ಮೈಸೂರು: ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪುವುದರಲ್ಲಿ ನಮ್ಮ ಜಿಲ್ಲೆ ಮಾಜಿ ಸಿಎಂ ಕೈವಾಡವಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್, ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪುವದರಲ್ಲಿ ಮಾಜಿ ಸಿಎಂ ಕೈವಾಡವಿದೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಅನುಗುಣವಾಗಿ ಸಂಪುಟವಿದೆ. ಆದರೆ ಹಿರಿಯ ರಾಜಕಾರಣಿ ತನ್ವೀರ್ ಗೆ ಸಚಿವ ಸ್ಥಾನ ಕೊಡಬೇಕಿತ್ತು.
ತನ್ವೀರ್ ಗೆ ಸಚಿವ ಸ್ಥಾನ ನೀಡಿದರೇ ತಮ್ಮ ಪುತ್ರನ ಪ್ರಭಾವ ಕುಗ್ಗುತ್ತೆ ಎಂದು ಸಚಿವ ಸ್ಥಾನ ತಪ್ಪಿಸಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಕರ್ನಾಟಕ ರಾಜ್ಯವನ್ನು ಹಾಳು ಮಾಡಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಹೋಗಬೇಕಿತ್ತು. ಆದರೆ ದುರಂಹಕಾರದ ನಡೆಯಿಂದ ಸಿದ್ದರಾಮಯ್ಯ ಹೋಗಲಿಲ್ಲ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹರಿಹಾಯ್ದರು.
