Wednesday, January 29, 2025

ಸತ್ಯ | ನ್ಯಾಯ |ಧರ್ಮ

ಕಾಡಾನೆಗಳಿಗೆ ಬ್ರೇಕ್ ಹಾಕಲು ರೈಲ್ವೆ ಬ್ಯಾರಿಕೇಡ್ ಗೆ ಚಿಂತನೆ – ಸಚಿವ ಖಂಡ್ರೆ

ರಾಮನಗರ : ಇತ್ತೀಚೆಗೆ ಜಿಲ್ಲೆಯಲ್ಲಿ ಕಾಡಾನೆಗಳ ಕಾಟ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯ ಜನ ಅಸಮಾಧಾನ ವ್ಯಕ್ತಪಡಿಸಿದ್ದರು.ಹೀಗಾಗಿ ಹೆದ್ದಾರಿಗೆ, ರೈಲ್ವೆ ಹಳಿಗಳತ್ತ ಕಾಡಾನೆಗಳ ಎಂಟ್ರಿ ತಪ್ಪಿಸಲು ತಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅಗತ್ಯ ಹಣ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಮನಗರದ ಡಿಸಿ ಆಫೀಸ್ ನಲ್ಲಿ ಸ್ಥಳೀಯ ಶಾಸಕರಾದ ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್ ಜೊತೆಗೆ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ಕಾಡಾನೆಗಳು ನಾಡಿಗೆ ಬಂದು ಬೆಳೆಹಾನಿ, ಜೀವಹಾನಿ ಪ್ರಕರಣಗಳು ಘಟಿಸುತ್ತಿದ್ದು, ಇದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಾವು ಅರಣ್ಯ ಸಚಿವರಾದ ಬಳಿಕ ರಾಮನಗರ ಜಿಲ್ಲೆಗೆ ಒಟ್ಟು 35 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು ಮಾಡಿದ್ದು, 25 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page