ʼತಮ್ಮ ಮನೆಯ ಹೆಂಚು ತೂತುʼ: ಬಿಜೆಪಿ ತಿರುಗೇಟು

ಬೆಂಗಳೂರು: ಬಿಜೆಪಿ ಲಂಚ ಮತ್ತು ಮಂಚದ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್‌ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಕುರಿತು ಟ್ವೀಟ್‌ ಮಾಡುವ ಮೂಲಕ ರಾಜ್ಯ ಬಿಜೆಪಿ  ತಿರುಗೇಟು ನೀಡಿದೆ.

ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ ʼತಮ್ಮ ಮನೆಯ ಹೆಂಚು ತೂತುʼ ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂದು ವಾಗ್ದಾಳಿ ನಡೆಸಿದೆ.

Related Articles

ಇತ್ತೀಚಿನ ಸುದ್ದಿಗಳು