Thursday, August 21, 2025

ಸತ್ಯ | ನ್ಯಾಯ |ಧರ್ಮ

ತಮಿಳುನಾಡಿನ ತಿರುಪುರದಲ್ಲಿ ಕಾರಿಗೆ ಟ್ಯಾಂಕರ್ ಡಿಕ್ಕಿ: ಐವರು ಸಾವು

ತಿರುಪುರ್: ಜಿಲ್ಲೆಯ ಧಾರಾಪುರಂ ಬಳಿಯ ಮನಕಡಾವ್ ಬಳಿ ಗುರುವಾರ ಟ್ಯಾಂಕರ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಡಾವ್ ಬಳಿ ಪೆಟ್ರೋಲ್ ಹೊತ್ತು ಸಾಗುತ್ತಿತ್ತು. ಕೊಯಮತ್ತೂರು ಜಿಲ್ಲೆಯ ಪೆರಿಯನಾಯಕನ್ ಪಾಳ್ಯಂನಿಂದ ದಿಂಡಿಗಲ್ ಜಿಲ್ಲೆಯ ಪಳನಿಗೆ ಮದುವೆ ಸಮಾರಂಭಕ್ಕೆಂದು ಕಾರು ತೆರಳುತ್ತಿತ್ತು.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಧಾರಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಲಾರಾಣಿ ಮೃತಪಟ್ಟಿದ್ದಾರೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಧಾರಾಪುರ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದರು

Related Articles

ಇತ್ತೀಚಿನ ಸುದ್ದಿಗಳು

You cannot copy content of this page