ಮಹಾರಾಷ್ಟ್ರದ ಥಾಣೆಯಲ್ಲಿ ಎಕ್ಸಪ್ರೆಸ್ ವೇ ಹೆದ್ದಾರಿ ಕಾಮಗಾರಿ ವೇಳೆ ಭೀಕರ ಅಪಘಾತದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. ಸಮೃದ್ಧಿ ಎಕ್ಸ್ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಬಳಸಲಾದ ಗಿರ್ಡರ್ ಲಾಂಚರ್ ಯಂತ್ರ ಕುಸಿದು 15 ಜನರು ಸಾವನ್ನಪ್ಪಿದ್ದಾರೆ ಮತ್ತು 3 ಮಂದಿ ಗಾಯಗೊಂಡಿದ್ದಾರೆ.
ಮಂಗಳವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ಸಂಭವಿಸಿದೆ. ಗಾಯಾಳುಗಳೊಂದಿಗೆ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಅಪಘಾತ ಸಂಭವಿಸಿದ ಜಾಗದಲ್ಲಿ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಇನ್ನೂ ಶೋಧ ಕಾರ್ಯ ಮುಂದುವರಿದಿದೆ. ಗಾಯಾಳುಗಳೂ ತೀವ್ರವಾಗಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.