Saturday, June 28, 2025

ಸತ್ಯ | ನ್ಯಾಯ |ಧರ್ಮ

ಚನ್ನರಾಯಪಟ್ಟಣ ಭೂ ವಿವಾದ : ನೆಲ ಜನ ಸಂಸ್ಕೃತಿ ಉಳಿಸುವ ಹೋರಾಟವಿದು : ಇಂದೂಧರ ಹೊನ್ನಾಪುರ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತ ಹೋರಾಟದಲ್ಲ ಚಿಂತಕರಾದ ಇಂದೂಧರ ಹೊನ್ನಾಪುರ ಅವರು ಸರ್ಕಾರಕ್ಕೆ ಆದಷ್ಟು ಬೇಗ ಈ ಸಮಸ್ಯೆಗೆ ಮುಕ್ತಿ ಕೊಡಿ ಎಂದು ಆಗ್ರಹಿಸಿದರು. ಹೋರಾಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಈ ನಾಡಿನ ಭವಿಷ್ಯ ಕಟ್ಟಿಕೊಡುವ ರೈತರಪರ ಹೋರಾಟ ನಡೀತಿದೆ. ಈ ಸಮಸ್ಯೆ ಹುಟ್ಟುಹಾಕಿರುವ ಸರ್ಕಾರ ಸಮಸ್ಯೆಯನ್ನು ಪರಿಹಾರ ಮಾಡುವ ಬದಲು ಸಮಸ್ಯೆಯನ್ನ ಹೆಚ್ಚು ಮಾಡ್ತಿದ್ದಾರೆ. ಇವತ್ತು ರೈತರ ವಿರುದ್ಧ ನಿಂತಿರುವ ಅದೇ ಸಿದ್ದರಾಮಯ್ಯ ಅವರು ಅವತ್ತು ರೈತರ ಪರ ಮಾತಾಡಿದ್ರು. ಪದೇ ಪದೇ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೀನಿ ಅಂತಾ ಹೇಳ್ತಿದ್ದೀರಿ, ಈ ಮಾತನ್ನು ಉಳಿಸಿಕೊಳ್ಳಿ ಕಾರ್ಪೊರೇಟ್ ಗಳ ಪರ ನಿಂತು, ಸಾವಿರಾರು ಎಕರೆ ರೈತ ಭೂಮಿಯನ್ನ ಲಾಭಕೋರರಿಗೆ ಕೊಡಬೇಡಿ. ನೀವು ಜನಪರವಾಗಿಯೇ ಇರಿ ಎಂದು ಆಗ್ರಹಿಸಿದ್ದಾರೆ.

“ಈ ಕಾರ್ಪೊರೇಟ್ ಸೆಕ್ಟರ್ ಎಲ್ಲಾ ನೊಂದವರನ್ನ ಬಳಸಿಕೊಳ್ತಿದೆ. ಅಭಿವೃದ್ಧಿ ಅಂದ್ರೆ ಬರೀ ಕಾರ್ಖಾನೆಗಳನ್ನ ಕಟ್ಟೊದಲ್ಲ, ಎಲ್ಲ ಜನರ ನೆಮ್ಮದಿ..ಎಲ್ಲರ ಜೊತೆ ನ್ಯಾಯಯುತವಾಗಿ ನಡೆದುಕೊಳ್ಬೇಕು. ಅದು ಬಿಟ್ಟು ಸರ್ಕಾರ ಯಾಕೆ ಈ ದುಷ್ಟಕೂಟದ ಭಾಗವಾಗುತ್ತಿದೆ ಎಂದು ರೈತರ ಪರವಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

“ಎಂ.ಬಿ ಪಾಟೀಲ್ ಗೆ ಹೇಳ್ತಿದ್ದಾರೆ ಕಾರ್ಪೊರೇಟ್ ಕಂಪನಿಗಳು ಒಳ್ಳೆ ಭೂಮಿಯನ್ನ ಕೇಳ್ತಾರೆ. ಅವರಿಗೆ ಅವರು ಕೇಳಿದ ಭೂಮಿ ಕೊಡಬೇಕು ಅಂತಾ ಅವರಿಗೆ ನಾನು ಕೇಳ್ತೀನಿ, ನಾಳೆ ಕಾರ್ಪೊರೇಟ್ ಗಳು ವಿಧಾನಸೌಧ ಕೇಳಿದ್ರೆ ಕೊಡ್ತೀರಾ,  ಯಾಕೆ ಮೂರ್ಖ ಹೇಳಿಕೆಗಳನ್ನ ಕೊಡ್ತಿದ್ದೀರಿ. ಇವತ್ತು ನೀವು ದುಷ್ಟಕೂಟದ ಭಾಗವಾಗಿ, ಕಾರ್ಪೊರೇಟ್ ಕಳ್ಳರ ಜೊತೆ ನಿಂತಿದ್ದೀರಾ..ನೀವು ನಿಜಕ್ಕೂ ಹೊಟ್ಟೆಗೆ ಅನ್ನ ತಿಂತೀರಾ” ಎಂದು ಖಾರವಾಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ನಮ್ಮನ್ನ ಉಳ್ಳವರ ಮನೆಗೆ ಜೀತಗಾರರನ್ನಾಗಿಸಬೇಡಿ, ಅವರ ಬಾಗಿಲು ಕಾಯುವ ಹಾಳುಗಳನ್ನಾಗಿಸಬೇಡಿ. ನಿಮಗೆ ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ರೆ ಇದನ್ನ ಕೈ ಬಿಡಿ. ಅಭಿವೃದ್ಧಿ ಅಂದ್ರೆ ಎಲ್ಲಾ ಜನರ ಪರವಾಗಿರೋದು, ಕಾರ್ಖಾನೆಗಳ ಮಾಲೀಕರು ಯಾರಿಗೊ ಒಪ್ಪತ್ತಿನ ಅನ್ನ ಹಾಕಿದ್ದನ್ನ ನೋಡಿಲ್ಲ, ನೀವು ಈ ದುಷ್ಟಕೂಟದ ಭಾಗ ಆಗ್ಬೇಡಿ. ಸಿದ್ದರಾಮಯ್ಯ ಅವರೇ ನೀವೆಲ್ಲರು ವಿವೇಚನೆ ಇರೋರು ಅಂತಾ ನಾವು ನಂಬಿದ್ದೇವೆ..ನೀವು ಎಲ್ಲರ ಒಳಿತು. ಈ ನೆಲ, ಜಲವನ್ನ ಉಳಿಸೋದು ಅನಿವಾರ್ಯ. ನಿಮಗೆ ಒತ್ತಡ ಇದೆ ಅಂತಾ ಗೊತ್ತು, ನೀವು ನಿಮ್ಮ ಬದ್ಧತೆಯನ್ನು ಈ ಮೂಲಕ ತೋರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಗ್ರಹಿಸಿದ್ದಾರೆ.

ಈ ಹೋರಾಟದ ಮೂಲಕ ನಾವು ಒಂದು ಎಚ್ಚರಿಕೆ ನೀಡುತ್ತಿದ್ದೇವೆ. ಎಲ್ಲಾ ಚಳವಳಿಗಳಿಗೂ ಪುನಃಚ್ಛೇತನ ಆಗುವಂತ ಹೋರಾಟಗಳ ಮೊಳಕೆ ಇವತ್ತು ಇಲ್ಲಿ ಚಿಗುರೊಡೆಯುತ್ತಿದೆ. ನಿಮ್ಮೆಲ್ಲರನ್ನು ಕಿತ್ತು ಎಸೆಯುವ ಹೋರಾಟದ ಮೊಳಕೆ ಫ್ರೀಡಂ ಪಾರ್ಕಿನಲ್ಲಿ ಹುಟ್ಟುತ್ತಿದೆ. ದಲಿತ ಸಂಘಟನೆ, ಕಾರ್ಮಿಕ ಸಂಘಟನೆ, ರೈತ ಸಂಘಟನೆಗಳು ಇಲ್ಲಿ ಮೊಳಕೆ ಹೊಡೆಯುತ್ತಿವೆ. ಕರ್ನಾಟಕದ ಎಲ್ಲಾ ಚಳವಳಿಗಳು, ಕಾರ್ಮಿಕರು, ರೈತರು ಎಲ್ಲರೂ ಕರ್ನಾಟಕದ ಮೂಲೆ ಮೂಲೆಯಲ್ಲು ಈ ಹೋರಾಟಕ್ಕೆ ಜೊತೆಯಾಗ್ತಿದ್ದಾರೆ..ಇದು ಎಚ್ಚರಿಕೆ ಈ ವಿಚಾರದಲ್ಲಿ ನೀವು ರೈತಪರ ನಿಲುವನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಂಬಿದ್ದೇವೆ ಆ ನಂಬಿಕೆಯನ್ನು ಉಳಿಸಿಕೊಳ್ಳಿ. ಒಳ್ಳೆ ತೀರ್ಮಾನವನ್ನು ತೆಗೆದುಕೊಂಡು ನಮಗೆ ಇಲ್ಲಿಂದ ಮುಕ್ತಿ ಕೊಡಿ ಎಂದು ಚಿಂತಕರಾದ ಇಂದೂಧರ ಹೊನ್ನಾಪುರ ಅವರು ಆಗ್ರಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page