ಹಾಸನ : ಜಿಲ್ಲೆಯಲ್ಲಿ ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದಅವರು ಜಲಾಶಯಗಳಿಗೆ ಭದ್ರತೆ ವ್ಯವಸ್ಥೆಗೆ ಹೆಚ್ಚಿನ ಗಮನಹರಿಸಿ ಎಂದು ತಿಳಿಸಿದರು. ಎಲ್ಲಾ ತಹಸೀಲ್ದಾರ್ ಗಳು ಮಳೆಯ ಸಂದರ್ಭದಲ್ಲಿಕೆರೆ,ಕೋಡಿ,ಏರಿಒಡೆದು ಸಂಭವಿಸಬಹುದಾದ ಅನಾಹುತ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆವಹಿಸಿ ಎಂದು ಸೂಚಿಸಿದರು. ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ಸರ್ಕಾರದ ಮಾರ್ಗ ಸೂಚಿಗಳಂತೆ ಪರಿಹಾರ ನೀಡಲು ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.ಕಳೆದ ವರ್ಷ ಸಕಲೇಶಪುರದ ಅಜಾದ್ ನಗರ ಮತ್ತು ಹೊಳೆನರಸೀಪುರದ ಶಾದಿ ಮಹಲ್ ಬಳಿ ಮನೆಗಳಿಗೆ ನೀರು ನುಗ್ಗಿತ್ತು ಈ ಬಾರಿ ಮರುಕಳಿಸದಂತೆ ಎಚ್ಚರಿವಹಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯಿಂದ ಹಾನಿಯಾಗಿರುವ ಕೃಷಿ ಮತ್ತುತೋಟಗಾರಿಕೆ ಬೆಳೆಗಳ ಬಗ್ಗೆ ಪಂಚಾಯಿತಿವಾರು ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ನಗರ ಪ್ರದೇಶಗಳಲ್ಲಿ ರಾಜಕಾಲುವೆಗಳು ಮತ್ತು ಚರಂಡಿಗಳನ್ನು ಸ್ವಚ್ಚತೆಗೆ ಕ್ರಮವಹಿಸಿ ಮಳೆಯ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಸಿಡಿಲು ಬಂದ ಸಂದರ್ಭದಲ್ಲಿ ಅನುಸರಿಸುವ ಮುನ್ನೆಚ್ಚರಿಕೆ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಅರಿವು ಮೂಡಿಸಲು ಸೂಚಿಸಿದರಲ್ಲದೆ, ಮಳೆಗಾಳಿಗೆ ಬಿಳುವಂತಿರುವ ಮರ ಮತ್ತು ವಿದ್ಯುತ್ ಕಂಬಗಳನ್ನು ಗುರುತಿಸಿ ಅಗತ್ಯಕ್ರಮ ಕೈಗೊಳ್ಳಲು ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿತಮ್ಮಯ್ಯ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣ ಮೂರ್ತಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.