Sunday, June 16, 2024

ಸತ್ಯ | ನ್ಯಾಯ |ಧರ್ಮ

ತಾಲ್ಲೂಕು ಆಸ್ಪತ್ರೆಗಳಲ್ಲಿ ಪಾರ್ಶ್ವವಾಯು, ಹೃದಯಾಘಾತಕ್ಕೆ ಉಚಿತ ಇಂಜೆಕ್ಷನ್: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಇನ್ನು ಮುಂದೆ ಹೃದಾಯಾಘಾತ ಮತ್ತು ಸ್ಟ್ರೋಕ್‌ ಸಂದರ್ಭಗಳಲ್ಲಿ ಬೇಕಾಗುವ ದುಬಾರಿ ಬೆಲೆಯ ಚುಚ್ಚುಮದ್ದುಗಳು ಸರ್ಕಾರಿ ಆಸ್ಪತ್ರಗಳಲ್ಲೇ ದೊರೆಯಲಿವೆ. ಸ್ಟ್ರೋಕ್‌ ಆದ ಸಂದರ್ಭದಲ್ಲಿ ಬಹು ಅಂಗಾಂಗ ವೈಫಲ್ಯ, ಸಾವು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೃದಯಾಘಾತಕ್ಕೆ ಒಳಗಾದವರಿಗೆ 90 ನಿಮಿಷದಲ್ಲಿ ಚಿಕಿತ್ಸೆ ದೊರೆಯದಿದ್ದರೆ ಅವರು ಸಾವಿಗೀಡಾಗುವ ಸಂಭವ ಇರುತ್ತದೆ. ಹೀಗಾಗಿ ಪಾರ್ಶ್ವವಾಯು ನಿರ್ವಹಣೆಗೆ ಅಗತ್ಯವಿರುವ 60 ಸಾವಿರ ರೂ. ದರದ ಆರ್​ಟಿ ಪ್ಲಸ್ ಚುಚ್ಚುಮದ್ದು, ಹೃದಯಾಘಾತ ನಿರ್ವಹಣೆಗೆ 40 ಸಾವಿರ ರೂ. ಬೆಲೆಯ ಟೆನೆಕ್ಟ್ ಪ್ಲಸ್ ಚುಚ್ಚುಮದ್ದುಗಳು ತಾಲ್ಲೂಕು ಆಸ್ಪತ್ರೆಗಳಿಗೆ ಶೀಘ್ರವೇ ಪೂರೈಕೆಯಾಗಲಿವೆ.

ಇಲ್ಲಿಯವರೆಗೆ ಈ ಚುಚ್ಚುಮದ್ದುಗಳು ಸರ್ಕಾರಿ ವ್ಯವಸ್ಥೆಯಡಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಮತ್ತು ಜಯದೇವ ಹೃದ್ರೋಗ ಸಂಸ್ಥೆ ಹೊರತುಪಡಿಸಿ ಇತರ ಸರ್ಕಾರಿ ಆಸ್ಪತ್ರೆಗಳಲ್ಲಿ ದೊರೆಯುತ್ತಿರಲಿಲ್ಲ.ಈ ಕಾರಣದಿಂದಾಗಿ ತುರ್ತು ಸಂದರ್ಭದಲ್ಲಿ ಈ ಚುಚ್ಚುಮದ್ದುಗಳಿಗೆ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸಬೇಕಿತ್ತು.

ಪಾರ್ಶ್ವವಾಯು, ಹೃದಯಾಘಾತವಾದಾಗ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತರೆ ಸಿಕ್ಕರೆ ವ್ಯಕ್ತಿ ಗುಣಮುಖವಾಗಲು ಸಾಧ್ಯ. ಸರ್ಕಾರಿ ಆಸ್ಪತ್ರೆಗಳಲ್ಲಿ ನಿಗದಿತ ಚುಚ್ಚುಮದ್ದುಗಳನ್ನು ಉಚಿತವಾಗಿ ಒದಗಿಸಲು ಕ್ರಮ ವಹಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಈ ಉದ್ದೇಶಕ್ಕಾಗಿ 3.80 ಕೋಟಿ ರೂಪಾಯಿಗಳ ಅನುಮೋದನೆ ದೊರೆತಿದೆ. ಸಾಂಕ್ರಾಮಿಕವಲ್ಲದ ರೋಗಗಳ ತಡೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿ ಇಲಾಖೆಯು ಈ ಯೋಜನೆಗೆ ಹಣವನ್ನು ಒದಗಿಸಲಿದೆ.

ಸದರಿ ಯೋಜನೆಯಡಲಿ ಸ್ಟ್ರೋಕ್‌ ಮತ್ತು ಹಾರ್ಟ್‌ ಅಟ್ಯಾಕ್‌ ಕಾಯಿಲೆಗಳಿಗೆ ಪ್ರಾಮುಖ್ಯತೆ ನೀಡಲಾಗಿದ್ದು, ಈ ಯೋಜನೆಯಡಿ ಎಪಿಎಲ್‌, ಬಿಪಿಎಲ್‌ ಬೇಧವಿಲ್ಲದೆ ಎಲ್ಲರಿಗೂ ಉಪಚಾರ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು