ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನ್ಯಾಯಾಧೀಶರ ತಂಡ

ಉಡುಪಿ: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಯಾಧೀಶರು ಕೃಷ್ಣ ಮಠಕ್ಕೆೆ ರವಿವಾರ ಭೇಟಿ ನೀಡಿದರು.

ಸುಪ್ರೀಂ ಕೋರ್ಟ್ ನ್ಯಾಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಾಯಮೂರ್ತಿ ಎನ್.ವಿ.ಅಂಜಾರಿಯಾ, ಹೈಕೋರ್ಟ್ ನ್ಯಾಯಾಧೀಶರಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾರ್, ಟಿ.ವೆಂಕಟೇಶ್ ನಾಯ್‌ಕ್‌, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್.ಶೆಟ್ಟಿ, ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕಿರಣ್ ಎಸ್.ಗಂಗಣ್ಣನವರ್ ಭೇಟಿ ನೀಡಿ ಪೂಜ್ಯಪರ್ಯಾಯಪುತ್ತಿಗೆ ಶ್ರೀ ಪರ್ಯಾಯ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡು ಕೋಟಿಗೀತಾಲೇಖನ ಯಜ್ಞದ ದೀಕ್ಷೆಯನ್ನು ಪಡೆದುಕೊಂಡರು.

Related Articles

ಇತ್ತೀಚಿನ ಸುದ್ದಿಗಳು