸಂಪೂರ್ಣ ಅರಿವಿದೆ. 50 ವರ್ಷ ಈ ನಿರ್ಣಯ ತೆಗೆದುಕೊಳ್ಳಲು ಆಗಿರಲಿಲ್ಲ. ಈಗ ಮುಂದಿನ ಪ್ರಕ್ರಿಯೆಗೆ .ಇಂದಿನ ನಿರ್ಣಯ ಕಾರಣವಾಗುತ್ತದೆ. ಕಾನೂನು ತಜ್ಞರೊಂದಿಗೆ ನಾವು ಚರ್ಚೆ ನಡೆಸಿದ್ದು, ಇದನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದರು</p>



<p><strong>ಮೀಸಲಾತಿ ಹೆಚ್ಚಳ ಸಂವಿಧಾನಬದ್ಧ:</strong></p>



<p>ಶಾಸಕ ಅರವಿಂದ ಬೆಲ್ಲದ್ ಅವರ ಧರ್ಮಾಧಾರಿತ ಮೀಸಲಾತಿ ಕಡಿತಗೊಳಿಸಬೇಕೆಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಏನೇ ಮಾಡಿದರೂ ಸಂವಿಧಾನಬದ್ಧವಾಗಿ ಮಾಡುತ್ತೇವೆ. ಅದನ್ನು ಬಿಟ್ಟು ಏನೂ ಮಾಡಲಾಗುವುದಿಲ್ಲ. ಹಲವಾರು ಜನ ಹಲವಾರು ವಿಚಾರಗಳನ್ನು ಹೇಳುತ್ತಾರೆ. ಆದರೆ ಯಾವುದಾದರೂ ಒಂದು ವರದಿ , ಚಿಂತನೆ , ಅಂಕಿಅಂಶಗಳ ಆಧಾರದ ಮೇಲೆ ಮಾಡಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವಾಗಲೂ ನ್ಯಾ. ನಾಗಮೋಹನ್ ದಾಸ್ ಅವರ ವರದಿ ಅಧ್ಯಯನ ಮಾಡಿ ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ವೈಯಕ್ತಿಕ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.</p>



<p></p>



<figure class="wp-block-image size-large"><img decoding="async" width="1024" height="694" src="https://peepalmedia.com/wp-content/uploads/2022/10/WhatsApp-Image-2022-10-12-at-2.24.34-PM-1-1024x694.jpeg" alt="" class="wp-image-10286" srcset="https://peepalmedia.com/wp-content/uploads/2022/10/WhatsApp-Image-2022-10-12-at-2.24.34-PM-1-1024x694.jpeg 1024w, https://peepalmedia.com/wp-content/uploads/2022/10/WhatsApp-Image-2022-10-12-at-2.24.34-PM-1-300x203.jpeg 300w, https://peepalmedia.com/wp-content/uploads/2022/10/WhatsApp-Image-2022-10-12-at-2.24.34-PM-1-768x521.jpeg 768w, https://peepalmedia.com/wp-content/uploads/2022/10/WhatsApp-Image-2022-10-12-at-2.24.34-PM-1-150x102.jpeg 150w, https://peepalmedia.com/wp-content/uploads/2022/10/WhatsApp-Image-2022-10-12-at-2.24.34-PM-1-696x472.jpeg 696w, https://peepalmedia.com/wp-content/uploads/2022/10/WhatsApp-Image-2022-10-12-at-2.24.34-PM-1-1068x724.jpeg 1068w, https://peepalmedia.com/wp-content/uploads/2022/10/WhatsApp-Image-2022-10-12-at-2.24.34-PM-1.jpeg 1280w" sizes="(max-width: 1024px) 100vw, 1024px" /></figure>



<p></p>



<p><strong>&#8216;ಭಾರತ್ ತೋಡೋ&#8217; ಯಾತ್ರೆಗೂ ನಮಗೂ ಸಂಬಂಧವಿಲ್ಲ:</strong></p>



<p>ಜನಸಂಕಲ್ಪ ಯಾತ್ರೆಯ ತಯಾರಿ ಒಂದೂವರೆ ತಿಂಗಳ ಮುನ್ನವೇ ಆಗಿತ್ತು. ಮಳೆ ಬಂದಿದ್ದರಿಂದ ಸ್ವಲ್ಪ ಮುಂದೂಡಿಕೆಯಾಯಿತು. ಅಷ್ಟು ಬಿಟ್ಟರೆ, &#8216;ಭಾರತ್ ತೋಡೋ&#8217; ಯಾತ್ರೆಗೂ ನಮಗೂ ಸಂಬಂಧವಿಲ್ಲ ಎಂದರು.</p>



<p><strong>ಕಾಂಗ್ರೆಸ್ ನವರ ಎಸ್ ಸಿ, ಎಸ್ ಟಿ ವಿರೋಧಿ ಧೋರಣೆ:</strong></p>



<p>ಮೀಸಲಾತಿ ಹೆಚ್ಚಳದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಿಯಾಂಕ ಖರ್ಗೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 50 ವರ್ಷದ ಬೇಡಿಕೆಯನ್ನು ಅವರು ಈಡೇರಿಸಲಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಅವಧಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಮಿತಿ ರಚಿಸಿದರು. ವರದಿಯನ್ನು ಅನುಷ್ಠಾನ ಮಾಡುವ ಶಕ್ತಿ ಭಾಜಪ ಸರ್ಕಾರಕ್ಕಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಏಳಿಗೆಗೆ ಬದ್ಧತೆ ಇದೆ. ಕಾಂಗ್ರೆಸ್ ಅವರು ಮೀಸಲಾತಿ ಬಗ್ಗೆ ಎತ್ತಿರುವ ಅಪಸ್ವರ, ಅವರ ಎಸ್ ಸಿ, ಎಸ್ ಟಿ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ತಿಳಿಸಿದರು.</p>



<p><strong>ಜನಸಂಕಲ್ಪ ಯಾತ್ರೆಗೆ ಜನರ ಆಶೀರ್ವಾದವಿದೆ:</strong></p>



<p>ರಾಯಚೂರು ಗ್ರಾಮಾಂತರ ಪ್ರದೇಶದಲ್ಲಿ ಜನಸಂಕಲ್ಪ ಯಾತ್ರೆ ಪ್ರಾರಂಭವಾಗಿದೆ. ಅಭೂತಪೂರ್ವ ಉತ್ಸಾಹ , ಬೆಂಬಲ ಮತ್ತು ಸಂಕಲ್ಪ ದೊರೆತಿದೆ. ಇಂದೂ ಕೂಡ ಬಹಳ ದೊಡ್ಡ ಪ್ರಮಾಣದ ಜನಸ್ತೋಮ ಸೇರಿ ಜನಸಂಕಲ್ಪ ಯಾತ್ರೆಗೆ ಆಶೀರ್ವಾದ ಮಾಡುತ್ತಿದ್ದಾರೆ. ಬರುವ ದಿನಗಳಲ್ಲಿ ಎಲ್ಲಾ ಕ್ಷೇತ್ರ ಗಳಿಗೂ ನಾವು ಭೇಟಿ ನೀಡುತ್ತಿದ್ದೇವೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳು ನಮ್ಮ ರಾಜ್ಯ ಸರ್ಕಾರದ ಬಿ.ಎಸ್.ಯಡಿಯೂರಪ್ಪ ಹಾಗೂ ನನ್ನ ಸರ್ಕಾರದ ಕಾರ್ಯಕ್ರಮ ಗಳು ಎಲ್ಲವೂ ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಸರ್ಕಾರದ ಕಾರ್ಯಕ್ರಮ ಗಳನ್ನು ಮುಂದಿಟ್ಟು ಕೊಂಡು ನಾವು ಜನರ ಆಶೀರ್ವಾದವನ್ನು ಕೇಳುತ್ತಿದ್ದೇವೆ. ಜನರೂ ಕೂಡ ಸ್ಪಂದಿಸುತ್ತಿದ್ದಾರೆ. ಜನಸಂಕಲ್ಪ ಯಾತ್ರೆ ಅಂತಿಮವಾಗಿ ವಿಜಯಸಂಕಲ್ಪವಾಗಿ ಪೂರ್ಣ ಗೊಳ್ಳುವ ವಿಶ್ವಾಸವಿದೆ ಎಂದರು.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ಹೇಳಿಕೆ ಕುರಿತು ಬಿ ಎಸ್‌ ವೈ ವ್ಯಂಗ್ಯ</title>
		<link>https://peepalmedia.com/bsy-sarcasm-on-siddaramaiahs-statement/</link>
		
		<dc:creator><![CDATA[Peepal Media]]></dc:creator>
		<pubDate>Thu, 29 Sep 2022 11:36:38 +0000</pubDate>
				<category><![CDATA[ರಾಜಕೀಯ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[PFI]]></category>
		<category><![CDATA[RSS]]></category>
		<category><![CDATA[siddaramayya]]></category>
		<category><![CDATA[state politics]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=8063</guid>

					<description><![CDATA[ಬೆಂಗಳೂರು: ದೇಶದಲ್ಲಿ 5 ವರ್ಷಗಳ ಕಾಲ ಪಾಪ್ಯುಲರ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವಂತೆ, ಕೊಮುವಾದದ ಹೆಸರಲ್ಲಿ ಶಾಂತಿ ಕದಡುವ ಆರ್‌ಎಸ್‌ಎಸ್‌ ಸಂಘಟನೆಯನ್ನು ಸಹ ದೇಶದಲ್ಲಿ ನಿಷೇಧಿಸ ಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಇಡೀ ದೇಶದಲ್ಲಿ ಹಿಂದೂಗಳನ್ನು ಸಂಘಟಿಸುತ್ತ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್‌ ಸಂಘಟನೆ ಬಗ್ಗೆ ದೇಶದ ಜನತೆ ಅಭಿಮಾನ [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ದೇಶದಲ್ಲಿ 5 ವರ್ಷಗಳ ಕಾಲ ಪಾಪ್ಯುಲರ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವಂತೆ, ಕೊಮುವಾದದ ಹೆಸರಲ್ಲಿ ಶಾಂತಿ ಕದಡುವ ಆರ್‌ಎಸ್‌ಎಸ್‌ ಸಂಘಟನೆಯನ್ನು ಸಹ ದೇಶದಲ್ಲಿ ನಿಷೇಧಿಸ ಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.</p>



<p style="font-size:20px">ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಇಡೀ ದೇಶದಲ್ಲಿ ಹಿಂದೂಗಳನ್ನು ಸಂಘಟಿಸುತ್ತ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್‌ ಸಂಘಟನೆ ಬಗ್ಗೆ ದೇಶದ ಜನತೆ ಅಭಿಮಾನ ಹೊಂದಿದ್ದಾರೆ. ಆದರೆ ಯಾವುದು ಸರಿ, ಯಾವುದು ತಪ್ಪು ಎಂದು ಕಲ್ಪನೆ ಇಲ್ಲದಿರುವ ಸಿದ್ದರಾಮಯ್ಯ ಅವರು ಯಾವಾಗಲೂ ತಲೆತಿರುಕು ಮಾತಾಡುವುದು ಸ್ವಾಭಾವಿಕ ಎಂದು ಯಡಿಯೂರಪ್ಪನವರು ವ್ಯಂಗ್ಯವಾಡಿದ್ದಾರೆ.</p>



<figure class="wp-block-embed is-type-rich is-provider-twitter wp-block-embed-twitter"><div class="wp-block-embed__wrapper">
<blockquote class="twitter-tweet" data-width="550" data-dnt="true"><p lang="kn" dir="ltr">ಇಡೀ ದೇಶದಲ್ಲಿ ಹಿಂದೂಗಳನ್ನು ಸಂಘಟಿಸುತ್ತ ಪ್ರಾಮಾಣಿಕ ಕೆಲಸ ಮಾಡುತ್ತಿರುವ <a href="https://twitter.com/RSSorg?ref_src=twsrc%5Etfw">@RSSorg</a> ಬಗ್ಗೆ ದೇಶದ ಜನತೆ ಅಭಿಮಾನ ಹೊಂದಿದ್ದಾರೆ. ಆದರೆ ಯಾವುದು ಸರಿ, ಯಾವುದು ತಪ್ಪು ಎಂದು ಕಲ್ಪನೆ ಇಲ್ಲದಿರುವ ಸಿದ್ದರಾಮಯ್ಯ ಅವರು ಯಾವಾಗಲೂ ತಲೆತಿರುಕು ಮಾತಾಡುವುದು ಸ್ವಾಭಾವಿಕ.  <br><br>&#8211; ಶ್ರೀ <a href="https://twitter.com/BSYBJP?ref_src=twsrc%5Etfw">@BSYBJP</a><a href="https://twitter.com/hashtag/PFIbanned?src=hash&amp;ref_src=twsrc%5Etfw">#PFIbanned</a> <a href="https://t.co/TEuPbwEt9c">pic.twitter.com/TEuPbwEt9c</a></p>&mdash; BJP Karnataka (@BJP4Karnataka) <a href="https://twitter.com/BJP4Karnataka/status/1575389413692932097?ref_src=twsrc%5Etfw">September 29, 2022</a></blockquote><script async src="https://platform.twitter.com/widgets.js" charset="utf-8"></script>
</div></figure>
]]></content:encoded>
					
		
		
			</item>
		<item>
		<title>ಶಿಕ್ಷಕರ ನೇಮಕಾತಿ: ಸಿದ್ದರಾಮಯ್ಯ ದಾಖಲೆ ಬಿಡುಗಡೆ</title>
		<link>https://peepalmedia.com/teacher-recruitment-siddaramaiah-release-document/</link>
		
		<dc:creator><![CDATA[Peepal Media Desk]]></dc:creator>
		<pubDate>Wed, 28 Sep 2022 12:22:14 +0000</pubDate>
				<category><![CDATA[ರಾಜ್ಯ]]></category>
		<category><![CDATA[bengalure]]></category>
		<category><![CDATA[india]]></category>
		<category><![CDATA[kannada]]></category>
		<category><![CDATA[karnataka]]></category>
		<category><![CDATA[news]]></category>
		<category><![CDATA[peepal]]></category>
		<category><![CDATA[peepalmedia]]></category>
		<category><![CDATA[siddaramayya]]></category>
		<category><![CDATA[state politics]]></category>
		<category><![CDATA[Teacher recruitment]]></category>
		<category><![CDATA[yadiyurappa]]></category>
		<guid isPermaLink="false">https://peepalmedia.com/?p=7774</guid>

					<description><![CDATA[ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದು, ಯಾವ-ಯಾವ ಸಮಯದಲ್ಲಿ ಶಿಕ್ಷಕರ ನೇಮಕಾತಿಯಾಗಿದೆ ಮತ್ತು &#160;ಯಾವ ಯಾವ ಆರೋಪಿಗಳು ಯಾವ ಸಮಯದಲ್ಲಿ ನೇಮಕಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ದಾಖಲೆ ಸಮೇತ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮಗಳು ಅಕ್ರಮವಾಗಿ ನೇಮಕಗೊಂಡ ಶಿಕ್ಷಕರ ಬಗ್ಗೆ ಬರೆಯುವಾಗ ‘ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣʼ ಎಂದು ಬರೆಯುತ್ತಿದ್ದಾರೆ. ನಾನು ದಿನಾಂಕ 23-9-2022 [&#8230;]]]></description>
										<content:encoded><![CDATA[
<p style="font-size:20px"><strong>ಬೆಂಗಳೂರು:</strong> ಶಿಕ್ಷಕರ ನೇಮಕಾತಿ ಹಗರಣ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದು, ಯಾವ-ಯಾವ ಸಮಯದಲ್ಲಿ ಶಿಕ್ಷಕರ ನೇಮಕಾತಿಯಾಗಿದೆ ಮತ್ತು &nbsp;ಯಾವ ಯಾವ ಆರೋಪಿಗಳು ಯಾವ ಸಮಯದಲ್ಲಿ ನೇಮಕಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ದಾಖಲೆ ಸಮೇತ ಮಾಹಿತಿ ಬಿಚ್ಚಿಟ್ಟಿದ್ದಾರೆ.</p>



<p style="font-size:20px">ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮಗಳು ಅಕ್ರಮವಾಗಿ ನೇಮಕಗೊಂಡ ಶಿಕ್ಷಕರ ಬಗ್ಗೆ ಬರೆಯುವಾಗ ‘ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣʼ ಎಂದು ಬರೆಯುತ್ತಿದ್ದಾರೆ. ನಾನು ದಿನಾಂಕ 23-9-2022 ರಂದು ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯಾವ ಯಾವ ಆರೋಪಿತರು ಯಾವ-ಯಾವ ಕಾಲದಲ್ಲಿ ನೇಮಕಗೊಂಡಿದ್ದಾರೆ ಎಂಬ ಹೆಸರು, ಅಕ್ರಮವಾಗಿ ಆದೇಶ ಪಡೆದ ದಿನಾಂಕ ಇತ್ಯಾದಿ ವಿವರಗಳನ್ನು ದಾಖಲೆ ಸಮೇತ ವಿವರಿಸಿದರೂ ಸಹ ಕೆಲವು ಮಾಧ್ಯಮಗಳು ಮತ್ತೆ ಮತ್ತೆ ಕಾಂಗ್ರೆಸ್ ಸರ್ಕಾರದ ಕಾಲದ, ಸಿದ್ದರಾಮಯ್ಯ ಅವಧಿಯ ನೇಮಕಾತಿ ಹಗರಣ ಎಂದೆಲ್ಲ ಬರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.</p>



<p style="font-size:20px">ನನಗೆ ಲಭಿಸಿರುವ ದಾಖಲೆಗಳಂತೆ ಈ ಶಿಕ್ಷಕರುಗಳು ಯಾವ-ಯಾವ ಅವಧಿಯಲ್ಲಿ ನೇಮಕಗೊಂಡಿದ್ದಾರೆ ಎಂಬ ಮಾಹಿತಿಯನ್ನು ಮಾಧ್ಯಮಗಳಿಗೆ ಮತ್ತೊಮ್ಮೆ ತಿಳಿಸಬಯಸುತ್ತೇನೆ. ದಸ್ತಗಿರಿಯಾಗಿರುವ 12 ಜನ ಶಿಕ್ಷಕರಲ್ಲಿ 7 ಜನರು 2019 ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸುರೇಶ್ ಕುಮಾರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿದ್ದಾಗ ನೇಮಕಗೊಂಡಿದ್ದಾರೆ. ಉಳಿದ 5 ಜನರಲ್ಲಿ ಇಬ್ಬರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದಾರೆ. ಉಳಿದವರಲ್ಲಿ ಒಬ್ಬ 2018 ರಲ್ಲಿ, ಒಬ್ಬ 2015 ರಲ್ಲಿ, ಮತ್ತೊಬ್ಬ 2017 ರಲ್ಲಿ, ಇನ್ನೊಬ್ಬ 2018 ರಲ್ಲಿ ನೇಮಕಾತಿ ಆದೇಶ ಪಡೆದಿದ್ದಾರೆಂದು ದಾಖಲೆಗಳು ಹೇಳುತ್ತವೆ ಎಂದು ಸಿದ್ದರಾಮಯ್ಯ ತಿಳಿಸಿದರು.</p>



<p style="font-size:20px">ಮುಂದುವರೆದು ಮಾತನಾಡಿದ ಅವರು, 2012-13 ರಲ್ಲಿ ಕರೆದಿದ್ದ ಶಿಕ್ಷಕರ ಹುದ್ದೆಗಳ ಬ್ಯಾಚಿನಲ್ಲೂ ಒಬ್ಬಾತ ಸೇರಿಕೊಂಡಿದ್ದಾನೆಂಬ ಮಾಹಿತಿ ಇದೆ. ಅದರ ನಂತರ 2015 ರಲ್ಲಿ ಮತ್ತೊಮ್ಮೆ ಹುದ್ದೆಗಳನ್ನು ತುಂಬಿಕೊಳ್ಳಲು ಪ್ರಕ್ರಿಯೆ ನಡೆದಿತ್ತು. ಈ ಅವಧಿಗಳಲ್ಲಿ ವಿಶ್ವೇಶ್ವರ ಹೆಗ್ಗಡೆ ಕಾಗೇರಿಯವರು ಮತ್ತು ಕಿಮ್ಮನೆ ರತ್ನಾಕರ ಅವರು ಶಿಕ್ಷಣ ಸಚಿವರುಗಳಾಗಿ ಕೆಲಸ ಮಾಡಿದ್ದರು.&nbsp; ಈಗಾಗಲೆ ಶಿಕ್ಷಣ ಸಚಿವರು ಮಾಧ್ಯಮಗಳಿಗೆ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯುತ್ತದೆಂದು ವಿವರಿಸಿದ್ದಾರೆ. ಒಮ್ಮೆ ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಿದ ನಂತರ ನೇಮಕಾತಿ ಪ್ರಕ್ರಿಯೆಯು ನೇಮಕಾತಿ ಪ್ರಾಧಿಕಾರದಿಂದ ನಡೆಯುತ್ತದೆ ಎಂದು ಹೇಳಿದರು.</p>



<p style="font-size:20px">ನೇಮಕಾತಿ ಪಟ್ಟಿಯು ಡಿಡಿಪಿಐ ಮತ್ತು ಜಂಟಿ ನಿರ್ದೇಶಕರುಗಳಿಂದ ಅನುಮೋದನೆಗೊಳ್ಳುತ್ತದೆ. ನೇರ ನೇಮಕಾತಿಗಳಾದ್ದರಿಂದ ಬೇರಿನ್ನಾರದೆ ಹಸ್ತಕ್ಷೇಪಗಳು ಇರುವುದಿಲ್ಲವೆಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಏನೆ ಆದರೂ, ಯಾರದೆ ಅವಧಿಯಲ್ಲಿ ನಡೆದಿದ್ದರೂ ಸಹ ಈ ರೀತಿಯ ದ್ರೋಹ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮ ಜರುಗಿಸಲೇಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಉಲ್ಭಣಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ನಿವಾರಿಸುವ ಕಡೆಗೆ ಸರ್ಕಾರ ಗಂಭೀರ ಪ್ರಯತ್ನಗಳನ್ನು ಮಾಡಬೇಕು. ಜೊತೆಗೆ ಮಾಧ್ಯಮಗಳಿಗೆ ಸರ್ಕಾರವೆ ಸಚಿವರುಗಳ ಕಛೇರಿಗಳೆ ತಪ್ಪು ಮಾಹಿತಿ ಕೊಡುವುದನ್ನು ನಿಲ್ಲಿಸಬೇಕು. ಅಥವಾ ತನಿಖೆ ನಡೆಸುತ್ತಿರುವ ಸಂಸ್ಥೆಯಾದರೂ ಈ ಕುರಿತು ಕಾಲ ಕಾಲಕ್ಕೆ ಮಾಧ್ಯಮಗಳಿಗೆ ವಿವರಿಸಬೇಕು. ಒಟ್ಟಾರೆಯಾಗಿ ಪಾರದರ್ಶಕವಾಗಿ ನಡೆದುಕೊಳ್ಳಬೇಕು ಹಾಗೂ ನ್ಯಾಯನಿಷ್ಠರಾಗಿರಬೇಕೆಂದು ಆಗ್ರಹಿಸುತ್ತೇನೆ ಎಂದರು.</p>



<p style="font-size:20px">ಇದೆಲ್ಲದರ ಜೊತೆಯಲ್ಲಿ ನಿರುದ್ಯೋಗವು ರಾಜ್ಯದಲ್ಲಿ ಅಸಹನೀಯ ಮಟ್ಟಕ್ಕೆ ಮುಟ್ಟಿದೆ. ರಾಜ್ಯದಲ್ಲಿ ಪದವೀಧರ ಹೆಣ್ಣುಮಕ್ಕಳ ನಿರುದ್ಯೋಗದ ಪ್ರಮಾಣ ಶೇ.39-40 ರಷ್ಟಿದೆ. ಪದವೀಧರ ಯುವಕರ ನಿರುದ್ಯೋಗವು ಶೇ.35 ರವರೆಗೆ ಇದೆ. ಇರುವ ಒಂದೊಂದು ಹುದ್ದೆಗೆ 2-3 ಸಾವಿರ ಜನರು ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಕುರಿತು ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆಯೂ ಇದೆ ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.</p>
]]></content:encoded>
					
		
		
			</item>
	</channel>
</rss>
