Friday, June 20, 2025

ಸತ್ಯ | ನ್ಯಾಯ |ಧರ್ಮ

ಭೀಕರ ಅಪಘಾತ ; ಯುವ ಐಪಿಎಸ್ ಅಧಿಕಾರಿ ಸಾವು, ಹೊಸದಾಗಿ ಪೋಸ್ಟಿಂಗ್ ಗೆ ಹೊರಟಾಗಲೇ ಸಂಭವಿಸಿದ ದುರಂತ

ಹಾಸನದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ತರಬೇತಿ ಮುಗಿಸಿದ್ದ ಇವರು ಭಾನುವಾರ ಹಾಸನ ಜಿಲ್ಲೆಯಲ್ಲಿ ತಮ್ಮ ಮೊದಲ ಪೋಸ್ಟಿಂಗ್‌ಗೆ ತೆರಳುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

26 ವರ್ಷದ ಹರ್ಷ ಬರ್ಧನ್ ಮಧ್ಯಪ್ರದೇಶದ ನಿವಾಸಿಯಾಗಿದ್ದು, 2023ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದರು. ಅವರು ಪ್ರಯಾಣಿಸುತ್ತಿದ್ದ ಪೊಲೀಸ್ ವಾಹನದ ಟೈರ್ ಒಡೆದು ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ರಸ್ತೆ ಬದಿಯ ಮನೆ ಹಾಗೂ ಮರಕ್ಕೆ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಹರ್ಷ ಬರ್ಧನ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆ ಸಮಯದಲ್ಲಿ ಆಸ್ಪತ್ರೆಯಲ್ಲಿ ಮೃತಪಟ್ಟರು, ಆದರೆ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು ಮತ್ತು “ಹಲವು ವರ್ಷಗಳ ಪರಿಶ್ರಮವು ಫಲ ನೀಡುತ್ತಿರುವಾಗ ಹೀಗಾಗಬಾರದಿತ್ತು” ಎಂದು ಸಂತಾಪ ಸೂಚಿಸಿದ್ದಾರೆ.

ಹಾಸನ-ಮೈಸೂರು ಹೆದ್ದಾರಿಯ ಕಿಟ್ಟಾಣೆ ಸರಹದ್ದಿನ ಬಳಿ ನಡೆದ ಭೀಕರ ಅಪಘಾತದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷ್ ಬರ್ಧನ್ ಅವರು ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದಾಗ ಇಂತಹ ಅವಘಡ ಸಂಭವಿಸಿರುವುದು ತುಂಬಾ ಬೇಸರ ತಂದಿದೆ. ವರ್ಷಗಳ ಕಠಿಣ ಪರಿಶ್ರಮಕ್ಕೆ ಫಲ ಸಿಗುತ್ತಿರುವಾಗ ಹೀಗಾಗಬಾರದಿತ್ತು” ಎಂದು ಎಕ್ಸ್‌ ಮೂಲಕ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page