ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಜಾಮೀನು ದೊರಕಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಅಡಿಯಲ್ಲಿ ಶಾಸಕ ಟಿ ರಾಜಾ ಸಿಂಗ್ ಮೇಲೆ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿ ಇಂದು ಬೆಳಿಗ್ಗೆ ತೆಲಂಗಾಣ ಪೊಲೀಸರಿಂದ ಬಂಧನಕ್ಕೊಳಗಾಗಿದ್ದರು.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ, 295, ಮತ್ತು 505 ರ ಅಡಿಯಲ್ಲಿ ದಬೀರ್ಪುರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿ ನಂತರ ಅವರನ್ನು ಬಂಧಿಸಲಾಗಿತ್ತು. ಸಧ್ಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ತಾತ್ಕಾಲಿಕ ಜಾಮೀನು ದೊರಕಿದೆ.
ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಇವರನ್ನು ಬಿಜೆಪಿ ಪಕ್ಷ ಕೂಡಾ ಅಮಾನತುಗೊಳಿಸಿತ್ತು. ಅವರ ಹೇಳಿಕೆ ಪಕ್ಷದ ಶಿಸ್ತಿಗೆ ವಿರುದ್ಧವಾಗಿದ್ದು ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಬಿಜೆಪಿ ಪಕ್ಷದ ಶಿಸ್ತು ಸಮಿತಿ ಅಭಿಪ್ರಾಯ ಪಟ್ಟಿದೆ.