ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಮೂರೂ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಅಂತರದ ಪೈಪೋಟಿ ಏರ್ಪಟ್ಟಿದೆ.
ಈಗಾಗಲೇ ಮತ ಎಣಿಕೆ 7 ನೇ ಸುತ್ತು ಮುಂದುವರೆದಿದ್ದು ಚನ್ನಪಟ್ಟಣದಲ್ಲಿ ನಿಖಿಲ್, ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಈ ಬಾರಿ ಸಂಡೂರಿನಲ್ಲಿ ಕಾಂಗ್ರೆಸ್, ಶಿಗ್ಗಾಂವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆರಂಭಿಕ ಮತ ಎಣಿಕೆ ಕಾರ್ಯ ನೋಡಿದರೆ ಸಮೀಕ್ಷೆಗಳ ಪ್ರಕಾರವೇ ಫಲಿತಾಂಶ ಬರುವಂತೆ ಕಾಣುತ್ತಿದೆ.