Friday, February 13, 2026

ಸತ್ಯ | ನ್ಯಾಯ |ಧರ್ಮ

ಜಮ್ಮು ಮತ್ತು ಕಾಶ್ಮೀರ ; ರಾಜ್ಯತ್ವ ಮರುಸ್ಥಾಪನೆ ಅರ್ಜಿ ವಿಚಾರಣೆಗೆ ಅಸ್ತು ಎಂದ ಸುಪ್ರೀಂಕೋರ್ಟ್

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ನಿಗದಿತ ಕಾಲಮಿತಿಯೊಳಗೆ ಮರುಸ್ಥಾಪಿಸಲು ಕೋರಿ ಸಲ್ಲಿಸಲಾದ ಮನವಿಯನ್ನು ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ ಮತ್ತು ನ್ಯಾಯಾಲಯವು ಈ ವಿಷಯದ ವಿಚಾರಣೆಗೆ ಒಪ್ಪಿಕೊಂಡಿದೆ.

ನ್ಯಾಯವಾದಿ ಗೋಪಾಲ್ ಶಂಕರನಾರಾಯಣ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಈ ವಿಷಯದ ಕುರಿತು ತ್ವರಿತ ಕ್ರಮದ ಅಗತ್ಯವನ್ನು ಉಲ್ಲೇಖಿಸಿ, ನಿಗದಿತ ಕಾಲಮಿತಿಯೊಳಗೆ ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ಮನವಿಯನ್ನು ತುರ್ತು ವಿಚಾರಣೆಗೆ ಒತ್ತಾಯಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page