ಗುಂಡ್ಯ ತಿರುವಿನಲ್ಲಿ ಕಾರು-ಬಸ್ ಭೀಕರ ಅಪಘಾತ – ಮೂವರ ದುರ್ಮರಣ

ಸಕಲೇಶಪುರ : ಕೆ ಎಸ್ ರ್ ಟಿ ಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ.

ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬಸ್ ನಡುವೆ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು