Sunday, June 16, 2024

ಸತ್ಯ | ನ್ಯಾಯ |ಧರ್ಮ

ಟೀಂ ಇಂಡಿಯಾವನ್ನು ಕಾಡುತ್ತಿರುವ ಭಯ.. ನಾಲ್ಕನೆಯವನಾಗಿ ಈ ಆಟಗಾರನೇ ಸರಿಯೆನ್ನುತ್ತಿವೆ ಅಂಕಿ ಅಂಶಗಳು…

ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಅದಕ್ಕೂ ಮುನ್ನ ಟೀಂ ಇಂಡಿಯಾ ಏಷ್ಯಾಕಪ್ ಗೆ ಸಜ್ಜಾಗಬೇಕಿದೆ. ಆದರೆ ಈ ಎರಡು ಪ್ರತಿಷ್ಠಿತ ಟೂರ್ನಿಗಳಿಗೆ ಭಾರತ ಬಲಿಷ್ಠ ತಂಡ ಕಟ್ಟಬೇಕಿದೆ.

ಅದರಲ್ಲೂ 4ನೇ ಕ್ರಮಾಂಕದಲ್ಲಿ ಬ್ಯಾಟರ್ ಯಾರು ಎಂಬುದು ಸ್ಪಷ್ಟವಾಗಬೇಕಿದೆ. ಏಕೆಂದರೆ ಕಳೆದ ಕೆಲ ವರ್ಷಗಳಿಂದ ಟೀಂ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದ ಶ್ರೇಯಸ್ ಅಯ್ಯರ್ ಈಗ ತಂಡದಲ್ಲಿ ಇಲ್ಲ. ಅವರು ಏಷ್ಯಾಕಪ್‌ನಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಏಷ್ಯಾಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಟೀಂ ಇಂಡಿಯಾದ 4ನೇ ಕ್ರಮಾಂಕದ ಬ್ಯಾಟಿಂಗ್ ಇನ್ನೂ ನಿರ್ಧಾರವಾಗಿಲ್ಲ. ವೆಸ್ಟ್ ಇಂಡೀಸ್ ವಿರುದ್ಧ ಅನೇಕ ಆಟಗಾರರು 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೂ ಯಾರೂ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಇದು ಟೀಂ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಗೆ ಮರಳುವುದು ಅನಿವಾರ್ಯವಾಗಿದೆ. ಏಕೆಂದರೆ ಅಯ್ಯರ್ ಕಳೆದ ಮೂರು ವರ್ಷಗಳಲ್ಲಿ ಭಾರತದ ಪರ ನಾಲ್ಕನೇ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದಾರೆ. ಅದಕ್ಕಾಗಿಯೇ ಶ್ರೇಯಸ್ ಏಷ್ಯಾಕಪ್‌ನಲ್ಲಿ ಪುನರಾಗಮನಕ್ಕಾಗಿ ಕಾಯುತ್ತಿದ್ದಾರೆ. 2019ರ ಏಕದಿನ ವಿಶ್ವಕಪ್ ಬಳಿಕ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾದ 4ನೇ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಶ್ರೇಯಸ್ ಅಯ್ಯರ್ ಬದಲಿಗೆ…

ಅಲ್ಲದೆ, ಕೊನೆಯ ODI ವಿಶ್ವಕಪ್ ನಂತರ, ಅವರು ಭಾರತಕ್ಕಾಗಿ ನಾಲ್ಕನೇ ಕ್ರಮಾಂಕದಲ್ಲಿ ಆಡಿ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಅಯ್ಯರ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 47.35ರ ಸರಾಸರಿಯಲ್ಲಿ ಒಟ್ಟು 805 ರನ್ ಗಳಿಸಿದ್ದರು. ಹಾಗಾಗಿಯೇ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾಗೆ ಶ್ರೇಯಸ್ ಅಯ್ಯರ್ ಅನಿವಾರ್ಯ ಎಂದೇ ಹೇಳಬಹುದು. ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಕಳೆದ ಐದಾರು ತಿಂಗಳಿನಿಂದ ಭಾರತ ತಂಡದಿಂದ ಹೊರಗುಳಿದಿದ್ದರು. ಈಗಷ್ಟೇ ಚೇತರಿಸಿಕೊಂಡಿರುವ ಅಯ್ಯರ್ ಬ್ಯಾಟಿಂಗ್ ಪ್ರಾಕ್ಟೀಸ್ ಆರಂಭಿಸಿದ್ದಾರೆ. ಆದರೆ ಅವರು 50 ಓವರ್‌ಗಳ ಪಂದ್ಯವನ್ನು ಆಡಲು ಸಂಪೂರ್ಣವಾಗಿ ಫಿಟ್ ಆಗಿದ್ದಾರೆಯೇ‌, ಇಲ್ಲವೇ ಎಂಬ ವಿಚಾರದಲ್ಲಿ ಸ್ಪಷ್ಟತೆ ಇಲ್ಲ. ಅದಕ್ಕಾಗಿಯೇ ಏಷ್ಯಾಕಪ್‌ಗೆ ತಂಡವನ್ನು ಆಯ್ಕೆ ಮಾಡುವ ಮುನ್ನ ಶ್ರೇಯಸ್ ಅಯ್ಯರ್‌ಗೆ ಫಿಟ್‌ನೆಸ್ ಪರೀಕ್ಷೆ ನಡೆಸಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ಅಯ್ಯರ್ ಅವರು ಏಷ್ಯಾಕಪ್‌ಗೆ ಫಿಟ್ ಆಗಿದ್ದರೆ ಮಾತ್ರ ಏಕದಿನ ವಿಶ್ವಕಪ್‌ಗೆ ಆಯ್ಕೆಯಾಗುತ್ತಾರೆ. ಸದ್ಯ ಆಯ್ಕೆ ಸಮಿತಿ ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಪ್ರಮಾಣಪತ್ರಕ್ಕಾಗಿ ಕಾಯುತ್ತಿದ್ದು, ಈ ವರದಿ ಬಂದ ನಂತರ ಏಷ್ಯಾಕಪ್ ತಂಡದ ಆಯ್ಕೆ ನಡೆಯಲಿದೆ.

ಕಳೆದ ಮೂರು ವರ್ಷಗಳಲ್ಲಿ ಟೀಂ ಇಂಡಿಯಾ ಪರ ನಾಲ್ಕನೇ ಸ್ಥಾನ ಪಡೆದಿದ್ದ ಶ್ರೇಯಸ್ ಅಯ್ಯರ್ ಆಯ್ಕೆ ಸದ್ಯ ಅನುಮಾನವಾಗಿದ್ದು, ಅಯ್ಯರ್ ಅನರ್ಹರಾದರೆ ಬದಲಿ ಆಟಗಾರನನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ಟೀಂ ಇಂಡಿಯಾ ಹಿನ್ನಡೆ ಕಂಡರೂ ಅಚ್ಚರಿ ಪಡಬೇಕಿಲ್ಲ. ಏಕೆಂದರೆ ಶ್ರೇಯಸ್ ಅಯ್ಯರ್ ಅವರಷ್ಟು ಉತ್ತಮ ಪ್ರದರ್ಶನವನ್ನು ಬೇರಾವ ಬ್ಯಾಟ್ಸ್ ಮನ್ ನೀಡುತ್ತಿಲ್ಲ.

Related Articles

ಇತ್ತೀಚಿನ ಸುದ್ದಿಗಳು