ಮೈಸೂರು : ಮಂಗಳವಾರದಂದು, ವಿಚಾರವಾದಿ ಬಳಗವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಭಾಗವಿಹಿಸಿ, ಡಾ.ಹರೀಶ್ ಅವರು ಬರೆದಿರುವ ʼಸಿದ್ಧರಾಮಯ್ಯ-75ʼ ಪುಸ್ತಕವನ್ನು ಲೋಕಾರ್ಪಣೆ ಮಾಡಿದ್ದಾರೆ.
ಡಾ.ಹರೀಶ್ ಅವರು ಸಿದ್ದರಾಮಯ್ಯ-75 ಎಂಬ ಪುಸ್ತಕವನ್ನು ಬರೆದಿದ್ದು ಇಂದು ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಸಲುವಾಗಿ ವಿಚಾರವಾದಿ ಕಾರ್ಯಕ್ರಮವನ್ನು ಆಯೋಜಿಸಿ ವಿಪಕ್ಷ ನಾಯಕ ಸಿದ್ಧರಾಮ್ಯಯ್ಯನವರನ್ನು ಮುಖ್ಯ ಅಥಿತಿಯಾಗಿ ಆಹ್ವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮೈಸೂರಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ʼಸಿದ್ಧರಾಮಯ್ಯ-75ʼ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮ ಕುಮಾರ್, ಮಾಜಿ ಸಚಿವ ಮಹದೇವಪ್ಪ, ವಿಚಾರವಾದಿಗಳಾದ ಪ. ಮಲ್ಲೇಶ್, ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು, ವಿಧಾನ ಪರಿಷತ್ ಸದಸ್ಯರಾದ ಡಾ. ತಿಮ್ಮಯ್ಯ ಮತ್ತಿತರ ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು.