Tuesday, January 27, 2026

ಸತ್ಯ | ನ್ಯಾಯ |ಧರ್ಮ

ಮೂರು ಕ್ಷೇತ್ರಗಳ ಉಪಚುನಾವಣೆ: ಸಮೀಕ್ಷೆಗಳೇ ನಿಜವಾಗುವತ್ತ ಸಾಗುತ್ತಿರುವ ಮತಗಳು

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು ಮೂರೂ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಅಂತರದ ಪೈಪೋಟಿ ಏರ್ಪಟ್ಟಿದೆ.

ಈಗಾಗಲೇ ಮತ ಎಣಿಕೆ 7 ನೇ ಸುತ್ತು ಮುಂದುವರೆದಿದ್ದು ಚನ್ನಪಟ್ಟಣದಲ್ಲಿ ನಿಖಿಲ್, ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಈ ಬಾರಿ ಸಂಡೂರಿನಲ್ಲಿ ಕಾಂಗ್ರೆಸ್, ಶಿಗ್ಗಾಂವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲ್ಲಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆರಂಭಿಕ ಮತ ಎಣಿಕೆ ಕಾರ್ಯ ನೋಡಿದರೆ ಸಮೀಕ್ಷೆಗಳ ಪ್ರಕಾರವೇ ಫಲಿತಾಂಶ ಬರುವಂತೆ ಕಾಣುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page