Thursday, May 22, 2025

ಸತ್ಯ | ನ್ಯಾಯ |ಧರ್ಮ

ಕನ್ನಡಪರ ಟ್ವೀಟ್‌ ಮಾಡಿ ತನ್ನ ಪಕ್ಷದ ಬೆಂಬಲಿಗರಿಂದಲೇ ವರ್ಚುವಲ್‌ ದಾಳಿಗೆ ಈಡಾದ ಸಂಸದ ತೇಜಸ್ವೀ ಸೂರ್ಯ

ಬೆಂಗಳೂರಿನ ಚಂದಾಪುರದ SBI ಬ್ಯಾಂಕಿನ ಅಧಿಕಾರಿಯೊಬ್ಬರು ಕ್ನನಡದಲ್ಲಿ ಸೇವೆ ನೀಡದೆ ಉದ್ಧಟತನ ತೋರಿದ್ದು ಈಗ ರಾಜ್ಯದೆಲ್ಲೆಡೆ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಇತ್ತೀಚೆಗೆ ರಾಜ್ಯಾದ್ಯಂತ ಇರುವ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಪರಭಾಷಾ ಅಧಿಕಾರಿಗಳೇ ಹೆಚ್ಚಿದ್ದು, ಅವರು ಕನಿಷ್ಟ ವ್ಯವಹಾರಕ್ಕೆ ಬೇಕಾಗುವಷ್ಟು ಸಹ ಸ್ಥಳೀಯ ಭಾಷೆಯನ್ನು ಕಲಿಯದೆ, ಬ್ಯಾಂಕಿಗೆ ಬರುವ ಗ್ರಾಹಕರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.

ಈ ಹಿನ್ನೆಲೆಯಲ್ಲಿ ಚಂದಾಪುರದ ಘಟನೆಗೆ ತುಸು ಹೆಚ್ಚೇ ಪ್ರತಿಭಟನೆ ವ್ಯಕ್ತವಾಗಿದ್ದು, ಆ ಅಧಿಕಾರಿಯನ್ನು ಈಗಾಗಲೇ ಬ್ಯಾಂಕ್‌ ವರ್ಗಾಯಿಸುವುದಾಗಿ ಹೇಳಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರೂ ಬ್ಯಾಂಕ್‌ ಉದ್ಯೋಗಿಗಳು ಸ್ಥಳೀಯ ಭಾಷೆಯಲ್ಲಿ ಸೇವೆ ನೀಡಬೇಕು ಎಂದು ಆಗ್ರಹಿಸಿ ಹೇಳಿಕೆ ನೀಡಿದ್ದರು. ಆದರೆ ಜೆಡಿಎಸ್‌ ಪಕ್ಷದ ನಾಯಕ, ಕೇಂದ್ರ ಸಚಿವ ಕುಮಾರಸ್ವಾಮಿ ಒಂದು ಪೋಸ್ಟ್‌ ಹಾಕಿ ನಂತರ ಅದ್ಯಾಕೋ ಡಿಲೀಟ್‌ ಮಾಡಿದರು.

ಈ ನಡುವೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಈ ಕುರಿತು ಒಂದು ಪೋಸ್ಟ್‌ ಹಾಕಿದರು. ಅವರ ಪೋಸ್ಟ್‌ ಹೀಗಿತ್ತು “ಎಸ್ ಬಿ ಐ ಬ್ಯಾಂಕ್ ನ ಬ್ರ್ಯಾಂಚ್ ಮ್ಯಾನೇಜರ್ ರವರ ಈ ರೀತಿಯ ದುಂಡಾವರ್ತನೆ ಸಹಿಸಲು ಆಗದು. ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ, ಅದರಲ್ಲಿಯೂ ಬ್ಯಾಂಕಿಂಗ್ ವಲಯದಲ್ಲಿ ಗ್ರಾಹಕರು ಮಾತನಾಡುವ ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸತಕ್ಕದ್ದು. ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ಸ್ಥಳೀಯ ಕನ್ನಡಿಗರನ್ನು ಪರಿಗಣಿಸುವಂತೆ ನಾನು ಸಂಸತ್ತಿನ ಒಳಗೆ & ಹೊರಗೆ ಹಲವು ಬಾರಿ ಪ್ರಸ್ತಾಪಿಸಿದ್ದೇನೆ. ಇತ್ತೀಚೆಗಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆಯೂ ನಾನು ಇದನ್ನೇ ಪುನರುಚ್ಚರಿಸಿ, ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದು, ಈ ಕುರಿತಂತೆ DFS ನೀತಿಯಡಿಯಲ್ಲಿಯೇ ನೇಮಕಾತಿ ಕೈಗೊಳ್ಳುವಂತೆ

@TheOfficialSBI ರಲ್ಲೂ ವಿನಂತಿಸುತ್ತೇನೆ. ಈ ರೀತಿಯ ವರ್ತನೆ ತೋರಿರುವ ಬ್ಯಾಂಕ್ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟವರ ಬಳಿ ನಾನು ಒತ್ತಾಯಿಸಿದ್ದು, ಕರ್ನಾಟಕದಲ್ಲಿ ಸೇವೆ ಸಲ್ಲಿಸುವ ಬ್ಯಾಂಕಿಂಗ್ ವಲಯ ಸಿಬ್ಬಂದಿಗಳು ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸುವ ಅಗತ್ಯತೆ ಇದೆ.”

ಆದರೆ ಈ ಪೋಸ್ಟ್‌ ಹಾಕುತ್ತಿದ್ದಂತೆ, ದಕ್ಷಿಣ ಭಾರತೀಯರು, ಕನ್ನಡಿಗರು ಸೇರಿದಂತೆ ಬಹುತೇಕ ಬಲಪಂಥೀಯ ಒಲವಿನ ಹಿಂದಿಪ್ರಿಯ ಜನರು ತೇಜಸ್ವೀ ಸೂರ್ಯ ವಿರುದ್ಧ ತಿರುಗಿಬಿದ್ದಾರೆ. ಒಬ್ಬ ವ್ಯಕ್ತಿ ತನ್ನ ಕಚೇರಿಯನ್ನು ಬೆಂಗಳೂರಿನಿಂದ ಹೈದರಾಬಾದ್‌ ನಗರಕ್ಕೆ ವರ್ಗಾಯಿಸುವುದಾಗಿ ಹೇಳಿದ್ದರೆ, ಇನ್ನೂ ಕೆಲವರು ತೇಜಸ್ವೀ ಸೂರ್ಯ ಬಿಜೆಪಿ ಬಿಡುವ ಕುರಿತಾಗಿ ಯೋಚಿಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಈ ದಾಳಿಯ ನಂತರ ಟ್ವಿಟರ್‌‌ (X) ಬಳಕೆದಾರರೊಬ್ಬರು ತೇಜಸ್ವೀಸೂರ್ಯ ಕನ್ನಡದ ಕುರಿತು ಏಕೆ ಪೋಸ್ಟ್‌ ಹಾಕುವುದಿಲ್ಲ ಎನ್ನುವುದು ನನಗೆ ಇಂದು ತಿಳಿಯಿತು ಎಂದು ಟ್ವೀಟ್ ಮಾಡಿದ್ದಾರೆ

ಅವರ ಟ್ವೀಟಿಗೆ ಬಂದಿರುವ ಪ್ರತಿಕ್ರಿಯೆಗಳನ್ನು ನೀವು ಇಲ್ಲಿ ಗಮನಿಸಬಹುದು

Related Articles

ಇತ್ತೀಚಿನ ಸುದ್ದಿಗಳು

You cannot copy content of this page