ಬೆಂಗಳೂರು: ಸಚಿವರ ವಿರುದ್ಧ ಶಾಸಕರು ಅಸಮಾಧಾನಗೊಂಡಿದ್ದಾರೆ ಎನ್ನುವುದು ಸುಳ್ಳು ಎಂದು ಡಿ ಕೆ ಶಿವಕುಮಾರ್ ಪ್ರತಿಕ್ರಿಯಿದ್ದಾರೆ.
ಶಾಸಕರೆಲ್ಲರೂ ಅವರವರ ಕ್ಷೇತ್ರದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಸೋತಿರುವ ಶಾಸಕರಿಗೂ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಹೇಳಲಾಗಿದೆ ಎಂದು ಅವರು ಹೇಳಿದರು.
ನಮ್ಮದು ಕೆಲವು ಕಾರ್ಯಕ್ರಮಗಳಿವೆ. ಅಧಿವೇಶನ ನಡೆಯುತ್ತಿದ್ದ ಕಾರಣ ಆ ಕುರಿತು ಚರ್ಚಿಸಲು ಸಾಧ್ಯವಾಗಿರಲಿಲ್ಲ. ಅದರ ಬಗ್ಗೆ ಚರ್ಚೆ ನಡೆಸಬೇಕಿದೆ. ಕೆಲವೆಡೆ ಭ್ರಷ್ಟಾಚಾರದ ಕುರಿತು ಮಾಹಿತಿ ಬರುತ್ತಿದೆ. ಇದಕ್ಕಾಗಿ ಪ್ರಜಾ ಪ್ರತಿನಿಧಿಗಳನ್ನು ಮಾಡಿದ್ದೇವೆ. ಈ ಕುರಿತು ಯುವಕರಿಗೆ ಮಾಹಿತಿ ನೀಡಬೇಕಿದೆ ಎಂದು ಅವರು ಹೇಳಿದರು.
ನಮ್ಮ ಗ್ಯಾರಂಟಿಗಳು ಜನರಿಗೆ ತಲುಪುತ್ತಿದೆಯಾ ಇಲ್ಲವಾ ಎಂದು ಚರ್ಚೆ ಮಾಡಬೇಕು. ಎಲ್ಲರೂ ಬಹಳ ಆಸೆಯಲ್ಲಿ ಇದ್ದಾರೆ. ಆ ಮಾತು ಕೊಟ್ಟಿದ್ದೇವೆ, ಈ ಮಾತು ಕೊಟ್ಟಿದ್ದೇವೆ ಎನ್ನುತ್ತಿದ್ದಾರೆ. ನನ್ನ ಇಲಾಖೆಯಲ್ಲಿ ಹೋಲ್ಡ್ ಮಾಡಿ ಎಂದು ಹೇಳಿದ್ದೇನೆ. ಹತ್ತು, 100, 300 ಕೋಟಿ ಕೆಲಸ ಕೇಳ್ತಾ ಇದ್ದಾರೆ. ಸದ್ಯಕ್ಕೆ ಆಗಲ್ಲ ಹೋಲ್ಡ್ ಮಾಡಿ ಎಂದು ಹೇಳಿದ್ದೇವೆ. ವರ್ಗಾವಣೆ ಸಮಯ ಮಿತಿ ಇದೆ. ಸಮಯ ಮಿತಿಯಲ್ಲಿ ಮಾಡಲಾಗಿದೆ. ಉಳಿದಿದ್ದು ಸಿಎಂಗೆ ಬಿಡಲಾಗಿದೆ ಎಂದಿದ್ದಾರೆ.